Author: admin

ಬಳ್ಳಾರಿ:  ರೇಣುಕಾಸ್ವಾಮಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜೈಲಿನಲ್ಲಿರುವ ನಟ ದರ್ಶನ್ ಗೆ ಜಾಮೀನು ಪಡೆಯಲು ಸಾಕಷ್ಟು ಪ್ರಯತ್ನಗಳು ನಡೆಯುತ್ತಿದೆ. ಈ ನಡುವೆ ದರ್ಶನ್ ಅವರು ತೀವ್ರ ಬೆನ್ನು ನೋವಿನ ಸಮಸ್ಯೆಯಿಂದ ಬಳಲುತ್ತಿದ್ದಾರೆ. ಹೀಗಾಗಿ ಅನಾರೋಗ್ಯವೇ ಅವರಿಗೆ ವರವಾಗುತ್ತಾ? ಅನಾರೋಗ್ಯದ ಕಾರಣಕ್ಕೆ ಅವರಿಗೆ ಜಾಮೀನು ಸಿಗುವ ಸಾಧ್ಯತೆಗಳಿವೆ ಎನ್ನಲಾಗುತ್ತಿದೆ. ಬಳ್ಳಾರಿ ಜೈಲಿಗೆ ಬಂದಾಗಿನಿಂದಲೂ ದರ್ಶನ್ ಬೆನ್ನು ನೋವಿನ ಸಮಸ್ಯೆಯಿಂದ ಬಳಲುತ್ತಿದ್ದಾರೆ. ಜೈಲಿಗೆ ಬಂದಿದ್ದ ವೈದ್ಯರು ಅವರ ಆರೋಗ್ಯ ತಪಾಸಣೆ ನಡೆಸಿದ್ದು ಬೆನ್ನಿನಲ್ಲಿ ಊತ ಕಾಣಿಸಿಕೊಂಡಿದೆ, ಶಸ್ತ್ರಚಿಕಿತ್ಸೆಯ ಅಗತ್ಯವಿದೆ ಎಂದು ಸಲಹೆ ನೀಡಿದ್ದಾರೆ. ಆದರೆ ಸದ್ಯಕ್ಕೆ ದರ್ಶನ್ ಸ್ಕ್ಯಾನಿಂಗ್ ಕೂಡಾ ಮಾಡಿಸಿಕೊಳ್ಳಲು ನಿರಾಕರಿಸಿದ್ದು ಕೇವಲ ನೋವು ನಿವಾರಕ ಗುಳಿಗೆ ಸೇವಿಸುತ್ತಿದ್ದಾರೆ. ಬೆಂಗಳೂರಿಗೆ ಹೋದ ಮೇಲೆ ನಾನೇ ಶಸ್ತ್ರ ಚಿಕಿತ್ಸೆ ಮಾಡಿಸಿಕೊಳ್ಳುವೆ ಎಂದಿದ್ದಾರಂತೆ. ಆದರೆ ಇದೇ ವಿಚಾರ ಅವರ ಜಾಮೀನು ಭವಿಷ್ಯಕ್ಕೆ ವರವಾಗುವ ಸಾಧ್ಯತೆಯಿದೆ. ಅನಾರೋಗ್ಯವಾಗಿದೆ, ಶಸ್ತ್ರಚಿಕಿತ್ಸೆಯ ಅಗತ್ಯವಿದೆ. ಹೀಗಾಗಿ ಜಾಮೀನು ನೀಡಿ ಎಂದು ವಕೀಲರು ವಾದ ಮಂಡಿಸಬಹುದು ಎನ್ನಲಾಗಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು…

Read More

ಸ್ಯಾಂಡಲ್ ವುಡ್ ನಟಿ ಹರ್ಷಿಕಾ ಪೂಣಚ್ಚ ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾರೆ.  ಈ ಬಗ್ಗೆ ಅವರ ಪತಿ ಭುವನ್ ಪೊನ್ನಣ್ಣ ಸಾಮಾಜಿಕ ಜಾಲತಾಣಗಳಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ. ಬೆಳಗ್ಗಿನ ಜಾವ 3 ಗಂಟೆಗೆ ಹರ್ಷಿಕಾ ಪೂಣಚ್ಚ ಹೆಣ್ಣು ಮಗುವಿಗೆ ಜನ್ಮ ನೀಡಿದ್ದು, ಹರ್ಷಿಕಾ ಹಾಗೂ ಭುವನ್‌ ಪೊನ್ನಣ್ಣ ಕುಟುಂಬಕ್ಕೆ ಮತ್ತೊಬ್ಬ ಸದಸ್ಯೆ ಸೇರ್ಪಡೆಯಾಗಿದ್ದು, ಈ ಸಂತಸದ ಕ್ಷಣಗಳನ್ನು ಕುಟುಂಬ ಸಂಭ್ರಮಿಸಿದೆ. ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಹರ್ಷಿಕಾ ಜನ್ಮ ನೀಡಿದ್ದಾರೆ. ಈ ಬಗ್ಗೆ  ಭುವನ್ ಪೊನ್ನಣ್ಣ ಸಾಮಾಜಿಕ ಜಾಲತಾಣದಲ್ಲಿ ಬರೆದು ಕೊಂಡಿದ್ದು,  ಎಲ್ಲರಿಗೂ ನಮಸ್ಕಾರ, ನಮ್ಮ “ಚೈಕಾರ್ತಿ ಮೂಡಿ” ಜನಿಸಿದ್ದನ್ನು ತಿಳಿಸಲು ಸಂತೋಷ ಪಡುತ್ತಿದ್ದೇವೆ. ಹರ್ಷಿ ಮತ್ತು ಮಗಳು ಆರೋಗ್ಯವಾಗಿದ್ದಾರೆ. ನನ್ನ ಪ್ರಕಾರ ಮಗಳು ಹರ್ಷಿಕಾಳಂತೆ ಇದ್ದರೆ ಅವಳ ಪ್ರಕಾರ ಮಗು ನನ್ನ ಕಾಪಿ ಎನ್ನುತ್ತಿದ್ದಾಳೆ.ಎಲ್ಲರಿಗೂ ಧನ್ಯವಾದ ಎಂದು ಬರೆದುಕೊಂಡಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ:…

Read More

ಬೆಳಗಾವಿ: ಭಾರತ ಹಳ್ಳಿಗಳ ದೇಶ, ಹಬ್ಬಗಳ ದೇಶ.‌ ವಿಶೇಷ ಹಬ್ಬಗಳ ಆಚರಣೆಗಳಿಂದ ಇಡೀ ವಿಶ್ವವೇ ಇಂದು ನಮ್ಮನ್ನು ಗುರುತಿಸುತ್ತಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು. ಮೂಡಲಗಿ ತಾಲೂಕಿನ ಕಲ್ಲೋಳಿಯಲ್ಲಿ 41ನೇ ನವರಾತ್ರಿ ಉತ್ಸವಕ್ಕೆ ಚಾಲನೆ ನೀಡಿದ ಸಚಿವರು, ಭಾರತದಲ್ಲಿ ಎಲ್ಲಾ ಸಮುದಾಯಗಳು ಸೇರಿ ಹಬ್ಬಗಳನ್ನು ಆಚರಣೆ ಮಾಡುತ್ತೇವೆ. ನಮ್ಮ ಹಬ್ಬಗಳ ವೈಶಿಷ್ಟ್ಯ ಇಡೀ ವಿಶ್ವಕ್ಕೆ ಮಾದರಿಯಾಗಿದೆ ಎಂದು ಹೇಳಿದರು. ರಾಜ್ಯದ ಅತಿದೊಡ್ಡ ಹಬ್ಬ ನವರಾತ್ರಿ. ಇದು ದೇಶದ ಸಂಸ್ಕೃತಿಯನ್ನು ಪ್ರತಿಬಿಂಬಿಸುತ್ತವೆ. ನಮ್ಮದು ಸಾಂಸ್ಕೃತಿಕವಾಗಿ ಶ್ರೀಮಂತ ದೇಶವಾಗಿರುವುದರಿಂದ ಇಡೀ ವಿಶ್ವವೇ ಭಾರತವನ್ನು ಅನುಕರಣೆ ಮಾಡುತ್ತಿದೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು. ನಾವುಗಳು ಎಲ್ಲಾ ವಸ್ತುಗಳಲ್ಲಿ, ಸಂಬಂಧಗಳಲ್ಲಿ ದೇವರನ್ನು ಕಾಣುತ್ತೇವೆ. ಹಿರಿಯರಲ್ಲಿ, ಮಕ್ಕಳಲ್ಲಿ, ಮುತ್ತೈದೆಯರಲ್ಲಿ ದೇವರನ್ನು ಕಾಣುತ್ತೇವೆ. ನಮ್ಮ ಸಂಸ್ಕೃತಿ ಉಳಿಸಿ, ಬೆಳೆಸುವುದು ಪ್ರತಿ ಮನೆಯ ಗೃಹಿಣಿ, ನಮ್ಮ ಸಂಸ್ಕೃತಿಯ ರಾಯಭಾರಿಗಳು ಗೃಹಿಣಿಯರು ಎಂದು ಸಚಿವರು ಹೇಳಿದರು. ‌ ಕಲ್ಲೋಳಿಯಲ್ಲಿ ಅತ್ಯಂತ ಪೂಜ್ಯ ಭಾವನೆಯಿಂದ…

Read More

ಹೆಚ್.ಡಿ.ಕೋಟೆ: ಕಳೆದ ಹಲವು ವರ್ಷಗಳಿಂದ  ಪಟ್ಟಣ ಸೇರಿದಂತೆ ಅಕ್ಕಪಕ್ಕದ ಗ್ರಾಮಸ್ಥರಿಗೆ ಉಪಟಳ ನೀಡುತ್ತಿದ್ದ  7 ವರ್ಷದ ಗಂಡು ಚಿರತೆ   ಸೆರೆಯಾಗಿದ್ದು, ಜನರಲ್ಲಿ ಆತಂಕ ಮತ್ತಷ್ಟು ಮನೆ ಮಾಡಿದೆ. ಚಿರತೆ ಸೆರೆಗೆ  ಹೌಸಿಂಗ್ ಬೋರ್ಡ್ ಕಾಲೋನಿ  ಸಮೀಪದ ರೈತ ಗುಂಡು ಮಲ್ಲು ಅವರ ಜಮೀನಿನಲ್ಲಿ ಅರಣ್ಯ ಇಲಾಖೆ ಸಿಬ್ಬಂದಿ  ಬೋನು ಇರಿಸಿದ್ದರು. ಆಹಾರ ಹರಸಿ ಬಂದ ಚಿರತೆ ಬೋನಿನಲ್ಲಿ ಬಂಧಿಯಾಗಿದೆ. ಹಸು, ಮೇಕೆ, ಕುರಿಗಳನ್ನು ಬಲಿ ಪಡೆದಿದ್ದ ಚಿರತೆ ಈ ಭಾಗದ ರೈತರಲ್ಲಿ ಹೆಚ್ಚಿನ ಆತಂಕ ಮೂಡಿಸಿತ್ತು. ಕಳೆದ ವಾರವಷ್ಟೇ ಇದೇ ಸ್ಥಳದಲ್ಲಿ 5 ವರ್ಷದ ಗಂಡು ಚಿರತೆ ಬೋನಿಗೆ ಬಿದ್ದು ಬಂಧಿಯಾಗಿತ್ತು. ಕಳೆದ ವಾರವಷ್ಟೇ ಇದೇ ಸ್ಥಳದಲ್ಲಿ ಬೋನಿಗೆ ಬಿದ್ದ 5 ವರ್ಷದ ಗಂಡು ಚಿರತೆಯನ್ನು ಆನೆಚೌಕೂರು ಅರಣ್ಯಕ್ಕೆ ಬಿಡಲಾಗಿತ್ತು. ವಾರ ಮಾಸುವ ಮುನ್ನವೇ ಅದೇ ಸ್ಥಳದಲ್ಲಿ 7 ವರ್ಷದ ಗಂಡು ಚಿರತೆ ಸೆರೆಯಾಗಿರುವುದು ರೈತರು ಹಾಗೂ ಸಾರ್ವಜನಿಕರಲ್ಲಿ ಮತ್ತಷ್ಟು ಆತಂಕ ಮನೆ ಮಾಡುವಂತೆ ಮಾಡಿದೆ. ಈ ಭಾಗದಲ್ಲಿ‌ ಮತ್ತಷ್ಟು ಕಾಡುಪ್ರಾಣಿಗಳು…

Read More

ಮಿರ್ಜಾಪುರ: ಟ್ರಾಕ್ಟರ್ ಟ್ರಾಲಿ ಟ್ರಕ್ ಗೆ ಡಿಕ್ಕಿ ಹೊಡೆದ ಪರಿಣಾಮ 10 ಜನರು ಸಾವನ್ನಪ್ಪಿ ಮೂವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಉತ್ತರ ಪ್ರದೇಶದ ಮಿರ್ಜಾಪುರ ಜಿಲ್ಲೆಯಲ್ಲಿ ಇದು ಮುಂಜಾನೆ ನಡೆದಿದೆ. ಮಿರ್ಜಾಪುರ–ವಾರಣಾಸಿ ಗಡಿಯಲ್ಲಿರುವ ಕಚವಾನ್ ಮತ್ತು ಮಿರ್ಜಾಮುರಾದ್ ನಡುವಿನ ಜಿಟಿ ರಸ್ತೆಯಲ್ಲಿ ಮುಂಜಾನೆ 1 ಗಂಟೆ ಸುಮಾರಿಗೆ ಈ ಭೀಕರ ಅಪಘಾತ ನಡೆದಿದೆ ಎಂದು ಪೊಲೀಸ್ ವರಿಷ್ಠಾಧಿಕಾರಿ ಅಭಿನಂದನ್ ತಿಳಿಸಿದ್ದಾರೆ. ಕಾರ್ಮಿಕರನ್ನು ಹೊತ್ತೊಯ್ಯುತ್ತಿದ್ದ ಟ್ರ್ಯಾಕ್ಟರ್ ಟ್ರಾಲಿ ಚಾಲಕನ ನಿಯಂತ್ರಣ ತಪ್ಪಿ ಟ್ರಕ್‌ಗೆ ಹಿಂದಿನಿಂದ ಡಿಕ್ಕಿ ಹೊಡೆದಿದೆ. ಘಟನೆ ವೇಳೆ ಟ್ರ್ಯಾಕ್ಟರ್ ನಲ್ಲಿ 13 ಮಂದಿ ಕಾರ್ಮಿಕರಿದ್ದರು. ಘಟನೆ ಸಂಬಂಧ ಕಚವಾನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮುಂದಿನ ಕಾನೂನು ಕ್ರಮ ಜರುಗಿಸಲಾಗುತ್ತಿದೆ ಎಂದು ಅಭಿನಂದನ್ ತಿಳಿಸಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

Read More

ಮುಂಬೈ: ಮಗಳ ಮೇಲೆಯೇ ಪಾಪಿ ತಂದೆಯೊಬ್ಬ ನಿರಂತರವಾಗಿ ಅತ್ಯಾಚಾರ ನಡೆಸಿರುವ ಘಟನೆ ಮುಂಬೈನಲ್ಲಿ ನಡೆದಿದ್ದು, ಘಟನೆಗೆ ಸಂಬಂಧಿಸಿದಂತೆ 46 ವರ್ಷದ ಆರೋಪಿ ತಂದೆಯನ್ನು ಪೊಲೀಸರು ಬಂಧಿಸಿದ್ದಾರೆ. 17 ವರ್ಷದ ಸಂತ್ರಸ್ತೆ ಇತ್ತೀಚೆಗೆ ನಾಪತ್ತೆಯಾಗಿದ್ದು, ಆಕೆಯನ್ನು ಅಪಹರಿಸಲಾಗಿದೆ ಎಂದು ತಂದೆ ತಾರ್ಡಿಯೊ ಪೊಲೀಸ್ ಠಾಣೆಗೆ ದೂರು ನೀಡಿದ್ದನು. ಹೀಗಾಗಿ ಅಪರಿಚಿತ ವ್ಯಕ್ತಿಯ ವಿರುದ್ಧ ಪೊಲೀಸರು ದೂರು ದಾಖಲಿಸಿಕೊಂಡು ತನಿಖೆ ನಡೆಸಿದ್ದರು. ಪಶ್ಚಿಮ ರೈಲ್ವೆ ನೆಟ್‌ವರ್ಕ್‌ನಲ್ಲಿ ಮಹಾಲಕ್ಷಿ ನಿಲ್ದಾಣದಲ್ಲಿ ನಾಪತ್ತೆಯಾಗಿದ್ದ ನೊಂದ ಬಾಲಕಿ ಪತ್ತೆಯಾಗಿದ್ದಾಳೆ. ಈ ವೇಳೆ ಕ್ರೈಂ ಬ್ರಾಂಚ್ ಕಛೇರಿಗೆ ಬಾಲಕಿಯನ್ನು ಕರೆದೊಯ್ದು ವಿಚಾರಿಸಿದ ವೇಳೆ, ತಂದೆಯ ನಿರಂತರ ಲೈಂಗಿಕ ದೌರ್ಜನ್ಯದಿಂದ ಬೇಸತ್ತು ತಾನು ಮನೆ ಬಿಟ್ಟು ಹೋಗಿರುವುದಾಗಿ ಬಾಲಕಿ ಹೇಳಿಕೊಂಡಿದ್ದಾಳೆ. ಕಳೆದ 5 ವರ್ಷಗಳಿಂದಲೂ ತಂದೆ ನಿರಂತರವಾಗಿ ತನ್ನ ಮೇಲೆ ಲೈಂಗಿಕ ದೌರ್ಜನ್ಯ ನಡೆಸುತ್ತಿದ್ದಾನೆ ಎಂದು ಬಾಲಕಿ ಹೇಳಿದ್ದಾಳೆ. ಬಾಲಕಿಯ ಹೇಳಿಕೆ ದಾಖಲಿಸಿಕೊಂಡಿರುವ ಪೊಲೀಸರು ಬಿಎನ್‌ಎಸ್ ಮತ್ತು ಪೋಕ್ಸೋ ಕಾಯ್ದೆಯಡಿ ಅತ್ಯಾಚಾರ ಮತ್ತು ಇತರ ಅಪರಾಧಗಳ ಪ್ರಕರಣಗಳನ್ನು ದಾಖಲಿಸಿಕೊಂಡು ಆರೋಪಿಯನ್ನು ಬಂಧಿಸಿದ್ದಾರೆ.…

Read More

ತುಮಕೂರು: ಕ್ಯಾಬಿನೇಟ್ ಮಿನಿಸ್ಟರ್ ನ ಹಂದಿಗೆ ಹೋಲಿಸಿ ಮಾತನಾಡಿರೋದು ಹೇಯ ಕೃತ್ಯ ಇದನ್ನ ಖಂಡಿಸ್ತೇನೆ ಎಂದು ಕುಮಾರಸ್ವಾಮಿಯನ್ನ ಹಂದಿಗೆ ಹೋಲಿಸಿದ ವಿಚಾರಕ್ಕೆ ಸಂಬಂಧಿಸಿದಂತೆ ಎಡಿಜಿಪಿ ಚಂದ್ರಶೇಖರ್ ವಿರುದ್ದ ತುರುವೇಕೆರೆ ಶಾಸಕ ಎಂ.ಟಿ. ಕೃಷ್ಣಪ್ಪ ಹರಿಹಾಯ್ದಿದ್ದಾರೆ. ಒಬ್ಬ ಪಂಚಾಯಿತಿ ಸದಸ್ಯನೂ ಆಗೇ ಮಾತನಾಡೋಲ್ಲ, ಹಾಗೆ ಮಾತನಾಡಿದ್ದಾನೆ. ನಾವು ಇದನ್ನ ತೀವ್ರವಾಗಿ ಖಂಡಿಸುತ್ತೇನೆ. ಇವನೇ ಭ್ರಷ್ಟ. ರಾಜಕಾಲುವೆ ಒತ್ತಿ 33 ಅಂತಸ್ಥಿನ ಅಪಾರ್ಟ್ ಮೆಂಟ್ ಕಟ್ಟುತ್ತಿದ್ದಾನೆ. ಇಂತಹ ಭ್ರಷ್ಟರನ್ನ ಎಡಿಜಿಪಿ ಲೋಕಾಯುಕ್ತ ಮಾಡಿದ್ರೆ ಏನಾಗುತ್ತೆ? ಬೇಲಿನೇ ಎದ್ದು ಹೊಲ ಮೇಯುವಂತಾಗುತ್ತದೆ ಎಂದು ಅವರು ಕಿಡಿಕಾರಿದರು. ಈತ ಒಂದು ಎಕರೆ ವಿಲ್ಲಾದಲ್ಲಿ ವಾಸವಿದ್ದಾನೆ ಅತ್ಯಂತ ಭ್ರಷ್ಟ ಅಧಿಕಾರಿ. ಈ ಬಗ್ಗೆ ಸಿದ್ದರಾಮಯ್ಯ ಎಡಿಜಿಪಿಗೆ ಸಪೋರ್ಟ್ ಮಾಡೋದು ಖಂಡನೀಯ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ದ ಏಕವಚನದಲ್ಲಿ ಎಂ.ಟಿ.ಕೃಷ್ಣಪ್ಪ ವಾಗ್ದಾಳಿ ನಡೆಸಿದರು. ಕಾನೂನು ತಿಳಿದುಕೊಂಡವನೇ ಸಿದ್ದರಾಮಯ್ಯ ಅವನಿಗೆ ಬುದ್ದಿ ಇಲ್ಲ ಅನ್ನೋದಕ್ಕೆ ಎಡಿಜಿಪಿ ಸಪೋರ್ಟ್ ಮಾಡೋದೆ ಇದೆ ಸಾಕ್ಷಿ. ಅವನ ಅನುಕೂಲಕ್ಕಾಗಿ ಹಿಂಬದಿಯಿಂದ ಭ್ರಷ್ಟ ಅಧಿಕಾರಿಗಳಿಗೆ ಸಪೋರ್ಟ್ ಮಾಡ್ತಾವನೆ.…

Read More

ಬೆಳಗಾವಿ : ತಾಂತ್ರಿಕ ಕಾರಣಗಳಿಂದ ವಿಳಂಬಗೊಂಡಿದ್ದ ಜುಲೈ ಹಾಗೂ ಆಗಸ್ಟ್ ತಿಂಗಳ ಗೃಹಲಕ್ಷ್ಮಿ ಯೋಜನೆಯ ಹಣ ಇದೇ 7 ಮತ್ತು 9 ರಂದು ಫಲಾನುಭವಿಗಳ ಖಾತೆಗೆ ಜಮಾ ಆಗಲಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಹೇಳಿದ್ದಾರೆ. ಮೂಡಲಗಿ ತಾಲೂಕಿನ ಕಲ್ಲೋಳಿಯಲ್ಲಿ ಗುರುವಾರ ನವರಾತ್ರಿ ಉತ್ಸವಕ್ಕೆ ಚಾಲನೆ ನೀಡಿ ಮಾತನಾಡಿದ ಸಚಿವರು, ರಾಜ್ಯದ ಯಜಮಾನಿಯರ ಖಾತೆಗೆ ಎರಡೂ ಕಂತಿನ ಹಣವನ್ನು ಹಾಕಲಾಗುವುದು. ಕೆಲವೊಂದು ತಾಂತ್ರಿಕ ಕಾರಣಗಳಿಂದ ಹಣ ಹಾಕುವುದು ವಿಳಂಬವಾಗಿತ್ತು ಎಂದರು. ಈ ಲಕ್ಷ್ಮೀ ಹೆಬ್ಬಾಳಕರ್ ಹಿಡಿದ ಕೆಲಸವನ್ನು ಮಾಡದೇ ಬಿಡುವುದಿಲ್ಲ ಎಂದು ಮೊನ್ನೆ ನಡೆದ ವಿಶ್ವ ಹಿರಿಯ ನಾಗರಿಕರ ದಿನಾಚರಣೆ ಸಮಾರಂಭದಲ್ಲಿ ಸ್ವತಃ ಮುಖ್ಯಮಂತ್ರಿಗಳೇ ನನ್ನ ಬಗ್ಗೆ ಹೇಳಿದ್ದಾರೆ. ಈ ಹೆಣ್ ಮಗಳು ತುಂಬಾ ಕಿಲಾಡಿ, ಹಠ ಮಾಡಿ ಗೃಹಲಕ್ಷ್ಮಿ ಯೋಜನೆಯನ್ನು ಜಾರಿಗೆ ತಂದಿದ್ದೇ ಲಕ್ಷ್ಮೀ ಹೆಬ್ಬಾಳಕರ್ ಅಂತ ಸಿಎಂ ಸಿದ್ದರಾಮಯ್ಯ ನನ್ನ ಬಗ್ಗೆ ಹೇಳಿದ್ದಾರೆ. ಹೀಗಾಗಿ ಗೃಹಲಕ್ಷ್ಮಿ ಯೋಜನೆ ಬಗ್ಗೆ ಯಾರೂ ಆತಂಕ…

Read More

ಬೆಂಗಳೂರು: ನಾಡಹಬ್ಬ ದಸರಾ ಸಂದರ್ಭದಲ್ಲಿ ಪ್ರತಿ ವರ್ಷವೂ ಕೂಡ ಸಂಗೀತ ಕ್ಷೇತ್ರದಲ್ಲಿ ಸಾಧನೆಗೈದ ಸಾಧಕರಿಗೆ ಸಂಗೀತ ವಿದ್ವಾನ್ ಪ್ರಶಸ್ತಿಯನ್ನು ನೀಡುತ್ತಾ ಬರುತ್ತಿದೆ ಅದೇ ರೀತಿ ಈ ಬಾರಿಯೂ ಕೂಡ ಪ್ರಶಸ್ತಿಯನ್ನು ನೀಡಲಾಗುತ್ತಿದೆ ಈ ಪ್ರಶಸ್ತಿಯನ್ನು ಸರ್ಕಾರವು ತನ್ನನ್ನು ತಾನೇ ಗೌರವಿಸಿಕೊಂಡಂತೆ ಸೂಚಿಸುತ್ತದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು. ಅರಮನೆ ಆವರಣದಲ್ಲಿ ನಾಡಹಬ್ಬ ದಸರಾ ಪ್ರಯುಕ್ತ ಆಯೋಜಿಸಿದ್ದ ದಸರಾ ಸಾಂಸ್ಕೃತಿಕ ಕಾರ್ಯಕ್ರಮಗಳ ಉದ್ಘಾಟನೆ ಮತ್ತು ರಾಜ್ಯ ಸಂಗೀತ ವಿದ್ವಾಂ ಪ್ರಶಸ್ತಿ ಪ್ರಧಾನ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದ ಅವರು ಈ ಬಾರಿ ಅತ್ಯಂತ ಸುಂದರವಾದ ದಸರಾ ಕಾರ್ಯಕ್ರಮಗಳನ್ನು ಆಯೋಜಿಸಿ ಕಾರ್ಯಕ್ರಮಗಳಿಗೆ ಚಾಲನೆಯನ್ನು ನೀಡಲಾಗಿದೆ. ವರ್ಣ ರಂಜಿತವಾದ ಸಾಂಸ್ಕೃತಿಕ ಕಾರ್ಯಕ್ರಮಗಳು ಚಾಲನೆ ದೊರಕಿದೆ . ಈ ದಿನ ಹಿರಿಯ ಸಾಹಿತಿಗಳಾದ ನಾಡೋಜ ಡಾಕ್ಟರ್ ಹಂಪಾ ನಾಗರಾಜಯ್ಯ ಅವರಿಂದ ದಸರಾ ಕಾರ್ಯಕ್ರಮಗಳಿಗೆ ಚಾಲನೆಯನ್ನು ನೀಡಲಾಯಿತು ಮತ್ತು ಅರಮನೆ ವೇದಿಕೆಯಲ್ಲಿನ ಸಾಂಸ್ಕೃತಿಕ ಕಾರ್ಯಕ್ರಮಗಳು ಹಾಗೂ ರಾಜ್ಯ ಸಂಗೀತ ವಿದ್ವಾಂ ಪ್ರಶಸ್ತಿ ಪ್ರಧಾನ ಕಾರ್ಯಕ್ರಮವನ್ನು ಯಶಸ್ವಿಯಾಗಿ ಅತ್ಯಂತ ಸಂತೋಷದಿಂದ ದಸರಾ…

Read More

✨ ಮೇಷ ರಾಶಿ✨ ಆತ್ಮವಿಶ್ವಾಸದ ಕೊರತೆ ಇರುತ್ತದೆ. ಮನಸ್ಸು ಆರ್ಥಿಕವಾಗಿ ತೊಂದರೆಗೊಳಗಾಗುತ್ತದೆ. ಯಾವುದೇ ಕಾರಣಕ್ಕೂ ತಾಳ್ಮೆ ಕಳೆದುಕೊಳ್ಳಬೇಡಿ, ಇಲ್ಲದಿದ್ದರೆ ನಷ್ಟ ಅನುಭವಿಸಬೇಕಾಗುತ್ತದೆ. ಅನಗತ್ಯ ಕೋಪವನ್ನು ತಪ್ಪಿಸಿ. ವ್ಯವಹಾರದಲ್ಲಿ ಲಾಭ ಹೆಚ್ಚಾಗಲಿದೆ. ಗೌರವ ಸಿಗುತ್ತದೆ. ತಂದೆಯ ಆರೋಗ್ಯದ ಮೇಲೆ ನಿಗಾ ಇಡಿ. ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತಯಾರಿ ನಡೆಸುತ್ತಿರುವವರಿಗೆ ಅದೃಷ್ಟವನ್ನು ತಂದಿದೆ. ಶ್ರೀ ಕ್ಷೇತ್ರ ಕಟೀಲು ದುರ್ಗಾಪರಮೇಶ್ವರೀ ಜ್ಯೋತಿಷ್ಯ ಪೀಠಂ ದೈವಜ್ಞ ಪಂಡಿತ್ ಕೃಷ್ಣ ಭಟ್ ಪ್ರಧಾನ ತಾಂತ್ರಿಕ್ ಹಾಗೂ ಮಾಂತ್ರಿಕರು  ಸ್ತ್ರೀ ಪುರುಷ ವಶೀಕರಣ ಸ್ಪೆಷಲಿಸ್ಟ್ ನನಗೆ ಒಂದೇ ಕರೆ ಮಾಡಿದರೆ ನಿಮ್ಮ ಇಷ್ಟಪಟ್ಟವರು ನಿಮ್ಮಂತೆ 9535156490 ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆ ಉತ್ತರಿಸಬಹುದು ಏಷ್ಟೇ ಪೂಜೆ ಪ್ರಯತ್ನ ಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..?ನಿಮ್ಮ ಯಾವುದೇಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ 2 ದಿನಗಳಲ್ಲಿ ಪರಿಹಾರ ಶತಸಿದ್ಧ ಧನವಶ, ಜನವಶ, ಶತ್ರುನಾಶ, ಸ್ತ್ರೀ–…

Read More