Subscribe to Updates
Get the latest creative news from FooBar about art, design and business.
- ಉಪಮುಖ್ಯಮಂತ್ರಿಯಾಗಿ ನೇಮಕಗೊಂಡಿರುವುದಕ್ಕೆ ನಾನು ಸಂಪೂರ್ಣ ತೃಪ್ತ: ಜಿ. ಪರಮೇಶ್ವರ
- ಡಿ.ಕೆ. ಶಿವಕುಮಾರ್ ಜೀವನದ ಮಾರ್ಗದರ್ಶಕ ಶಕ್ತಿ ‘ನೊಣವಿನಕೆರೆ ಅಜ್ಜಯ್ಯ’!
- ಕೆಪಿಸಿಸಿಗೆ ಬಿ.ಕೆ.ಹರಿಪ್ರಸಾದ್ ಹೊಸ ಸಾರಥಿ: ಹೈಕಮಾಂಡ್ ಮಹತ್ವದ ನಿರ್ಧಾರ
- ಸಿಎಂ ಕುರ್ಚಿ ನನ್ನದಲ್ಲ, ಅಧಿಕಾರವನ್ನು ಜನರ ಸೇವೆಗೆ ಮುಡಿಪಾಗಿಡುತ್ತೇನೆ: ಸಿಎಂ ಡಿ.ಕೆ.ಶಿವಕುಮಾರ್
- ಕರ್ನಾಟಕದ 25ನೇ ಮುಖ್ಯಮಂತ್ರಿಯಾಗಿ ಡಿ.ಕೆ.ಶಿವಕುಮಾರ್ ಪ್ರಮಾಣವಚನ ಸ್ವೀಕಾರ!
- ಸಾದರ ಸಮುದಾಯ ಭವನದಲ್ಲಿ ಸಪ್ತಗಿರಿ ಆಸ್ಪತ್ರೆ ವತಿಯಿಂದ ಬೃಹತ್ ಆರೋಗ್ಯ ತಪಾಸಣೆ ಮತ್ತು ಶಸ್ತ್ರ ಚಿಕಿತ್ಸಾ ಶಿಬಿರ
- ಖಾಸಗಿ ಶಾಲೆಗಳ ಮಾದರಿಯಲ್ಲೇ, ಸರ್ಕಾರಿ ಶಾಲೆಗಳ ರೂಪಾಂತರ: ಡಿ.ಕೆ.ಶಿವಕುಮಾರ್
- ತುಮಕೂರು ವಿವಿ 19ನೇ ಘಟಿಕೋತ್ಸವ: 90 ವಿದ್ಯಾರ್ಥಿಗಳಿಗೆ 117 ಚಿನ್ನದ ಪದಕ
Author: admin
ಹುಬ್ಬಳ್ಳಿ : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹುಬ್ಬಳ್ಳಿಗೆ ಭೇಟಿ ನೀಡಿದ ವೇಳೆ ಬಿಜೆಪಿ ಕಾರ್ಯಕರ್ತರು ಸಿಎಂ ಸಿದ್ದರಾಮಯ್ಯ ಕಾರಿಗೆ ಕಪ್ಪುಪಟ್ಟಿ ಪ್ರದರ್ಶಿಸಿದ ಘಟನೆ ನಡೆಯಿತು. 2022 ರಲ್ಲಿ ಹಳೆ ಹುಬ್ಬಳ್ಳಿ ಗಲಭೆ ಕೇಸ್ ಅನ್ನು ಇತ್ತೀಚಿಗೆ ರಾಜ್ಯ ಸರ್ಕಾರ ಹಿಂಪಡೆದಿತ್ತು. ಈ ಒಂದು ವಿಚಾರವಾಗಿ ಬಿಜೆಪಿ ನಾಯಕರು ತೀವ್ರವಾಗಿ ಖಂಡಿಸಿದರು. ಇಂದು ಸಿಎಂ ಸಿದ್ದರಾಮಯ್ಯ ಕಾರಿಗೆ ಬಿಜೆಪಿ ಕಾರ್ಯಕರ್ತರು ಕಪ್ಪು ಬಟ್ಟೆ ಪ್ರದರ್ಶಿಸಿದರು. ಹುಬ್ಬಳ್ಳಿಯ ಗೋಕುಲ್ ರೋಡ್ ನಲ್ಲಿ ಕಪ್ಪು ಬಟ್ಟೆ ಪ್ರದರ್ಶಿಸಿದ ಬಿಜೆಪಿ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.ಬಿಜೆಪಿ ಕಾರ್ಯಕರ್ತರಾದ ಜಗದೀಶ್ ಕಂಬಳಿ, ಮಂಜುನಾಥ್ ಮತ್ತು ಕಾರ್ಯಕರ್ತರನ್ನು ವಶಕ್ಕೆ ಪಡೆದುಕೊಂಡಿದ್ದಾರೆ ಎಂದು ತಿಳಿದುಬಂದಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296
ಮುಂಬೈ: ಮುಂಬೈ ಸೆಂಟ್ರಲ್ ಕಾರ್ಶೆಡ್ ಪ್ರವೇಶಿಸುವಾಗ ಭಾನುವಾರ ಮಧ್ಯಾಹ್ನ ಖಾಲಿ ಇಎಂಯು ರೈಲಿನ ಎರಡು ಬೋಗಿಗಳು ಹಳಿತಪ್ಪಿವೆ ಎಂದು ಪಶ್ಚಿಮ ರೈಲ್ವೆ ಹೇಳಿದೆ. ರೇಕ್ ಖಾಲಿಯಾಗಿದ್ದರಿಂದ, ಘಟನೆಯಲ್ಲಿ ಯಾವುದೇ ವ್ಯಕ್ತಿ ಗಾಯಗೊಂಡಿಲ್ಲ ಎಂದು ರೈಲ್ವೆ ತಿಳಿಸಿದೆ. ಪಶ್ಚಿಮ ರೈಲ್ವೆ ತನ್ನ ಪೋಸ್ಟ್ನಲ್ಲಿ, “12: 10 ರ ಸುಮಾರಿಗೆ ಮುಂಬೈ ಸೆಂಟ್ರಲ್ ಗೆ ಪ್ರವೇಶಿಸುವಾಗ ಒಂದು ಇಎಂಯು ಖಾಲಿ ರೇಕ್ ನ ಎರಡು ಬೋಗಿಗಳು ಹಳಿ ತಪ್ಪಿವೆ. ಚರ್ಚ್ ಗೇಟ್ ನಿಂದ ಮುಂಬೈ ಸೆಂಟ್ರಲ್ ವರೆಗಿನ ನಿಧಾನಗತಿಯ ಟ್ರ್ಯಾಕ್ ಅನ್ನು ತಡೆಹಿಡಿಯಲಾಗಿದೆ ಮತ್ತು ರೈಲುಗಳನ್ನು ಚರ್ಚ್ ಗೇಟ್ ನಿಂದ ಮುಂಬೈ ಸೆಂಟ್ರಲ್ ನಡುವಿನ ವೇಗದ ಮಾರ್ಗಕ್ಕೆ ತಿರುಗಿಸಲಾಗಿದೆ ಮತ್ತು ರೈಲು ಕಾರ್ಯಾಚರಣೆ ಮುಂದುವರೆದಿದೆ ಎಂದು ತಿಳಿದು ಬಂದಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296
ಮೈಸೂರು: ಚನ್ನಪಟ್ಟಣ ವಿಧಾನಸಭೆ ಉಪಚುನಾವಣೆಯಲ್ಲಿ ಕಾಂಗ್ರೆಸ್ನಿಂದ ನಾನೇ ಅಭ್ಯರ್ಥಿ ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿಕೊಂಡಿದ್ದಾರೆ. ನಾನಾ ಅಭ್ಯರ್ಥಿ ಎಂದಿರುವ ಡಿ.ಕೆ.ಶಿವಕುಮಾರ್ ಬಿಜೆಪಿ ಹಾಗೂ ಜೆಡಿಎಸ್ ಮೈತ್ರಿ ಪಕ್ಷದಿಂದ ಯಾರು ಬೇಕಾದರೂ ನಿಲ್ಲಲಿ ಎಂದು ಸವಾಲು ಹಾಕಿದ್ದಾರೆ. ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಡಿ.ಕೆ. ಶಿವಕುಮಾರ್, ಎಂಪಿ ಚುನಾವಣೆಯಲ್ಲಿ ಕಡಿಮೆ ಅಂತರದಲ್ಲಿ ಹಿನ್ನಡೆ ಆಗಿತ್ತು. ಎಂಎಲ್ ಎ ಚುನಾವಣೆಯಲ್ಲಿಯೂ ಹೆಚ್ಚು ಹಿನ್ನಡೆಯಾಗಿತ್ತು. ಈಗ ನಮ್ಮ ಬೇಸ್ ಸ್ಟ್ರಾಂಗ್ ಮಾಡುತ್ತಿದ್ದೇವೆ. ಜನ ಓಟ್ ಹಾಕಿ ಗೆಲ್ಲಿಸುತ್ತಾರೆಂಬ ನಂಬಿಕೆ ನನಗಿದೆ ಎಂದರು. ಇದೇ ವೇಳೆ ಸಿಎಂ ಸಿದ್ದರಾಮಯ್ಯ ರಾಜೀನಾಮೆ ಬಗ್ಗೆ ಮಾತನಾಡಿದ ಅವರು, ‘ಇನ್ನೂ ಹತ್ತು ವರ್ಷ ಅವರೇ ಸಿಎಂ ಆಗಿ ಇರುತ್ತಾರೆ. ಬಿಜೆಪಿಯವರು ಇನ್ನೂ ಹತ್ತು ವರ್ಷ ಇದೇ ರೀತಿ ಹೇಳ್ತಾನೇ ಇರ್ತಾರೆ’ ಎಂದರು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296
ರಾಯಚೂರು: ಕಾರು ಹಾಗೂ ಬೈಕ್ ನಡುವೆ ನಡೆದ ಭೀಕರ ಅಪಘಾತದಲ್ಲಿ ಓರ್ವ ಯುವತಿ ಸ್ಥಳದಲ್ಲೇ ಸಾವನ್ನಪ್ಪಿದ್ದು, ಇನ್ನೋರ್ವ ಯುವತಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ. ವಿಜಯದಶಮಿ ಹಬ್ಬದಂದು ರಾತ್ರಿ ತಾತನಿಗೆ ಬನ್ನಿ ಕೊಡಲೆಂದು ಹೋಗಿದ್ದ ಮೊಮ್ಮಕ್ಕಳು ಬನ್ನಿ ಕೊಟ್ಟಿ ವಾಪಸ್ ಬರುತ್ತಿದ್ದ ವೇಳೆ ಅಪಘಾತಕ್ಕೀಡಾಗಿದ್ದಾರೆ. ರಾಯಚೂರಿನ ಡಿಸಿ ಬಂಗಲೆ ಬಳಿ ಕಾರು ಹಾಗೂ ಸ್ಕೂಟರ್ ನಡುವೆ ಅಪಘಾತ ಸಂಭವಿಸಿದ್ದು, ಓರ್ವ ಯುವತಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಇನ್ನೋರ್ವ ಯುವತಿ ಗಂಭೀರವಾಗಿ ಗಾಯಗೊಂಡಿದ್ದಾರೆ. 20 ವರ್ಷದ ಸಾಕ್ಷಿ ಮೃತ ಯುವತಿ. ಇನ್ನೋರ್ವ ಯುವತಿ ಸಂಜನಾ ಗಂಭೀರವಾಗಿ ಗಾಯಗೊಂಡಿದ್ದಾರೆ. ಅಪಘಾತದ ಬಳಿಕ ಕಾರು ಚಾಲಕ ಸ್ಥಳದಲ್ಲೇ ಕಾರು ಬಿಟ್ಟು ಎಸ್ಕೇಪ್ ಆಗಿದ್ದಾನೆ. ರಾಯಚೂರು ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296
ಬೆಂಗಳೂರು: ಮನೆಯ ಮುಂದೆ ಆಟವಾಡುತ್ತಿದ್ದ ಬಾಲಕನ ಮೇಲೆ ಟಾಟಾ ಏಸ್ ಹರಿದ ಪರಿಣಾಮ ಬಾಲಕ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ. ಬೆಂಗಳೂರಿನ ಚಾಮರಾಜಪೇಟೆಯ ಗುಡ್ಡಳ್ಳಿಯಲ್ಲಿ ಭೀಕರ ಅಪಘಾತ ಸಂಭವಿಸಿದ್ದು, ಬಾಲಕ ನೇಲೆ ಟಾಟಾ ಏಸ್ ಹರಿದ ಪರಿಣಾಮ ಬಾಲಕ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಅಪಘಾತದ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಮಗುವನ್ನು ಕಳೆದುಕೊಂಡ ಪೋಷಕರ ಆಕ್ರಂದನ ಮುಗಿಲುಮುಟ್ಟಿದೆ. ಘಟನೆ ನಡೆದ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿದ್ದು, ಪರಶೀಲನೆ ನಡೆಸಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296
ಮಂಡ್ಯ: ತನ್ನ ಪತ್ನಿಯೊಂದಿಗೆ ಅಕ್ರಮ ಸಂಬಂಧ ಹೊಂದಿದ್ದಾನೆ ಎನ್ನುವ ಅನುಮಾನದಿಂದ ಪತಿ ಯುವಕನೊಬ್ಬನನ್ನು ಗುಂಡಿಟ್ಟು ಹತ್ಯೆಗೆ ಯತ್ನಿಸಿದ ಘಟನೆ ಮಂಡ್ಯ ಜಿಲ್ಲೆಯ ಪಾಂಡವಪುರ ತಾಲೂಕಿನ ಶಂಭೋವಿನಹಳ್ಳಿಯಲ್ಲಿ ನಡೆದಿದೆ. ಶಿವರಾಜು ಎಂಬಾತ ಗುಂಡಿನ ದಾಳಿ ನಡೆಸಿದ ವ್ಯಕ್ತಿಯಾಗಿದ್ದು, ಯುವಕ ಮಂಜು ಎಂಬಾತ ಗುಂಡಿನ ದಾಳಿಯಿಂದ ಗಂಭೀರವಾಗಿ ಗಾಯಗೊಂಡಿರುವ ವ್ಯಕ್ತಿಯಾಗಿದ್ದಾನೆ. ಸದ್ಯ ಮಂಜುನನ್ನು ಮಂಡ್ಯ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಶಿವರಾಜು ಮುಂಬೈನಲ್ಲಿ ಹೋಟೆಲ್ ನಲ್ಲಿ ಕೆಲಸದಲ್ಲಿದ್ದ. ಕೆಲದಿನಗಳ ಹಿಂದೆ ಮನೆಗೆ ಬಂದಿದ್ದ. ತನ್ನ ಪತ್ನಿ ಜೊತೆ ಯುವಕ ಮಂಜು ಅಕ್ರಮ ಸಂಬಂಧ ಹೊಂದಿದ್ದಾನೆ ಎಂಬ ಶಂಕೆ ಹಿನ್ನೆಲೆಯಲ್ಲಿ ಮನೆಯ ಜಗುಲಿಯ ಮೇಲೆ ಕುಳಿತಿದ್ದ ಮಂಜುವಿನ ಮೇಲೆ ಗುಂಡು ಹಾರಿಸಿದ್ದಾನೆ. ಗುಂಡೇಟಿನಿಂದ ಯುವಕನ ತಲೆಗೆ ಗಂಭೀರವಾಗಿ ಗಾಯವಾಗಿದೆ. ಸದ್ಯ ಯುವಕ ಪ್ರಾಣಾಪಾಯದಿಂದ ಪಾರಾಗಿದ್ದಾನೆ ಎಂದು ಹೇಳಲಾಗಿದೆ. ಸ್ಥಳಕ್ಕೆ ಆಗಮಿಸಿದ ಪೊಲೀಸರು ಆರೋಪಿ ಶಿವರಾಜುನನ್ನು ಬಂಧಿಸಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್…
ಬೆಂಗಳೂರು: ಮಾನವ ಹಕ್ಕು ಉಲ್ಲಂಘನೆ, ಮಹಿಳೆಯರಿಗೆ ಧಕ್ಕೆ ತಂದ ಆರೋಪ ಬಿಗ್ಬಾಸ್ ಶೋ ಹಾಗೂ ಕೆಲವು ಸ್ಪರ್ಧಿಗಳ ಮೇಲೆ ಇದೆ. ಹೀಗಾಗಿ ಬಿಗ್ ಬಾಸ್ ಗೆ ಕುಂಬಳಗೋಡು ಪೊಲೀಸರು ನೋಟಿಸ್ ನೀಡಿದ್ದಾರೆ. ನರಕಕ್ಕೆ ಹೋದ ಸ್ಪರ್ಧಿಗಳಿಗೆ ಊಟದ ಬದಲು ಗಂಜಿ, ನೆಲದ ಮೇಲೆ ಹಾಕಲಾದ ಬೆಡ್ ನಲ್ಲಿ ನಿದ್ದೆ, ಕೂರಲು ಕುರ್ಚಿ ಇಲ್ಲ, ನೀರಿಗೆ ಒಂದು ಮಡಿಕೆ, ಶೌಚಾಲಯಕ್ಕೆಂದು ಹೋಗಲು ಸ್ವರ್ಗವಾಸಿಗಳ ಅನುಮತಿ ಮಾಡಬೇಕಿತ್ತು. ಇವು ಸಾಮಾಜಿಕ ಹೋರಾಟಗಾರರ ಕೆಂಗಣ್ಣಿಗೆ ಗುರಿಯಾಗಿತ್ತು. ಪೌಷ್ಠಿಕ ಆಹಾರ, ಶೌಚಾಲಯದ ವ್ಯವಸ್ಥೆಯನ್ನು ಸಹ ನೀಡದೆ ಮಾನವ ಹಕ್ಕು ಉಲ್ಲಂಘಟನೆ ಮಾಡಲಾಗಿದೆ ಎಂದು ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮೀ ಅವರು ಆರೋಪ ಮಾಡಿದ್ದರು. ಹೀಗಾಗಿ ಬಿಗ್ ಬಾಸ್ ಸೆಟ್ ಗೆ ತೆರಳಿ ಇನ್ಸ್ಪೆಕ್ಟರ್ ಮಂಜುನಾಥ್ ಹೂಗಾರ ಅವರು ನೋಟಿಸ್ ನೀಡಿದ್ದಾರೆ. ಸ್ವರ್ಗ- ನರಕ ವಿಚಾರವಾಗಿ ನಡೆದ ಸಂಭಾಷಣೆಯ ರಾ ಫುಟೇಜ್ ನೀಡುವಂತೆ ಪೊಲೀಸರು ಸೂಚನೆ ನೀಡಿದ್ದಾರೆ ಎಂದು ವರದಿಯಾಗಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು…
ಪಾವಗಡ : ಪಟ್ಟಣದಲ್ಲಿ ಅದ್ದೂರಿಯಾಗಿ ದಸರಾ ಉತ್ಸವ ಜರುಗಿದ್ದು, ತಾಲೂಕಿನ ದಂಡಾಧಿಕಾರಿಗಳಾದ ವರದರಾಜು ನೇತೃತ್ವದಲ್ಲಿ ರಾಜಬೀದಿಯಲ್ಲಿರುವ ಪುರಾತನ ವೇಣುಗೋಪಾಲ ಸ್ವಾಮಿ ದೇವಸ್ಥಾನದಿಂದ ರಾಜಬೀದಿಗಳ ಮೂಲಕ ವಿವಿಧ ದೇವರುಗಳ ಸಹಿತ ಮೆರವಣಿಗೆ ಕೈಗೊಳ್ಳಲಾಯಿತು. ನಂತರ ಗುರು ಭವನದ ಮೈದಾನದಲ್ಲಿರುವ ಬನ್ನಿಮಂಟಪಕ್ಕೆ ಆಗಮಿಸಿ ಬನ್ನಿ ಗಿಡಕ್ಕೆ ವಿಶೇಷ ಪೂಜೆಗಳನ್ನು ಸಲ್ಲಿಸಿ ನಂತರ ಸಂಪ್ರದಾಯದಂತೆ ಬಾಣವನ್ನ ಗಿಡದ ಬುಡಕ್ಕೆ ಬಿಡಲಾಯಿತು. ಪಾವಗಡ ತಾಲೂಕಿನ ನೂರಾರು ಸಂಖ್ಯೆಯ ಜನರು ಈ ಕಾರ್ಯಕ್ರಮದಲ್ಲಿ ಭಾಗಿಯಾದರು. ವಿವಿಧ ಸಂಘ ಸಂಸ್ಥೆಗಳಿಂದ ಭಕ್ತರಿಗೆ ಪ್ರಸಾದ ವಿನಿಯೋಗ ಮಾಡಲಾಯಿತು. ವರದಿ: ನಂದೀಶ್ ನಾಯ್ಕ ಪಿ., ಪಾವಗಡ ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q
ತುಮಕೂರು: ತುಮಕೂರು ದಸರಾ ಕಾರ್ಯಕ್ರಮದ ವೇದಿಕೆಯಲ್ಲಿ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಹಾಡನ್ನು ಹಾಡಿ ಜನರನ್ನು ರಂಜಿಸಿದರು. ಕನ್ನಡ ಚಲನಚಿತ್ರ ಗಾಯನವಾದ ‘ಕಾಣದಂತೆ ಮಾಯವಾದನು ಶಿವ’ ಎಂಬ ಹಾಡನ್ನು ಹಾಡಿದರು. ತುಮಕೂರಿನ ದಸರಾ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಹಾಡು ಹಾಡಿದ ವೇಳೆ ಗಾಯಕ ವಿಜಯಪ್ರಕಾಶ್ ಹಾಡಿದ ಹಾಡಿಗೆ ಧ್ವನಿಗೂಡಿಸಿದರು. ಮೊದಲ ಬಾರಿ ಜಿಲ್ಲಾಡಳಿತದಿಂದ ತುಮಕೂರು ದಸರಾ ಆಯೋಜನೆ ಮಾಡಲಾಗಿದ್ದು ಅಭಿಮಾನಿಗಳ ಒತ್ತಾಯಕ್ಕೆ ಗೃಹ ಸಚಿವ ಪರಮೇಶ್ವರ್ ಹಾಡು ಹಾಡಿದರು. ತುಮಕೂರು ದಸರಾ ಜಂಬೂಸವಾರಿ ಮೆರವಣಿಗೆಯಲ್ಲಿಯೂ ಹೆಜ್ಜೆ ಹಾಕಿದ ಸಚಿವ ಪರಮೇಶ್ವರ್, ದಂಪತಿ ಸಮೇತ ನಂದಿಧ್ವಜಕ್ಕೆ ಪೂಜೆ ಸಲ್ಲಿಸಿ ದಸರಾ ಮೆರವಣಿಗೆಗೆ ಚಾಲನೆ ನೀಡಿದ್ದರು. ಜಂಬೂಸವಾರಿ ದಸರಾ ಮೆರವಣಿಗೆಯಲ್ಲಿ ತಮಟೆ ಸದ್ದಿಗೆ ಹೆಜ್ಜೆ ಹಾಕಿದ ಪರಮೇಶ್ವರ್, ತಾಯಿ ಚಾಮುಂಡೇಶ್ವರಿ ಅಂಬಾರಿ ಮುಂದೆ ಹೆಜ್ಜೆ ಹಾಕಿದ್ದರು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q
ಪ್ರತಿಯೊಂದು ಗ್ರಾಮ ಪಂಚಾಯತಿ ಕೇಂದ್ರಗಳಲ್ಲಿ 1 ರಿಂದ 3/4 ನಕಲಿ ವೈದ್ಯರು ಇರುತ್ತಾರೆ ಇವರಿಗೆ ಆರೋಗ್ಯ ಇಲಾಖೆ ಇವರಿಗೆ ಚಿಕಿತ್ಸೆ ನೀಡಲು ಅನುಮತಿ ನೀಡಿರುವುದಿಲ್ಲ, ಇವರಿಗೆ ಯಾವುದೇ ರೀತಿಯ ಅಧಿಕೃತ ತರಬೇತಿ ಇರುವುದಿಲ್ಲ, ಇವರು ಕೆಲವು ಕ್ಲಿನಿಕ್ ಗಳಲ್ಲಿ ಕೆಲಸ ಮಾಡಿ ಆ ಅನುಭವದ ಮೇಲೆ ಚಿಕಿತ್ಸೆ ನೀಡುವುದರಿಂದ ಕೆಲವು ಸಂಧರ್ಭದಲ್ಲಿ ರೋಗಿಗಳ ಸಾವುಗಳು ನೋಡಬಹುದು. ಅಥವ ರಿಯಾಕ್ಷನ್ ಆಗಬಹುದು ಆದುದರಿಂದ ಇವುಗಳನ್ನು ಮುಚ್ಚಿಸಲು ಸಾಮಾಜಿಕ ಕಾರ್ಯಕರ್ತರು ಒತ್ತಾಯ ಮಾಡುತ್ತಾರೆ. ಇವರು ಕ್ಲಿನಿಕ್ ನಡೆಸಲು ಸರ್ಕಾರದಿಂದ ಅನುಮತಿ ಪಡೆದಿರುವುದಿಲ್ಲ, ಅದುದರಿಂದ ಇವುಗಳಿಗೆ ಕಡಿವಾಣ ಹಾಕಬೇಕೆಂದು ಆರೋಗ್ಯ ಇಲಾಖೆಯ ಹಿರಿಯ ಅಧಿಕಾರಿಗಳಿಗೆ ಒತ್ತಾಯ ಮಾಡುವುದನ್ನು ಮಾಧ್ಯಮಗಳಲ್ಲಿ ಹಾಗೂ ಸಾಮಾಜಿಕ ಜಾಲ ತಾಣದಲ್ಲಿ ಕಂಡುಬರುತ್ತದೆ. ಸಾಮಾಜಿಕ ಕಾರ್ಯಕರ್ತರಿಗೆ ಸರ್ಕಾರಿ ನಿಯಮಗಳಿಗೆ ಹಾಗೂ ರೋಗಿಗಳ ಬಗ್ಗೆ ಕಾಳಜಿ ಬಿಟ್ಟರೆ ಇನ್ನು ಯಾವ ಉದ್ದೇಶ ಇರುವುದಿಲ್ಲ, ಆದರೆ ಆರೋಗ್ಯ ಇಲಾಖೆ ಅಧಿಕಾರಿಗಳು ನಕಲಿ ವೈದ್ಯರ ಮೇಲೆ ಕ್ರಮಗಳು ಕಣ್ಣು ಮುಚ್ಚಾಲೆ ತರ ಇರುತ್ತದೆ ಎಂಬುವುದು ಸಾಮಾಜಿಕ ಕಾರ್ಯಕರ್ತರ…