Author: admin

ತುಮಕೂರು: ದೀಪಾವಳಿ ಹಬ್ಬವನ್ನು ಪರಿಸರಸ್ನೇಹಿ ಹಬ್ಬವನ್ನಾಗಿ ಆಚರಿಸುವ ನಿಟ್ಟಿನಲ್ಲಿ ಜಿಲ್ಲೆಯಲ್ಲಿ 125 ಡೆಸಿಬಲ್‌ಗಳಿಗಿಂತಲೂ ಹೆಚ್ಚಿನ ಶಬ್ದ ಮಾಡುವ ಪಟಾಕಿಗಳನ್ನು ನಿಷೇಧಿಸಲಾಗಿದೆ ಎಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಸೂಚಿಸಿದ್ದಾರೆ. ಜಿಲ್ಲೆಯ ಸಾರ್ವಜನಿಕರ ಆಸ್ತಿ ಮತ್ತು ಆರೋಗ್ಯದ ಸಂರಕ್ಷಣೆ, ಪರಿಸರ ಮಾಲಿನ್ಯ ಹಾಗೂ ಶಬ್ದ ಮಾಲಿನ್ಯವನ್ನು ನಿಯಂತ್ರಣದಲ್ಲಿಡುವ ಉದ್ದೇಶದಿಂದ ಈ ನಿಷೇಧಕ್ಕೆ ಸೂಚನೆ ನೀಡಲಾಗಿದೆ. ದೀಪಾವಳಿ ಹಬ್ಬವನ್ನು ಸಿಡಿಮದ್ದು ಪಟಾಕಿಗಳನ್ನು ಉಪಯೋಗಿಸದೆ ದೀಪದ ಹಬ್ಬವನ್ನಾಗಿ ಆಚರಿಸಬೇಕು. ದೀಪಾವಳಿ ಹಬ್ಬದ ಸಂದರ್ಭದಲ್ಲಿ ರಾತ್ರಿ 10 ರಿಂದ ಬೆಳಿಗ್ಗೆ 6 ಗಂಟೆಯವರೆಗೆ ಪಟಾಕಿಗಳನ್ನು ಸಿಡಿಸುವುದು, ಹೆಚ್ಚು ಶಬ್ದ ಮಾಡುವ ಪಟಾಕಿ ಹಾಗೂ ಸಿಡಿ ಮದ್ದುಗಳ ಮಾರಾಟವನ್ನು ನಿಷೇಧಿಸಲಾಗಿದೆ. ದಿನದ ಯಾವುದೇ ಸಮಯದಲ್ಲಿ ನಿಶಬ್ದ ವಲಯಗಳೆಂದು ಘೋಷಿಸಲ್ಪಟ್ಟಿರುವ ಆಸ್ಪತ್ರೆ, ಶಾಲೆ, ಪ್ರಾರ್ಥನಾ ಮಂದಿರದ ಸುತ್ತ–ಮುತ್ತ ಯಾವುದೇ ರೀತಿಯ ಶಬ್ದ ಉಂಟು ಮಾಡುವ ನಿಷೇಧಿತ ಪಟಾಕಿ, ಸಿಡಿಮದ್ದುಗಳನ್ನು ಬಳಸಬಾರದು. ಸಾರ್ವಜನಿಕರು ನಗರ ಮತ್ತು ಪಟ್ಟಣದ ಚಿಕ್ಕ–ಚಿಕ್ಕ ಬೀದಿಗಳಲ್ಲಿ ಪಟಾಕಿ, ಸಿಡಿಮದ್ದು ಹಾಗೂ ಬಾಣ–ಬಿರುಸುಗಳನ್ನು ಉಪಯೋಗಿಸುವುದರಿಂದ ಅಲ್ಲಿನ ನಿವಾಸಿಗಳಿಗೆ ಹಾನಿ ಅಥವಾ…

Read More

ತುಮಕೂರು: ಹೊಟೇಲ್ ಉದ್ಯಮಿ ಹಾಗೂ ಜೆಡಿಯು ಪಕ್ಷದ ರಾಜ್ಯ ಪ್ರಧಾನ ಕಾರ್ಯದರ್ಶಿ ಮತ್ತು ತುಮಕೂರು ಜಿಲ್ಲಾ ಉಸ್ತುವಾರಿ ಕೆ.ಜಿ.ಎಲ್.ರವಿ(ಕ್ಯಾತ್ಸಂದ್ರ ಗಂಗಣ್ಣ,ಲಿಂಗಣ್ಣ ರವಿ) 57 ವರ್ಷ, ಬುಧವಾರ ಮಧ್ಯಾಹ್ನ 12 ರ ಹೊತ್ತಿಗೆ ಹೃದಯಾಘಾತದಿಂದ ನಿಧನರಾಗಿದ್ದಾರೆ. ಪಕ್ಷವನ್ನು ಬಲವಾಗಿ ಕಟ್ಟುವ ಉದ್ದೇಶದಿಂದ ಇತ್ತೀಚೆಗೆ ಜಿಲ್ಲಾ ಜೆಡಿಯು ಕಚೇರಿಯನ್ನು ಸಹ ಕರಿಬಸವೇಶ್ವರ ವೃತ್ತದಲ್ಲಿ ತೆರೆದಿದ್ದರು. ರಾಮಕೃಷ್ಣ ಹೆಗಡೆ ಅವರ ಕಾಲದಿಂದಲೂ ಜೆಡಿಯು ಪಕ್ಷದೊಂದಿಗೆ ಗುರುತಿಸಿಕೊಂಡಿದ್ದು, ಜೆ.ಹೆಚ್.ಪಟೇಲ್, ಎಂ.ಪಿ.ನಾಡಗೌಡ, ಜೆಡಿಯು ರಾಜ್ಯಾಧ್ಯಕ್ಷ ಮಹಿಮ ಜ.ಪಟೇಲ್ ಅವರೊಂದಿಗೆ ನಿಕಟ ಸಂಪರ್ಕ ಹೊಂದಿದ್ದರು. ಮೂಲತಃ ತುಮಕೂರಿನವರೇ ಆದ ಕೆಜಿಎಲ್ ರವಿ ಅವರು ನಗರದ ಅರಳೇಪೇಟೆಯಲ್ಲಿ ವಾಸವಾಸವಾಗಿದ್ದ ಹೊರಪೇಟೆ ಸರ್ಕಲ್ ನಿಂದ ಕೆ.ಆರ್.ಬಡಾವಣೆಗೆ ಹೋಗುವ ರಸ್ತೆಯಲ್ಲಿ ಚಂದ್ರಮೌಳೇಶ್ವರ ಹೆಸರಿನ ಹೊಟೇಲ್ ಒಂದನ್ನು ತಮ್ನ ಕುಟುಂಬದ ಸದಸ್ಯರೊಂದಿಗೆ ನಡೆಸುತ್ತಿದ್ದರು. ಓರ್ವ ಗಂಡು ಮತ್ತು ಹೆಣ್ಣು ಮಕ್ಕಳಿದ್ದು, ಹೆಂಡತಿ, ಸಹೋದರರು, ಬಂಧು, ಬಳಗವನ್ನು ಆಗಲಿದ್ದಾರೆ. ಇವರ ಅಂತ್ಯಕ್ರಿಯೆ ಅಕ್ಟೋಬರ್ 24ರ ಗುರುವಾರ ಬೆಳಗ್ಗೆ ಕುಣಿಗಲ್ ರಸ್ತೆಯ ರುದ್ರಭೂಮಿಯಲ್ಲಿ ನಡೆಯಲಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ…

Read More

ಬೆಂಗಳೂರು: ಪ್ರವಾಸೋದ್ಯಮ ಇಲಾಖೆಯು ಗೋವಾ ಮಾದರಿಯಲ್ಲಿ ಕರ್ನಾಟಕದ ಬೀಚ್ ಗಳಲ್ಲಿಯೂ ಮದ್ಯ ಮಾರಾಟಕ್ಕೆ ಚಿಂತನೆ ನಡೆಸಿದೆ ಎಂದು ತಿಳಿದು ಬಂದಿದೆ. ರಾಜ್ಯದ ಬೀಚ್ಗಳಿಗೆ ಪ್ರವಾಸಿಗರನ್ನು ಸೆಳೆಯುವ ಮತ್ತು ಪ್ರವಾಸೋದ್ಯಮವನ್ನು ಇನ್ನಷ್ಟು ಲಾಭದಾಯಕವನ್ನಾಗಿಸುವ ಉದ್ದೇಶದೊಂದಿಗೆ ಮಹತ್ವದ ಕ್ರಮಕ್ಕೆ ಕರ್ನಾಟಕ ಪ್ರವಾಸೋದ್ಯಮ ಇಲಾಖೆ ಮುಂದಾಗಿದೆ. ರಾಜ್ಯದ ಕರಾವಳಿಯ ಬೀಚ್ಗಳಲ್ಲಿ ಕೂಡ ಗೋವಾದ ಮಾದರಿಯಲ್ಲಿ ಮದ್ಯ ಮಾರಾಟ, ಮದ್ಯಪಾನಕ್ಕೆ ಅನುಮತಿ ನೀಡುವ ಬಗ್ಗೆ ಚಿಂತನೆ ನಡೆಸುತ್ತಿದೆ ಎಂದು ವರದಿಯಾಗಿದೆ. ಪ್ರವಾಸೋದ್ಯಮವನ್ನು ಉತ್ತೇಜಿಸಲು ಗೋವಾದ ಮಾದರಿಯಲ್ಲಿ ರಾಜ್ಯದ ಬೀಚ್‌ಗಳಲ್ಲಿ ಟೆಂಟ್ಗಳನ್ನು ಹಾಕುವುದು ಮತ್ತು ಮದ್ಯ ಮಾರಾಟ, ಮದ್ಯಪಾನಕ್ಕೆ ಅನುಮತಿ ನೀಡುವ ಪ್ರಸ್ತಾವನೆಯನ್ನು ಪರಿಶೀಲಿಸಲಾಗುತ್ತಿದೆ ಎಂದು ಪ್ರವಾಸೋದ್ಯಮ ಇಲಾಖೆ ತಿಳಿಸಿದೆ ಎನ್ನಲಾಗಿದೆ. ಮಂಗಳೂರಿನಲ್ಲಿ ನಡೆದ ‘ಕನೆಕ್ಟ್ 2024’ನಲ್ಲಿ ಪ್ರವಾಸೋದ್ಯಮ ಇಲಾಖೆಯ ನಿರ್ದೇಶಕ ರಾಜೇಂದ್ರ ಕೆ.ವಿ. ಬೀಚ್ಗಳಲ್ಲಿ ಮದ್ಯ ಬಳಕೆಯ ಮೇಲೆ ಇರುವ ನಿರ್ಬಂಧಗಳನ್ನು ಸಡಿಲಿಸುವ ಅಗತ್ಯವಿದೆ ಎಂದು ಹೇಳಿದ್ದರು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್…

Read More

ಮಹಿಳೆಯೊಬ್ಬಳು ತನ್ನ ಪತಿಗೆ ದಿನದಲ್ಲಿ ಮೂರು ಬಾರಿ 10ರಿಂದ 15 ನಿಮಿಷಗಳ ಕಾಲ ಲೈಂಗಿಕ ಕ್ರಿಯೆ ನಡೆಸುವಂತೆ ಒತ್ತಾಯಿಸಿದ್ದು, ಆಕೆಯ ಆಸೆ ಪೂರೈಸಲು ಅಸಮರ್ಥನಾದ ಪತಿ, ಇದೀಗ ಡಿವೋರ್ಸ್ ಗಾಗಿ ನ್ಯಾಯಾಲಯದ ಮೆಟ್ಟಿಲೇರಿದ್ದಾನೆ. ಪತ್ನಿ ಮೊಬೈಲ್‍ನಲ್ಲಿ ಪೋರ್ನ್ ವಿಡಿಯೋ ನೋಡುವ ಚಟ ಹೊಂದಿದ್ದಾಳೆ ಎಂದು ಪಂಜಾಬ್ ಹರಿಯಾಣ ಹೈಕೋರ್ಟ್ ಗೆ ಸಲ್ಲಿಸಿರುವ ಅರ್ಜಿಯಲ್ಲಿ ಆತ ಹೇಳಿದ್ದಾನೆ. ಅಲ್ಲದೇ ಪತ್ನಿ ತನ್ನ ಆಸೆ ಪೂರೈಸಲು ಅಸಮರ್ಥನಾದರೆ ತನ್ನನ್ನು ನಪುಂಸಕ ಎಂದು ಪತ್ನಿ ಹೀಯಾಳಿಸುತ್ತಾಳೆ ಎಂದು ಅರ್ಜಿಯಲ್ಲಿ ತಿಳಿಸಿದ್ದಾನೆ. ಪತ್ನಿಯು ಪತಿಯ ತಾಯಿಯನ್ನು ಕೂಡ ನಿಂದಿಸಿದ್ದು, ಎಂತಹ ನಪುಂಸಕನಿಗೆ ಜನ್ಮ ನೀಡಿದ್ದೀಯಾ ಎಂದು ಕರೆದಿದ್ದಾಳೆ ಎಂದು ತಾಯಿ ಆರೋಪಿಸಿದ್ದಾರೆ. ಪಂಜಾಬ್ ಮತ್ತು ಹರಿಯಾಣ ಹೈಕೋರ್ಟ್ನ ನ್ಯಾಯಮೂರ್ತಿಗಳಾದ ಸುಧೀರ್ ಸಿಂಗ್ ಮತ್ತು ನ್ಯಾಯಮೂರ್ತಿ ಜಸ್ಜಿತ್ ಸಿಂಗ್ ಬೇಡಿ ಅವರ ನ್ಯಾಯಪೀಠವು ವಿಚ್ಛೇದನ ಪ್ರಕರಣದ ವಿಚಾರಣೆ ನಡೆಸಿದೆ. ಈ ಪ್ರಕರಣದಲ್ಲಿ ಹೈಕೋರ್ಟ್ ಮಹತ್ವದ ತೀರ್ಪು ನೀಡಿದೆ. ಹೆಂಡತಿ ತನ್ನ ಗಂಡನನ್ನು ನಪುಂಸಕ ಎಂದು ಕರೆದರೆ ಅದು ಮಾನಸಿಕ…

Read More

ಬೆಂಗಳೂರು : ಬೆಂಗಳೂರು ಕಟ್ಟಡ ಕುಸಿತ ದುರಂತ ನಡೆದ ಸ್ಥಳಕ್ಕೆ ಸಿಎಂ ಸಿದ್ದರಾಮಯ್ಯ ಭೇಟಿ ನೀಡಿದ್ದು, ಮೃತರ ಕುಟುಂಬಸ್ಥರಿಗೆ ತಲಾ 5 ಲಕ್ಷ ಪರಿಹಾರ ಘೋಷಿಸಿದ್ದಾರೆ. ಈ ಅವಘಡದಲ್ಲಿ 8 ಮಂದಿ ಮೃತಪಟ್ಟಿದ್ದಾರೆ. 8 ಮಂದಿಯನ್ನು ರಕ್ಷಿಸಲಾಗಿದೆ. ಮೃತರ ಕುಟುಂಬಸ್ಥರಿಗೆ ತಲಾ 5 ಲಕ್ಷ ಪರಿಹಾರ ನೀಡುತ್ತೇವೆ. ಗಾಯಾಳುಗಳ ಚಿಕಿತ್ಸಾ ವೆಚ್ಚವನ್ನು ಸರ್ಕಾರವೇ ಭರಿಸಲಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಮೃತದೇಹವನ್ನು ಅವರ ಜಾಗಗಳಿಗೆ ಕಳುಹಿಸಲಾಗುತ್ತದೆ. ಕಳಪೆ ಕಾಮಗಾರಿಯಿಂದ ಈ ಅವಘಡ ನಡೆದಿದೆ. ಎಕ್ಸಿಕ್ಯೂಟಿವ್ ಇಂಜಿನಿಯರ್ ಗಳಿಗೆ ನೋಟಿಸ್ ನೀಡಲಾಗಿದೆ ಎಂದರು. ಬೆಂಗಳೂರಿನ ಬಾಬುಸಾಬ್ ಪಾಳ್ಯದಲ್ಲಿ ಅ.22ರ ಸಂಜೆ ನಿರ್ಮಾಣ ಹಂತದ ಬೃಹತ್ ಕಟ್ಟಡ ಕುಸಿದುಬಿದ್ದು ದುರಂತ ಸಂಭವಿಸಿತ್ತು. ಅವಶೆಷಗಳಡಿಯಲ್ಲಿ ಸಿಲುಕಿದ್ದ 8 ಜನರ ಮೃತದೇಹವನ್ನು ಹೊರತೆಗೆಯಲಾಗಿದ್ದು, ಇಬ್ಬರು ಅವಶೇಷಗಳಡಿ ಸಿಲುಕಿರುವ ಶಂಕೆ ಇದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

Read More

ಚನ್ನಪಟ್ಟಣ: ನನ್ನ ವಿರುದ್ಧ ರಾಜಕೀಯ ಷಡ್ಯಂತ್ರ ನಡೆದಿತ್ತು. ರಾಜಕೀಯವಾಗಿ ನನ್ನ ಮುಗಿಸುವ ಯತ್ನ ನಡೆದಿತ್ತು ಎಂದು ನಿನ್ನೆಯಷ್ಟೇ ಕಾಂಗ್ರೆಸ್ ಗೆ ಸೇರ್ಪಡೆಗೊಂಡಿರುವ ಮಾಜಿ ಸಚಿವ ಸಿ.ಪಿ.ಯೋಗೇಶ್ವರ್ ಬಿಜೆಪಿ-ಜೆಡಿಎಸ್ ನಾಯಕರ ವಿರುದ್ಧ ಆರೋಪಿಸಿದ್ದಾರೆ. ಚನ್ನಪಟ್ಟಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿ.ಪಿ.ಯೋಗೇಶ್ವರ್, ಒಂದೆರಡು ದಿನ ನಾನು ತಡ ಮಾಡಿದ್ರೇ ರಾಜಕೀಯವಾಗಿಯೇ ನನ್ನನ್ನು ಮುಗಿಸುವ ಕಾರ್ಯ ನಡೆದಿತ್ತು ಎಂದು ಹೇಳಿದ್ದಾರೆ. ಟಿಕೆಟ್ ಕೊಡ್ತೀನಿ, ಕೊಡ್ತೀನಿ ಅಂತಾ ಸತಾಯಿಸಿದ್ರು. ಅಧ್ಯಕ್ಷರು ಟಿಕೆಟ್ ಕೊಡಿಸಿದ್ರೆ ನಾನ್ಯಾಕೆ ಕಾಂಗ್ರೆಸ್ ಸೇರ್ತಿದ್ದೆ? ಎಂದು ಬಿಜೆಪಿ ವಿರುದ್ಧ ಯೋಗೇಶ್ವರ್ ಗುಡುಗಿದ್ದಾರೆ. ಚನ್ನಪಟ್ಟಣದ ಟಿಕೆಟ್ ಕೇಳಿದಾಗ ಹೆಚ್.ಡಿ.ಕುಮಾರಸ್ವಾಮಿ ಕೂಡ ಹಾರಿಕೆ ಉತ್ತರ ನೀಡಿದರು. ಚನ್ನಪಟ್ಟಣ ಅಲ್ಲೇ ಇದೆ ಎಲ್ಲಿ ಹೋಗಿದೆ…ಅಂತ ಕೇಳಿದರು. ಅಲ್ಲಿಗೆ ನಿಖಿಲ್ ಅವರನ್ನು ಸ್ಪರ್ಧೆಗೆ ಇಳಿಸುವುದು ನಿಖರವಾಗಿ ತಿಳಿದಿತ್ತು. ಹಾಗಾಗಿ ತಡ ಮಾಡದೇ ನಾನು ಕಾಂಗ್ರೆಸ್ ಸೇರುವ ನಿರ್ಧಾರ ಮಾಡಿದೆ ಎಂದು ತಿಳಿಸಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್…

Read More

ತುಮಕೂರು : ನಿರಂತರ ಮಳೆಯಿಂದಾಗಿ ಅಮಾನಿಕೆರೆ ಹರಿದು ಕೋಡಿ ಬಿದ್ದಿರುವುದರಿಂದ ಜನರು ಕೆರೆಯಲ್ಲಿ ಮೀನು ಹಿಡಿಯುವುದರಲ್ಲಿ ಮುಗಿಬಿದ್ದಿದ್ದಾರೆ. ಇದರಿಂದಾಗಿ ಟ್ರಾಫಿಕ್ ಸಮಸ್ಯೆ ಹೆಚ್ಚಾಗುತ್ತಿದ್ದು. ಇತ್ತ ಕಡೆ ಪೊಲೀಸ್ ಇಲಾಖೆ ವತಿಯಿಂದ ಒಬ್ಬ ಪೊಲೀಸ್ ಪೇದೆಯನ್ನು ನೇಮಿಸಿ ಸಮಸ್ಯೆಯನ್ನು ಬಗೆಹರಿಸಬೇಕಾಗಿ ಸಾರ್ವಜನಿಕರು ಒತ್ತಾಯಿಸಿದ್ದಾರೆ. ಕೋಡಿ ಬಿದ್ದ ಕೆರೆಯಲ್ಲಿ ಮೀನು ಹಿಡಿಯುವುದು ಅಪಾಯಕಾರಿಯಾಗಿದೆ. ಇದರಿಂದ ಸಾಕಷ್ಟು ಅಪಾಯಗಳು ಸಂಭವಿಸುವ ಸಾಧ್ಯತೆಗಳಿರುವುದರಿಂದ ಅಧಿಕಾರಿಗಳು ತಕ್ಷಣವೇ ಮುನ್ನೆಚ್ಚರಿಕೆ ವಹಿಸಬೇಕು ಎನ್ನುವ ಒತ್ತಾಯಗಳು ಕೇಳಿ ಬಂದಿವೆ. ವರದಿ: ನಂದೀಶ್ ನಾಯ್ಕ ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

Read More

ಬೆಂಗಳೂರು: ಬಿಜೆಪಿಗೆ ದ್ರೋಹ ಬಗೆದು ಹೋಗಿದ್ದಾರೆ. ಉಪಚುನಾವಣೆಯಲ್ಲಿ ಅವರಿಗೆ ಚನ್ನಪಟ್ಟಣದ ಜನತೆ ತಕ್ಕಪಾಠ ಕಲಿಸಲಿದ್ದಾರೆ ಎಂದು ಕಾಂಗ್ರೆಸ್ ಸೇರ್ಪಡೆಯಾ ಗಿರುವ ಮಾಜಿ ಸಚಿವ ಸಿ.ಪಿ.ಯೋಗೇಶ್ವರ್ ವಿರುದ್ಧ ವಿಧಾನಸಭೆಯ ಪ್ರತಿಪಕ್ಷದ ನಾಯಕ ಆರ್. ಅಶೋಕ್ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾವು ಯೋಗೇಶ್ವರ್ಗೆ ಟಿಕೆಟ್ ಕೊಡಿಸಲು ಕೊನೆ ಕ್ಷಣದವರೆಗೂ ಸರ್ವ ಪ್ರಯತ್ನ ಮಾಡಿದೆವು. ಯಾವುದೇ ಕಾರಣಕ್ಕೂ ಅವರು ಕಾಂಗ್ರೆಸ್ ಸೇರುವುದಿಲ್ಲ ಎಂದು ಅವರು ಹೇಳಿದ್ದರು. ಈಗ ಏಕಾಏಕಿ ಕಾಂಗ್ರೆಸ್ ಸೇರಿದ್ದಾರೆ. ಈ ಬಾರಿ ಕ್ಷೇತ್ರದ ಜನತೆ ಸರಿಯಾದ ಪಾಠ ಕಲಿಸಲಿದ್ದಾರೆ ಎಂದು ಗುಡುಗಿದರು. ಅಷ್ಟಕ್ಕೂ ಯೋಗೇಶ್ವರ್ ಬಿಜೆಪಿಯಿಂದ ಬಂದವರಲ್ಲ. ಅವರು ಪಕ್ಷದ ತತ್ವ ಸಿದ್ದಾಂತವನ್ನು ಒಪ್ಪಿಕೊಂಡು ಬಂದಿರಲಿಲ್ಲ. ಪಕ್ಷದಲ್ಲಿ ಇದ್ದು ಇಲ್ಲದಂತಿದ್ದರು. ಮೈತ್ರಿ ಪಕ್ಷಕ್ಕೆ ದ್ರೋಹ ಬಗೆದಿರುವ ಅವರನ್ನು ಕ್ಷಮಿಸುವ ಪ್ರಶ್ನೆಯೇ ಇಲ್ಲ ಎಂದು ವಾಗ್ದಾಳಿ ನಡೆಸಿದರು. ಸಿ.ಪಿ.ಯೋಗೇಶ್ವರ್ ಅವರು ಐದು ಕಡೆಯಿಂದ ಬಿ ಫಾರಂ ತಂದಿದ್ದರು ಎಂಬ ಸುದ್ದಿ ಇದೆ. ನಮ್ಮ ಮಾತು ಕೇಳದೇ ಕಾಂಗ್ರೆಸ್ ಸೇರಿದ್ದಾರೆ. ಕಾಂಗ್ರೆಸ್ ನಲ್ಲಿ…

Read More

ನವದೆಹಲಿ: ಬೆಂಗಳೂರಿನ ಬಾಬುಸಾಬ್ಪಾಳ್ಯದಲ್ಲಿ ನಿರ್ಮಾಣ ಹಂತದ ಕಟ್ಟಡ ಕುಸಿತ ಪ್ರಕಣಕ್ಕೆ ಸಂಬಂಧಿಸಿದಂತೆ ಪ್ರಧಾನ ಮಂತ್ರಿ ಪರಿಹಾರ ನಿಧಿಯಿಂದ ಮೃತರ ಕುಟುಂಬಕ್ಕೆ ಪರಿಹಾರ ಘೋಷಣೆ ಮಾಡಲಾಗಿದೆ. ಈ ವಿಚಾರವಾಗಿ ಸಾಮಾಜಿಕ ಮಾಧ್ಯಮ Xನಲ್ಲಿ ಪ್ರಧಾನಿ ಕಾರ್ಯಾಲಯ ಸಂದೇಶ ಪ್ರಕಟಿಸಿದೆ. ಬೆಂಗಳೂರಿನಲ್ಲಿ ಕಟ್ಟಡವೊಂದು ಕುಸಿದು ಸಂಭವಿಸಿದ ಜೀವಹಾನಿಯಿಂದ ದುಃಖವಾಗಿದೆ. ತಮ ಪ್ರೀತಿಪಾತ್ರರನ್ನು ಕಳೆದುಕೊಂಡಿರುವ ದುಃಖದಲ್ಲಿ ನಾನೂ ಭಾಗಿಯಾಗಿದ್ದೇನೆ. ಘಟನೆಯಲ್ಲಿ ಗಾಯಗೊಂಡಿರುವವರು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ಪ್ರಾರ್ಥಿಸುತ್ತೇನೆ. ಪಿಎಂಎನ್‌ಆರ್‌ಎಫ್‌ನಿಂದ ಮೃತರಿಗೆ ತಲಾ 2 ಲಕ್ಷ ರೂ. ಹಾಗೂ ಗಾಯಾಳುಗಳಿಗೆ 50,000 ರೂ.ಗಳ ಪರಿಹಾರವನ್ನು ನೀಡಲಾಗುತ್ತದೆ ಎಂದು ಅವರು ಹೇಳಿದ್ದಾರೆ. ಬಾಬುಸಾಪಾಳ್ಯದಲ್ಲಿ ಕುಸಿದು ಬಿದ್ದ ನಿರ್ಮಾಣದ ಹಂತದ ಕಟ್ಟಡದಲ್ಲಿ ರಕ್ಷಣಾ ಕಾರ್ಯಾಚರಣೆ ಇನ್ನೂ ಮುಂದುವರೆದಿದೆ. ಅವಶೇಷಗಳ ಅಡಿ ಸಿಲುಕಿ ಸಾವನ್ನಪ್ಪಿದವರ ಸಂಖ್ಯೆ 8ಕ್ಕೆ ಏರಿಕೆಯಾಗಿದೆ. ಬಿಹಾರ ಮೂಲದ ಅರ್ಮಾನ್, ಮೊಹಮದ್ ಸಾಹಿಲ್, ಸೋಲೋ ಪಾಸ್ವಾನ್, ಶ್ರೀರಾನ್ ಕಿರುಪಾಲ್. ತಮಿಳುನಾಡು ಮೂಲದ ಮಣಿಕಂಠನ್, ಸತ್ಯರಾಜು ಮತ್ತು ಆಂಧ್ರಪ್ರದೇಶ ಮೂಲದ ತುಳುಸಿರೆಡ್ಡಿ ಮತ್ತು ಉತ್ತರ ಪ್ರದೇಶ ಮೂಲದ ಪುಲ್ಚನ್ ಯಾದವ್…

Read More

ಅಪ್ರಾಪ್ತ ಶಾಲಾ ಬಾಲಕಿಯೊಬ್ಬಳು ತಂದೆಯನ್ನು ಹಿಂದೆ ಕೂರಿಸಿಕೊಂಡು ಸ್ಕೂಟರ್ ಚಲಾಯಿಸಿದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ನೆಟ್ಟಿಗರು ಘಟನೆ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಔರಂಗಬಾದ್ ಇನಸೈಡರ್ ಎಂಬ ಇನ್ಸ್ಟಾಗ್ರಾಮ್ ಪೇಜ್ ನಲ್ಲಿ ಈ ವಿಡಿಯೋ ಪೋಸ್ಟ್ ಆಗಿದೆ. ಇಂತಹವುಗಳು ನಿಜವಾಗಿಯೂ ಸ್ವೀಕಾರರ್ಹವೇ ? ಛತ್ರಪತಿ ಶಂಭಾಜಿನಗರದ ಶಾಕಿಂಗ್ ದೃಶ್ಯಾವಳಿ ಇದು ಎಂದು ಬರೆದು ವೀಡಿಯೋ ಪೋಸ್ಟ್ ಮಾಡಲಾಗಿದೆ. ವೀಡಿಯೋದಲ್ಲಿ ಅಪ್ಪ ಮಗಳನ್ನು ಮುಂದೆ ಕೂರಿಸಿಕೊಂಡು ತಲೆಗೆ ಹೆಲ್ಮೆಟ್ ಕೂಡ ಹಾಕದೇ ಸ್ಕೂಟರ್ ಓಡಿಸುತ್ತಿರುವುದನ್ನು ಕಾಣಬಹುದಾಗಿದೆ. ಈ ವೀಡಿಯೋ ನೋಡಿದ ಅನೇಕರು, ತಂದೆಯ ನಿರ್ಲಕ್ಷ್ಯದ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮಗುವಿನ ಮೇಲೆ ಆಕ್ರೋಶ ಬೇಡ ಪೋಷಕರು ಜವಾಬ್ದಾರಿಯುತವಾಗಿರಬೇಕು ಎಂದು ಒಬ್ಬರು ಕಾಮೆಂಟ್ ಮಾಡಿದ್ದಾರೆ. ಹಲವು ಅಪಘಾತಗಳಿಗೆ ಇದು ಕಾರಣ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

Read More