Author: admin

ಬಿಗ್ ಬಾಸ್ ಮನೆಯಲ್ಲಿ ಪಾತ್ರೆ ತೊಳೆದಿದ್ದಕ್ಕೆ ಲಾಯರ್ ಜಗದೀಶ್ ಪತ್ನಿ, ಜಗದೀಶ್ ಅವರು ಮನೆಗೆ ಬರುತ್ತಿದ್ದಂತೆಯೇ ಅಡುಗೆ ಮನೆಗೆ ಕಳುಹಿಸಿ ಪಾತ್ರೆ ತೊಳೆಸಿದ್ದಾರೆ. ಬಿಗ್ ಬಾಸ್ ಮನೆಯಲ್ಲಿ ಪಾತ್ರೆ ತೊಳೆಯುತ್ತಾರೆ, ಇಲ್ಲಿಯೂ ತೊಳೆಯಲಿ ಬಿಡಿ ಅಂದಿದ್ದಾರೆ ಜಗದೀಶ್ ಪತ್ನಿ. ಈ ಸಂಬಂಧ ವಿಡಿಯೋವೊಂದು ವೈರಲ್ ಆಗಿದೆ. ‘ಬಿಗ್ ಬಾಸ್ ಕನ್ನಡ ಸೀಸನ್ 11’ರಲ್ಲಿ ದೊಡ್ಡ ಮಟ್ಟದಲ್ಲಿ ಸದ್ದ ಮಾಡಿದ ಲಾಯರ್ ಜಗದೀಶ್. ಮೂರು ವಾರ ಕಳೆಯುವುದರ ಒಳಗೆ ಬಿಗ್ ಬಾಸ್ ನಿಂದ ಹೊರ ಬಿದ್ದಿದ್ದಾರೆ. ಆದ್ರೆ ಹೊರಗಡೆ ದೊಡ್ಡ ಅಭಿಮಾನಿ ಬಳಗವನ್ನೇ ಸೃಷ್ಟಿಸಿದ್ದಾರೆ. ‘ಬಿಗ್ ಬಾಸ್’ ಮನೆಯಲ್ಲಿ ಜಗದೀಶ್ ಅವರು ಜಗಳಕ್ಕೆ ಮಾತ್ರ ನಿಲ್ಲುತ್ತಿರಲಿಲ್ಲ. ಅವರು ಅಗತ್ಯ ಬಂದಾಗ ಪಾತ್ರೆ ತೊಳೆಯುತ್ತಿದ್ದರು. ಹಗಲು ರಾತ್ರಿ ಎನ್ನದೆ ಸಿಕ್ಕ ಸಿಕ್ಕಾಗಲೆಲ್ಲ ಅಡುಗೆ ಮನೆಯ ವಾಶ್ ಬೇಸ್ನಲ್ಲಿ ನಿಲ್ಲುತ್ತಿದ್ದರು. ಇದನ್ನು ಗಮನಿಸಿರುವ ಅವರ ಪತ್ನಿ, ಜಗದೀಶ್ ಮನೆಗೆ ಬರುತ್ತಿದ್ದಂತೆಯೇ ಪಾತ್ರೆ ತೊಳೆಸಿದ್ದಾರೆ. ಬಿಗ್ ಬಾಸ್ ಮಾಜಿ ಸ್ಪರ್ಧಿ ಕಿರಿಕ್ ಕೀರ್ತಿ ಈ ಫನ್ ವಿಡಿಯೋವನ್ನು…

Read More

ತುಮಕೂರು: ಸರ್ಕಾರ ಜಾರಿಗೆ ತರುವ ವಿವಿಧ ಯೋಜನೆ ಮತ್ತು ಅನುದಾನಗಳಲ್ಲಿ ಕಡ್ಡಾಯವಾಗಿ ಎಲ್ಲಾ ಇಲಾಖೆಗಳು ವಿಶೇಷಚೇತನರಿಗಾಗಿ ಶೇ.5ರಷ್ಟು ಅನುದಾನವನ್ನು ಮೀಸಲಿಡಬೇಕು ಎಂದು ಅಂಗವಿಕಲ ವ್ಯಕ್ತಿಗಳ ಅಧಿನಿಯಮ ಆಯುಕ್ತ ದಾಸ್ ಸೂರ್ಯವಂಶಿ ಅಧಿಕಾರಿಗಳಿಗೆ ಸೂಚನೆ ನೀಡಿದರು. ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿಂದು ಜಿಲ್ಲೆಯ ವಿಕಲಚೇತನರ ಪುನರ್ವಸತಿ ಕುರಿತ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆವಹಿಸಿ ಮಾತನಾಡಿದ ಅವರು, ಸರ್ಕಾರದ ಅನುದಾನದಲ್ಲಿ ಶೇ.5ರಷ್ಟು ವಿಶೇಷಚೇತನರಿಗಾಗಿ ಮೀಸಲಿಡಬೇಕೆಂದು ಸರ್ಕಾರದ ಆದೇಶವಿದ್ದರೂ ಸಹ ಕೆಲವು ಇಲಾಖೆಗಳಲ್ಲಿ ಆದೇಶವನ್ನು ಪಾಲಿಸುತ್ತಿಲ್ಲ ಎಂದು ಬೇಸರ ವ್ಯಕ್ತ ಪಡಿಸಿದರು. ಜಿಲ್ಲೆಯಲ್ಲಿ 3,554 ವಿಶೇಷಚೇತನ ವಿದ್ಯಾರ್ಥಿಗಳು 1 ರಿಂದ 10ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದು, ಎಲ್ಲಾ ಶಾಲೆಗಳಲ್ಲೂ ವಿಶೇಷಚೇತನ ಮಕ್ಕಳಿಗೆ ಅಗತ್ಯ ಮೂಲಭೂತ ಸೌಕರ್ಯಗಳನ್ನು ಒದಗಿಸುವಂತೆ ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕರಿಗೆ ಸೂಚನೆ ನೀಡಿದರು. ಅಂಧ ಮತ್ತು ವಿಕಲಚೇತನ ಮಕ್ಕಳಿಗಾಗಿ ಎಲ್ಲಾ ಶಾಲೆಗಳಲ್ಲೂ ರ‍್ಯಾಂಪ್ ಹಾಗೂ ಅಡೆ–ತಡೆ ರಹಿತ ಶೌಚಾಲಯಗಳನ್ನು ನಿರ್ಮಿಸಬೇಕು. ವಿಶೇಷಚೇತನ ಮಕ್ಕಳ ತರಗತಿಗಳನ್ನು ಕೆಳಮಹಡಿಯ ಕೊಠಡಿಗಳಲ್ಲಿ ನಡೆಸಬೇಕು. ಜಿಲ್ಲೆಯಲ್ಲಿರುವ ಎಲ್ಲಾ ವಸತಿ ಶಾಲೆಗಳಲ್ಲಿ…

Read More

ಗಡ್ಡ ಬಿಡುವ ಗಂಡಸರ ವಿರುದ್ಧ ಯುವತಿಯರೆಲ್ಲ ಸೇರಿಕೊಂಡು ಪ್ರತಿಭಟನೆ ನಡೆಸಿರುವ ವಿಚಿತ್ರ ಘಟನೆಯೊಂದು ಮಧ್ಯ ಪ್ರದೇಶದ ಇಂದೂರ್ ನಲ್ಲಿ ನಡೆದಿದೆ. ಈ ಪ್ರತಿಭಟನೆಯ ವಿಡಿಯೋ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಗರೀಬ್ ಹಠಾವೋ ಹೋರಾಟ ನೀವು ಕೇಳಿರಬಹುದು ಆದರೆ ಈ ಯುವತಿಯರು ಗಡ್ಡ ಹಟಾವೋ, ನೋ ಕ್ಲೀನ್ ಶೇವ್, ನೋ ಲವ್ ಎಂದು ಸ್ಲೋಗನ್ ಬಳಸಿ ಪ್ರತಿಭಟನೆ ನಡೆಸಿದ್ದಾರೆ. ಇವರ ಪ್ರತಿಭಟನೆಯನ್ನು ಕೆಲವರು ಹಾಸ್ಯವಾಗಿ ಪರಿಗಣಿಸಿದರೆ, ಇನ್ನು ಕೆಲವರು ಗಂಭೀರವಾಗಿ ಪರಿಗಣಿಸಿದ್ದಾರೆ. ಇಂದೋರ್ ಯುವತಿಯರು ದೊಡ್ಡ ಮಟ್ಟದಲ್ಲಿ ಪ್ರತಿಭಟನೆ ನಡೆಸಿದ್ದಾರೆ. ಕ್ಲೀನ್ ಶೇವ್ ಮಾಡದ ಹುಡುಗರನ್ನು ಮದುವೆಯಾಗುವುದಿಲ್ಲ ಎಂದು ಘೋಷಿಸಿಕೊಂಡಿದ್ದಾರೆ. ಗಂಡು ಮಕ್ಕಳಿಗೆ ಗಡ್ಡ ಬಿಡುವುದು ಎಂದರೆ ಫ್ಯಾಷನ್, ಮುಖಕ್ಕೆ ಒಂದು ಗಂಭೀರತೆ ಬರಬೇಕಾದರೆ ಗಡ್ಡ ಬರಬೇಕು ಎನ್ನುವುದು ಗಂಡಸರ ಅಭಿಪ್ರಾಯ. ಹಾಗೆನೇ ಇತ್ತೀಚೆಗೆ ಗಡ್ಡ ಬಿಡುವ ಫ್ಯಾಷನ್ ಸರ್ವೇ ಸಾಮಾನ್ಯ ಎನ್ನುವಂತಾಗಿದೆ. ಆದರೆ, ಇದೀಗ ಯುವತಿಯರು ಗಡ್ಡ ಬಿಡುವ ಸ್ವಾತಂತ್ರ್ಯವನ್ನು ಕಿತ್ತುಕೊಳ್ಳುವ ಹಾಗಿದ್ದಾರೆ ಅನ್ನೋ ಅಭಿಪ್ರಾಯಗಳನ್ನು ಘಟನೆಯ ಬೆನ್ನಲ್ಲೇ…

Read More

ನವದೆಹಲಿ: ರಾಷ್ಟ್ರೀಯವಾದಿ ಕಾಂಗ್ರೆಸ್ ಪಕ್ಷದ (ಎನ್ಸಿಪಿ) ಮುಖಂಡ ಸಿದ್ದೀಕ್ ಅವರ ಹತ್ಯೆಯ ತನಿಖೆ ತೀವ್ರಗೊಳ್ಳುತ್ತಿದೆ. ಈ ನಡುವೆ ಲಾರೆನ್ಸ್ ಬಿಷ್ಣೋಯ್ ಹತ್ಯೆಗೆ ಕ್ಷತ್ರಿಯ ಕರ್ಣಿ ಸೇನಾ ಬಹುಮಾನವನ್ನು ಘೋಷಿಸಿದೆ. ಬಿಷ್ಣೋಯ್ ಯನ್ನು ಯಶಸ್ವಿಯಾಗಿ ಕೊಲ್ಲುವ ಯಾವುದೇ ಕಾನೂನು ಜಾರಿ ಅಧಿಕಾರಿಗೆ 1,11,11,111 ರೂ.ಗಳ ಬಹುಮಾನವನ್ನು ಕ್ಷತ್ರಿಯ ಕರ್ಣಿ ಸೇನೆಯ ನಾಯಕ ರಾಜ್ ಶೇಖಾವತ್ ವೀಡಿಯೊ ಮೂಲಕ ಘೋಷಿಸಿದ್ದಾರೆ. ಬಿಷ್ಣೋಯ್ ಅವರ ಎನ್ಕೌಂಟರ್ ನಡೆಸುವ ಯಾವುದೇ ಭದ್ರತಾ ಸಿಬ್ಬಂದಿಗೆ ಈ ಬಹುಮಾನವನ್ನು ನೀಡಲಾಗುವುದು ಎಂದು ಶೇಖಾವತ್ ಒತ್ತಿ ಹೇಳಿದ್ದಾರೆ. ಕರ್ಣಿ ಸೇನೆಯ ಮುಖ್ಯಸ್ಥ ಸುಖದೇವ್ ಸಿಂಗ್ ಗೋಗಮೇಡಿ ಅವರ ಸಾವಿನ ಹಿಂದಿನ ಕೊಲೆಗಾರ ಬಿಷ್ಣೋಯ್ ಎಂದು ಶೇಖಾವತ್ ಆರೋಪಿಸಿದರು. ಡಿಸೆಂಬರ್ 5, 2023 ರಂದು ಜೈಪುರದಲ್ಲಿ ಅಪರಿಚಿತ ದಾಳಿಕೋರರ ಗುಂಡಿನ ದಾಳಿಯಲ್ಲಿ ಗೋಗಮೇಡಿ ದುರಂತವಾಗಿ ಪ್ರಾಣ ಕಳೆದುಕೊಂಡರು. ಕೊಲೆಯಾದ ಕೆಲವೇ ಗಂಟೆಗಳ ನಂತರ ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್ ಈ ಹೇಯ ಕೃತ್ಯದ ಜವಾಬ್ದಾರಿಯನ್ನು ತ್ವರಿತವಾಗಿ ವಹಿಸಿಕೊಂಡಿತು. ಬಿಷ್ಣೋಯ್ ಅವರ ಮೂಲ ಹೆಸರು ಬಲ್ಕರನ್…

Read More

ಚೆನ್ನೈ: ಆಂಧ್ರಪ್ರದೇಶದ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು 2ಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಲು ಪ್ರತಿಪಾದಿಸಿದ ನಂತರ, ತಮಿಳುನಾಡು ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್ ಕೂಡ ಇಂತಹದ್ದೇ ಹೇಳಿಕೆಯನ್ನು ನೀಡಿದ್ದಾರೆ. ಚೆನ್ನೈನ ತಿರುವನ್ಮಿಯೂರಿನ ದರ್ಶನೀಶ್ವರ ದೇವಸ್ಥಾನದಲ್ಲಿ ಹಿಂದೂ ಧಾರ್ಮಿಕ ದತ್ತಿ ಇಲಾಖೆ ವತಿಯಿಂದ ಆಯೋಜಿಸಿದ್ದ 31 ಜೋಡಿ ವಿವಾಹಗಳ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿದ ಸ್ಟಾಲಿನ್, ಹದಿನಾರು ಮಕ್ಕಳನ್ನು ಹೊಂದಿ ಅಷ್ಟೇ ಸಂಪದ್ಭರಿತವಾದ ಜೀವನವನ್ನು ತಮ್ಮದಾಗಿಸಿಕೊಳ್ಳಬೇಕು. ಈಗ ಅಂತಹ ಕಾಲ ಸನ್ನಿಹಿತವಾಗಿದೆ ಎಂದಿದ್ದಾರೆ. ಕೆಲವು ರಾಜ್ಯಗಳಲ್ಲಿ ಜನಸಂಖ್ಯೆ ಹೆಚ್ಚಾಗಿರುವುದರಿಂದ ಲೋಕಸಭೆ ಕ್ಷೇತ್ರಗಳು ಹೆಚ್ಚಾಗಿವೆ. ಅವರೇ ನಮ್ಮನ್ನು ಆಳುತ್ತಿದ್ದಾರೆ. ಆದರೆ ನಾವು ಜನಸಂಖ್ಯೆ ನಿಯಂತ್ರಣ ಹೇರಿಕೊಂಡಿದ್ದರ ಪರಿಣಾಮ ತಮಿಳುನಾಡಿನಲ್ಲಿ ಕ್ಷೇತ್ರಗಳು ಕಡಿಮೆಯಾಗುತ್ತಿವೆ. ತಮಿಳು ಮಕ್ಕಳ ಸಂಖ್ಯೆ ಕ್ಷೀಣಿಸುತ್ತಿರುವುದರಿಂದ ಕಡಿಮೆ ಮಕ್ಕಳನ್ನು ಹೊಂದಲು ನಮ್ಮನ್ನು ಏಕೆ ನಿರ್ಬಂಧಿಸಬೇಕು? ಜನಸಂಖ್ಯೆ ಆಧಾರದ ಮೇಲೆ ಸಂಸತ್ ಸ್ಥಾನಗಳನ್ನು ನಿರ್ಧರಿಸುನಾವುದರಿಂದ 16 ಮಕ್ಕಳನ್ನು ಏಕೆ ಗುರಿಯಾಗಿಸಿಕೊಳ್ಳಬಾರದು? ಎಂದು ಪ್ರಶ್ನಿಸಿದ್ದಾರೆ. ಆಂಧ್ರ ಸರ್ಕಾರವು ವಯಸ್ಸಾದ ಜನಸಂಖ್ಯೆಯಿಂದಾಗಿ ಹೆಚ್ಚಿನ ಮಕ್ಕಳನ್ನು ಹೊಂದಿರುವ ಕುಟುಂಬಗಳನ್ನು ಪ್ರೋತ್ಸಾಹಿಸಲು ಯೋಜಿಸುತ್ತಿದೆ ಎಂದು…

Read More

ಮೈಸೂರು: ಚನ್ನಪಟ್ಟಣ ಉಪಚುನಾವಣೆ ಬೆನ್ನಲ್ಲೇ ಬಿಜೆಪಿ ನಾಯಕ ಸಿ.ಪಿ. ಯೋಗೇಶ್ವರ್ ಕಾಂಗ್ರೆಸ್ ಸೇರಲು ಸಜ್ಜಾಗಿದ್ದಾರೆ ಎನ್ನುವ ಗುಸುಗುಸು ಕೇಳಿ ಬರುತ್ತಿದೆ. ಈ ನಡುವೆ ಸಿಎಂ ಸಿದ್ದರಾಮಯ್ಯ ಕೂಡ ಈ ಬಗ್ಗೆ ಪ್ರತಿಕ್ರಿಯೆ ನೀಡಿದ್ದಾರೆ. ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಸಿ.ಪಿ.ಯೋಗೀಶ್ವರ್ ಆಗಲಿ ಯಾರೇ ಆಗಲಿ ಕಾಂಗ್ರೆಸ್ಸಿನ ಸಿದ್ಧಾಂತ ಮತ್ತು ಸಂವಿಧಾನದ ಮೌಲ್ಯಗಳನ್ನು ಒಪ್ಪಿ ಬರುವ ಎಲ್ಲರಿಗೂ ಪಕ್ಷಕ್ಕೆ ಸ್ವಾಗತ ಎಂದು ಹೇಳಿದ್ದಾರೆ. ಇನ್ನು ಸಂಡೂರು ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಸಂಸದರಾದ ಈ.ತುಕಾರಾಂ ಅವರ ಪತ್ನಿ ಅವರಿಗೆ ಟಿಕೆಟ್ ನೀಡಲಾಗುವುದು. ಚನ್ನಪಟ್ಟಣದಲ್ಲಿ ಸೂಕ್ತ ಅಭ್ಯರ್ಥಿಗೆ ಟಿಕೆಟ್ ನೀಡಬೇಕು ಎನ್ನುವ ಚರ್ಚೆ ಆಗಿದೆ. ಡಿ.ಕೆ.ಸುರೇಶ್ ಅವರೂ ಕೂಡ ಪ್ರಭಲ ಅಭ್ಯರ್ಥಿ ಆಗಿದ್ದಾರೆ. ಒಂದೆರಡು ದಿನಗಳಲ್ಲಿ ಚನ್ನಪಟ್ಟಣ ಮತ್ತು ಶಿಗ್ಗಾಂವ್ ಕ್ಷೇತ್ರದಲ್ಲಿ ಯಾರಿಗೆ ಟಿಕೆಟ್ ಎನ್ನುವುದು ಸ್ಪಷ್ಟವಾಗಲಿದೆ ಎಂದು ಹೇಳಿದರು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್…

Read More

ಲಕ್ನೋ: ಮಹಿಳಾ ಕಾನ್ ಸ್ಟೇಬಲ್ ಮೇಲೆ ವ್ಯಕ್ತಿಯೊಬ್ಬ ಅತ್ಯಾಚಾರಕ್ಕೆ ಯತ್ನಿಸಿದ ಆಘಾತಕಾರಿ ಘಟನೆ ಉತ್ತರ ಪ್ರದೇಶದ ಕಾನ್ಪುರದಲ್ಲಿ ನಡೆದಿದ್ದು, ಆರೋಪಿಯ ಕೈ ಕಚ್ಚಿ ಮಹಿಳಾ ಕಾನ್ ಸ್ಟೇಬಲ್ ತಮ್ಮನ್ನು ರಕ್ಷಣೆ ಮಾಡಿಕೊಂಡಿದ್ದಾರೆ. ಅಯೋಧ್ಯೆಯ ಮೀಸಲು ಪೊಲೀಸ್ ಪಡೆಯಲ್ಲಿ ಹಿರಿಯ ಕಾನ್‌ಸ್ಟೆಬಲ್ ಆಗಿರುವ ಸಂತ್ರಸ್ತೆ, ‘ಕರ್ವಾ ಚೌತ್’ ಹಬ್ಬದ ಆಚರಣೆಗೆಂದು ಶನಿವಾರ ರಾತ್ರಿ ಕಾನ್ಪುರದ ಬಳಿ ಇರುವ ತಮ್ಮ ಗ್ರಾಮಕ್ಕೆ ತೆರಳುತ್ತಿದ್ದರು. ಈ ವೇಳೆ ದಾರಿಯಲ್ಲಿ ಪರಿಚಿತ ವ್ಯಕ್ತಿ ಧರ್ಮೇಂದ್ರ ಪಾಸ್ವಾನ್ ಸಿಕ್ಕಿದ್ದು, ತನ್ನ ದ್ವಿಚಕ್ರ ವಾಹನದಲ್ಲಿ ಮನೆಗೆ ಬಿಡುವುದಾಗಿ ಹೇಳಿದ್ದಾನೆ. ಆದರೆ ಮನೆಗೆ ಕರೆದುಕೊಂಡು ಹೋಗದೇ ಕೆಟ್ಟ ಉದ್ದೇಶದಿಂದ ನಿರ್ಜನ ಪ್ರದೇಶಕ್ಕೆ ಕರೆದೊಯ್ದಿದ್ದಾನೆ. ಬಳಿಕ ಅತ್ಯಾಚಾರಕ್ಕೆ ಯತ್ನಿಸಿದ್ದಾನೆ. ಈ ವೇಳೆ ಸಂತ್ರಸ್ತೆ ಸಹಾಯಕ್ಕಾಗಿ ಕೂಗಾಡಿದ್ದಾರೆ. ಆದರೆ ಯಾರೂ ಸಹಾಯಕ್ಕೆ ಧಾವಿಸಿಲ್ಲ. ಬಳಿಕ ಆತನ ಕೈಬೆರಳ‌ನ್ನು ಬಲವಾಗಿ ಕಚ್ಚಿ ಆಕೆ ಪಾರಾಗಿದ್ದಾರೆ. ನಂತರ ಸ್ಥಳೀಯ ಪೊಲೀಸ್ ಠಾಣೆಗೆ ತೆರಳಿ ದೂರು ದಾಖಲಿಸಿದ್ದಾರೆ. ಘಟನೆ ಸಂಬಂಧ ಎಫ್‌ಐಆರ್ ದಾಖಲಿಸಿ ಆರೋಪಿಯನ್ನು ಬಂಧಿಸಲಾಗಿದೆ. ನಮ್ಮತುಮಕೂರಿನ ಕ್ಷಣ…

Read More

ಮಳೆ ನೀರು ಹರಿಯುವ ಮೋರಿಯಲ್ಲಿ 500 ರೂಪಾಯಿ ಮುಖಬೆಲೆಯ ಲಕ್ಷಕ್ಕೂ ಅಧಿಕ ಮೌಲ್ಯದ ನೋಟುಗಳು ತೇಲಿ ಬಂದಿರುವ ಘಟನೆ ಮಹಾರಾಷ್ಟ್ರದ ಸಾಂಗ್ಲಿ ಜಿಲ್ಲೆಯ ಅಟಪಡಿ ಬಳಿಯ ಮೋರಿಯಲ್ಲಿ ನಡೆದಿದೆ. ಮೊದಲಿಗೆ ಇದು ನಕಲಿ ನೋಟು ಅಂತ ಜನ ಭಾವಿಸಿದ್ದರು. ಆದ್ರೆ ಸೂಕ್ಷ್ಮವಾಗಿ ಗಮನಿಸಿದಾಗ ನಿಜವಾದ ನೋಟು ಎನ್ನುವುದು ತಿಳಿದಿದೆ. ತಕ್ಷಣವೇ ಕೈಗೆ ಸಿಕ್ಕಷ್ಟು ಬಾಚಿಕೊಂಡು ಜನ ಸ್ಥಳದಿಂದ ಓಡಿದ್ದಾರೆ. ಇಷ್ಟೊಂದು ನೋಟುಗಳನ್ನು ನೀರಿಗೆ ಎಸೆದಿದ್ದು ಯಾರು? ಎನ್ನುವುದು ತಿಳಿದು ಬಂದಿಲ್ಲ. ಸುಮಾರು 2 ರಿಂದ 2.5 ಲಕ್ಷದಷ್ಟು ₹500ರ ನೋಟುಗಳು ಮೋರಿಯಲ್ಲಿ ಸಿಕ್ಕಿವೆಯಂತೆ! ಕೆಲವರಂತೂ ತಮಗೆ ಸಿಕ್ಕ ಹಣ ಎಷ್ಟು ಅನ್ನೋದನ್ನೂ ಹೇಳುತ್ತಿಲ್ಲ. ಒಂದು ವೇಳೆ ಪೊಲೀಸರು ಬಂದು ವಾಪಾಸ್ ಪಡೆಯಬಹುದು ಅನ್ನುವ ಭಯದಲ್ಲಿದ್ದಾರೆ. ಹಾಗಾಗಿಯೇ ಇಲ್ಲಿ ಅಚಾನಕ್ ಆಗಿ ಸಿಕ್ಕಿರೋ ಹಣ 2.5 ಲಕ್ಷಕ್ಕಿಂತಲೂ ಹೆಚ್ಚು ಎಂದೇ ಭಾವಿಸಲಾಗಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ…

Read More

ಹೆಚ್.ಡಿ.ಕೋಟೆ :ಮಾದಾಪುರ ಗ್ರಾಮದಲ್ಲಿ ಆರೋಗ್ಯ ಇಲಾಖೆಯ ವತಿಯಿಂದ ನೂತನವಾಗಿ ನಿರ್ಮಿಸಲಾಗಿದ್ದ ಪ್ರಾಥಮಿಕ ಆರೋಗ್ಯ ಕೇಂದ್ರವನ್ನು ಸೋಮವಾರ ಶಾಸಕ ಅನಿಲ್ ಚಿಕ್ಕಮಾದು ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು, ಸರಗೂರಿನಲ್ಲಿ ಸ್ಲಂ ಆಸ್ಪತ್ರೆಯನ್ನು, ತಾಯಿ ಮಕ್ಕಳ ಆಸ್ಪತ್ರೆ ಮತ್ತು ಹೆಚ್.ಡಿ.ಕೋಟೆ ಪಟ್ಟಣಕ್ಕೆ ಮಾತ್ರ ಸೀಮಿತವಾದ ಆಸ್ಪತ್ರೆಯನ್ನು ನಿರ್ಮಿಸಲು ರೂಪುರೇಷೆ ಮಾಡಿಕೊಳ್ಳಲಾಗುತ್ತಿದೆ ಎಂದರು. ಅದೇ ರೀತಿ ಮಾದಾಪುರದಿಂದ ಕೆ.ಬೆಳತ್ತೂರು ಮಾರ್ಗದ ರಸ್ತೆಗೆ ಮುಂದಿನ 15 ದಿನದಲ್ಲಿ ಭೂಮಿ ಪೂಜೆ ನೆರವೇರಲಿದೆ. ಜೆಎಲ್‌ಆರ್ ವತಿಯಿಂದ ಮಾದಾಪುರ ಆರೋಗ್ಯ ಕೇಂದ್ರಕ್ಕೆ ಸುಸಜ್ಜಿತ ಆಂಬುಲೆನ್ಸ್ ನೀಡಲಾಗುವುದು ಎಂದರು. ಮೈಸೂರು ಮಾನಂದವಾಡಿ ಸಂಪರ್ಕ ಕಲ್ಪಿಸಲು ರಸ್ತೆಗೆ ನಾಲ್ಕು ಪಥಗಳ ರಸ್ತೆಯನ್ನು ನಿರ್ಮಿಸಲು ಯೋಜನಾ ವರದಿ ತಯಾರಾಗುತ್ತಿದ್ದು, ಕೇಂದ್ರ ಸಚಿವರಾದ ನಿತಿನ್ ಗಡ್ಕರಿಯವರಿಗೆ ಮನವಿ ಸಲ್ಲಿಸಲಾಗುವುದು’ ಎಂದರು. ಜಿಲ್ಲಾ ಆರೋಗ್ಯಾಧಿಕಾರಿ ಕುಮಾರಸ್ವಾಮಿ ಮಾತನಾಡಿ ‘ಕಳೆದ ಒಂದು ವರ್ಷದ ಅವಧಿಯಲ್ಲಿ ತಾಲ್ಲೂಕಿಗೆ ರೆಡಿಯೋಲಾಜಿಯ ಬೇಡಿಕೆ ಇತ್ತು, ಅದನ್ನು ಒದಗಿಸಲಾಗಿದೆ, ಕಳೆದ 10 ತಿಂಗಳ ಅವಧಿಯಲ್ಲಿ 1200 ಕ್ಕೂ ಹೆಚ್ಚಿನ ಹೆರಿಯನ್ನು ಯಾವುದೇ ತೊಂದರೆಯಾಗದಂತೆ ಮಾಡಿಸಲಾಗಿದೆ.…

Read More

ಶಿರಾ, ತಾವರೆಕೆರೆ:  ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ಜಿ. ಪ್ರಭು ಅವರು ಶಿರಾ ತಾಲೂಕಿನ ತಾವರೆಕೆರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮಾರನಗೆರೆ ಗ್ರಾಮಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ಜಲ ಜೀವನ ಮಿಷನ್ ಯೋಜನೆಯಡಿ ಮನೆ–ಮನೆಗೊಂದು ಶುದ್ಧ ಕುಡಿಯುವ ನೀರು ಒದಗಿಸುವ ಗಂಗೆ ಯೋಜನೆಗೆ ಸಂಬಂಧಿಸಿದ ಕಾಮಗಾರಿಗಳನ್ನು ಪರಿಶೀಲಿಸಿದರು. ಈ ಸಂದರ್ಭದಲ್ಲಿ ಪ್ರಭು ರವರು, ಗ್ರಾಮೀಣ ಕುಡಿಯುವ ನೀರಿನ ಸಹಾಯಕ ಅಭಿಯಂತರರಿಗೆ ಗುಣಮಟ್ಟದ ಕಾಮಗಾರಿಗಳನ್ನು ಅನುಷ್ಟಾನ ಮಾಡುವಂತೆ ಎಚ್ಚರಿಕೆ ನೀಡಿದರು. ಕಾಮಗಾರಿಗಳಲ್ಲಿ ಬಳಸಲಾಗುವ ಎಲ್ಲಾ ಸಾಮಗ್ರಿಗಳು ನಿಗದಿತ ಗುಣಮಟ್ಟಕ್ಕನುಸಾರವಾಗಿರಬೇಕೆಂದು ಖಚಿತಪಡಿಸಿಕೊಳ್ಳುವಂತೆ ಸೂಚಿಸಿದರು. ಹರ್ ಘರ್ ಜಲ್ ಘೋಷಣೆಗೆ ಮುನ್ನ, ಪೈಪ್ಲೈನ್ ಹಾಗೂ ಗೇಟ್ ವಾಲ್ವ್‌ಗಳ ಮಾಹಿತಿ ಹಾಗೂ ವಿಲೇಜ್ ಕೀ ಮ್ಯಾಪ್‌ ನ್ನು ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳಿಗೆ ಸಲ್ಲಿಸುವಂತೆ ಆದೇಶಿಸಿದರು. ಯೋಜನೆಯ ಅಂದಾಜುಪಟ್ಟಿಯಂತೆ ಎಲ್ಲ ಕೆಲಸಗಳನ್ನು ಶ್ರೇಷ್ಠ ಗುಣಮಟ್ಟದಲ್ಲಿ ಪೂರ್ಣಗೊಳಿಸುವಂತೆ ಸೂಚನೆ ನೀಡಿದ ಅವರು, ಸ್ಟ್ಯಾಂಡ್ ಪೋಸ್ಟ್‌ಗಳ ನಿರ್ಮಾಣವನ್ನು ನಿಗಧಿತ ಅಳತೆಯಂತೆ ಮಾಡಲಾಗುವಂತೆ ಮತ್ತು ಯೋಜನೆ ಹೆಸರು ಉತ್ತಮ ಗುಣಮಟ್ಟದ…

Read More