Subscribe to Updates
Get the latest creative news from FooBar about art, design and business.
- ಸಿಎಂ ಡಿ.ಕೆ.ಶಿವಕುಮಾರ್, ಡಿಸಿಎಂ ಜಿ. ಪರಮೇಶ್ವರ್ ನಿವಾಸಕ್ಕೆ ಸಿದ್ಧಗಂಗಾ ಶ್ರೀ ಭೇಟಿ: ವಿಶೇಷ ಆಶೀರ್ವಾದ
- ನನಗೂ ಸಚಿವ ಸ್ಥಾನ ಸಿಗುವ ಭರವಸೆಯಿದೆ: ಮಾಜಿ ಸಚಿವ ಸಂತೋಷ್ ಲಾಡ್
- ಉಪಮುಖ್ಯಮಂತ್ರಿಯಾಗಿ ನೇಮಕಗೊಂಡಿರುವುದಕ್ಕೆ ನಾನು ಸಂಪೂರ್ಣ ತೃಪ್ತ: ಜಿ. ಪರಮೇಶ್ವರ
- ಡಿ.ಕೆ. ಶಿವಕುಮಾರ್ ಜೀವನದ ಮಾರ್ಗದರ್ಶಕ ಶಕ್ತಿ ‘ನೊಣವಿನಕೆರೆ ಅಜ್ಜಯ್ಯ’!
- ಕೆಪಿಸಿಸಿಗೆ ಬಿ.ಕೆ.ಹರಿಪ್ರಸಾದ್ ಹೊಸ ಸಾರಥಿ: ಹೈಕಮಾಂಡ್ ಮಹತ್ವದ ನಿರ್ಧಾರ
- ಸಿಎಂ ಕುರ್ಚಿ ನನ್ನದಲ್ಲ, ಅಧಿಕಾರವನ್ನು ಜನರ ಸೇವೆಗೆ ಮುಡಿಪಾಗಿಡುತ್ತೇನೆ: ಸಿಎಂ ಡಿ.ಕೆ.ಶಿವಕುಮಾರ್
- ಕರ್ನಾಟಕದ 25ನೇ ಮುಖ್ಯಮಂತ್ರಿಯಾಗಿ ಡಿ.ಕೆ.ಶಿವಕುಮಾರ್ ಪ್ರಮಾಣವಚನ ಸ್ವೀಕಾರ!
- ಸಾದರ ಸಮುದಾಯ ಭವನದಲ್ಲಿ ಸಪ್ತಗಿರಿ ಆಸ್ಪತ್ರೆ ವತಿಯಿಂದ ಬೃಹತ್ ಆರೋಗ್ಯ ತಪಾಸಣೆ ಮತ್ತು ಶಸ್ತ್ರ ಚಿಕಿತ್ಸಾ ಶಿಬಿರ
Author: admin
ಬೆಂಗಳೂರು: ಚನ್ನಪಟ್ಟಣ ಉಪ ಚುನಾವಣೆಯಲ್ಲಿ ಜೆಡಿಎಸ್ ಹಾಗೂ ಬಿಜೆಪಿ ನಡುವಿನ ಅಸಮಾಧಾನ ಇನ್ನೂ ಮುಂದುವರಿದಿದೆ. ಒಂದೆಡೆ ಟಿಕೆಟ್ ಗಾಗಿ ಸಿ.ಪಿ.ಯೋಗೇಶ್ವರ್ ಪಟ್ಟು ಹಿಡಿದಿದ್ದರೆ ಅತ್ತ ಜೆಡಿಎಸ್ ನಿಂದ ಹೆಚ್.ಡಿ.ಕುಮಾರಸ್ವಾಮಿ ನಿಖಿಲ್ ಅಥವಾ ಅನಿತಾ ಅವರನ್ನು ಕಣಕ್ಕಿಳಿಸಲು ಮುಂದಾಗಿದ್ದಾರೆ ಎನ್ನಲಾಗಿದೆ. ಬಿಜೆಪಿಯಿಂದ ಸಿ.ಪಿ.ಯೋಗೇಶ್ವರ್ ಟಿಕೆಟ್ ಗಾಗಿ ಪಟ್ಟು ಹಿಡಿದಿದ್ದಾರೆ. ಆದರೆ ಯಾರೇ ಅಭ್ಯರ್ಥಿಯಾದರೂ ಇಲ್ಲಿ ಗೆಲ್ಲಬೇಕಾದರೆ ಯೋಗೇಶ್ವರ್ ಮತ್ತು ಕುಮಾರಸ್ವಾಮಿ ಇಬ್ಬರ ಬೆಂಬಲವೂ ಬೇಕಾಗುತ್ತದೆ. ಇದರ ನಡುವೆ ನಿಖಿಲ್ ಕುಮಾರಸ್ವಾಮಿ ಅಥವಾ ಅನಿತಾ ಕುಮಾರಸ್ವಾಮಿ ಹೆಸರು ಬಲವಾಗಿ ಕೇಳಿಬರುತ್ತಿದೆ. ಚನ್ನಪಟ್ಟಣಕ್ಕೆ ಅಭ್ಯರ್ಥಿ ಆಯ್ಕೆ ಮಾಡುವ ವಿಚಾರದಲ್ಲಿ ಸಂಪೂರ್ಣ ಅಧಿಕಾರವನ್ನು ನನಗೆ ನೀಡಿದೆ ಎಂದು ಕುಮಾರಸ್ವಾಮಿ ಹೇಳಿದ್ದಾರೆ. ತಮ್ಮ ಪುತ್ರನನ್ನು ಇಲ್ಲಿಂದ ಕಣಕ್ಕಿಳಿಸಬೇಕು ಎಂದು ಕುಮಾರಸ್ವಾಮಿಯವರಿಗೆ ಚಿಂತನೆಯಿದೆ. ಇನ್ನೊಂದೆಡೆ ನಿಖಿಲ್ ಇಲ್ಲದೇ ಇದ್ದರೆ ಪತ್ನಿ ಅನಿತಾರನ್ನಾದರೂ ಕಣಕ್ಕಿಳಿಸಬೇಕೆಂಬ ಬಯಕೆ ಅವರದ್ದು ಎಂದು ಹೇಳಲಾಗಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ…
ಬೆಂಗಳೂರು: ರೇಣುಕಾಸ್ವಾಮಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಂಗ ಬಂಧನದಲ್ಲಿರುವ ನಟ ದರ್ಶನ್ ತಲೆಗೆ ಇದೀಗ ಹಳೆಯ ಕೇಸ್ ವೊಂದು ಸುತ್ತಿಕೊಂಡಿದ್ದು, ಹಳೆಯ ಕೇಸ್ ಇದೀಗ ರಿ ಓಪನ್ ಆಗಿದೆ. ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ 120 ಕ್ಕೂ ಹೆಚ್ಚು ದಿನಗಳಿಂದ ದರ್ಶನ್ ಜೈಲಿನಲ್ಲೇ ಇದ್ದಾರೆ. ಅವರ ಜಾಮೀನು ಅರ್ಜಿ ಇತ್ತೀಚೆಗೆ ಕೆಳಹಂತದ ನ್ಯಾಯಾಲಯದಲ್ಲಿ ತಿರಸ್ಕೃತವಾಗಿತ್ತು. ಈ ಹಿನ್ನಲೆಯಲ್ಲಿ ಅವರು ಹೈಕೋರ್ಟ್ ಮೊರೆ ಹೋಗುತ್ತಿದ್ದಾರೆ. ಆದರೆ ಈ ನಡುವೆ ಅವರಿಗೆ ಹಳೇ ಕೇಸ್ ಕಂಟಕ ತಂದಿದೆ. ಭಗವಾನ್ ಶ್ರೀಕೃಷ್ಣಾ ಎಂಬ ಸಿನಿಮಾವನ್ನು ಯುವ ನಿರ್ಮಾಪಕ ಭರತ್ ಎಂಬವರು ನಿರ್ಮಿಸಿದ್ದರು. ಈ ಸಿನಿಮಾಗೆ ಧ್ರುವನ್ ನಾಯಕರಾಗಿದ್ದರು. ಈ ಸಿನಿಮಾ ಶೂಟಿಂಗ್ ನಡೆಯುತ್ತಿಲ್ಲ ಎಂದು ಧ್ರುವನ್ ನಟ ದರ್ಶನ್ ಬಳಿ ದೂರು ಹೇಳಿದ್ದರು. ಅದರಂತೆ ದರ್ಶನ್ ಕೈಯಲ್ಲಿ ಭರತ್ ಗೆ ಧ್ರುವನ್ ಕರೆ ಮಾಡಿಸಿದ್ದರು. ಧ್ರುವನ್ ಪರವಾಗಿ ಮಾತನಾಡಿದ್ದ ದರ್ಶನ್ ಬೆದರಿಕೆ ಹಾಕಿದ್ದರು. ಘಟನೆ ಬಗ್ಗೆ ಭರತ್ ಇತ್ತೀಚೆಗೆ ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ದರ್ಶನ್ ಬಂಧಿತರಾದ ಬಳಿಕ…
ನಾನು ನಿಮಗೆ ಮತ ಹಾಕಿದ್ದೇನೆ, ನನ್ನ ಸಮಸ್ಯೆ ಪರಿಹರಿಸಿ, ನನಗೊಂದು ಸಿಂಪಲ್ ಮದುವೆ ಮಾಡಿಸಿಕೊಡಿ ಎಂದು ಮತದಾರನೊಬ್ಬ ಶಾಸಕರೊಬ್ಬರಿಗೆ ಬೇಡಿಕೆಯಿಟ್ಟ ಘಟನೆ ಉತ್ತರಪ್ರದೇಶದಲ್ಲಿ ನಡೆದಿದೆ. ಉತ್ತರಪ್ರದೇಶದ ಚರಖಾರಿ ಕ್ಷೇತ್ರದ ಶಾಸಕರಾದ ಬ್ರಿಜ್ ಭೂಷಣ್ ರಜಪೂತ್ ಅವರಿಗೆ ಮತದಾರನೊಬ್ಬ ಈ ರೀತಿ ಶಾಕ್ ನೀಡಿದ್ದಾನೆ. ಉತ್ತರ ಪ್ರದೇಶದ ಮಹೋಬಾದ ಪೆಟ್ರೋಲ್ ಬಂಕ್ ಗೆ ಶಾಸಕರ ಕಾರು ಫುಯೆಲ್ ತುಂಬಿಸಿಕೊಳ್ಳಲು ಬಂದಿತ್ತು. ಈ ವೇಳೆ ಬಂಕ್ ನಲ್ಲಿದ್ದ ಉದ್ಯೋಗಿ 44 ವರ್ಷದ ಅಖಿಲೇಂದ್ರ ಖರೆ ಎಂಬಾತ ಸೀದಾ ಶಾಸಕರ ಬಳಿ ಬಂದು, ದಯವಿಟ್ಟು ನನಗೊಂದು ಮದುವೆ ಮಾಡಿಸಿಬಿಡಿ ಎಂದು ಮನವಿ ಮಾಡಿದ್ದಾರೆ ಎನ್ನಲಾಗಿದೆ. ಇದಕ್ಕೆ ನಗುತ್ತಾ ಪ್ರತಿಕ್ರಿಯಿಸಿದ ಶಾಸಕ ಬ್ರಿಜ್ಭೂಷಣ್, ನಿನಗೆ ಎಂತಹ ವಧು ಬೇಕು? ಎಂದು ಕೇಳಿದ್ದಾರೆ. ಇದಕ್ಕೆ ನನಗೆ ಇದೇ ಸಮುದಾಯದ ವಧು ಬೇಕು ಎನ್ನುವುದೇನಿಲ್ಲ, ಯಾವ ಸಮುದಾಯದ ಹುಡುಗಿಯಾದ್ರೂ ಓಕೆ ಎಂದು ಅಖಿಲೇಂದ್ರ ಉತ್ತರಿಸಿದ್ದಾರೆ. ಬಳಿಕ ಆತನ ಹಿನ್ನೆಲೆ ಕೇಳಿದಾಗ, ತನಗೆ ತಿಂಗಳಿಗೆ 6,000 ರೂಪಾಯಿ ಸಂಬಳ ಬರುತ್ತದೆ. ಸ್ವಲ್ಪ…
ಭೋಪಾಲ್: ಡಿಜೆ ಸೌಂಡಿಗೆ 13 ವರ್ಷದ ಬಾಲಕ ಮೃತಪಟ್ಟಿರುವ ಘಟನೆ ಮಧ್ಯಪ್ರದೇಶದ ಭೋಪಾಲ್ನಲ್ಲಿ ನಡೆದಿದೆ. ಸಮರ್ ಬಿಲೋರ್ (13) ಮೃತ ಬಾಲಕ. ಸ್ಥಳೀಯ ಉತ್ಸವದ ವೇಳೆ ಈ ಘಟನೆ ನಡೆದಿದೆ. ಗುಂಪಿನ ನಡುವೆ ಡಿಜೆ ಸೌಂಡಿಗೆ ಸಮರ್ ಕುಣಿಯುತ್ತಿದ್ದ. ಆತ ಇದ್ದಕ್ಕಿದ್ದಂತೆ ಕುಸಿದು ಬಿದ್ದರೂ ಕುಣಿಯುವುದರಲ್ಲಿ ಮಗ್ನರಾಗಿದ್ದ ಇತರರು ಆತನನ್ನು ಗಮನಿಸಲಿಲ್ಲ. ಸ್ವಲ್ಪ ಸಮಯದ ಬಳಿಕ ಸಮರ್ ಬಿದ್ದಿರುವುದನ್ನು ನೋಡಿ ಆತನನ್ನು ಆಸ್ಪತ್ರೆಗೆ ದಾಖಲಿಸಲಾಯಿತು. ಆದರೂ ಆತ ಬದುಕುಳಿಯಲಿಲ್ಲ. ಇನ್ನು ಸಮರ್ಗೆ ಬಾಲ್ಯದಿಂದಲೂ ಹೃದ್ರೋಗವಿದೆ. ಆದರೂ ಆತನ ಆರೋಗ್ಯ ಚೆನ್ನಾಗಿಯೇ ಇತ್ತು ಎಂದು ಅವರ ತಾಯಿ ಹೇಳಿದ್ದಾರೆ. ಅಧಿಕ ಶಬ್ದವನ್ನು ದೇಹ ತಡೆದುಕೊಳ್ಳಲು ಸಾಧ್ಯವಾಗದೆ ಹೃದಯ ಕೆಲಸ ಮಾಡುವುದನ್ನು ನಿಲ್ಲಿಸಿದೆ ಎಂದು ವೈದ್ಯರು ಹೇಳುತ್ತಾರೆ. ಈ ಘಟನೆಯ ನಂತರ 40 ರಿಂದ 50 ಡೆಸಿಬಲ್ ಗಿಂತ ಹೆಚ್ಚಿನ ಸ್ಪೀಕರ್ ಗಳನ್ನು ಅಳವಡಿಸದಂತೆ ಸರ್ಕಾರ ಕಟ್ಟುನಿಟ್ಟಿನ ನಿರ್ದೇಶನ ನೀಡಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ…
ಚಿತ್ರದುರ್ಗ: ಕಾಲೇಜು ಕಟ್ಟಡದಿಂದ ಬಿದ್ದು ಕಾಲೇಜು ವಿದ್ಯಾರ್ಥಿನಿ ಮೃತಪಟ್ಟ ಘಟನೆ ಚಿತ್ರದುರ್ಗದಲ್ಲಿ ನಡೆದಿದೆ. ಚಳ್ಳಕರೆ ಮೂಲದ ಪ್ರೇಮಾ (18) ಮೃತಪಟ್ಟ ವಿದ್ಯಾರ್ಥಿನಿ ಎಂದು ಗುರುತಿಸಲಾಗಿದೆ. ಡಾನ್ ಬಾಸ್ಕೊ ಕಾಲೇಜಿನಲ್ಲಿ ಈ ಘಟನೆ ನಡೆದಿದೆ. ಚಳ್ಳಕೆರೆ ಮೂಲದ ಪ್ರೇಮಾ ಕಾಲೇಜು ಕಟ್ಟಡದಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಘಟನೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಈ ಸಂಬಂಧ ಚಿತ್ರದುರ್ಗದ ಬಡಾವಣೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಈ ಕುರಿತು ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q
ಪಾವಗಡ: ಹೋಬಳಿಯ ಶಕ್ತಿಸ್ಥಳವಾಗಿರುವಂತಹ ನಾಡಕಚೇರಿಗೆ ತರಲು ಸೂಕ್ತ ರಸ್ತೆ ಇಲ್ಲದಂತಾಗಿದೆ . ವೈ ಎನ್ ಹೊಸಕೋಟೆ ಹೋಬಳಿಯ ನಾಡಕಚೇರಿ ಬಳಿಯ ರಸ್ತೆ ಕೆಸರು ಗದ್ದೆಯಂತಾಗಿದೆ. ಇದೇ ರಸ್ತೆಯಲ್ಲಿ ಸಾರ್ವಜನಿಕರು ಸಂಚರಿಸುವ ದುಸ್ಥಿತಿ ಇದೆ. ನಾಡಕಚೇರಿ ಪ್ರಾರಂಭವಾಗಿ ಮೂರು ವರ್ಷಗಳು ಕಳೆದರೂ ಕಾಂಪೌಂಡ್ ನಿರ್ಮಿಸಿಲ್ಲ , ಕಚೇರಿಗೆ ಹೋಗಲು ದಾರಿ ಇಲ್ಲ. ಜೊತೆಗೆ ನಾಡಕಚೇರಿ ಇದೆ ಎನ್ನುವ ಸೂಚನಾ ಫಲಕವು ಸಹ ಇಲ್ಲದಿರುವುದು ವಿಪರ್ಯಾಸವೇ ಸರಿ. ಇದೊಂದೇ ಅಲ್ಲದೆ ನಾಡ ಕಚೇರಿಯಲ್ಲಿ ಇರಬೇಕಾದಂತಹ ಮೂಲ ಸೌಕರ್ಯಗಳು ಇಲ್ಲದಿರುವುದು ಇಲ್ಲಿನ ಆಡಳಿತ ವೈಖರಿಗಿಡಿದ ಕೈಗನ್ನಡಿಯಾಗಿದೆ, ಸಂಬಂಧಪಟ್ಟ ಅಧಿಕಾರಿಗಳಿಗೆ ಪ್ರಗತಿಪರರು ಹಲವು ಬಾರಿ ಮನವಿ ಮಾಡಿದರು ಸಹ ಯಾವುದೇ ಗಮನಹರಿಸಿಲ್ಲ ಎನ್ನುವ ಆರೋಪ ವ್ಯಕ್ತವಾಗಿದೆ. ವರದಿ: ನಂದೀಶ್ ನಾಯ್ಕ, ಪಾವಗಡ ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q
ತುಮಕೂರು: ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯು 2024-25ನೇ ಸಾಲಿಗೆ ಪರಿಶಿಷ್ಟ ಜಾತಿಯ ವಿಶೇಷ ಘಟಕ ಯೋಜನೆಯಡಿ ಪರಿಶಿಷ್ಟ ಜಾತಿಗೆ ಸೇರಿದ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನದಲ್ಲಿ ಪದವಿ/ ಸ್ನಾತಕೋತ್ತರ ಪದವಿ ಹೊಂದಿರುವ ಇಬ್ಬರು ಅಭ್ಯರ್ಥಿಗಳಿಗೆ ತುಮಕೂರು ಜಿಲ್ಲಾ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಕಚೇರಿಯಲ್ಲಿ ಒಂದು ವರ್ಷದ ಅವಧಿಗೆ ಅಪ್ರೆಂಟಿಸ್ ತರಬೇತಿ ನೀಡಲು ಅರ್ಹರಿಂದ ಅರ್ಜಿ ಆಹ್ವಾನಿಸಿದೆ. ಈ ತರಬೇತಿಯು 2025ನೇ ದಿನದರ್ಶಿ(ಕ್ಯಾಲೆಂಡರ್)ಯ ಜನವರಿ ಮಾಹೆಯಿಂದ ಪ್ರಾರಂಭಗೊಂಡು ಡಿಸೆಂಬರ್ 2025ಕ್ಕೆ ಕೊನೆಗೊಳ್ಳಲಿದೆ. ರಾಜ್ಯದಲ್ಲಿ ಕಾನೂನಾತ್ಮಕವಾಗಿ ಸ್ಥಾಪಿತಗೊಂಡ ವಿಶ್ವವಿದ್ಯಾನಿಲಯದಿಂದ ಪತ್ರಿಕೋದ್ಯಮದಲ್ಲಿ ಪದವಿ/ಸ್ನಾತಕೋತ್ತರ ಪದವಿ ಪಡೆದ, ಕಂಪ್ಯೂಟರ್ ಜ್ಞಾನ ಇರುವ, ಕನ್ನಡ ಭಾಷೆ ಬಳಕೆಯಲ್ಲಿ ಪ್ರಬುದ್ಧತೆ ಇರುವ ಅಭ್ಯರ್ಥಿಗಳು ಮಾತ್ರ ಅರ್ಜಿ ಸಲ್ಲಿಸಬಹುದಾಗಿದೆ. ಪರಿಶಿಷ್ಟ ಜಾತಿಯ ಇಬ್ಬರು ಅಭ್ಯರ್ಥಿಗಳನ್ನು ಮೆರಿಟ್ ಆಧಾರದ ಮೇಲೆ ಸಂದರ್ಶನದ ಮೂಲಕ ತರಬೇತಿಗೆ ಆಯ್ಕೆ ಮಾಡಿಕೊಳ್ಳಲಾಗುವುದು. ಅಭ್ಯರ್ಥಿಗಳ ವಯಸ್ಸು ಅರ್ಜಿ ಸಲ್ಲಿಸಲು ನಿಗಧಿಪಡಿಸಿದ ಕೊನೆಯ ದಿನಾಂಕದಂದು 35 ವರ್ಷ ಮೀರಿರಬಾರದು. ಅರ್ಜಿ ಲಕೋಟೆಯ ಮೇಲೆ ಕಡ್ಡಾಯವಾಗಿ “ವಿಶೇಷ ಘಟಕ…
ತುಮಕೂರು: ಮಧುಗಿರಿ ಅಬಕಾರಿ ವಲಯಕ್ಕೆ ಸಂಬಂಧಿಸಿದಂತೆ 29ನೇ ತಾರೀಕು ದೂರು ದಾಖಲಾಗಿದ್ದು, ಮಧುಗಿರಿ ವಲಯ ಅಬಕಾರಿ ನಿರೀಕ್ಷಕರ ಕಚೇರಿಯಲ್ಲಿ ಕಂಪ್ಯೂಟರ್ ಆಪರೇಟರ್ ಆಗಿ ಕಾರ್ಯ ನಿರ್ವಹಿಸುತ್ತಿರುವ ಪದ್ಮ ಎಂಬ ಮಹಿಳೆಯನ್ನು ಕಳೆದ 4 ವರ್ಷದಿಂದ ಅನಧಿಕೃತವಾಗಿ ಕೆಲಸಕ್ಕೆ ನೇಮಿಸಿಕೊಂಡು ಸರ್ಕಾರಿ ನಿಯಮಗಳನ್ನು ಗಾಳಿಗೆ ತೂರಿ ಕರ್ತವ್ಯ ಲೋಪ ಎಸಗಲಾಗಿದೆ ಎಂದು ದೂರಿನಲ್ಲಿ ತಿಳಿಸಲಾಗಿದೆ. ಸಾಮಾಜಿಕ ಹೋರಾಟಗಾರ ಮಹೇಶ್ ಅವರು ಈ ದೂರನ್ನು ನೀಡಿದ್ದಾರೆ. 25–09–24 ರಂದು ಬೆಂಗಳೂರು ಅಬಕಾರಿ ಕಛೇರಿಗಳಲ್ಲಿ ಲೋಕಾಯುಕ್ತ ನ್ಯಾಯಮೂರ್ತಿ ಬಿ.ಎಸ್. ಪಟೇಲ್ ಮತ್ತು ಉಪಲೋಕಯುಕ್ತ ಬಿ.ವೀರಪ್ಪ ರವರು ನಡೆಸಿದ ಕಾರ್ಯಾಚರಣೆ ವೇಳೆ ಅಬಕಾರಿ ನಿರೀಕ್ಷಕರು ಅನಧಿಕೃತವಾಗಿ ಖಾಸಗಿ ವ್ಯಕ್ತಿಗಳನ್ನು ನೇಮಿಸಿಕೊಂಡು ವೇತನ ನೀಡುತ್ತಿರುವುದು ಬೆಳಕಿಗೆ ಬಂದಿದೆ. ಇದೇ ರೀತಿಯಲ್ಲಿಯೇ ಮಧುಗಿರಿ ಅಬಕಾರಿ ಕಛೇರಿಯಲ್ಲಿ ನಡೆದಿರುತ್ತದೆ ಎಂದು ತುಮಕೂರು ಅಬಕಾರಿ ಉಪ ಆಯುಕ್ತರಿಗೆ ನೀಡಿರುವ ದೂರಿನಲ್ಲಿ ಅವರು ತಿಳಿಸಿದ್ದು, ಈ ಸಂಬಂಧ ಸರ್ಕಾರಿ ನಿಯಮಗಳನ್ನು ಗಾಳಿಗೆ ತೂರಿ ಕರ್ತವ್ಯ ನಿರ್ವಹಿಸುತ್ತಿರುವ ಅಧಿಕಾರಿಗಳ ವಿರುದ್ಧ ಕಾನೂನು ಕ್ರಮಜರುಗಿಸಿ ಅಮಾನತು ಮಾಡುವಂತೆ…
ವೈ.ಎನ್.ಹೊಸಕೋಟೆ : ಹೋಬಳಿಯ ಹನುಮಂತನಹಳ್ಳಿ ಗ್ರಾಮದ ಬಡಗಿ ತಿಮ್ಮರಾಯಪ್ಪರವರ ಮನೆಯಲ್ಲಿ ಬುಕ್ಕರಾಯರ ಕಾಲಕ್ಕೆ ಸಂಬಂದಿಸಿದ ತಾಮ್ರ ಶಾಸನ ಪತ್ತೆಯಾಗಿದೆ. ಈ ಭಾಗದ ಇತಿಹಾಸ ಸಂಶೋಧಕ ಹೊ.ಮ.ನಾಗರಾಜು ಸ್ಥಳೀಯ ಜಾನಪದ ಕಲಾವಿದರಾದ ಟಿ.ಎ.ಶಿವಣ್ಣರ ಸಹಕಾರದಿಂದ ಶಾಸನವನ್ನು ಪತ್ತೆಹಚ್ಚಿದ್ದಾರೆ. ಅಷ್ಟವಧಾನಿ ಗುರುವೇಪಲ್ಲಿ ನರಸಿಂಹುಲು ರವರ ಸಹಕಾರದಿಂದ ಶಾಸನವನ್ನು ಓದಲಾಗಿದ್ದು, ಗೌರಿಬಿದನೂರು ತಾಲ್ಲೂಕಿನಲ್ಲಿರುವ ನಗರಗೆರೆ ಗ್ರಾಮದ ರಚನೆಯ ವಿಷಯ ಒಳಗೊಂಡಿದೆ ಎಂದಿದ್ದಾರೆ. ಶಾಸನ ಫಲಕವು 12 ಇಂಚು ಎತ್ತರ 6 ಇಂಚು ಅಗಲ ಅಳತೆಯನ್ನು ಹೊಂದಿದೆ. ದಪ್ಪದ ತಾಮ್ರದ ಹಲಗೆಯ ಎರಡು ಮುಖಗಳ ಮೇಲೆ ಶಾಸನವನ್ನು ಕೆತ್ತಲಾಗಿದ್ದು, ಒಟ್ಟು 80 ಸಾಲುಗಳಿವೆ. ಅಕ್ಷರಗಳು ಕನ್ನಡ ಲಿಪಿಯಾಗಿದ್ದು, ತೆಲುಗು ಭಾಷೆಯನ್ನು ಒಳಗೊಂಡ ಶಾಸನ ಇದಾಗಿದೆ. ಗ್ರಾಮಕ್ಕೆ ರಾಮದೇವರುಗಳು ದಯಮಾಡಿದಾಗ ಬರೆದ ರುಜುವು ಎಂದು ಶಾಸನದ ಪ್ರಾರಂಭದ ಸಾಲುಗಳಲ್ಲಿ ತಿಳಿಸಲಾಗಿದೆ. ಆದರೆ ಶಾಸನದಲ್ಲಿ ಶಾಸನ ರಚನಾ ಕಾಲ ಲಭ್ಯವಿರುವುದಿಲ್ಲ. ನಿಡಗಲ್ಲು, ಹೊಸಕೋಟೆ ಹರತಿ ಪಾಳೇಗಾರರ ಮೂಲಪುರುಷನಾದ ಆನೆಗೊಂದಿಯ ತಿಪ್ಪನಾಯಕನು ಶಾಲಿ ಶಕ 1157 ರಲ್ಲಿ ಬಹದ್ದೂರ್ ಮಲ್ಲಿಕನ ಮೇಲೆ…
ತುಮಕೂರು: ರಾಜ್ಯ ಉಪಲೋಕಾಯುಕ್ತ ಗೌರವಾನ್ವಿತ ನ್ಯಾಯಮೂರ್ತಿ ಬಿ.ವೀರಪ್ಪ ಅವರ ನೇತೃತ್ವದಲ್ಲಿ ಅಕ್ಟೋಬರ್ 18ರಂದು ಬೆಳಿಗ್ಗೆ 10 ರಿಂದ ಮಧ್ಯಾಹ್ನ 1:30 ಹಾಗೂ ಮ.2:30 ರಿಂದ ಸಂಜೆ 5 ಗಂಟೆಯವರೆಗೆ ನಗರದ ಡಾ.ಗುಬ್ಬಿ ವೀರಣ್ಣ ಕಲಾ ಕ್ಷೇತ್ರದಲ್ಲಿ ಜಿಲ್ಲಾ ವ್ಯಾಪ್ತಿಯ ಸಾರ್ವಜನಿಕ ಕುಂದು–ಕೊರತೆ ಅಹವಾಲುಗಳನ್ನು ಸ್ವೀಕರಿಸಲಿದ್ದು, ದೂರು ವಿಚಾರಣೆ ಹಾಗೂ ಪ್ರಕರಣಗಳ ವಿಲೇವಾರಿ ಸಭೆ ನಡೆಯಲಿದ್ದು, ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ತಮ್ಮ ಅಹವಾಲುಗಳನ್ನು ಸಲ್ಲಿಸಬಹುದಾಗಿದೆ ಎಂದು ಕರ್ನಾಟಕ ಲೋಕಾಯುಕ್ತ ಪೊಲೀಸ್ ಅಧೀಕ್ಷಕರ ಎ.ವಿ. ಲಕ್ಷ್ಮೀನಾರಾಯಣ ತಿಳಿಸಿದ್ದಾರೆ. ಕರ್ನಾಟಕ ರಾಜ್ಯ ಉಪ ಲೋಕಾಯುಕ್ತ ಗೌರವಾನ್ವಿತ ನ್ಯಾಯಮೂರ್ತಿ ಕೆ.ಎನ್. ಫಣೀಂದ್ರ ಹಾಗೂ ಉಪಲೋಕಾಯುಕ್ತ ಗೌರವಾನ್ವಿತ ನ್ಯಾಯಮೂರ್ತಿ ಬಿ. ವೀರಪ್ಪ ಅವರು ಸಭೆಯನ್ನು ಉದ್ಘಾಟಿಸುವರು. ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಅಧ್ಯಕ್ಷತೆ ವಹಿಸುವರು. ಮುಖ್ಯ ಅತಿಥಿಗಳಾಗಿ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷ ಬಿ.ಜಯಂತ ಕುಮಾರ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಜಿ.ಪ್ರಭು, ಪಾಲಿಕೆ ಆಯುಕ್ತ ಬಿ.ವಿ.ಅಶ್ವಿಜ, ಜಿಲ್ಲಾ…