Subscribe to Updates
Get the latest creative news from FooBar about art, design and business.
- ಸಿಎಂ ಡಿ.ಕೆ.ಶಿವಕುಮಾರ್, ಡಿಸಿಎಂ ಜಿ. ಪರಮೇಶ್ವರ್ ನಿವಾಸಕ್ಕೆ ಸಿದ್ಧಗಂಗಾ ಶ್ರೀ ಭೇಟಿ: ವಿಶೇಷ ಆಶೀರ್ವಾದ
- ನನಗೂ ಸಚಿವ ಸ್ಥಾನ ಸಿಗುವ ಭರವಸೆಯಿದೆ: ಮಾಜಿ ಸಚಿವ ಸಂತೋಷ್ ಲಾಡ್
- ಉಪಮುಖ್ಯಮಂತ್ರಿಯಾಗಿ ನೇಮಕಗೊಂಡಿರುವುದಕ್ಕೆ ನಾನು ಸಂಪೂರ್ಣ ತೃಪ್ತ: ಜಿ. ಪರಮೇಶ್ವರ
- ಡಿ.ಕೆ. ಶಿವಕುಮಾರ್ ಜೀವನದ ಮಾರ್ಗದರ್ಶಕ ಶಕ್ತಿ ‘ನೊಣವಿನಕೆರೆ ಅಜ್ಜಯ್ಯ’!
- ಕೆಪಿಸಿಸಿಗೆ ಬಿ.ಕೆ.ಹರಿಪ್ರಸಾದ್ ಹೊಸ ಸಾರಥಿ: ಹೈಕಮಾಂಡ್ ಮಹತ್ವದ ನಿರ್ಧಾರ
- ಸಿಎಂ ಕುರ್ಚಿ ನನ್ನದಲ್ಲ, ಅಧಿಕಾರವನ್ನು ಜನರ ಸೇವೆಗೆ ಮುಡಿಪಾಗಿಡುತ್ತೇನೆ: ಸಿಎಂ ಡಿ.ಕೆ.ಶಿವಕುಮಾರ್
- ಕರ್ನಾಟಕದ 25ನೇ ಮುಖ್ಯಮಂತ್ರಿಯಾಗಿ ಡಿ.ಕೆ.ಶಿವಕುಮಾರ್ ಪ್ರಮಾಣವಚನ ಸ್ವೀಕಾರ!
- ಸಾದರ ಸಮುದಾಯ ಭವನದಲ್ಲಿ ಸಪ್ತಗಿರಿ ಆಸ್ಪತ್ರೆ ವತಿಯಿಂದ ಬೃಹತ್ ಆರೋಗ್ಯ ತಪಾಸಣೆ ಮತ್ತು ಶಸ್ತ್ರ ಚಿಕಿತ್ಸಾ ಶಿಬಿರ
Author: admin
ತುಮಕೂರು: ನಗರದ 6 ಪರೀಕ್ಷಾ ಕೇಂದ್ರಗಳಲ್ಲಿ ಅಕ್ಟೋಬರ್ 26ರಂದು ನಡೆಯುವ ಕಡ್ಡಾಯ ಕನ್ನಡ ಭಾಷಾ ಪರೀಕ್ಷೆಗೆ 2,672 ಹಾಗೂ ಅ.27ರಂದು ಜಿಲ್ಲಾದ್ಯಂತ 52 ಪರೀಕ್ಷಾ ಕೇಂದ್ರಗಳಲ್ಲಿ ನಡೆಯುವ ಗ್ರಾಮ ಆಡಳಿತ ಅಧಿಕಾರಿ ಪ್ರವೇಶ ಪರೀಕ್ಷೆಗೆ 22,544 ಸೇರಿ ಒಟ್ಟು 25,216 ಪರೀಕ್ಷಾರ್ಥಿಗಳು ಪರೀಕ್ಷೆ ಬರೆಯಲಿದ್ದು, ಅಭ್ಯರ್ಥಿಗಳು ಪರೀಕ್ಷೆ ಬರೆಯಲು ಅನುವಾಗುವಂತೆ ಅಗತ್ಯ ಸಿದ್ಧತೆಗಳನ್ನು ಕೈಗೊಳ್ಳಬೇಕೆಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಅಧಿಕಾರಿಗಳಿಗೆ ಸೂಚಿಸಿದರು. ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಗುರುವಾರ ಜರುಗಿದ ಪೂರ್ವಭಾವಿ ಸಭೆಯ ಅಧ್ಯಕ್ಷತೆವಹಿಸಿ ಮಾತನಾಡಿದ ಅವರು, ಪರೀಕ್ಷಾರ್ಥಿಗಳಿಗೆ ಯಾವುದೇ ರೀತಿಯ ಅಡೆ ತಡೆ ಉಂಟಾಗದಂತೆ ಪರೀಕ್ಷಾ ಕೇಂದ್ರಗಳ ಸುತ್ತಮುತ್ತಲಿನ 200 ಮೀಟರ್ ಪ್ರದೇಶದಲ್ಲಿ ನಿಷೇಧಾಜ್ಞೆಯನ್ನು ಜಾರಿಗೊಳಿಸಬೇಕು. ಪರೀಕ್ಷಾ ಕೇಂದ್ರಗಳಿಗೆ ಜಿಲ್ಲಾ ಮಟ್ಟದ ಹಾಗೂ ತಾಲ್ಲೂಕು ಮಟ್ಟದ ಅಧಿಕಾರಿಗಳನ್ನು ವೀಕ್ಷಕರನ್ನಾಗಿ ಹಾಗೂ ಪರೀಕ್ಷಾ ಕೇಂದ್ರಗಳಿಗೆ ಗೌಪ್ಯ ಸಾಮಗ್ರಿಗಳನ್ನು ವಿತರಿಸಲು ತಹಶೀಲ್ದಾರ್ಗಳ ನೇತೃತ್ವದಲ್ಲಿ ತ್ರಿ–ಸದಸ್ಯ ಸಮಿತಿಯನ್ನು ನೇಮಕ ಮಾಡಲಾಗಿದ್ದು, ನಿಯೋಜಿತರು ವಹಿಸಿದ ಜವಾಬ್ದಾರಿಯನ್ನು ಅಚ್ಚುಕಟ್ಟಾಗಿ ನಿರ್ವಹಣೆ ಮಾಡಬೇಕೆಂದು ನಿರ್ದೇಶನ ನೀಡಿದರು. ವಸ್ತ್ರ ಸಂಹಿತೆ ಪಾಲನೆಗೆ ಸೂಚನೆ:…
ತುಮಕೂರು: ನಮ್ಮ ಅನುಭವಗಳೇ ನಮಗೆ ಗುರುವಾಗಿದ್ದು, ಸ್ವಂತ ತಿಳುವಳಿಕೆಯನ್ನು ಅದರಿಂದ ಪಡೆಯಬೇಕೆಂದುರಮಣ ಮಹರ್ಷಿಗಳು ಸಾರಿದರುಎಂದು ಸಾಹಿತಿ ಡಾ.ಜಿ.ಬಿ.ಹರೀಶ್ ಹೇಳಿದರು. ತುಮಕೂರು ವಿವಿಯ ರಮಣ ಮಹರ್ಷಿಅಧ್ಯಯನ ಪೀಠವು ಗುರುವಾರ ಆಯೋಜಿಸಿದ್ದ ‘ಆಧುನಿಕತೆಯ ಹಿನ್ನಲೆಯಲ್ಲಿರಮಣ ಮಹರ್ಷಿಗಳ ಚಿಂತನೆಗಳ ಪ್ರಸ್ತುತತೆ’ ವಿಷಯದ ಕುರಿತ ವಿಚಾರ ಸಂಕಿರಣವನ್ನುಉದ್ಘಾಟಿಸಿ ಮಾತನಾಡಿದರು. ರಮಣರು ಹೇಳಿದ ಹಾಗೆ ‘ದೇಹಕ್ಕೆ ಮಾತ್ರ ಸಾವು, ಆತ್ಮಕ್ಕೆ ಸಾವಿಲ್ಲ. ನಿಮ್ಮ ಬಿಂಬವನ್ನು ನೀವು ಅರಿಯಬೇಕು. ನಿಮ್ಮಎಚ್ಚರ ಎಂದಿಗೂ ಸತ್ಯವಲ್ಲ. ಜಾಗೃತ, ಸ್ವಪ್ನ, ಸ್ವಪ್ನವಲ್ಲದ ವಿಷಯಗಳನ್ನು ಪೂರ್ಣವಾಗಿಅರಿಯಬೇಕಿದೆ. ಪ್ರಜ್ಞೆಯನ್ನು ದಾಟಿದ ಉನ್ನತ ಪ್ರಜ್ಞೆಯನ್ನು ಕಂಡುಕೊಳ್ಳಬೇಕು. ನಿಮ್ಮನ್ನು ನೀವು ಪ್ರಶ್ನೆ ಮಾಡಿಕೊಳ್ಳುವ ಮೂಲಕ ಸಾರ್ಥಕತೆಯನ್ನು ಪಡೆಯಬಹುದಾಗಿದೆ’ ಎಂದು ತಿಳಿಸಿದರು. ರಮಣರಿಗೆ ಗುರುಗಳಿರಲಿಲ್ಲ. ಯಾವುದೇ ಮಂತ್ರ, ಉಪದೇಶ, ಪದ್ಯಗಳನ್ನು ಪಠಿಸಲಿಲ್ಲ. ನಿಶ್ಯಬ್ಧ ಹಾಗೂ ಬದ್ಧವಾಗಿ ಒಂದೆಡೆ ಕುಳಿತುಕೊಂಡರು. ಎಂದಿಗೂ ತಮ್ಮನ್ನು ಮಹರ್ಷಿಗಳು ಎಂದು ಕರೆದುಕೊಳ್ಳಲಿಲ್ಲ. ಜಗತ್ತಿನ ಅನೇಕ ಮಹಾನ್ ವ್ಯಕ್ತಿಗಳು ಹಾಗೂ ಮಹರ್ಷಿಗಳನ್ನು ಭೇಟಿ ಮಾಡುತ್ತಿದ್ದರು. ಅವರದ್ದುಎನ್ನುವುದು ಯಾವುದು ಇರಲಿಲ್ಲ. ತನ್ನ ಪಾಡಿಗೆ ತಾನು ಇದ್ದರು. ಹುಡುಕುವುದು ಏನೂ ಇಲ್ಲ…
ಸರಗೂರು: ಸಾರ್ವಜನಿಕರು ಮತ್ತು ಭಕ್ತಾದಿಗಳಿಗೆ ಕಾಡು ಪ್ರಾಣಿಗಳಿಂದ ತೊಂದರೆಯಾಗದಂತೆ ನೋಡಿಕೊಳ್ಳಲು ತಾಲೂಕು ಮಟ್ಟದ ಅಧಿಕಾರಿಗಳಿಗೆ ಹುಣಸೂರು ಉಪವಿಭಾಗಾಧಿಕಾರಿ ಎಚ್.ಬಿ.ವಿಜಯಕುಮಾರ್ ಸೂಚನೆ ನೀಡಿದರು. ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಇರುವ ಶ್ರೀ ಕ್ಷೇತ್ರ ಬೇಲದಕುಪ್ಪೆ ಮಹದೇಶ್ವರ ಪ್ರಮುಖ ದೇವಸ್ಥಾನದ ಜಾತ್ರೆಗೆ ಒಂದು ತಿಂಗಳ ಮುಂಚಿತವಾಗಿ ಜಿಲ್ಲಾಧಿಕಾರಿಗಳು ನೀಡಿದ ಆದೇಶದ ಮೇರೆಗೆ ಹುಣಸೂರು ಉಪವಿಭಾಗಾಧಿಕಾರಿ ಎಚ್. ಬಿ. ವಿಜಯಕುಮಾರ್ ಅಧ್ಯಕ್ಷತೆಯಲ್ಲಿ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳು ಸಮ್ಮುಖದಲ್ಲಿ ದೇವಸ್ಥಾನ ಪರಿಶೀಲನೆ ನಡೆಸಿ ನಂತರ ಹೆಡಿಯಾಲ ಉಪವಲಯ ಕಚೇರಿಯ ಸಭಾಂಗಣದಲ್ಲಿ ಗುರುವಾರ ಅಧಿಕಾರಿ ಸಭೆ ನಡೆಸಲಾಯಿತು . ನಂತರ ಮಾತನಾಡಿದ ಅವರು, ಕಂದಾಯ ಮತ್ತು ಆರೋಗ್ಯ ಮತ್ತು ನೀರು ನೈರ್ಮಲ್ಯ, ಅರಣ್ಯ, ಪೋಲೀಸ್ ಇಲಾಖೆ ಅಧಿಕಾರಿಗಳಿಗೆ ದೇವಸ್ಥಾನಕ್ಕೆ ಬರುವ ಭಕ್ತರಿಗಳಿಗೆ ಹಾಗೂ ಸಾರ್ವಜನಿಕರು ತೊಂದರೆ ಆಗದಂತೆ ಮುಂಜಾಗ್ರತೆ ಕ್ರಮ ಕೈಗೊಳ್ಳಬೇಕು . ಕಳೆದ ವರ್ಷ ಜಾತ್ರಾ ಮಹೋತ್ಸವ ವಿಜೃಂಭಣೆಯಿಂದ ನಡೆಯಿತು. ಅದೇ ತರಹದ ಧಾರ್ಮಿಕ ಪೂಜೆ ಗಳಿಗೆ ತೊಂದರೆ ನೀಡಬಾರದು ಎಂದು ಅರಣ್ಯ ಇಲಾಖೆ ಅಧಿಕಾರಿಗಳಿಗೆ…
ಸರಗೂರು: ಹಿಂದುಳಿದ ವರ್ಗಗಳ ಜಾತಿ ಜನಸಂಖ್ಯೆ ಆಧಾರದ ಮೇಲೆ ಜಾತಿಗಣತಿ ಮಾಡಿ ಒಳ ಮೀಸಲಾತಿಯನ್ನು ಸರ್ಕಾರ ಘೋಷಿಸಬೇಕು ಎಂದು ಆರ್ಯ ಈಡಿಗ ಸಮಾಜದ ತಾಲ್ಲೂಕು ಅಧ್ಯಕ್ಷ ಟೋಕನ್ ನಾಗರಾಜು ಹೇಳಿದರು. ಪಟ್ಟಣದ ಆರ್ಯ ಈಡಿಗ ಸಮುದಾಯದ ಭವನದಲ್ಲಿ ಗುರುವಾರದಂದು ಸಭೆಯನ್ನು ಮಾಡಿ ಸುದ್ದಿಗಾರರೊಂದಿಗೆ ಮಾತನಾಡಿದರು. ಸರ್ಕಾರದಿಂದ ಹಿಂದುಳಿದ ವರ್ಗಗಳ ಒಳ ಮೀಸಲಾತಿ ಜಾರಿ ಮಾಡಿದ್ದರೆ, ಹಿಂದುಳಿದ ಬಡಜನರಿಗೆ ಅನುಕೂಲವಾಗುತ್ತ ಎಂದರು. ಒಳಮೀಸಲಾತಿಯಿಂದ ಹಿಂದುಳಿದ ವರ್ಗಗಳು ಸೌಲಭ್ಯಗಳನ್ನು ಪಡೆಯಲು ಕಷ್ಟ ಪಡುವಂತಾಗಿದೆ. ಮೀಸಲಾತಿಯಿಂದ ವಂಚಿತವಾಗಿರುವ ಜಾತಿಗಳು ಈಡಿಗ ಸಮಾಜ, ಕುರುಬಗೌಡ , ನಾಮಧಾರಿಗೌಡ, ಸವಿತ ಸಮಾಜ, ವಿಶ್ವಕರ್ಮ ಇನ್ನೂ ಹಲವಾರು ಜಾತಿಗಳು ಹಿಂದುಳಿದ ಜಾತಿಗಳು ಒಳಮೀಸಲಾತಿ ಇಲ್ಲದೆ , ಇತರೆ ಸರ್ಕಾರದ ಸೌಲಭ್ಯಗಳನ್ನು ಪಡೆಯಲು ಸಾಧ್ಯವಾಗುವುದಿಲ್ಲ. ಆದ್ದರಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ ರವರು ಜನಗಣತಿ ಆಧಾರದ ಮೇಲೆ ಒಳಮೀಸಲಾತಿ ಜಾರಿ ಮಾಡಬೇಕು. ಹಿಂದುಳಿದ ವರ್ಗಗಳು ಒಳಮೀಸಲಾತಿ ಜನಸಂಖ್ಯೆ ಆಧಾರದ ಮೇಲೆ ಹಂಚಿಕೆ ಮಾಡಬೇಕು. ರಾಜ್ಯ ಸರ್ಕಾರಗಳು ತಾಯ್ತನ ಮತ್ತು ವಿವೇಕಯುತ ಮನಸ್ಸಿನಿಂದ ಕಾರ್ಯಪ್ರವೃತ್ತಾರಾಗಿ ಹಿಂದುಳಿದ…
ತುಮಕೂರಿನ ಕರಾಮುವಿ ಪ್ರಾದೇಶಿಕ ಕೇಂದ್ರದಲ್ಲಿ 2024–25ನೇ ಶೈಕ್ಷಣಿಕ ಸಾಲಿನ ಜುಲೈ ಆವೃತ್ತಿ ಪ್ರವೇಶಾತಿಗೆ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಿದ್ದು, ಸ್ನಾತಕ/ ಸ್ನಾತಕೋತ್ತರ ಕೋರ್ಸ್ ಗಳಾದ ಬಿ.ಎ, ಬಿ.ಕಾಂ, ಬಿ.ಬಿ.ಎ, ಬಿ.ಸಿ.ಎ, ಬಿ.ಲಿಬ್.ಐ.ಎಸ್ಸಿ., ಬಿ.ಎಸ್ಸಿ., ಬಿ.ಎಸ್.ಡಬ್ಲ್ಯೂ., ಎಂ.ಎ., ಎಂ.ಸಿ.ಜೆ., ಎಂ.ಕಾಂ., ಎಂ.ಎಸ್ಸಿ., ಎಂ.ಲಿಬ್.ಐ.ಎಸ್ಸಿ., ಎಂ.ಬಿ.ಎ., ಎಂ.ಸಿ.ಎ., ಎಂ.ಎಸ್.ಡಬ್ಲ್ಯೂ ಮತ್ತು ಪಿ.ಜಿ ಸರ್ಟಿಫಿಕೇಟ್., ಡಿಪ್ಲೊಮಾ., ಸರ್ಟಿಫಿಕೇಟ್ ಕೋರ್ಸ್ ಗಳಿಗೆ ಪ್ರವೇಶಾತಿ ಮಾಡಿಕೊಳ್ಳಲಾಗುತ್ತಿದ್ದು. ಪ್ರಥಮ ವರ್ಷದ ಈ ಮೇಲ್ಕಂಡ ಕೋರ್ಸ್ ಗಳ ಪ್ರವೇಶಾತಿಗೆ 2024ರ ನವೆಂಬರ್ 15 ಕಡೆಯ ದಿನಾಂಕವಾಗಿದೆ. ಮೇಲ್ಕಂಡ ಪದವಿಗಳಿಗೆ ಆನ್ ಲೈನ್ ನಲ್ಲಿ ಅರ್ಜಿ ಭರ್ತಿಮಾಡಿ ನಂತರ ತುಮಕೂರಿನ ಕರಾಮುವಿ ಪ್ರಾದೇಶಿಕ ಕೇಂದ್ರಕ್ಕೆ ಖುದ್ದಾಗಿ ಭೇಟಿ ನೀಡಿ ಆನ್ ಲೈನ್ ಮುಖಾಂತರ ಪ್ರವೇಶಾತಿ ಶುಲ್ಕ ಪಾವತಿಸಿ ಪ್ರವೇಶಾತಿ ಪಡೆಯಬಹುದು. ಈ ಹಿನ್ನೆಲೆಯಲ್ಲಿ ಕೆಲಸಕ್ಕೆ ಹೋಗುವ ಆಸಕ್ತರು ಕರಾಮುವಿಯಲ್ಲಿ ಪ್ರವೇಶಾತಿ ಪಡೆಯಲು ಅನುಕೂಲ ಮಾಡಿಕೊಡುವ ಸಲುವಾಗಿ 2024ರ ನವೆಂಬರ್ 15ರ ವರೆಗೆ ಸಾರ್ವತ್ರಿಕ ರಜಾ ದಿನಗಳಾದ ಎರಡನೇ ಹಾಗೂ ನಾಲ್ಕನೇ ಶನಿವಾರ…
ಹಾಸನ: ಶ್ರೀ ಹಾಸನಾಂಬ ದೇವಿ ಮತ್ತು ಶ್ರೀ ಸಿದ್ದೇಶ್ವರ ಸ್ವಾಮಿ ಜಾತ್ರಾ ಮಹೋತ್ಸವದ ಮೊದಲನೇ ದಿನವಾದ ಇಂದು ದೇವಸ್ಥಾನದ ಬಾಗಿಲು ತೆರೆಯುವ ಕಾರ್ಯಕ್ರಮದಲ್ಲಿ ಸಚಿವ ಕೆ.ಎನ್.ರಾಜಣ್ಣ ಭಾಗಿಯಾಗಿ ದೇವಿಯ ಕೃಪೆಗೆ ಪಾತ್ರರಾದರು. ಆದಿಚುಂಚನಗಿರಿ ಮಠದ ಪರಮಪೂಜ್ಯ ಗುರುಗಳಾದ ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ ರವರು ಹಾಗೂ ಶ್ರೀ ಕ್ಷೇತ್ರ ಸಿದ್ದಗಂಗಾ ಮಠದ ಪರಮಪೂಜ್ಯ ಗುರುಗಳಾದ ಶ್ರೀ ಸಿದ್ದಲಿಂಗ ಸ್ವಾಮೀಜಿಯವರು ಭಾಗವಹಿಸಿದ್ದರು. ಈ ಸಂದರ್ಭದಲ್ಲಿ ಹಾಸನ ಲೋಕಸಭಾ ಸದಸ್ಯರಾದ ಶ್ರೇಯಸ್ ಎಂ.ಪಟೇಲ್, ಶಾಸಕರುಗಳಾದ ಸ್ವರೂಪ್ ಪ್ರಕಾಶ್, ಶಿವಲಿಂಗೇಗೌಡ, ಸಿಮೆಂಟ್ ಮಂಜು, ಜಿಲ್ಲಾಧಿಕಾರಿಯಾದ ಸತ್ಯಭಾಮ, ಸಿ.ಇ.ಓ ಪೂರ್ಣಿಮ, ಪೊಲೀಸ್ ಅಧೀಕ್ಷಕರಾದ ಮಹಮ್ಮದ್ ಸುಜೀತಾ ಸೇರಿದಂತೆ ವಿವಿಧ ಮಠಾಧೀಶರು, ಮುಖಂಡರುಗಳು, ಭಕ್ತಾದಿಗಳು ಉಪಸ್ಥಿತರಿದ್ದರು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296
ಕರಾವಳಿ: ಕಾಸರಗೋಡು, ದಕ್ಷಿಣ ಕನ್ನಡ ಹೆಚ್ಚಿನ ಭಾಗಗಳಲ್ಲಿ ಮಧ್ಯಾಹ್ನ ನಂತರ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಆದರೆ ಗಾಳಿಯ ಪಾತ್ರ ಮಹತ್ವದ್ದು. ಉಡುಪಿ ಮಧ್ಯಾಹ್ನ ನಂತರ ಅಲ್ಲಲ್ಲಿ ಗುಡುಗು ಸಹಿತ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಉತ್ತರ ಕನ್ನಡ ಮೋಡ ಹಾಗೂ ಒಂದೆರಡು ಕಡೆ ತುಂತುರು ಮಳೆಯ ಮುನ್ಸೂಚನೆ ಇದೆ. ಈಗಿನಂತೆ ಅಕ್ಟೊಬರ್ 25ರಂದು ಘಟ್ಟದ ಕೆಳಗಿನ ಪ್ರದೇಶಗಳ ಒಂದೆರಡು ಕಡೆ ಸಣ್ಣ ಪ್ರಮಾಣದ ಮಳೆಯ ಸಾಧ್ಯತೆ ಇದ್ದು, 26ರಿಂದ ಮಳೆಯ ಸಾಧ್ಯತೆ ಕಾಣುತ್ತಿಲ್ಲ. ಮಲೆನಾಡು : ಕೊಡಗು ಹೆಚ್ಚಿನ ಭಾಗಗಳಲ್ಲಿ ಮಧ್ಯಾಹ್ನ ನಂತರ ಗುಡುಗು ಸಹಿತ ಉತ್ತಮ ಮಳೆಯ ಮುನ್ಸೂಚೆನೆ ಇದೆ. ಹಾಸನ ಮಧ್ಯಾಹ್ನ ನಂತರ, ಸಂಜೆ ಅಲ್ಲಲ್ಲಿ ಗುಡುಗು ಸಹಿತ ಮಳೆ ಮತ್ತು ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳಲ್ಲಿ ಮೋಡದ ವಾತಾವರಣ ಇರಲಿದ್ದು, ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಪ್ರದೇಶಗಳ ಅಲ್ಲಲ್ಲಿ ಗುಡುಗು ಸಹಿತ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಈಗಿನಂತೆ ಅಕ್ಟೊಬರ್ 25ರಂದು ಮೋಡ ಹಾಗೂ ಒಂದೆರಡು…
ಪಾವಗಡ: ತಾಲೂಕಿನ ವೈ.ಎನ್.ಹೊಸಕೋಟೆ ಪಟ್ಟಣದ ಸರ್ಕಾರಿ ಪ್ರೌಢಶಾಲೆಯ ಮಕ್ಕಳು ಕೊಳಚೆ ನೀರಿನಲ್ಲೇ ನಡೆದುಕೊಂಡು ಹೋಗುತ್ತಿರುವ ಘಟನೆಯ ಬಗ್ಗೆ ನಮ್ಮತುಮಕೂರು ವಾಹಿನಿ ವರದಿ ಮಾಡಿತ್ತು. ವರದಿಯ ಬೆನ್ನಲ್ಲೇ ಇದೀಗ ಸಂಬಂಧಪಟ್ಟ ಅಧಿಕಾರಿಗಳು ಎಚ್ಚೆತ್ತುಕೊಂಡು ಸಮಸ್ಯೆ ಬಗೆಹರಿಸಿದ್ದಾರೆ. ದೊಡ್ಡಹಳ್ಳಿ ರಸ್ತೆಯಲ್ಲಿರುವ ವೈ.ಎನ್.ಹೊಸಕೋಟೆ ಪಟ್ಟಣದ ಸರ್ಕಾರಿ ಪ್ರೌಢಶಾಲೆಯ ಮಕ್ಕಳು ಸರಿಯಾದ ರಸ್ತೆ ವ್ಯವಸ್ಥೆ ಇಲ್ಲದೇ ಕೊಳಚೆ ನೀರಿನಲ್ಲಿ ನಡೆದುಕೊಂಡು ಹೋಗಬೇಕಾದ ಸ್ಥಿತಿಯಿತ್ತು. ಈ ಬಗ್ಗೆ ನಮ್ಮತುಮಕೂರು ಸವಿವರವಾದ ವರದಿಯನ್ನು ಪ್ರಕಟಿಸಿತ್ತು. ನಮ್ಮತುಮಕೂರು ವರದಿಯ ಬೆನ್ನಲ್ಲೇ ಎಚ್ಚೆತ್ತುಕೊಂಡ ಅಧಿಕಾರಿಗಳು ಸಮಸ್ಯೆ ಬಗೆಹರಿಸಿ ವಿದ್ಯಾರ್ಥಿಗಳಿಗೆ ಶಾಲೆಗೆ ಹೋಗಲು ಅನುಕೂಲವಾಗುವಂತೆ ತಾತ್ಕಾಲಿಕವಾಗಿ ಚರಂಡಿ ನಿರ್ಮಾಣ ಹಾಗೂ ಸಿಮೆಂಟ್ ಪೈಪ್ ಅಳವಡಿಸಿ, ನೀರು ಮತ್ತು ರಸ್ತೆಯನ್ನು ಪ್ರತ್ಯೇಕಿಸಿ ಸೂಕ್ತ ವ್ಯವಸ್ಥೆ ಕಲ್ಪಿಸಿದ್ದಾರೆ. ನಮ್ಮತುಮಕೂರು ಮಾಧ್ಯಮದ ವರದಿಗೆ ಸಾರ್ವಜನಿಕರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಪಾವಗಡ ತಾಲೂಕು ಹಾಗೂ ತುಮಕೂರು ಜಿಲ್ಲೆಯಲ್ಲಿ ನಮ್ಮತುಮಕೂರು ವಾಹಿನಿ ಜನಸ್ನೇಹಿ ವರದಿಗಳನ್ನು ಮಾಡಿ ಸಮಾಜಮುಖಿಯಾಗಿದೆ ಎಂದು ತಿಳಿಸಿದ್ದಾರೆ. ವರದಿ: ನಂದೀಶ್ ನಾಯ್ಕ, ಪಾವಗಡ
ತುಮಕೂರು: ಮಳೆಯಿಂದ ಮರ ಬಿದ್ದು ಜಿಲ್ಲೆಯ ಶಿರಾ ತಾಲ್ಲೂಕಿನಲ್ಲಿ ಒಂದು ಮಾನವ ಜೀವ ಹಾನಿಯಾಗಿದ್ದು, ಮೃತರ ವಾರಸುದಾರರಿಗೆ 5 ಲಕ್ಷ ರೂ.ಗಳ ಪರಿಹಾರವನ್ನು ವಿತರಿಸಲಾಗಿದೆ ಎಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತಿಳಿಸಿದ್ದಾರೆ. ಜಿಲ್ಲೆಯಲ್ಲಿ 2024ರ ಜನವರಿ 1 ರಿಂದ ಈವರೆಗೂ ವಾಸ್ತವವಾಗಿ 926 ಮಿ.ಮೀ. ಮಳೆಯಾಗಿದೆ. ಸಿಡಿಲಿನಿಂದ ಶಿರಾ ಹಾಗೂ ತುರುವೇಕೆರೆ ತಾಲ್ಲೂಕಿನ 2 ಹಸು/ಎಮ್ಮೆ ಹಾಗೂ ಪಾವಗಡ ತಾಲ್ಲೂಕಿನ 6 ಕುರಿ ಮತ್ತು ತುರುವೇಕೆರೆ ತಾಲ್ಲೂಕಿನ 17(13 ಮೇಕೆ + 4 ಕುರಿ) ಸೇರಿ ಒಟ್ಟು 25 ಜಾನುವಾರುಗಳ ಪ್ರಾಣ ಹಾನಿಯಾಗಿದೆ. ಈ ಪೈಕಿ ಜಾನುವಾರು ಮಾಲೀಕರಿಗೆ 37,500 ರೂ.(ತಲಾ ಒಂದು ಜಾನುವಾರಿಗೆ)ಗಳ ಪರಿಹಾರ ಹಾಗೂ 4000 ರೂ.ಗಳ (ತಲಾ ಒಂದು ಕುರಿ/ಮೇಕೆ) ಪರಿಹಾರವನ್ನು ವಿತರಿಸಲಾಗಿದೆ. ಮಳೆಯಿಂದ ಜಿಲ್ಲೆಯ ಒಟ್ಟು 59.52 ಹೆಕ್ಟೇರ್ ಪ್ರದೇಶದ ಬೆಳೆ ಹಾನಿಯಾಗಿದ್ದು, ಹಾನಿಗೊಳಗಾದ ಬೆಳೆ ಪರಿಹಾರ ನೀಡಲು ಅಗತ್ಯ ಕ್ರಮವಹಿಸಲಾಗಿದೆ. ಅಲ್ಲದೆ 133 ಮನೆ ಹಾನಿ, 3 ಸಂಪೂರ್ಣ/ತೀವ್ರ ಮನೆ ಹಾನಿ ಹಾಗೂ 130…
ತಿಪಟೂರು: ವೀರಶೈವ ಲಿಂಗಾಯತ ನೌಕರರ ಕ್ಷೇಮಾಭಿವೃದ್ಧಿ ಸಂಘದಿಂದ ತಾಲೂಕು ಮಟ್ಟದ ಪ್ರತಿಭಾ ಪುರಸ್ಕಾರ ಹಾಗೂ ನೌಕರರಿಗೆ ಸನ್ಮಾನ ಮತ್ತು ಅಭಿನಂದನಾ ಸಮಾರಂಭವನ್ನು ಅಕ್ಟೋಬರ್ 27 ರಂದು ಹಮ್ಮಿಕೊಳ್ಳಲಾಗಿದೆ ಎಂದು ಸಂಘದ ಅಧ್ಯಕ್ಷ ಕೆ.ಎಸ್ .ಎಮ್.ಸ್ವಾಮಿ ತಿಳಿಸಿದರು. ಸಂಘದ ಅಧ್ಯಕ್ಷರು ಮಾತನಾಡಿ, ಪ್ರತಿವರ್ಷದಂತೆ ಈ ವರ್ಷವೂ ಅಕ್ಟೋಬರ್ 27 ರಂದು ಭಾನುವಾರ ಬೆಳಗ್ಗೆ 11 ಗಂಟೆಗೆ ಪಿ.ಜಿ.ಎಮ್ .ಕಲ್ಯಾಣ ಮಂಟಪದಲ್ಲಿ ಆಯೋಜಿಸಿರುವ ಕಾರ್ಯಕ್ರಮದಲ್ಲಿ ಸಿದ್ದಗಂಗಾ ಮಠದ ಶ್ರೀ ಸಿದ್ದಲಿಂಗ ಸ್ವಾಮೀಜಿ ಮತ್ತು ನೊಣವಿನಕೆರೆ ಕಾಡಸಿದ್ದೇಶ್ವರ ಮಠದ ಕರಿರುಷಭ ದೇಶಿ ಕೇಂದ್ರ ಸ್ವಾಮೀಜಿ ಸಾನಿಧ್ಯ ವಹಿಸಲಿದ್ದಾರೆ ಎಂದು ತಿಳಿಸಿದರು. ಶಾಸಕ ಕೆ. ಷಡಕ್ಷರಿ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದು ಸಮಾರಂಭದಲ್ಲಿ ಕೇಂದ್ರ ಸಚಿವ ವಿ. ಸೋಮಣ್ಣ ಅವರನ್ನು ಸನ್ಮಾನಿಸಲಾಗುತ್ತದೆ. ತಾಲೂಕಿನ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಮತ್ತು ಸರ್ಕಾರಿ ನೌಕರರಿಗೆ ಸನ್ಮಾನಿಸಲಾಗುವುದು ಎಂದರು. ಈ ಗೋಷ್ಠಿಯಲ್ಲಿ ಸಂಘದ ಕಾರ್ಯದರ್ಶಿ ಎಸ್.ಆರ್.ಸುರೇಶ್ ನಿರ್ದೇಶಕ ಚಂದ್ರಶೇಖರ್ ಹಾಗೂ ಖಜಾಂಚಿ ಚಿದಾನಂದ್ ತೋಂಟರಾಧೃ ಉಪಸ್ಥಿತರಿದ್ದರು. ವರದಿ: ಆನಂದ್ ತಿಪಟೂರು ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು…