Subscribe to Updates
Get the latest creative news from FooBar about art, design and business.
- “ಹೌದು ನಾನು ಏಜೆಂಟ್, ಆದರೆ ಮಾಫಿಯಾ ಕಮಿಷನ್ ಏಜೆಂಟ್ ಅಲ್ಲ”: ಸಿಎಂ ಡಿಕೆಶಿಗೆ ಆರ್. ಅಶೋಕ್ ತಿರುಗೇಟು
- 26 ವರ್ಷಗಳ ಹಿಂದೆ ಸರ್ಕಸ್ ಕಂಪನಿ ಜೊತೆ ಓಡಿಹೋಗಿದ್ದ ಸತೀಶ್ ‘ಸಲೀಂ’ ಆಗಿ ಮನೆಗೆ ವಾಪಸ್!
- ಅಕ್ರಮ ಸಂಬಂಧಕ್ಕೆ ಮಹಿಳೆ ಬಲಿ; ಪ್ರಿಯಕರನ ಬಂಧನ!
- ರೈತರ ಬಗ್ಗೆ ಅವಹೇಳನಕಾರಿ ಹೇಳಿಕೆ ಆರೋಪ: KRS ಅಧ್ಯಕ್ಷ ರವಿ ಕೃಷ್ಣಾ ರೆಡ್ಡಿ ವಿರುದ್ಧ ಕೇಸು ದಾಖಲು
- ಸಿರಾ: ಟಿ.ಬಿ.ಜಯಚಂದ್ರ ಅವರಿಗೆ ಸಚಿವ ಸ್ಥಾನ ನೀಡಲು ಬ್ಲಾಕ್ ಕಾಂಗ್ರೆಸ್ ಒತ್ತಾಯ
- ತುಮಕೂರು ವಿಶ್ವವಿದ್ಯಾನಿಲಯ: ವಿವಿಧ ಪದವಿಗಳ ಉಳಿಕೆ ಸೀಟುಗಳ ಪ್ರವೇಶಾತಿಗೆ ಅರ್ಜಿ ಆಹ್ವಾನ
- ದೆಹಲಿಯಲ್ಲಿ ತಿಪಟೂರು ಕಾಂಗ್ರೆಸ್ ಶಾಸಕ ಷಡಕ್ಷರಿ ದಿಢೀರ್ ಅಸ್ವಸ್ಥ: ಆಸ್ಪತ್ರೆಗೆ ದಾಖಲು
- ರಾಜ್ಯ ಮಟ್ಟದ ಚರ್ಮ ಪಾದರಕ್ಷೆ ತಯಾರಿಕಾ ಸ್ಪರ್ಧೆ: ಜುಲೈ 6 ರಂದು ಬೆಂಗಳೂರಿನಲ್ಲಿ ಆಯೋಜನೆ
Author: admin
ತುಮಕೂರು: ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ (DHO) ಕಚೇರಿಯ ಲೆಕ್ಕಪತ್ರ ವಿಭಾಗದ ವ್ಯವಸ್ಥಾಪಕ ಎಂ.ಎಚ್. ಅರವಿಂದ್ ಅವರು ₹12,000 ಲಂಚ ಪಡೆಯುತ್ತಿದ್ದಾಗ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ. ತಿಪಟೂರಿನ ಡಾ. ಬಿ.ಆರ್. ಅಂಬೇಡ್ಕರ್ ಯುವಜನ ಮತ್ತು ಗ್ರಾಮೀಣ ಅಭಿವೃದ್ಧಿ ಸಂಸ್ಥೆಯ ಅಧ್ಯಕ್ಷ ರಾಜಶೇಖರ್ ಅವರು ರಾಷ್ಟ್ರೀಯ ಆರೋಗ್ಯ ಅಭಿಯಾನದ ಅಡಿಯಲ್ಲಿ ಜಿಲ್ಲೆಯ 10 ತಾಲ್ಲೂಕುಗಳ ಜಾತ್ರೆ ಮತ್ತು ಸಂತೆಗಳಲ್ಲಿ ಆರೋಗ್ಯ ಅರಿವು ಮೂಡಿಸುವ ವಸ್ತುಪ್ರದರ್ಶನ ನಡೆಸಿಕೊಟ್ಟಿದ್ದರು. ಈ ಕೆಲಸಕ್ಕೆ ಸಂಬಂಧಿಸಿದ ₹1.98 ಲಕ್ಷ ಬಿಲ್ ಪಾವತಿ ಮಾಡಲು ವ್ಯವಸ್ಥಾಪಕ ಅರವಿಂದ್ ಅವರು ಲಂಚಕ್ಕೆ ಬೇಡಿಕೆ ಇಟ್ಟಿದ್ದರು ಎನ್ನಲಾಗಿದೆ. ಬಿಲ್ ಹಣ ಬಿಡುಗಡೆ ಮಾಡಲು ಅರವಿಂದ್ ಅವರು ಲಂಚದ ಹಣ ನೀಡುವಂತೆ ರಾಜಶೇಖರ್ ಅವರ ಮೇಲೆ ಒತ್ತಡ ಹೇರಿದ್ದರು. ಇದರಿಂದ ಬೇಸತ್ತ ರಾಜಶೇಖರ್ ಲೋಕಾಯುಕ್ತ ಪೊಲೀಸರಿಗೆ ದೂರು ನೀಡಿದ್ದರು. ಬುಧವಾರ ಸಂಜೆ ಡಿಎಚ್ ಒ ಕಚೇರಿಯ ಆವರಣದಲ್ಲೇ ಲಂಚದ ಹಣ ಪಡೆಯುತ್ತಿದ್ದಾಗ ಲೋಕಾಯುಕ್ತ ಪೊಲೀಸರು ಅರವಿಂದ್ ಅವರನ್ನು ರೆಡ್ ಹ್ಯಾಂಡ್ ಆಗಿ…
ಕೊರಟಗೆರೆ : ತಾಲ್ಲೂಕಿನ ಚನ್ನರಾಯನದುರ್ಗ ಹೋಬಳಿಯ ಕುರಂಕೋಟೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಜೋನಿಗರಹಳ್ಳಿ ಗ್ರಾಮದ ರಮೇಶ್ ಬಿನ್ ನರಸಿಂಹಯ್ಯ (ಸುಮಾರು 45 ವರ್ಷ) ಹೈನುಗಾರಿಕೆಗಾಗಿ ಮೈಕ್ರೋ ಫೈನಾನ್ಸ್ ಗಳಲ್ಲಿ ಲಕ್ಷಾಂತರ ರೂಪಾಯಿ ಸಾಲ ಮಾಡಿದ್ದರು ಎಂದು ತಿಳಿದು ಬಂದಿದೆ.. ಹೈನುಗಾರಿಕೆಯನ್ನೇ ನಂಬಿಕೊಂಡು ಜೀವನ ಸಾಗಿರುತ್ತಿದ್ದ ರೈತ ರಮೇಶ್ ಕುಟುಂಬ ಸುಮಾರು 20 ಹಸುಗಳನ್ನು ಸಾಕುತ್ತಿದ್ದರು ಎನ್ನಲಾಗಿದ್ದು, ಮಾರಣಾಂತಿಕ ಕಾಯಿಲೆಗಳಿಂದ ಸುಮಾರು ಹಸುಗಳು ಸಾವನ್ನಪ್ಪಿದ್ದವು ಎಂದು ಮೃತನ ಸಹೋದರ ನಾಗರಾಜು ತಿಳಿದ್ದಾರೆ. ಹೆಚ್ಚು ಸಾಲ ಮಾಡಿಕೊಂಡು ಬಡ್ಡಿ ಮತ್ತು ಅಸಲು ತೀರಿಸಲಾಗದೆ ಮನನೊಂದು ಜೋನಿಗರಹಳ್ಳಿ ಗ್ರಾಮದ ಸರ್ವೆ ನಂಬರ್ 81/4 ರ ಜಮೀನಿನಲ್ಲಿ ಇರುವ ಹೊಂಗೆ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ವಿಷಯ ತಿಳಿದ ತಕ್ಷಣವೇ ಕೊರಟಗೆರೆ ಪೊಲೀಸ್ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತ ರೈತ ರಮೇಶ್ ತನ್ನ ಪತ್ನಿ ಮತ್ತು ಒಬ್ಬ ಮಗನನ್ನು ಅಗಲಿದ್ದಾರೆ. ಮರಣೋತ್ತರ ಪರೀಕ್ಷೆಗೆ ಮೃತ ದೇಹವನ್ನು ಕೊರಟಗೆರೆ ಸಾರ್ವಜನಿಕ ಆಸ್ಪತ್ರೆಗೆ ರವಾನೆ…
ತುಮಕೂರು: ಜಿಲ್ಲಾ ಕೇಂದ್ರದ ಮುಖ್ಯ ಬಸ್ ನಿಲ್ದಾಣದಲ್ಲಿ ಇಂದು ಮಧ್ಯಾಹ್ನ ಭೀಕರ ಅಪಘಾತವೊಂದು ಸಂಭವಿಸಿದ್ದು, ಚಲಿಸುತ್ತಿದ್ದ ಬಸ್ ಹತ್ತಲು ಹೋದ ವಿದ್ಯಾರ್ಥಿನಿಯ ಕಾಲಿನ ಮೇಲೆ ಬಸ್ ಚಕ್ರ ಹರಿದಿದೆ. ಘಟನೆಯಲ್ಲಿ ವಿದ್ಯಾರ್ಥಿನಿಯ ಕಾಲು ತೀವ್ರವಾಗಿ ಜಖಂಗೊಂಡಿದ್ದು, ಮೂಳೆ ಮುರಿತ ಸಂಭವಿಸಿದೆ. ಗಾಯಗೊಂಡ ವಿದ್ಯಾರ್ಥಿನಿಯನ್ನು 17 ವರ್ಷದ ಹರ್ಷಿತಾ ಎಂದು ಗುರುತಿಸಲಾಗಿದೆ. ಈಕೆ ನಗರದ ಸಿದ್ದರಾಮಯ್ಯ ಆಸ್ಪತ್ರೆಯಲ್ಲಿ ಪ್ಯಾರಾಮೆಡಿಕಲ್ ವ್ಯಾಸಂಗ ಮಾಡುತ್ತಿದ್ದಾಳೆ ಎನ್ನಲಾಗಿದೆ. ತುಮಕೂರಿನಿಂದ ಮಧುಗಿರಿಗೆ ಹೊರಟಿದ್ದ ಬಸ್ ಹತ್ತಲು ವಿದ್ಯಾರ್ಥಿನಿ ಮುಂದಾಗಿದ್ದಾಳೆ. ಈ ವೇಳೆ ಬಸ್ ನಿಲ್ದಾಣದಲ್ಲಿ ಪ್ರಯಾಣಿಕರ ಸಂಖ್ಯೆ ಹೆಚ್ಚಾಗಿದ್ದರಿಂದ ವಿಪರೀತ ನೂಕಾಟ–ತಳ್ಳಾಟ ಉಂಟಾಗಿದೆ. ನೂಕಾಟದ ರಭಸಕ್ಕೆ ಹರ್ಷಿತಾ ಆಯತಪ್ಪಿ ಕೆಳಗೆ ಬಿದ್ದಿದ್ದು, ಇದೇ ವೇಳೆ ಚಲಿಸುತ್ತಿದ್ದ ಬಸ್ ನ ಹಿಂಬದಿಯ ಟೈರ್ ಆಕೆಯ ಕಾಲಿನ ಮೇಲೆ ಹರಿದಿದೆ. ಅಪಘಾತ ಸಂಭವಿಸುತ್ತಿದ್ದಂತೆ ಸ್ಥಳದಲ್ಲಿದ್ದ ಸಾರ್ವಜನಿಕರು ಹಾಗೂ ಕೆಎಸ್ ಆರ್ ಟಿಸಿ ಸಿಬ್ಬಂದಿ ಕೂಡಲೇ ಕಾರ್ಯಪ್ರವೃತ್ತರಾಗಿ ಆಕೆಯನ್ನು ರಕ್ಷಿಸಿದ್ದಾರೆ. ತಕ್ಷಣವೇ 108 ಅಂಬುಲೆನ್ಸ್ ಮೂಲಕ ಹರ್ಷಿತಾಳನ್ನು ತುಮಕೂರು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದ್ದು, ಸದ್ಯ…
ಬೆಂಗಳೂರು: ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ್ ತಂಗಡಗಿ ಅವರ ಹೃದಯದಲ್ಲಿ ಬ್ಲಾಕೇಜ್ (ರಕ್ತನಾಳದ ಅಡಚಣೆ) ಕಂಡುಬಂದ ಹಿನ್ನೆಲೆಯಲ್ಲಿ, ಅವರಿಗೆ ಯಶಸ್ವಿಯಾಗಿ ಸ್ಟಂಟ್ ಅಳವಡಿಸಲಾಗಿದೆ. ಕಳೆದ ಭಾನುವಾರ (ಮಾರ್ಚ್ 22) ಸಚಿವರು ಹುಬ್ಬಳ್ಳಿಯಿಂದ ಬೆಂಗಳೂರಿಗೆ ಪ್ರಯಾಣಿಸುತ್ತಿದ್ದ ವೇಳೆ ಹಠಾತ್ ಎದೆನೋವು ಕಾಣಿಸಿಕೊಂಡಿತ್ತು. ತಕ್ಷಣವೇ ಅವರನ್ನು ತುಮಕೂರಿನ ಸಿದ್ದಗಂಗಾ ಆಸ್ಪತ್ರೆಗೆ ದಾಖಲಿಸಿ ಪ್ರಾಥಮಿಕ ಚಿಕಿತ್ಸೆ ನೀಡಲಾಗಿತ್ತು. ಆ ಬಳಿಕ ಅವರು ಚೇತರಿಸಿಕೊಂಡು ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದರು. ಮಂಗಳವಾರ (ಮಾರ್ಚ್ 24) ಸಚಿವರು ತಮ್ಮ ಕುಟುಂಬ ವೈದ್ಯರಿಂದ ಹೆಚ್ಚಿನ ತಪಾಸಣೆಗೆ ಒಳಗಾದಾಗ ಹೃದಯದಲ್ಲಿ ಬ್ಲಾಕೇಜ್ ಇರುವುದು ದೃಢಪಟ್ಟಿತ್ತು. ಇಂದು (ಬುಧವಾರ) ಬೆಳಿಗ್ಗೆ ಇಲಾಖೆಯ ನಿಗದಿತ ಕಾರ್ಯಕ್ರಮವೊಂದನ್ನು ಮುಗಿಸಿದ ನಂತರ, ಸಚಿವರು ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ದಾಖಲಾದರು. ಮಧ್ಯಾಹ್ನದ ವೇಳೆಗೆ ತಜ್ಞ ವೈದ್ಯರ ತಂಡ ಸಚಿವರಿಗೆ ಯಶಸ್ವಿಯಾಗಿ ಸ್ಟಂಟ್ ಅಳವಡಿಸಿದೆ. ಪ್ರಸ್ತುತ ಶಿವರಾಜ್ ತಂಗಡಗಿ ಅವರು ಚೇತರಿಸಿಕೊಳ್ಳುತ್ತಿದ್ದು, ವೈದ್ಯರ ಮೇಲ್ವಿಚಾರಣೆಯಲ್ಲಿ ವಿಶ್ರಾಂತಿ ಪಡೆಯುತ್ತಿದ್ದಾರೆ. ಸಚಿವರ ಆರೋಗ್ಯ ಸ್ಥಿತಿ ಸ್ಥಿರವಾಗಿದ್ದು, ಆತಂಕ ಪಡುವ ಅಗತ್ಯವಿಲ್ಲ ಎಂದು ಆಸ್ಪತ್ರೆಯ…
ಬೆಂಗಳೂರು: ರಾಜ್ಯದ ಸರ್ಕಾರಿ ಶಾಲಾ ಶಿಕ್ಷಕರ ವರ್ಗಾವಣೆ ಪ್ರಕ್ರಿಯೆಯನ್ನು ಸುಗಮಗೊಳಿಸುವ ಮತ್ತು ಬಲಪಡಿಸುವ ಉದ್ದೇಶದಿಂದ ‘ಕರ್ನಾಟಕ ರಾಜ್ಯ ನಾಗರಿಕ ಸೇವೆಗಳು (ಶಿಕ್ಷಕರ ವರ್ಗಾವಣೆ ನಿಯಂತ್ರಣ) (ತಿದ್ದುಪಡಿ) ಮಸೂದೆ’ಗೆ ಮಂಗಳವಾರ ವಿಧಾನಸಭೆಯಲ್ಲಿ ಅನುಮೋದನೆ ನೀಡಲಾಯಿತು. ಗರ್ಭಿಣಿಯರು ಮತ್ತು ಐದು ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳನ್ನು ಹೊಂದಿರುವ ಮಹಿಳಾ ಶಿಕ್ಷಕಿಯರಿಗೆ ವಿಶೇಷ ರಿಯಾಯಿತಿ ನೀಡಲಾಗಿದೆ. ಮಗುವಿನ ಲಾಲನೆ-ಪಾಲನೆಗಾಗಿ ಅವರು ತಮ್ಮ ತವರು ಅಥವಾ ಪತಿಯ ಊರಿಗೆ ವರ್ಗಾವಣೆ ಪಡೆಯಲು ಈ ಮಸೂದೆ ಅವಕಾಶ ಕಲ್ಪಿಸುತ್ತದೆ. ಇದು ಇಬ್ಬರು ಮಕ್ಕಳವರೆಗೆ ಮಾತ್ರ ಸೀಮಿತವಾಗಿರುತ್ತದೆ. ಶಾಲೆಗಳಲ್ಲಿ ಶಿಕ್ಷಕರ ಕೊರತೆಯನ್ನು ನೀಗಿಸಲು, ಇನ್ನು ಮುಂದೆ ಶಿಕ್ಷಕರನ್ನು ಬೋಧಕೇತರ ಹುದ್ದೆಗಳಿಗೆ ವರ್ಗಾವಣೆ ಮಾಡುವುದನ್ನು ಕಟ್ಟುನಿಟ್ಟಾಗಿ ನಿಷೇಧಿಸಲಾಗಿದೆ. ಶಾಲೆಗಳ ವರ್ಗೀಕರಣ: ಶಾಲೆಗಳನ್ನು ಮೂರು ಹಂತಗಳಾಗಿ ವಿಂಗಡಿಸಲಾಗಿದೆ: ವರ್ಗ-1: ಕರ್ನಾಟಕ ಪಬ್ಲಿಕ್ ಶಾಲೆಗಳು, ಆದರ್ಶ ವಿದ್ಯಾಲಯಗಳು ಮತ್ತು ಪಿಎಂಶ್ರೀ ಶಾಲೆಗಳು. ವರ್ಗ-2: 250ಕ್ಕಿಂತ ಹೆಚ್ಚು ವಿದ್ಯಾರ್ಥಿಗಳಿರುವ ಸರ್ಕಾರಿ ಶಾಲೆಗಳು ಮತ್ತು ಪದವಿಪೂರ್ವ ಕಾಲೇಜುಗಳು. ವರ್ಗ-3: ಪ್ರೌಢಶಾಲಾ ಮುಖ್ಯೋಪಾಧ್ಯಾಯರು, ಉಪಪ್ರಾಂಶುಪಾಲರು ಮತ್ತು ಪಿಯು ಕಾಲೇಜು…
ಕೊರಟಗೆರೆ: ತುಮಕೂರು ಜಿಲ್ಲೆಯ ಭೀಮ್ ಆರ್ಮಿ ಸಂಘಟನೆಯ ನೂತನ ಜಿಲ್ಲಾಧ್ಯಕ್ಷರಾಗಿ ಕೊರಟಗೆರೆ ಗೋಪಾಲಕೃಷ್ಣ ಅವರು ಅಧಿಕೃತವಾಗಿ ನೇಮಕಗೊಂಡಿದ್ದಾರೆ. ಪಟ್ಟಣದ ಪ್ರವಾಸಿ ಮಂದಿರದಲ್ಲಿ ಆಯೋಜಿಸಲಾಗಿದ್ದ ಸುದ್ದಿಗೋಷ್ಠಿಯಲ್ಲಿ ಈ ವಿಷಯವನ್ನು ತಿಳಿಸಲಾಯಿತು. ಇದೇ ವೇಳೆ ಸಂಘಟನೆಯ ಭವಿಷ್ಯದ ಗುರಿ ಮತ್ತು ಉದ್ದೇಶಗಳ ಕುರಿತು ಅವರು ಸವಿಸ್ತಾರವಾಗಿ ಮಾತನಾಡಿದರು. ದಲಿತರ ಪರ ಹೋರಾಟ ನಡೆಸಿ ಅವರಿಗೆ ನ್ಯಾಯ ಕೊಡಿಸುವುದೇ ಭೀಮ್ ಆರ್ಮಿ ಸಂಘಟನೆಯ ಮೂಲ ಉದ್ದೇಶವಾಗಿದೆ ಎಂದು ಗೋಪಾಲಕೃಷ್ಣ ತಿಳಿಸಿದರು ಅಲ್ಲದೇ, ಭೀಮ್ ಆರ್ಮಿ ಸಂಘಟನೆಯ ಹೆಸರನ್ನು ಯಾರಾದರೂ ದುರುಪಯೋಗಪಡಿಸಿಕೊಂಡರೆ ಅವರ ವಿರುದ್ಧ ಕಟ್ಟುನಿಟ್ಟಿನ ಕಾನೂನು ಕ್ರಮ ಕೈಗೊಳ್ಳಲಾಗುವುದು ಅಂತಾ ಅವರು ಎಚ್ಚರಿಕೆ ನೀಡಿದರು. ಯಾವುದೇ ಕಾರ್ಖಾನೆ ಅಥವಾ ಸರ್ಕಾರಿ ಇಲಾಖೆಗಳ ಅಧಿಕಾರಿಗಳಿಗೆ ಭೀಮ್ ಆರ್ಮಿ ಹೆಸರಿನಲ್ಲಿ ಯಾರಾದರೂ ಬೆದರಿಕೆ ಹಾಕುತ್ತಿದ್ದರೆ, ತಕ್ಷಣವೇ ಪೊಲೀಸರಿಗೆ ದೂರು ನೀಡುವಂತೆ ಅವರು ಮನವಿ ಮಾಡಿದರು. ಅಂತಹವರ ವಿರುದ್ಧ ಸಂಘಟನೆಯೇ ಖುದ್ದಾಗಿ ದೂರು ದಾಖಲಿಸಲಿದೆ ಎಂದು ಅವರು ತಿಳಿಸಿದತು. ಇನ್ನೂ ತುಮಕೂರು ಜಿಲ್ಲೆಯ ಹತ್ತು ತಾಲೂಕುಗಳಲ್ಲಿ ಸಂಘಟನೆಯನ್ನು ಬಲಪಡಿಸಲು ಪ್ರಮುಖ…
ಬೆಂಗಳೂರು: ಶಕುನ, ಕಾಲ ಹಾಗೂ ಆಹಾರ ಪದ್ಧತಿಯ ವಿಚಾರವಾಗಿ ಸದಾ ತಮ್ಮದೇ ಆದ ನೇರ ನಿಲುವು ಹೊಂದಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, ಇಂದು ವಿಧಾನಸಭೆಯಲ್ಲಿ ವಿರೋಧ ಪಕ್ಷದ ನಾಯಕರಿಗೆ ಖಡಕ್ ತಿರುಗೇಟು ನೀಡಿದ್ದಾರೆ. “ಯುಗಾದಿ ಅಥವಾ ಶಿವರಾತ್ರಿಯಂದೂ ನಾನು ಮಾಂಸ ಸೇವನೆ ಮಾಡುತ್ತೇನೆ. ಹಬ್ಬವನ್ನು ಮನೆಯಲ್ಲಿ ಮಾಡುತ್ತಾರೆ, ಆದರೆ ನನ್ನಿಷ್ಟದ ಆಹಾರ ಸೇವಿಸಲು ನನಗೆ ಸ್ವಾತಂತ್ರ್ಯವಿದೆ” ಎಂದು ಸಿಎಂ ಘೋಷಿಸಿದರು. ಬಜೆಟ್ ಮಂಡನೆಯ ಸಮಯದ ಕುರಿತು ಚರ್ಚೆ ನಡೆದಾಗ, “ನಾನು ಯಾವುದೇ ರಾಹುಕಾಲ ಅಥವಾ ಗುಳಿಕಾಲ ನೋಡುವುದಿಲ್ಲ. ನನಗೆ ಅಂತಹ ಆಚರಣೆಗಳಲ್ಲಿ ನಂಬಿಕೆಯೂ ಇಲ್ಲ” ಎಂದು ಸ್ಪಷ್ಟಪಡಿಸಿದರು. ಈ ಬಾರಿ ರಾಹುಕಾಲ ಮುಗಿದ ನಂತರ ಬಜೆಟ್ ಮಂಡಿಸಿದ್ದನ್ನು ಪ್ರಶ್ನಿಸಿದ ಆರ್. ಅಶೋಕ್ ಅವರಿಗೆ ಉತ್ತರಿಸಿದ ಸಿಎಂ, “ನನ್ನ ಮನೆಯವರು ಹಾಗೂ ಅಧಿಕಾರಿಗಳು ರಾಹುಕಾಲದಲ್ಲಿ ಬೇಡ ಎಂದು ಸಲಹೆ ನೀಡಿದ್ದರು. ಪ್ರಜಾಪ್ರಭುತ್ವದಲ್ಲಿ ಎಲ್ಲರ ಅಭಿಪ್ರಾಯಕ್ಕೂ ಬೆಲೆ ಕೊಡಬೇಕಲ್ಲವೇ? ಹಾಗಾಗಿ ಅವರ ಮಾತಿಗೆ ಗೌರವ ನೀಡಿ ಸಮಯ ಬದಲಿಸಿದೆ ಅಷ್ಟೇ,” ಎಂದರು. ಇದೇ ಸಂದರ್ಭದಲ್ಲಿ ತಾವಿಂದು…
ಸರಗೂರು: ಹಬ್ಬ ಹರಿದಿನಗಳಲ್ಲಿ ಗ್ರಾಮದಲ್ಲಿ ಪಂದ್ಯಾವಳಿಯನ್ನು ನಡೆಸಿಕೊಂಡು ಬಂದರೆ ಇವತ್ತಿನ ಮಕ್ಕಳಿಗೆ ಕ್ರೀಡೆಯಲ್ಲಿ ಆಸಕ್ತಿ ಬೆಳೆಯುತ್ತದೆ ಎಂದು ಬಲಗೈ ಸಮಾಜದ ಮಹಾಸಭಾ ಕಾರ್ಯದರ್ಶಿ ಹಾಗೂ ಕಾಂಗ್ರೆಸ್ ಪಕ್ಷದ ಮುಖಂಡ ಮಸಹಳ್ಳಿ ಎಂ.ಪಿ.ಸೂರ್ಯ ಕುಮಾರ್ ತಿಳಿಸಿದರು. ತಾಲ್ಲೂಕಿನ ಮಸಹಳ್ಳಿ ಗ್ರಾಮದಲ್ಲಿ ಯುಗಾದಿ ಹಬ್ಬದ ಅಂಗವಾಗಿ ಶನಿವಾರ ಮತ್ತು ಭಾನುವಾರದಂದು ಗ್ರಾಮದಲ್ಲಿ ವಾಲಿಬಾಲ್ ಪಂದ್ಯಾವಳಿಗೆ ನಡೆದು ಚಾಲನೆ ನೀಡಿ ನಂತರ ಅವರು ಮಾತನಾಡಿದರು. ಗ್ರಾಮೀಣ ಭಾಗದಲ್ಲಿ ಯುವ ಆಟಗಾರರು ಇದ್ದಾರೆ, ಹೆಚ್ಚು ಓದುವ ಹವ್ಯಾಸ ಜೊತೆಯಲ್ಲಿ ಕ್ರೀಡೆಯನ್ನು ಬಳಸಿಕೊಂಡು ಮನಸ್ಸಿಗೆ ನೆಮ್ಮದಿ ಶಾಂತಿ ಸಿಕ್ಕುತ್ತದೆ. ಕೆಟ್ಟ ಹವ್ಯಾಸದಿಂದ ದೂರ ಇದ್ದು ಕ್ರೀಡೆಯಲ್ಲಿ ಭಾಗವಹಿಸಿ ಯುವ ಪೀಳಿಗೆ ಯುವಕರಿಗೆ ಆಟವಾಡಲು ಪ್ರಾರಂಭಿಸುತ್ತಾರೆ. ತಂದೆ ತಾಯಿ ಹಾಗೂ ಶಾಲೆ ಮತ್ತು ಶಿಕ್ಷಕರಿಗೆ ಗೌರವ ನೀಡುವ ನಿಟ್ಟಿನಲ್ಲಿ ಆಟವಾಡಬೇಕು ಎಂದರು. ಮೊದಲನೇ ಬಹುಮಾನ ಪಡೆದ ತಂಡ ರಾವಣ ಸ್ಟಾರ್ ತಂಡ, ದ್ವಿತೀಯ ಸ್ಥಾನ ಪಡೆದ ಜೈ ಭೀಮ್, ಸ್ಟಾರ್, ಮೂರನೇ ಸ್ಥಾನ ಪಡೆದ ಭೀಮ ಬಾಯ್ಸ್ ಪಡೆದು ಸಂಭ್ರಮಿಸಿದರು.…
ತಿಪಟೂರು: ಪಾವಗಡ ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರಾಗಿ ಸೇವೆ ಸಲ್ಲಿಸುತ್ತಿದ್ದ ಮಲ್ಲಿಕಾರ್ಜುನ ಎಂಬುವರು ಕಚೇರಿಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುತ್ತಾರೆ, ಅವರ ಆತ್ಮಹತ್ಯೆಗೆ ಕಾರಣ ಏನೆಂಬುದು ಪರಿಶೀಲನೆ ಮಾಡದೆ ತುಮಕೂರು ಸಮಾಜ ಕಲ್ಯಾಣ ಇಲಾಖೆಯ ಜಂಟಿನಿರ್ದೇಶಕ ಕೃಷ್ಣಪ್ಪನವರ ಮೇಲೆ ಕ್ರಮ ಕೈಗೊಳ್ಳಬಾರದು ಎಂದು ಗ್ರಾಮ ಪಂಚಾಯಿತಿ ಮಾಜಿ ಸದಸ್ಯ ಯಗಚಿ ಕಟ್ಟೆ ರಾಘವೇಂದ್ರ ಒತ್ತಾಯಿಸಿದರು. ಒಂದು ಲೆಟರ್ ಮೇಲೆ ಟೈಪಿಂಗ್ ಆಗಿರುವುದು ಹಲವು ಸಂಶಯಗಳಿಗೆ ಎಡೆ ಮಾಡಿಕೊಟ್ಟಿದೆ ಕೃಷ್ಣಪ್ಪನವರು ಹಲವು ಹೋರಾಟಗಳ ಮುಖಾಂತರ ಪ್ರಜಾಪ್ರಭುತ್ವ ಉಳಿ ಉಳಿಸಲು ಮಾನವ ಸರಪಳಿಕಾರ್ಯಕ್ರಮದಲ್ಲಿ ತುಮಕೂರು ಜಿಲ್ಲೆಗೆ ರಾಜ್ಯಕ್ಕೆ ಪ್ರಥಮ ಸ್ಥಾನ ತಂದು ಕೊಡುವಲ್ಲಿ ಕೃಷ್ಣಪ್ಪನವರ ಪಾತ್ರ ಪ್ರಮುಖವಾದದ್ದು, ಕೃಷ್ಣಪ್ಪನವರ ಮೇಲೆ ಇಲ್ಲಸಲ್ಲದ ಆರೋಪ ಮಾಡುವುದು ಸರಿಯಲ್ಲ ಇದು ಕೂಲಂಕುಶವಾಗಿ ತನಿಖೆಯಾಗಬೇಕು ಎಂದರು. ಕೃಷ್ಣಪ್ಪನವರು ಹೋರಾಟ ಮಾಡಿದವರು ಇವರ ಹೆಸರಿಗೆ ಕಳಂಕ ತರುವ ಕೆಲಸವಾಗಿದೆ, ಒಬ್ಬರ ಹೆಸರನ್ನು ಬರೆದಿಟ್ಟು ಸಾವಿಗೆ ಶರಣಾಗಿರುವುದು ತಪ್ಪು ಎಂದು ಹೇಳಿದರು. ಈ ಸುದ್ದಿಗೋಷ್ಠಿಯಲ್ಲಿ ಕೆ.ಎನ್. ಜಯಸಿಂಹ, ಜಿಲ್ಲಾಪಂಚಾಯಿತಿ ಮಾಜಿ…
ತಿಪಟೂರು: ನಗರದ ಪ್ರಮುಖ ಆಯಕಟ್ಟಿನ ಸ್ಥಳಗಳಲ್ಲಿ ಸಾರ್ವಜನಿಕರ ಅನುಕೂಲಕ್ಕಾಗಿ ನಿರ್ಮಿಸಲಾದ ಶೌಚಾಲಯಗಳು ಬಳಕೆಗೆ ಮುಕ್ತವಾಗದೆ ಬೀಗ ಹಾಕಲ್ಪಟ್ಟಿವೆ. ಇದರಿಂದಾಗಿ ಸಾರ್ವಜನಿಕರು, ವಿಶೇಷವಾಗಿ ಗ್ರಾಮೀಣ ಭಾಗದಿಂದ ಬರುವ ಜನರು ತೀವ್ರ ಸಂಕಷ್ಟ ಎದುರಿಸುವಂತಾಗಿದೆ. ತಿಪಟೂರು ನಗರದ ಅಂಬೇಡ್ಕರ್ ವೃತ್ತ, ಮಹಾತ್ಮ ಗಾಂಧಿ ಉದ್ಯಾನ ಹಾಗೂ ಹಳೆಯ ಮಾರುಕಟ್ಟೆ ಭಾಗಗಳಲ್ಲಿ ಲಕ್ಷಾಂತರ ರೂಪಾಯಿ ವೆಚ್ಚದಲ್ಲಿ ಶೌಚಾಲಯಗಳನ್ನು ನಿರ್ಮಿಸಲಾಗಿದೆ. ಆದರೆ, ಕಳೆದ ಹಲವು ದಿನಗಳಿಂದ ಈ ಶೌಚಾಲಯಗಳಿಗೆ ಬೀಗ ಹಾಕಲಾಗಿದ್ದು, ನಿರ್ವಹಣೆಯಿಲ್ಲದೆ ಪಾಳುಬಿದ್ದಿವೆ. ತಾಲ್ಲೂಕಿನ ವಿವಿಧ ಗ್ರಾಮಗಳಿಂದ ಕೆಲಸ ನಿಮಿತ್ತ ನಗರಕ್ಕೆ ಬರುವ ರೈತರು ಮತ್ತು ಮಹಿಳೆಯರು ಶೌಚಾಲಯವಿಲ್ಲದೆ ಪರದಾಡುತ್ತಿದ್ದಾರೆ. ಶೌಚಾಲಯಗಳು ಬಂದ್ ಆಗಿರುವ ಕಾರಣ ಅನಿವಾರ್ಯವಾಗಿ ಜನರು ರಸ್ತೆ ಬದಿ ಅಥವಾ ಖಾಲಿ ಜಾಗಗಳಲ್ಲಿ ಬಯಲು ವಿಸರ್ಜನೆಗೆ ಮೊರೆ ಹೋಗುತ್ತಿದ್ದಾರೆ. ಇದರಿಂದ ಸುತ್ತಮುತ್ತಲಿನ ಪರಿಸರದಲ್ಲಿ ದುರ್ವಾಸನೆ ಹರಡುತ್ತಿದ್ದು, ಸಾಂಕ್ರಾಮಿಕ ರೋಗಗಳ ಭೀತಿ ಎದುರಾಗಿದೆ. ಮಾರುಕಟ್ಟೆಗೆ ಬರುವ ಮಹಿಳೆಯರಿಗೆ ಈ ಸಮಸ್ಯೆ ದೊಡ್ಡ ಸವಾಲಾಗಿ ಪರಿಣಮಿಸಿದ್ದು, ನಗರಸಭೆಯ ನಿರ್ಲಕ್ಷ್ಯದ ವಿರುದ್ಧ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸ್ವಚ್ಛ…