Author: admin

ನವದೆಹಲಿ: ರಾಮರಾಜ್ಯ ಅಂದ್ರೆ ಎಲ್ಲರಿಗೂ ಶಿಕ್ಷಣ, ಆರೋಗ್ಯ ಸಿಗಬೇಕು ಎಂದು ದೆಹಲಿ ಮಾಜಿ ಸಿಎಂ ಅರವಿಂದ್ ಕೇಜ್ರಿವಾಲ್ ಹೇಳಿದ್ದಾರೆ. ಪೂರ್ವ ದೆಹಲಿಯ ಮಯೂರ ವಿಹಾರದಲ್ಲಿ ರಾಮಲೀಲಾ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ದೇಶದಲ್ಲಿ ಯಾವುದೇ ಮಕ್ಕಳು ಅವಿದ್ಯಾವಂತರಾಗಿ ಉಳಿಯಬಾರದು. ಆರೋಗ್ಯದ ಸೌಲಭ್ಯ ಸಿಗದೇ ಹೋಗಬಾರದು ಎಂದು ಹೇಳಿದರು. ದೆಹಲಿಯ ಜನರ ಸೇವೆಗಾಗಿ ಆಮ್ ಆದ್ಮಿ ಪಕ್ಷವು ರಾಮರಾಜ್ಯದ ಆದರ್ಶಗಳನ್ನು ಪಾಲಿಸುತ್ತಿದೆ ಎಂದು ನುಡಿದರು. ಶ್ರೀರಾಮ ದೇವರ ನ್ಯಾಯ, ಸಮಾನತೆ, ಆದರ್ಶಗಳನ್ನು ಎಲ್ಲರೂ ಪಾಲಿಸಬೇಕು’ ಎಂದು ಅವರು ಮನವಿ ಮಾಡಿದರು. ಭಾರತೀಯ ಹಾಗೂ ಹಿಂದೂ ಸಂಸ್ಕೃತಿಯನ್ನು ಪ್ರತಿಬಿಂಬಿಸುವ ರಾಮನ ಆದರ್ಶಗಳನ್ನು ನಾವೆಲ್ಲರೂ ಜೀವನದಲ್ಲಿ ಅಳವಡಿಸಿಕೊಳ್ಳಬೇಕು. ರಾಮಲೀಲಾದಂತಹ ಕಾರ್ಯಕ್ರಮಗಳನ್ನು ವೀಕ್ಷಿಸುವಂತೆ ಮಾಡುವ ಮೂಲಕ ನಮ್ಮ ಸಾಂಸ್ಕೃತಿಕ ಪರಂಪರೆಯನ್ನು ಮಕ್ಕಳಿಗೂ ಪಸರಿಸಬೇಕು ಎಂದು ಅವರು ಹೇಳಿದರು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

Read More

ಬೆಂಗಳೂರು: ದೇಶದಾದ್ಯಂತ ಸಂಭ್ರಮದ ವಿಜಯದಶಮಿ ಆಚರಿಸಲಾಗುತ್ತಿದೆ. ಸಡಗರದ ವಿಜಯದಶಮಿ ಪ್ರಯುಕ್ತ ರಾಷ್ಟ್ರಪತಿ ದ್ರೌಪದಿ ಮುರ್ಮು, ಪ್ರಧಾನಿ ನರೇಂದ್ರ ಮೋದಿ, ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ಹಲವು ಗಣ್ಯರು ಜನತೆಗೆ ಶುಭಾಶಯ ತಿಳಿಸಿದ್ದಾರೆ. ‘ವಿಜಯದಶಮಿಯ ಶುಭ ಸಂದರ್ಭದಲ್ಲಿ, ನಾನು ಎಲ್ಲಾ ದೇಶವಾಸಿಗಳಿಗೆ ನನ್ನ ಹೃತ್ಪೂರ್ವಕ ಶುಭಾಶಯಗಳನ್ನು ಸಲ್ಲಿಸುತ್ತೇನೆ. ಇದು ಅನ್ಯಾಯದ ವಿರುದ್ಧ ನ್ಯಾಯದ ವಿಜಯದ ಹಬ್ಬವಾಗಿದೆ. ಈ ಹಬ್ಬವು ಸತ್ಯ ಮತ್ತು ನೈತಿಕತೆಯ ಮೌಲ್ಯಗಳಲ್ಲಿ ನಮ್ಮ ನಂಬಿಕೆಯ ಸಂಕೇತವಾಗಿದೆ. ಈ ಸುಸಂದರ್ಭದಲ್ಲಿ ಅತ್ಯಂತ ಕ್ಲಿಷ್ಟಕರ ಸಂದರ್ಭದಲ್ಲೂ ನ್ಯಾಯದ ಪರವಾಗಿ ನಿಲ್ಲುತ್ತೇವೆ ಎಂದು ಪ್ರತಿಜ್ಞೆ ಮಾಡಬೇಕು. ಈ ಪವಿತ್ರ ಹಬ್ಬವು ಪ್ರತಿಯೊಬ್ಬರ ಜೀವನದಲ್ಲಿ ಸಂತೋಷ ಮತ್ತು ಸಮೃದ್ಧಿಯನ್ನು ತರಲಿ ಮತ್ತು ನಮ್ಮ ದೇಶವು ಯಾವಾಗಲೂ ಅಭಿವೃದ್ಧಿಯ ಪಥದಲ್ಲಿ ಮುನ್ನಡೆಯಲಿ ಎಂದು ನಾನು ಬಯಸುತ್ತೇನೆ ದೇಶದ ಜನತೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಶುಭಾಶಯ ತಿಳಿಸಿದ್ದಾರೆ. ‘ದುರ್ಗಾ ಮಾತೆ ಮತ್ತು ಪ್ರಭು ಶ್ರೀರಾಮನ ಆಶೀರ್ವಾದದಿಂದ ನೀವೆಲ್ಲರೂ ಜೀವನದ ಪ್ರತಿಯೊಂದು ಕ್ಷೇತ್ರದಲ್ಲೂ…

Read More

ಉತ್ತರ ಪ್ರದೇಶ: ಎಲೆಕ್ಟ್ರಿಕಲ್ ಬೋರ್ಡ್‌ನಿಂದ ಬೆಂಕಿ ಹೊತ್ತಿಕೊಂಡು ಪಟಾಕಿ ಮತ್ತು ಗ್ಯಾಸ್ ಸಿಲಿಂಡರ್ ಸ್ಫೋಟದಿಂದಾಗಿ ಭೀಕರ ಅಗ್ನಿ ಅನಾಹುತ ನೋಯ್ಡಾದ ಸೆಕ್ಟರ್ 27 ರಲ್ಲಿ ನಡೆದಿದೆ. ಘಟನೆಯಲ್ಲಿ ಮಹಿಳೆಯೊಬ್ಬರು ಸಾವನ್ನಪ್ಪಿದ್ದು, ಮೂವರು ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ. ಅಗ್ನಿಶಾಮಕದಳ ಸಿಬ್ಬಂದಿ ಕಾರ್ಯಾಚರಣೆ ನಡೆಸಿ ಬೆಂಕಿಯನ್ನು ನಿಯಂತ್ರಿಸಿದ್ದಾರೆ. ಆದರೆ ಇಡೀ ಮಹಡಿ ಸುಟ್ಟುಹೋಗಿದೆ. ನೋಯ್ಡಾದ ಸೆಕ್ಟರ್ 27ರಲ್ಲಿ ಶುಕ್ರವಾರ ರಾತ್ರಿ ಮನೆಯೊಂದರಲ್ಲಿ ತೀವ್ರ ಬೆಂಕಿ ಕಾಣಿಸಿಕೊಂಡಿದ್ದು, ಕಟ್ಟಡ ಎರಡನೇ ಮಹಡಿಯಲ್ಲಿ ಸಿಲುಕಿದ್ದ ಶ್ವೇತಾ ಸಿಂಗ್ ಸಾವನ್ನಪ್ಪಿದ್ದಾರೆ. ಆಕೆಯ ಸೋದರ ಸಂಬಂಧಿ ನಮ್ರತಾ ಸಿಂಗ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಅಗ್ನಿಶಾಮಕ ದಳ ಮೂರು ಅಗ್ನಿಶಾಮಕ ವಾಹನಗಳೊಂದಿಗೆ ಬೆಂಕಿಯನ್ನು ಹತೋಟಿಗೆ ತಂದಿದೆ. ಪೊಲೀಸರ ಪ್ರಕಾರ, ಮೊದಲಿಗೆ ಬೆಂಕಿಯು ವಿದ್ಯುತ್ ಬೋರ್ಡ್‌ನಲ್ಲಿ ಪ್ರಾರಂಭವಾಯಿತು. ಮನೆಯಲ್ಲಿ ಶೇಖರಿಸಿಟ್ಟಿದ್ದ ಪಟಾಕಿಗಳು ಹೊತ್ತಿಕೊಂಡಾಗ ಅದು ಬೇಗನೆ ಹರಡಿ, ಬೆಂಕಿಯ ಜ್ವಾಲೆಯು ತೀವ್ರಗೊಂಡು ಇಡೀ ಮನೆಗೆ ಆವರಿಸಿದೆ. ಹೊಗೆಯಿಂದಾಗಿ ಎರಡನೇ ಮಹಡಿಯಲ್ಲಿ ವಾಸಿಸುತ್ತಿದ್ದ ಇಬ್ಬರು ಮಹಿಳೆಯರು ಪ್ರಜ್ಞಾಹೀನ ಸ್ಥಿತಿಯಲ್ಲಿ ಬಿದ್ದಿದ್ದಾರೆ ಎಂದು ರಕ್ಷಣಾ…

Read More

ಮೈಸೂರು : ವಿಶ್ವ ಪ್ರಸಿದ್ಧ ಮೈಸೂರು ದಸರಾ ನೋಡಲು ಖುಷಿಯಾಗುತ್ತಿದೆ. ಜೀವನದಲ್ಲಿ ಮೊದಲ ಬಾರಿಗೆ ದಸರಾ ನೋಡುತ್ತಿರುವೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು. ಮೈಸೂರಿನ ಶಾರದಾ ದೇವಿನಗರದ ನಿವಾಸದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನವರನ್ನು ಸಚಿವರು ಭೇಟಿಯಾದರು. ಈ ವೇಳೆ ಮಾತನಾಡಿದ ಸಚಿವರು ಜೀವನದಲ್ಲಿ ಒಮ್ಮೆಯಾದರೂ ದಸರಾ ನೋಡಬೇಕು. ಇಂದು ದಸರಾ ನೋಡುವ ಕನಸು ಈಡೇರುತ್ತಿದೆ ಎಂದರು. ದಸರಾ ನೋಡಲು ಖುಷಿಯಾಗುತ್ತಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ನವರ ಜೊತೆಯಲ್ಲಿ ದಸರಾ ನೋಡುತ್ತಿರುವೆ. ದಸರಾ ವೈಭವವನ್ನು ನೋಡುವುದೇ ಚಂದ ಎಂದು ಸಚಿವರು ತಿಳಿಸಿದರು. ಸಿಎಂ ಭೇಟಿಯಾದ ಸಚಿವರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಸಚಿವರು ಕೆಲಕಾಲ ಚರ್ಚೆ ನಡೆಸಿದರು. ಈ ವೇಳೆ ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಸಿ.ಮಹಾದೇವಪ್ಪ, ಸಚಿವ ಕೆ.ವೆಂಕಟೇಶ್, ಶಾಸಕರಾದ ಕೃಷ್ಣಮೂರ್ತಿ, ಡಿ.ರವಿ ಶಂಕರ್, ದರ್ಶನ್ ದ್ರುವನಾರಾಯಣ್, ಅನಿಲ್ ಚಿಕ್ಕಮಾದು ಸೇರಿದಂತೆ ಹಲವರು ಉಪಸ್ಥಿತರಿದ್ದರು. ರೈಲು ದುರಂತಕ್ಕೆ ಬೇಸರ: ತಮಿಳುನಾಡಿನ ಪೆರಂಬೂರು ಸಮೀಪ ಮೈಸೂರು ದರ್ಬಾಂಗ್…

Read More

ಕರಾವಳಿ : ಕಾಸರಗೋಡು, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಕಡಲ ತೀರ ಭಾಗಗಳ ಸುತ್ತಮುತ್ತ ಒಂದೆರಡು ಕಡೆ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಉಳಿದ ಭಾಗಗಳಲ್ಲಿ ಹಾಗೂ ಉತ್ತರ ಕನ್ನಡ ಜಿಲ್ಲೆಯ ಹೆಚ್ಚಿನ ಭಾಗಗಳಲ್ಲಿ ಮೋಡದ ವಾತಾವರಣದೊಂದಿಗೆ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ. ಒಂದೆರಡು ಕಡೆ ಸಾಧಾರಣ ಮಳೆಯ ಸಾಧ್ಯತೆಯೂ ಇದೆ. ಈಗಿನಂತೆ ಒಕ್ಟೊಬರ್ 14ರಿಂದ ಹಿಂಗಾರು ಮತ್ತು ಬಂಗಾಳಕೊಲ್ಲಿಯ ವಾಯುಭಾರ ಕುಸಿತದ ಪರಿಣಾಮದಿಂದ ಮಳೆ ಹೆಚ್ಚಾಗುವ ಲಕ್ಷಣಗಳಿವೆ. ಮಲೆನಾಡು : ಕೊಡಗು ಮೋಡದ ವಾತಾವರಣದ ಮುನ್ಸೂಚನೆ ಇದ್ದು, ಅಲ್ಲಲ್ಲಿ ತುಂತುರು ಮಳೆಯ ಸಾಧ್ಯತೆ ಇದೆ. ಹಾಸನ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳ ಒಳನಾಡು ಭಾಗಗಳಿಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಮಳೆಯ ಮುನ್ಸೂಚನೆ ಇದೆ. ಉಳಿದ ಭಾಗಗಳಲ್ಲಿ ಮೋಡ ಹಾಗೂ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚೆನೆ ಇದೆ. ಈಗಿನಂತೆ ಹಿಂಗಾರು ಹಾಗೂ ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದ ಪರಿಣಾಮದಿಂದ ಒಕ್ಟೊಬರ್ 14ರಿಂದ ಮಳೆಯ ಪ್ರಮಾಣ ಹೆಚ್ಚಾಗುವ ನಿರೀಕ್ಷೆ ಇದೆ. ಒಳನಾಡು :…

Read More

ರಾಮನಗರ: ಚನ್ನಪಟ್ಟಣ ಕ್ಷೇತ್ರದ ಉಪಚುನಾವಣೆಗೆ ಕೌಂಟ್ ಡೌನ್ ಶುರುವಾಗಿದೆ. ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದಿಂದ ಮೈತ್ರಿ ಅಭ್ಯರ್ಥಿ ಯಾರು ಎನ್ನುವುದು ಕುತೂಹಲ ಕೆರಳಿಸಿದೆ. ಕಳೆದ ಲೋಕಸಭಾ ಚುನಾವಣೆಯಲ್ಲಿ ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದಿಂದ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಅಳಿಯ ಮಂಜುನಾಥ್ ಅವರು ಸ್ಪರ್ಧೆ ನಡೆಸಿದ್ರು. ಈ ವೇಳೆ ಬಿಜೆಪಿ ನಾಯಕ ಸಿ.ಪಿ.ಯೋಗೇಶ್ವರ್ ಅವರು ಮಂಜುನಾಥ್ ಅವರ ಗೆಲುವಿಗೆ ಸಾಕಷ್ಟು ಶ್ರಮಿಸಿದ್ರು. ಇದೀಗ ಚನ್ನಪಟ್ಟಣ ಕ್ಷೇತ್ರದ ಉಪಚುನಾವಣೆಗೆ ಮೈತ್ರಿ ಅಭ್ಯರ್ಥಿಯಾಗಿ ಸಿ.ಪಿ. ಯೋಗೇಶ್ವರ್ ಅಖಾಡಕ್ಕೆ ಇಳಿಯೋದು ಪಕ್ಕಾ ಎನ್ನಲಾಗುತ್ತಿತ್ತು. ಆದರೆ, ಸದ್ಯದ ಬೆಳವಣೆಗೆಯನ್ನ ಗಮನಿಸಿದ್ರೆ, ಸಿ.ಪಿ.ಯೋಗೇಶ್ವರ್ ಅವರಿಗೆ ಟಿಕೆಟ್ ಸಿಗುವುದು ಡೌಟ್ ಎನ್ನಲಾಗಿದೆ. ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಮುಖಂಡರ ಜೊತೆಗೆ ನಿರಂತರವಾಗಿ ನಿಖಿಲ್ ಕುಮಾರಸ್ವಾಮಿ ಅವರು ಸಭೆಯನ್ನ ಮಾಡುತ್ತಿದ್ದಾರೆ. ಈ ಎಲ್ಲಾ ಬೆಳವಣೆಗೆಗಳನ್ನ ಗಮನಿಸಿದರೇ ಸಿ.ಪಿ. ಯೋಗೇಶ್ವರ್ ಗೆ ಟಿಕೆಟ್ ಅಸಾಧ್ಯ ಎನ್ನಲಾಗುತ್ತಿದೆ. ಚನ್ನಪಟ್ಟಣದಿಂದ ನಿಖಿಲ್ ಅವರು ಸ್ಪರ್ಧಿಸಬೇಕೆಂಬ ಕೂಗು ಕೇಳಿ ಬಂದಿದ್ದು ಮಾಜಿ ಮುಖ್ಯಮಂತ್ರಿ ಹಾಗೂ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ, ರಾಜ್ಯ ಬಿಜೆಪಿ…

Read More

ಹುಬ್ಬಳ್ಳಿ: ಪೊಲೀಸರ ಮೇಲೆ ಹಲ್ಲೆಗೆ ಯತ್ನಿಸಿದ ಕೊಲೆ ಪ್ರಕರಣದ ಇಬ್ಬರು ಆರೋಪಿಗಳ ಮೇಲೆ ಪೊಲೀಸರು ಗುಂಡಿನ ದಾಳಿ ನಡೆಸಿದ್ದಾರೆ. ಇಬ್ಬರು ಆರೋಪಿಗಳಾದ ಶಿವು ಚಂದ್ರಶೇಖರ್ ಯುವಕನನ್ನು ಗೋನಕೊಪ್ಪದ ಬಳಿ ಚಾಕುವಿನಿಂದ ಇರಿದು ಹತ್ಯೆ ಮಾಡಿದ್ದರು. ಹತ್ಯೆಯಾದ ಕೆಲ ಗಂಟೆಗಳಲ್ಲೇ ಅಶೋಕ ನಗರ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಇಬ್ಬರು ಆರೋಪಿಗಳು ಉಳಿದ ಆರೋಪಿಗಳನ್ನು ತೋರಿಸುವುದಾಗಿ ಹೇಳಿ ಪೊಲೀಸರನ್ನು ಕರೆದೊಯ್ದಿದ್ದಾರೆ. ಈ ವೇಳೆ ಪೊಲೀಸರ ಮೇಲೆ ಹಲ್ಲೆಗೆ ಯತ್ನ ನಡೆಸಿ ಪರಾರಿಯಾಗಲು ಯತ್ನಿಸಿದ್ದಾರೆ. ಈ ವೇಳೆ ಇಬ್ಬರ ಕಾಲಿಗೂ ಪೊಲೀಸರು ಗುಂಡು ಹಾರಿಸಿದ್ದಾರೆ. ಗಾಯಾಳು ಆರೋಪಿಗಳನ್ನು ಕಿಮ್ಸ್ ಆಸ್ಪತ್ರೆ ದಾಖಲಿಸಲಾಗಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

Read More

ತಿರುವನಂತಪುರಂ: ಕೇರಳದ ಓಣಂ ಬಂಪರ್ ಲಾಟರಿಯ 25 ಕೋಟಿ ರೂ. ಬಹುಮಾನ ಕರ್ನಾಟಕ ಮೂಲದ ವ್ಯಕ್ತಿಗೆ ಸಿಕ್ಕಿದೆ. ಮಂಡ್ಯದ ಪಾಂಡವಪುರ ನಿವಾಸಿ ಹಾಗೂ ಸ್ಕೂಟರ್ ಮೆಕ್ಯಾನಿಕ್ ಅಲ್ತಾಫ್ 500 ರೂಪಾಯಿಯ ಲಾಟರಿ ಟಿಕೆಟ್ ನಿಂದ ಕೋಟ್ಯಾದೀಶರಾಗಿದ್ದಾರೆ. ಈ ಲಾಟರಿ ಬ್ಯುಸಿನೆಸ್ ನಿಂದ ಕೇರಳ ಸರ್ಕಾರಕ್ಕೆ 100 ಕೋಟಿಗಿಂತಲೂ ಹೆಚ್ಚು ಆದಾಯ ಹರಿದು ಬಂದಿದೆಯಂತೆ. ಅಕ್ಟೋಬರ್ 09ರಂದು ಪ್ರಕಟವಾದ ಲಾಟರಿ ಫಲಿತಾಂಶ ದಲ್ಲಿ ಮಂಡ್ಯ ಮೂಲದ ಅಲ್ತಾಫ್ 25 ಕೋಟಿ ರೂ. ಬಹುಮಾನ ಗೆದ್ದಿದ್ದಾರೆ. ಅಂದ ಹಾಗೆ 25 ಕೋಟಿ ರೂಪಾಯಿಯಲ್ಲಿ ಟಾಕ್ಸ್ ಗಳೆಲ್ಲವೂ ಕಳೆದ ನಂತೆ ಅಲ್ತಾಫ್ ಗೆ 17.5 ಕೋಟಿ ರೂಪಾಯಿ ಸಿಕ್ಕಿದೆಯಂತೆ 500 ರೂಪಾಯಿಯ ಒಟ್ಟು 71.43 ಲಕ್ಷ ಟಿಕೆಟ್ಗಳು ಮಾರಾಟವಾಗಿದ್ದು, ಇದರಿಂದ 357.15 ಕೋಟಿ ರೂ. ಆದಾಯ ಬಂದಿದೆ. ಇದರಲ್ಲಿ ಬಹುಮಾನದ ಹಣ, 28% ಜಿಎಸ್ಟಿ, ಮುದ್ರಣ ಮತ್ತು ವಿತರಣೆ ಸೇರಿದಂತೆ ಇತರ ವೆಚ್ಚಗಳನ್ನು ಹೊರತುಪಡಿಸಿದರೆ, ಸರ್ಕಾರಕ್ಕೆ ಕೋಟ್ಯಂತರ ರೂ. ಆದಾಯ ಸಿಗಲಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ…

Read More

ವಿಜಯಪುರ: ಮಹಿಳೆಯೊಬ್ಬರು ಗೃಹಲಕ್ಷ್ಮೀ ಹಣವನ್ನು ಕೂಡಿಟ್ಟು ನಾಡದೇವಿಗೆ ಬೆಳ್ಳಿಯ ಕಿರೀಟ ಕೊಡಿಸಿದ್ದು, 250 ಗ್ರಾಮ್ ತೂಕದ ಬೆಳ್ಳಿಯ ಕಿರೀಟ ನಾಡದೇವಿಯ ಮುಡಿಯೇರಿದೆ. ವಿಜಯಪುರ ಜಿಲ್ಲೆ ಆಲಮೇಲ ತಾಲೂಕಿನ ಹೂವಿನಹಳ್ಳಿಯ ಮಹಿಳೆ ಭಾಗಮ್ಮಕಳೆದ ಒಂದೂವರೆ ವರ್ಷದಿಂದ ಬಂದ ಭಾಗ್ಯಲಕ್ಷ್ಕೀ ಯೋಜನೆ ಹಣ ಕೂಡಿಟ್ಟು ನಾಡ ದೇವಿಗೆ ಬೆಳ್ಳಿಯ ಕಿರೀಟ ದಾನ ಮಾಡಿದ್ದಾರೆ. ಇದೇ ವೇಳೆ ಮಾಧ್ಯಮಗಳೊಂದಿಗೆ ಮಾತನಾಡಿದ ಭಾಗ್ಯಮ್ಮ ಅವರು ಸಿದ್ದರಾಮಯ್ಯ ಸರ್ಕಾರವನ್ನು ಕೊಂಡಾಡಿದರು. ಕಾಂಗ್ರೆಸ್ ಸರ್ಕಾರದಿಂದ ಸಾಕಷ್ಟು ಅನುಕೂಲವಾಗುತ್ತಿದೆ ಎಂದರು. ಇನ್ನು ಭಾಗಮ್ಮ ಬಿರಾದಾರ ಅವರು ಈ ಕಾರ್ಯಕ್ಕೆ ಸ್ಥಳೀಯ‌ ಮುಖಂಡರು ಮೆಚ್ಚುಗೆ ವ್ಯಕ್ತಡಿಸಿದ್ದಾರೆ. ಅಲ್ಲದೇ ಸಿಂದಗಿ ಕ್ಷೇತ್ರದ ಶಾಸಕ ಅಶೋಕ ಮನಗೂಳಿ ಅವರು ಭಾಗಮ್ಮ ಅವರನ್ನು ಸನ್ಮಾನಿಸಿ ಗೌರವಿಸಿದ್ದಾರೆ. ಇತ್ತೀಚೆಗೆ ಮಹಿಳೆಯೊಬ್ಬರು ಗೃಹಲಕ್ಷ್ಮಿಯಿಂದ ಬಂದ ಹಣವನ್ನು ಕೂಡಿಟ್ಟು ಮಗನಿಗೆ ಬೈಕ್ ಅನ್ನು ಉಡುಗೊರೆಯಾಗಿ ನೀಡಿದ್ದರು. ಅದಲ್ಲದೆ ಅತ್ತೆಯೊಬ್ಬರು ಈ ಹಣದಿಂದ ತನ್ನ ಸೊಸೆಯ ಜೀವನಕ್ಕಾಗಿ ಫ್ಯಾನ್ಸಿ ಅಂಗಡಿಯನ್ನು ಮಾಡಿಸಿಕೊಟ್ಟಿದ್ದರು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್…

Read More

ಆ್ಯಸಿಡ್ ಹಾಕ್ತೀನಿ ಅಂತ ಮಹಿಳಾ ಉದ್ಯೋಗಿಗೆ ಬೆದರಿಕೆ ಹಾಕಿದ ಸಹೋದ್ಯೋಗಿಯೊಬ್ಬನನ್ನು ಕಂಪೆನಿ ಕೆಲಸದಿಂದ ತೆಗೆದು ಹಾಕಿರುವ ಘಟನೆ  ನಡೆದಿದ್ದು, ಆರೋಪಿಯ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ನಿಖಿತ್ ಎಂಬಾತನ ವಿರುದ್ಧ ಸದ್ಯ  ಪ್ರಕರಣ ದಾಖಲಾಗಿದೆ. ಮಹಿಳೆಯ ಪತಿ ಈತನ ವಿರುದ್ಧ ದೂರು ದಾಖಲಾಗಿಸಿದ್ದಾರೆ. ಮಹಿಳೆಯ ಬಟ್ಟೆಯ ಆಯ್ಕೆಯನ್ನು ವಿರೋಧಿಸಿ ಆರೋಪಿ ಆ್ಯಸಿಡ್ ಎರಚುವ ಬೆದರಿಕೆಯೊಡ್ಡಿದ್ದ ಎಂದು ದೂರಲಾಗಿದೆ. ನನ್ನ ಹೆಂಡತಿಯ ಬಟ್ಟೆಯ ಆಯ್ಕೆಗಾಗಿ ಆಸಿಡ್ ಎರಚುವುದಾಗಿ ಬೆದರಿಕೆ ಹಾಕುತ್ತಿದ್ದಾನೆ. ಯಾವುದೇ ಘಟನೆ ನಡೆಯದಂತೆ ಈ ವ್ಯಕ್ತಿಯ ವಿರುದ್ಧ ತಕ್ಷಣ ಕ್ರಮ ಕೈಗೊಳ್ಳಿ ಎಂದು ಶಹಬಾಜ್ ಅನ್ಸಾರ್ ಎನ್ನುವವರು ಕರ್ನಾಟಕ ಡಿಜಿಪಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ .ಶಿವಕುಮಾರ್ ಅವರನ್ನು ಟ್ಯಾಗ್ ಮಾಡಿ ಟ್ವೀಟ್ ಮಾಡಿದ್ದಾರೆ. ನನ್ನ ಪತ್ನಿಗೆ ಆಸಿಡ್ ದಾಳಿ ಮಾಡುವುದಾಗಿ ಬೆದರಿಕೆ ಹಾಕುತ್ತಿದ್ದ ವ್ಯಕ್ತಿ ಎಟಿಯೋಸ್ ಡಿಜಿಟಲ್ ಸೇವೆಯಲ್ಲಿ ಕೆಲಸ ಮಾಡುತ್ತಿದ್ದಾನೆ. ಈ ಸಂಸ್ಥೆಯಲ್ಲಿ ಮಹಿಳೆಯರು ಸುರಕ್ಷಿತವಾಗಿದ್ದಾರೆ ಎಂದು ನಾನು ಭಾವಿಸುವುದಿಲ್ಲ ಎಂದು ಶಹಬಾಜ್ ಆತಂಕ ಹೊರಹಾಕಿದ್ದಾರೆ. ಈ ಘಟನೆ…

Read More