Author: admin

ತುಮಕೂರು:  ಜಿಲ್ಲೆಯ ಚಿಕ್ಕನಾಯಕನಹಳ್ಳಿ ತಾಲೂಕಿನ ಸೋರಲು ಮಾವು ಗ್ರಾಮದಲ್ಲಿ ಕಲುಷಿತ ನೀರು ಸೇವಿಸಿ ಇಬ್ಬರು ಮೃತಪಟ್ಟಿದ್ದಾರೆ. ಗುಂಡಮ್ಮ (60) ಮತ್ತು ಭುವನೇಶ್ವರಿ (10) ಮೃತ ದುರ್ದೈವಿಗಳಾಗಿದ್ದಾರೆ. ಗ್ರಾಮದ ಗುಂಡಮ್ಮ ವಾಂತಿಬೇದಿಯಿಂದ ಮಂಗಳವಾರ ಮನೆಯಲ್ಲಿ ಮೃತಪಟ್ಟಿದ್ದರು. ಭಾನುವಾರ ಬಾಲಕಿ ಮೃತಪಟ್ಟಿದ್ದಾರೆ  ಎಂದು ಆರೋಗ್ಯ ಇಲಾಖೆ ಸಿಬ್ಬಂದಿಗಳು ಖಚಿತಪಡಿಸಿದ್ದಾರೆ. ರತ್ನಮ್ಮ ಎಂಬ ಮಹಿಳೆ ತೀವ್ರ ಅಸ್ವಸ್ಥಗೊಂಡಿದ್ದು ಚಿಕ್ಕನಾಯಕನಹಳ್ಳಿ ತಾಲೂಕು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಹೆಚ್ಚಿನ ಚಿಕಿತ್ಸೆಗಾಗಿ ಹಾಸನ ವೈದ್ಯಕೀಯ ಮಹಾವಿದ್ಯಾಲಯಕ್ಕೆ ಕಳುಹಿಸಲಾಗಿದೆ. ಇನ್ನು ರೇಣುಕಯ್ಯ ನೇತ್ರಾವತಿ ರತ್ನಮ್ಮ ಬಸವರಾಜು ಉಮೇಶ್ ಶ್ರೀಧರ್ ರುದ್ರಮ್ಮ ಸೇರಿದಂತೆ 10ಕ್ಕೂ ಹೆಚ್ಚು ಮಂದಿಗೆ ವಾಂತಿಭೇದಿ ಕಾಣಿಸಿಕೊಂಡಿದ್ದು ಚಿಕ್ಕನಾಯಕನಹಳ್ಳಿ ತಾಲೂಕು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇನ್ನು ಈ ಸಂಬಂಧ ಸ್ಪಷ್ಟನೆ ನೀಡಿರುವ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾಕ್ಟರ್ ಚಂದ್ರಶೇಖರ್ ಅವರು, ಸೋರಲು ಮಾವು ಗ್ರಾಮದಲ್ಲಿ ಕಳೆದ ಎರಡು ದಿನಗಳಲ್ಲಿ ಇಬ್ಬರು ಮೃತಪಟ್ಟಿದ್ದಾರೆ. ಸಾವಿಗೆ ಸ್ಪಷ್ಟ ಕಾರಣ ತಿಳಿದು ಬಂದಿಲ್ಲ ಇಬ್ಬರಿಗೆ ಚಿಕ್ಕನಾಯಕನಹಳ್ಳಿ ತಾಲೂಕು ಆಸ್ಪತ್ರೆಯಲ್ಲಿ ಚಿಕಿತ್ಸೆ…

Read More

ಕಳೆದ ಮೂರು ನಾಲ್ಕು ದಿನಗಳ ಕಾಲ ರಾಜ್ಯದ ಉತ್ತರ ಕರಾವಳಿ, ಶಿವಮೊಗ್ಗ ಭಾಗಗಳಲ್ಲಿ ರಾತ್ರಿ ಅನಿರೀಕ್ಷಿತ ಭಾರಿ ಪ್ರಮಾಣದಲ್ಲಿ ಮಳೆಯಾಗಿದೆ. ಅರಬ್ಬಿ ಸಮುದ್ರದ ಕರಾವಳಿ ತೀರದಲ್ಲಿ ಗಾಳಿಯ ತಿರುಗುವಿಕೆಯ ಪರಿಣಾಮದಿಂದ ಈ ಮಳೆ ಇದ್ದಿರಬಹುದು. ಇವತ್ತು ಈಗಿನಂತೆ ಅಂತಹ ಗಾಳಿಯ ಚಲನೆ ಕಾಣಿಸುತ್ತಿಲ್ಲವಾದ್ದರಿಂದ ಭಾರಿ ಮಳೆಯ ಸಾಧ್ಯತೆ ಕಡಿಮೆ ಇರಬಹುದು. ಕರಾವಳಿ : ಕಾಸರಗೋಡು ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದ್ದು, ಮಳೆಯ ಸಾಧ್ಯತೆ ಕ್ಷೀಣಿಸುತ್ತಿದೆ. ದಕ್ಷಿಣ ಕನ್ನಡದ ಸುಳ್ಯ, ಸುಬ್ರಮಣ್ಯ, ಬೆಳ್ತಂಗಡಿ ಸುತ್ತಮುತ್ತ ಭಾಗಗಳಲ್ಲಿ ಅಲ್ಲಲ್ಲಿ ಮಧ್ಯಾಹ್ನ ನಂತರ, ಸಂಜೆ ಗುಡುಗು ಸಹಿತ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳ ಅಲ್ಲಲ್ಲಿ ಸಂಜೆ ಗುಡುಗು ಸಹಿತ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಈಗಿನಂತೆ ಒಕ್ಟೊಬರ್ 25ರಿಂದ ಮಳೆ ಕಡಿಮೆಯಾಗಿ 26ರಿಂದ ಹೆಚ್ಚಿನ ಅವಧಿಯೂ ಬಿಸಿಲಿನ ವಾತಾವರಣ ಇರಬಹುದು. ಮಲೆನಾಡು : ಕೊಡಗು, ಹಾಸನ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳ ಅಲ್ಲಲ್ಲಿ ಮಧ್ಯಾಹ್ನ…

Read More

ಬೆಂಗಳೂರು ನಗರ: ಕರ್ನಾಟಕ ಸಾಹಿತ್ಯ ಅಕಾಡೆಮಿಯು, ಕರ್ನಾಟಕ ಸಂಭ್ರಮ–50ರ ಅಭಿಯಾನದ ಅಂಗವಾಗಿ ಬೆಂಗಳೂರು, ಮೈಸೂರು, ಬೆಳಿಗಾವಿ ಹಾಗೂ ಕಲಬುರಗಿ ವಿಭಾಗಗಳಲ್ಲಿ ವಿಭಾಗವಾರು “ಯುವಕವಿ ಗೋಷ್ಠಿ” ಗಳನ್ನು ಆಯೋಜಿಸುತ್ತಿದ್ದು, ಆಸಕ್ತ 20 ರಿಂದ 40 ವರ್ಷ ವಯಸ್ಸಿನ ಯುವಕವಿಗಳಿಂದ ಕವಿತೆಗಳನ್ನು ಆಹ್ವಾನಿಸಲಾಗಿದೆ. ರಾಜ್ಯದ ಎಲ್ಲಾ ಭಾಗದ ಆಸಕ್ತ ಯುವ ಕವಿಗಳು ಅಕ್ಟೋಬರ್ 30 ರೊಳಗೆ ಕನಿಷ್ಠರ 3 ಕವಿತೆಗಳನ್ನು ಕಳುಹಿಸಿಕೊಡಬಹುದಾಗಿದೆ. ಕವಿಗಳು ಕವಿತೆಗಳನ್ನು ಸಲ್ಲಿಸಲು ಕರ್ನಾಟಕ ಸಾಹಿತ್ಯ ಅಕಾಡೆಮಿಯ ಜಾಲತಾಣ http://karnatakasahithyaacademy.org ನಿಂದ ಪಡೆದುಕೊಳ್ಳಬಹುದು. ಹೆಚ್ಚಿನ ಮಾಹಿತಿಗಾಗಿ ಕನ್ನಡ ಸಾಹಿತ್ಯ ಅಕಾಡೆಮಿ, ಕನ್ನಡ ಭವನ, 2ನೇ ಮಹಡಿ, ಜೆ.ಸಿ ರಸ್ತೆ, ಬೆಂಗಳೂರು-560 002 ಅಥವಾ ದೂರವಾಣಿ ಸಂಖ್ಯೆ 080–2221 1730 / 2210 6460, 29601730 ಗೆ ಸಂಪರ್ಕಿಸಬಹುದು ಎಂದು ಬೆಂಗಳೂರು ಕರ್ನಾಟಕ ಸಾಹಿತ್ಯ ಅಕಾಡಮಿ ರಿಜಿಸ್ಟ್ರಾರ್ ರವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ…

Read More

ತುಮಕೂರು: ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆ ವತಿಯಿಂದ ರೈತರಿಗೆ ಅಪಾರ ಆರ್ಥಿಕ ನಷ್ಟ ಉಂಟು ಮಾಡುತ್ತಿರುವ ಕಾಲು ಬಾಯಿ ರೋಗವನ್ನು ನಿರ್ಮೂಲನೆ ಮಾಡುವ ಉದ್ದೇಶದಿಂದ ಪ್ರತಿ 6 ತಿಂಗಳಿಗೊಮ್ಮೆ ದನ/ಎಮ್ಮೆ ಹಂದಿಗಳಿಗೆ ಕಾಲು ಬಾಯಿ ರೋಗದ ವಿರುದ್ದ ಲಸಿಕೆ ಹಾಕಲಾಗುತ್ತಿದೆ ಎಂದು ಪಶು ಆಸ್ಪತ್ರೆ ಮುಖ್ಯ ಪಶುವೈದ್ಯಾಧಿಕಾರಿ (ಆಡಳಿತ) ಡಾ.ವೈ.ಜಿ.ಕಾಂತರಾಜು ಎಂದು ಮಾಹಿತಿ ನೀಡಿದ್ದಾರೆ. ರಾಷ್ಟೀಯ ಜಾನುವಾರು ರೋಗ ನಿಯಂತ್ರಣ ಕಾರ್ಯಕ್ರಮದಡಿ ಅ.21ರಿಂದ ನವೆಂಬರ್ 20 ರವರೆಗೆ ಕಾಲು ಬಾಯಿ ರೋಗದ ವಿರುದ್ದ ಲಸಿಕಾ ಕಾರ್ಯಕ್ರಮವನ್ನು ರಾಜ್ಯಾದ್ಯಂತ ಹಮ್ಮಿಕೊಳ್ಳಲಾಗಿದ್ದು, ಲಸಿಕೆ ನೀಡುವುದರಿಂದ ಜಾನುವಾರುಗಳಲ್ಲಿ ಕಂಡು ಬರುವ ಕಾಲುಬಾಯಿ ಜ್ವರವನ್ನು ನಿಯಂತ್ರಿಸಬಹುದು. ಈ ನಿಟ್ಟಿನಲ್ಲಿ ಲಸಿಕಾ ಕಾರ್ಯಕ್ರಮವನ್ನು ಸದುಪಯೋಗ ಪಡಿಸಿಕೊಳ್ಳುವಂತೆ ಎಲ್ಲಾ ರೈತರು, ಪಶುಪಾಲಕರು, ಜಾನುವಾರು ಸಾಕಾಣಿಕೆದಾರರಿಗೆ ಅರಿವು ಮೂಡಿಸಬೇಕು ಎಂದರು. ತುಮಕೂರು ತಾಲ್ಲೂಕಿನ ಎಲ್ಲಾ ದನ/ಎಮ್ಮೆ ಹಂದಿಗಳಿಗೆ ಲಸಿಕೆ ಹಾಕಲು ತಾಲ್ಲೂಕು ಪಶುಪಾಲನಾ ಇಲಾಖೆಯು 20 ಪಶುವೈದ್ಯಾಧಿಕಾರಿಗಳ ಮೇಲ್ವಿಚಾರಣೆಯಲ್ಲಿ ಲಸಿಕೆ ಹಾಕಲು 60 ಲಸಿಕಾದಾರರನ್ನು ನಿಯೋಜಿಸಲಾಗಿದ್ದು, ಲಸಿಕೆದಾರರು ಮನೆಮನೆಗೆ ತೆರಳಿ…

Read More

ತುಮಕೂರು: ಭಾರತ ಚುನಾವಣಾ ಆಯೋಗವು ಗ್ರಾಮ ಪಂಚಾಯತಿಗಳಲ್ಲಿ ವಿವಿಧ ಕಾರಣಗಳಿಂದ ಖಾಲಿ ಇರುವ/ ತೆರವಾಗಿರುವ ಸದಸ್ಯ ಸ್ಥಾನಗಳಿಗೆ ಚುನಾವಣೆ ನಡೆಸಲು ವೇಳಾಪಟ್ಟಿ ಪ್ರಕಟಿಸಿದ್ದು, ವೇಳಾಪಟ್ಟಿಯನ್ವಯ ನವೆಂಬರ್ 6ರಂದು ಚುನಾವಣಾ ಅಧಿಸೂಚನೆಯನ್ನು ಹೊರಡಿಸಲಾಗುವುದು. ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಲು ನವೆಂಬರ್ 12 ಕಡೆಯ ದಿನವಾಗಿದ್ದು, ನವೆಂಬರ್ 13ರಂದು ನಾಮಪತ್ರಗಳ ಪರಿಶೀಲನೆ ನಡೆಸಲಾಗುವುದು. ಅಭ್ಯರ್ಥಿಗಳು ನಾಮಪತ್ರ ಹಿಂತೆಗೆದುಕೊಳ್ಳಲು ನವೆಂಬರ್ 15ರವರೆಗೂ ಅವಕಾಶವಿದ್ದು, ನವೆಂಬರ್ 23ರಂದು(ಮತದಾನದ ಅವಶ್ಯವಿದ್ದರೆ) ಬೆಳಿಗ್ಗೆ 7 ರಿಂದ ಸಂಜೆ 5 ಗಂಟೆಯವರೆಗೆ ಮತದಾನ ಪ್ರಕ್ರಿಯೆ ನಡೆಯಲಿದೆ. ಮರು ಮತದಾನದ ಅವಶ್ಯವಿದ್ದರೆ ನವೆಂಬರ್ 25ರಂದು ಬೆಳಿಗ್ಗೆ 7 ರಿಂದ ಸಂಜೆ 5 ಗಂಟೆಯವರೆಗೆ ನಡೆಸಲಾಗುವುದು. ನಂತರ ನವೆಂಬರ್ 26ರಂದು ಬೆಳಿಗ್ಗೆ 8 ಗಂಟೆಯಿಂದ ಆಯಾ ತಾಲ್ಲೂಕು ಕೇಂದ್ರಗಳಲ್ಲಿ ಮತ ಎಣಿಕೆ ಕಾರ್ಯ ನಡೆಯಲಿದೆ. ಜಿಲ್ಲೆಯ 9 ತಾಲ್ಲೂಕಿನ 27 ಗ್ರಾಮ ಪಂಚಾಯತಿಗಳ 30 ಸದಸ್ಯ ಸ್ಥಾನಕ್ಕೆ ನವೆಂಬರ್ 23ರಂದು ಚುನಾವಣೆ ನಡೆಯಲಿದ್ದು, ಗ್ರಾಮ ಪಂಚಾಯತಿಗಳ ವಿವರ ಇಂತಿದೆ. ಜಿಲ್ಲೆಯ ಚಿಕ್ಕನಾಯಕಹಳ್ಳಿ ತಾಲ್ಲೂಕು ದೊಡ್ಡ ಎಣ್ಣೇಗೆರೆ…

Read More

ತುಮಕೂರು: ಜಿಲ್ಲಾ ಸಹಕಾರ ಹಾಲು ಉತ್ಪಾದಕರ ಸಂಘಗಳ ಒಕ್ಕೂಟದ ಆಡಳಿತ ಮಂಡಳಿ ನಿರ್ದೇಶಕರ ಚುನಾವಣೆಯನ್ನು ನವೆಂಬರ್ 10ರಂದು ನಡೆಸಲು ನಿಗದಿಪಡಿಸಿ ಅಕ್ಟೋಬರ್ 14ರಂದು ಚುನಾವಣಾ ಅಧಿಸೂಚನೆಯನ್ನು ಹೊರಡಿಸಲಾಗಿದೆ ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಶುಭ ಕಲ್ಯಾಣ್ ತಿಳಿಸಿದ್ದಾರೆ. ಜಿಲ್ಲಾ ಸಹಕಾರ ಹಾಲು ಉತ್ಪಾದಕರ ಸಂಘಗಳ ಒಕ್ಕೂಟದಲ್ಲಿ ಒಟ್ಟು 1,383 ಹಾಲು ಉತ್ಪಾದಕರ ಸಹಕಾರ ಸಂಘಗಳು ಸದಸ್ಯತ್ವ ಹೊಂದಿದ್ದು, ಈ ಪೈಕಿ 1,146 ಹಾಲು ಉತ್ಪಾದಕರ ಸಹಕಾರ ಸಂಘಗಳು ಈ ಚುನಾವಣಾ ಪ್ರಕ್ರಿಯೆಯಲ್ಲಿ ಭಾಗವಹಿಸಲು ಅರ್ಹವಿರುತ್ತವೆ. ಕರ್ನಾಟಕ ಸಹಕಾರ ಸಂಘಗಳ ಕಾಯ್ದೆ 1959ರ ಕಲಂ 28(ಎ)5ರಡಿ ಆಡಳಿತಾಧಿಕಾರಿ ನೇಮಕ ಮಾಡಿರುವುದು; ತು.ಜಿ.ಸ.ಹಾ.ಒ., ಉಪವಿಧಿ ಸಂಖ್ಯೆ:15.2ರಲ್ಲಿ ವಿವರಿಸಿದಂತೆ ಒಕ್ಕೂಟದೊಡನೆ ಮಾಡಿಕೊಂಡಿರುವ ಒಪ್ಪಂದ ಮತ್ತು ಷರತ್ತುಗಳ ಪ್ರಕಾರ ಒಕ್ಕೂಟಕ್ಕೆ ಪ್ರತಿ ಸಹಕಾರ ವರ್ಷದಲ್ಲಿ ಎರಡು(2) ಪಾಳಿಯೂ ಸೇರಿ ಕನಿಷ್ಠ 270 ದಿವಸಗಳು ಸರಾಸರಿ ದಿನಕ್ಕೆ 150 ಕೆ.ಜಿ. ಹಾಲನ್ನು ಸರಬರಾಜು ಮಾಡಲು ತಪ್ಪಿರುವುದು; ಲೋಕಸಭಾ ಚುನಾವಣೆ 2024 ರ ಸಾರ್ವತ್ರಿಕ ಚುನಾವಣೆಯ ಹಿನ್ನೆಲೆಯಲ್ಲಿ ಸರ್ಕಾರದ…

Read More

ಸರಗೂರು: ತಾಲ್ಲೂಕಿನ ಎಂ.ಸಿ. ತಳಲು ಗ್ರಾಮ ಪಂಚಾಯಿತಿ ಅಧ್ಯಕ್ಷ ಸ್ಥಾನಕ್ಕೆ ಸೋಮವಾರ ನಡೆದ ಚುನಾವಣೆಯಲ್ಲಿ ಜಯಲಕ್ಷ್ಮೀಪುರ ರಂಜಿತಾ ವೆಂಕಟರಾಮು ಅಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾದರು. ಹಿಂದಿನ ಅಧ್ಯಕ್ಷ ಲಕ್ಷಿಮಾದಪ್ಪನವರ ರಾಜೀನಾಮೆಯಿಂದ ತೆರವಾಗಿದ್ದ ಸ್ಥಾನಕ್ಕೆ ನಡೆದ ಚುನಾವಣೆಗೆ ರಂಜಿತಾ ವೆಂಕಟರಾಮು ಮಾತ್ರ ನಾಮ ಪತ್ರ ಸಲ್ಲಿಸಿದ್ದರು. ಬೇರೆ ನಾಮಪತ್ರಗಳು ಸಲ್ಲಿಕೆಯಾಗದ ಕಾರಣ ಚುನಾವಣಾಧಿಕಾರಿ ಉಪವಿಭಾಗ ಕಬಿನಿ ನೀರಾವರಿ ಇಲಾಖೆ ಅಧಿಕಾರಿ ಕೆ. ಉಷಾ ಚುನಾವಣಾ ಪ್ರಕ್ರಿಯೆ ಪೂರ್ಣಗೊಳಿಸಿ ಅವಿರೋಧ ಆಯ್ಕೆ ಪ್ರಕಟಿಸಿ ರಂಜಿತಾ ವೆಂಕಟರಾಮು ಗೆ ಅಧಿಕಾರ ವಹಿಸಿಕೊಟ್ಟರು. 12 ಮಂದಿ ಸದಸ್ಯರು ಹಾಜರಿದ್ದರು. ಮಾಜಿ ಅಧ್ಯಕ್ಷೆ ಲಕ್ಷ್ಮೀಮಾದಪ್ಪ ಗೈರು ಹಾಜರಾಗಿದ್ದರು. ನೂತನ ಅಧ್ಯಕ್ಷೆ ರಂಜಿತಾ ವೆಂಕಟರಾಮು ಮಾತನಾಡಿ, ಅವಿರೋಧ ಆಯ್ಕೆಗೆ ಸಹಕರಿಸಿದ ಎಲ್ಲ ಸದಸ್ಯರಿಗೆ ಅಭಿನಂದನೆ ಸಲ್ಲಿಸಿದರು. ಕ್ಷೇತ್ರದ ಸಮಸ್ಯೆಗಳ ಪರಿಹಾರಕ್ಕಾಗಿ ಶ್ರಮಿಸುತ್ತೇನೆ. ಪಕ್ಷಾತೀತ ನೆಲೆಯಲ್ಲಿ ಅಭೀವೃದ್ಧಿ ಕಾರ್ಯಗಳನ್ನು ಹಂತ ಹಂತವಾಗಿ ಕೈಗೊಳ್ಳುತ್ತೇನೆ ಎಂದು ಭರವಸೆ ನೀಡಿದರು. ಚುನಾವಣಾಧಿಕಾರಿ ಕೆ. ಉಷಾ ಮಾತನಾಡಿ, ಸದಸ್ಯರು ಮತ್ತು ಅಧ್ಯಕ್ಷರು ಪರಸ್ಪರ ಸಹಕಾರ ಮನೋಭಾವದಿಂದ ಕೆಲಸ…

Read More

ವರದಿ : ಮಂಜುಸ್ವಾಮಿ ಎಂ.ಎನ್. ಕೊರಟಗೆರೆ. ಕೊರಟಗೆರೆ : ಬೈರೇನಹಳ್ಳಿಯಿಂದ ಕೊರಟಗೆರೆ ಸಂಪರ್ಕದ 10 ಕಿ.ಮೀ. ಪಿಡ್ಲ್ಯೂಡಿ ಮುಖ್ಯರಸ್ತೆಯಲ್ಲಿ 100ಕ್ಕೂ ಅಧಿಕ ಗುಂಡಿಗಳು ಬಿದ್ದು ಪ್ರತಿನಿತ್ಯವು ಅಪಘಾತ ಆಗ್ತಿದ್ರು ಸಹ,  ಪಿಡ್ಲ್ಯೂಡಿ ಇಲಾಖೆ ಮಾತ್ರ ಗ್ರಾಮೀಣ ಪ್ರದೇಶದ ಕಡೆಗಳಿಗೆ ತಿರುಗಿಯು ನೋಡದಿರುವ ಪರಿಣಾಮ ಸ್ಥಳೀಯರೇ ಮುಖ್ಯರಸ್ತೆಗಳಿಗೆ ಕಲ್ಲು–ಮಣ್ಣು ಸುರಿದು ತೇಪೆ ಹಚ್ಚಲು ಕೆಲಸ ಮಾಡಿದ್ದು, ಈ ಘಟನೆ ಪಿಡ್ಲ್ಯೂಡಿ ಇಲಾಖೆಯ ವೈಫಲ್ಯವನ್ನು ಎತ್ತಿ ತೋರಿಸಿದೆ. ಕೊರಟಗೆರೆಯಿಂದ ಬೈರೇನಹಳ್ಳಿಗೆ ಸಂಪರ್ಕ ಕಲ್ಪಿಸುವ ಮಾರ್ಗದ ಪಿಡ್ಲ್ಯೂಡಿ ಮುಖ್ಯರಸ್ತೆಯ ನಿರ್ವಹಣೆ ಮಾಡಬೇಕಾದ ಗುತ್ತಿಗೆದಾರನ ಜೊತೆ ಅಧಿಕಾರಿವರ್ಗವು ಸಹ ಕಾಣೆಯಾಗಿದ್ದಾರೆ. ಹೀಗಾಗಿ ಗ್ರಾಮೀಣ ರಸ್ತೆಗಳು ಗುಂಡಿಮಯ ಆಗಿವೆ. ಬಿ.ಡಿ.ಪುರದಿಂದ ಹೊಳವನಹಳ್ಳಿ ಸಂಪರ್ಕ ಕಲ್ಪಿಸುವ ರಸ್ತೆಯೇ ಮಾಯವಾಗಿ ಗುಂಡಿಗಳೇ ಹೆಚ್ಚಾಗಿ ಅಪಘಾತದ ಸಂಖ್ಯೆ ಪ್ರತಿನಿತ್ಯ ಏರಿಕೆ ಆಗುತ್ತಲೇ ಇದೆ. ಕುರಿ–ಮೇಕೆ ಸಂತೆಗೂ ರಸ್ತೆಯೇ ವಿಘ್ನ: ಪಿಡ್ಲ್ಯೂಡಿ ಇಲಾಖೆಯ ಮುಖ್ಯರಸ್ತೆಗಳ ದುಸ್ಥಿತಿಯಿಂದ ಕರ್ನಾಟಕದ ಸುಪ್ರಸಿದ್ದ ಅಕ್ಕಿರಾಂಪುರ ಕುರಿ-ಮೇಕೆ ಸಂತೆಗೂ ವಿಘ್ನ ಎದುರಾಗಿದೆ. ರಸ್ತೆಗಳಲ್ಲಿ ಪ್ರತಿನಿತ್ಯವು ಅಪಘಾತ ದೃಶ್ಯಗಳನ್ನು ನೋಡಿ ಬೇರೆ…

Read More

ಪಾವಗಡ: ತಾಲೂಕಿನ ವೈ.ಎನ್.ಹೊಸಕೋಟೆ ಪಟ್ಟಣದ ಸರ್ಕಾರಿ ಪ್ರೌಢಶಾಲೆಯ ಮಕ್ಕಳು ಕೊಳಚೆ ನೀರಿನಲ್ಲೇ ನಡೆದುಕೊಂಡು ಹೋಗುವ ದುಸ್ಥಿತಿ ಎದುರಿಸುತ್ತಿದ್ದಾರೆ. ಈ ಶಾಲೆಯು ದೊಡ್ಡಹಳ್ಳಿ ರಸ್ತೆಯಲ್ಲಿದೆ. ಮುಖ್ಯರಸ್ತೆಯಿಂದ 100 ಮೀಟರ್ ದೂರದಲ್ಲಿರುವ ಈ ಶಾಲೆಗೆ ಮಳೆಗಾಲದಲ್ಲಿ ಪ್ರತಿ ವರ್ಷವೂ ವಿದ್ಯಾರ್ಥಿಗಳು ಕೊಳಚೆ ನೀರಿನಲ್ಲಿ ನಡೆದುಕೊಂಡು ಹೋಗಬೇಕಾದ ಅನಿವಾರ್ಯತೆ ಸೃಷ್ಟಿಯಾಗಿದೆ. ಸುಮಾರು 160 ವಿದ್ಯಾರ್ಥಿಗಳು ಈ ಶಾಲೆಯಲ್ಲಿ ವಿದ್ಯಾಭ್ಯಾಸ ನಡೆಸುತ್ತಿದ್ದಾರೆ. ಈ ಶಾಲೆಯ ವಿದ್ಯಾರ್ಥಿಗಳು ಮನೆಯಿಂದ ಶಾಲೆಗೆ ಮತ್ತು ಶಾಲೆಯಿಂದ ಮನೆಗೆ ಹೋಗಬೇಕಾದರೆ ಈ ಕೊಳಚೆ ನೀರನ್ನೇ ಮೆಟ್ಟಿಕೊಂಡು ಹೋಗಬೇಕಾದ ಪರಿಸ್ಥಿತಿಯಿದೆ. ಕೊಳಚೆ ನೀರಿನಿಂದ ಸಮಸ್ಯೆಯಾಗುತ್ತಿರುವ ಬಗ್ಗೆ ಸ್ಥಳೀಯ ಪಂಚಾಯತ್ ನ ಗಮನಕ್ಕೆ ತಂದರೂ ಪಂಚಾಯತ್ ಸಂಪೂರ್ಣ ನಿರ್ಲಕ್ಷ್ಯ ಮಾಡಿದೆ. ಸಂಬಂಧಪಟ್ಟ ಅಧಿಕಾರಿಗಳು ಇನ್ನಾದರೂ ಎಚ್ಚೆತ್ತುಕೊಂಡು ಶಾಲಾ ಮಕ್ಕಳಿಗೆ ಓಡಾಡಲು ಸರಿಯಾದ ರಸ್ತೆ ನಿರ್ಮಿಸಿಕೊಡಬೇಕಿದೆ. ಗ್ರಾಮಸ್ಥರಿಗೆ ಸ್ವಚ್ಛತೆಯ ಪಾಠ ಹೇಳಿಕೊಡುವ ಪಂಚಾಯತ್ ಗಳು, ತಾವೇ ತಮ್ಮ ಜವಾಬ್ದಾರಿಯನ್ನು ಮರೆತು, ವಿದ್ಯಾರ್ಥಿಗಳು ಆರೋಗ್ಯದ ಜೊತೆಗೆ ಚೆಲ್ಲಾಟವಾಡುತ್ತಿರುವುದು ಎಷ್ಟು ಸರಿ ಎನ್ನುವ ಪ್ರಶ್ನೆ ಕೇಳಿ ಬಂದಿದೆ. ವರದಿ: ನಂದೀಶ್…

Read More

ತುಮಕೂರು ಜಿಲ್ಲೆ ಪಾವಗಡ ತಾಲ್ಲೂಕಿನ ನೀಡಿಗಲ್ ಹೋಬಳಿಯ ಕೆ.ಟಿ.ಹಳ್ಳಿ ಗ್ರಾಮದ ಚಾಮುಂಡೇಶ್ವರಿ ದೇವಸ್ಥಾನವನ್ನು ತೆರವುಗೊಳಿಸಲು ತಹಶೀಲ್ದಾರರು ನೋಟಿಸ್ ನೀಡಿದ್ದು ಗ್ರಾಮಸ್ಥರಿಗೆ ಧೈರ್ಯ ತುಂಬಿ ಸಹಕಾರ ನೀಡುವ ಬಗ್ಗೆ ಗ್ರಾಮಸ್ಥರೊಂದಿಗೆ ಸಭೆ ನಡೆಸಲಾಯಿತು. ನಂತರ ಪಾವಗಡ ತಾಲೂಕು ತಹಶೀಲ್ದಾರರ ಭೇಟಿ ಮಾಡಿ, ದೇವಸ್ಥಾನ ಮತ್ತು ಸುತ್ತಮುತ್ತ ಇರುವ ಮನೆಗಳನ್ನು ತೆರವುಗೊಳಿಸದಂತೆ ಆಗ್ರಹಿಸಲಾಯಿತು. ಈ ಸಂದರ್ಭದಲ್ಲಿ ವಿಶ್ವ ಹಿಂದೂ ಪರಿಷದ್ ನ ಪ್ರಾಂತ ಸಹ ಕಾರ್ಯದರ್ಶಿಗಳಾದ ಮಂಗಳೂರಿನ ಶರಣ್ ಪಂಪ್ ವೆಲ್ , ತುಮಕೂರು ಬಜರಂಗದಳ ವಿಭಾಗ ಸಂಯೋಜಕರು ಮಂಜು ಭಾರ್ಗವ್, ವಿಶ್ವ ಹಿಂದೂ ಪರಿಷದ್ ತುಮಕೂರು ವಿಭಾಗ ಮಂದಿರ ಅರ್ಚಕ ಪುರೋಹಿತ್ ಪ್ರಮುಖ್ ಶ್ರೀನಿವಾಸ್ ಜಿ ಕೆ ,ಕಾರ್ಯದರ್ಶಿಗಳಾದ ಸಂಜಯ್ ಮಧುಗಿರಿ ಜಿಲ್ಲಾ ಸಂಯೋಜಕ್ ಸುಮನ್, ಪಾವಗಡ ಪ್ರಖಂಡ ವಾಸು , ರವಿ ,ರಾಕೇಶ್ ,ಲಕ್ಷ್ಮಿ ನಾಯ್ಡು, ಕಾರ್ತಿಕ್ , ಧನು ಇದ್ದರು. ವರದಿ: ನಂದೀಶ್ ನಾಯ್ಕ, ಪಾವಗಡ ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ…

Read More