Subscribe to Updates
Get the latest creative news from FooBar about art, design and business.
- ಉಪಮುಖ್ಯಮಂತ್ರಿಯಾಗಿ ನೇಮಕಗೊಂಡಿರುವುದಕ್ಕೆ ನಾನು ಸಂಪೂರ್ಣ ತೃಪ್ತ: ಜಿ. ಪರಮೇಶ್ವರ
- ಡಿ.ಕೆ. ಶಿವಕುಮಾರ್ ಜೀವನದ ಮಾರ್ಗದರ್ಶಕ ಶಕ್ತಿ ‘ನೊಣವಿನಕೆರೆ ಅಜ್ಜಯ್ಯ’!
- ಕೆಪಿಸಿಸಿಗೆ ಬಿ.ಕೆ.ಹರಿಪ್ರಸಾದ್ ಹೊಸ ಸಾರಥಿ: ಹೈಕಮಾಂಡ್ ಮಹತ್ವದ ನಿರ್ಧಾರ
- ಸಿಎಂ ಕುರ್ಚಿ ನನ್ನದಲ್ಲ, ಅಧಿಕಾರವನ್ನು ಜನರ ಸೇವೆಗೆ ಮುಡಿಪಾಗಿಡುತ್ತೇನೆ: ಸಿಎಂ ಡಿ.ಕೆ.ಶಿವಕುಮಾರ್
- ಕರ್ನಾಟಕದ 25ನೇ ಮುಖ್ಯಮಂತ್ರಿಯಾಗಿ ಡಿ.ಕೆ.ಶಿವಕುಮಾರ್ ಪ್ರಮಾಣವಚನ ಸ್ವೀಕಾರ!
- ಸಾದರ ಸಮುದಾಯ ಭವನದಲ್ಲಿ ಸಪ್ತಗಿರಿ ಆಸ್ಪತ್ರೆ ವತಿಯಿಂದ ಬೃಹತ್ ಆರೋಗ್ಯ ತಪಾಸಣೆ ಮತ್ತು ಶಸ್ತ್ರ ಚಿಕಿತ್ಸಾ ಶಿಬಿರ
- ಖಾಸಗಿ ಶಾಲೆಗಳ ಮಾದರಿಯಲ್ಲೇ, ಸರ್ಕಾರಿ ಶಾಲೆಗಳ ರೂಪಾಂತರ: ಡಿ.ಕೆ.ಶಿವಕುಮಾರ್
- ತುಮಕೂರು ವಿವಿ 19ನೇ ಘಟಿಕೋತ್ಸವ: 90 ವಿದ್ಯಾರ್ಥಿಗಳಿಗೆ 117 ಚಿನ್ನದ ಪದಕ
Author: admin
ಬಿಗ್ ಬಾಸ್ ಎಂಬ ಕಾರ್ಯಕ್ರಮ ನಡೆಸುವ ಕೆಲವು ಕನ್ನಡ ದ್ರೋಹಿಗಳ ನಿಮ್ಮ ಕಿತ್ತೋದ್ ಆಟಕ್ಕೆ ಕಿಚ್ಚ ಸುದೀಪ್ ಬಿಗ್ ಬಾಸ್ ನಿರೂಪಕರಾಗಿ ನಿಲ್ಲಿಸಬೇಕಾಗಿದೆ ಎಂದು ಕನ್ನಡಪರ ಹೋರಾಟಗಾರ ರೂಪೇಶ್ ರಾಜಣ್ಣ ಬಿಗ್ ಬಾಸ್ ಶೋ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕಿಚ್ಚ ಸುದೀಪ್ ಅವರನ್ನು ಶೋದಿಂದ ಕೈಬಿಡುತ್ತಿರುವ ಬಗ್ಗೆ ಆಕ್ರೋಶ ವ್ಯಕ್ತಪಡಿಸಿರುವ ಅವರು, ಸುದೀಪ್ ಅವರಿಗೆ ಮಾಡಿರುವ ಅವಮಾನ ಸಹಿಸೋಲ್ಲ ಎಂದಿದ್ದಾರೆ. ಎ ಮುಂಬೈ ಮರಾಠಿ ಹಾಗೂ ತಮಿಳ್ ನಿರ್ದೇಶಕ ಮೊದಲು ಬಿಗ್ ಬಾಸ್ ಬಿಡಿ. ಇಲ್ಲ ಬಿಗ್ ಬಾಸ್ ನಿಲ್ಲಬೇಕು. ಅಸಲಿ ವಿಷಯ ನಾಳೆ ಮಾತಾಡ್ತೀನಿ ಎಂದು ಬರೆದು ಚಕ್ರವರ್ತಿ ಚಂದ್ರಚೂಡ್ ಅವರನ್ನು ಟ್ಯಾಗ್ ಮಾಡಿದ್ದಾರೆ. ರೂಪೇಶ್ ರಾಜಣ್ಣ ಅವರ ಈ ಟ್ವೀಟ್ ಸಖತ್ ಚರ್ಚೆಗೆ ಕಾರಣ ಮಾಡಿಕೊಟ್ಟಿದೆ. ಅಷ್ಟಕ್ಕೂ ರೂಪೇಶ್ ರಾಜಣ್ಣ ಅವರಿಗೆ ಗೊತ್ತಿರೋ ವಿಚಾರ ಏನು? ಅವರು ಏನು ಹೇಳೋಕೆ ಹೊರಟಿದ್ದಾರೆ ಎಂದು ತಿಳಿಯಲು ಜನರಲ್ಲಿಯೂ ಕುತೂಹಲ ಮೂಡಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ…
ಬೆಳಗಾವಿ : ಶಕ್ತಿ ಯೋಜನೆಯಿಂದಾಗಿ ಇದುವರೆಗೂ ರಾಜ್ಯದಲ್ಲಿ ಮಹಿಳೆಯರು 300 ಕೋಟಿ ಉಚಿತ ಟ್ರಿಪ್ ಮಾಡಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಸವದತ್ತಿಯಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಮುಂದಿನ ವರ್ಷದ ವೇಳೆಗೆ 6 ಸಾವಿರ ಭಕ್ತರು ಉಳಿಯಲು ರೇಣುಕಾ ಯಲ್ಲಮ್ಮ ಸನ್ನಿಧಿಯಲ್ಲಿ ವ್ಯವಸ್ಥೆ ರೂಪಿಸುತ್ತೇವೆ ಎಂದು ತಿಳಿಸಿದರು. ದೇವರು–ಧರ್ಮ ತಮಗೆ ಮಾತ್ರ ಸೇರಿದ್ದು ಎಂದು ಬಿಜೆಪಿಯವರು ಭಯಂಕರ ಮಾತನಾಡ್ತಾರಲ್ಲಾ, ಆದರೆ ಇದುವರೆಗೂ ದೇವಿಯ ಭಕ್ತರಿಗೆ ನಾವು ಮಾಡಿದಂಥಾ ಕಾರ್ಯಕ್ರಮವನ್ನು ಬಿಜೆಪಿಯವರು ಏಕೆ ಮಾಡಲಿಲ್ಲ? ಎಂದು ಅವರು ಪ್ರಶ್ನಿಸಿದ್ದಾರೆ. ತಾಯಿ ಯಲ್ಲಮ್ಮ ಶಕ್ತಿ ದೇವತೆ. ಯಾವ ದೇವರೂ ಕೂಡ ಮನುಷ್ಯರನ್ನು ಧರ್ಮದ ಕಾರಣಕ್ಕೆ ದ್ವೇಷಿಸಿ ಎಂದು ಹೇಳುವುದಿಲ್ಲ. ದೇವರ ಹೆಸರಲ್ಲಿ ದ್ವೇಷ ಮಾಡಿ ಎಂದು ಹೇಳುವುದು ಬಿಜೆಪಿ ಮಾತ್ರ. ತಾಯಿ ರೇಣುಕಾ ಯಲ್ಲಮ್ಮ ಯಾವ ಮನುಷ್ಯರನ್ನು ದ್ವೇಷಿಸಿ ಎಂದು ಹೇಳುವುದಿಲ್ಲ ತಾನೆ? ಎಂದು ಹೇಳಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.…
ಬೆಂಗಳೂರು: ಕನ್ನಡದಲ್ಲಿಯೂ ಕಳೆದ 11 ವರ್ಷಗಳಿಂದ ಈ ಶೋ ಮೂಡಿಬರುತ್ತಿದೆ. ಬಿಗ್ ಬಾಸ್ ಅಂದ್ರೆ ಕಿಚ್ಚ ಸುದೀಪ್ ಎಂದೇ ಜನ ನೋಡುತ್ತಿದ್ದಾರೆ. ಆದ್ರೆ ಕಿಚ್ಚ ಸುದೀಪ್ ಇದೀಗ ಇದು ನನ್ನ ಕೊನೆಯ ಬಿಗ್ ಬಾಸ್ ಶೋ ಎಂದು ಹೇಳಿಕೊಂಡಿರುವುದು ಅಭಿಮಾನಿಗಳಿಗೆ ಬೇಸರ ತಂದಿದೆ. ಬಿಗ್ಬಾಸ್ ನಿರೂಪಣೆಯಿಂದ ಹಿಂದೆ ಸರಿಯಲು ಕಿಚ್ಚ ಮನಸ್ಸು ಮಾಡಿದ್ದಾರೆ. ಇದೇ ನನ್ನ ಕೊನೆಯ ಸೀಸನ್ ಎಂದು ಹೇಳಿದ್ದು, ಇದನ್ನು ಕೇಳಿದ ಬಿಗ್ಬಾಸ್ ಪ್ರೇಕ್ಷಕರಿಗೆ ಬಹಳ ಬೇಸರವಾಗಿದೆ. ಕಿಚ್ಚನ ಈ ದಿಢೀರ್ ನಿರ್ಧಾರಕ್ಕೆ ಕಾರಣವೇನು ಎಂಬ ಚರ್ಚೆಗಳು ಸಹ ಇದೀಗ ನಡೆಯುತ್ತಿವೆ. ಬಿಗ್ಬಾಸ್ ಸೀಸನ್ 11ರ ಮೇಲೆ ನೀವು ತೋರಿದ ಸ್ಪಂದನೆಗೆ ಧನ್ಯವಾದಗಳು. ಶೋ ಮತ್ತು ನನ್ನ ಮೇಲೆ ನೀವು ತೋರಿದ ಪ್ರೀತಿ ಮತ್ತು ಗೌರವ ಎಂಥದ್ದು ಎಂಬುದನ್ನು ಟಿಆರ್ಪಿ ನಂಬರ್ ಹೇಳುತ್ತಿದೆ. ಸುಮಾರು 11 ವರ್ಷಗಳ ಕಾಲ ಒಟ್ಟಿಗೆ ನಡೆದಿದ್ದೇನೆ. ಇನ್ನು ಮುಂದೆ ನಾನು ಮಾಡಬೇಕಾಗಿರುವುದನ್ನು ಮಾಡುವ ಸಮಯ ಬಂದಿದೆ. ಬಿಗ್ಬಾಸ್ ನಿರೂಪಕನಾಗಿ ಇದು ನನ್ನ ಕೊನೆಯ…
ಬೆಂಗಳೂರು: ಕನ್ನಡದ ಹಿರಿಯ ನಿರ್ದೇಶಕ ಚಿ.ದತ್ತರಾಜ್ ಇಂದು ನಿಧನರಾಗಿದ್ದು, ಅವರಿಗೆ 87 ವರ್ಷ ವಯಸ್ಸಾಗಿತ್ತು. ಚಿ.ದತ್ತರಾಜ್, ಖ್ಯಾತ ಸಾಹಿತಿ ಚಿ.ಉದಯಶಂಕರ್ ಸಹೋದರ ಆಗಿದ್ದರು. ತಮ್ಮ 87ನೇ ವಯಸ್ಸಿನಲ್ಲಿ ಅವರು ತಮ್ಮ ಜೀವನ ಪಯಣ ಮುಗಿಸಿದ್ದಾರೆ. ಬೆಂಗಳೂರಿನಲ್ಲಿ ಅವರು ಕೊನೆಯುಸಿರೆಳೆದಿದ್ದಾರೆ. ರಾಜಕುಮಾರ್ ಅಭಿನಯದ ಕೆರಳಿದ ಸಿಂಹ, ಕಾಮನಬಿಲ್ಲು, ಅದೇ ಕಣ್ಣು, ಶೃತಿ ಸೇರಿದಾಗ, ಶಿವರಾಜಕುಮಾರ್ ಅಭಿನಯದ ಮೃತ್ಯುಂಜಯ, ಆನಂದ ಜ್ಯೋತಿ ಹಾಗೂ ಮಂಜುಳ ಅವರು ನಟಿಸಿದ್ದ ‘ರುದ್ರಿ’ ಮುಂತಾದ ಚಿತ್ರಗಳನ್ನು ಚಿ.ದತ್ತರಾಜ್ ನಿರ್ದೇಶನ ಮಾಡಿದ್ದರು. ಇಂದು ಮಧ್ಯಾಹ್ನ 1:30ಕ್ಕೆ ಹರಿಶ್ಚಂದ್ರ ಘಾಟ್ನಲ್ಲಿ ಅಂತ್ಯಕ್ರಿಯೆ ನಡೆಯಲಿದೆ ಎಂದು ತಿಳಿದು ಬಂದಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296
ಬೆಂಗಳೂರು: ಕುಡಿದ ಮತ್ತಿನಲ್ಲಿ ಬಿಯರ್ ಬಾಟಲಿಯಿಂದ ಚುಚ್ಚಿ ಯುವಕನೊಬ್ಬನನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ನಡೆದಿದೆ. ಬೆಂಗಳೂರಿನ ಸ್ಯಾಟಲೈಟ್ ಬಸ್ ನಿಲ್ದಾಣದ ಕಲಾ ವೈನ್ಸ್ ಬಾರ್ ಬಳಿ ಈ ಘಟನೆ ನಡೆದಿದೆ. ಬಿಯರ್ ಬಾಟಲಿಯಿಂದ ಚುಚ್ಚಿ ಯೋಗೇಂದರ್ ಸಿಂಗ್ ಅಲಿಯಾಸ್ ಸೋನು ಎಂಬಾತನನ್ನು ದುಷ್ಕರ್ಮಿಗಳು ಹತ್ಯೆ ಮಾಡಿದ್ದಾರೆ. ಹಳೇ ದ್ವೇಷದ ಹಿನ್ನೆಲೆ ಈ ಕೊಲೆ ನಡೆದಿರಬಹುದೆಂದು ಶಂಕಿಸಲಾಗಿದೆ. ಘಟನೆ ನಡೆದ ಸ್ಥಳಕ್ಕೆ ಪಶ್ಚಿಮ ವಿಭಾಗದ ಡಿಸಿಪಿ ಗಿರೀಶ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296
ತುಮಕೂರು :ಬೆಂಗಳೂರು ಕಡೆಗೆ ಸಾಗುವ ರಾಷ್ಟ್ರೀಯ ಹೆದ್ದಾರಿ ತುಮಕೂರು-ಶಿರಾ ಮಾರ್ಗದಲ್ಲಿ ಇಂದು ಮುಂಜಾನೆಯಿಂದಲೂ ಟ್ರಾಫಿಕ್ ಸಮಸ್ಯೆ ಎದುರಾಗಿದೆ. ರಾಷ್ಟ್ರೀಯ ಹೆದ್ದಾರಿಯಲ್ಲಿನ ಟ್ರಾಫಿಕ್ ಸಮಸ್ಯೆಗೆ ವಾಹನ ಸವಾರರು ಹೈರಾಣು ಆಗಿದ್ದಾರೆ.ಇಂದು ಮುಂಜಾನೆ ಐದು ಗಂಟೆಯಿಂದಲೂ ರಾಷ್ಟ್ರೀಯ ಹೆದ್ದಾರಿಯಲ್ಲಿ ಕಿ.ಮೀ. ಗಟ್ಟಲೆ ಟ್ರಾಫಿಕ್ ನಲ್ಲಿ ವಾಹನ ಸವಾರರು ಸಿಲುಕಿ ಪರದಾಡುತ್ತಿದ್ದಾರೆ. ಆಂಬುಲೆನ್ಸ್ ಗಳು ಸಹ ಟ್ರಾಫಿಕ್ ಸಿಲುಕಿ ತುರ್ತು ತೆರಳಲು ಸಾಧ್ಯವಾಗದೆ ಟ್ರಾಫಿಕ್ ನಲ್ಲಿ ಗಂಟೆಗಟ್ಟಲೆ ಸೈರನ್ ಹೊಡೆಯುತ್ತ ನಿಂತಿವೆ. ಹಬ್ಬಕ್ಕೆ ಹೋದವರೆಲ್ಲರೂ ವಾಪಸು ಬೆಂಗಳೂರಿಗೆ ಹೋಗುತ್ತಿರುವ ಪರಿಣಾಮ ಒಂದೆಡೆ ಆದರೆ ಇನ್ನೊಂದೆಡೆ ಹೆದ್ದಾರಿಯ ಐದು ಕಡೆಗಳಲ್ಲಿ ಕಾಮಗಾರಿ ನಡೆಯುತ್ತಿದೆ. ಬೆಳಿಗ್ಗೆ ಐದು ಗಂಟೆಗೆ ಹೆದ್ದಾರಿಯಲ್ಲಿ ಸಿಲುಕಿದವರು ಬೆಳಿಗ್ಗೆ 10 ಗಂಟೆಯಾದರೂ ತುಮಕೂರು ಬಿಟ್ಟು ಹೋಗಲು ಪರದಾಡುವಂತಾಗಿದೆ. ತುಮಕೂರಿನ ಹೊರವಲಯದ ಊರುಕೆರೆ ಬಳಿ, ಬೆಳ್ಳಾವಿ ಕ್ರಾಸ್ ಬಳಿ, ನೆಲಹಾಲ್ ಸಮೀಪ, ಕಳ್ಳಂಬೆಳ್ಳ ಸಮೀಪದಲ್ಲಿ ಎರಡು ಸೇತುವೆ ಕಾಮಗಾರಿ ನಡೆಯುತ್ತಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149…
ಶ್ರೀ ಕ್ಷೇತ್ರ ಕಟೀಲು ದುರ್ಗಾಪರಮೇಶ್ವರೀ ಜ್ಯೋತಿಷ್ಯ ಪೀಠಂ ದೈವಜ್ಞ ಪಂಡಿತ್ ಕೃಷ್ಣ ಭಟ್ ಪ್ರಧಾನ ತಾಂತ್ರಿಕ್ ಹಾಗೂ ಮಾಂತ್ರಿಕರು ಸ್ತ್ರೀ ಪುರುಷ ವಶೀಕರಣ ಸ್ಪೆಷಲಿಸ್ಟ್ ನನಗೆ ಒಂದೇ ಕರೆ ಮಾಡಿದರೆ ನಿಮ್ಮ ಇಷ್ಟಪಟ್ಟವರು ನಿಮ್ಮಂತೆ 9535156490 ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆ ಉತ್ತರಿಸಬಹುದು ಏಷ್ಟೇ ಪೂಜೆ ಪ್ರಯತ್ನ ಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..?ನಿಮ್ಮ ಯಾವುದೇಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ 2 ದಿನಗಳಲ್ಲಿ ಪರಿಹಾರ ಶತಸಿದ್ಧ ಧನವಶ, ಜನವಶ, ಶತ್ರುನಾಶ, ಸ್ತ್ರೀ– ಪುರುಷ ವಶೀಕರಣ, ದಿಗ್ಭಂಧನ, ಸ್ತಂಭನ, ವುಚ್ಛಾಟನೆಯಂತಹ ಸಮಸ್ಯೆಗಳಿಗೆ ವಿಶೇಷ ಪರಿಹಾರ ತಿಳಿಸುತ್ತಾರೆ 9535156490 ಮೀನಾ ರಾಶಿಯವರಿಗೆ 👇🏻 ಉದ್ಯೋಗದಲ್ಲಿ ಉನ್ನತ ಸ್ಥಾನವನ್ನು ಪಡೆಯುವುದು ಒಳ್ಳೆಯದು. ನಿಮ್ಮ ಮಗುವಿನಿಂದ ನೀವು ಒಳ್ಳೆಯ ಸುದ್ದಿಯನ್ನು ಪಡೆಯುತ್ತೀರಿ.ಜೀವನ ಮತ್ತು ಆಹಾರದ ಗುಣಮಟ್ಟ ಹೆಚ್ಚಾಗುತ್ತದೆ.ಹೊಸ ಸುಂದರವಾದ ಬಟ್ಟೆಗಳತ್ತ ನಿಮ್ಮ ಆಕರ್ಷಣೆ…
ಕಲಬುರಗಿ: ಮಾಜಿ ಸಚಿವ ಸಿದ್ದಿಖಿ ಹತ್ಯೆ ದಿಗ್ಧಮೆ ಉಂಟು ಮಾಡಿದೆ. ಮಹಾರಾಷ್ಟ್ರದಲ್ಲಿ ಕಾನೂನು ವ್ಯವಸ್ಥೆ ಸಂಪೂರ್ಣ ಕುಸಿದಿದೆ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ. ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 15 ದಿನಗಳಿಂದ ಸಿದ್ದಿಖಿ ಹತ್ಯೆ ಸಂಚು ನಡೆದಿತ್ತು. ಇದು ಮಹಾರಾಷ್ಟ್ರ ಸರ್ಕಾರಕ್ಕೂ ಗೊತ್ತಿತ್ತು. ಆದರೂ, ತಡೆಯಲು ವಿಫಲವಾಗಿದೆ ಎಂದು ಅವರು ಆರೋಪಿಸಿದರು. ಮಹಾರಾಷ್ಟ್ರದಲ್ಲಿ ಮೂರು ಸರಕಾರಗಳ ಹೇಳಿಕೆಗಳಿಂದ ಅಧಿಕಾರಿಗಳು ಗೊಂದಲಕ್ಕೆ ಬಿದ್ದ ಪರಿಣಾಮ ಇಂತಹ ಘಟನೆ ನಡೆದಿದೆ ಎಂದು ಖೇದ ವ್ಯಕ್ತಪಡಿಸಿದ ಅವರು, ಹಾಡುಹಗಲೇ ಕಚೇರಿಗೆ ನುಗ್ಗಿ ಶೂಟ್ ಮಾಡುತ್ತಾರೆಂದರೆ ಏನರ್ಥ ಎಂದು ಪ್ರಶ್ನಿಸಿದರು. ಕಳೆದ 15 ದಿನಗಳಿಂದ ಹತ್ಯೆಗೆ ಸಂಚು ನಡೆದಿತ್ತು ಎಂದು ಅಧಿಕಾರಿಗಳಿಗೆ ಗೊತ್ತಿದೆ. ಅದಕ್ಕಾಗಿ ಅವರಿಗೆ ಭದ್ರತೆಯನ್ನು ನೀಡಲಾಗಿತ್ತು. ಆದರೂ, ಹತ್ಯೆಯಾಗಿರುವುದು ಸೂಜಿಗದ ಸಂಗತಿ ಎಂದರು. ತಮ್ಮ ಸಾವಿನ ಕುರಿತು ಖುದ್ದು ಸಿದ್ದಿಖಿ ಹೇಳಿದ್ದರು. ನನ್ನ ಹತ್ಯೆಗೆ ಸಂಚು ನಡೆಯುತ್ತಿದೆ. ಜೀವ ಉಳಿಯುತ್ತೋ ಇಲ್ಲವೋ ಎಂದು ಮುಂಬಯಿ ಪೊಲೀಸರಿಗೆ ಮಾಹಿತಿ ನೀಡಿದ್ದರು ಆದರೂ ಕೂಡ…
ಹುಬ್ಬಳ್ಳಿ: ನಿರಾಧಾರವಾದ ವಿಚಾರಗಳ ಬಗ್ಗೆಯೇ ಬಿಜೆಪಿಯವರು ಹೋರಾಟ ಮಾಡುತ್ತಾರೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು. ಹುಬ್ಬಳ್ಳಿ ಗಲಭೆ ಪ್ರಕರಣವನ್ನು ಸರ್ಕಾರ ವಾಪಸ್ಸು ಪಡೆದಿರುವ ಬಗ್ಗೆ ಬಿಜೆಪಿಯವರು ಪ್ರತಿಭಟನೆ ನಡೆಸುವ ಬಗ್ಗೆ ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರಿಗೆ ಪ್ರತಿಕ್ರಿಯೆ ನೀಡುತ್ತಾ ಮಾತನಾಡಿದರು. ಸುಳ್ಳು ಮೊಕದ್ದಮೆಗಳು, ಹೋರಾಟಗಳನ್ನು ಕಾರಣವಾಗಿಸಿ ಮೊಕದ್ದಮೆಗಳಿದ್ದರೆ ಅವುಗಳ ಬಗ್ಗೆ ಸೂಕ್ತವಾಗಿ ತೀರ್ಮಾನಿಸಿ ಪ್ರಕರಣಗಳನ್ನು ವಾವಸ್ಸು ಪಡೆಯಲು ಸಚಿವಸಂಪುಟ ಉಪಸಮಿತಿಯನ್ನು ರಚಿಸಲಾಗಿದ್ದು , ಇಂತಹ ಸಮಿತಿಗಳು ಬಿಜೆಪಿ ಸೇರಿದಂತೆ ಎಲ್ಲರ ಅಧಿಕಾರವಧಿಯಲ್ಲಿಯೂ ಅಸ್ತಿತ್ವದಲ್ಲಿತ್ತು ಎಂದು ಹೇಳಿದರು. ಹುಬ್ಬಳ್ಳಿ ಗಲಭೆ ಪ್ರಕರಣದ ಸುಳ್ಳು ಪ್ರಕರಣವೆಂದು ನಿರ್ಧರಿಸಿ ಪ್ರಕರಣವನ್ನು ವಾಪಸ್ಸು ಪಡೆಯಲಾಗಿದೆ. ಈ ತೀರ್ಮಾನವನ್ನು ನ್ಯಾಯಾಲಯದ ಮುಂದೆ ಮಂಡಿಸಿದ ನಂತರವಷ್ಟೇ ಪ್ರಕರಣವನ್ನು ವಾಪಸ್ಸು ಪಡೆಯಲು ಸಾಧ್ಯ ಎಂದು ಅವರು ಹೇಳಿದರು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296
ದಾವಣಗೆರೆ: ಚನ್ನಪಟ್ಟಣ ವಿಧಾನ ಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ನಾನೇ ಅಭ್ಯರ್ಥಿ ಎಂದು ಒಂದೆಡೆ ಡಿ.ಕೆ.ಶಿವಕುಮಾರ್ ಹೇಳಿಕೆ ನೀಡುತ್ತಿದ್ದಾರೆ. ಇದೇ ಮಾದರಿಯಲ್ಲಿ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಕೂಡ ಹೇಳಿಕೆ ನೀಡಿದ್ದು, ಚನ್ನಪಟ್ಟಣದಲ್ಲಿ ಯಾರೇ ಅಭ್ಯರ್ಥಿ ಯಾದರೂ ನಾನೇ ಎನ್ ಡಿಎ ಅಭ್ಯರ್ಥಿ ಎಂದು ಹೇಳಿಕೆ ನೀಡಿದ್ದಾರೆ. ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಹಲವು ವಿಚಾರಗಳ ಬಗ್ಗೆ ಮಾತನಾಡಿದರು. ಹುಬ್ಬಳ್ಳಿಯಲ್ಲಿ ನಡೆದ ಗಲಭೆ ಕೇಸ್ ವಾಪಸ್ ಪಡೆದ ವಿಚಾರಕ್ಕೆ ಪ್ರತಿಕ್ರಿಯಿಸಿದ ಅವರು, ಹುಬ್ಬಳ್ಳಿಯಲ್ಲಿ ನಡೆದ ಗಲಭೆ ಕೇಸ್ ವಾಪಸ್ ಪಡೆದ ವಿಚಾರ ನೋಡಿದರೆ ರಾಜ್ಯ ಸರ್ಕಾರ ಗಲಭೆಕೋರರಿಗೆ ರಕ್ಷಣೆ ಕೊಡುತ್ತಿದೆ ಎಂದು ದೂರಿದರು. ಲೋಕಾಯುಕ್ತ ಎಡಿಜಿಪಿ ಚಂದ್ರಶೇಖರ್ ದೂರು ದಾಖಲಿಸಿದ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು, ನನ್ನ ಮೇಲೆ ಅವರು ದೂರು ದಾಖಲು ಮಾಡಿದ್ದಾರೆ. ಅದಕ್ಕೆ ನಾನು ನ್ಯಾಯಾಲಯದಲ್ಲಿ ಉತ್ತರ ಕೊಡುತ್ತೇನೆ ಎಂದು ತಿಳಿಸಿದರು. 3–4 ಸಾವಿರ ಪುಟಗಳಷ್ಟು ಚಾರ್ಜ್ ಶೀಟ್ ಹಾಕುತ್ತಾರೆ. 12 ವರ್ಷದಿಂದ ನನ್ನ ಮೇಲೆ ಕೇಸ್ ಹಾಗೆ ಉಳಿಸಿಕೊಂಡಿದ್ದಾರೆ. ಈಗ…