Author: admin

ತುಮಕೂರು: ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ, ಟೀಮೆಕ್(TMEIC), ಸಿಗ್ನಲ್ ಸ್ವಿಚ್ ಡಿವೈಸಸ್ ಅಂಡ್ ಸಿಸ್ಟಮ್ ಹಾಗೂ ಅಗಸ್ತ್ಯ ಇಂಟರ್ ನ್ಯಾಷನಲ್ ಫೌಂಡೇಶನ್ ಸಂಸ್ಥೆಯ ಸಹಭಾಗಿತ್ವದಲ್ಲಿ ನಿರುದ್ಯೋಗಿಗಳಿಗೆ ಉದ್ಯೋಗ ನೀಡಲು ನಗರದ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ಅಕ್ಟೋಬರ್ 18ರಂದು ಬೆಳಿಗ್ಗೆ 10 ಗಂಟೆಗೆ ನೇರ ಸಂದರ್ಶನ ನಡೆಯಲಿದೆ. ಎಸ್.ಎಸ್.ಎಲ್.ಸಿ., ಪಿ.ಯು.ಸಿ., ಐ.ಟಿ.ಐ(Fitter, Electrician, Welder and painter), ಡಿಪ್ಲೊಮಾ(Electrical and Electronics, Electronics and communication and Mechanical) ಹಾಗೂ ಬಿ.ಎ., ಬಿ.ಎಸ್ಸಿ., ಎಂ.ಕಾಂ. & ಬಿ.ಎಡ್. ಪಾಸಾದ ಅಭ್ಯರ್ಥಿಗಳು ತಮ್ಮ ಬಯೋಡೇಟಾದೊಂದಿಗೆ ನೇರ ಸಂದರ್ಶನಕ್ಕೆ ಹಾಜರಾಗಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ 0816-2278488, ಮೊ.ಸಂ. 9071021143 / 9513136642ನ್ನು ಸಂಪರ್ಕಿಸಬೇಕೆಂದು ಜಿಲ್ಲಾ ಉದ್ಯೋಗಾಧಿಕಾರಿ ಕಿಶೋರ್ ಕುಮಾರ್ ತಿಳಿಸಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

Read More

ತುಮಕೂರು: ನಿರಂತರ ಸುರಿದ ಮಳೆಗೆ ನಗರ ವ್ಯಾಪ್ತಿಯ ಕುರಿಪಾಳ್ಯದಲ್ಲಿ ಹಳೆಯ ಮನೆಗಳು ಕುಸಿದಿದ್ದು, ನಿರಾಶ್ರಿತರನ್ನು ಗಂಜಿ ಕೇಂದ್ರಕ್ಕೆ ಕೂಡಲೇ ಸ್ಥಳಾಂತರಿಸಲು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತಹಶೀಲ್ದಾರ್ ಹಾಗೂ ಮಹಾನಗರಪಾಲಿಕೆ ಅಧಿಕಾರಿಗಳಿಗೆ ಸೂಚನೆ ನೀಡಿದರು. ಮಂಗಳವಾರ ರಾತ್ರಿ ಘಟನಾ ಸ್ಥಳಕ್ಕೆ ಭೇಟಿ ನೀಡಿದ ಅವರು, ಕುರಿಪಾಳ್ಯದ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠಶಾಲೆಯಲ್ಲಿ ಗಂಜಿ ಕೇಂದ್ರ ತೆರೆಯಬೇಕು. ಜಿಲ್ಲೆಯಾದ್ಯಂತ ಜಿಟಿ–ಜಿಟಿ ಮಳೆಯಾಗುತ್ತಿರುವುದರಿಂದ ಬೀಳುವ ಹಂತದ ಮನೆಗಳಲ್ಲಿರುವವರನ್ನೂ ಸಹ ಗಂಜಿ ಕೇಂದ್ರಕ್ಕೆ ಸ್ಥಳಾಂತರಿಸಬೇಕು ಎಂದು ತಿಳಿಸಿದರಲ್ಲದೆ, ಹಾನಿಗೊಳಗಾಗಿರುವ ಮನೆಗಳನ್ನು ವೀಕ್ಷಿಸಿದ ಜಿಲ್ಲಾಧಿಕಾರಿ ಜೀವ ಹೋದರೆ ಮರಳಿ ಬರೋದಿಲ್ಲ. ಗಂಜಿ ಕೇಂದ್ರದಲ್ಲಿ ಆಶ್ರಯ ಪಡೆಯಬೇಕೆಂದು ಮನೆ ಕಳೆದುಕೊಂಡು ನಿರಾಶ್ರಿತರಾದವರಲ್ಲಿ ಮನವಿ ಮಾಡಿದರು. ಗಂಜಿ ಕೇಂದ್ರದಲ್ಲಿ ಆಶ್ರಯ ಪಡೆಯುವ ನಿರಾಶ್ರಿತರಿಗೆ ಗುಣಮಟ್ಟದ ಆಹಾರ, ಕುಡಿಯುವ ನೀರಿನ ವ್ಯವಸ್ಥೆ, ಹಾಸಿಗೆ, ಹೊದಿಕೆ, ವಿದ್ಯುತ್ ಸಂಪರ್ಕ ವ್ಯವಸ್ಥೆ ಸೇರಿದಂತೆ ಅಗತ್ಯ ಮೂಲಭೂತ ಸೌಕರ್ಯಗಳನ್ನು ಕೂಡಲೇ ಕಲ್ಪಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು. ಸ್ಥಳಕ್ಕೆ ಭೇಟಿ ನೀಡಿದ್ದ ಶಾಸಕ ಜಿ.ಬಿ.ಜ್ಯೋತಿಗಣೇಶ್ ಕುರಿಪಾಳ್ಯ ಪ್ರದೇಶದಲ್ಲಿ ಬಹುಪಾಲು ಪೌರ…

Read More

ತುಮಕೂರು: ಕೇಂದ್ರ ಪುರಸ್ಕೃತ ಯೋಜನೆಗಳ ಪರಿಶೀಲನೆಗಾಗಿ ಶಿರಾ ತಾಲ್ಲೂಕು ಹೊನ್ನಗೊಂಡನಹಳ್ಳಿ ಹಾಗೂ ಭುವನಹಳ್ಳಿ ಗ್ರಾಮ ಪಂಚಾಯಿತಿಗಳಿಗೆ ರಾಷ್ಟ್ರೀಯ ಮಟ್ಟದ ಪರಿಶೀಲನಾ ಸದಸ್ಯರ ತಂಡ (NLM) ಇಂದು ಭೇಟಿ ನೀಡಿ ಫಲಾನುಭವಿಗಳ ಜೊತೆ ಚರ್ಚೆ ನಡೆಸಿ ಕಾಮಗಾರಿ ಸ್ಥಳಗಳಿಗೆ ಭೇಟಿ ನೀಡಿ ಕಾಮಗಾರಿಗಳನ್ನು ಪರಿಶೀಲಿಸಿತು. ದಯಾಕರ್ ರೆಡ್ಡಿ ಮತ್ತು ತಂಡ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ ಪ್ರಗತಿಯಲ್ಲಿರುವ ಹಾಗೂ ಮುಕ್ತಾಯಗೊಂಡಿರುವ 5 ಕಾಮಗಾರಿಗಳನ್ನು ಪರಿಶೀಲನೆ ನಡೆಸಿತು. ತದನಂತರ ನರೇಗಾ ಯೋಜನೆಯಡಿ ಉದ್ಯೋಗ ಚೀಟಿ ಹೊಂದಿರುವ 5 ಫಲಾನುಭವಿಗಳನ್ನು ಭೇಟಿ ಮಾಡಿ ನರೇಗಾ ಸೌಲಭ್ಯಗಳನ್ನು ಪಡೆದಿರುವ, ಯೋಜನೆಯ ಸದುಪಯೋಗದ ಬಗ್ಗೆ ಮಾಹಿತಿ ಕಲೆ ಹಾಕಿತು. ಸಂಜೀವಿನಿ ಒಕ್ಕೂಟದ ಮಹಿಳಾ ಸ್ವಸಹಾಯ ಸಂಘಗಳ ಪ್ರತಿನಿಧಿಗಳೊಂದಿಗೆ ಚರ್ಚಿಸಿ ಸಂಘದ ಕಾರ್ಯಕ್ರಮಗಳ ಸದ್ಬಳಕೆ ಕುರಿತು ಮಾಹಿತಿ ಪಡೆಯಿತು. ನಂತರ ಸ್ವಸಹಾಯ ಸಂಘಗಳ ಲಾಭದಾಯಕ ಚಟುವಟಿಕೆಗಳ ಬಗ್ಗೆ ಫಲಾನುಭವಿಗಳಿಗೆ ಮಾರ್ಗದರ್ಶನ ನೀಡಿತು. PMAY(G) ಯೋಜನೆಯಡಿ ಪ್ರಗತಿಯಲ್ಲಿರುವ ಹಾಗೂ ಮುಕ್ತಾಯಗೊಂಡಿರುವ ವಸತಿ ಯೋಜನೆಯ 5 ಫಲಾನುಭವಿಗಳನ್ನು ಭೇಟಿ…

Read More

ಅಕ್ಕ ಧಾರಾವಾಹಿ ನಟಿ, ಬಿಗ್ ಬಾಸ್ ಮಾಜಿ ಸ್ಪರ್ಧಿ, ರಿಯಾಲಿಟಿ ಶೋ ನಿರೂಪಕಿ ಅನುಪಮಾ ಗೌಡ ಹೊಸ ಟ್ಯಾಟೋ ಹಾಕಿಸಿಕೊಂಡಿದ್ದು, ತನ್ನ ತಂದೆಯ ನೆನಪಿಗಾಗಿ ಈ ಟ್ಯಾಟೋ ಹಾಕಿಸಿಕೊಂಡಿದ್ದಾರಂತೆ! ಅಪ್ಪ. ನನ್ನ ಜೊತೆ ದೈಹಿಕವಾಗಿ ಇಲ್ಲದಿದ್ದರೂ ನನ್ನ ಬೆನ್ನ ಹಿಂದೆ ಸದಾ ಇರುತ್ತಾರೆ. ನನ್ನ ಟ್ಯಾಟ್ಯೂ ಅದ್ಭುತವಾಗಿ ಮೂಡಿ ಬಂದಿದೆ. ನನ್ನ ಜೀವನ ಪೂರ್ತಿ ಈ ಟ್ಯಾಟೂ ಜೊತೆಯಾಗಿ ಇರುತ್ತದೆ ಎಂದು ಫೋಟೋ ಶೇರ್ ಮಾಡಿಕೊಂಡು ಅನುಪಮಾ ಗೌಡ ಬರೆದುಕೊಂಡಿದ್ದಾರೆ. ತಮ್ಮ ತಂದೆಯ ಜೊತೆ ಬಾಲ್ಯದಲ್ಲಿ ಕ್ಲಿಕ್ ಮಾಡಿಕೊಂಡಿರುವ ಫೋಟೋದ ಔಟ್ ಲೈನ್ ನ ತಮ್ಮ ಬೆನ್ನ ಹಿಂದೆ ಟ್ಯಾಟೂ ಹಾಕಿಸಿಕೊಂಡಿದ್ದಾರೆ. ಟ್ಯಾಟೂ ತುಂಬಾ ಸರಳವಾಗಿದ್ದರು, ಅದ್ಭುತವಾಗಿದೆ ಎಂದು ಫಾಲೋವರ್ಸ್ ಕಾಮೆಂಟ್ ಮಾಡಿದ್ದಾರೆ. ಇತ್ತೀಚೆಗೆ ಹೊಸ ಮನೆ ಗೃಹ ಪ್ರವೇಶ ಮಾಡಿದ್ದ ಅನುಪಮಾ ಗೌಡ ಸುದ್ದಿಯಲ್ಲಿದ್ದರು. ಈ ಮನೆಗೆ ನಮ್ಮನೆ ಎಂದು ಹೆಸರಿಟ್ಟಿದ್ದಾರೆ. ಗೃಹ ಪ್ರವೇಶ ದಿನ ತಂದೆ ಇಲ್ಲ ಎನ್ನುವುದು ಮನಸಿಗ ಬರಬಾರದು ಅಂತ ಟ್ಯಾಟೋ ಹಾಕಿಸಿಕೊಂಡಿದ್ದಾರೆ ಅಂತ ನೆಟ್ಟಿಗರು…

Read More

ಶ್ರೀ ಕ್ಷೇತ್ರ ಕಟೀಲು ದುರ್ಗಾಪರಮೇಶ್ವರೀ ಜ್ಯೋತಿಷ್ಯ ಪೀಠಂ ದೈವಜ್ಞ ಪಂಡಿತ್ ಕೃಷ್ಣ ಭಟ್ ಪ್ರಧಾನ ತಾಂತ್ರಿಕ್ ಹಾಗೂ ಮಾಂತ್ರಿಕರು  ಸ್ತ್ರೀ ಪುರುಷ ವಶೀಕರಣ ಸ್ಪೆಷಲಿಸ್ಟ್ ನನಗೆ ಒಂದೇ ಕರೆ ಮಾಡಿದರೆ ನಿಮ್ಮ ಇಷ್ಟಪಟ್ಟವರು ನಿಮ್ಮಂತೆ 9535156490 ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆ ಉತ್ತರಿಸಬಹುದು ಏಷ್ಟೇ ಪೂಜೆ ಪ್ರಯತ್ನ ಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..?ನಿಮ್ಮ ಯಾವುದೇಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ 2 ದಿನಗಳಲ್ಲಿ ಪರಿಹಾರ ಶತಸಿದ್ಧ ಧನವಶ, ಜನವಶ, ಶತ್ರುನಾಶ, ಸ್ತ್ರೀ- ಪುರುಷ ವಶೀಕರಣ, ದಿಗ್ಭಂಧನ, ಸ್ತಂಭನ, ವುಚ್ಛಾಟನೆಯಂತಹ ಸಮಸ್ಯೆಗಳಿಗೆ ವಿಶೇಷ ಪರಿಹಾರ ತಿಳಿಸುತ್ತಾರೆ 9535156490 ಪಂಚಾಂಗದ ಪ್ರಕಾರ, ದೀಪಾವಳಿಯನ್ನು ಅಕ್ಟೋಬರ್ 31 ರಂದು ಆಚರಿಸಲಾಗುತ್ತದೆ. ಜ್ಯೋತಿಷ್ಯಶಾಸ್ತ್ರದ ಪ್ರಕಾರ, ಈ ಅವಧಿಯಲ್ಲಿ ಸುಮಾರು 500 ವರ್ಷಗಳ ನಂತರ, ಶನಿಯು ತನ್ನ ಮೂಲ ತ್ರಿಕೋನ ಚಿಹ್ನೆಯಾದ ಕುಂಭದಲ್ಲಿ ಹಿಮ್ಮೆಟ್ಟುತ್ತಾನೆ. ಅಲ್ಲದೆ, ಈ…

Read More

ಸರಗೂರು:  ಕರ್ನಾಟಕ ಲೋಕಾಯುಕ್ತ ಇನ್ಸ್ಪೆಕ್ಟರ್ ಅಶೋಕ್‌ ಕುಮಾರ್ ಅಧ್ಯಕ್ಷತೆಯಲ್ಲಿ ಬುಧವಾರ ನಡೆದ ಸಾರ್ವಜನಿಕ ದೂರು ಸ್ವೀಕಾರ ಕಾರ್ಯಕ್ರಮದಲ್ಲಿ ಪ್ರಚಾರದ ಕೊರತೆಯಿಂದಾಗಿ ಬೆರೆಣಿಕೆಯಷ್ಟು ಮಂದಿ ಸಾರ್ವಜನಿಕರು ಮಾತ್ರ ಭಾಗಿಯಾಗಿದ್ದರು. ಇದರಿಂದಾಗಿ ವಿವಿಧ ಇಲಾಖೆಗಳಿಗೆ ಕೇವಲ 29 ಅರ್ಜಿಗಳು ಮಾತ್ರ ಸಲ್ಲಿಕೆಯಾದವು. ಹೀಗಾಗಿ ಬೇಸರಗೊಂಡ ಸಾರ್ವಜನಿಕರು ತಾಲೂಕು ಆಡಳಿತದ ವಿರುದ್ಧ ರೊಚ್ಚಿಗೆದ್ದು, ತಮ್ಮ ಆಕ್ರೋಶ ವ್ಯಕ್ತಪಡಿಸಿದರು. ಪಟ್ಟಣದ ಅಂಬೇಡ್ಕರ್ ಸಮುದಾಯ ಭವನದಲ್ಲಿ ತಾಲೂಕು ಆಡಳಿತ ಸಾರ್ವಜನಿಕರ ಸಮಸ್ಯೆಗಳ ಪರಿಹಾರಕ್ಕಾಗಿ ಆಯೋಜಿಸಿದ್ದ ದೂರು ಸ್ವೀಕಾರ ಕಾರ್ಯಕ್ರಮದ ಶುರುವಿನಲ್ಲಿ ಕೇವಲ 8–10 ಮಂದಿ ಸಾರ್ವಜನಿಕರು ಮಾತ್ರ ಬಂದಿದ್ದರು. ಇನ್ನುಳಿದಂತೆ ಅಧಿಕಾರಿಗಳೇ ಹೆಚ್ಚು ಮಂದಿ ಭಾಗಿಯಾಗಿದ್ದರು. ಕಾರ್ಯಕ್ರಮದಲ್ಲಿ ಹಾಕಲಾದ ಕುರ್ಚಿಗಳು ಖಾಲಿಯಾಗಿದ್ದವು. ಬೆಳಗ್ಗೆ 11ಕ್ಕೆ ಆರಂಭವಾದ ಕಾರ್ಯಕ್ರಮ ಮಧ್ಯಾಹ್ನ 2 ಗಂಟೆಗೆ ಗಲಾಟೆ, ಗದ್ದಲದ ನಡುವೆಯೇ ಮುಕ್ತಾಯವಾಯಿತು. ಕಂದಾಯ ಇಲಾಖೆ ಆಡಳಿತಾಧಿಕಾರಿಗಳು ಕಾಡಂಚಿನ ಗ್ರಾಮಗಳ ಜನರಿಗೆ ಸರಿಯಾದ ಮಾಹಿತಿಯನ್ನು ನೀಡಿಲ್ಲ. ಸಾರ್ವಜನಿಕರು ಕುಂದು ಕೊರತೆಗಳ ಸಭೆ ಮಾಡಬೇಕಾದ ತಾಲೂಕು ಆಡಳಿತ  ಅಧಿಕಾರಿಗಳ ಸಭೆ ನಡೆಸುತ್ತಿದೆ ಎಂದು ಆರೋಪಿಸಿದ ಸಂಘ…

Read More

ಪಾವಗಡ: ತಾಲೂಕಿನ ಜೆಡಿಎಸ್ ಪಕ್ಷದ ನಾಯಕರು, ಪಿ ಎಲ್ ಡಿ ಬ್ಯಾಂಕ್ ಮತ್ತು ಎಪಿಎಂಸಿ ಮಾಜಿ ಅಧ್ಯಕ್ಷರು ಕರ್ನಾಟಕ ಮಾರ್ಕೆಟಿಂಗ್ ಫೆಡರೇಶನ್ ಮಾಜಿ ನಿರ್ದೇಶಕರು ಲಿಂಗದಹಳ್ಳಿ ಎಲ್.ಎಸ್.ನರಸರೆಡ್ಡಿ ಅವರು ಇಂದು ದೈವಾಧೀನರಾಗಿದ್ದಾರೆ. 75 ವರ್ಷದ ಹಿರಿಯ ಅನುಭವಿ ರಾಜಕಾರಣಿಗಳಲ್ಲಿ ಒಬ್ಬರಾದ ಇವರು, ಶ್ರೇಷ್ಠ ವ್ಯಕ್ತಿತ್ವವನ್ನು ಹೊಂದಿದ್ದು, ಅಪಾರ ಬಂಧು–ಬಳಗ ಆತ್ಮೀಯ ಮತ್ತು ರಾಜಕೀಯ ಅಭಿಮಾನಿಗಳನ್ನು ಅಗಲಿದ್ದಾರೆ. ಪ್ರಗತಿಪರ ರೈತರದ ಇವರ ಪಾರ್ಥಿವ ಶರೀರವು ದಿನಾಂಕ 17.10.2024ರ ಗುರುವಾರ ಬೆಳಿಗ್ಗೆ 10 ಗಂಟೆಗೆ ಲಿಂಗದಹಳ್ಳಿ ಅವರ ತೋಟದಲ್ಲಿ ಅಂತ್ಯ ಸಂಸ್ಕಾರ ಅಂತ್ಯಕ್ರಿಯೆ ನಡೆಯಲಿದೆ ತಾಲೂಕಿನ ಎಲ್ಲಾ ರಾಜಕೀಯ ಪಕ್ಷಗಳ ಅನೇಕ ಗಣ್ಯರು ಇವರ ಅಂತಿಮ ದರ್ಶನ ಪಡೆದಿದ್ದಾರೆ. ಜಿಲ್ಲಾ ಜೆಡಿಎಸ್ ಪಕ್ಷದ ಅಧ್ಯಕ್ಷರಾದ ಆರ್‌.ಸಿ.ಅಂಜನಪ್ಪ ರಾಜ್ಯ ಜೆಡಿಎಸ್ ಪಾರ್ಲಿಮೆಂಟರಿ ಸದಸ್ಯರಾದ ಎನ್. ತಿಮ್ಮರೆಡ್ಡಿ ಮಾಜಿ ಶಾಸಕರಾದ ಕೆ.ಎಂ. ತಿಮ್ಮರಾಯಪ್ಪ ಜೆಡಿಎಸ್ ಪಕ್ಷದ ಅಧ್ಯಕ್ಷರಾದ ಎನ್.ಎ.ಈರಣ್ಣ ಮಹಾ ಪ್ರಧಾನ ಕಾರ್ಯದರ್ಶಿ ಮತ್ತು ತಾಲೂಕು ಪಂಚಾಯಿತಿ ಮಾಜಿ ಅಧ್ಯಕ್ಷರಾದ ಸೊಗಡು ವೆಂಕಟೇಶ್ ಬಲರಾಮರೆಡ್ಡಿ,  ಎಸ್ ಕೆ…

Read More

ಮಧುಗಿರಿ: 2024–25 ನೇ ಸಾಲಿನ ವಿಜ್ಞಾನ ಪ್ರಶ್ನೆ ಪತ್ರಿಕೆ ಸರಳವಾಗಿ ಮೂಡಿ ಬರಲು ಮತ್ತು ಪ್ರಶ್ನೆಪತ್ರಿಕೆಯ ವಿನ್ಯಾಸ ಬದಲಾವಣೆಗಾಗಿ KSEAB ಮಂಡಳಿಗೆ ಕಳುಹಿಸಿ ಕೊಡುವಂತೆ ಮಧುಗಿರಿಯ ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕರ ಕಚೇರಿಗೆ ಮನವಿ ಪತ್ರ ನೀಡಲಾಯಿತು. ಅದೇ ಸಮಯದಲ್ಲಿ ಅಲ್ಲಿಯೇ ಹಾಜರಿದ್ದ ಡಯಟ್ ನ ಪ್ರಾಂಶುಪಾಲರಿಗೂ ಮನವಿ ಪತ್ರ ದ ಇನ್ನೊಂದು ಪ್ರತಿ ನೀಡಲಾಯಿತು ಉಪನಿರ್ದೇಶಕರಿಗೆ ಜಿಲ್ಲಾ ಪ್ರೌಢಶಾಲಾ ವಿಜ್ಞಾನ ಶಿಕ್ಷಕರ ವೇದಿಕೆಯ ಅಧ್ಯಕ್ಷರಾದ ಮಹೇಶ್ ಕುಮಾರ್ ಕೆ ಎಸ್, ಉಪಾಧ್ಯಕ್ಷರು ಅರುಣ್ ಕುಮಾರ್, ಕಾರ್ಯದರ್ಶಿ ನಾಗೇಂದ್ರ ಬಾಬು, ಲಕ್ಷ್ಮಣ್ ಮತ್ತು ಇತರೆ ಶಿಕ್ಷಕರ ನಿಯೋಗ ಮನವಿ ನೀಡಿತು. ವರದಿ: ನಂದೀಶ್, ನಾಯ್ಕ ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q

Read More

ತುಮಕೂರು:  ಜಿಲ್ಲೆಯ ವಿವಿಧ ರಾಷ್ಟ್ರೀಯ ಹೆದ್ದಾರಿಗಳ ಅಭಿವೃದ್ಧಿಗೆ ಸಂಬಂಧಿಸಿದಂತೆ ಕೇಂದ್ರ ರೈಲ್ವೆ ಹಾಗೂ ಜಲಶಕ್ತಿ ರಾಜ್ಯ ಖಾತೆ ಸಚಿವ ವಿ.ಸೋಮಣ್ಣ ಅವರಿಂದು ನವದೆಹಲಿಯಲ್ಲಿ ಕೇಂದ್ರ ಭೂಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಅವರೊಂದಿಗೆ ಚರ್ಚೆ ನಡೆಸಿದರು. ರಾಷ್ಟ್ರೀಯ ಹೆದ್ದಾರಿ 69ರ ಶಿರಾ, ಮಧುಗಿರಿ, ಭೈರನಹಳ್ಳಿ ವಿಭಾಗದ 52 ಕಿಮೀ. ಚತುಷ್ಪಥ ರಸ್ತೆ ಅಭಿವೃದ್ಧಿಗೆ 2024–25ರ ಆಯವ್ಯಯದಲ್ಲಿ 1,000 ಕೋಟಿ ರೂ. ಮೀಸಲಿಟ್ಟಿದ್ದು, ಈ ರಸ್ತೆ ಕಾಮಗಾರಿ ಅನುಮೋದನೆಗೆ ಸಹಕರಿಸಿದ ಕರ್ನಾಟಕ ಸರ್ಕಾರದ ವಿಶೇಷ ಪ್ರತಿನಿಧಿ ಟಿ.ಬಿ. ಜಯಚಂದ್ರ ಮತ್ತು ಕೇಂದ್ರ ಸರ್ಕಾರಕ್ಕೆ ಜಿಲ್ಲೆಯ ಜನತೆಯ ಪರವಾಗಿ ಅಭಿನಂದನೆ ಸಲ್ಲಿಸಿದ್ದಾರೆ. ತುಮಕೂರು-ಶಿವಮೊಗ್ಗ ಮಾರ್ಗದ ರಾಷ್ಟ್ರೀಯ ಹೆದ್ದಾರಿ 206ರ ತುಮಕೂರು ನಗರ ಹಾಗೂ ಮಲ್ಲಸಂದ್ರ ಭಾಗದಲ್ಲಿ ಬೈಪಾಸ್ ನಿರ್ಮಾಣ ಮಾಡುವುದರಿಂದ ಸಾರಿಗೆ ದಟ್ಟಣೆ ಹಾಗೂ ಅಪಘಾತಗಳು ಕಡಿಮೆ ಮಾಡಬಹುದಾಗಿದೆ. ಜಿಲ್ಲೆಯು ಅತ್ಯಂತ ವೇಗವಾಗಿ ಅಭಿವೃದ್ಧಿ ಹೊಂದುತ್ತಿದ್ದು ಜಿಲ್ಲೆಯ ಹೆದ್ದಾರಿಗಳ ಅಭಿವೃದ್ಧಿ ಅನಿವಾರ್ಯವಾಗಿದೆ ಎಂದು ಕೇಂದ್ರ ಮಂತ್ರಿಗಳಿಗೆ ತಿಳಿಸಿದರಲ್ಲದೆ. ರಾಷ್ಟ್ರೀಯ ಹೆದ್ದಾರಿ 206ರ ತುಮಕೂರು…

Read More

ಹೆಚ್.ಡಿ.ಕೋಟೆ: ಸುಪ್ರೀಂಕೋರ್ಟ್ ನ ನ್ಯಾಯಮೂರ್ತಿ ಡಿ.ವೈ.ಚಂದ್ರಚೂಡ್ ರವರ ಏಳು ಜನರ ಸಮಿತಿಯ ಆದೇಶದ ಮೇರೆಗೆ ರಾಜ್ಯದಲ್ಲಿ ಒಳ ಮೀಸಲಾತಿಯನ್ನು ಜಾರಿ ಮಾಡಬೇಕು ಎಂದು ಮಾತಂಗ ಜನ ಜಾಗೃತಿ ವೇದಿಕೆಯ ಅಧ್ಯಕ್ಷ ರವೀಶ್ ಸೇರಿದಂತೆ ಸಂಘಟನೆಯ ಪದಾಧಿಕಾರಿಗಳು ತಾಲೂಕು ಪತ್ರಕರ್ತರ ಸಂಘದ ಭವನದಲ್ಲಿ ಕರೆದ ಪತ್ರಿಕಾಗೋಷ್ಠಿಯಲ್ಲಿ ಒತ್ತಾಯಿಸಿದರು. ಮಾತಂಗ ಜನ ಜಾಗೃತಿ ವೇದಿಕೆಯ ಅಧ್ಯಕ್ಷ ರವೀಶ್ ಮಾತನಾಡಿ, ಜನಸಂಖ್ಯೆಗೆ ಅನುಗುಣವಾಗಿ ರಾಜ್ಯದಲ್ಲಿ ಒಳ ಮೀಸಲಾತಿ ಜಾರಿಮಾಡಬೇಕು. ಬ್ಯಾಕ್  ಲಾಗ್ ಹುದ್ದೆಗಳನ್ನು ತಡೆಹಿಡಿಯಬೇಕು ಇಲ್ಲವಾದರೆ ಮಾದಿಗ ಸಮುದಾಯಕ್ಕೆ ಅನ್ಯಾಯವಾಗುತ್ತದೆ. ಒಳ ಮೀಸಲಾತಿ ಜಾರಿ ಮಾಡಿ ನಂತರ ಬ್ಯಾಕ್ ಲಾಗ್ ಹುದ್ದೆಗಳನ್ನು ಭರ್ತಿ ಮಾಡಬೇಕು ಎಂದು ಒತ್ತಾಯಿಸಿದರು. ಸಮುದಾಯ ಮುಖಂಡ ಶಿವಯ್ಯ ಮಾತನಾಡಿ, ರಾಜ್ಯದಲ್ಲಿ ಬಹುಸಂಖ್ಯಾತ ಜನ ಮಾದಿಗ ಸಮುದಾಯ. ಜನ ಸಂಖ್ಯೆಗೆ ಅನುಗುಣವಾಗಿ ಮೀಸಲಾತಿ ಜಾರಿ ಮಾಡಿ ಎಂದು ಸುಪ್ರೀಂ ಕೋರ್ಟ್ ಐತಿಹಾಸಿಕ ತೀರ್ಪು ನೀಡಿದೆ ರಾಜ್ಯ ಸರ್ಕಾರ ಯಥಾವತ್ತಾಗಿ ಒಳ ಮೀಸಲಾತಿಯನ್ನು ಜಾರಿಗೊಳಿಸಬೇಕು ಎಂದು ಒತ್ತಾಯಿಸಿದರು. ಬೂದನೂರು ವೆಂಕಟೇಶ್ ಮಾತನಾಡಿ, ರಾಜ್ಯದಲ್ಲಿ ಕಾಂಗ್ರೆಸ್ಸ್…

Read More