Subscribe to Updates
Get the latest creative news from FooBar about art, design and business.
- ಕರ್ನಾಟಕದ 25ನೇ ಮುಖ್ಯಮಂತ್ರಿಯಾಗಿ ಡಿ.ಕೆ.ಶಿವಕುಮಾರ್ ಪ್ರಮಾಣವಚನ ಸ್ವೀಕಾರ!
- ಸಾದರ ಸಮುದಾಯ ಭವನದಲ್ಲಿ ಸಪ್ತಗಿರಿ ಆಸ್ಪತ್ರೆ ವತಿಯಿಂದ ಬೃಹತ್ ಆರೋಗ್ಯ ತಪಾಸಣೆ ಮತ್ತು ಶಸ್ತ್ರ ಚಿಕಿತ್ಸಾ ಶಿಬಿರ
- ಖಾಸಗಿ ಶಾಲೆಗಳ ಮಾದರಿಯಲ್ಲೇ, ಸರ್ಕಾರಿ ಶಾಲೆಗಳ ರೂಪಾಂತರ: ಡಿ.ಕೆ.ಶಿವಕುಮಾರ್
- ತುಮಕೂರು ವಿವಿ 19ನೇ ಘಟಿಕೋತ್ಸವ: 90 ವಿದ್ಯಾರ್ಥಿಗಳಿಗೆ 117 ಚಿನ್ನದ ಪದಕ
- ಶಾಲೆಗಳ ಪುನರಾರಂಭ: ದಾಖಲಾತಿ ಆಂದೋಲನಕ್ಕೆ ಡಿ.ಸಿ. ಚಾಲನೆ
- ಸಚಿವ ಸ್ಥಾನದ ಆಸೆ ನನಗೂ ಇದೆ ಕೊಟ್ಟರೆ ಪ್ರಾಮಾಣಿಕವಾಗಿ ಕೆಲಸ ನಿರ್ವಹಿಸುವೆ: ಹೆಚ್.ವಿ.ವೆಂಕಟೇಶ್
- ನವಿಲೆ ಭಾಗಕ್ಕೆ ಹೇಮಾವತಿ ನೀರನ್ನು ಹರಿಸಲಾಗುವುದು ರೈತರು ಆತಂಕಪಡುವ ಅಗತ್ಯವಿಲ್ಲ: ಶಾಸಕ ಸಿ.ಬಿ.ಸುರೇಶ್ ಬಾಬು
- ‘ಗರ್ಭಿಣಿನೂ ಇಲ್ಲ, ಮಹಿಳೆಯೂ ಇಲ್ಲ… ಕಾರಿನಲ್ಲಿ ಒಬ್ಬರೇ ಇದ್ದಿದ್ದು!’: ಝೀರೋ ಟ್ರಾಫಿಕ್ ಪ್ರತಿಭಟನೆಯ ಅಸಲೀಯತ್ತು ಬಿಚ್ಚಿಟ್ಟ ಬೆಂಗಳೂರು ಪೊಲೀಸರು
Author: admin
ಆಯುಷ್ಮಾನ್ ಯೋಗ, ಈ ರಾಶಿಗೆ ಭರಪೂರ ಲಾಭ. ಸೋಮವಾರ ಆಯುಷ್ಮಾನ್ ಯೋಗ, ಸರ್ವಾರ್ಥ ಸಿದ್ದಿ ಯೋಗ ಸೇರಿದಂತೆ ಅನೇಕ ಪರಿಣಾಮಕಾರಿ ಯೋಗಗಳು ರೂಪಗೊಳ್ಳುತ್ತಿವೆ, ಇದರಿಂದಾಗಿ 5 ರಾಶಿಗಳಿಗೆ ಪ್ರಯೋಜನಕಾರಿಯಾಗಲಿದೆ. ಯಾವ 5 ರಾಶಿಗಳು ಶಿವನ ಅನುಗ್ರಹಕ್ಕೆ ಪಾತ್ರರಾಗಲಿದೆ..? ಈ ರಾಶಿಗಳಿಗೆ ಸೋಮವಾರ ಹೇಗಿರುತ್ತದೆ ಎಂದು ತಿಳಿಯೋಣ ಶ್ರೀ ಕ್ಷೇತ್ರ ಕಟೀಲು ದುರ್ಗಾಪರಮೇಶ್ವರೀ ಜ್ಯೋತಿಷ್ಯ ಪೀಠಂ ದೈವಜ್ಞ ಪಂಡಿತ್ ಕೃಷ್ಣ ಭಟ್ ಪ್ರಧಾನ ತಾಂತ್ರಿಕ್ ಹಾಗೂ ಮಾಂತ್ರಿಕರು ಸ್ತ್ರೀ ಪುರುಷ ವಶೀಕರಣ ಸ್ಪೆಷಲಿಸ್ಟ್ ನನಗೆ ಒಂದೇ ಕರೆ ಮಾಡಿದರೆ ನಿಮ್ಮ ಇಷ್ಟಪಟ್ಟವರು ನಿಮ್ಮಂತೆ 9535156490 ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆ ಉತ್ತರಿಸಬಹುದು ಏಷ್ಟೇ ಪೂಜೆ ಪ್ರಯತ್ನ ಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..?ನಿಮ್ಮ ಯಾವುದೇಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ 2 ದಿನಗಳಲ್ಲಿ ಪರಿಹಾರ ಶತಸಿದ್ಧ ಧನವಶ, ಜನವಶ, ಶತ್ರುನಾಶ, ಸ್ತ್ರೀ- ಪುರುಷ…
ತುಮಕೂರು: ದೇಶದ ಅಭಿವೃದ್ಧಿಯಲ್ಲಿ ಮಹಿಳೆಯರದೇ ಶಕ್ತಿ ಎಂದು ಗೃಹ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಜಿ.ಪರಮೇಶ್ವರ್ ಹೇಳಿದರು. ತುಮಕೂರು ದಸರಾ ೨೦೨೪ರ ಅಂಗವಾಗಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಾನಗರ ಪಾಲಿಕೆ, ರಾಜ್ಯ ಬಾಲಭವನ ಸೊಸೈಟಿ, ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ ನಗರದ ಮಹಾತ್ಮ ಗಾಂಧಿ ಕ್ರೀಡಾಂಗಣದಲ್ಲಿ ಭಾನುವಾರ ಆಯೋಜಿಸಿದ್ದ ಕ್ರೀಡಾ ದಸರಾ ಹಾಗೂ ಮಹಿಳಾ ದಸರಾ ರಂಗೋಲಿ ಸ್ಪರ್ಧೆಗಳನ್ನು ಉದ್ಘಾಟಿಸಿ ಅವರು ಮಾತನಾಡಿದರು. ದೇಶ ವೇಗವಾಗಿ ಮುನ್ನಡೆಯುತ್ತಿದೆ. ಈ ಸಂದರ್ಭದಲ್ಲಿ ಮಹಿಳೆಯರು ತಮ್ಮ ಪಾತ್ರ ಏನೆಂಬುದನ್ನು ಅರ್ಥೈಸಿಕೊಳ್ಳಬೇಕು. ಸ್ಥಳೀಯ ಸಂಸ್ಥೆಗಳಲ್ಲಿ ಮಹಿಳೆಯರಿಗೆ ಮೀಸಲಾತಿ ನಿಗದಿಪಡಿಸಿದ ಬಳಿಕ ಇಂದು ದೇಶದಾದ್ಯಂತ ೧೪ ಲಕ್ಷ ಮಹಿಳೆಯರು ವಿವಿಧ ಸ್ಥಳೀಯ ಸಂಸ್ಥೆಗಳಲ್ಲಿ ಆಡಳಿತದ ಚುಕ್ಕಾಣಿ ಹಿಡಿದಿದ್ದಾರೆ. ಈ ಮೂಲಕ ದೇಶದ ಅಭಿವೃದ್ಧಿಯಲ್ಲಿ ತಮ್ಮ ಶಕ್ತಿ ತೋರಿಸಿದ್ದಾರೆ ಎಂದರು. ದೇಶದ ಎಲ್ಲಾ ವಲಯದಲ್ಲಿಯೂ ಮಹಿಳೆಯರು ತಮ್ಮ ಅವಕಾಶವನ್ನು ಸದ್ಬಳಕೆ ಮಾಡಿಕೊಂಡು ಅಭಿವೃದ್ಧಿ ಹೊಂದುತ್ತಿದ್ದಾರೆ. ಮಹಿಳೆಯರು ಎಂದಿಗೂ ಸಮರ್ಥರು ಎಂದು ಸಚಿವರು ಹೇಳಿದರು.…
ತುಮಕೂರು: ದಲಿತ ಸಿಎಂ ಪ್ರಸ್ತಾವನೆ ಸದ್ಯಕ್ಕಿಲ್ಲ. ಇದ್ದಾಗ ನಾವೇ ಕರೆದು ಹೇಳ್ತಿವಿ, ನಮ್ಮ ಬೇಡಿಕೆ ಇದೆ ಅಂತಾ ಸದ್ಯಕ್ಕಂತೂ ಇಲ್ಲ ಎಂದು ಸತೀಶ್ ಜಾರಕಿಹೊಳಿ ಹೇಳಿಕೆ ನೀಡಿದರು. ತುಮಕೂರಿನಲ್ಲಿ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಭೇಟಿ ಬಳಿಕ ಸಚಿವ ಸತೀಶ್ ಜಾರಕಿಹೊಳಿ ಸುದ್ದಿಗಾರರೊಂದಿಗೆ ಮಾತನಾಡಿದರು. ಸಿಎಂ ಸ್ಥಾನ ಖಾಲಿಯೇ ಇಲ್ಲ, ಯಾರಿಗೆ ಮಾಡ್ತೀರಿ ನೀವು, ಇರೋದು ಒಂದೇ ಸ್ಥಾನ. ಆ ತರಹದ ಸನ್ನಿವೇಶ ಇಲ್ಲ ಎಂದು ಅವರು ಮರು ಪ್ರಶ್ನೆ ಹಾಕಿದರು. ಭೇಟಿ ಆಗಿದ್ದೀವಿ, ಊಟ ಮಾಡಿಸಿದ್ರು ಅಷ್ಟೇ, ನಂದು ಬೇರೆ ಕಾರ್ಯಕ್ರಮ ಇತ್ತು, ಅಲ್ಲಿ ಬಂದಿದ್ದೆ. ಸಾಹೇಬ್ರ ನೋಡ್ಕೊಂಡ್ ಹೋಗೋಕೆ ಬಂದಿದ್ದೆ ಅಷ್ಟೇ ಎಂದರು. ಏನೇನು ಚರ್ಚೆ ನಡೆಸಿದ್ರಿ ಅನ್ನೋ ಪ್ರಶ್ನೆಗೆ ಉತ್ತರಿಸಿದ ಅವರು, ಬೇರೆ ಏನು ಚರ್ಚೆ ಆಗುತ್ತೆ. ನಾವು ರಾಜೀನಾಮೆ ಕೊಡ್ಬೇಡ ಅಂತಾ ಹೇಳಿದ್ದೀವಲ್ಲ ಎಂದರು. ಅವ್ರು ಕೂಗು ಶುರು ಮಾಡಿದ್ರೆ ಮಾಡಲಿ, ನಾವು ಬೇಡ ಅಂತಾ ಹೇಳಿದ್ದೀವಲ್ಲ. ದೆಹಲಿಯಲ್ಲಿ ಖರ್ಗೆ ಭೇಟಿ ಮಾಡಿರುವ ವಿಚಾರದಲ್ಲಿ ಅದು ಕೂಡ…
ತುಮಕೂರು: ತುಮಕೂರು ದಸರಾ ಮಹೋತ್ಸವದ ಹಿನ್ನೆಲೆಯಲ್ಲಿ ಭಾನುವಾರ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಚಾಲನೆ ನೀಡಿದರು. ನಗರದ ಟೌನ್ ಹಾಲ್ ವೃತ್ತದಲ್ಲಿ ನಂದಿ ದ್ವಜಕ್ಕೆ ಪೂಜೆ ಸಲ್ಲಿಸುವ ಮೂಲಕ ಹಸಿರು ನಿಶಾನೆ ತೋರಿದರು. ಇದೆ ವೇಳೆ ಸಚಿವ ಸತೀಶ್ ಜಾರಕಿಹೊಳಿ, ಸಚಿವ ಪರಮೇಶ್ವರ್ ಪತ್ನಿ ಕನ್ನಿಕಾ, ಜಿಲ್ಲಾಧಿಕಾರಿ ಶುಭಾ ಕಲ್ಯಾಣ್ ಹಾಜರಿದ್ದರು. ಮೆರವಣಿಗೆಯಲ್ಲಿ ಜಂಬುಸವಾರಿಯ ಆನೆಗಳು, ವಿವಿಧ ಕಲಾತಂಡಗಳು ಭಾಗವಹಿಸಿದ್ದವು. ನಗರದ ಟೌನ್ ಹಾಲ್ ವೃತ್ತದಲ್ಲಿ ಯುವ ದಸರಾಕ್ಕೆ ಚಾಲನೆ ಕೊಟ್ಟ ಡಾ. ಜಿ ಪರಮೇಶ್ವರ್ ಅವರೊಂದಿಗೆ ಸಚಿವ ಸತೀಶ್ ಜಾರಕಿಹೊಳಿ ಭಾಗವಹಿಸಿದ್ದು ವಿಶೇಷವಾಗಿತ್ತು. ಅಲ್ಲದೆ ಸತೀಶ್ ಜಾರಕಿಹೊಳಿ ಅವರು ಯಾವುದೇ ರೀತಿಯ ಸಚಿವರಿಗೆ ನೀಡುವ ಎಸ್ಕಾರ್ಟ್ ಇಲ್ಲದೆ ಪರಮೇಶ್ವರ್ ಅವರೊಂದಿಗೆ ರಹಸ್ಯ ಮಾತುಕತೆ ನಡೆಸಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q
ಆಂಧ್ರಪ್ರದೇಶ: ತಿರುಪತಿ ದೇವಸ್ಥಾನದ ನೈವೇದ್ಯ ಪ್ರಸಾದದಲ್ಲಿ ಕೀಟಗಳು ಕಂಡು ಬಂದಿವೆ ಎನ್ನುವ ಭಕ್ತರ ಆರೋಪಗಳನ್ನು ತಿರುಮಲ ತಿರುಪತಿ ದೇವಸ್ಥಾನಂ (ಟಿಟಿಡಿ) ತಳ್ಳಿಹಾಕಿದೆ. ಬುಧವಾರ ಮಧ್ಯಾಹ್ನ 1.30ಕ್ಕೆ ದೇವಸ್ಥಾನದಲ್ಲಿ ಊಟ ಬಡಿಸುತ್ತಿದ್ದಾಗ ಈ ಘಟನೆ ನಡೆದಿದ್ದು, ತನ್ನ ಮೊಸರು ಅನ್ನದಲ್ಲಿ ಮಿಲಿಪೈಡ್ ಕಂಡುಬಂದಿದೆ ಎನ್ನುವ ಆರೋಪ ಕೇಳಿ ಬಂದಿದೆ. ಈ ನಿರ್ಲಕ್ಷ್ಯ ಸರಿಯಲ್ಲ, ಮಕ್ಕಳು ಅಥವಾ ಇತರರು ಕಲುಷಿತ ಆಹಾರವನ್ನು ಸೇವಿಸಿದರೆ, ಫುಡ್ ಪಾಯ್ಸನ್ ಗೆ ಯಾರು ಹೊಣೆಗಾರರಾಗುತ್ತಾರೆ? ಎಂದು ಪ್ರಶ್ನಿಸಿದ್ದಾರೆ. ಟಿಟಿಡಿ ಈ ಆರೋಪಗಳನ್ನು ತಳ್ಳಿ ಹಾಕಿದ್ದು, ಅವುಗಳನ್ನು ಆಧಾರರಹಿತ ಮತ್ತು ಸುಳ್ಳು ಎಂದು ಹೇಳಿದೆ. ಶ್ರೀವಾರಿ ದರ್ಶನಕ್ಕೆ ಆಗಮಿಸುವ ಸಾವಿರಾರು ಭಕ್ತರಿಗೆ ಬಿಸಿಯೂಟ ಅನ್ನ ಪ್ರಸಾದವನ್ನು ಟಿಟಿಡಿ ಸಿದ್ಧಪಡಿಸುತ್ತಿದ್ದು, ಆಹಾರದಲ್ಲಿ ಮಿಲಿಪೆಡ್ ಬಿದ್ದಿದೆ ಎಂಬುದು ಸುಳ್ಳು ಹೇಳಿಕೆಯಾಗಿದೆ. ಇದು ವೆಂಕಟೇಶ್ವರನ ಮೇಲಿನ ಭಕ್ತರ ನಂಬಿಕೆಯನ್ನು ದಾರಿ ತಪ್ಪಿಸುವ ಪ್ರಯತ್ನವಾಗಿದೆ ಮತ್ತು ಸಂಸ್ಥೆಯನ್ನು ದೂಷಿಸುವ ಸಾಧನವಾಗಿದೆ ಎಂದು ಟಿಟಿಡಿ ಹೇಳಿಕೊಂಡಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್…
ಹೆಸರಾಂತ ನೃತ್ಯ ಸಂಯೋಜಕ ಜಾನಿ ಮಾಸ್ಟರ್ ಅತ್ಯಾಚಾರ ಆರೋಪ ಎದುರಿಸುತ್ತಿರುವ ಹಿನ್ನೆಲೆ ಅವರಿಗೆ ಘೋಷಿಸಲಾಗಿದ್ದ ರಾಷ್ಟ್ರೀಯ ಪ್ರಶಸ್ತಿಯನ್ನು ಕೇಂದ್ರ ಮಾಹಿತಿ ಮತ್ತು ಪ್ರಸಾರ ಸಚಿವಾಲಯ ಅಮಾನತು ಮಾಡಿದೆ. ನೃತ್ಯ ಸಂಯೋಜಕ ಜಾನಿ ಮಾಸ್ಟರ್ ಅವರ ನಿಜವಾದ ಹೆಸರು ಶೇಕ್ ಜಾನಿ ಬಾಷಾ. ಜೊತೆಯಲ್ಲಿ ಕೆಲಸ ಮಾಡುತ್ತಿದ್ದ ಯುವತಿ ಮೇಲೆ ಲೈಂಗಿಕ ದೌರ್ಜನ್ಯ ಆರೋಪದಡಿ ಪ್ರಕರಣದಡಿ ಅವರನ್ನು ಸೈಬರಾಬಾದ್ ಪೊಲೀಸರು ಸೆ.19ರಂದು ಗೋವಾದಲ್ಲಿ ಬಂಧಿಸಿದ ನಂತರ 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿತ್ತು. ಆದರೆ, ಅ.3ರಂದು ರಾಷ್ಟ್ರೀಯ ಪ್ರಶಸ್ತಿ ಬಂದಿದ್ದರಿಂದ ಅದರ ಸ್ವೀಕಾರ ಸಮಾರಂಭಕ್ಕೆ ತೆರಳಲು ಇತ್ತೀಚಿಗೆ ಮಧ್ಯಂತರ ಜಾಮೀನು ಪಡೆದಿದ್ದರು. ತಿರುಚಿತ್ರಂಬಲಂ ಚಿತ್ರದ ಮೇಘಮ್ ಕರುಕ್ಕಥಾ ಹಾಡಿಗೆ ಅತ್ಯುತ್ತಮ ನೃತ್ಯ ಸಂಯೋಜನೆಗಾಗಿ ಅವರು ರಾಷ್ಟ್ರೀಯ ಪ್ರಶಸ್ತಿ ಗೆದ್ದಿದ್ದರು. ಇದೀಗ ಕೇಂದ್ರದ ಮಾಹಿತಿ ಮತ್ತು ಪ್ರಸಾರ ಸಚಿವಾಲಯ ಇದೀಗ ಅವರ ರಾಷ್ಟ್ರೀಯ ಪ್ರಶಸ್ತಿಯನ್ನು ಅಮಾನತುಗೊಳಿಸಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು…
ಬೆಂಗಳೂರು: ಸಮಿಶ್ರ ಸರ್ಕಾರದ ಕೀರ್ತಿ ಮತ್ತು ಅಪಕೀರ್ತಿಗಳ ಬಗ್ಗೆ ಕೇಂದ್ರ ಸಚಿವ ಹಾಗೂ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಮಾತ್ರ ಲಾಭ ಪಡೆಯಲು ಸಾಧ್ಯವಿಲ್ಲ, ನಾವು(ಕಾಂಗ್ರೆಸ್) ಕೂಡ ಪಾಲುದಾರರು ಎಂದು ಸಚಿವ ಪರಮೇಶ್ವರ್ ಹೇಳಿದ್ದಾರೆ. 14 ತಿಂಗಳ ತಮ್ಮ ಆಡಳಿತದ ಕುರಿತು ಬಹಿರಂಗ ಚರ್ಚೆಗೆ ಬರುವಂತೆ ಕುಮಾರಸ್ವಾಮಿ ಯವರ ಸವಾಲಿಗೆ ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಪರಮೇಶ್ವರ್, ಈ ಕುರಿತು ಒಂದು ಹೋಲಿಕೆ ನಡೆಯಲಿ. 14 ತಿಂಗಳು ನಾನು ಉಪಮುಖ್ಯಮಂತ್ರಿಯಾಗಿ ಅವರ ಜೊತೆಗಿದ್ದೆ. ಒಳ್ಳೆಯದು ಹಾಗೂ ಕೆಟ್ಟದ್ದು ಎರಡರಲ್ಲೂ ನಮ ಪಾಲಿದೆ ಎಂದು ಹೇಳಿದರು. ಹರಿಯಾಣದಲ್ಲಿ ಕಾಂಗ್ರೆಸ್ ಗೆ ಸ್ಪಷ್ಟ ಬಹುಮತ ಬರಲಿದೆ ಎಂದು ನಮ ವರದಿ ತಿಳಿಸಿತ್ತು. ಮಾಧ್ಯಮಗಳು ಅದನ್ನೇ ಪುನರುಚ್ಚರಿಸಿವೆ. ಜಮ್ಮು–ಕಾಶ್ಮೀರದಲ್ಲಿ ಸಮಿಶ್ರ ಸರ್ಕಾರ ರಚಿಸುವ ಸಾಧ್ಯತೆಯಿದೆ. ಇದರ ಪರಿಣಾಮ ಮಹಾರಾಷ್ಟ್ರದ ಚುನಾವಣೆಯ ಮೇಲಾಗಲಿದೆ ಎಂದರು. ಹಿಂದುಳಿದ ವರ್ಗಗಳ ಶಾಶ್ವತ ಆಯೋಗದಿಂದ ನಡೆಸಲಾಗಿರುವ ಸಾಮಾಜಿಕ ಮತ್ತು ಶೈಕ್ಷಣಿಕ ವರದಿಯನ್ನು ಸಚಿವ ಸಂಪುಟದಲ್ಲಿ ಚರ್ಚಿಸಲಾಗುವುದು. ಒಂದು ವೇಳೆ ಯಾವುದಾದರೂ ಸಮುದಾಯಕ್ಕೆ ಅನ್ಯಾಯವಾಗಿದ್ದರೆ ಅದನ್ನು…
ಬೆಂಗಳೂರು: ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ವಿರುದ್ಧ ದೂರು ನೀಡಿದ್ದ ಸ್ನೇಹಮಯಿ ಕೃಷ್ಣ ಇದೀಗ ಲೋಕಾಯುಕ್ತ ಪೊಲೀಸರಿಗೆ ಮತ್ತೊಂದು ದೂರು ನೀಡಿದ್ದು, ಸಿದ್ದರಾಮಯ್ಯನವರನ್ನು ಬಂಧಿಸುವಂತೆ ಒತ್ತಾಯಿಸಿದ್ದಾರೆ. ರಾಯಚೂರಿನಲ್ಲಿ ಸ್ವಾಭಿಮಾನಿ ಸಮಾವೇಶವನ್ನು ಉದ್ದೇಶಿಸಿ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಬಿಜೆಪಿ ಮತ್ತು ಜೆಡಿಎಸ್ ನ ಸುಳ್ಳು ಮತ್ತು ಕಪಟ ಷಡ್ಯಂತ್ರಕ್ಕೆ ತಕ್ಕ ಪಾಠ ಕಲಿಸಲು ಸಿದ್ಧರಾಗಿ ಎಂದು ಕರೆ ನೀಡಿದ್ದರು. ಈ ಹಿನ್ನೆಲೆಯಲ್ಲಿ ಮೈಸೂರಿನ ಲೋಕಾಯುಕ್ತ ಎಸ್ಪಿ ಉದೇಶ್ ಅವರಿಗೆ ವಾಟ್ಸಾಪ್ ಮೂಲಕ ದೂರು ನೀಡಿದ ಸ್ನೇಹಮಯಿ ಕೃಷ್ಣ, ಲೋಕಾಯುಕ್ತದ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಪ್ರಕರಣದಲ್ಲಿ ಮೊದಲನೇ ಆರೋಪಿಯಾಗಿರುವ ಸಿದ್ದರಾಮಯ್ಯ ಅವರು ರಾಜ್ಯದ ಜನರಿಗೆ ಬಹಿರಂಗವಾಗಿ ಪ್ರಚೋದನೆ ನೀಡುತ್ತಿದ್ದಾರೆ. ಇಂತಹ ಪ್ರಚೋದನೆಯಿಂದ ನನ್ನ ಹಾಗೂ ನನ್ನ ಕುಟುಂಬಕ್ಕೆ ತೊಂದರೆಯಾಗುವ ಮತ್ತು ಸಮಾಜದ ಸ್ವಾಸ್ಥ್ಯಕ್ಕೆ ಹಾನಿಯಾಗುವ ಸಾಧ್ಯತೆಯಿದೆ. ಈ ಹಿನ್ನೆಲೆಯಲ್ಲಿ ಕೂಡಲೇ ಸಿದ್ದರಾಮಯ್ಯ ಅವರನ್ನು ಬಂಧಿಸಬೇಕು ಎಂದು ಮನವಿ ಸಲ್ಲಿಸಿದ್ದಾರೆ ಎಂದು ವರದಿಯಾಗಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್…
ಬಿಗ್ ಬಾಸ್ ಕನ್ನಡ ಸೀಸನ್ 11 ಮೊದಲ ವಾರದ ಪಂಚಾಯಿತಿ ಶನಿವಾರ ನಡೆಯಿತು. ಈ ಕಾರ್ಯಕ್ರಮಕ್ಕೆ ಕಿಚ್ಚ ಸುದೀಪ್ ಅವರು ಭರ್ಜರಿ ಉಡುಪು ಧರಿಸಿ, ಸ್ಟೈಲಿಷ್ ಆಗಿ ಎಂಟ್ರಿಕೊಟ್ಟಿದ್ದಾರೆ,. ಆದರೆ, ಕಿಚ್ಚ ಸುದೀಪ್ ಅವರು ಬರೀಗಾಲಲ್ಲೇ ಬಿಗ್ ಬಾಸ್ ವೇದಿಕೆಗೆ ಆಗಮಿಸಿ ಅಚ್ಚರಿ ಸೃಷ್ಟಿಸಿದರು. ಬೂದು ಬಣ್ಣದ ಶೇರ್ವಾನಿ ಮಾದರಿಯ ಉಡುಪು ಧರಿಸಿ ಸರಳವಾಗಿ ವೇದಿಕೆಗೆ ಎಂಟ್ರಿ ಕೊಟ್ಟ ಸುದೀಪ್, ಬರೀಗಾಲಲ್ಲೇ ಬಿಗ್ ಬಾಸ್ ವೇದಿಕೆ ಏರಿದರು. ಅದಕ್ಕೆ ಕಾರಣ ಕೂಡ ಇದೆ. ನವರಾತ್ರಿ ಆಚರಣೆ ಮಾಡುವಂತೆ ಸುದೀಪ್ ಅವರ ತಾಯಿ ಹೇಳಿದಂತೆ, ಕಿಚ್ಚ ಸುದೀಪ್ ಚಪ್ಪಲಿ ಧರಿಸದೇ ವೇದಿಕೆಗೆ ಆಗಮಿಸಿದ್ದಾರೆ. ಅವರು ವೇದಿಕೆ ಹತ್ತಿದ ಬಳಿಕ, ಬರಿಗಾಲಲ್ಲಿ ಬಂದಿದ್ದೀನಿ, ಬೂದು ಬಣ್ಣದ ಶೇರ್ವಾನಿ ಮಾದರಿ ಬಟ್ಟೆ ಹಾಕಿಕೊಂಡಿದ್ದೀನಿ, ಓಕೆ ನಾ ಅಮ್ಮ ಎಂದು ಬಿಗ್ ಬಾಸ್ ವೇದಿಕೆಯಲ್ಲಿ ಅವರು ಹೇಳಿಕೊಂಡರು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್…
ಕೊಪ್ಪಳ: ಶಾಸಕ ಜನಾರ್ಧನ ರೆಡ್ಡಿ ಮುಖ್ಯಮಂತ್ರಿಯವರ ಕಾನ್ವೆಗೆ ಎದುರಾಗಿ ಏಕಮುಖ ಸಂಚಾರ ಮಾರ್ಗದಲ್ಲಿ ಕಾರು ಚಲಾಯಿಸಿ ದರ್ಪ ಪ್ರದರ್ಶಿಸಿದ ಘಟನೆ ನಡೆದಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ನಿನ್ನೆ ರಾಯಚೂರು ಕಾರ್ಯಕ್ರಮದಲ್ಲಿ ಭಾಗವಹಿಸಿ ಅಲ್ಲಿಂದ ಏರ್ಪೋರ್ಟ್ನತ್ತ ಪ್ರಯಾಣಿಸುತ್ತಿದ್ದರು. ಮುಖ್ಯಮಂತ್ರಿ ಸಿದ್ದರಾಮಯ್ಯನವರ ವಾಹನ ಹಾಗೂ ಬೆಂಗಾವಲು ಪಡೆಗಾಗಿ ಗಂಗಾವತಿಯಲ್ಲಿ ಪೊಲೀಸರು ಇತರ ವಾಹನಗಳನ್ನು ತಡೆದು ಸುಗಮ ಸಂಚಾರಕ್ಕೆ ಅನುವು ಮಾಡಿಕೊಟ್ಟಿದ್ದರು. ಇದೇ ವೇಳೆ ತಮ್ಮ ವಾಹನವನ್ನು ತಡೆದಿದ್ದರಿಂದ ಕೋಪಗೊಂಡ ಶಾಸಕ ಜನಾರ್ಧನ ರೆಡ್ಡಿಯವರು ತಾವೇ ರೇಂಜ್ರೋವರ್ ಕಾರನ್ನು ಚಲಾಯಿಸಿಕೊಂಡು ಡಿವೈಡರ್ ಅನ್ನು ಹತ್ತಿಸಿ ಏಕಮುಖ ಸಂಚಾರ ಮಾರ್ಗದಲ್ಲಿ ಮುಖ್ಯಮಂತ್ರಿಯವರ ಕಾನ್ವೆಗೆ ಎದುರಾಗಿ ಹೋಗಿದ್ದಾರೆ. ಇದರಿಂದಾಗಿ ಬೆಂಗಾವಲು ಪಡೆ ಕ್ಷಣ ಕಾಲ ತಬ್ಬಿಬ್ಬಾಗಿದೆ. ಜನಾರ್ಧನ ರೆಡ್ಡಿಯವರ ಕಾರು ಮುಂದಕ್ಕೆ ಹೋದ ಬಳಿಕ ಮುಖ್ಯಮಂತ್ರಿಯವರು ಪ್ರಯಾಣ ಮುಂದುವರೆಸಿದ್ದಾರೆ. ಶಾಸಕರೇ ಏಕಮುಖ ಸಂಚಾರ ಮಾರ್ಗದ ನಿಯಮಗಳನ್ನು ಉಲ್ಲಂಘಿಸಿರುವುದು ಹಲವು ಪ್ರಶ್ನೆಗಳಿಗೆ ಕಾರಣವಾಗಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.…