Author: admin

ಪಾವಗಡ: ಪಟ್ಟಣದ ಸಿರಾ ರಸ್ತೆ ನಾಗರಕಟ್ಟೆ ಬಳಿ ಬಸ್ ಗಾಗಿ ಕಾದು ಕುಳಿತಿದ್ದ ಓರ್ವ ವ್ಯಕ್ತಿಯ ಮೇಲೆ ದುರಸ್ತಿ ಕಾರ್ಯದ ವಾಣಿಜ್ಯ ಮಳಿಗೆಯ ದೊಡ್ಡ ಡಿಮ್ಮಿ ಕಳಚಿ ಬಿದ್ದ ಘಟನೆ ನಡೆದಿದ್ದು, ಅದೃಷ್ಟವಶಾತ್ ವ್ಯಕ್ತಿ ಪ್ರಾಣಾಪಾಯದಿಂದ ಪಾರಾಗಿರುವ ಘಟನೆ ಭಾನುವಾರ ನಡೆದಿದೆ. ಚರಂಡಿ ನಿರ್ಮಾಣಕ್ಕಾಗಿ ವಾಣಿಜ್ಯ ಮಳಿಗೆ ಒತ್ತುವರಿ ತೆರವುಗೊಳಿಸಲು  ಮಳಿಗೆಯ ಕೆಲ ಭಾಗ ದುರಸ್ತಿಕಾರ್ಯ ನಡೆಯುತ್ತಿದ್ದೂ  ಸುಮಾರು ಆರು ತಿಂಗಳುಗಳಿಂದ  ಕೆಲ ಕಾರಣಾಂತರಗಳಿಂದ ನನೆಗುದಿಗೆ ಬಿದ್ದಿದ್ದು , ಈ ಸ್ಥಳದ ಮುಂಭಾಗದಲ್ಲಿ ಪ್ರತಿನಿತ್ಯ ಬಸ್ ಗಾಗಿ ಕಾಯುತ್ತಿರುವುದು ಸರ್ವೇಸಾಮಾನ್ಯವಾಗಿದೆ. ಭಾನುವಾರ ಸಂಜೆ ನಾಲ್ಕು ಗಂಟೆ ಸಮಯದಲ್ಲಿ ವಾಣಿಜ್ಯ ಮಳಿಗೆಯ  ಮೇಲ್ಛಾವಣಿಯ ದೊಡ್ಡ ಡಿಮ್ಮಿ  ಆಧಾರ ಸ್ಥಂಭವಿಲ್ಲದೆ  ಏಕಾಏಕಿ ನೆಲಕ್ಕುರುಳಿದೆ.  ಇದೇ ವೇಳೆ ಬಸ್ ಗಾಗಿ ಕಾಯುತ್ತಿದ್ದ ವ್ಯಕ್ತಿಯ ತಲೆಗೆ ದೊಡ್ಡ ಡಿಮ್ಮಿ ಉರುಳಿದೆ. ಪರಿಣಾಮವಾಗಿ ಅವರ ತಲೆ, ಕೈ ಕಾಲುಗಳಿಗೆ ಗಾಯವಾಗಿತ್ತು. ತಕ್ಷಣವೇ ಸ್ಥಳೀಯ ಆಟೋ ಚಾಲಕರು 108 ವಾಹನಕ್ಕೆ ಕರೆ ಮಾಡಿ, ವ್ಯಕ್ತಿಯನ್ನು ಆಸ್ಪತ್ರೆಗೆ ಸಾಗಿಸಿದ್ದಾರೆ. ವಾಣಿಜ್ಯ ಮಳಿಗೆಯ…

Read More

ತುಮಕೂರು:  ನಗರದ ಮಹಾತ್ಮಗಾಂಧಿ ಕ್ರೀಡಾಂಗಣದಲ್ಲಿ ನವೆಂಬರ್ 1ರಂದು ವೈಭವಯುತವಾಗಿ ಹಾಗೂ ಅರ್ಥಪೂರ್ಣವಾಗಿ ಕನ್ನಡ ರಾಜ್ಯೋತ್ಸವವನ್ನು ಆಚರಿಸಲು ಪೂರ್ವ ಸಿದ್ಧತೆ ಕೈಗೊಳ್ಳಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತಿಳಿಸಿದರು. ಜಿಲ್ಲಾ ಪಂಚಾಯತ್ ಕಚೇರಿಯಲ್ಲಿಂದು ಕನ್ನಡ ರಾಜ್ಯೋತ್ಸವ ಆಚರಣೆಗೆ ಸಂಬಂಧಿಸಿದಂತೆ ಕನ್ನಡಪರ ಸಂಘಟನೆಗಳೊಂದಿಗೆ ಸಭೆ ನಡೆಸಿ ಮಾತನಾಡಿದ ಅವರು, ರಾಜ್ಯೋತ್ಸವದ ಅಂಗವಾಗಿ ಜಿಲ್ಲಾಧಿಕಾರಿಗಳ ಕಚೇರಿಯಿಂದ ಮೆರವಣಿಗೆ ನಡೆಸುವ, ಮೆರವಣಿಗೆಯಲ್ಲಿ ವಿವಿಧ ಇಲಾಖೆಗಳ ಸ್ತಬ್ದ ಚಿತ್ರ ಪಾಲ್ಗೊಳ್ಳುವಿಕೆ, ಕನ್ನಡ ನಾಡು-ನುಡಿಗಾಗಿ ಸೇವೆ ಸಲ್ಲಿಸಿದ ಸಾಧಕರನ್ನು ಗುರುತಿಸಿ ಸನ್ಮಾನಿಸುವ ಬಗ್ಗೆ ಸಭೆಯಲ್ಲಿ ಚರ್ಚಿಸಿದರು. ರಾಜ್ಯೋತ್ಸವದ ಪ್ರಯುಕ್ತ ನಗರದ ಪ್ರಮುಖ ಬೀದಿಗಳಲ್ಲಿ ಕನ್ನಡ ಬಾವುಟ, ಕನ್ನಡ ಕವಿ, ಸಾಹಿತಿಗಳ ಭಾವಚಿತ್ರ, ಬ್ಯಾನರ್‌ಗಳ ಅಳವಡಿಕೆಗೆ ಅನುಮತಿ ನೀಡಬೇಕು. ಕನ್ನಡ ನಾಡು–ನುಡಿಗಾಗಿ ಸೇವೆ ಸಲ್ಲಿಸಿದವರನ್ನು ಮಾತ್ರ ಸನ್ಮಾನಿಸಬೇಕು. ಕನ್ನಡ ರಾಜ್ಯೋತ್ಸವ ಕಾರ್ಯಕ್ರಮಕ್ಕೆ ಜಿಲ್ಲಾ ಮಟ್ಟದ ಎಲ್ಲಾ ಅಧಿಕಾರಿಗಳು, ಅಧೀನ ಅಧಿಕಾರಿಗಳು, ಸಿಬ್ಬಂದಿ ತಪ್ಪದೇ ಹಾಜರಾಗುವಂತೆ ಕ್ರಮ ಕೈಗೊಳ್ಳಬೇಕೆಂದು ಕನ್ನಡಪರ ಸಂಘಟನೆಗಳು ಜಿಲ್ಲಾಧಿಕಾರಿಗಳಿಗೆ ಮನವಿ ಮಾಡಿದರು. ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಡಾ.ಎನ್. ತಿಪ್ಪೇಸ್ವಾಮಿ,…

Read More

ತುಮಕೂರು ಜಿಲ್ಲಾಡಳಿತದ ವತಿಯಿಂದ ಪ್ರಪ್ರಥಮ ಬಾರಿಗೆ ತುಮಕೂರು ಆಯೋಜಿಸಲಾಗಿದ್ದ ತುಮಕೂರು ದಸರಾ ಉತ್ಸವದಲ್ಲಿ ಧಾರ್ಮಿಕ ಆಚರಣೆಗಳಿಂದ ಅಭೂತಪೂರ್ವ ಯಶಸ್ಸಿಗೆ ಕಾರಣಕರ್ತರಾದ ಜಿಲ್ಲಾ ಅರ್ಚಕರ ಸಂಘಕ್ಕೆ ಗೃಹ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ.ಜಿ. ಪರಮೇಶ್ವರ ಅವರು ಅಭಿನಂದನೆ ಸಲ್ಲಿಸಿದ್ದಾರೆ. ದಸರಾ ಉತ್ಸವದ ಪ್ರಯುಕ್ತ ನಗರದ ಜೂನಿಯರ್ ಕಾಲೇಜು ಮೈದಾನದಲ್ಲಿ ಪ್ರತಿಷ್ಠಾಪಿಸಲಾಗಿದ್ದ ಚಾಮುಂಡೇಶ್ವರಿ ದೇವಿಗೆ ಶರನ್ನವರಾತ್ರಿಯ 9 ದಿನಗಳ ಕಾಲ ವಿವಿಧ ಅಲಂಕಾರ ಪೂಜೆ, ಪುಣ್ಯಾಹ, ಹೋಮ, ಪೂರ್ಣಾಹುತಿ, ಮತ್ತಿತರ ಪೂಜಾ ಸೇವೆಗಳು ಹಾಗೂ ವಿಜಯ ದಶಮಿಯ ಜಂಬೂಸವಾರಿಯಲ್ಲಿ ಚಾಮುಂಡೇಶ್ವರಿ ಪೂಜಾ ಕಾರ್ಯಕ್ರಮಗಳು ಸಂಪನ್ನಗೊಂಡಿದ್ದು, ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭೇಟಿ ನೀಡಿ ದೇವಿಯ ಕೃಪಾಶೀರ್ವಾದಕ್ಕೆ ಪಾತ್ರರಾಗಿದ್ದಾರೆ. ದಸರಾ ಉತ್ಸವದ ಸಕಲ ಧಾರ್ಮಿಕ ಪೂಜಾ ಸೇವೆಗಳ ನೇತೃತ್ವ ವಹಿಸಿಕೊಂಡಿದ್ದ ಜಿಲ್ಲಾ ಅರ್ಚಕರ ಸಂಘದ ಅಧ್ಯಕ್ಷ ವಿ. ರಾಮತೀರ್ಥನ್ ಅವರಿಗೂ ಸಚಿವರು ಅಭಿನಂದನೆ ಸಲ್ಲಿಸಿದ್ದಾರೆ. ನವರಾತ್ರಿ ಸಂದರ್ಭದಲ್ಲಿ ಪ್ರತಿ ದಿನ ಪೂಜಾ ಕೈಂಕರ್ಯಗಳನ್ನು ನಿರ್ವಿಘ್ನವಾಗಿ ನಡೆಸಲು ಸಹಕರಿಸಿದ ದಸರಾ ಧಾರ್ಮಿಕ ಆಚರಣೆ ಸಮಿತಿ ಅಧ್ಯಕ್ಷ ಡಾ:…

Read More

ತುಮಕೂರು: ಜಿಲ್ಲೆಯ ಕುಣಿಗಲ್ ತಾಲೂಕು ಯಡಿಯೂರು ಸಿದ್ದಲಿಂಗೇಶ್ವರ ಸ್ವಾಮಿ ದೇವಸ್ಥಾನದಲ್ಲಿ ವಿಜಯದಶಮಿ ದಿನದಂದು ಅಪರ ಜಿಲ್ಲಾಧಿಕಾರಿ ಹಾಗೂ ದೇವಸ್ಥಾನದ ಆಡಳಿತಧಿಕಾರಿ ಡಾ.ಎನ್. ತಿಪ್ಪೇಸ್ವಾಮಿ ಅವರು ಕದಳೀ ಛೇದನದ ಮೂಲಕ ಬನ್ನಿ ಪೂಜೆ ನೆರವೇರಿಸಿದರು. ಈ ಸಂದರ್ಭದಲ್ಲಿ ದೇವಸ್ಥಾನದ ಆಡಳಿತ ಮಂಡಳಿಯ ಪದಾಧಿಕಾರಿಗಳು, ಕಾರ್ಯನಿರ್ವಹಣಾಧಿಕಾರಿ ಮಹೇಶ್ ಕುಮಾರ್ ಸೇರಿದಂತೆ ಸಾವಿರಾರು ಮಂದಿ ಭಕ್ತಾಧಿಗಳು ಉಪಸ್ಥಿತರಿದ್ದು, ಪೂಜಾ ಸೇವೆಯನ್ನು ಕಣ್ತುಂಬಿಕೊಂಡು ಸಂಭ್ರಮಿಸಿದರು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q

Read More

ತುಮಕೂರು:  ಗೌರವಾನ್ವಿತ ಉಪ ಲೋಕಾಯುಕ್ತ ನ್ಯಾಯಮೂರ್ತಿ ಬಿ. ವೀರಪ್ಪ ಅವರು ಅಕ್ಟೋಬರ್ 18, 19 ಹಾಗೂ 20ರಂದು 3 ದಿನಗಳ ಕಾಲ ಜಿಲ್ಲೆಗೆ ಭೇಟಿ ನೀಡಿ ಸಾರ್ವಜನಿಕ ಕುಂದು ಕೊರತೆ ಸ್ವೀಕಾರ, ದೂರು ವಿಚಾರಣೆ ಹಾಗೂ ಪ್ರಕರಣಗಳ ವಿಲೇವಾರಿ ಸಭೆ, ಲೋಕಾಯುಕ್ತ ಕಾಯ್ದೆ ಕುರಿತು ಕಾನೂನು ಅರಿವು ಕಾರ್ಯಕ್ರಮ, ಸಾರ್ವಜನಿಕ ಆಡಳಿತದಲ್ಲಿ ಕರ್ನಾಟಕ ಲೋಕಾಯುಕ್ತ ಸಂಸ್ಥೆಯ ಪಾತ್ರ, ಜಿಲ್ಲೆಯಲ್ಲಿ ಬಾಕಿ ಇರುವ ಲೋಕಾಯುಕ್ತ ದೂರುಗಳ ವಿಚಾರಣೆ ಹಾಗೂ ವಿಲೇವಾರಿ ಕಾರ್ಯಕ್ರಮಗಳನ್ನು ನಡೆಸಲಿದ್ದು, ಅಗತ್ಯ ಮಾಹಿತಿಯೊಂದಿಗೆ ಉಪ ಲೋಕಾಯುಕ್ತರ ಎಲ್ಲಾ ಕಾರ್ಯಕ್ರಮಗಳಲ್ಲೂ ಹಾಜರಾಗಬೇಕೆಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಅಧಿಕಾರಿಗಳಿಗೆ ಸೂಚನೆ ನೀಡಿದರು. ಜಿಲ್ಲಾ ಪಂಚಾಯತಿ ಸಭಾಂಗಣದಲ್ಲಿಂದು ಅಧಿಕಾರಿಗಳೊಂದಿಗೆ ಪೂರ್ವಭಾವಿ ಸಭೆ ನಡೆಸಿ ಮಾತನಾಡಿದ ಅವರು, ಉಪ ಲೋಕಾಯುಕ್ತರು ಕರ್ನಾಟಕ ಲೋಕಾಯುಕ್ತ ಸಂಸ್ಥೆಯಲ್ಲಿ ದಾಖಲಾಗಿ ತನಿಖೆಗೆ ಬಾಕಿ ಇರುವ ದೂರು ಪ್ರಕರಣಗಳ ವಿಚಾರಣೆ ಮತ್ತು ಸಭೆ ನಡೆಸಲಿದ್ದಾರೆ ಎಂದು ತಿಳಿಸಿದರಲ್ಲದೆ, ಈವರೆಗೆ ನೋಂದಣಿಯಾದ ದೂರು ಪ್ರಕರಣಗಳ ಮಾಹಿತಿ ಪಡೆದ ಅವರು, ಉಪ ಲೋಕಾಯುಕ್ತರ ಕಾರ್ಯಕ್ರಮಗಳಿಗೆ…

Read More

ಪಾವಗಡ: ಎಸ್.ಎಸ್.ಎಲ್.ಸಿ. ವಿಜ್ಞಾನ ವಿಷಯದ ಪ್ರಶ್ನೆ ಪತ್ರಿಕೆಯನ್ನು ಸರಳೀಕರಣಗೊಳಿಸುವಂತೆ ಆಗ್ರಹಿಸಿ ಪಾವಗಡ ಪ್ರೌಢಶಾಲಾ ವಿಜ್ಞಾನ ವಿಷಯ  ಶಿಕ್ಷಕರ ವೇದಿಕೆಯು ಕ್ಷೇತ್ರಶಿಕ್ಷಣಾಧಿಕಾರಿಗಳಾದ ಇಂದ್ರಾಣಮ್ಮ ಮತ್ತು ಕ್ಷೇತ್ರ ಸಂಪನ್ಮೂಲ ಸಮನ್ವಯಾಧಿಕಾರಿಗಳಾದ  ವೆಂಕಟೇಶ್.ಜಿ ರವರಿಗೆ ಮನವಿ ಸಲ್ಲಿಸಿತು. ಮನವಿಯಲ್ಲಿ ಪ್ರಮುಖವಾಗಿ ಮೂಲ ವಿಜ್ಞಾನದ ಉಳಿವಿನ ಆರಂಭವು ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಂದ ಆಗಬೇಕಿದೆ ಅದಕ್ಕಾಗಿ ಈ ಹಂತದಲ್ಲಿ ಓದುವ ಮಕ್ಕಳಿಗೆ ವಿಜ್ಞಾನದ ಬಗೆಗೆ ಆಸಕ್ತಿ ಮೂಡಿಸುವು ದು ಬಹಳ ಮುಖ್ಯ.ಹಾಗಾಗಿ ಇದಕ್ಕೆ ಪೂರಕವಾಗಿ ಪ್ರಶ್ನೆ ಪತ್ರಿಕೆಯ ಸ್ವರೂಪ ಬದಲಾವಣೆ ಪ್ರಮುಖ ಹೆಜ್ಜೆಯಾಗಿದೆ ಎಂಬ ಮನವಿಯನ್ನು ಸಲ್ಲಿಸಲಾಯಿತು. ಈ ವೇಳೆ ವೇದಿಕೆಯ ಅಧ್ಯಕ್ಷರಾದ  ರವೀಂದ್ರ ಬಿ., ಕಾರ್ಯದರ್ಶಿಗಳಾದ ಮಹೇಶ್ವರಪ್ಪ ಎಂ.ಎಸ್.  ಖಜಾಂಚಿ ಗಳಾದ ರೇಣುಕರಾಜ್.ಜಿ.ಹೆಚ್ ಹಾಗೂ ಪಾವಗಡ ತಾಲ್ಲೂಕಿನ ಸರ್ಕಾರಿ , ಅನುದಾನಿತ  ಮತ್ತು ಅನುದಾನ ರಹಿತ ಪ್ರೌಢಶಾಲಾ ವಿಜ್ಞಾನ ಶಿಕ್ಷಕರು ಭಾಗವಹಿಸಿದ್ದರು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q

Read More

ಕನ್ನಡದ ಕಿರಾತಕ ಚಿತ್ರದಲ್ಲಿ ನಟಿಸಿದ್ದ ತಮಿಳು ನಟಿ ಓವಿಯಾ ತಮಿಳು ಚಿತ್ರರಂಗದ ಪ್ರಮುಖ ನಟಿಯಾಗಿದ್ದಾರೆ. ಇದೀಗ ಅವರ ಖಾಸಗಿ ವಿಡಿಯೋ ಲೀಕ್ ಆಗಿರುವ ವಿಚಾರ ತಮಿಳುನಾಡಿನಲ್ಲಿ ಇಂಟರ್ ನೆಟ್ ನಲ್ಲಿ ಕಿಡಿ ಹಚ್ಚಿದೆ. ಓವಿಯಾ ಅವರ ಖಾಸಗಿ ವೀಡಿಯೊ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಈ ಬಗ್ಗೆ ಅಭಿಮಾನಿಗಳು ಪ್ರಶ್ನೆ ಮಾಡಿದ್ದಾರೆ. ಅಭಿಮಾನಿಗಳ ಪ್ರಶ್ನೆಗೆ ನಟಿ,  “ವಿಡಿಯೋ ನೋಡಿ ಎಂಜಾಯ್ ಮಾಡಿ”ಎಂದು ಉತ್ತರಿಸಿದ್ದಾರೆ. ನೆಟಿಜನ್ ಒಬ್ಬರು ವಿಡಿಯೋ ಹಾಕಿ ಮೇಡಂ ನಿಮ್ಮದು 17 ಸೆಕೆಂಡ್‌ಗಳ ವಿಡಿಯೋ ಇದೆ ಎಂದು ಕಮೆಂಟ್ ಮಾಡಿದ್ದರು. ಇದಕ್ಕೆ ನಟಿ ನೋಡಿ ಆನಂದಿಸಿ ಎಂದು ಬರೆದಿದ್ದರು. ಅಂತೆಯೇ, ಇನ್ನೊಬ್ಬ ನೆಟಿಜನ್ ಮೇಡಂ ‘ಉದ್ದದ ವೀಡಿಯೊ ಇದೀಯಾ’ ಎಂದು ಕೇಳಿದ್ದರು. ಇದಕ್ಕೆ ನಟಿ ‘ನೆಕ್ಸ್ಟ್ ಟೈಮ್ ಬ್ರೋ’ ಎಂದು ಬರೆದಿದ್ದಾರೆ. ಸಾಮಾನ್ಯವಾಗಿ ವಿಡಿಯೋ ಲೀಕ್ ಆದ ಸಂದರ್ಭದಲ್ಲಿ ವ್ಯಕ್ತಿಗಳು ಭೂಗತರಾಗುವುದು, ಅದು ನಾನಲ್ಲ ಎಂದು ವಾದಿಸುವುದು ಸಾಮಾನ್ಯ ಆದ್ರೆ ನಟಿ ಓವಿಯಾ, ವಿಡಿಯೋ ನೋಡಿ ಎಂಜಾಯ್ ಮಾಡಿ ಎಂದು…

Read More

ತುಮಕೂರು:  ಭಾರತದ ಬಹುತ್ವ ಸಂಸ್ಕೃತಿಯನ್ನು ತಿಳಿಸಿದ ಬುದ್ಧ, ಬಸವ, ಅಂಬೇಡ್ಕರ್, ಸ್ವಾಮಿ ವಿವೇಕಾನಂದ, ಕುವೆಂಪು ಅವರಂತಹ ದಾರ್ಶನಿಕರ ವಿಚಾರಧಾರೆಗಳನ್ನು ಉಳಿಸಲು ಸಮತೆ–ಮಮತೆಗಳ ಪರಂಪರೆ ಅಗತ್ಯ ಎಂದು ಸಾಹಿತಿ ಡಾ.ಬರಗೂರು ರಾಮಚಂದ್ರಪ್ಪ ಅಭಿಪ್ರಾಯ ವ್ಯಕ್ತಪಡಿಸಿದರು. ತುಮಕೂರು ದಸರಾ ಉತ್ಸವ ಅಂಗವಾಗಿ ನಗರದ ಗುಬ್ಬಿ ವೀರಣ್ಣ ಕಲಾ ಕ್ಷೇತ್ರದ ಪ್ರೊ.ಹೆಚ್.ಜಿ. ಸಣ್ಣಗುಡ್ಡಯ್ಯ ಹಾಗೂ ವೀಚಿ ವೇದಿಕೆಯಲ್ಲಿ ಶನಿವಾರ ಆಯೋಜಿಸಿದ್ದ ಸಾಂಸ್ಕೃತಿಕ ಪರಂಪರೆ ಮತ್ತು ಸಾಮಾಜಿಕ ಜವಾಬ್ದಾರಿ ಕುರಿತು ಸಂವಾದಗೋಷ್ಠಿ ಕಾರ್ಯಕ್ರಮದ ಉದ್ಘಾಟನೆ ನೆರವೇರಿಸಿ ಮಾತನಾಡಿದ ಅವರು, ಪರಂಪರೆ ಎಲ್ಲಾ ಕಾಲದಲ್ಲಿಯೂ ಬೆಳವಣಿಗೆ ಹೊಂದುತ್ತಾ ಬರುತ್ತಿದ್ದು, ಸಂಸ್ಕೃತಿ ಮತ್ತು ಪರಂಪರೆಗಳ ನಡುವಿನ ಸೂಕ್ಷö್ಮ ವ್ಯತ್ಯಾಸಗಳನ್ನು ನಾವು ತಿಳಿದುಕೊಳ್ಳಬೇಕಾಗಿದೆ. ಬರವಣಿಗೆ ಸಂಸ್ಕೃತಿಯ ಜೊತೆ–ಜೊತೆಗೆ ಜನಮೂಲ ಸಂಸ್ಕೃತಿಯನ್ನು ತಿಳಿದಾಗ ಮಾತ್ರ ಈ ನೆಲದ ಮೂಲ ಪರಂಪರೆಯ ನೆಲೆಗಟ್ಟನ್ನು ನೋಡಲು ಸಾಧ್ಯ ಎಂದು ತಿಳಿಸಿದರು. ಜಿಲ್ಲೆಯು ಕನ್ನಡ ಭಾಷೆ ಹಾಗೂ ರಾಜ್ಯಕ್ಕೆ ಹಲವು ಮೊದಲುಗಳನ್ನು ನೀಡಿದೆ. ಕನ್ನಡದ ಮೊದಲ ನಾಟಕ ಸಂಸ್ಥೆ, ಕನ್ನಡ ಮೊದಲ ಟಾಕಿ ಸಿನಿಮಾಗೆ ಚಿತ್ರಕಥೆ, ಸಾಹಿತ್ಯ,…

Read More

ಬೆಂಗಳೂರು : ನಟ ದರ್ಶನ್ ಅವರು ಕೊಲೆ ಪ್ರಕರಣದಲ್ಲಿ ಸಿಲುಕುತ್ತಿದ್ದಂತೆಯೇ ಬಾಯಿಗೆ ಬಂದಂತೆ ಮಾತನಾಡಿದ್ದ ನಟ ಪ್ರಥಮ್ ಇದೀಗ ಪ್ಲೇಟ್ ಚೇಂಜ್ ಮಾಡಿದ್ದಾರೆ. ದರ್ಶನ್ ಜಾಮೀನು ಅರ್ಜಿ ವಿಚಾರಣೆ ಸಂದರ್ಭದಲ್ಲಿ ಪ್ರಥಮ್ ಅಚ್ಚರಿಯ ಪೋಸ್ಟ್ ಹಂಚಿಕೊಂಡಿದ್ದಾರೆ. ಈಶ್ವರನಲ್ಲಿ ಪಾಮಾಣಿಕ ಪ್ರಾರ್ಥನೆ. ದರ್ಶನ್ ಸರ್ ಬಿಡುಗಡೆಯಾಗಿ ಚಿತ್ರರಂಗದಲ್ಲಿ ಹೊಸ ಇನ್ನಿಂಗ್ಸ್ ಶುರು ಮಾಡುವಂತಾಗಲಿ. ಕೆಟ್ಟ ಕಾಲ ಎಲ್ಲರಿಗೂ ಬರುತ್ತದೆ. ಅದನ್ನು ದಾಟಿ ಅಭಿಮಾನಿಗಳನ್ನ ರಂಜಿಸಲಿ ಎಂದು ಪೋಸ್ಟ್ ಮಾಡಿದ್ದಾರೆ. ಅಂಧಾಭಿಮಾನಿ ಅಂದಿದ್ದು ನೋವಾಗಿದ್ದರೆ ಮರೆತುಬಿಡಿ. ವ್ಯಂಗ್ಯ ಬೇಡ;ದೇವ್ರಾಣೆ ಬಿಡುಗಡೆಯಾಗಲಿ. ಮನಸ್ಸಿನಿಂದ ಈಶ್ವರನಲ್ಲಿ ಪ್ರಾರ್ಥನೆ ಮಾಡಿದ್ದೇನೆ ಎಂದು ಪ್ರಥಮ್ ಬರೆದುಕೊಂಡಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

Read More

‘ಮಾರ್ಟಿನ್’ ಸಿನಿಮಾ ರಿಲೀಸ್ ಆಗಿ ಮೂರು ದಿನಗಳು ಕಳೆದಿವೆ. ಈ ಚಿತ್ರದ ಬಗ್ಗೆ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ. ಇನ್ನೊಂದೆಡೆ ಧ್ರುವ ಅವರ ಅಭಿಮಾನಿಗಳು ಚಿತ್ರವನ್ನು ಮೆಚ್ಚಿಕೊಂಡಿದ್ದಾರೆ. ಈ ಚಿತ್ರದಲ್ಲಿ ಧ್ರುವ ಸರ್ಜಾ ಅವರು ದ್ವಿಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಈ ಸಿನಿಮಾದ ಗಳಿಕೆ ಬಗ್ಗೆ ಮಾಹಿತಿ ಸಿಕ್ಕಿದೆ. ದಸರಾ ಸಂದರ್ಭದಲ್ಲಿ ರಿಲೀಸ್ ಆದ ಈ ಚಿತ್ರ ಮೂರು ದಿನಗಳಲ್ಲಿ ಗಳಿಕೆ ಮಾಡಿದ್ದು ಎಷ್ಟು ಎಂಬ ಬಗ್ಗೆ ಮಾಹಿತಿ ರಿವೀಲ್ ಆಗಿದೆ. ಆ ಬಗ್ಗೆ ಇಲ್ಲಿದೆ ವಿವರ. ಎಪಿ ಅರ್ಜುನ್ ಅವರು ‘ಮಾರ್ಟಿನ್’ ಚಿತ್ರವನ್ನು ನಿರ್ದೇಶನ ಮಾಡಿದರೆ, ಉದಯ್ ಮೆಹ್ತಾ ಈ ಚಿತ್ರವನ್ನು ನಿರ್ಮಾಣ ಮಾಡಿದ್ದಾರೆ. ಇದು ಧ್ರುವ ಸರ್ಜಾ ವೃತ್ತಿ ಬದುಕಿನಲ್ಲೇ ಅತಿ ದೊಡ್ಡ ಬಜೆಟ್ನ ಚಿತ್ರವಾಗಿದೆ. ಸಿನಿಮಾದ ಬಜೆಟ್ 100 ಕೋಟಿ ರೂಪಾಯಿ ದಾಟಿದೆ. Sacnilk ವರದಿ ಮಾಡಿರುವ ಪ್ರಕಾರ ‘ಮಾರ್ಟಿನ್’ ಸಿನಿಮಾ ಮೂರು ದಿನಗಳಲ್ಲಿ ಸುಮಾರು 16 ಕೋಟಿ ರೂಪಾಯಿ ಕಲೆಕ್ಷನ್ ಮಾಡಿದೆಯಂತೆ. ಬಜೆಟ್ ಗೆ ಹೋಲಿಕೆ ಮಾಡಿದರೆ ಸಿನಿಮಾದ ಗಳಿಕ…

Read More