Subscribe to Updates
Get the latest creative news from FooBar about art, design and business.
- ಸಿಎಂ ಡಿ.ಕೆ.ಶಿವಕುಮಾರ್, ಡಿಸಿಎಂ ಜಿ. ಪರಮೇಶ್ವರ್ ನಿವಾಸಕ್ಕೆ ಸಿದ್ಧಗಂಗಾ ಶ್ರೀ ಭೇಟಿ: ವಿಶೇಷ ಆಶೀರ್ವಾದ
- ನನಗೂ ಸಚಿವ ಸ್ಥಾನ ಸಿಗುವ ಭರವಸೆಯಿದೆ: ಮಾಜಿ ಸಚಿವ ಸಂತೋಷ್ ಲಾಡ್
- ಉಪಮುಖ್ಯಮಂತ್ರಿಯಾಗಿ ನೇಮಕಗೊಂಡಿರುವುದಕ್ಕೆ ನಾನು ಸಂಪೂರ್ಣ ತೃಪ್ತ: ಜಿ. ಪರಮೇಶ್ವರ
- ಡಿ.ಕೆ. ಶಿವಕುಮಾರ್ ಜೀವನದ ಮಾರ್ಗದರ್ಶಕ ಶಕ್ತಿ ‘ನೊಣವಿನಕೆರೆ ಅಜ್ಜಯ್ಯ’!
- ಕೆಪಿಸಿಸಿಗೆ ಬಿ.ಕೆ.ಹರಿಪ್ರಸಾದ್ ಹೊಸ ಸಾರಥಿ: ಹೈಕಮಾಂಡ್ ಮಹತ್ವದ ನಿರ್ಧಾರ
- ಸಿಎಂ ಕುರ್ಚಿ ನನ್ನದಲ್ಲ, ಅಧಿಕಾರವನ್ನು ಜನರ ಸೇವೆಗೆ ಮುಡಿಪಾಗಿಡುತ್ತೇನೆ: ಸಿಎಂ ಡಿ.ಕೆ.ಶಿವಕುಮಾರ್
- ಕರ್ನಾಟಕದ 25ನೇ ಮುಖ್ಯಮಂತ್ರಿಯಾಗಿ ಡಿ.ಕೆ.ಶಿವಕುಮಾರ್ ಪ್ರಮಾಣವಚನ ಸ್ವೀಕಾರ!
- ಸಾದರ ಸಮುದಾಯ ಭವನದಲ್ಲಿ ಸಪ್ತಗಿರಿ ಆಸ್ಪತ್ರೆ ವತಿಯಿಂದ ಬೃಹತ್ ಆರೋಗ್ಯ ತಪಾಸಣೆ ಮತ್ತು ಶಸ್ತ್ರ ಚಿಕಿತ್ಸಾ ಶಿಬಿರ
Author: admin
ತುಮಕೂರು: ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯು ತನ್ನ ಅಧೀನದಲ್ಲಿರುವ ಮೆಟ್ರಿಕ್ ನಂತರದ ಬಾಲಕ/ಬಾಲಕಿಯರ ವಿದ್ಯಾರ್ಥಿ ನಿಲಯಗಳಲ್ಲಿ ಪಿಯುಸಿ ಮತ್ತು ಪಿಯುಸಿ ಸಮಾಂನಾಂತರ ಕೋರ್ಸಿನ ಸಾಮಾನ್ಯ ಪದವಿ ಮಟ್ಟದ ಕೋರ್ಸು, ವೃತ್ತಿಪರ ಕೋರ್ಸು ಮತ್ತು ಸ್ನಾತಕೋತ್ತರ ಕೋರ್ಸಿನ ಪ್ರವೇಶಕ್ಕಾಗಿ ರಾಜ್ಯ ವಿದ್ಯಾರ್ಥಿನಿಲಯ ತಂತ್ರಾಂಶದಲ್ಲಿ ಅರ್ಜಿ ಸಲ್ಲಿಸುವ ಅವಧಿಯನ್ನು ನವೆಂಬರ್ 11ರವರೆಗೆ ವಿಸ್ತರಿಸಲಾಗಿದೆ ಎಂದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಜಿಲ್ಲಾ ಅಧಿಕಾರಿ ತಿಳಿಸಿದ್ದಾರೆ. ಆಸಕ್ತರು ಜಾಲತಾಣ https://shp.karnataka.gov.in ಮೂಲಕ ನವೆಂಬರ್ 11ರೊಳಗಾಗಿ ಅರ್ಜಿ ಸಲ್ಲಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಅಧಿಕಾರಿಗಳು, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ, ಮೌಲಾನಾ ಆಜಾದ್ ಭವನ, ಇಂದಿರಾ ಕಾಲೇಜು ಮುಂಭಾಗ, ಉಪ್ಪಾರಹಳ್ಳಿ, ತುಮಕೂರು ಅಥವಾ ದೂರವಾಣಿ ಸಂಖ್ಯೆ: 0816–2273724ನ್ನು ಸಂಪರ್ಕಿಸಬೇಕೆಂದು ಅವರು ತಿಳಿಸಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296
ಬೆಳಗಾವಿ: ವಿಧಾನಮಂಡಲದ ಚಳಿಗಾಲದ ಅಧಿವೇಶನ ಡಿಸೆಂಬರ್ 9 ರಿಂದ 20 ರವರೆಗೆ ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ನಡೆಯಲಿದ್ದು, ದಿನಾಂಕವನ್ನು ಸಚಿವ ಸಂಪುಟ ಅಂತಿಮಗೊಳಿಸಲಿದೆ ಎಂದು ವಿಧಾನಸಭೆ ಸ್ಪೀಕರ್ ಯು.ಟಿ.ಖಾದರ್ ಮತ್ತು ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ತಿಳಿಸಿದ್ದಾರೆ. ಖಾದರ್ ಮತ್ತು ಹೊರಟ್ಟಿ ಶುಕ್ರವಾರ ಸುವರ್ಣ ವಿಧಾನಸೌಧಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಅವರು ಅಧಿಕಾರಿಗಳೊಂದಿಗೆ ಸಭೆ ನಡೆಸಿದರು ಮತ್ತು ಚಳಿಗಾಲದ ಅಧಿವೇಶನದ ಸಿದ್ಧತೆಗಳ ಬಗ್ಗೆ ಮಾಹಿತಿ ಪಡೆದರು. “ಶಾಸಕಾಂಗ ಅಧಿವೇಶನವು ಹೆಚ್ಚು ಯಶಸ್ವಿಯಾಗಬೇಕೆಂದು ನಾವು ಬಯಸುತ್ತೇವೆ. ಆದ್ದರಿಂದ, ನಾವು ಬಹಳ ಹಿಂದೆಯೇ ಪರಿಶೀಲನಾ ಸಭೆಗಳನ್ನು ನಡೆಸುತ್ತಿದ್ದೇವೆ. ವಿವಿಧ ಇಲಾಖೆಗಳ ಅಧಿಕಾರಿಗಳಿಗೆ ಜವಾಬ್ದಾರಿಗಳನ್ನು ವಹಿಸಲಾಗಿದೆ ಎಂದು ಖಾದರ್ ಹೇಳಿದರು. ಈ ಅಧಿವೇಶನದಲ್ಲಿಯೂ ಉತ್ತರ ಕರ್ನಾಟಕ ಭಾಗದ ಸಮಸ್ಯೆಗಳ ಬಗ್ಗೆ ಚರ್ಚಿಸಲು ಸಮಯ ನಿಗದಿಪಡಿಸಲಾಗುವುದು ಎಂದು ಸ್ಪೀಕರ್ ಹೇಳಿದರು. ಶಾಲಾ ಮತ್ತು ಕಾಲೇಜು ವಿದ್ಯಾರ್ಥಿಗಳೊಂದಿಗೆ ಈ ಪ್ರದೇಶದ ಹೆಚ್ಚಿನ ಜನರು ಉಭಯ ಸದನಗಳ ಕಲಾಪಗಳಿಗೆ ಸಾಕ್ಷಿಯಾಗುವುದನ್ನು ಖಚಿತಪಡಿಸಿಕೊಳ್ಳಲು ಆಧುನಿಕ ತಂತ್ರಜ್ಞಾನವನ್ನು ಬಳಸಿಕೊಂಡು ಪಾಸ್…
ಬೆಂಗಳೂರು: ಕೇಂದ್ರ ಸಚಿವರಾದ ಪ್ರಹ್ಲಾದ್ ಜೋಶಿ ಅವರ ಹೆಸರನ್ನು ಸಂಬಂಧಪಡದ ಪ್ರಕರಣವೊಂದರಲ್ಲಿ ಎಳೆದು ತರುವ ಮೂಲಕ ಕಾಂಗ್ರೆಸ್ಸಿಗರು ವಿಘ್ನ ಸಂತೋಷ ಪಡಲು ಹೊರಟಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಅವರು, ಆರೋಪಿತ ಗೋಪಾಲ ಜೋಷಿ ಅವರೊಂದಿಗೆ ಕಳೆದ 32 ವರ್ಷಗಳಿಂದಲೂ ಸಂಪರ್ಕ ಕಡಿದುಕೊಂಡು ಯಾರೊಂದಿಗೂ ತಮ್ಮ ಸಂಬಂಧ ಬೆರೆಸದಂತೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರು ನ್ಯಾಯಾಲಯದಲ್ಲಿ 2013ರಲ್ಲೇ ತಡೆಯಾಜ್ಞೆ ತಂದಿದ್ದಾರೆ, ಅಲ್ಲದೇ ನ್ಯಾಯಾಲಯಕ್ಕೆ ಸಲ್ಲಿಸಿರುವ ಪ್ರಮಾಣ ಪತ್ರದಲ್ಲಿ ಅದರ ವಿವರವಿರುವುದಾಗಿಯೂ ಸ್ಪಷ್ಟಪಡಿಸಿದ್ದಾರೆ. ಇಷ್ಟಾಗಿಯೂ ಮುಡಾ ಹಾಗೂ ಮಹರ್ಷಿ ವಾಲ್ಮೀಕಿ ನಿಗಮದ ಹಗರಣದಂತೆ ಹತ್ತು- ಹಲವು ಹಗರಣಗಳಲ್ಲಿ ಸಿಲುಕಿ ತನಿಖೆ ಎದುರಿಸುತ್ತಿರುವ ಮುಖ್ಯಮಂತ್ರಿ ಹಾಗೂ ಇತರ ಮಂತ್ರಿಗಳು ನೈತಿಕತೆ ಗಾಳಿಗೆ ತೂರಿ ತಮ್ಮ ಸ್ಥಾನಗಳಿಗೆ ಭಂಡತನದಿಂದ ಅಂಟಿ ಕುಳಿತಿದ್ದಾರೆ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಹತಾಶೆಯ ಅಂಚಿಗೆ ತಲುಪಿರುವ ಕಾಂಗ್ರೆಸ್ಸಿಗರು ಜೋಷಿಯವರ ವಿಚಾರದಲ್ಲಿ ‘ಮೊಸರಿನಲ್ಲಿ ಕಲ್ಲು ಹುಡುಕಲು ಹೊರಟಿದ್ದಾರೆ’. ಪ್ರಹ್ಲಾದ್ ಜೋಶಿ ಅವರು ತಮ್ಮ ಇಡೀ ರಾಜಕೀಯ…
ತುಮಕೂರು: ಗುಬ್ಬಿ ಬೆಸ್ಕಾಂ ಉಪವಿಭಾಗ ವ್ಯಾಪ್ತಿಯಲ್ಲಿ ಅಕ್ರಮ–ಸಕ್ರಮ ಯೋಜನೆಯಡಿ ರೈತರಿಗೆ ಕೃಷಿ ಪಂಪ್ ಸೆಟ್ ಗಳಿಗೆ ಉಚಿತ ವಿದ್ಯುತ್ ಪರಿವರ್ತಕಗಳನ್ನು ಅಳವಡಿಸಲು ಉದ್ದೇಶಿಸಲಾಗಿದೆ ಎಂದು ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ತಿಳಿಸಿದ್ದಾರೆ. ಗ್ರಾಹಕರು ಅಕ್ರಮ–ಸಕ್ರಮ ಯೋಜನೆಯಡಿ 2015 ರಿಂದ 2022ರ ಮಾರ್ಚ್ ಮಾಹೆವರೆಗೆ ಹಣ ಪಾವತಿಸಿರುವ ರೈತರಿಗೆ ಸೌಲಭ್ಯ ವಿತರಣೆಗೆ ಸ್ಥಳ ಪರಿಶೀಲನೆಗೆ ಸಂಬಂಧಿಸಿದ ಶಾಖಾಧಿಕಾರಿಗಳು ಭೇಟಿ ನೀಡಲಿದ್ದು, ಭೇಟಿ ಸಂದರ್ಭದಲ್ಲಿ ಹಣ ಪಾವತಿಸಿದ ಆರ್.ಆರ್ ನಂಬರ್ಗಳ ಸ್ಥಾವರಗಳ ಸ್ಥಳ ಪರಿಶೀಲನೆ ಹಾಗೂ ಅಂದಾಜು ಪಟ್ಟಿ ತಯಾರಿಕೆಗೆ ಸಹಕರಿಸಬೇಕು. ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ ಗುಬ್ಬಿ ಶಾಖೆ-9449844214–47, ಚೇಳೂರು ಶಾಖೆ–9449844223 ಮತ್ತು ಸಿ.ಎಸ್.ಪುರ ಶಾಖೆ–9449844232ನ್ನು ಸಂಪರ್ಕಿಸಬಹುದಾಗಿದೆ ಎಂದು ಅವರು ತಿಳಿಸಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296
ರಾಜ್ಯದ ವಿವಿಧೆಡೆ ಹಿಂಗಾರು ಮಳೆ ಚುರುಕುಗೊಂಡಿದ್ದು, ಉತ್ಪಾದನೆ ಕುಂಠಿತವಾಗಿ ತರಕಾರಿಗಳ ಬೆಲೆ ಮತ್ತೆ ಏರಿಕೆಯಾಗಿದೆ. ದೀಪಾವಳಿ ಹಬ್ಬದ ಸಂದರ್ಭದಲ್ಲಿ ತರಕಾರಿಗಳ ಬೆಲೆ ಮತ್ತೆ ಏರಿಕೆಯಾಗುವ ಸಾಧ್ಯತೆ ಕಂಡು ಬಂದಿದೆ. ಬೆಂಗಳೂರು ಸೇರಿದಂತೆ ತುಮಕೂರು, ಕೋಲಾರ, ಚಿಕ್ಕಬಳ್ಳಾಪುರ, ರಾಮನಗರ, ಶಿವಮೊಗ್ಗ, ಬಳ್ಳಾರಿ, ರಾಯಚೂರು, ಹಾಸನ , ಚಿಕ್ಕಮಗಳೂರು, ಚಿತ್ರದುರ್ಗ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುತ್ತಿದ್ದು, ಕೈಗೆ ಬಂದ ಫಸಲು ನೆಲಕಚ್ಚಿದೆ. ಕಳೆದ ವಾರಕ್ಕೆ ಹೋಲಿಸಿದರೆ ಈ ವಾರ ಕೆಜಿಗೆ ಎಲ್ಲಾ ತರಕಾರಿಗಳ ಬೆಲೆ 10 ರೂ. ಏರಿಕೆಯಾಗಿದೆ. ಅದರಲ್ಲೂ ಲಾಟರಿ ಬೆಳೆ ಎಂದೇ ಕರೆಯುವ ಟೊಮೆಟೋ ಬೆಲೆ ಏರಿಕೆಯಾಗುತ್ತಲೇ ಇದೆ. ಮಳೆ ಹೆಚ್ಚಾದ ಕಾರಣ ಗಿಡದಲ್ಲಿ ಇದ್ದ ಟೊಮ್ಯಾಟೋ ನಾಶವಾಗಿದ್ದು ಬೆಲೆ ಏರಿಕೆಯಾಗಿದೆ. ರಾಜ್ಯದಲ್ಲೇ ದೊಡ್ಡ ಮಾರುಕಟ್ಟೆಯಾದ ಕೋಲಾರ ಮಾರುಕಟ್ಟೆಯಿಂದ ರಾಜ್ಯ ಹಾಗೂ ಅಂತಾರಾಜ್ಯಗಳಿಗೆ ಟೊಮ್ಯಾಟೋ ಸರಬರಾಜು ಆಗುತ್ತದೆ. ಆದರೆ ಅಲ್ಲೇ ನಿರೀಕ್ಷಿತ ಪ್ರಮಾಣದಲ್ಲಿ ಮಾಲು ಬರುತ್ತಿಲ್ಲ . ಹಾಗಾಗಿ ಕೆಜಿಗೆ 60ರೂ. ನಿಂದ 70 ರೂ.ಗೆ ಮಾರಾಟವಾಗುತ್ತಿದೆ. ನಾಟಿ ಬೀನ್ಸ್ ನೂರರ ಗಡಿದಾಟಿ…
ತುಮಕೂರು: ವಿಶ್ವವಿದ್ಯಾನಿಲಯದ ಪ್ರಸಾರಾಂಗವು ಪ್ರಕಟಿಸಿರುವ ರಾಜ್ಯ ಶಿಕ್ಷಣ ನೀತಿಅನ್ವಯ ಸಿದ್ಧಪಡಿಸಿದ ಪ್ರಥಮ ಸೆಮಿಸ್ಟರ್ ಪದವಿಯ ಇಂಗ್ಲಿಷ್ ಭಾಷಾ ಪಠ್ಯ ಪುಸ್ತಕಗಳನ್ನು ಕುಲಪತಿ ಪ್ರೊ.ಎಂ.ವೆಂಕಟೇಶ್ವರಲು ಶುಕ್ರವಾರ ಬಿಡುಗಡೆಗೊಳಿಸಿದರು. ಪಠ್ಯ ಪುಸ್ತಕಗಳ ಪ್ರಧಾನ ಸಂಪಾದಕ ಪ್ರೊ.ಎನ್. ಎಸ್. ಗುಂಡೂರ್ ಹಾಗೂ ಸಂಪಾದಕ ಮಂಡಳಿಯ ಸದಸ್ಯರಾದ ಪ್ರೊ.ಎಚ್.ಕೆ.ಶಿವಲಿಂಗಸ್ವಾಮಿ, ಡಾ.ಎಸ್. ಎನ್. ಕಿರಣ್, ಡಾ.ಮೊನ್ಬಿಂದರ್ ಕೌರ್, ಡಾ. ಸಿ. ಎಂ. ರವಿ, ಡಾ. ಭರತ್ ಶಿಲ್ಪಿ, ಡಾ. ಬಿ. ಎನ್. ವೇಣುಗೋಪಾಲ, ದಾಕ್ಷಾಯಿಣಿ ಉಪಸ್ಥಿತರಿದ್ದರು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296
ಜನಪ್ರಿಯ ನಿರೂಪಕಿ ಅನುಶ್ರೀ ಅವರ ಮದುವೆಯ ಬಗ್ಗೆ ಸಾಕಷ್ಟು ಸುದ್ದಿಗಳನ್ನು ನೀವು ನೋಡಿರುತ್ತೀರಿ, ಇದೀಗ ಮತ್ತೆ ಅನುಶ್ರೀ ಅವರ ಮದುವೆ ಬಗ್ಗೆ ಸುದ್ದಿಯಾಗಿದೆ. ಅನುಶ್ರೀ ಮದುವೆಯಾಗಲು ಗ್ರೀನ್ ಸಿಗ್ನಲ್ ನೀಡುತ್ತಿದ್ದು, ದಾಂಪತ್ಯ ಜೀವನದತ್ತ ಒಲವು ತೋರುತ್ತಿದ್ದಾರೆ. ಈ ಬಗ್ಗೆ ಇತ್ತೀಚಿನ ಕೆಲವು ಕಾರ್ಯಕ್ರಮದಲ್ಲಿ ಮಾತನಾಡಿದ್ದರು. ಇದೀಗ ಮುಂದಿನ ವರ್ಷ ನಿರೂಪಕಿ ಅನುಶ್ರೀ ಮದುವೆಯಾಗುವುದು ಖಚಿತವಾಗಿದ್ದು, ದಿನಾಂಕ ಕೂಡ ಬಹುತೇಕ ನಿಗದಿಯಾಗಿದೆಯಂತೆ. ಇದು ಅನುಶ್ರೀ ಮದುವೆ ಬಗ್ಗೆ ಯಾರೋ ಏನೋ ನೀಡಿರುವ ಹೇಳಿಕೆಯಲ್ಲ ಸ್ವತಃ ಅನುಶ್ರೀಯೇ ತಮ್ಮ ಯೂಟ್ಯೂಬ್ ಚಾನೆಲ್ನಲ್ಲಿ ಈ ಒಂದು ಸಿಕ್ರೇಟ್ ಅನ್ನು ಬಹಿರಂಗ ಪಡಿಸಿದ್ದಾರೆ. ಕಾಮಿಡಿ ಕಿಲಾಡಿಗಳು ಶೋ ಮೂಲಕ ಜನಪ್ರಿಯರಾದ ನಟಿ ನಯನ, ಸೂರಜ್, ಜಗ್ಗಪ್ಪ ಹಾಗೂ ಗಿಲ್ಲಿ ಅವರನ್ನು ಅನುಶ್ರೀ ತಮ್ಮ ಯೂಟ್ಯೂಬ್ ಚಾನೆಲ್ ಗೆ ಅತಿಥಿಗಳನ್ನಾಗಿ ಕರೆದು ಚಿಟ್ ಚಾಟ್ ನಡೆಸಿದ್ದರು. ಈ ವೇಳೆ ಅನುಶ್ರೀ ಚೆನ್ನಾಗಿ ಕೂತಿದ್ದೀರಾ ಕಂಡ್ರೋ ಮದುವೆ ಆಗಿರುವವರು ಒಂದೆಡೆ, ಮದುವೆ ಆಗದೆ ಇರೋರು ಮತ್ತೊಂದೆಡೆ ಎಂದು ಕಾಲೆಳೆದರು. ಮದುವೆ…
ತುಮಕೂರು : ಕರ್ನಾಟಕ ಲೋಕಾಯುಕ್ತದ ಉಪ ಲೋಕಾಯುಕ್ತ ಬಿ.ವೀರಪ್ಪ ಅವರು ಇಂದು ಬೆಳ್ಳಂಬೆಳಿಗ್ಗೆ ತುಮಕೂರು ಜೈಲಿಗೆ ಅನಿರೀಕ್ಷಿತ ಭೇಟಿ ನೀಡಿ ಪರಿಶೀಲಿಸಿದರು. ವಿಚಾರಣಾ ದಿನ ಕೈದಿಗಳ ಸಮಸ್ಯೆಯನ್ನು ಕೂಡ ಆಲಿಸಿದರು. ಜೈಲಿನ ವ್ಯವಸ್ಥೆಗಳ ಬಗ್ಗೆ ಖೈದಿಗಳನ್ನು ವಿಚಾರಿಸಿದ ಅವರು ಯಾವುದೋ ಅನಿರೀಕ್ಷಿತ ಸಂದರ್ಭದಲ್ಲಿ ಆಕಸ್ಮಿಕವಾಗಿ ಅಪರಾಧಗಳಲ್ಲಿ ಭಾಗಿಯಾಗಿ ಶಿಕ್ಷೆಗೆ ಗುರಿಯಾಗಿದ್ದೀರಿ. ಇನ್ನು ಮುಂದೆ ಮನಃ ಪರಿವರ್ತನೆ ಮಾಡಿಕೊಂಡು ಸರಿ ದಾರಿಯಲ್ಲಿ ನಡೆದು ಸತ್ಪ್ರಜೆಗಳಾಗಬೇಕು ಎಂದು ಬುದ್ಧಿ ಮಾತುಗಳನ್ನು ಹೇಳಿದರು ಜೈಲಿನಲ್ಲಿರುವ ಖೈದಿಗಳ ಕೊಠಡಿ, ಅಡುಗೆ ಕೋಣೆ, ಆಹಾರ ಸಾಮಗ್ರಿಗಳ ಗುಣ ಮಟ್ಟವನ್ನು ಪರಿಶೀಲಿಸಿದರು. ಈ ಸಂದರ್ಭದಲ್ಲಿ ಹಿರಿಯ ಸಿವಿಲ್ ನ್ಯಾಯಧೀಶರು ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಧಿಕಾರದ ಸದಸ್ಯ ಕಾರ್ಯದರ್ಶಿ ನೂರುನ್ನೀಸ, ಲೋಕಾಯುಕ್ತ ಅಧೀಕ್ಷಕ ಎ ವಿ ಲಕ್ಷ್ಮೀ ನಾರಾಯಣ, ಜೈಲಿನ ಅಧೀಕ್ಷಕ ಮಲ್ಲಿಕಾರ್ಜುನ ಎಸ್ ಮಾಳಿ ಸೇರಿ ಮತ್ತಿತರರು ಉಪಸ್ಥಿತರಿದ್ದರು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್…
ತುಮಕೂರು ಹೊರವಲಯದ ಹೆಬ್ಬೂರು ಹೋಬಳಿಯ ಬಿದರಕಟ್ಟೆ, ತಿಮ್ಮಸಂದ್ರ ಹಾಗೂ ದೊಮ್ಮನಕುಪ್ಪೆ ಗ್ರಾಮಗಳ ವ್ಯಾಪ್ತಿಗೆ ಬರುವ 240 ಎಕರೆ ವಿಸ್ತೀರ್ಣದ ‘ಜ್ಞಾನಸಿರಿ’ ಕ್ಯಾಂಪಸ್. 17 ಕೋಟಿ 50 ಲಕ್ಷ ರೂಪಾಯಿ ವೆಚ್ಚದ, ತಲಾ 2927 ಚದರ ಮೀಟರ್ ವಿಸ್ತೀರ್ಣದ, ಪರಿಶಿಷ್ಟ ಜಾತಿ-ಪರಿಶಿಷ್ಟ ಪಂಗಡದ ಸ್ನಾತಕೋತ್ತರ ವಿದ್ಯಾರ್ಥಿ ಹಾಗೂ ವಿದ್ಯಾರ್ಥಿನಿಯರ ಎರಡು ಪ್ರತ್ಯೇಕ ಹಾಸ್ಟೆಲ್ಗಳು, 2995 ಚದರ ಮೀಟರ್ ವಿಸ್ತೀರ್ಣದ ಪರಿಶಿಷ್ಟ ಜಾತಿ-ಪರಿಶಿಷ್ಟ ಪಂಗಡದ ಸಂಶೋಧನಾರ್ಥಿಗಳ ಹಾಸ್ಟೆಲ್ ಕಾಮಗಾರಿ ಈಗಾಗಲೇ ಪೂರ್ಣಗೊಂಡು ಬಳಕೆಗೆ ಸಿದ್ಧವಾಗಿವೆ. 5 ಕೋಟಿ 53 ಲಕ್ಷ ರುಪಾಯಿ ರೂಸಾ ಅನುದಾನದಲ್ಲಿ 2722 ಚದರ ಮೀಟರ್ ವಿಸ್ತೀರ್ಣದ ಸ್ನಾತಕೋತ್ತರ ಬಾಲಕರ ಹಾಸ್ಟೆಲ್, 1 ಕೋಟಿ 19 ಲಕ್ಷ ರುಪಾಯಿ ರೂಸಾ ಅನುದಾನದಲ್ಲಿ 360 ಚದರ ಮೀಟರ್ ವಿಸ್ತೀರ್ಣದ ಗ್ರಂಥಾಲಯ ಮತ್ತ ಮಾಹಿತಿ ವಿಜ್ಞಾನ ವಿಭಾಗದ ಪ್ರಯೋಗಾಲಯ, ಕರ್ನಾಟಕ ಸರ್ಕಾರದ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆಯ 2 ಕೋಟಿ ರುಪಾಯಿ ಅನುದಾನದಲ್ಲಿ 1760 ಚದರ ಮೀಟರ್ ವಿಸ್ತೀರ್ಣದ ಉಪ ಪ್ರಾದೇಶಿಕ ವಿಜ್ಞಾನ ಕೇಂದ್ರ…
ತುಮಕೂರು: ಬೆಸ್ಕಾಂ ನಗರ ಉಪವಿಭಾಗ–2ರ ಕಚೇರಿಯಲ್ಲಿ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಅಧ್ಯಕ್ಷತೆಯಲ್ಲಿ ಅಕ್ಟೋಬರ್ 19ರಂದು ಮಧ್ಯಾಹ್ನ 3 ಗಂಟೆಗೆ ಗ್ರಾಹಕರ ಸಂವಾದ ಸಭೆ ನಡೆಯಲಿದೆ. ಈ ಉಪವಿಭಾಗ ವ್ಯಾಪ್ತಿಯ ಎಸ್ಎಸ್ಪುರಂ, ಸರಸ್ವತಿ ಪುರಂ, ಜಯನಗರ ಹಾಗೂ ಸುತ್ತಮುತ್ತಲಿನ ಗ್ರಾಮಗಳ ಗ್ರಾಹಕರು ಹೆಚ್ಚಿನ ಸಂಖ್ಯೆಯಲ್ಲಿ ಸಭೆಯಲ್ಲಿ ಭಾಗವಹಿಸಿ ವಿದ್ಯುತ್ ಸಮಸ್ಯೆಗೆ ಸಂಬಂಧಿಸಿದ ಕುಂದು ಕೊರತೆ/ಸಲಹೆಗಳನ್ನು ನೀಡಬಹುದಾಗಿದೆ ಎಂದು ಇಂಜಿನಿಯರ್ ಮಹಬೂಬ್ ಷರೀಫ್ ಮನವಿ ಮಾಡಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296