Author: admin

ತುಮಕೂರು: ಜಿಲ್ಲೆಯ ತುಮಕೂರು ತಾಲ್ಲೂಕಿನ ಊರ್ಡಿಗೆರೆ ಹೋಬಳಿಯ ದುರ್ಗದಹಳ್ಳಿ ಗ್ರಾಮದಲ್ಲಿ ಚಿರತೆಯೊಂದು ಭೀಕರ ದಾಳಿ ನಡೆಸಿದ್ದು, ಬರೋಬ್ಬರಿ 20 ಕುರಿಗಳನ್ನು ಕೊಂದು ಹಾಕಿರುವ ಘಟನೆ ನಡೆದಿದೆ. ದುರ್ಗದಹಳ್ಳಿ ಗ್ರಾಮದ ಹೇಮಂತ್ ಎಂಬುವರಿಗೆ ಸೇರಿದ ತೋಟದ ಮನೆಯ ಕುರಿ ರೊಪ್ಪಕ್ಕೆ (ಕುರಿಗಳನ್ನು ಕಟ್ಟುವ ಜಾಗ) ಬುಧವಾರ ರಾತ್ರಿ ನುಗ್ಗಿದ ಚಿರತೆ ಈ ಸಂಹಾರ ನಡೆಸಿದೆ. ಹೇಮಂತ್ ಅವರು ಗುರುವಾರ ಬೆಳಿಗ್ಗೆ ಎಂದಿನಂತೆ ಕುರಿ ರೊಪ್ಪದ ಬಳಿ ಹೋದಾಗ, ಕುರಿಗಳು ರಕ್ತಸಿಕ್ತವಾಗಿ ಬಿದ್ದಿರುವುದನ್ನು ಕಂಡು ಬೆಚ್ಚಿಬಿದ್ದಿದ್ದಾರೆ. ಸಾಕು ಪ್ರಾಣಿಗಳ ಸಾವಿನಿಂದ ರೈತ ಹೇಮಂತ್ ಅವರಿಗೆ ಆರ್ಥಿಕವಾಗಿ ದೊಡ್ಡ ನಷ್ಟ ಉಂಟಾಗಿದೆ. ವಿಷಯ ತಿಳಿಯುತ್ತಿದ್ದಂತೆಯೇ ಅರಣ್ಯ ಇಲಾಖೆಯ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಭಾಗದಲ್ಲಿ ಈ ಹಿಂದೆ ಎಂದೂ ಚಿರತೆ ದಾಳಿ ನಡೆದ ಉದಾಹರಣೆಗಳಿರಲಿಲ್ಲ ಎಂದು ಸ್ಥಳೀಯರು ತಿಳಿಸಿದ್ದಾರೆ. ಮೊದಲ ಬಾರಿಗೆ ಇಂತಹ ಘಟನೆ ನಡೆದಿರುವುದರಿಂದ ಗ್ರಾಮಸ್ಥರು ತೀವ್ರ ಆತಂಕಕ್ಕೆ ಒಳಗಾಗಿದ್ದಾರೆ. ಈ ಕುರಿತು ಪ್ರತಿಕ್ರಿಯಿಸಿರುವ ವಲಯ ಅರಣ್ಯಾಧಿಕಾರಿ ನಮಿತಾ ಅವರು,…

Read More

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರ ಆಡಳಿತವು ಈ ವರ್ಷದ ಅಂತ್ಯಕ್ಕೆ ಮುಕ್ತಾಯವಾಗಲಿದ್ದು, ಮುಂದಿನ ವರ್ಷದಿಂದ ಅವರು ಪ್ರಧಾನಿ ಹುದ್ದೆಯಲ್ಲಿ ಮುಂದುವರಿಯುವುದಿಲ್ಲ ಎಂದು ಆಮ್ ಆದ್ಮಿ ಪಾರ್ಟಿ (ಎಎಪಿ) ನಾಯಕ ಅರವಿಂದ ಕೇಜ್ರಿವಾಲ್ ಹೇಳಿದ್ದಾರೆ. ಶಿವಸೇನಾ (ಯುಬಿಟಿ) ನಾಯಕ ಸಂಜಯ್ ರಾವತ್ ಅವರ ‘ಅನ್‌ ಲೈಕ್ಲಿ ಪ್ಯಾರಡೈಸ್’ ಪುಸ್ತಕ ಬಿಡುಗಡೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಕೇಜ್ರಿವಾಲ್ ಅವರ ರಾಜಕೀಯ ವಿಶ್ಲೇಷಣೆಯ ಪ್ರಕಾರ, ಇನ್ನು ಕೆಲವೇ ದಿನಗಳಲ್ಲಿ ಪ್ರಧಾನಿ ಮೋದಿ ಮತ್ತು ಅಮಿತ್ ಶಾ ಅವರು ತಮ್ಮ ಹುದ್ದೆಗಳಿಗೆ ರಾಜೀನಾಮೆ ನೀಡಲಿದ್ದಾರೆ. ಕೇಂದ್ರದ ಬಿಜೆಪಿ ನೇತೃತ್ವದ ಎನ್‌ ಡಿಎ ಸರ್ಕಾರದ ಪ್ರಾಬಲ್ಯ ಕುಸಿಯುತ್ತಿದೆ. ಸಾಮಾಜಿಕ ಜಾಲತಾಣಗಳಲ್ಲಿ ಸರ್ಕಾರದ ವಿರುದ್ಧ ಸಾರ್ವಜನಿಕರು ಬಹಿರಂಗವಾಗಿ ಅಸಮಾಧಾನ ವ್ಯಕ್ತಪಡಿಸುತ್ತಿದ್ದಾರೆ. ಈ ಹಿಂದೆ ಟೀಕೆ ಮಾಡಿದವರನ್ನು ಜೈಲಿಗೆ ಕಳುಹಿಸಲಾಗುತ್ತಿತ್ತು, ಆದರೆ ಈಗ ಪರಿಸ್ಥಿತಿ ಬದಲಾಗಿದೆ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ. ಬಿಜೆಪಿ ಚುನಾವಣೆಗಳಲ್ಲಿ ಗೆಲ್ಲುತ್ತಿರುವುದಕ್ಕೆ ಚುನಾವಣಾ ಆಯೋಗವೇ ಕಾರಣ ಎಂದು ಆರೋಪಿಸಿದ ಕೇಜ್ರಿವಾಲ್, ಮುಂಬರುವ ದಿನಗಳಲ್ಲಿ ಬಂಗಾಳ ಮತ್ತು ಉತ್ತರ…

Read More

ಬೀದರ್: ಆನ್‌ ಲೈನ್ ಗೇಮ್‌ ಗಳಲ್ಲಿ ಹಣ ಕಳೆದುಕೊಂಡು ಸಾಲದ ಸುಳಿಗೆ ಸಿಲುಕಿದ್ದ ವೈದ್ಯಕೀಯ ವಿದ್ಯಾರ್ಥಿಯೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಮನಕಲಕುವ ಘಟನೆ ಬೀದರ್‌ ನಲ್ಲಿ ನಡೆದಿದೆ. ನಗರದ ಬೀದರ್ ವೈದ್ಯಕೀಯ ವಿಜ್ಞಾನ ಸಂಸ್ಥೆಯ (ಬ್ರಿಮ್ಸ್) ಎಂಬಿಬಿಎಸ್ ಅಂತಿಮ ವರ್ಷದ ವಿದ್ಯಾರ್ಥಿ ಅನಿಷ್ಕಾರ್ ಚವಾಣ್ (21) ಆತ್ಮಹತ್ಯೆ ಮಾಡಿಕೊಂಡ ದುರ್ದೈವಿ. ಕಲಬುರಗಿ ಜಿಲ್ಲೆಯ ಚಿಂಚೋಳಿ ತಾಲ್ಲೂಕಿನ ಬಾಲತ್ಯಾ ತಾಂಡಾ ನಿವಾಸಿಯಾದ ಈತ, ಸೋಮವಾರ ತಡರಾತ್ರಿ ಹಾಸ್ಟೆಲ್ ಕೊಠಡಿಯ ಫ್ಯಾನಿಗೆ ನೇಣು ಬಿಗಿದುಕೊಂಡು ಪ್ರಾಣ ಕಳೆದುಕೊಂಡಿದ್ದಾನೆ. ಮಂಗಳವಾರ ಬೆಳಿಗ್ಗೆ ಈ ವಿಷಯ ಬೆಳಕಿಗೆ ಬಂದಿದೆ. ಪೊಲೀಸ್ ಮೂಲಗಳ ಪ್ರಕಾರ, ಅನಿಷ್ಕಾರ್ ಆನ್‌ ಲೈನ್ ಗೇಮಿಂಗ್ ಚಟಕ್ಕೆ ಬಿದ್ದಿದ್ದ ಎನ್ನಲಾಗಿದೆ. ಇತ್ತೀಚೆಗೆ ಆಟದಲ್ಲಿ ಸುಮಾರು 80 ಸಾವಿರ ರೂಪಾಯಿಗಳನ್ನು ಕಳೆದುಕೊಂಡಿದ್ದ ಎನ್ನಲಾಗಿದ್ದು, ಇದಕ್ಕಾಗಿ ಹಲವರಿಂದ ಸಾಲ ಮಾಡಿದ್ದ ಎನ್ನಲಾಗಿದೆ. ಸಾಲ ನೀಡಿದವರು ಹಣವನ್ನು ಹಿಂತಿರುಗಿಸುವಂತೆ ಒತ್ತಡ ಹೇರುತ್ತಿದ್ದರು. ಇದರಿಂದ ತೀವ್ರ ಮಾನಸಿಕ ಒತ್ತಡಕ್ಕೆ ಒಳಗಾಗಿದ್ದ ಅನಿಷ್ಕಾರ್, ಕೊನೆಗೆ ಸಾವಿನ ಹಾದಿ ಹಿಡಿದಿದ್ದಾನೆ ಎಂದು ಶಂಕಿಸಲಾಗಿದೆ. ಅನಿಷ್ಕಾರ್…

Read More

ಬೆಂಗಳೂರು: ರಾಜ್ಯದ ಶಾಲಾ ಮಕ್ಕಳಲ್ಲಿ ಹೆಚ್ಚುತ್ತಿರುವ ಮೊಬೈಲ್ ಫೋನ್ ಮತ್ತು ಸಾಮಾಜಿಕ ಜಾಲತಾಣಗಳ ಚಟವನ್ನು ನಿಯಂತ್ರಿಸಲು ಕರ್ನಾಟಕ ಸರ್ಕಾರ ಗಂಭೀರ ಕ್ರಮಕ್ಕೆ ಮುಂದಾಗಿದೆ. 16 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳು ಮೊಬೈಲ್ ಬಳಸುವುದನ್ನು ನಿರ್ಬಂಧಿಸಲು ಶೀಘ್ರದಲ್ಲೇ ಸಮಗ್ರ ಮಾರ್ಗಸೂಚಿಗಳನ್ನು ಹೊರಡಿಸಲಾಗುವುದು ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ. ವಿಧಾನಸಭೆಯಲ್ಲಿ ಈ ವಿಷಯದ ಕುರಿತು ಮಾತನಾಡಿದ ಸಚಿವರು, 16 ವರ್ಷದೊಳಗಿನ ಮಕ್ಕಳ ಮೊಬೈಲ್ ಬಳಕೆಯನ್ನು ನಿಯಂತ್ರಿಸಲು ಮುಂದಿನ ಅಧಿವೇಶನದಲ್ಲಿ ವಿಶೇಷ ಮಾರ್ಗಸೂಚಿಗಳನ್ನು ಮಂಡಿಸಲಾಗುವುದು  ಎಂದು ತಿಳಿಸಿದರು. ಮಕ್ಕಳಲ್ಲಿ ಮೊಬೈಲ್ ವ್ಯಸನ ಹೆಚ್ಚಾಗುತ್ತಿದ್ದು, ಇದು ಅವರ ಮಾನಸಿಕ ಆರೋಗ್ಯದ ಮೇಲೆ ಕೆಟ್ಟ ಪರಿಣಾಮ ಬೀರುತ್ತಿದೆ. ಕೆಲವು ಪ್ರಕರಣಗಳಲ್ಲಿ ಮಕ್ಕಳು ಆತ್ಮಹತ್ಯೆಯಂತಹ ಕಠಿಣ ನಿರ್ಧಾರಗಳಿಗೂ ಮುಂದಾಗುತ್ತಿರುವುದು ಆತಂಕಕಾರಿ ವಿಷಯವಾಗಿದೆ.  ಈ ನಿಯಮಗಳನ್ನು ರೂಪಿಸುವ ಮುನ್ನ ಇತರ ದೇಶಗಳಲ್ಲಿ ಜಾರಿಯಲ್ಲಿರುವ ಕಾನೂನುಗಳನ್ನು ಸರ್ಕಾರ ಅಧ್ಯಯನ ಮಾಡುತ್ತಿದೆ. ಅಂತರಾಷ್ಟ್ರೀಯ ಮಕ್ಕಳ ಸಂಘಟನೆಗಳ ಸಲಹೆಗಳನ್ನೂ ಪಡೆಯಲಾಗುತ್ತಿದೆ ಅಂತಾ ತಿಳಿಸಿದರು. ಈ ನಿಯಮಗಳನ್ನು ಜಾರಿಗೆ ತರುವ…

Read More

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೇ ಮುಂದಿನ ಎರಡು ವರ್ಷಗಳ ಕಾಲ ರಾಜ್ಯದ ಬಜೆಟ್ ಮಂಡಿಸಲಿದ್ದಾರೆ ಎಂದು ಸಚಿವ ಜಮೀರ್ ಅಹ್ಮದ್ ಖಾನ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಸೋಮವಾರ ವಿಧಾನಸಭೆಯಲ್ಲಿ 2026–27ನೇ ಸಾಲಿನ ಬಜೆಟ್ ಮೇಲಿನ ಚರ್ಚೆಯ ಸಂದರ್ಭದಲ್ಲಿ ಈ ಸ್ವಾರಸ್ಯಕರ ಬೆಳವಣಿಗೆ ನಡೆಯಿತು. ಚರ್ಚೆಯಲ್ಲಿ ಭಾಗವಹಿಸಿದ್ದ ಬಿಜೆಪಿ ಶಾಸಕ ವಿ. ಸುನೀಲ್ ಕುಮಾರ್, ಸಿದ್ದರಾಮಯ್ಯ ಅವರು ಈ ಬಾರಿಯ ಬಜೆಟ್‌ನಲ್ಲಿ ‘ಟ್ರೋಟಿಂಗ್ ಎಕನಾಮಿ’, ‘ಫಲಧಾರೆ’, ‘ಭಿಷತತ್ವ’ದಂತಹ ಕಠಿಣ ಹಾಗೂ ಹೊಸ ಪದಗಳನ್ನು ಬಳಸಿದ್ದಾರೆ. ಇವುಗಳನ್ನು ಅರ್ಥಮಾಡಿಕೊಳ್ಳಲು ನಮಗೆ ಶಬ್ದಕೋಶದ (Dictionary) ಅಗತ್ಯವಿದೆ ಎಂದು ವ್ಯಂಗ್ಯವಾಡಿದರು. ಮುಂದುವರಿದು ಮಾತನಾಡಿದ ಸುನೀಲ್ ಕುಮಾರ್, “ಮುಂದಿನ ಬಾರಿಯೂ ಸಿದ್ದರಾಮಯ್ಯ ಅವರೇ ಬಜೆಟ್ ಮಂಡಿಸುವುದಾದರೆ ನಮಗೆ ಒಂದು ಶಬ್ದಕೋಶವನ್ನೂ ನೀಡಿ” ಎಂದರು. ಈ ವೇಳೆ ಮಧ್ಯಪ್ರವೇಶಿಸಿದ ವಿರೋಧ ಪಕ್ಷದ ನಾಯಕ ಆರ್. ಅಶೋಕ್, ಈ ಹೊಸ ಪದಗಳಿಗೆ ಸಚಿವ ಜಮೀರ್ ಅವರ ಕೈಯಲ್ಲೇ ಅರ್ಥ ಹೇಳಿಸಿ ಎಂದು ಹಾಸ್ಯ ಮಾಡಿದರು. ತಮ್ಮ ಹೆಸರು ಪ್ರಸ್ತಾಪವಾಗುತ್ತಿದ್ದಂತೆ ಎಚ್ಚೆತ್ತ ಜಮೀರ್ ಅಹ್ಮದ್,…

Read More

ತುಮಕೂರು: ಪರಿಶಿಷ್ಟ ಜಾತಿಗಳ ಒಳಮೀಸಲಾತಿ ವಿಚಾರದಲ್ಲಿ ನ್ಯಾಯಮೂರ್ತಿ ನಾಗಮೋಹನ್ ದಾಸ್ ಅವರ ಆಯೋಗ ನೀಡಿರುವ ವರದಿ ಅವೈಜ್ಞಾನಿಕ, ಅಪೂರ್ಣ ಹಾಗೂ ಪಕ್ಷಪಾತದಿಂದ ಕೂಡಿದೆ ಅದನ್ನು ತಿರಸ್ಕರಿಸಿ ಮರು ಸಮೀಕ್ಷೆ ನಡೆಸಬೇಕೆಂದು ಆಗ್ರಹಿಸಿ ಮಾ. 25 ರಂದು ಉರಿಲಿಂಗ ಪೆದ್ದಿ ಮಠದ ಶ್ರೀ ಜ್ಞಾನಪ್ರಕಾಶ್ ಸ್ವಾಮೀಜಿ ನೇತೃತ್ವದಲ್ಲಿ ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಬೃಹತ್ ಪ್ರತಿಭಟನಾ ಸಮಾವೇಶವನ್ನು ಆಯೋಜಿಸಲಾಗಿದೆ ಎಂದು ಡಿಸಿಎಂಎಸ್ ಜಿಲ್ಲಾ ಸಂಚಾಲಕ ಭಾನು ಪ್ರಕಾಶ್ ಸಿ. ಹೇಳಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಾ. 12, 2026ರಂದು ಬೆಂಗಳೂರಿನ ಕರ್ನಾಟಕ ರಾಜ್ಯ ಛಲವಾದಿ ಮಹಾಸಭಾ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಒಳಮೀಸಲಾತಿ ವಿಷಯವಾಗಿ ವಿಸ್ತೃತ ಚರ್ಚೆ ನಡೆಸಲಾಗಿದೆ. ಒಳಮೀಸಲಾತಿ ಕುರಿತಂತೆ ನ್ಯಾಯಾಲಯ ತಡೆಯಾಜ್ಞೆ ಇರುವುದರ ಜೊತೆಗೆ ರೋಸ್ಟರ್ ಬಿಂದುಗಳ ವಿಷಯದಲ್ಲಿ ಗೊಂದಲ ಉಂಟಾಗಿದೆ ಎಂದು ಸಭೆಯಲ್ಲಿ ಅಭಿಪ್ರಾಯ ವ್ಯಕ್ತವಾಗಿದೆ. ಕೇಂದ್ರ ಸರ್ಕಾರವು ಶೇಕಡಾ 50ರಷ್ಟು ಮೀಸಲಾತಿಗೆ ಒಪ್ಪಿಗೆ ನೀಡುವವರೆಗೂ ಒಳಮೀಸಲಾತಿ ರಹಿತವಾಗಿ ಶೇಕಡಾ 15+3ರಷ್ಟು ಮೀಸಲಾತಿಯನ್ನು ಜಾರಿಗೊಳಿಸಿ ಫೆ. 27, 2026ರಂದು ಸರ್ಕಾರದ ಆದೇಶವನ್ನು…

Read More

ತುಮಕೂರು: ನಗರದ ಮರಳೂರು ದಿಣ್ಣೆ ಮೂರನೇ ಕ್ರಾಸ್‌ನಲ್ಲಿ ವಾಸಿಸುತ್ತಿರುವ ದಿವಂಗತ ಅಬ್ದುಲ್ ಬಾಬಾ ಅವರ ಕುಟುಂಬಕ್ಕೆ ರೆಸ್ಪಾನ್ಸಿವ್ ಕೇರ್ ಫೌಂಡೇಶನ್ ಹಾಗೂ ಕಾಂಗ್ರೆಸ್ ಮುಖಂಡ ಮತ್ತು ಸಮಾಜ ಸೇವಕ ಇಕ್ಬಾಲ್ ಅಹಮದ್ ಅವರ ಸಹಯೋಗದಲ್ಲಿ ದಿನಸಿ ಪೆಟ್ಟಿಗೆ ಅಂಗಡಿಯನ್ನು ವಿತರಿಸಲಾಯಿತು. ನಾಲ್ಕು ಹೆಣ್ಣುಮಕ್ಕಳನ್ನು ಪೋಷಿಸುತ್ತಿರುವ ವಿಧವೆ ತಾಯಿಗೆ ಸ್ವಯಂ ಉದ್ಯೋಗದ ಮೂಲಕ ಆರ್ಥಿಕ ನೆರವು ಒದಗಿಸುವ ಉದ್ದೇಶದಿಂದ ಈ ಸಹಾಯ ಮಾಡಲಾಗಿದೆ. ಕಾರ್ಯಕ್ರಮದಲ್ಲಿ ಇಕ್ಬಾಲ್ ಅಹಮದ್ ಅವರು ರೆಸ್ಪಾನ್ಸಿವ್ ಕೇರ್ ಫೌಂಡೇಶನ್ ಮುಖ್ಯಸ್ಥರಾದ ರಹಮತ್ ಅಲಿ, ಮೊಯಿನುದ್ದೀನ್ ರಹಮಾನ್ ಹಾಗೂ ಪತ್ರಕರ್ತ ಸೈಯದ್ ಯೂಸುಫ್ ಉಲ್ಲಾ ಅವರೊಂದಿಗೆ ಅಂಗಡಿಯನ್ನು ಉದ್ಘಾಟಿಸಿ ಕುಟುಂಬಕ್ಕೆ ಹಸ್ತಾಂತರಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಇಕ್ಬಾಲ್ ಅಹಮದ್ ಅವರು, ಕೊರೋನಾ ಸಮಯದಲ್ಲಿ ನಿರ್ಗತಿಕರಿಗೆ ರೇಷನ್ ಕಿಟ್ ವಿತರಿಸುವ ಕಾರ್ಯದಲ್ಲಿ ದಿವಂಗತ ಅಬ್ದುಲ್ ಬಾಬಾ ಅವರು ನಮ್ಮೊಂದಿಗೆ ಸಕ್ರಿಯವಾಗಿ ತೊಡಗಿಸಿಕೊಂಡಿದ್ದರು. ರಂಜಾನ್ ತಿಂಗಳಲ್ಲಿ ಅನಾರೋಗ್ಯದಿಂದ ಅವರು ನಿಧನರಾಗಿದ್ದು, ದೇವರು ಅವರ ಆತ್ಮಕ್ಕೆ ಶಾಂತಿ ನೀಡಲಿ ಎಂದು ಸಂತಾಪ ಸೂಚಿಸಿದರು. ಇದೇ…

Read More

ತುಮಕೂರು: ಸ್ವಾತಂತ್ರ ಸಂಗ್ರಾಮನ ಮಹಾನ್ ಕ್ರಾಂತಿಕಾರಿ ಭಗತ್ ಸಿಂಗ್ ಅವರ 95ನೇ ಹುತಾತ್ಮ ದಿನದ ಅಂಗವಾಗಿ ಇಂದು ಎಐಡಿಎಸ್ಓ ತುಮಕೂರು ಜಿಲ್ಲಾ ಸಮಿತಿ ವತಿಯಿಂದ ನಗರದ ಸರ್ವೋದಯ ಮೈದಾನ, ಜೋಗಿಹಳ್ಳಿ, ಬಾಳಬಸವನಹಳ್ಳಿ ಸೇರಿದಂತೆ ಹಲವಾರು ಹಳ್ಳಿ, ಶಾಲೆಳಲ್ಲಿ ಕಾರ್ಯಕ್ರಮವನ್ನು ಸಂಘಟಿಸಲಾಯಿತು. ಕಾರ್ಯಕ್ರಮವನ್ನು ಉದ್ದೇಶಿಸಿ ಎಐಡಿಎಸ್ ಓ ಜಿಲ್ಲಾ ಕಾರ್ಯದರ್ಶಿಗಳಾದ ಲಕ್ಕಪ್ಪ ಮಾತನಾಡಿ, ಕಳೆದ 120 ದಿನಗಳಿಂದ ಕೆ.ಪಿ.ಎಸ್ ಮ್ಯಾಗ್ನೆಟ್ ನೀತಿಯ (KPS Magnet Policy) ವಿರುದ್ಧ ವಿದ್ಯಾರ್ಥಿ ಪೋಷಕರು  ಭದ್ರ ಕೋಟೆಯಂತೆ ನಿಂತು ಹೋರಾಟವನ್ನು ಕಟ್ಟುತ್ತಿದ್ದಾರೆ ನಾಲ್ಕು ತಿಂಗಳುಗಳಿಂದ ಜನರ ಪ್ರತಿಭಟನೆಯ ಧ್ವನಿ ಕರ್ನಾಟಕದ ಬೀದಿ ಬೀದಿಗಳಲ್ಲಿ  ಪ್ರತಿಧ್ವನಿಸುತ್ತಿದೆ. ಇಂತಹ ಸಂದರ್ಭದಲ್ಲಿ  ಮಹಾನ್ ಕ್ರಾಂತಿಕಾರಿ ಭಗತ್ ಸಿಂಗ್ ರವರ ಹುತಾತ್ಮ ದಿನ ನಮ್ಮ ಮುಂದೆ ಬಂದಿದೆ.ಮುಂದಿನ ಹಂತದ ಹೋರಾಟಕ್ಕೆ ಸ್ಫೂರ್ತಿ ತುಂಬಲು, ಜಿಲ್ಲೆಯ ಜನತೆ ಶಹೀದ್–ಎ–ಅಜಮ್ ಭಗತ್ ಸಿಂಗ್ ಅವರ ಅದ್ವಿತೀಯ ಸಂಘರ್ಷದ ಕಡೆ ನೋಡಬೇಕಿದೆ. ಈ ಹಿನ್ನಲೆಯಲ್ಲಿ ಮಾರ್ಚ್ 21, 22 ಮತ್ತು 23 ರಂದು, ಅವರ ಪರಮೋಚ್ಚ ಬಲಿದಾನದ…

Read More

ಗುಬ್ಬಿ: ಪಶ್ಚಿಮ ಏಷ್ಯಾ ಭಾಗದಲ್ಲಿ ನಡೆಯುತ್ತಿರುವ ಯುದ್ಧದ ಹಿನ್ನೆಲೆಯಲ್ಲಿ ಅಡುಗೆ ಅನಿಲ ಹಾಗೂ ಆಟೊ ಗ್ಯಾಸ್ ದರಗಳು ನಿರಂತರವಾಗಿ ಏರಿಕೆಯಾಗುತ್ತಿರುವುದನ್ನು ಖಂಡಿಸಿ, ಗುಬ್ಬಿ ಪಟ್ಟಣದ ಆಟೊ ಚಾಲಕರು ಮತ್ತು ಮಾಲೀಕರು ಸೋಮವಾರ ಸಂಜೆ ಬಂಕ್ ಮುಂದೆ ಪ್ರತಿಭಟನೆ ನಡೆಸಿದರು. ಗ್ಯಾಸ್ ಬಂಕ್ ಮಾಲೀಕರು ಪ್ರತಿ ಕೆ.ಜಿ. ಗ್ಯಾಸ್ ಮೇಲೆ ಸುಮಾರು ₹30 ರಷ್ಟು ಹೆಚ್ಚಳ ಮಾಡಿದ್ದಾರೆ ಎಂದು ಚಾಲಕರು ದೂರಿದ್ದಾರೆ. ಸರ್ಕಾರದ ನಿಯಂತ್ರಣವಿಲ್ಲದ ಕಾರಣ ಬಂಕ್ ಮಾಲೀಕರು ತಮ್ಮ ಇಚ್ಛೆಯಂತೆ ದರ ಏರಿಸುತ್ತಿದ್ದಾರೆ ಎಂಬುದು ಪ್ರತಿಭಟನಾಕಾರರ ಪ್ರಮುಖ ಆರೋಪವಾಗಿದೆ. “ಗ್ಯಾಸ್ ಬೆಲೆ ಏರಿಕೆಯಾದಂತೆ ನಾವು ಪ್ರಯಾಣಿಕರಿಂದ ಹೆಚ್ಚಿನ ಬಾಡಿಗೆ ವಸೂಲಿ ಮಾಡಲು ಸಾಧ್ಯವಿಲ್ಲ. ದರ ಹೆಚ್ಚಿಸಿದರೆ ಪ್ರಯಾಣಿಕರು ನಮ್ಮೊಂದಿಗೆ ಜಗಳಕ್ಕೆ ಬರುತ್ತಾರೆ. ಇಂತಹ ಪರಿಸ್ಥಿತಿಯಲ್ಲಿ ಜೀವನ ನಡೆಸುವುದು ಹೇಗೆ?” ಎಂದು ಚಾಲಕರು ಆಕ್ರೋಶ ವ್ಯಕ್ತಪಡಿಸಿದರು. ಪ್ರತಿಭಟನಾ ಸ್ಥಳಕ್ಕೆ ಆಗಮಿಸಿದ ಆಹಾರ ನಿರೀಕ್ಷಕಿ ವೀಣಾ ಅವರು ಬಂಕ್ ಮಾಲೀಕರೊಂದಿಗೆ ಮಾತುಕತೆ ನಡೆಸಿದರು. ಆದರೆ, ಬೆಲೆ ಕಡಿಮೆ ಮಾಡಲು ಮಾಲೀಕರು ಒಪ್ಪಲಿಲ್ಲ. ಈ ಸಮಸ್ಯೆಯನ್ನು…

Read More

ಕುಣಿಗಲ್:  ವಿಪಕ್ಷಗಳು ಸರ್ಕಾರ ದಿವಾಳಿಯಾಗಿದೆ ಎಂದು ಆರೋಪ ಮಾಡುತ್ತಿದ್ದು, ಈ ಆರೋಪಗಳು ಶುದ್ಧ ಸುಳ್ಳು ಎಂದು ಕುಣಿಗಲ್ ಶಾಸಕ ಡಾ.ಎಚ್.ಡಿ.ರಂಗನಾಥ್ ವಿರೋಧ ಪಕ್ಷಗಳ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ತಾಲೂಕಿನ ಅಮೃತೂರು ಹೋಬಳಿ ಹೊಸಪುರ ಗೊಲ್ಲರಹಟ್ಟಿ ಗ್ರಾಮದಲ್ಲಿ ರಸ್ತೆ ಕಾಮಗಾರಿಗೆ ಗುದ್ದಲಿ ಪೂಜೆ ನೆರವೇರಿಸಿ ಮಾತನಾಡಿದ ಅವರು,  ರಾಜ್ಯ ಕಾಂಗ್ರೆಸ್ ಸರ್ಕಾರ ಐತಿಹಾಸಿಕ ತೀರ್ಮಾನ ಕೈಗೊಂಡು ಗ್ಯಾರಂಟಿ ಯೋಜನೆಗಳ ಜೊತೆಗೆ ಅಭಿವೃದ್ಧಿಗೆ ಒತ್ತು ನೀಡುತ್ತಿದ್ದು, ಈ ನಿಟ್ಟಿನಲ್ಲಿ ಕುಣಿಗಲ್ ಕ್ಷೇತ್ರದ ವಿವಿಧ ಅಭಿವೃದ್ಧಿಗೆ ಸಾವಿರಾರು ಕೋಟಿ ರೂ.ಗಳನ್ನು ನೀಡಿದೆ. ವಿಪಕ್ಷಗಳ ಸರ್ಕಾರದ ವಿರುದ್ಧದ ದಿವಾಳಿ ಆರೋಪ ಶುದ್ಧ ಸುಳ್ಳು ಎಂದರು. ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ನೇತೃತ್ವದ ಕಾಂಗ್ರೆಸ್ ಸರ್ಕಾರ ಐದು ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತಂದು ಆ ಮೂಲಕ ಮನೆ ಒಡತಿಯ ಖಾತೆಗೆ ಎರಡು ಸಾವಿರ, ಉಚಿತ ವಿದ್ಯುತ್, ಅನ್ನಭಾಗ್ಯ ಯೋಜನೆಯಡಿ ಹತ್ತು ಕೆ.ಜಿ ಅಕ್ಕಿ, ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ, ಯುವ ನಿಧಿ ಜಾರಿಗೆ ತಂದು ಇದಕ್ಕಾಗಿ…

Read More