Author: admin

ತುಮಕೂರು: ತುಮಕೂರಿನಲ್ಲಿ ಶನಿವಾರ ಕರೆಯಲಾಗಿದ್ದ ಕರ್ನಾಟಕ ವಿಧಾನ ಮಂಡಲದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಕಲ್ಯಾಣ ಸಮಿತಿ ಸಭೆಯನ್ನು ಅಧಿಕಾರಿಗಳ ಅಲಭ್ಯತೆ ಕಾರಣ ಸಮಿತಿಯ ಅಧ್ಯಕ್ಷ ಪಿ.ಎಂ. ನರೇಂದ್ರ ಸ್ವಾಮಿ ಮುಂದೂಡಿದರು. ಜಿಲ್ಲೆಯ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರ ಅಭಿವೃದ್ಧಿಗಾಗಿ ಕೈಗೊಳ್ಳಲಾದ ಕಾರ್ಯಕ್ರಮಗಳ ಅನುಷ್ಠಾನ ಹಾಗೂ ಇನ್ನಿತರೆ ವಿಷಯಗಳ ಕುರಿತು ಪ್ರಗತಿ ಪರಿಶೀಲನೆ ನಡೆಸುವ ಸಂಬಂಧ ಶನಿವಾರ ವಿಧಾನ ಮಂಡಲದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಕಲ್ಯಾಣ ಸಮಿತಿ ಸಭೆ ಅಪರಾಹ್ನ ನಿಗಧಿಯಾಗಿತ್ತು. ಸಮಿತಿ ಸದಸ್ಯರು ಚಿತ್ರದುರ್ಗ ಜಿಲ್ಲೆಯ ಪ್ರಗತಿ ಪರಿಶೀಲನಾ ಸಭೆ ಮುಗಿಸಿ ತುಮಕೂರು ಸಾರ್ವಜನಿಕ ಕುಂದು ಕೊರತೆಗಳನ್ನು ಆಲಿಸುವ ಹಾಗೂ ಹಳೆಯ ಪ್ರಕರಣಗಳ ವಿಲೇವಾರಿ ಸಂಬಂಧಿಸಿದಂತೆ ನಿನ್ನೆಯಿಂದ ಕಾರ್ಯಕ್ರಮ ಹಮ್ಮಿಕೊಂಡಿರುವ ಹಿನ್ನೆಲೆಯಲ್ಲಿ ಜಿಲ್ಲೆಯ ಕೆಲವು ಅಧಿಕಾರಿಗಳು ಲೋಕಾಯುಕ್ತರ ಸಭೆಯಲ್ಲಿ ಹಾಜರಿರುವುದಾಗಿ ಹಿರಿಯ ಅಧಿಕಾರಿಗಳು ಅಭಿಪ್ರಾಯ ವ್ಯಕ್ತಪಡಿಸಿದ ಹಿನ್ನೆಲೆಯಲ್ಲಿ ಅಧಿಕಾರಿಗಳ ಸಮ್ಮುಖದಲ್ಲಿ ಮಾಹಿತಿ ಪಡೆದು ಸಮಸ್ಯೆಗಳ ಪರಿಹಾರಕ್ಕೆ ಮಾರ್ಗೋಪಾಯಗಳನ್ನು ಕಂಡು ಹಿಡಿಯುವುದು ಸಮಿತಿಯ ಉದ್ದೇಶವಾಗಿತ್ತು. ಆದರೆ…

Read More

ಮೀರತ್ ​ನ ಸರ್ದಾರ್ ವಲ್ಲಭಾಯಿ ಪಟೇಲ್ ಕೃಷಿ ವಿಶ್ವವಿದ್ಯಾಲಯದಲ್ಲಿ ನಡೆದ ಮೂರು ದಿನದ ರೈತರ ಮೇಳ ಹಾಗೂ ಕೃಷಿ ಮೇಳದಲ್ಲಿ  ಭಾಗವಹಿಸಿದ್ದ ಅನ್ಮೋಲ್ ಎಂಬ ಕೋಣದ ಬೆಲೆ 2 ರೋಲ್ಸ್ ರಾಯ್ಸ್ ಹಾಗೂ 10 ಮರ್ಸಿಡಿಸ್ ಬೆಂಜ್​ ಕಾರುಗಳು ಸೇರಿದರೆ ಎಷ್ಟು ಬೆಲೆಯಾಗುತ್ತದೆಯೋ ಅಷ್ಟಂತೆ. ಹರಿಯಾಣದ ಸಿರ್ಸಾದಿಂದ ಬಂದಿದ್ದ ಈ ಕೋಣದ ಮಾಲೀಕ ಜಗತ್ ಸಿಂಗ್. ಇವರು ಹರ್ಯಾಣ ಮೂಲದವರಂತೆ.   ಈ ಕೋಣವನ್ನು ಆರೋಗ್ಯಕರವಾಗಿ ನೋಡಿಕೊಳ್ಳಲು ಕೋಣಕ್ಕೆ 5 ಲೀಟರ್ ಹಾಲು, 4 ಕೆಜಿ ದಾಳಿಂಬೆ, 30 ಬಾಳೆಹಣ್ಣು, 20 ರಿಚ್ ಪ್ರೊಟೀನ್ ಇರುವ ಮೊಟ್ಟೆ ಹಾಗೂ ಮೇವು ಕೊಡುತ್ತಿದ್ದಾರಂತೆ. ಇಷ್ಟೇ ಅಲ್ಲದೇ ಕಾಲ್ ಕೆಜಿ ಬಾದಾಮಿ ಗುಲ್ಕಂದ್ ಕೂಡ ನೀಡುತ್ತಿದ್ದಾರೆ. ಈ ಕೋಣದ ಬೆಲೆ ಬರೋಬ್ಬರಿ 23 ಕೋಟಿಯಾಗಿದೆ.  ಇದು ಯಾವುದೇ ಕೃಷಿ ಮೇಳಕ್ಕೆ ಹೋದರೂ ಅಲ್ಲಿ ಕೋಣವನ್ನು ನೋಡಲು ಜನರು ಮುಗಿಬೀಳುತ್ತಾರೆ. ಅಷ್ಟೊಂದು ಆಕರ್ಷಣಿಯವಾಗಿದೆ ಈ ಅನ್ಮೋಲ್ ಕೋಣ. ಇನ್ನೂ ಕೋಣದ ಮಾಲೀಕ ಜಗತ್ ಸಿಂಗ್ ಈ ಕೋಣದಿಂದ …

Read More

ಅಮರಾವತಿ: ದಕ್ಷಿಣ ಭಾರತ ರಾಜ್ಯಗಳ ಜನರು ಹೆಚ್ಚಿನ ಮಕ್ಕಳನ್ನು ಹೊಂದಬೇಕು ಎಂದು ಆಂಧ್ರಪ್ರದೇಶದ ಸಿಎಂ ಎನ್‌.ಚಂದ್ರಬಾಬು ನಾಯ್ಡು ಕರೆ ನೀಡಿದ್ದಾರೆ. ದಕ್ಷಿಣ ಭಾರತ ರಾಜ್ಯಗಳಲ್ಲಿ ವಯಸ್ಸಾದವರ ಸಂಖ್ಯೆ ಹೆಚ್ಚಳವಾದ ಬಗ್ಗೆ ಕಳವಳ ವ್ಯಕ್ತಪಡಿಸಿದ ಅವರು, ಹೆಚ್ಚಿನ ಮಕ್ಕಳಿರುವ ಕುಟುಂಬಗಳನ್ನು ಪ್ರೋತ್ಸಾಹಿಸಲು ಹೊಸ ಕಾನೂನು ಜಾರಿಗೊಳಿಸುವುದಾಗಿ ಹೇಳಿದ್ದಾರೆ. ಜನಸಂಖ್ಯೆ ನಿರ್ವಹಣೆಯನ್ನು ಜಾರಿಗೆ ತರಲು ರಾಜ್ಯ ಸರ್ಕಾರ ಯೋಜಿಸುತ್ತಿದೆ ಎಂದು ಹೇಳಿದ್ದಾರೆ. ಎರಡಕ್ಕಿಂತ ಹೆಚ್ಚು ಮಕ್ಕಳಿರುವವರು ಮಾತ್ರ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಸ್ಪರ್ಧಿಸಲು ಅರ್ಹರಾಗುವ ಕಾನೂನು ತರಲು ರಾಜ್ಯ ಸರ್ಕಾರ ಚಿಂತನೆ ನಡೆಸಿದೆ ಎಂದು ನಾಯ್ಡು ತಿಳಿಸಿದ್ದಾರೆ. 2ಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿರುವವರು ಸ್ಥಳೀಯ ಚುನಾವಣೆಯಲ್ಲಿ ಸ್ಪರ್ಧಿಸದಂತೆ ರಾಜ್ಯವು ಈ ಹಿಂದೆ ಕಾನೂನನ್ನು ಅಂಗೀಕರಿಸಿದೆ ಎಂದು ಅವರು ಉಲ್ಲೇಖಿಸಿದ್ದಾರೆ. ನಾವು ಆ ಕಾನೂನನ್ನು ರದ್ದುಗೊಳಿಸಿದ್ದೇವೆ ಎಂದು ಹೇಳಿದ್ದಾರೆ. ಈಗ ಅದನ್ನು ಹಿಂತೆಗೆದುಕೊಳ್ಳಲು ನಾವು ಪರಿಗಣಿಸುತ್ತಿದ್ದೇವೆ. ಹೆಚ್ಚು ಮಕ್ಕಳನ್ನು ಹೊಂದಿರುವ ಕುಟುಂಬಗಳಿಗೆ ಸರ್ಕಾರವು ಹೆಚ್ಚಿನ ಪ್ರಯೋಜನಗಳನ್ನು ಒದಗಿಸಲಿದೆ ಎಂದು ಸ್ಪಷ್ಟಪಡಿಸಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು…

Read More

ದಾಳಿಂಬೆ ಸಿಪ್ಪೆಯಿಂದ ತಯಾರಿಸಿದ ಫೇಸ್ ಪ್ಯಾಕ್  ಸಹಾಯದಿಂದ ನಿಮ್ಮ ಮುಖವನ್ನು ಹೊಳೆಯುವಂತೆ ಮಾಡಬಹುದು. ಅದು ಹೇಗೆ ಎನ್ನುವ ವಿವರ ಇಲ್ಲಿದೆ ನೋಡಿ… ದಾಳಿಂಬೆ ಸಿಪ್ಪೆ ತೆಗೆದು ಶುದ್ಧ ನೀರಿನಿಂದ ತೊಳೆಯಿರಿ. ನಂತರ ಅವುಗಳನ್ನು ಎರಡು ದಿನಗಳ ಕಾಲ ಬಿಸಿಲಿನಲ್ಲಿ ಒಣಗಿಸಬೇಕು. ಒಣಗಿದ ಸಿಪ್ಪೆಯನ್ನು ಮಿಕ್ಸರ್ ಗೆ ಹಾಕಿ ಪುಡಿಯಾಗಿ ಪುಡಿಮಾಡಿ. ನಂತರ ದಾಳಿಂಬೆ ಪುಡಿಯಲ್ಲಿ ಮೊಸರು, ಜೇನುತುಪ್ಪ ಮತ್ತು ನಿಂಬೆ ರಸವನ್ನು ಮಿಶ್ರಣ ಮಾಡಿ ಮತ್ತು ನುಣ್ಣಗೆ ಪೇಸ್ಟ್ ಮಾಡಿ.  ಈ ಪೇಸ್ಟ್ ಅನ್ನು ಮುಖಕ್ಕೆ ಚೆನ್ನಾಗಿ ಹಚ್ಚಿಕೊಳ್ಳಿ. ಇದನ್ನು 15 ರಿಂದ 20 ನಿಮಿಷಗಳ ಕಾಲ ಬಿಡಿ. ಅದರ ನಂತರ ನಿಮ್ಮ ಮುಖವನ್ನು ತಣ್ಣೀರಿನಿಂದ ತೊಳೆಯಿರಿ. ಇದನ್ನು ನಿಯಮಿತವಾಗಿ ಮಾಡುವುದರಿಂದ ನಿಮ್ಮ ಮುಖವು ಹೊಳೆಯುತ್ತದೆ. ಉಪಯೋಗ ಏನು? ದಾಳಿಂಬೆ ಸಿಪ್ಪೆಯಲ್ಲಿರುವ ಆಂಟಿಆಕ್ಸಿಡೆಂಟ್ ಗಳು ಚರ್ಮವನ್ನು ಸ್ವತಂತ್ರ ರಾಡಿಕಲ್ ಗಳಿಂದ ರಕ್ಷಿಸುತ್ತದೆ. ಸುಕ್ಕುಗಳನ್ನು ಕಡಿಮೆ ಮಾಡುತ್ತದೆ ಮತ್ತು ಚರ್ಮವನ್ನು ಬಿಗಿಗೊಳಿಸುತ್ತದೆ. ಈ ಫೇಸ್ ಪ್ಯಾಕ್ ಮೊಡವೆಗಳನ್ನು ಕಡಿಮೆ ಮಾಡಲು ಹಾಗೂ ಕಲೆಗಳನ್ನು…

Read More

ಶಿವಮೊಗ್ಗ: ಮನೆಯೊಂದರಲ್ಲಿ ಹೂತಿಟ್ಟಿದ್ದ ಒಂದೂವರೆ ಕೆಜಿ ಚಿನ್ನಾಭರಣಗಳನ್ನು ಪೊಲೀಸರು ವಶಕ್ಕೆ ಪಡೆದಿರುವ ಘಟನೆ  ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿ ಪಟ್ಟಣದ ಬೆಟ್ಟಮಕ್ಕಿಯಲ್ಲಿ ನಡೆದಿದೆ. ಮಾಗಡಿ ಪೋಲೀಸರು ತೀವ್ರ ಶೋಧ ನಡೆಸಿ ಕೆಜಿ ಚಿನ್ನಾಭರಣಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಮಾಗಡಿ ತಾಲೂಕಿನಲ್ಲಿ ಚಿನ್ನಾಭರಣ ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ತೀರ್ಥಹಳ್ಳಿ ತಾಲೂಕು ಕಮ್ಮರಡಿ ಮೂಲದ ಅಮೀರ್ ಹಂಜಾನನ್ನು ಬಂಧಿಸಲಾಗಿದೆ. ಆತನ ವಿಚಾರಣೆ ವೇಳೆ ನೀಡಿದ ಮಾಹಿತಿ ಮೇರೆಗೆ ಮಾಗಡಿ ಪೊಲೀಸರು ಚಿನ್ನಾಭರಣ ವಶಕ್ಕೆ ಪಡೆದುಕೊಂಡಿದ್ದಾರೆ. ಆರೋಪಿ ಅಮೀರ್ ಹಂಜಾ 2002ರಲ್ಲಿ ನಡೆದ ಹೊಸಹಳ್ಳಿ ವೆಂಕಟೇಶ್ ಕೊಲೆ ಪ್ರಕರಣದ ಪ್ರಮುಖ ಆರೋಪಿಯಾಗಿದ್ದು, ನಂತರ ವಿವಿಧ ಹೆಸರುಗಳಲ್ಲಿ 80ಕ್ಕೂ ಹೆಚ್ಚು ಗಂಭೀರ ಅಪರಾಧ ಪ್ರಕರಣಗಳಲ್ಲಿ ಭಾಗಿಯಾದ ಆರೋಪ ಕುರಿತಂತೆ ಪೊಲೀಸರು ತೀವ್ರ ತನಿಖೆ ಕೈಗೊಂಡಿದ್ದಾರೆ. ತೀರ್ಥಹಳ್ಳಿ ತಾಲೂಕಿನ ಅನೇಕ ಗ್ರಾಮಗಳಿಗೆ ಮೂರು ದಿನಗಳಿಂದ ಭೇಟಿ ನೀಡಿ ತನಿಖೆ ನಡೆಸಿದ ಮಾಗಡಿ ಪೊಲೀಸರು ಅಮೀರ್ ಹಂಜಾನಿಂದ ಮಾಹಿತಿ ಸಂಗ್ರಹಿಸಿ ಚಿನ್ನಾಭರಣ ವಶಕ್ಕೆ ಪಡೆದಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು…

Read More

ರಾಮನಗರ: ಖಾಸಗಿ ಬಸ್ ವೊಂದು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿರುವ ಘಟನೆ ರಾಮನಗರ ಜಿಲ್ಲೆಯ ಕನಕಪುರ ತಾಲೂಕಿನ ಸಂಗಮ ಬಳಿ ನಡೆದಿದೆ. ಘಟನೆಯಲ್ಲಿ 15 ಜನರಿಗೆ ಗಾಯಗಳಾಗಿವೆ. ಗಾಯಾಳುಗಳನ್ನು ಕನಕಪುರ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಗಂಭೀರವಾಗಿ ಗಾಯಗೊಂಡಿರುವ ಕೆಲವರನ್ನು ಬೆಂಗಳೂರಿನ ಆಸ್ಪತ್ರೆಗೆ ರವಾನಿಸಲಾಗಿದೆ. ಚಾಲಕನ ಅತಿಯಾದ ವೇಗವೇ ನಿಯಂತ್ರಣ ತಪ್ಪಿ ಬಸ್ ಪಲ್ಟಿಯಾಗಿ ಬೀಳಲು ಕಾರಣ ಎನ್ನಲಾಗಿದೆ. ಘಟನಾ ಸ್ಥಳಕ್ಕೆ ಪೊಲೀಸರು ದೌಡಾಯಿಸಿ ಪರಿಶೀಲನೆ ನಡೆಸಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q

Read More

ಚಿಕ್ಕಬಳ್ಳಾಪುರ ಜಿಲ್ಲೆಯ ವಿವಿಧ ತಾಲೂಕಿನ ವಿವಿಧ ಗ್ರಾಮ ಪಂಚಾಯಿತಿಗಳಲ್ಲಿ ಹಲವು ಕಾರಣಗಳಿಂದಾಗಿ ತೆರವಾಗಿರುವ ಸದಸ್ಯ ಸ್ಥಾನಗಳಿಗೆ ಚುನಾವಣಾ ಆಯೋಗ ಉಪಚುನಾವಣೆ ಘೋಷಿಸಿದ್ದು, ಚುನಾವಣಾ ಪ್ರಕ್ರಿಯೆಯ ವೇಳಾಪಟ್ಟಿ ಪ್ರಕಟಿಸಿದೆ. ಚಿಕ್ಕಬಳ್ಳಾಪುರ ಜಿಲ್ಲೆಯ 5 ತಾಲೂಕುಗಳ ವ್ಯಾಪ್ತಿಯ 10 ಗ್ರಾಪಂ ಸದಸ್ಯರ ಸ್ಥಾನಗಳಿಗೆ ನ.23ರಂದು ಮತದಾನ ನಡೆಯಲಿದ್ದು, ನ.26ರಂದು ಮತ ಎಣಿಕೆ ಮಾಡಿ, ಫಲಿತಾಂಶ ಘೋಷಿಸಲಾಗುತ್ತದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ವೈಯಕ್ತಿಕ ಕಾರಣಗಳ ಹಿನ್ನೆಲೆಯಲ್ಲಿ ರಾಜೀನಾಮೆ, ಸದಸ್ಯರ ನಿಧನ ಸೇರಿ ನಾನಾ ಕಾರಣಗಳಿಂದ ವಿವಿಧ ಗ್ರಾಪಂಗಳಲ್ಲಿ ಹಲವು ತಿಂಗಳಿಂದಲೂ ಸದಸ್ಯತ್ವ ಸ್ಥಾನ ಖಾಲಿ ಇದ್ದು, ಈಗ ಅಯ್ಕೆಗೆ ಚುನಾವಣೆ ಘೋಷಿಸಲಾಗಿದೆ. ಇದರಿಂದ ಆಯಾ ಗ್ರಾಮೀಣ ಭಾಗದ ವ್ಯಾಪ್ತಿಯಲ್ಲಿ ರಾಜಕೀಯ ಪಕ್ಷಗಳಲ್ಲಿ ಗುರುತಿಸಿಕೊಂಡಿರುವ ಮುಖಂಡರು ರಾಜಕೀಯ ಪಕ್ಷಗಳ ಪರೋಕ್ಷ ಬೆಂಬಲದೊಂದಿಗೆ ರಾಜಕೀಯ ಚಟುವಟಿಕೆಗಳನ್ನು ಪ್ರಾರಂಭಿಸಲಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q

Read More

ತುಮಕೂರು: ಭಾರತೀಯ ಹವಾಮಾನ ಇಲಾಖೆ ವರದಿಯನ್ವಯ ಗುಡುಗು–ಸಿಡಿಲು ಸಹಿತ ಮಳೆಯಾಗುವ ಮುನ್ಸೂಚನೆ ಇರುವುದರಿಂದ ಮುಂದಿನ 3 ದಿನಗಳ ಕಾಲ ಜಿಲ್ಲೆಯಲ್ಲಿ ಯಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತಿಳಿಸಿದ್ದಾರೆ. ಮುಂಜಾಗ್ರತೆ ವಹಿಸಲು ಅಧಿಕಾರಿ ಸಿಬ್ಬಂದಿಗೆ ಸೂಚನೆ: ಭಾರಿ ಮಳೆಯಿಂದ ಉಂಟಾಗಬಹುದಾದ ಪ್ರವಾಹದಿಂದ ಯಾವುದೇ ಜನ-ಜಾನುವಾರುಗಳ ಜೀವಹಾನಿಯಾಗದಂತೆ ಜಿಲ್ಲಾ/ತಾಲ್ಲೂಕು/ಗ್ರಾಮ ಮಟ್ಟದ ಅಧಿಕಾರಿ/ಸಿಬ್ಬಂದಿಗಳು ಕೇಂದ್ರಸ್ಥಾನದಲ್ಲಿದ್ದುಕೊಂಡು ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಬೇಕು. ತುರ್ತು ಚಿಕಿತ್ಸೆಗಾಗಿ ಹತ್ತಿರದ ಆರೋಗ್ಯ ಕೇಂದ್ರಗಳ ಮಾಹಿತಿ ಹೊಂದಿರಬೇಕೆಂದು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಭಾರಿ ಮಳೆ/ಪ್ರವಾಹದಿಂದ ಯಾವುದೇ ಅಹಿತಕರ ಘಟನೆಯಾಗದಂತೆ ಮಳೆ ಮುನ್ನಚ್ಚರಿಕೆ ಬಗ್ಗೆ ಪ್ರತಿ ಗ್ರಾಮಗಳಲ್ಲಿ ಡಂಗುರ ಸಾರಬೇಕು ಹಾಗೂ ಮೈಕ್ ಮೂಲಕ ಜಾಗೃತಿ ಮೂಡಿಸಬೇಕು. ನಿರಂತರ ಮಳೆಯಿಂದ ಅಪಾಯವಿರುವ ಮನೆ, ಗೋಡೆ ಇತರೆ ಕಟ್ಟಡಗಳು ಕುಸಿಯುವ ಸಂಭವವಿರುತ್ತದೆ. ಇದರಿಂದ ಸಾವು–ನೋವುಗಳು ಉಂಟಾಗಬಹುದಾದ್ದರಿಂದ ಸಾರ್ವಜನಿಕರಿಗೆ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳುವ ಬಗ್ಗೆ ತಿಳಿ ಹೇಳಬೇಕು ಎಂದು ತಿಳಿಸಿದ್ದಾರೆ. ರಾಜ್ಯ/ಜಿಲ್ಲಾಡಳಿತ/ತಾಲ್ಲೂಕು ಆಡಳಿತದಿಂದ ನೀಡುವ ಹವಾಮಾನದ ಮುನ್ನೆಚ್ಚರಿಕೆಯನ್ನು ಗ್ರಾಮ ಪಂಚಾಯತಿಯ ವಿಪತ್ತು ನಿರ್ವಹಣಾ…

Read More

ತಿಪಟೂರು: ಎಪಿಎಂಸಿಯಲ್ಲಿ ಅಕ್ಟೋಬರ್ 01ರಿಂದ ಕೊಬ್ಬರಿ ಮಾರಾಟಕ್ಕೆ ಹೊಸ ನಿಯಮಗಳು ಜಾರಿಯಾಗಲಿವೆ ಎಂದು ತಿಪಟೂರು ಶಾಸಕ ಕೆ.ಷಡಕ್ಷರಿ ತಿಳಿಸಿದರು ತುಮಕೂರು ಜಿಲ್ಲೆ ತಿಪಟೂರು ಎಪಿಎಂಸಿ ಏಷ್ಯಾಖಂಡದಲ್ಲಿಯೇ ಅತಿದೊಡ್ಡ ಮಾರುಕಟ್ಟೆಯಾಗಿದ್ದು, ರೈತರಿಗೆ ಅನುಕೂವಾಗುವ ದೃಷ್ಠಿಯಿಂದ ನವೆಂಬರ್ 1ರಿಂದ ಹೊಸ ನಿಯಮಗಳು ಜಾರಿಯಾಗಲಿವೆ ಎಂದು ಶಾಸಕ ಕೆ.ಷಡಕ್ಷರಿ ತಿಳಿಸಿದರು ನಗರದ ಎಪಿಎಂಸಿ ಮಾರುಕಟ್ಟೆ ಸಭಾಂಗಣದಲ್ಲಿ ಆಯೋಜಿಸಿದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ತಿಪಟೂರು ಎಪಿಎಂಸಿ ಏಷ್ಯಾಖಂಡದಲ್ಲಿ ದೊಡ್ಡದಾದ ಕೊಬ್ಬರಿ ಮಾರುಕಟ್ಟೆಯಾಗಿದು ತಿಪಟೂರು ಕೊಬ್ಬರಿ ವಿಶಿಷ್ಠಗುಣಗಳನ್ನು ಒಳಗೊಂಡಿದ್ದು ನಮ್ಮ ರೈತರಿಗೆ ಅನುಕೂಲವಾಗಬೇಕು ಎನ್ನುವ ದೃಷ್ಠಿಯಿಂದ ನವಂಬರ್ 01ರಿಂದ ಹೊಸ ನಿಯಮಗಳನ್ನ ಜಾರಿಗೊಳಿಸಲಾಗುತ್ತಿದೆ, ನವೆಂಬರ್ 01ರಿಂದ ಆನ್ ಲೈನ್ ನಿಯಮಬದಲಾವಣೆಗೆ ರೈತರು ಹಾಗೂ ವರ್ತಕರೊಂದಿಗೆ ಚರ್ಚಿಸಿ ನಿರ್ಧಾರ ಮಾಡಿದ್ದು ಹೊಸ ನಿಯಮಗಳು ಜಾರಿಯಾಗಲಿವೆ ಎಂದು ತಿಳಿಸಿದರು. ಬುಧವಾರ ಹಾಗೂ ಶನಿವಾರದ ಬದಲಾಗಿ ಸೋಮವಾರ ಮತ್ತು  ಗುರುವಾರ ಎರಡು ದಿನಗಳು ಆನ್ ಲೈನ್ ಟೆಂಡರ್ ನಡೆಯಲಿದ್ದು ,  ಮಧ್ಯಾಹ್ನ 2ಗಂಟೆ ಬದಲಾಗಿ 3ಗಂಟೆಗೆ ಟೆಂಡರ್ ನಡೆಯುತ್ತದೆ. ರೈತರು ಎಪಿಎಂಸಿಗೆ ಕೊಬ್ಬರಿ…

Read More

ನಟ ಕಿಚ್ಚ ಸುದೀಪ್ ಅವರ ತಾಯಿ ಸರೋಜಾ  ಅವರು  ಅನಾರೋಗ್ಯದಿಂದ ನಿಧನರಾಗಿದ್ದಾರೆ. ಕಳೆದ ಕೆಲವು ದಿನಗಳಿಂದ ಖಾಸಗಿ ಆಸ್ಪತ್ರೆಯಲ್ಲಿ ಅನಾರೋಗ್ಯದಿಂದ ದಾಖಲಾಗಿದ್ದ ಸರೋಜಾ ಅವರು ಚಿಕಿತ್ಸೆ ಪಡೆಯುತ್ತಿದ್ದಾರೆ. ಆದರೆ ಚಿಕಿತ್ಸೆ ಫಲಿಸದೇ ಅವರು ನಿಧನರಾಗಿದ್ದಾರೆ. ಮಧ್ಯಾಹ್ನ 12 ಗಂಟೆಗೆ ಸುದೀಪ್​ ಅವರ ಜೆಪಿ ನಗರ ನಿವಾಸಕ್ಕೆ ಪಾರ್ಥಿವ ಶರೀರವನ್ನು ತರಲಾಗುವುದು, ಜೆಪಿ ನಗರ ನಿವಾಸದಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಲಿದೆ. ಕಿಚ್ಚ ಸುದೀಪ್ ಅವರ ತಾಯಿ ಮಂಗಳೂರು ಮೂಲದವರಾಗಿದ್ದಾರೆ. ಅವರ ಮಾತೃ ಭಾಷೆ ತುಳುವಾಗಿದೆ. ತಾಯಿಯ ಮಾತೃಭಾಷೆ ಕಿಚ್ಚ ಸುದೀಪ್ ಅವರಿಗೆ ಬಹಳ ಇಷ್ಟ ಅಂತ ಅವರು ಇತ್ತೀಚೆಗೆ ಕಾರ್ಯಕ್ರಮವೊಂದರಲ್ಲಿ ಹೇಳಿಕೊಂಡಿದ್ದರು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q

Read More