Subscribe to Updates
Get the latest creative news from FooBar about art, design and business.
- ಶ್ರೀ ಸಿದ್ದಗಂಗಾ ಮಠಕ್ಕೆ ಭೇಟಿ ನೀಡಿ ಆಶೀರ್ವಾದ ಪಡೆದ ಡಿ.ಕೆ. ಶಿವಕುಮಾರ್
- ನನಗೂ ಸಚಿವ ಸ್ಥಾನ ಸಿಗುವ ಭರವಸೆಯಿದೆ: ಮಾಜಿ ಸಚಿವ ಸಂತೋಷ್ ಲಾಡ್
- ಉಪಮುಖ್ಯಮಂತ್ರಿಯಾಗಿ ನೇಮಕಗೊಂಡಿರುವುದಕ್ಕೆ ನಾನು ಸಂಪೂರ್ಣ ತೃಪ್ತ: ಜಿ. ಪರಮೇಶ್ವರ
- ಡಿ.ಕೆ. ಶಿವಕುಮಾರ್ ಜೀವನದ ಮಾರ್ಗದರ್ಶಕ ಶಕ್ತಿ ‘ನೊಣವಿನಕೆರೆ ಅಜ್ಜಯ್ಯ’!
- ಕೆಪಿಸಿಸಿಗೆ ಬಿ.ಕೆ.ಹರಿಪ್ರಸಾದ್ ಹೊಸ ಸಾರಥಿ: ಹೈಕಮಾಂಡ್ ಮಹತ್ವದ ನಿರ್ಧಾರ
- ಸಿಎಂ ಕುರ್ಚಿ ನನ್ನದಲ್ಲ, ಅಧಿಕಾರವನ್ನು ಜನರ ಸೇವೆಗೆ ಮುಡಿಪಾಗಿಡುತ್ತೇನೆ: ಸಿಎಂ ಡಿ.ಕೆ.ಶಿವಕುಮಾರ್
- ಕರ್ನಾಟಕದ 25ನೇ ಮುಖ್ಯಮಂತ್ರಿಯಾಗಿ ಡಿ.ಕೆ.ಶಿವಕುಮಾರ್ ಪ್ರಮಾಣವಚನ ಸ್ವೀಕಾರ!
- ಸಾದರ ಸಮುದಾಯ ಭವನದಲ್ಲಿ ಸಪ್ತಗಿರಿ ಆಸ್ಪತ್ರೆ ವತಿಯಿಂದ ಬೃಹತ್ ಆರೋಗ್ಯ ತಪಾಸಣೆ ಮತ್ತು ಶಸ್ತ್ರ ಚಿಕಿತ್ಸಾ ಶಿಬಿರ
Author: admin
ತುಮಕೂರು: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ ತುಮಕೂರು ಪ್ರಾದೇಶಿಕ ಕೇಂದ್ರದಲ್ಲಿ 2024–25ನೇ ಶೈಕ್ಷಣಿಕ ಸಾಲಿನ ಜುಲೈ ಆವೃತ್ತಿ ಪ್ರಥಮ ವರ್ಷದ ವಿವಿಧ ಸ್ನಾತಕ/ ಸ್ನಾತಕೋತ್ತರ ಪದವಿ ಕೋರ್ಸುಗಳ ಪ್ರವೇಶಾತಿಗೆ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಪದವಿ ಪೂರ್ವ(10+2), ಸ್ನಾತಕ ಪದವಿ(10+2+3) ವಿದ್ಯಾರ್ಹತೆ ಹೊಂದಿರುವವರು ನವೆಂಬರ್ 15 ರೊಳಗಾಗಿ ಅರ್ಜಿ ಸಲ್ಲಿಸಬಹುದಾಗಿದೆ. ಆಸಕ್ತ ವಿದ್ಯಾರ್ಥಿಗಳು ಬಿ.ಎ., ಬಿ.ಕಾಂ., ಬಿ.ಬಿ.ಎ., ಬಿ.ಸಿ.ಎ., ಬಿ.ಎಲ್.ಐ.ಎಸ್ಸಿ., ಬಿ.ಎಸ್.ಡಬ್ಲ್ಯೂ., ಬಿ.ಎಸ್ಸಿ.(ಜನರಲ್ ಅಂಡ್ ಐಟಿ), ಎಂ.ಎ., ಎಂ.ಸಿ.ಜೆ., ಎಂ.ಕಾಂ., ಎಂ.ಸಿ.ಎ., ಎಂ.ಎಸ್.ಡಬ್ಲ್ಯೂ, ಎಂ.ಎಲ್.ಐ.ಎಸ್ಸಿ., ಎಂ.ಎಸ್ಸಿ., ಎಂ.ಬಿ.ಎ., ಪಿ.ಜಿ. ಸರ್ಟಿಫಿಕೇಟ್, ಡಿಪ್ಲೋಮಾ, ಸರ್ಟಿಫಿಕೇಟ್ ಪ್ರೋಗ್ರಾಮ್ಸ್ ಕೋರ್ಸುಗಳ ಪ್ರವೇಶಾತಿಗೆ ಅರ್ಜಿ ಸಲ್ಲಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಕರಾಮುವಿ ತುಮಕೂರು ಪ್ರಾದೇಶಿಕ ಕೇಂದ್ರ ಅಥವಾ ದೂರವಾಣಿ ಸಂಖ್ಯೆ: 0816- 2955580, 9844506629, 9886112434, 7349474339ನ್ನು ಸಂಪರ್ಕಿಸಬಹುದೆಂದು ಪ್ರಾದೇಶಿಕ ನಿರ್ದೇಶಕ ಡಾ.ಆರ್.ಲೋಕೇಶ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ…
ತುಮಕೂರು: ಪಶುಪಾಲನಾ ಮತ್ತು ಪಶುವೈದ್ಯಕೀಯ ತರಬೇತಿ ಕೇಂದ್ರವು ರೈತರಿಗೆ ಆಧುನಿಕ ಕೋಳಿ ಸಾಕಾಣಿಕೆ ಕುರಿತು ಅಕ್ಟೋಬರ್ 18 ಮತ್ತು 19ರಂದು ಬೆಳಿಗ್ಗೆ 10 ಗಂಟೆಗೆ ಉಚಿತ ತರಬೇತಿ ನೀಡಲು ಉದ್ದೇಶಿಸಿದ್ದು, ಆಸಕ್ತರು ನಿಗದಿಪಡಿಸಿದ ದಿನಾಂಕದಂದು ತರಬೇತಿಗೆ ಹಾಜರಾಗಬಹುದಾಗಿದೆ ಎಂದು ಪಶುಪಾಲನಾ ಮತ್ತು ಪಶುವೈದ್ಯಕೀಯ ತರಬೇತಿ ಕೇಂದ್ರದ ಮುಖ್ಯ ಪಶುವೈದ್ಯಾಧಿಕಾರಿ ತಿಳಿಸಿದ್ದಾರೆ. ತರಬೇತಿಗೆ ಹಾಜರಾಗಲಿಚ್ಛಿಸುವವರು ಇತ್ತೀಚಿನ ತಮ್ಮ 2 ಪಾಸ್ ಪೋರ್ಟ್ ಅಳತೆ ಭಾವಚಿತ್ರ, ರೈತರ ಫ್ರೂಟ್ ಐಡಿ ಸಂಖ್ಯೆ, ಆಧಾರ್ ಕಾರ್ಡ್, ಜಾತಿ ಪ್ರಮಾಣ ಪತ್ರ (ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರಾಗಿದ್ದಲ್ಲಿ)ವನ್ನು ಕಡ್ಡಾಯವಾಗಿ ತರಬೇಕು. ಹೆಚ್ಚಿನ ಮಾಹಿತಿಗಾಗಿ ಹತ್ತಿರದ ಪಶು ವೈದ್ಯಕೀಯ ಸಂಸ್ಥೆ/ ದೂರವಾಣಿ ಸಂಖ್ಯೆ 0816-2251214ನ್ನು ಸಂಪರ್ಕಿಸಬಹುದು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296
ತುಮಕೂರು: ಜಿಲ್ಲಾಡಳಿತದ ವತಿಯಿಂದ 2024–25ನೇ ಸಾಲಿನ ನವೆಂಬರ್ 1ರಂದು ನಡೆಯುವ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದ ಅಂಗವಾಗಿ ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಸೇವೆ ಸಲ್ಲಿಸಿರುವ ಮಹನೀಯರಿಗೆ “ತುಮಕೂರು ಜಿಲ್ಲಾ ಕನ್ನಡ ರಾಜ್ಯೋತ್ಸವ ಗೌರವ ಸನ್ಮಾನ” ನೀಡಲು ಆಸಕ್ತರಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ತಮ್ಮ ಅರ್ಜಿಯನ್ನು ಸ್ವವಿವರಗಳೊಂದಿಗೆ ಅಕ್ಟೋಬರ್ 24ರೊಳಗಾಗಿ ಸಹಾಯಕ ನಿರ್ದೇಶಕರು, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಡಾ: ಗುಬ್ಬಿ ವೀರಣ್ಣ ಕಲಾಕ್ಷೇತ್ರದ ಹತ್ತಿರ, ತುಮಕೂರು ಇವರಿಗೆ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ದೂ.ವಾ.ಸಂ.0816–2275204ನ್ನು ಸಂಪರ್ಕಿಸುವಂತೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಈಶ್ವರ್ ಕು. ಮಿರ್ಜಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296
ತುಮಕೂರು: ಕರ್ನಾಟಕ ವಿಧಾನ ಮಂಡಲದ ಅನುಸೂಚಿತ ಜಾತಿ ಮತ್ತು ಅನುಸೂಚಿತ ಪಂಗಡಗಳ ಕಲ್ಯಾಣ ಸಮಿತಿ ಅಧ್ಯಕ್ಷ ಪಿ.ಎಂ.ನರೇಂದ್ರಸ್ವಾಮಿ ಹಾಗೂ ಸದಸ್ಯರು ಅಕ್ಟೋಬರ್ 19ರಂದು ನಗರಕ್ಕೆ ಭೇಟಿ ನೀಡಿ ಪ್ರಗತಿ ಪರಿಶೀಲನಾ ಸಭೆ ನಡೆಸಲಿರುವ ಹಿನ್ನೆಲೆಯಲ್ಲಿ ಸಮಿತಿ ಗಮನಕ್ಕೆ ತರಬಹುದಾದ ಎಸ್ ಸಿಪಿ/ಟಿಎಸ್ ಪಿ ಯೋಜನೆಗಳಿಗೆ ಸಂಬಂಧಿಸಿದ ಅಹವಾಲುಗಳನ್ನು ಅಕ್ಟೋಬರ್ 18ರೊಳಗಾಗಿ ಜಿಲ್ಲಾಧಿಕಾರಿಗಳ ಅಥವಾ ಸಮಾಜ ಕಲ್ಯಾಣ ಇಲಾಖೆ ಜಂಟಿ ನಿರ್ದೇಶಕರ ಕಚೇರಿಗೆ ಸಲ್ಲಿಸಲು ಅವಕಾಶವಿದೆ ಎಂಬ ಬಗ್ಗೆ ಸಾರ್ವಜನಿಕರಲ್ಲಿ ಅರಿವು ಮೂಡಿಸಬೇಕೆಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು. ಜಿಲ್ಲಾಧಿಕಾರಿಗಳ ಕಚೇರಿ ನ್ಯಾಯಾಲಯ ಸಭಾಂಗಣದಲ್ಲಿ ಮಂಗಳವಾರ ಸಮಿತಿ ಭೇಟಿ ಹಿನ್ನೆಲೆಯಲ್ಲಿ ಪೂರ್ವಭಾವಿ ಸಭೆ ನಡೆಸಿ ಮಾತನಾಡಿದ ಅವರು, ಪ್ರಗತಿ ಪರಿಶೀಲನಾ ಸಭೆಯು ಅಕ್ಟೋಬರ್ 19ರಂದು ಮಧ್ಯಾಹ್ನ 2:30 ಗಂಟೆಗೆ ನಗರದ ಕೇಂದ್ರ ಗ್ರಂಥಾಲಯ ಸಭಾಂಗಣದಲ್ಲಿ ನಡೆಯಲಿದ್ದು, ಸಮಿತಿಗೆ ಜಿಲ್ಲಾ ವ್ಯಾಪ್ತಿಯಲ್ಲಿ ಅನುಸೂಚಿತ ಜಾತಿ/ಪಂಗಡಗಳ ಸಮುದಾಯದವರ ಸಮಸ್ಯೆಗಳಿಗೆ ಸಂಬಂಧಿಸಿದಂತೆ ಸಂಘ ಸಂಸ್ಥೆ ಹಾಗೂ ಸಮುದಾಯದ ಜನಸಾಮಾನ್ಯರಿಂದ ಸಾರ್ವಜನಿಕ ಹಿತಾಸಕ್ತಿಯುಳ್ಳ ಅಹವಾಲುಗಳನ್ನು ಸಲ್ಲಿಸಲಿಚ್ಛಿಸುವವರು…
ತುಮಕೂರು: ರಾಷ್ಟ್ರೀಯ ವಿದ್ಯುನ್ಮಾನ ಮತ್ತು ಮಾಹಿತಿ ತಂತ್ರಜ್ಞಾನ ಸಂಸ್ಥೆ(NIELIT), ನ್ಯಾಷನಲ್ ಕೆರಿಯರ್ ಸರ್ವಿಸ್(NCS), ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆಯ ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಇಲಾಖೆ ಹಾಗೂ ಕರ್ನಾಟಕ ಕೌಶಲ್ಯಾಭಿವೃದ್ಧಿ ನಿಗಮದ ಸಹಯೋಗದಲ್ಲಿ ಬೆಂಗಳೂರಿನ ಎಸ್. ನಿಜಲಿಂಗಪ್ಪ ಮಹಾವಿದ್ಯಾಲಯದಲ್ಲಿ ಅಕ್ಟೋಬರ್ 20ರಂದು ಉದ್ಯೋಗಮೇಳವನ್ನು ಹಮ್ಮಿಕೊಳ್ಳಲಾಗಿದ್ದು, ಆಸಕ್ತ ಅಭ್ಯರ್ಥಿಗಳು ಭಾಗವಹಿಸಬಹುದಾಗಿದೆ ಎಂದು ಜಿಲ್ಲಾ ಕೌಶಲ್ಯಾಭಿವೃದ್ಧಿ ಅಧಿಕಾರಿ ಕೆಂಪಯ್ಯ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಉದ್ಯೋಗ ಮೇಳದಲ್ಲಿ ರಾಜ್ಯದ ವಿವಿಧ ವಲಯಗಳಿಂದ 100ಕ್ಕೂ ಹೆಚ್ಚಿನ ಪ್ರತಿಷ್ಠಿತ ಸಂಸ್ಥೆಗಳು ಭಾಗವಹಿಸಲಿದ್ದು, ಜಿಲ್ಲೆಯ ಉದ್ಯೋಗಾಕಾಂಕ್ಷಿಗಳು ಜಾಲತಾಣ: https://jobfair.calicut.nielit.in ಮೂಲಕ ನೋಂದಾಯಿಸಿಕೊಂಡು ಉದ್ಯೋಗ ಮೇಳದಲ್ಲಿ ಭಾಗವಹಿಸಬೇಕಾಗಿದೆ ಎಂದು ಅವರು ತಿಳಿಸಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296
ತುಮಕೂರು: ಜಿಲೆಟಿನ್ ಸ್ಪೋಟದಿಂದ ನಗರದ ಗಂಗಾ ಆಸ್ಪತ್ರೆಗೆ ದಾಖಲಾಗಿದ್ದ ಜಿಲ್ಲೆಯ ಗುಬ್ಬಿ ತಾಲ್ಲೂಕು ಸಿ.ಎಸ್. ಪುರ ಹೋಬಳಿ ಇಡಗೂರು ಗ್ರಾಮದ ಸರ್ಕಾರಿ ಹಿರಿಯ ಪ್ರೌಢ ಶಾಲೆಯ 10ನೇ ತರಗತಿ ವಿದ್ಯಾರ್ಥಿ ಮೋನಿಶ್ ಗೌಡ ಅವರನ್ನು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಸೋಮವಾರ ಸಂಜೆ ಭೇಟಿ ಮಾಡಿ ಧೈರ್ಯ ತುಂಬಿದರು. ಶಾಲೆಯಲ್ಲಿ ದಸರಾ ರಜೆ ಹಿನ್ನೆಲೆ 10ನೇ ತರಗತಿ ವಿದ್ಯಾರ್ಥಿಗಳಿಗೆ ವಿಶೇಷ ತರಗತಿ ನಡೆಯುತ್ತಿದ್ದು, ಅಕ್ಟೋಬರ್ 9ರಂದು ವಿಶೇಷ ತರಗತಿಗೆಂದು ತೆರಳಿದ್ದ ಮೋನಿಶ್ ಗೌಡ ಅವರು ಶಾಲೆ ಸಮೀಪ ಕಲ್ಲಿನ ರಾಶಿ ಬಳಿಯಿದ್ದ ಜಿಲೆಟಿನ್ ಕಡ್ಡಿಯನ್ನು ಕುತೂಹಲದಿಂದ ತೆಗೆದುಕೊಂಡ ವೇಳೆ ಸ್ಫೋಟ ಸಂಭವಿಸಿದ್ದು, ಸ್ಪೋಟದಿಂದ ಮೋನಿಶ್ ಗೌಡನ ಬಲಗೈನ ಮೂರು ಬೆರಳುಗಳು ತುಂಡಾಗಿದ್ದ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ನಗರದ ಗಂಗಾ ಆಸ್ಪತ್ರೆಗೆ ತೆರಳಿ ವಿದ್ಯಾರ್ಥಿ ಮತ್ತು ಆತನ ತಾಯಿ ನಳಿನ ಅವರಿಗೆ ಸಾಂತ್ವನ ಹೇಳಿದ ಜಿಲ್ಲಾಧಿಕಾರಿಗಳು ಚೆನ್ನಾಗಿ ಓದಿ ಉತ್ತಮ ಅಧಿಕಾರಿಯಾಗುವಂತೆ ವಿದ್ಯಾರ್ಥಿಗೆ ಕಿವಿ ಮಾತು ಹೇಳಿದರು. ವಿದ್ಯಾರ್ಥಿಯ ಚಿಕಿತ್ಸಾ ವೆಚ್ಚವನ್ನು ಭರಿಸಲು ಕ್ರಮ…
ತುಮಕೂರು: ಜಿಲ್ಲಾಡಳಿತದ ವತಿಯಿಂದ ದಸರಾ ಮಾದರಿಯಲ್ಲಿ ನವೆಂಬರ್ 1ರಂದು ಕನ್ನಡ ರಾಜ್ಯೋತ್ಸವವನ್ನು ಅದ್ದೂರಿಯಾಗಿ ಆಚರಿಸಲು ಅಗತ್ಯ ಪೂರ್ವ ಸಿದ್ಧತೆಗಳನ್ನು ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಅಧಿಕಾರಿಗಳಿಗೆ ಸೂಚಿಸಿದರು. ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿಂದು ನಡೆದ ಕನ್ನಡ ರಾಜ್ಯೋತ್ಸವ ಆಚರಣಾ ಸಮಿತಿಯ ಪೂರ್ವಭಾವಿ ಸಭೆಯ ಅಧ್ಯಕ್ಷತೆವಹಿಸಿ ಮಾತನಾಡಿದ ಅವರು, ತುಮಕೂರಿನಲ್ಲಿ ಜಿಲ್ಲಾಡಳಿತದ ವತಿಯಿಂದ ಪ್ರಪ್ರಥಮ ಬಾರಿಗೆ ಆಚರಿಸಲಾದ ದಸರಾ ಉತ್ಸವದ ಮಾದರಿಯಲ್ಲೇ ಕನ್ನಡ ರಾಜ್ಯೋತ್ಸವವನ್ನೂ ಆಚರಿಸಲು ನಿರ್ಧರಿಸಲಾಗಿದೆ ಎಂದು ತಿಳಿಸಿದರು. ರಾಜ್ಯೋತ್ಸವ ದಿನದಂದು ಕನ್ನಡ ತಾಯಿ ಶ್ರೀ ಭುವನೇಶ್ವರಿ ದೇವಿಯ ಪ್ರತಿಮೆಯನ್ನು ಅಲಂಕೃತ ಬೆಳ್ಳಿರಥದಲ್ಲಿರಿಸಿ ಸಾಂಸ್ಕೃತಿಕ ಕಲಾತಂಡಗಳು ಹಾಗೂ ವಿವಿಧ ಇಲಾಖೆಗಳ ಸ್ತಬ್ಧಚಿತ್ರದೊಂದಿಗೆ ಮೆರವಣಿಗೆ ಏರ್ಪಡಿಸಬೇಕು. ಮೆರವಣಿಗೆಯಲ್ಲಿ ಸರ್ಕಾರದ 5 ಗ್ಯಾರಂಟಿಗಳ ಜೊತೆಗೆ ಜಿಲ್ಲಾ ಪಂಚಾಯತ್, ಕೃಷಿ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ, ಸಮಾಜ ಕಲ್ಯಾಣ, ಆಹಾರ, ಮೀನುಗಾರಿಕೆ, ತೋಟಗಾರಿಕೆ, ಹಿಂದುಳಿದ ವರ್ಗಗಳ ಕಲ್ಯಾಣ, ಶಿಕ್ಷಣ, ಪಶುವೈದ್ಯಕೀಯ, ರೇಷ್ಮೆ ಇಲಾಖೆಗಳ ಪ್ರಸ್ತುತ ಯೋಜನೆಗಳು ಮತ್ತು ಸಾಧನೆಗಳ ಮಾಹಿತಿಯುಳ್ಳ ಉತ್ತಮ ಸ್ತಬ್ಧಚಿತ್ರಗಳನ್ನು ಸೃಜನಾತ್ಮಕವಾಗಿ ರೂಪಿಸಬೇಕು ಎಂದು…
ಚಿಕ್ಕನಾಯಕನಹಳ್ಳಿ: ಭಾರತದ ಸಮಗ್ರ ನೇತ್ರ ಚಿಕಿತ್ಸಾ ಸೇವೆಗಳ ಪೂರೈಕೆದಾರರಲ್ಲಿ ಒಂದಾಗಿರುವ ಡಾ.ಅಗರ್ವಾಲ್ಸ್ ಗ್ರೂಪ್ ಆಫ್ ಐ ಹಾಸ್ಪಿಟಲ್ಸ್, ಗುರುವಾರ ತುಮಕೂರಿನ ಚಿಕ್ಕನಾಯಕನಹಳ್ಳಿಯಲ್ಲಿ ತನ್ನ ಪ್ರಾಥಮಿಕ ನೇತ್ರ ಚಿಕಿತ್ಸಾ ಕೇಂದ್ರವಾದ ಡಾ.ಅಗರವಾಲ್ ನೇತ್ರ ಚಿಕಿತ್ಸಾಲಯ ಉದ್ಘಾಟನೆಗೊಂಡಿತು. ಈ ಸಂದರ್ಭದಲ್ಲಿ ಮಾತನಾಡಿದ ಚಿಕ್ಕನಾಯಕನಹಳ್ಳಿ ಜನಪ್ರಿಯ ಶಾಸಕ ಸಿ.ಬಿ ಸುರೇಶ್ ಬಾಬು, “ಈ ಹೊಸ ಚಿಕಿತ್ಸಾಲಯವನ್ನು ಉದ್ಘಾಟಿಸಲು ನನಗೆ ಗೌರವವಿದೆ. ಈ ರೀತಿಯ ಸೌಲಭ್ಯಗಳು ಚಿಕ್ಕನಾಯಕನಹಳ್ಳಿಯ ಜನತೆಯ ಆರೋಗ್ಯ ಹೆಚ್ಚಿಸುತ್ತವೆ, ಜನರು ತಮ್ಮ ದೃಷ್ಟಿಯನ್ನು ಕಾಪಾಡಿಕೊಳ್ಳಲು ಪೂರ್ವಭಾವಿ ಕ್ರಮಗಳನ್ನು ತೆಗೆದುಕೊಳ್ಳಲು ಸಹಾಯ ಮಾಡುತ್ತಾರೆ. ಜೀವನದ ಪ್ರತಿಯೊಂದು ಹಂತದಲ್ಲೂ ಕಣ್ಣಿನ ಆರೋಗ್ಯವು ನಿರ್ಣಾಯಕವಾಗಿದೆ ಮತ್ತು ಉತ್ತಮ ದೃಷ್ಟಿಯನ್ನು ಕಾಪಾಡಿಕೊಳ್ಳಲು ನಿಯಮಿತ ತಪಾಸಣೆ ಅತ್ಯಗತ್ಯ ಎಂದರು. ಚಿಕ್ಕನಾಯಕನಹಳ್ಳಿಯ ಡಾ.ಅಗರ್ವಾಲ್ಸ್ ಐ ಕ್ಲಿನಿಕ್ ಸಮಗ್ರ ಕಣ್ಣಿನ ಆರೋಗ್ಯ ಸೇವೆಗಳನ್ನು ನೀಡುತ್ತದೆ, ಇದರಲ್ಲಿ ನಿಖರವಾದ ಕಣ್ಣಿನ ಒತ್ತಡ ಮಾಪನ, ವಕ್ರೀಭವನ ಪರೀಕ್ಷೆ, ದೃಷ್ಟಿ ತೀಕ್ಷ್ಣತೆ ತಪಾಸಣೆ ಮತ್ತು ಆರಂಭಿಕ ಕಣ್ಣಿನ ಪೊರೆ ಪತ್ತೆ ಸೇರಿವೆ. ಆಯ್ದ ಫ್ರೇಮ್ಗಳಲ್ಲಿ ಸಾರ್ವಜನಿಕ ಮತ್ತು ವಿಶೇಷ…
ತುಮಕೂರು: ಪ್ರೀತಿ, ಪ್ರೇಮದ ಹೆಸರಿನಲ್ಲಿ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ ಅಪರಾಧಿಗೆ ಜಿಲ್ಲಾ ಅಧಿಕ ಸತ್ರ ನ್ಯಾಯಾಲಯ (FTSC POCSO) 20 ವರ್ಷಗಳ ಜೈಲು ಶಿಕ್ಷೆ ಮತ್ತು 1 ಲಕ್ಷದ 30 ಸಾವಿರ ರೂ. ದಂಡ ವಿಧಿಸಿ ತೀರ್ಪು ನೀಡಿದೆ. ಹರೀಶ್(31) ಎಂಬಾತ ಶಿಕ್ಷೆಗೊಳಗಾದ ಅಪರಾಧಿಯಾಗಿದ್ದಾನೆ. ಈತ ನೊಂದ ಬಾಲಕಿಯ ಸಂಬಂಧಿಯಾಗಿದ್ದಾನೆ. ಮದುವೆಯಾಗಿ ಇಬ್ಬರು ಮಕ್ಕಳಿದ್ದರೂ ಕೂಡ 14 ವರ್ಷದ ಬಾಲಕಿಯನ್ನು ಪ್ರೀತಿ, ಪ್ರೇಮ ಎಂದು ಪುಸಲಾಯಿಸಿ ಆಕೆಯ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ್ದನು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಕಳಂಬೆಳ್ಳ ಪೊಲೀಸ್ ಠಾಣಾ ಅಧಿಕಾರಿ ರವಿಕುಮಾರ್ ತನಿಖೆ ನಡೆಸಿ ದೋಷಾರೋಪಣಾ ಪಟ್ಟಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಿದರು. ಈ ಪ್ರಕರಣವನ್ನು ಕೋರ್ಟ್ ವಿಚಾರಣೆ ನಡೆಸಿದ ವೇಳೆ, ಪತ್ನಿ ಇದ್ದು ಇಬ್ಬರು ಮಕ್ಕಳಿರುವ ಅಪರಾಧಿ ಬಾಲಕಿಗೆ ಸಂಬಂಧಿಯಾಗಿರುವ ಹಿನ್ನೆಲೆ ರಾಜಿ ಪಂಚಾತಿಕೆ ಮಾಡಿಸಿಕೊಂಡು ನೊಂದ ಬಾಲಕಿಯನ್ನು ಅಪರಾಧಿಗೆ ಎರಡನೇ ಮದುವೆ ಮಾಡಿಕೊಡುವುದಾಗಿ ತಿಳಿಸಿದ್ದಾರೆ. ವಿಚಾರಣೆ ನಡೆಸಲಾದ ಸಾಕ್ಷಿಯಿಂದ ಆರೋಪಿಯ ಅಪರಾಧ ಸಾಬೀತಾದ ಹಿನ್ನೆಲೆ ಅಪರಾಧಿಗೆ…
ಬೆಂಗಳೂರು: ಕೌಟುಂಬಿಕ ಕಲಹಕ್ಕೆ ಇಡೀ ಕುಟುಂಬವೇ ಅಂತ್ಯ ಕಂಡ ಘಟನೆಯೊಂದು ರಾಜಾನುಕುಂಟೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ತಾಯಿ ಇಬ್ಬರು ಮಕ್ಕಳಿಗೆ ವಿಷ ಉಣಿಸಿ ತಾನೂ ಆತ್ಮಹತ್ಯೆಗೆ ಶರಣಾಗಿದ್ದು, ಇದನ್ನು ಕಂಡು ಪತಿ ನೇಣುಬಿಗಿದುಕೊಂಡು ಸಾವಿಗೆ ಶರಣಾಗಿರುವ ಘಟನೆ ನಡೆದಿದೆ. ಕಲಬುರಗಿ ಮೂಲದ ಅವಿನಾಶ್(38), ಪತ್ನಿ ಮಮತಾ(30), ಮಕ್ಕಳಾದ ಅಧಿರಾ(5) ಮತ್ತು ಅಣ್ಣಯ್ಯ(3) ಮೃತಪಟ್ಟವರು. ಮೊದಲು ತನ್ನಿಬ್ಬರು ಮಕ್ಕಳಿಗೆ ಮಮತಾ ವಿಷವುಣಿಸಿ ಸಾಯಿಸಿ ನಂತರ ನೇಣು ಹಾಕಿಕೊಂಡಿದ್ದಾರೆ. ಈ ಸಂದರ್ಭದಲ್ಲಿ ಹೊರಗೆ ಹೋಗಿದ್ದ ಅವಿನಾಶ್ ಮನೆಗೆ ಬಂದಾಗ ನೇಣು ಹಾಕಿಕೊಂಡಿದ್ದ ಪತ್ನಿಯನ್ನು ಕೆಳಗಿಳಿಸಿ ನೋಡಿದಾಗ ಪತ್ನಿ ಹಾಗೂ ಇಬ್ಬರು ಮಕ್ಕಳು ಮೃತಪಟ್ಟಿರುವುದು ಕಂಡುಬಂದಿದೆ. ನಂತರ ನೋವು ತಾಳಲಾರದೆ ಆತನೂ ಕೂಡ ನೇಣು ಹಾಕಿಕೊಂಡಿದ್ದಾರೆ. ಅವಿನಾಶ್ ಮತ್ತು ಮಮತಾ ಅವರು ಮದುವೆಯಾದ ನಂತರ ಬೆಂಗಳೂರಿಗೆ ಬಂದು ಯಲಹಂಕ ತಾಲ್ಲೂಕಿನ ಸಿಂಗನಾಯಕನಹಳ್ಳಿಯಲ್ಲಿ ಬಾಡಿಗೆ ಮನೆ ಮಾಡಿಕೊಂಡು ವಾಸವಾಗಿದ್ದರು. ಕಾರು ಖರೀದಿಸಿ ಅವಿನಾಶ್ ಟ್ಯಾಕ್ಸಿ ಚಾಲಕ ವೃತ್ತಿ ಮಾಡುತ್ತಿದ್ದರು. ಪತ್ನಿ ಮಮತಾ ಅವರು ತನ್ನಿಬ್ಬರು ಮಕ್ಕಳನ್ನು…