Subscribe to Updates
Get the latest creative news from FooBar about art, design and business.
- ಉಪಮುಖ್ಯಮಂತ್ರಿಯಾಗಿ ನೇಮಕಗೊಂಡಿರುವುದಕ್ಕೆ ನಾನು ಸಂಪೂರ್ಣ ತೃಪ್ತ: ಜಿ. ಪರಮೇಶ್ವರ
- ಡಿ.ಕೆ. ಶಿವಕುಮಾರ್ ಜೀವನದ ಮಾರ್ಗದರ್ಶಕ ಶಕ್ತಿ ‘ನೊಣವಿನಕೆರೆ ಅಜ್ಜಯ್ಯ’!
- ಕೆಪಿಸಿಸಿಗೆ ಬಿ.ಕೆ.ಹರಿಪ್ರಸಾದ್ ಹೊಸ ಸಾರಥಿ: ಹೈಕಮಾಂಡ್ ಮಹತ್ವದ ನಿರ್ಧಾರ
- ಸಿಎಂ ಕುರ್ಚಿ ನನ್ನದಲ್ಲ, ಅಧಿಕಾರವನ್ನು ಜನರ ಸೇವೆಗೆ ಮುಡಿಪಾಗಿಡುತ್ತೇನೆ: ಸಿಎಂ ಡಿ.ಕೆ.ಶಿವಕುಮಾರ್
- ಕರ್ನಾಟಕದ 25ನೇ ಮುಖ್ಯಮಂತ್ರಿಯಾಗಿ ಡಿ.ಕೆ.ಶಿವಕುಮಾರ್ ಪ್ರಮಾಣವಚನ ಸ್ವೀಕಾರ!
- ಸಾದರ ಸಮುದಾಯ ಭವನದಲ್ಲಿ ಸಪ್ತಗಿರಿ ಆಸ್ಪತ್ರೆ ವತಿಯಿಂದ ಬೃಹತ್ ಆರೋಗ್ಯ ತಪಾಸಣೆ ಮತ್ತು ಶಸ್ತ್ರ ಚಿಕಿತ್ಸಾ ಶಿಬಿರ
- ಖಾಸಗಿ ಶಾಲೆಗಳ ಮಾದರಿಯಲ್ಲೇ, ಸರ್ಕಾರಿ ಶಾಲೆಗಳ ರೂಪಾಂತರ: ಡಿ.ಕೆ.ಶಿವಕುಮಾರ್
- ತುಮಕೂರು ವಿವಿ 19ನೇ ಘಟಿಕೋತ್ಸವ: 90 ವಿದ್ಯಾರ್ಥಿಗಳಿಗೆ 117 ಚಿನ್ನದ ಪದಕ
Author: admin
ತಿಪಟೂರು : ತಾಲ್ಲೂಕಿನ ದಸರಿಘಟ್ಟ ಆದಿಚುಂಚನಗಿರಿ ಶಾಖಾಮಠದ ಚೌಡೇಶ್ವರಿ ದೇವಿಯವರ 32ನೇ ವರ್ಷದ ಮುಳ್ಳುಗದ್ದಿಗೆ ಉತ್ಸವ ಅಂಗವಾಗಿ ಶನಿವಾರ ಏರ್ಪಡಿಸಿದ್ದ ಧಾರ್ಮಿಕ ಕಾರ್ಯಕ್ರಮದಲ್ಲಿ ಆದಿಚುಂಚನಗಿರಿ ಪೀಠಾಧ್ಯಕ್ಷ ಡಾ.ನಿರ್ಮಲಾನಂದನಾಥ ಸ್ವಾಮೀಜಿ ಆಶೀರ್ವಚನ ನೀಡಿದರು. ಮನುಷ್ಯನಲ್ಲಿ ಕಷ್ಟಕಾರ್ಪಣ್ಯಗಳು ದೂರವಾಗಲು ಭಗವಂತನ ನಾಮಸ್ಮರಣೆ ಅತಿಮುಖ್ಯವಾಗಿದೆ. ಜಗತ್ತಿನ ಸೃಷ್ಠಿಗೆ ಭಗವಂತನೇ ನೇರ ಕಾರಣ. ಮುಳ್ಳುಗಳು ಕಷ್ಟದ ಪ್ರತೀಕ. ಅದನ್ನು ಮೆಟ್ಟಿ ನಿಲ್ಲುವಂತ ಶಕ್ತಿ ನೀಡುವವಳೇ ಚೌಡೇಶ್ವರಿದೇವಿ. ದೇವಿ ಪವಾಡದಿಂದ ಮುಳ್ಳುಗಳಂತ ಕಷ್ಟಗಳ ಮೇಲೆ ನಡೆಯುವಾಗ ಆಕೆಯ ಸ್ಮರಣೆ ಮಾಡಿದರೆ ಕಷ್ಟಗಳು ಮಂಜಿನಂತೆ ಕರಗುತ್ತವೆ. ಸಂಸಾರದ ಸಾಗರದಲ್ಲಿ ಸಹ ಕಷ್ಟಗಳು ನಿವಾರಣೆಯಾಗಲು ದೈವೀಭಕ್ತಿ ಅಗತ್ಯ. ಸುಖ ಹಾಗೂ ದುಃಖಗಳು ಬಂದಾಗ ದೇವರ ಸ್ಮರಣೆ ಮಾಡಬೇಕು. ಜಗತ್ತಿನ ಸೃಷ್ಠಿಕರ್ತ ಪರಮಾತ್ಮನಾದ್ದರಿಂದ ಮನುಷ್ಯನಾದವನು ಧರ್ಮದಾನಗಳಿಂದ ಬದುಕಬೇಕು. ವಿಜ್ಞಾನ ಎಷ್ಟೇ ಮುಂದುವರೆದರೂ ಜ್ಞಾನವೆಂಬುದು ಮಸುಕಾಗಿದೆ. ಪ್ರಕೃತಿಯ ಮುಂದೆ ಮನುಷ್ಯ ಕ್ಷಣಿಕನಾಗಿದ್ದಾನೆ. ಅಂತಃಕರಣ ಶುದ್ಧಿಗೊಂಡರೆ ಮತ್ತಷ್ಟು ಶಕ್ತಿ ಪಡೆಯಬಹುದು. ಮನುಷ್ಯನ ಪಯಣ ಯಾವಾಗಲೂ ಒಳ್ಳೆಯ ದಿಕ್ಕಿನಲ್ಲಿ ಸಾಗಲಿ. ದ್ವೇಷ, ಅಸೂಹೆ, ಸ್ವಾರ್ಥತೆಯನ್ನು ಬಿಟ್ಟು ನಡೆದಾಗ…
ಚಿಕ್ಕನಾಯಕನಹಳ್ಳಿ: ಪಟ್ಟಣದ ಶಕ್ತಿ ಮಾತೆ ಶ್ರೀ ಮಹಾಲಕ್ಷ್ಮೀ ಮದ್ದರ ಲಕ್ಕಮ್ಮ ಅಮ್ಮನವರ ಸನ್ನಿಧಿಯಲ್ಲಿ ಶರನ್ನವರಾತ್ರಿ ಅಂಗವಾಗಿ ವಿಜಯ ದಶಮಿ ದಿನದಂದು ಸ್ವಚ್ಛತೆಯೇ ಸೇವೆ ಎಂಬ ದ್ಯೇಯ ವಾಕ್ಯದೊಂದಿಗೆ ಪಟ್ಟಣದ ಪುರಸಭೆಯ ಮಹಿಳಾ ಪೌರ ಕಾರ್ಮಿಕರ ಪಾದ ಪೂಜೆಯನ್ನು ದೇವಸ್ಥಾನದ ಮುಖ್ಯಸ್ಥರಾದ ಶ್ರೀ ಲಕ್ಷ್ಮೀಶ್ ರವರು ನೆರವೇರಿಸಿದರು. ಇದೇ ವೇಳೆ ಅಕ್ಷತ ಲಕ್ಷ್ಮೀಶ್, ನಾಗರತ್ನ ರಂಗಸ್ವಾಮಿ ರವರು ಮಂಗಳ ದ್ರವ್ಯಗಳನ್ನು ವಸ್ತ್ರ ನೀಡಿ ಗೌರವ ಸಲ್ಲಿಸಿದರು. ನಂತರ ಕೌಮಾರಿ ಪೂಜೆ ಹತ್ತು ವರ್ಷದ ಒಳಗಿನ ಹೆಣ್ಣುಮಕ್ಕಳಿಗೂ ಸಹ ಪಾದ ಪೂಜೆ ಮಾಡಲಾಯಿತು. ನಂತರ ಶಮಿ ಪೂಜೆ, ಕದಲಿ ವೃಕ್ಷ ಛೇದನ, ಬನ್ನಿ ಪ್ರಸಾದ ನೀಡಲಾಯಿತು. ದೇವಾಲಯದ ಧರ್ಮದರ್ಶಿಗಳಾದ ಶ್ರೀರಂಗ ಸ್ವಾಮಿ ಸಿ.ಎನ್. ರವರು ಎಲ್ಲ ಧಾರ್ಮಿಕ ವಿಧಿ ವಿಧಾನ ನೆರವೇರಿಸಿದರು. ರಂಗರಾಜು, ಮೋಹಿತ್, ಮನೋಜ್, ಯೋಗ ಗುರುಗಳಾದ ಚರಣ್, ಕುಮಾರ್, ರಾಜಶೇಖರ್ ಪೋಚ್ಕಟ್ಟೆ, ಚರಣ್ ಹಾಗೂ ನೂರಾರು ಭಕ್ತರು ಉಪಸ್ಥಿತರಿದ್ದರು. ಎಲ್ಲ ಭಕ್ತರಿಗೂ ಅನ್ನ ಸಂತರ್ಪಣೆ ಏರ್ಪಡಿಸಲಾಗಿತ್ತು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು…
ಅಕ್ಟೋಬರ್ 20ರಂದು ಗ್ರಹಗಳ ಸೇನಾಪತಿಯಾಗಿರುವ ಮಂಗಳ ಕರ್ಕ ರಾಶಿಗೆ ಶ್ರೀ ಕ್ಷೇತ್ರ ಕಟೀಲು ದುರ್ಗಾಪರಮೇಶ್ವರೀ ಜ್ಯೋತಿಷ್ಯ ಪೀಠಂ ದೈವಜ್ಞ ಪಂಡಿತ್ ಕೃಷ್ಣ ಭಟ್ ಪ್ರಧಾನ ತಾಂತ್ರಿಕ್ ಹಾಗೂ ಮಾಂತ್ರಿಕರು ಸ್ತ್ರೀ ಪುರುಷ ವಶೀಕರಣ ಸ್ಪೆಷಲಿಸ್ಟ್ ನನಗೆ ಒಂದೇ ಕರೆ ಮಾಡಿದರೆ ನಿಮ್ಮ ಇಷ್ಟಪಟ್ಟವರು ನಿಮ್ಮಂತೆ 9535156490 ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆ ಉತ್ತರಿಸಬಹುದು ಏಷ್ಟೇ ಪೂಜೆ ಪ್ರಯತ್ನ ಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..?ನಿಮ್ಮ ಯಾವುದೇಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ 2 ದಿನಗಳಲ್ಲಿ ಪರಿಹಾರ ಶತಸಿದ್ಧ ಧನವಶ, ಜನವಶ, ಶತ್ರುನಾಶ, ಸ್ತ್ರೀ- ಪುರುಷ ವಶೀಕರಣ, ದಿಗ್ಭಂಧನ, ಸ್ತಂಭನ, ವುಚ್ಛಾಟನೆಯಂತಹ ಸಮಸ್ಯೆಗಳಿಗೆ ವಿಶೇಷ ಪರಿಹಾರ ತಿಳಿಸುತ್ತಾರೆ 9535156490 ಕಾಲಿಡಲಿದ್ದಾನೆ. ಈ ಸಂದರ್ಭದಲ್ಲಿ ಕೆಲವೊಂದು ಗ್ರಹಗಳ ನಡುವೆ ಮಂಗಳನ ಗೋಚರ ಫಲ ಕಾಣಿಸಿಕೊಳ್ಳುವುದರಿಂದಾಗಿ ಕೆಲವು ರಾಶಿಯವರಿಗೆ ಅದು ನಕಾರಾತ್ಮಕವಾಗಿ ಕೂಡ ಪರಿಣಮಿಸಬಹುದಾಗಿದೆ. ಆದರೆ ಕರ್ಕ…
ಪುರುಷನನ್ನು ಬೋಳು ಎಂದು ಕರೆಯುವುದು ಲೈಂಗಿಕ ಕಿರುಕುಳಕ್ಕೆ ಸಮ ಎಂದು ಯುಕೆ ನ್ಯಾಯಾಲಯ ತೀರ್ಪು ನೀಡಿದೆ. ವೆಸ್ಟ್ ಯಾರ್ಕ್ಷೈರ್ ಮೂಲದ ಸಂಸ್ಥೆಯ ಮೇಲೆ ಲೈಂಗಿಕ ಕಿರುಕುಳಕ್ಕಾಗಿ ಮೊಕದ್ದಮೆ ಹೂಡಿದ ಬ್ರಿಟಿಷ್ ಬಂಗ್ ಕಂಪನಿಯ ಮಾಜಿ ಉದ್ಯೋಗಿ ಟೋನಿ ಫಿನ್ ಒಳಗೊಂಡ ಪ್ರಕರಣದಿಂದ ಈ ತೀರ್ಪು ಬಂದಿದೆ. ಟೋನಿ ಫಿನ್, ಎಲೆಕ್ಟ್ರಿಷಿಯನ್, ಸುಮಾರು 24 ವರ್ಷಗಳ ಕಾಲ ಬ್ರಿಟಿಷ್ ಬಂಗ್ ಕಂಪನಿಯಲ್ಲಿ ಕೆಲಸ ಮಾಡಿದ್ದು, ಮೇ 2021 ರಲ್ಲಿ ಅವರನ್ನು ವಜಾಗೊಳಿಸಲಾಯಿತು. ಅವರ ವಜಾಗೊಳಿಸಿದ ನಂತರ, ಫಿನ್ ಕಂಪನಿಯ ವಿರುದ್ಧ ಕಾನೂನು ಕ್ರಮ ಕೈಗೊಂಡರು. ನನ್ನನ್ನು ಬೋಳು ತಲೆಯವ ಎಂದು ಅವಹೇಳನ ಮಾಡಲಾಗಿದೆ ಎಂದು ಟೋನಿ ಫಿನ್ ಪ್ರಮುಖವಾಗಿ ಆರೋಪಿಸಿದ್ದರು. ಈ ಪ್ರಕರಣದ ವಿಚಾರಣೆ ವೇಳೆ, ಕಾರ್ಖಾನೆಯ ಮೇಲ್ವಿಚಾರಕರಾದ ಜೇಮೀ ಕಿಂಗ್ ಅವರು ಟೋನಿ ಫಿನ್ ಅವರನ್ನು ಬೋಳ ಎಂದು ಕರೆದಿರುವುದೇ ವಿಚಾರಣೆಯ ಮುಖ್ಯ ಭಾಗವಾಯ್ತು. ಬೋಳ(ಬೊಕ್ಕತಲೆಯವ) ಎಂದು ಕರೆಯುವುದು ಕೇವಲ ಅವಮಾನ ಮಾತ್ರವಲ್ಲ, ಲೈಂಗಿಕ ಕಿರುಕುಳ ಎಂದು ವಾದಿಸಲಾಯಿತು. ಉದ್ಯೋಗ ಟ್ರಿಬ್ಯೂನಲ್…
ಬೆಂಗಳೂರು: ಇವೆಂಟ್ ಮ್ಯಾನೇಜ್ಮೆಂಟ್ ಹೆಸರಿನಲ್ಲಿ ಹೈಟೆಕ್ ವೇಶ್ಯಾವಾಟಿಕೆ ದಂಧೆ ನಡೆಸಿ ಬಡ ಕುಟುಂಬದ ಹೆಣ್ಣು ಮಕ್ಕಳನ್ನು ದಂಧೆಗೆ ಬಳಸಿಕೊಳ್ಳುತ್ತಿದ್ದ ದಂಪತಿಯನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಪಟ್ಟೆಗಾರ ಪಾಳ್ಯ ನಿವಾಸಿಗಳಾದ ಪ್ರಕಾಶ್, ಪಾರಿಜಾತ ಬಂಧಿತ ದಂಪತಿಯಾಗಿದ್ದು, ಉದ್ಯೋಗ ಕೊಡಿಸುವ ನೆಪದಲ್ಲಿ ಉತ್ತರ ಕರ್ನಾಟಕದ ಬಡ ಹೆಣ್ಣು ಮಕ್ಕಳನ್ನು ಬೆಂಗಳೂರಿಗೆ ಕರೆದುಕೊಂಡು ಬಂದು ಕೆಲಸ ಕೊಡಿಸದೆ ಹಣದ ಆಮಿಷ ತೋರಿಸಿ ವೇಶ್ಯಾವಾಟಿಕೆಗೆ ದೂಡುತ್ತಿದ್ದರು ಎಂಬ ಆರೋಪ ಕೇಳಿ ಬಂದಿದೆ. ಆರೋಪಿಗಳು ತಮಿಳುನಾಡು, ಪಾಂಡಿಚೇರಿ ರೆಸಾರ್ಟ್ ಗಳಲ್ಲಿ ದಂಧೆ ನಡೆಸುತ್ತಿದ್ದರು. ಮದುವೆ ಇವೆಂಟ್ ಮ್ಯಾನೇಜ್ಮೆಂಟ್ ಹೆಸರಲ್ಲಿ ಪ್ರತಿ ವಾರ ಬೆಂಗಳೂರಿನಿಂದ ತಮಿಳುನಾಡಿಗೆ ಯುವತಿಯರನ್ನು ಕರೆದೊಯ್ದು ವೇಶ್ಯಾವಾಟಿಕೆ ನಡೆಸುತ್ತಿದ್ದರು. ಶ್ರೀಮಂತರು, ಉದ್ಯಮಿಗಳು, ರೆಸಾರ್ಟ್ ಗಳಿಗೆ ಭೇಟಿ ನೀಡುತ್ತಿದ್ದವರ ಬಳಿಗೆ ಹೆಣ್ಣು ಮಕ್ಕಳನ್ನು ಕಳಿಸುತ್ತಿದ್ದರು. ಒಬ್ಬರಿಗೆ 25 ರಿಂದ 50 ಸಾವಿರ ರೂ.ವರೆಗೆ ಹಣ ಪಡೆಯುತ್ತಿದ್ದರು ಎನ್ನಲಾಗಿದೆ. ಈ ಬಗ್ಗೆ ಮಾಹಿತಿ ಪಡೆದ ಸಿಸಿಬಿ ಪೊಲೀಸರು ದಾಳಿ ನಡೆಸಿ ನಾಲ್ವರು ಯುವತಿಯರನ್ನು ರಕ್ಷಿಸಿದ್ದಾರೆ. ಆರೋಪಿ ದಂಪತಿಯನ್ನು ಬಂಧಿಸಲಾಗಿದೆ. ನಮ್ಮತುಮಕೂರಿನ…
ಕೂಡ್ಲಿಗಿ (ವಿಜಯನಗರ ಜಿಲ್ಲೆ): ಕೋಡಿ ಬಿದ್ದ ಕೆರೆಯ ಬಳಿ ಸೆಲ್ಫಿ ತೆಗೆಯುತ್ತಿದ್ದ ವೇಳೆ ಯುವಕನೊಬ್ಬ ಕೆರೆಗೆ ಬಿದ್ದು ಮೃತಪಟ್ಟಿರುವ ಘಟನೆ ತಾಲ್ಲೂಕಿನ ಗಂಡಬೊಮ್ಮನಹಳ್ಳಿ ಕೆರೆ ಶುಕ್ರವಾರ ನಡೆದಿದೆ. ತಾಲ್ಲೂಕಿನ ಕೆ.ದಿಬ್ಬದಹಳ್ಳಿ ಗ್ರಾಮದ ಗ್ರಾಮ ಪಂಚಾಯಿತಿ ಸದಸ್ಯ ಪಾಲಯ್ಯ ಅವರ ಮಗ ಚೇತನ್ ಕುಮಾರ್ (21) ಮೃತ ಯುವಕ ಎಂದು ತಿಳಿದು ಬಂದಿದೆ. ತನ್ನ ಕುಟುಂಬಸ್ಥರ ಜೊತೆಗೆ ಕೋಡಿಬಿದ್ದ ಕೆರೆಯನ್ನು ನೋಡಲು ಚೇತನ್ ತೆರಳಿದ್ದ. ಇಬ್ಬರು ಸ್ನೇಹಿತರು ತುಂಬಿದ ಕೆರೆಯ ಕೋಡಿ ಬಳಿ ಫೋಟೋ ತೆಗೆದುಕೊಳ್ಳಲು ಮುಂದಾಗಿದ್ದಾರೆ. ಈ ವೇಳೆ ಕಾಲು ಜಾರಿ ಚೇತನ್ ಕೆರೆಗೆ ಬಿದ್ದಿದ್ದು, ಆತನನ್ನು ರಕ್ಷಿಸಲು ಜೊತೆಗಿದ್ದವರು ಸಾಕಷ್ಟು ಪ್ರಯತ್ನಿಸಿದರೂ ಯಾವುದೇ ಪ್ರಯೋಜನವಾಗಲಿಲ್ಲ ಎಂದು ತಿಳಿದು ಬಂದಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296
ಬಳ್ಳಾರಿ: ಜೈಲಲ್ಲಿ ಬೆನ್ನು ನೋವಿನಿಂದ ಬಳಲುತ್ತಿರುವ ನಟ ದರ್ಶನ್ ಗೆ ಆರ್ಥೋಪೆಡಿಕ್ ತಜ್ಞವೈದ್ಯರಿಂದ ತಪಾಸಣೆ ನಡೆಸಲಾಗಿದ್ದು ಇದೀಗ ನ್ಯೂರೋ ಸರ್ಜನ್ ರಿಂದ ದರ್ಶನ್ ತಪಾಸಣೆ ನಡೆಯುತ್ತಿದೆ. ದರ್ಶನ್ ಬೆನ್ನು ನೋವಿನಿಂದ ಬಳಲುತ್ತಿರುವ ಹಿನ್ನಲೆ ದರ್ಶನ್ ಅವರನ್ನು ಬಳ್ಳಾರಿಯ ವಿಮ್ಸ್ ಆಸ್ಪತ್ರೆಗೆ ಕರೆತರಲಾಗಿದ್ದು ವೈದ್ಯರಿಂದ ತಪಾಸಣೆ ನಡೆಸಲಾಗುತ್ತಿದೆ. ಕಳೆದ ವಾರ ಅರ್ಥೋಪೆಡಿಕ್ ವೈದ್ಯರು ತಪಾಸಣೆ ಮಾಡಿದ್ದರು ಇದೀಗ ನ್ಯೂರೋ ಸರ್ಜನ್ ಡಾ.ವಿಶ್ವನಾಥ ಅವರಿಂದ ದರ್ಶನ್ ತಪಾಸಣೆ ನಡೆಸಲಾಗುತ್ತಿದೆ. ಜೈಲಿನ ಅಧಿಕಾರಿಗಳಿಗೆ ವೈದ್ಯಕೀಯ ರಿಪೋರ್ಟ್ ಕೊಡೋ ಮುನ್ನ ನ್ಯೂರೋ ಸರ್ಜನ್ ಪರಿಶೀಲಿಸಬೇಕಿತ್ತು. ನ್ಯೂರೋ ಸರ್ಜನ್ ವರದಿ ಬಳಿಕ ಅರ್ಥೋಪೆಡಿಕ್ ವೈದ್ಯರು ದರ್ಶನ್ ಬೆನ್ನು ನೋವಿನ ಪೂರ್ಣ ವರದಿ ನೀಡಲಿದ್ದಾರೆ. ವೈದ್ಯರ ವರದಿ ಆಧಾರದಲ್ಲಿ ದರ್ಶನ್ ಬೆಂಗಳೂರಿಗೆ ಶಿಫ್ಟ್ ಆಗುವ ಬಗ್ಗೆ ನಿರ್ಧಾರವಾಗಲಿದೆ ಎಂದು ತಿಳಿದು ಬಂದಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296
ಕ್ಯಾಲಿಫೋರ್ನಿಯಾ: ಸಾಕು ನಾಯಿ ಕಚ್ಚಿದ ಪರಿಣಾಮ 1 ತಿಂಗಳ ಮಗು ಸಾವನ್ನಪ್ಪಿರುವ ದಾರುಣ ಘಟನೆ ಅಮೆರಿಕದ ಕ್ಯಾಲಿಫೋರ್ನಿಯಾದಲ್ಲಿ ನಡೆದಿದೆ. ಮನೆಯವರು ಮಗುವಿನ ಮೇಲೆ ಗಮನ ನೀಡದ ಪರಿಣಾಮ ಈ ದುರ್ಘಟನೆ ನಡೆದಿದೆ ಎನ್ನಲಾಗಿದೆ. ಕ್ಯಾಲಿಫೋರ್ನಿಯಾದ ಟೊರೆನ್ಸ್ನಲ್ಲಿ ಮಾರ್ಥಾ ಅವೆನ್ಯೂನಲ್ಲಿರುವ ಮನೆಯಲ್ಲಿ ಮಂಗಳವಾರ ಮಧ್ಯಾಹ್ನದ ಸುಮಾರಿಗೆ 1 ತಿಂಗಳ ಮಗುವಿಗೆ ನಾಯಿ ಕಚ್ಚಿತ್ತು. ಈ ವೇಳೆ ಕುಟುಂಬಸ್ಥರು ತಕ್ಷಣವೇ ಮಗುವನ್ನು ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಆದರೆ ಮಗು ಬದುಕುಳಿಯಲಿಲ್ಲ. ಘಟನೆ ಸಂಬಂಧ ಪ್ರತಿಕ್ರಿಯಿಸಿರುವ ಮಗುವಿನ ಕುಟುಂಬದ ಸ್ನೇಹಿತೆ ಫಾಯೆ ತೋಹಿಡಿ, ಇದು ನಿಜಕ್ಕೂ ದುರಂತ, ಮಗುವಿನ ಮೇಲೆ ಹೆಚ್ಚಿನ ಗಮನ ನೀಡಬೇಕಿತ್ತು ಎಂದು ಹೇಳಿದ್ದಾರೆ. ಟಾರೆನ್ಸ್ ಅನಿಮಲ್ ಕಂಟ್ರೋಲ್ ಅಧಿಕಾರಿಗಳು ಮಗುವನ್ನು ಕಚ್ಚಿದ ನಾಯಿಯನ್ನು ಮನೆಯಿಂದ ಹೊರತೆಗೆದಿದ್ದಾರೆ ಮತ್ತು ಮುಂದಿನ ತನಿಖೆಯನ್ನು ಪ್ರಾರಂಭಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296
ಚೆನ್ನೈ: ತಮಿಳುನಾಡಿನ ತಿರುವಳ್ಳುವರ್ ಜಿಲ್ಲೆಯ ಕಾವರೈಪೇಟೈ ಸಮೀಪದಲ್ಲಿ ಮೈಸೂರು-ದರ್ಭಾಂಗ ಬಾಗ್ಮತಿ ಎಕ್ಸ್ಪ್ರೆಸ್ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ. ಶುಕ್ರವಾರ ರಾತ್ರಿ ಮೈಸೂರು-ದರ್ಭಾಂಗ ಬಾಗ್ಮತಿ ಎಕ್ಸ್ಪ್ರೆಸ್, ಗೂಡ್ಸ್ ರೈಲಿಗೆ ಡಿಕ್ಕಿಯಾಗಿ ಸುಮಾರು 19 ಮಂದಿ ಗಾಯಗೊಂಡಿದ್ದರು. 12ರಿಂದ 13 ಬೋಗಿಗಳು ಹಳಿ ತಪ್ಪಿದ್ದವು. ಸಾಮಾಜಿಕ ಮಾಧ್ಯಮ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ರಾಹುಲ್ ಗಾಂಧಿ, ಈ ಅವಘಡವು ಒಡಿಶಾದ ಬಾಲೇಶ್ವರದಲ್ಲಿ ನಡೆದ ದುರ್ಘಟನೆಯನ್ನು ನೆನಪಿಸುವಂತಿದೆ ಎಂದಿದ್ದಾರೆ. ಹಲವು ಅಪಘಾತಗಳಲ್ಲಿ ಅನೇಕ ಜೀವಗಳನ್ನು ಕಳೆದುಕೊಂಡರೂ ಯಾವುದೇ ಪಾಠ ಕಲಿತಂತಿಲ್ಲ. ಇದಕ್ಕೆ ಉನ್ನತ ಮಟ್ಟದಿಂದಲೇ ಹೊಣೆಗಾರರಾಗುತ್ತಾರೆ. ಸರ್ಕಾರ ಎಚ್ಚೆತ್ತುಕೊಳ್ಳಲು ಇನ್ನೆಷ್ಟು ಕುಟುಂಬಗಳು ಬಲಿಯಾಗಬೇಕು ಎಂದು ಪ್ರಶ್ನಿಸಿದ್ದಾರೆ. ಕಳೆದ ವರ್ಷ ಒಡಿಶಾದ ಬಾಲೇಶ್ವರದಲ್ಲಿ ಎರಡು ಪ್ರಯಾಣಿಕ ರೈಲುಗಳು ಮತ್ತು ಸರಕು ಸಾಗಣೆ ರೈಲು ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ 293 ಮಂದಿ ಮೃತಪಟ್ಟಿದ್ದರು. ಘಟನೆಯಲ್ಲಿ 1,200ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದರು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149…
ಬೆಂಗಳೂರು: ನ.1 ರಂದು ಕಡ್ಡಾಯವಾಗಿ ಎಲ್ಲಾ ಕಂಪನಿ, ಕಚೇರಿಗಳಲ್ಲಿ ಕನ್ನಡ ರಾಜ್ಯೋತ್ಸವ ಆಚರಿಸಬೇಕು. ಬಾವುಟ ಹಾರಿಸದ ಕಂಪನಿಗಳ ವಿರುದ್ಧ ಸರ್ಕಾರ ಕ್ರಮ ಕೈಗೊಳ್ಳುತ್ತದೆ, ಕನ್ನಡ ಪರ ಸಂಘಟನೆಗಳು ಕಾನೂನು ಕೈಗೆ ತೆಗೆದುಕೊಂಡರೆ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಎಚ್ಚರಿಕೆ ನೀಡಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಡಿಸಿಎಂ ಡಿ.ಕೆ.ಶಿವಕುಮಾರ್ ರಾಜ್ಯೋತ್ಸವ ಆಚರಣೆ ಮಾಡದೇ ಇರುವ ಸಂಸ್ಥೆಗಳ ವಿರುದ್ಧ ಸರ್ಕಾರವೇ ಕ್ರಮ ಕೈಗೊಳ್ಳಲಿದೆ, ಕನ್ನಡ ಪರ ಸಂಘಟನೆಗಳು ಗಲಾಟೆ ಮಾಡಿ ಬೆದರಿಕೆ ಹಾಕಬಾರದು ಎಂದರು. ಈ ಬಾರಿ 50 ನೇ ವರ್ಷದ ಕನ್ನಡ ರಾಜ್ಯೋತ್ಸವವನ್ನು ಬಹಳ ಅದ್ದೂರಿಯಾಗಿ ಆಚರಿಸಲಾಗುತ್ತಿದೆ.ನವೆಂಬರ್ 1 ರಂದು ಎಲ್ಲಾ ಶಾಲಾ ಕಾಲೇಜುಗಳು, ಎಲ್ಲಾ ಕಂಪನಿ, ಕಾರ್ಖಾನೆಗಳಲ್ಲಿ ಕನ್ನಡ ಬಾವುಟ ಹಾರಿಸಬೇಕು ಎಂದು ಅವರು ತಿಳಿಸಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296