Subscribe to Updates
Get the latest creative news from FooBar about art, design and business.
- ಸಿಎಂ ಡಿ.ಕೆ.ಶಿವಕುಮಾರ್, ಡಿಸಿಎಂ ಜಿ. ಪರಮೇಶ್ವರ್ ನಿವಾಸಕ್ಕೆ ಸಿದ್ಧಗಂಗಾ ಶ್ರೀ ಭೇಟಿ: ವಿಶೇಷ ಆಶೀರ್ವಾದ
- ನನಗೂ ಸಚಿವ ಸ್ಥಾನ ಸಿಗುವ ಭರವಸೆಯಿದೆ: ಮಾಜಿ ಸಚಿವ ಸಂತೋಷ್ ಲಾಡ್
- ಉಪಮುಖ್ಯಮಂತ್ರಿಯಾಗಿ ನೇಮಕಗೊಂಡಿರುವುದಕ್ಕೆ ನಾನು ಸಂಪೂರ್ಣ ತೃಪ್ತ: ಜಿ. ಪರಮೇಶ್ವರ
- ಡಿ.ಕೆ. ಶಿವಕುಮಾರ್ ಜೀವನದ ಮಾರ್ಗದರ್ಶಕ ಶಕ್ತಿ ‘ನೊಣವಿನಕೆರೆ ಅಜ್ಜಯ್ಯ’!
- ಕೆಪಿಸಿಸಿಗೆ ಬಿ.ಕೆ.ಹರಿಪ್ರಸಾದ್ ಹೊಸ ಸಾರಥಿ: ಹೈಕಮಾಂಡ್ ಮಹತ್ವದ ನಿರ್ಧಾರ
- ಸಿಎಂ ಕುರ್ಚಿ ನನ್ನದಲ್ಲ, ಅಧಿಕಾರವನ್ನು ಜನರ ಸೇವೆಗೆ ಮುಡಿಪಾಗಿಡುತ್ತೇನೆ: ಸಿಎಂ ಡಿ.ಕೆ.ಶಿವಕುಮಾರ್
- ಕರ್ನಾಟಕದ 25ನೇ ಮುಖ್ಯಮಂತ್ರಿಯಾಗಿ ಡಿ.ಕೆ.ಶಿವಕುಮಾರ್ ಪ್ರಮಾಣವಚನ ಸ್ವೀಕಾರ!
- ಸಾದರ ಸಮುದಾಯ ಭವನದಲ್ಲಿ ಸಪ್ತಗಿರಿ ಆಸ್ಪತ್ರೆ ವತಿಯಿಂದ ಬೃಹತ್ ಆರೋಗ್ಯ ತಪಾಸಣೆ ಮತ್ತು ಶಸ್ತ್ರ ಚಿಕಿತ್ಸಾ ಶಿಬಿರ
Author: admin
ತುಮಕೂರು: ಜಿಲ್ಲೆಯಾದ್ಯಂತ ಅಕ್ಟೋಬರ್ 21 ರಿಂದ ನವೆಂಬರ್ 20ರವರೆಗೆ ಹಸು, ಎಮ್ಮೆ, ಹಂದಿ ಸೇರಿ ಎಲ್ಲಾ ಜಾನುವಾರುಗಳಿಗೆ ಕಾಲು–ಬಾಯಿ ಜ್ವರ ಲಸಿಕೆ ನೀಡುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದ್ದು, ಪಶುಪಾಲಕರ ಮನೆ-ಮನೆಗೆ ಭೇಟಿ ನೀಡಿ ಲಸಿಕೆ ನೀಡಬೇಕೆಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಅಧಿಕಾರಿಗಳಿಗೆ ಸೂಚಿಸಿದರು. ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಬುಧವಾರ ಸಂಜೆ ಪೂರ್ವಭಾವಿ ಸಭೆ ನಡೆಸಿ ಮಾತನಾಡಿದ ಅವರು, ಜಿಲ್ಲೆಯಲ್ಲಿ 5 ಲಕ್ಷ ಜಾನುವಾರುಗಳಿದ್ದು, ಪಶುಪಾಲನಾ ಇಲಾಖಾ ಸಿಬ್ಬಂದಿ, ಹಾಲು ಉತ್ಪಾದಕ ಸಹಕಾರ ಸಂಘಗಳ ಸಿಬ್ಬಂದಿ, ಮೈತ್ರಿ ಕಾರ್ಯಕರ್ತರು ಹಾಗೂ ಪಶುಸಖಿಯರು ಮನೆ-ಮನೆಗೆ ಭೇಟಿ ನೀಡಿ ಜಾನುವಾರುಗಳಿಗೆ ಶೇ.100ರಷ್ಟು ಲಸಿಕೆ ನೀಡಬೇಕು ಎಂದು ತಿಳಿಸಿದರು. ಲಸಿಕೆ ನೀಡುವುದರಿಂದ ಜಾನುವಾರುಗಳಲ್ಲಿ ಕಂಡು ಬರುವ ಕಾಲುಬಾಯಿ ಜ್ವರವನ್ನು ನಿಯಂತ್ರಿಸಬಹುದು. ಈ ನಿಟ್ಟಿನಲ್ಲಿ ಲಸಿಕಾ ಕಾರ್ಯಕ್ರಮವನ್ನು ಸದುಪಯೋಗ ಪಡಿಸಿಕೊಳ್ಳುವಂತೆ ಎಲ್ಲಾ ರೈತರು, ಪಶುಪಾಲಕರು, ಜಾನುವಾರು ಸಾಕಾಣಿಕೆದಾರರಿಗೆ ಅರಿವು ಮೂಡಿಸಬೇಕು ಎಂದು ನಿರ್ದೇಶನ ನೀಡಿದರು. ಸಭೆಯಲ್ಲಿ ಪಶುಪಾಲನೆ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆಯ ಉಪ ನಿರ್ದೇಶಕರು (ಆಡಳಿತ) ಡಾ.ಗಿರೀಶ್ ಬಾಬು…
ತುಮಕೂರು: ಸರ್ಕಾರವು ತನ್ನ ಆಯವ್ಯಯದಲ್ಲಿ ಪರಿಶಿಷ್ಟ ಪಂಗಡ ಸಮುದಾಯಗಳ ಕಲ್ಯಾಣಕ್ಕಾಗಿ 11,447 ಕೋಟಿ ರೂ.ಗಳನ್ನು ಮೀಸಲಿಟ್ಟಿದೆ ಎಂದು ಗೃಹ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ.ಜಿ.ಪರಮೇಶ್ವರ್ ತಿಳಿಸಿದರು. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ಹಾಗೂ ಮಹಾ ನಗರ ಪಾಲಿಕೆ ಸಹಯೋಗದಲ್ಲಿ ನಗರದ ಬಾಲ ಭವನ ಸಭಾಂಗಣದಲ್ಲಿ ಗುರುವಾರ ನಡೆದ ಮಹರ್ಷಿ ವಾಲ್ಮೀಕಿ ಜಯಂತಿ ಕಾರ್ಯಕ್ರಮದ ಉದ್ಘಾಟನೆ ನೆರವೇರಿಸಿ ಮಾತನಾಡಿದ ಅವರು, ಪರಿಶಿಷ್ಟ ವರ್ಗಗಳ ಕಲ್ಯಾಣಕ್ಕಾಗಿ ಸರ್ಕಾರ ವಿವಿಧ ಯೋಜನೆಗಳನ್ನು ರೂಪಿಸಿದ್ದು, ಜಾತಿ ಗಣತಿ ಆಧಾರದ ಮೇಲೆ ಶೇಕಡಾ 3ರಷ್ಟಿದ್ದ ಮೀಸಲಾತಿಯನ್ನು ಶೇ. 7.5ಕ್ಕೆ ಹೆಚ್ಚಿಸಲಾಗಿದೆ. ಉದ್ಯೋಗ ಮತ್ತು ಶಿಕ್ಷಣಕ್ಕೆ ಮಾತ್ರ ಈ ಮೀಸಲಾತಿ ಅನ್ವಯವಾಗಲಿದೆ ಎಂದು ತಿಳಿಸಿದರು. ಸ್ವಾವಲಂಬಿ ಬದುಕು ನಡೆಸಲು ಪರಿಶಿಷ್ಟ ವರ್ಗದ ಸುಮಾರು 5,000 ಯುವಕ/ಯುವತಿಯರಿಗೆ ವಿವಿಧ ತರಬೇತಿ ನೀಡಲಾಗಿದೆಯಲ್ಲದೆ 74,367 ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ಧನ ನೀಡಲಾಗಿದೆ. ರಾಜ್ಯದಲ್ಲಿರುವ ಪರಿಶಿಷ್ಟ ಪಂಗಡಕ್ಕೆ ಸೇರಿದ 12 ಬುಡಕಟ್ಟು ಸಮುದಾಯದ 48,000 ಕುಟುಂಬಗಳಿಗೆ ಪೌಷ್ಟಿಕ ಆಹಾರ ಒದಗಿಸಲು…
ಸರಗೂರು: ದಾರ್ಶನಿಕ ಮಹಾಶಯರ ಜಯಂತಿಗಳ ಆಚರಣೆಯನ್ನು ಆಚರಿಸಲೆಂದೇ ಸರಕಾರ ನಿಗದಿತ ದಿನದಂದು ರಜಾ ಘೋಷಣೆ ಮಾಡಿ ಅನುವು ಮಾಡಿಕೊಡುತ್ತದೆ ಎಂದು ಪ.ಪಂ. ಮುಖ್ಯಾಧಿಕಾರಿ ಮಂಜುನಾಥ ತಿಳಿಸಿದರು. ತಾಲೂಕಿನ ಪಟ್ಟಣದ ಪ.ಪಂ. ಆವರಣದಲ್ಲಿ ಗುರುವಾರ ದಂದು ಮಹರ್ಷಿ ವಾಲ್ಮೀಕಿ ಜಯಂತಿಯನ್ನು ಸಂಭ್ರಮ ಸಡಗರದಿಂದ ಪೋಟೋಗೆ ಪುಷ್ಪಾರ್ಚನೆ ಸಲ್ಲಿಸಿ ನಂತರ ಮಾತನಾಡಿದರು. ಸ್ವಾತಂತ್ರ್ಯ ದಿನಾಚರಣೆ, ಗಾಂಧಿಜಯಂತಿ ಮೊದಲಾದ ರಾಷ್ಟ್ರೀಯ ಹಬ್ಬಗಳ ಹಾಗೆ ಇದು ಕೇವಲ ಸರಕಾರಿ ಆಚರಣೆ ಮಾತ್ರವಲ್ಲ, ಬದಲಾಗಿ ವಾಲ್ಮೀಕಿ, ಬೇಡ ಸಮುದಾಯದ ಮನೆಮನೆಯ ಹಬ್ಬವಾಗಿ ಸಮುದಾಯದೊಳಗೆ ಚಲಿಸುತ್ತದೆ. ಈ ಚಲನೆ ಕನಿಷ್ಠ ಒಂದು ತಿಂಗಳತನಕ ಜೀವಂತವಿರುತ್ತದೆ ಎಂದರು. ಆದ್ದರಿಂದ ಸದರಿ ದಿನಗಳಂದೇ ದಿನಾಚಾರಣೆಯನ್ನು ಆಚರಿಸುವುದು ಸೂಕ್ತವಾಗಿರುತ್ತದೆ. ಶ್ರೀ ಮಹರ್ಷಿ ವಾಲ್ಮೀಕಿ ರಚಿಸಿರುವಂತಹ ರಾಮಾಯಣದಂತಹ ಉತ್ತಮ ಕೊಡುಗೆಗಳನ್ನು ಅನುಸರಿಸಿದ್ದೇ ಆದಲ್ಲಿ, ಎಲ್ಲಾ ಸಮುದಾಯದವರು ಮುಂದೆ ಬರಲು ಅನುಕೂಲಕವಾಗಲಿದೆ ಎಂದು ತಿಳಿಸಿದರು. ಪಪಂ ಅಧ್ಯಕ್ಷೆ ರಾಧಿಕಾ ಶ್ರೀನಾಥ್, ಶ್ರೀನಿವಾಸ.ಮಾತನಾಡಿದರು. ಈ ಸಂದರ್ಭದಲ್ಲಿ ಪಪಂ ಉಪಾಧ್ಯಕ್ಷ ಶಿವಕುಮಾರ್, ಸದಸ್ಯರು ವಿನಾಯಕ ಪ್ರಸಾದ್,ಉಮರಾಮಚಂದ್ರ, ಚೆಲುವ ಕೃಷ್ಣ,ನೂರಳಾಸ್ವಾಮಿ,ಸಣ್ಣತಾಯಮ್ಮ, ದಿವ್ಯ…
ತುಮಕೂರು: ಹುಟ್ಟುಹಬ್ಬದ ಸಂದರ್ಭದಲ್ಲಿ ತಲ್ವಾರ್ ನಿಂದ ಕೇಕ್ ಕತ್ತರಿಸಿ ನಡುರಸ್ತೆಯಲ್ಲಿ ಬೀದಿಯ ವಾತಾವರಣ ಸೃಷ್ಟಿ ಮಾಡಿದ್ದ ಆರೋಪಿ ಸೈಯದ್ ಶರೂಫ್ ಎಂಬಾತನನ್ನು ತುಮಕೂರು ಪೊಲೀಸರು ಬಂಧಿಸಿದ್ದಾರೆ. ಅಕ್ಟೋಬರ್ 12ರಂದು ರಾತ್ರಿ 10:30ರ ಸಂದರ್ಭದಲ್ಲಿ ಗುಬ್ಬಿ ಪಟ್ಟಣದ ಮಧ್ಯಭಾಗದಲ್ಲಿ ಸಾರ್ವಜನಿಕರ ಸಂಚಾರಕ್ಕೆ ತಡೆಯೊಡ್ಡಿ ರಸ್ತೆ ಮಧ್ಯದಲ್ಲಿ ತಲ್ವಾರ್ನಿಂದ ಕೇಕ್ ಕತ್ತರಿಸಿ ತನ್ನ ಸಹಚರರೊಂದಿಗೆ ಕೇಕೆ ಹಾಕಿದ್ದನು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296
ಕಾರವಾರ: ಶ್ರೀ ಮಹರ್ಷಿ ವಾಲ್ಮೀಕಿ ಅವರು ತಾವು ರಚಿಸಿದ ರಾಮಾಯಣ ಮಹಾಕಾವ್ಯದಲ್ಲಿ ಧರ್ಮ, ಸಾಹಿತ್ಯ, ಪರಿಸರ ರಕ್ಷಣೆ, ಮಹಿಳೆಯರಿಗೆ ಗೌರವ ನೀಡುವುದು ಸೇರಿದಂತೆ ಹಲವು ಮಾನವೀಯ ಮೌಲ್ಯಗಳಿಗೆ ಮಹತ್ವ ನೀಡಿದ್ದಾರೆ ಎಂದು ಜಿಲ್ಲಾಧಿಕಾರಿ ಕೆ.ಲಕ್ಷ್ಮೀಪ್ರಿಯಾ ಹೇಳಿದರು. ಅವರು ಗುರುವಾರ, ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ನಗರಸಭೆ ಇವರ ಸಂಯುಕ್ತ ಆಶ್ರಯದಲ್ಲಿ ಏರ್ಪಡಿಸಿದ್ದ ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ನಾರದ ಮುನಿಗಳಿಂದ ಪರಿವರ್ತನೆಗೊಂಡ ವಾಲ್ಮೀಕಿ ಅವರು ರಾಮಾಯಣ ಮಹಾಕಾವ್ಯವನ್ನು ರಚಿದರು. ಎಲ್ಲರೂ ಜೀವನದಲ್ಲಿ ಸತ್ಯದ ಪರವಾಗಿ ನಿಂತುಕೊಂಡಾಗ ಮಾತ್ರ ಭವಿಷ್ಯದಲ್ಲಿ ಮುಂದೆ ಬರಲು ಸಾಧ್ಯವಿದೆ. ಸಾಧನೆಯ ಹಾದಿಗೆ ಕಷ್ಟ ಕಾರ್ಪಣ್ಯಗಳು ಅಡ್ಡಿಯಾಗಲಿದ್ದು, ಅವುಗಳನ್ನು ಎದುರಿಸಿ ಪ್ರಾಮಾಣಿಕವಾಗಿ ಪ್ರಯತ್ನ ಮಾಡಿದಲ್ಲಿ ಯಶಸ್ಸಿನ ಪ್ರತಿಫಲ ದೊರೆಯಲಿದೆ ಎಂಬುದನ್ನು ರಾಮಾಯಣದಲ್ಲಿ ನೋಡಬಹುದಾಗಿದೆ ಎಂದು ಹೇಳಿದರು. ರಾಮಾಯಣದಲ್ಲಿ ಕೇವಲ ಮನುಷ್ಯರಲ್ಲದೇ ಪ್ರಾಣಿ, ಪಕ್ಷಿ, ಪರಿಸರದ ಬಗ್ಗೆ ಬರೆಯಲಾಗಿದೆ.…
ಪಾವಗಡ: ತಾಲ್ಲೂಕಿನ ವೈ.ಎನ್.ಹೊಸಕೋಟೆ ಹೋಬಳಿ ಕೇಂದ್ರದಲ್ಲಿರುವ ಶತಮಾನ ಕಂಡ ಸರ್ಕಾರಿ ಬಾಲಕರ ಪಾಠಶಾಲೆಯಲ್ಲಿ ಮಹರ್ಷಿ ವಾಲ್ಮೀಕಿ ಜಯಂತೋತ್ಸವವನ್ನು ಆಚರಣೆ ಮಾಡಲಾಯಿತು. ಇದೇ ಸಂದರ್ಭದಲ್ಲಿ ಶಾಲೆಯ ಮುಖ್ಯ ಶಿಕ್ಷಕರಾದ ಐ.ಎ.ನಾರಾಯಣಪ್ಪ, ದೈಹಿಕ ಶಿಕ್ಷಕರಾದ ಮಾರಪ್ಪ, ಶಿಕ್ಷಕಿಯರಾದ ನಿರ್ಮಲಾ, ಹೇಮಲತಾ, ಶ್ರೀದೇವಿ, ಅತಿಥಿ ಶಿಕ್ಷಕಿ ಶಿಲ್ಪ, ವಿದ್ಯಾರ್ಥಿಗಳು ಹಾಗೂ ಅಡುಗೆ ಸಿಬ್ಬಂದಿ ಹಾಜರಿದ್ದರು. ವರದಿ: ನಂದೀಶ್ ನಾಯ್ಕ, ಪಾವಗಡ ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296
ಮನತುಂಬಿ ಹಾಡುವೆನು…! ಮಾನವ ತನ್ನ ಭಾವನೆಯನ್ನು ಅಭಿವ್ಯಕ್ತ ಪಡಿಸುವ ಅಮೂಲ್ಯ ಮಾಧ್ಯಮವೇ ಕಲೆ, ಕಲೆ ನಮ್ಮ ದೇಹ ಮನಸುಗಳ ಎರಡನ್ನು ಸಂಸ್ಕರಿಸಿ ಬದುಕನ್ನು ರೂಪಿಸುತ್ತದೆ. ಪ್ರಕೃತಿ ನಾನಾ ಕಲೆಗಳ ಮೂಲ ಕಲೆ ಕಲಾವಿದರು, ಬದುಕಿನ ಅನರ್ಘ್ಯ ರತ್ನಗಳು ಕಲೆ ಕಲಾವಿದರನ್ನು ಗುರುತಿಸಿ ಪ್ರೋತ್ಸಾಹಿಸುವ ದೊಡ್ಡ ಮನಸ್ಸು ನಮ್ಮಲ್ಲಿರಬೇಕು ಅದೇ ಭಕ್ತಿರಸ ಗಾನಸುಧ ಗಾಯನ. ವಲಚಿ ನವರಾಗ ಮಾಲೀಕಾವರಣ ಆದಿತಾಳ ಪಟ್ಟಣಂ ಸುಬ್ರಹ್ಮಣ್ಯ ಅಯ್ಯರ್ ರಚನೆಯಲ್ಲಿ ಚೆನ್ನಾಗಿ ಮೂಡಿ ಬಂತು. ವಾತಾಪಿ ಗಣಪತಿo ಆದಿತಾಳ ಹಂಸಧ್ವನಿ ರಾಗ ಮುತ್ತುಸ್ವಾಮಿ ದೀಕ್ಷಿತರ ರಚನೆಯ ಅರ್ಥಗರ್ಭಿತ ಸಾಹಿತ್ಯ ಅಷ್ಟೇ ಮಧುರವಾದ ರಾಗ ಸಂಯೋಜನೆ ಯಲ್ಲಿ ಮೂಡಿಬಂತು. ಸರಸ್ವತಿ ನಮೋಸ್ತುತೆ ರೂಪಕ ತಾಳ ಸರಸ್ವತಿ ರಾಗ ಜನನಿ ಜನನಿ ಆದಿತಾಳ ರೇವತಿ ರಾಗ ಹಾಡುಗಳನ್ನು ಸವಿತಾ ಕೋಡಂದೂರ್ ಮತ್ತು ಸಿಂಚನ ಲಕ್ಷ್ಮಿ ಕೊಡಂದೂರು ಅಮ್ಮ ಮಗಳ ದ್ವಂದ್ವ ಹಾಡುಗಾರಿಕೆ ಸುಶ್ರವ್ಯವಾಗಿ ಮೂಡಿ ಬಂತು. ಐಗಿರಿ ನಂದಿನಿ ,ಕುರೈ ಒಂಡ್ರುಂ ಶಿವರಂಜಿನಿ ರಾಗವನ್ನು ಸಿಂಚನ ಲಕ್ಷ್ಮಿ ಕೋಡಂದೂರು ಹಾಡಿ…
ತುಮಕೂರು: ಜಿಲ್ಲೆಯ ಕುಣಿಗಲ್ ತಾಲ್ಲೂಕು ಮಾರ್ಕೋನಹಳ್ಳಿ ಜಲಾಶಯದ ಜಲಾನಯನ ಪ್ರದೇಶದಲ್ಲಿ ಹೆಚ್ಚು ಮಳೆಯಾಗುತ್ತಿದ್ದು, ಜಲಾಶಯವು ಭರ್ತಿಯಾಗಿರುವ ಹಿನ್ನೆಲೆಯಲ್ಲಿ ಜಲಾಶಯದಿಂದ ಶಿಂಷಾ ನದಿಗೆ ನೀರನ್ನು ಬಿಡುವ ಸಾಧ್ಯತೆ ಇದೆ. ಯಾವುದೇ ಸಮಯದಲ್ಲಿ ಒಳ ಹರಿವಿಗೆ ತಕ್ಕಂತೆ ಜಲಾಶಯದಿಂದ ಶಿಂಷಾ ನದಿಗೆ ನೀರನ್ನು ಹರಿಸಲಾಗುವುದು. ಜಲಾಶಯದ ಒಳಹರಿವು ಗಣನೀಯ ಪ್ರಮಾಣದಲ್ಲಿ ಏರಿಕೆ ಆಗುವ ಸಂಭವವಿದ್ದು ಮಾರ್ಕೋನಹಳ್ಳಿ ಜಲಾಶಯದ ಕೆಳಭಾಗದ ಹಾಗೂ ನದಿ ಪಾತ್ರದ ಕುಣಿಗಲ್ ತಾಲ್ಲೂಕಿನ ಮಾರ್ಕೋನಹಳ್ಳಿ, ಕಾಡಶೆಟ್ಟಿಹಳ್ಳಿ, ಬಿಸಿನೆಲೆ, ತೊರೆಹಳ್ಳಿ, ಶಾನುಭಾಗೋನಹಳ್ಳಿ, ಕಿರಂಗೂರು, ಪಡುವಗೆರೆ, ಬೆಟ್ಟೆಹಳ್ಳಿ, ದೊಡ್ಡಕಲ್ಲಹಳ್ಳಿ, ವಳಗೆರಪುರ, 14ನೇ ಮೈಲಿ ಬಂಗಲಿ, ಚಂದನಹಳ್ಳಿ, ಅಂಚಿಪುರ, ಕೀಲಾರ, ಉಂಗ್ರ, ತೊರೆಬೊಮ್ಮನಹಳ್ಳಿ, ಕೊಡವತ್ತಿ, ಹನುಮಂತನಗರ ಹಾಗೂ ನಾಗಮಂಗಲ ತಾಲ್ಲೂಕಿನ ಮಲ್ಲನಕೊಪ್ಪಲು, ದೊಡ್ಡ ಉಪ್ಪಳ, ತಿಗಳರಕೊಪ್ಪಲು, ಬಳ್ಳೆಕೆರೆ, ಹದಮಗೆರೆ, ಅರಕೆರೆ, ಚೊಟ್ಟನಹಳ್ಳಿ, ಕೂಡಗಬಾಳು, ಕೌಡ್ಲೆ, ಯಡವನಹಳ್ಳಿ, ಬೆಕ್ಕಳಲೆ, ಪಟೇಲನಕೊಪ್ಪಲು, ಕಿರಂಗೂರು ಹಾಗೂ ಇನ್ನಿತರೆ ಶಿಂಷಾ ನದಿ ಪಾತ್ರದ ಗ್ರಾಮಗಳ ಸಾರ್ವಜನಿಕರು ತಮ್ಮ ಜಾನುವಾರುಗಳೊಂದಿಗೆ ಸುರಕ್ಷಿತ ಸ್ಥಳಗಳಿಗೆ ತೆರಳಬೇಕು ಎಂದು ಕಾವೇರಿ ನೀರಾವರಿ ನಿಗಮ ನಿಯಮಿತ ಹೇಮಾವತಿ…
ತುಮಕೂರು: ಜಿಲ್ಲಾಡಳಿತದ ವತಿಯಿಂದ ಮೊದಲ ಬಾರಿಗೆ ಆಚರಿಸಲಾದ ತುಮಕೂರು ದಸರಾ ಉತ್ಸವದ ಜಂಬೂ ಸವಾರಿ ಮೆರವಣಿಗೆಯಲ್ಲಿ ಅಂಬಾರಿ ಹೊತ್ತಿದ್ದ ಕರಿಬಸವೇಶ್ವರ ಮಠದ ಲಕ್ಷ್ಮೀ ಆನೆಯ ಮಾವುತ ಸಲೀಮ್ ಬಾಷ ಹಾಗೂ ಜಂಬೂ ಸವಾರಿಯಲ್ಲಿ ಪಾಲ್ಗೊಂಡಿದ್ದ ನೊಣವಿನಕೆರೆ ಮಠದ ಲಕ್ಷ್ಮೀ ಆನೆಯ ಮಾವುತ ಗಂಗಾಧರ್ ಅವರನ್ನು ಜಿಲ್ಲಾಡಳಿತದ ವತಿಯಿಂದ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಬುಧವಾರ ಸನ್ಮಾನಿಸಲಾಯಿತು. ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಶುಭ ಕಲ್ಯಾಣ್, ಉಪ ಅರಣ್ಯ ಸಂರಕ್ಷಣಾಧಿಕಾರಿ ಅನುಪಮ, ಉಪ ವಲಯ ಅರಣ್ಯಾಧಿಕಾರಿ ರಬ್ಬಾನಿ, ವಲಯ ಅರಣ್ಯಾಧಿಕಾರಿ ನಮಿತ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296
ತುಮಕೂರು: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಶಾಲಾ ಶಿಕ್ಷಣ ಇಲಾಖೆ ತುಮಕೂರು(ದ) ಜಿಲ್ಲೆ ಹಾಗೂ ಸಿದ್ಧಗಂಗಾ ಮಠದ ಸಿದ್ಧಗಂಗಾ ವಿದ್ಯಾಸಂಸ್ಥೆಯ ಸಹಯೋಗದಲ್ಲಿ ಅಕ್ಟೋಬರ್ 17 ರಿಂದ 19ರವರೆಗೆ ತುಮಕೂರಿನ ಸಿದ್ಧಗಂಗಾ ಮಠದ ಶ್ರೀ ಸಿದ್ಧಗಂಗಾ ಸನಿವಾಸ ಪ್ರೌಢಶಾಲೆಯಲ್ಲಿ ರಾಜ್ಯ ಮಟ್ಟದ ಬ್ಯಾಂಡ್ ವಾದನ ಸ್ಪರ್ಧೆಯನ್ನು ಆಯೋಜಿಸಲಾಗಿದೆ ಎಂದು ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕ ಹೆಚ್.ಕೆ. ಮನಮೋಹನ್ ತಿಳಿಸಿದ್ದಾರೆ. ಈ ಸ್ಪರ್ಧೆಗೆ ರಾಜ್ಯದ ವಿವಿಧ ಜಿಲ್ಲೆಗಳಿಂದ ಸುಮಾರು 900 ಸ್ಪರ್ಧಾಳುಗಳನ್ನೊಳಗೊಂಡ 30 ತಂಡಗಳು ಭಾಗವಹಿಸಲಿದ್ದು, ಅಕ್ಟೋಬರ್ 17ರಂದು ಸಂಜೆ 4:30 ಗಂಟೆಗೆ ತುಮಕೂರಿನ ಶ್ರೀ ಸಿದ್ಧಗಂಗಾ ಮಠದಲ್ಲಿ ಸಹಕಾರ ಸಚಿವ ಕೆ.ಎನ್. ರಾಜಣ್ಣ ಅವರು ಸ್ಪರ್ಧೆಯನ್ನು ಉದ್ಘಾಟಿಸುವರು. ಶ್ರೀ ಸಿದ್ಧಗಂಗಾ ಮಠದ ಅಧ್ಯಕ್ಷರಾದ ಶ್ರೀ ಮ.ನಿ.ಪ್ರ.ಸ್ವ. ಪರಮಪೂಜ್ಯ ಶ್ರೀ ಸಿದ್ಧಲಿಂಗಮಹಾಸ್ವಾಮಿಗಳ ದಿವ್ಯ ಸಾನಿಧ್ಯವಹಿಸುವರು. ರೈಲ್ವೆ ಮತ್ತು ಜಲಶಕ್ತಿ ರಾಜ್ಯ ಖಾತೆ ಸಚಿವ ವಿ. ಸೋಮಣ್ಣ ಘನ ಉಪಸ್ಥಿತಿಯಲ್ಲಿ ಗೃಹ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ: ಜಿ. ಪರಮೇಶ್ವರ ಧ್ವಜಾರೋಹಣ ನೆರವೇರಿಸುವರು. ನವದೆಹಲಿಯ…