Author: admin

ಚಿಕ್ಕಬಳ್ಳಾಪುರ: ರಾಜ್ಯ ಕಂಡ ಶ್ರೇಷ್ಠ ಮಹಾನ್ ಸಂತ ಪುರುಷ ಶಿಶುನಾಳ ಶರೀಫರ ಜಯಂತಿಯನ್ನು ರಾಜ್ಯ ಸರ್ಕಾರದ ವತಿಯಿಂದ ಆಚರಿಸಬೇಕೆಂದು ಡಾ.ಎಪಿಜೆ ಅಬ್ದುಲ್ ಕಲಾಂ ಫೌಂಡೇಶನ್ ಕರ್ನಾಟಕ(ರಿ) ರಾಜ್ಯಾಧ್ಯಕ್ಷ ಎಂ.ಎಂ.ಬಾಷಾ ರವರು ಮುಖ್ಯಮಂತ್ರಿ ಸಿದ್ದರಾಮಯ್ಯ, ಚಿಕ್ಕಬಳ್ಳಾಪುರ ಉಸ್ತುವಾರಿ ಸಚಿವರಾದ ಡಾ.ಎಂ.ಸಿ.ಸುಧಾಕರ್ ಮತ್ತು ಶಾಸಕರಾದ ಪ್ರದೀಪ್ ಈಶ್ವರ್ ಅವರಿಗೆ ಇಂದು ಮನವಿ ಪತ್ರವನ್ನು ಸಲ್ಲಿಸಿದರು. ರಾಜ್ಯಾದ್ಯಂತ ಶಿಶುನಾಳ ಶರೀಫರವರ ಅನುಯಾಯಿಗಳು ಹೆಚ್ಚಿನ ಪ್ರಮಾಣದಲ್ಲಿ ಇದ್ದಾರೆ ಇದೇ ಉದ್ದೇಶದಿಂದ ನಾವು ಉಸ್ತುವಾರಿ ಸಚಿವ ಡಾ.ಎಂ.ಸಿ.ಸುಧಾಕರ್ ಶಾಸಕರಾದ ಪ್ರದೀಪ್ ಈಶ್ವರ್ ರವರಿಗೆ ಮನವಿ ಪತ್ರ ನೀಡಿ ಮುಂದಿನ ಅಧಿವೇಶನದಲ್ಲಿ ಪ್ರಸ್ತಾಪ ಮಾಡಿ ಮಹಾನ್ ಸಂತ ಪುರುಷ ಶಿಶುನಾಳ ಶರೀಫರ ಜಯಂತಿ ಸರ್ಕಾರದ ವತಿಯಿಂದ ಆಚರಿಸಬೇಕೆಂದು ಸರ್ಕಾರಕ್ಕೆ ಒತ್ತಾಯಿಸಲಾಗಿದೆ. ಎಲ್ಲಾ ಜಾತಿ ಎಲ್ಲಾ ವರ್ಗದ ಜನಾಂಗದ ಹೃದಯದಲ್ಲಿ ತನ್ನದೇ ಆದ ಚಾಪನ್ನು ಮೂಡಿಸಿ ಎಲ್ಲರ ಪ್ರೀತಿ, ಗೌರವಕ್ಕೆ ಪಾತ್ರರಾದಂತಹ ಕನ್ನಡ ಸಾಹಿತ್ಯ ತತ್ವ ಪದಗಳ ರುವಾರಿ ಹಾವೇರಿ ಜಿಲ್ಲೆಯ ಶಿಗ್ಗಾವಿ ತಾಲ್ಲೂಕಿನ ಶಿಶುವಿನಹಾಳ ಗ್ರಾಮದ ಕ್ರಿ.ಶ.1819 ಜುಲೈ 3ರಂದು…

Read More

ಹಾಸನ: ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ವಿರುದ್ಧ ಎಡಿಜಿಪಿ ಚಂದ್ರಶೇಖರ್ ಆಕ್ಷೇಪಾರ್ಹ ಪದ ಬಳಕೆಯನ್ನು ಖಂಡಿಸಿ ಹಾಸನದಲ್ಲಿಂದು ಜೆಡಿಎಸ್ ನಿಂದ ಬೃಹತ್ ಪ್ರತಿಭಟನೆ ನಡೆಯಿತು. ಹಾಸನ ನಗರದ ಹೇಮಾವತಿ ಬಳಿಯಿಂದ ಹೊರಟ ಪ್ರತಿಭಟನಾ ಮೆರವಣಿಗೆಯಲ್ಲಿ ನೂರಾರು ಜೆಡಿಎಸ್ ಕಾರ್ಯಕರ್ತರು ಭಾಗಿಯಾಗಿದ್ದರು. ಎಡಿಜಿಪಿ ವಿರುದ್ಧ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಎನ್.ಆರ್.ವೃತ್ತದ ಮೂಲಕ ಜಿಲ್ಲಾಧಿಕಾರಿ ಕಚೇರಿಗೆ ಆಗಮಿಸಿದ ಪ್ರತಿಭಟನಾಕಾರರು ಜಿಲ್ಲಾಧಿಕಾರಿ ಎದುರು ಕೆಲಕಾಲ ಧರಣಿ ನಡೆಸಿದರು. ಇದೇ ವೇಳೆ ಜೆಡಿಎಸ್ ಕಾರ್ಯಕರ್ತರು ಹಾಗೂ ಮುಖಂಡರು ಎಡಿಜಿಪಿ ಚಂದ್ರಶೇಖರ್ ಅವರನ್ನು ಅಮಾನತು ಮಾಡುವಂತೆ ಒತ್ತಾಯ ಮಾಡಿದರು. ಪ್ರತಿಭಟನೆಯಲ್ಲಿ ಶಾಸಕರುಗಳಾದ ಎ.ಮಂಜು, ಸಿ.ಎನ್.ಬಾಲಕೃಷ್ಣ, ಎಚ್.ಪಿ.ಸ್ವರೂಪ್‌ಪ್ರಕಾಶ್, ಮಾಜಿ ಶಾಸಕರಾದ ಎಚ್.ಕೆ.ಕುಮಾರಸ್ವಾಮಿ, ಕೆ.ಎಸ್.ಲಿಂಗೇಶ್ ಭಾಗಿಯಾಗಿದ್ದರು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

Read More

ದಾವಣಗೆರೆ: ಟ್ರಾನ್ಸ್’ಫರ್ಮರ್ ರಿಪೇರಿ ಮಾಡುತ್ತಿದ್ದ ವೇಳೆ ವಿದ್ಯುತ್ ಶಾಕ್ ನಿಂದ ಲೈನ್ ಮ್ಯಾನ್ ಸಾವನ್ನಪ್ಪಿರುವ ಘಟನೆ ದಾವಣಗೆರೆ ತಾಲೂಕಿನ ಮಾಯಕೊಂಡ ಹೋಬಳಿಯ ಮಳಲಕೆರೆ ಗ್ರಾಮದಲ್ಲಿ ನಡೆದಿದೆ. ಮುತ್ತು(32) ಮೃತಪಟ್ಟ ಲೈನ್ ಮ್ಯಾನ್ ಆಗಿದ್ದಾರೆ. ಟಿಸಿಯಲ್ಲಿ ಶಾರ್ಟ್ ಸರ್ಕ್ಯೂಟ್ ಉಂಟಾಗಿ ವಿದ್ಯುತ್ ಸಮಸ್ಯೆ ಎದುರಾಗಿತ್ತು ಹಾಗಾಗಿ ಗ್ರಾಮಸ್ಥರು ಕೆಇಬಿ ಅಧಿಕಾರಿಗಳಿಗೆ ದೂರು ನೀಡಿದ್ದರು. ಇಂದು ಲೈನ್ ಮ್ಯಾನ್ ದುರಸ್ಥಿಗೆ ಎಂದು ಆಗಮಿಸಿದ್ದ. ಈ ವೇಳೆ ಹೈ ವೋಲ್ಟೇಜ್ ವಿದ್ಯುತ್ ನಿಂದಾಗಿ ಲೈನ್ ಮ್ಯಾನ್ ಸಾವನ್ನಪ್ಪಿದ್ದಾರೆ. ಜೀವರಕ್ಷಕ ಸಾಧನಗಳಾದ ಕೈಗವಸು, ಶೂ, ಇತರೆ ಜೀವ ರಕ್ಷಕ ಅಗತ್ಯ ಸಲಕರಣೆಗಳು ಇಲ್ಲದ ಕಾರಣ ಈ ಘಟನೆ ನಡೆದಿದೆ. ಲೈನ್ ಮ್ಯಾನ್ ಸಾವಿಗೆ ಕೆಇಬಿ ನಿರ್ಲಕ್ಷ್ಯ ಕಾರಣ ಅಂತ ಸ್ಥಳೀಯ ಗ್ರಾಮಸ್ಥರು ಆರೋಪಿಸಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

Read More

ಬೆಂಗಳೂರು: ಬಿಜೆಪಿ ರಾಜ್ಯಾಧ್ಯಕ್ಷರ ವಿರುದ್ಧ ಕಂಡ ಕಂಡಲ್ಲಿ ಮಾತನಾಡುವ ಯತ್ನಾಳ್ ವಿರುದ್ಧ ಕ್ರಮಕೈಗೊಳ್ಳಬೇಕು ಎಂದು ಮಾಜಿ ಸಚಿವ, ಬಿಜೆಪಿ ಉಪಾಧ್ಯಕ್ಷ ಹರತಾಳು ಹಾಲಪ್ಪ ಬಿಜೆಪಿ ಹೈಕಮಾಂಡ್ ನ್ನು ಒತ್ತಾಯ ಮಾಡಿದ್ದಾರೆ. ಬಿಜೆಪಿ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಯತ್ನಾಳ್ ಅವರು ಪದೇ ಪದೇ ಅಧ್ಯಕ್ಷರ ಬಗ್ಗೆ ಮಾತನಾಡುತ್ತಿದ್ದಾರೆ. ಅನಗತ್ಯವಾಗಿ ಚರ್ಚೆ ಮಾಡುತ್ತಿದ್ದಾರೆ. ಕಂಡ ಕಂಡಲ್ಲಿ ಮಾತಾಡುತ್ತಾರೆ. ಯಡಿಯೂರಪ್ಪ ಮಗನನ್ನ ನಾವು ಒಪ್ಪಲ್ಲ ಅಂತಾರೆ. ವಿಜಯೇಂದ್ರ ಅವರನ್ನ ಅಧ್ಯಕ್ಷ ಮಾಡೋದಾಗಿ ನಡ್ಡಾ, ಅಮಿತ್ ಶಾ, ಮೋದಿ ಅವರು ಎಲ್ಲರ ಅಭಿಪ್ರಾಯ, ಸರ್ವೆ, ಸಂಘ ಪರಿವಾರದ ಸಲಹೆ ಪಡೆದು ನೇಮಕ ಮಾಡಿದ್ದಾರೆ. ಹೈಕಮಾಂಡ್ ನೇಮಕ ಮಾಡಿರೋರ ವಿರೋಧ ಮಾಡಿದರೆ ಹೈಕಮಾಂಡ್‌ಗೆ ವಿರೋಧ ಮಾಡಿದಂತೆ ಆಗುತ್ತದೆ. ಏನಾದರು ಇದ್ದರೆ ಹೈಕಮಾಂಡ್ ಬಳಿ ಹೋಗಿ ಮಾತಾಡಲಿ. ಅದು ಬಿಟ್ಟು ಕಂಡ ಕಂಡಲ್ಲಿ ಮಾತಾಡುತ್ತಾರೆ ಇದು ಸರಿಯಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು. ಯತ್ನಾಳ್ ತಮ್ಮ ವರ್ತನೆ ತಿದ್ದುಕೊಳ್ಳದೇ ಹೋದರೆ ನಾವು ಹೈಕಮಾಂಡ್ ನಾಯಕರಿಗೆ ದೂರು ಕೊಡುತ್ತೇವೆ, ವಿಜಯೇಂದ್ರಗೆ…

Read More

ಬೀದರ್: ಕರ್ತವ್ಯ ನಿರತ ಪೊಲೀಸ್ ಪೇದೆಯೊಬ್ಬರು ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ಬೀದರ್ ನಗರದ ನ್ಯೂಟೌನ್ ಪೊಲೀಸ್ ಠಾಣೆಯಲ್ಲಿ ನಡೆದಿದೆ. ರಾಯಚೂರು ಮೂಲದ ಪೇದೆ ಚಂದ್ರಶೇಖರ್ (29) ಮೃತಪಟ್ಟವರು ಎಂದು ತಿಳಿದು ಬಂದಿದೆ. ಇಂದು ಕರ್ತವ್ಯದಲ್ಲಿದ್ದ ವೇಳೇ ಏಕಾಏಕಿ ಹೃದಯಾಘಾತದಿಂದ ಅವರು ಸಾವನ್ನಪ್ಪಿದ್ದಾರೆ. ನಗರದ ನ್ಯೂಟೌನ್ ಪೊಲೀಸ್ ಠಾಣೆಯಲ್ಲಿ ಐದು ವರ್ಷಗಳಿಂದ ಪೊಲೀಸ್ ಪೇದೆಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಚಂದ್ರಶೇಖರ್ ಕರ್ತವ್ಯದಲ್ಲಿರುವ ಸಂದರ್ಭದಲ್ಲಿಯೇ ಹೃದಯಾಘಾತಕ್ಕೆ ಬಲಿಯಾಗಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

Read More

ಅಹಮದಾಬಾದ್: ಪ್ರಿಯತಮನ ಜೊತೆಗೆ ಲೈಂಗಿಕ ಕ್ರಿಯೆ ನಡೆಸುವ ವೇಳೆ ತೀವ್ರ ರಕ್ತಸ್ರಾವದಿಂದ ನರ್ಸಿಂಗ್ ಪದವೀಧರೆ ಸಾವನ್ನಪ್ಪಿರುವ ಘಟನೆ, ಗುಜರಾತ್ ನ ಅಹಮದಾಬಾದ್ ನಲ್ಲಿ ನಡೆದಿದೆ. 23 ವರ್ಷದ ನರ್ಸಿಂಗ್ ಪದವೀಧರೆ ತನ್ನ 26 ವರ್ಷದ ಪ್ರಿಯತಮನ ಜೊತೆಗೆ ಖಾಸಗಿ ಕ್ಷಣ ಕಳೆಯಲು ಹೊಟೇಲ್ ರೂಮ್ ಗೆ ತೆರಳಿದ್ದಳು. ಲೈಂಗಿಕ ಕ್ರಿಯೆಯ ಬಳಿಕ ಆಕೆಗೆ ವಿಪರೀತ ರಕ್ತಸ್ರಾವವಾಗಿದೆ. ಯುವತಿಗೆ ರಕ್ತಸ್ರಾವವಾಗುತ್ತಿದ್ದರೂ ಯುವಕ ಆನ್ ಲೈನ್ ನಲ್ಲಿ ರಕ್ತಸ್ರಾವ ತಡೆಯುವುದು ಹೇಗೆ ಅಂತ ಸರ್ಚ್ ಮಾಡುತ್ತಿದ್ದ ಎಂದು ಹೇಳಲಾಗಿದೆ. ಮರ್ಯಾದೆಗೆ ಅಂಜಿ ಯಾರನ್ನೂ ಸಹಾಯಕ್ಕೆ ಕರೆಯಲು ಆತ ವಿಫಲನಾಗಿದ್ದಾನೆ. ಯುವತಿಯ ಗುಪ್ತಾಂಗಕ್ಕೆ ಬಟ್ಟೆ ತುರುಕಿ ಆತ ರಕ್ತಸ್ರಾವ ತಡೆಯಲು ಮುಂದಾಗಿದ್ದಾನೆ. ಬಳಿಕ ತನ್ನ ಗೆಳೆಯರಿಗೆ ಕರೆ ಮಾಡಿ ವಿಚಾರ ತಿಳಿಸಿದ್ದು, ಆತನ ಗೆಳೆಯರು ಸ್ಥಳಕ್ಕೆ ಆಗಮಿಸಿ ಯುವತಿಯನ್ನು ಆಸ್ಪತ್ರೆಗೆ ದಾಖಲಿಸಲು ಮುಂದಾಗಿದ್ದಾರೆ. ಇನ್ನೂ ಮೊದಲು ಖಾಸಗಿ ಆಸ್ಪತ್ರೆಗೆ ಆಕೆಯನ್ನು ಕರೆದೊಯ್ಯಲಾಗಿತ್ತು. ಆದರೆ, ಆ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲು ನಿರಾಕರಿಸಿದ್ದಾರೆ. ಬಳಿಕ ಸರ್ಕಾರಿ ಆಸ್ಪತ್ರೆಗೆ ಯುವತಿಯನ್ನು…

Read More

ರಾಯಚೂರು: ಮಹಿಳಾ ಅರ್ಚಕಿಯೊಬ್ಬರು ನೇಣು ಬಿಗಿದುಕೊಂಡು ಸಾವಿಗೆ ಶರಣಾಗಿರುವ ಘಟನೆ ರಾಯಚೂರು ಜಿಲ್ಲೆಯ ಡೊಂಗರಾಂಪೂರ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಬೆಟ್ಟದ ಪರಮೇಶ್ವರ ದೇವಸ್ಥಾನದಲ್ಲಿ ಅರ್ಚಕಿಯಾಗಿ ಕೆಲಸ ನಿರ್ವಹಿಸುತ್ತಿದ್ದ ಮಂಜುಳಾ (42) ಸಾವಿಗೆ ಶರಣಾದವರು ಎಂದು ಗುರುತಿಸಲಾಗಿದೆ. ಇವರು ಒಬ್ಬಂಟಿಯಾಗಿ ವಾಸಿಸುತ್ತಿದ್ದರು ಎಂದು ಹೇಳಲಾಗಿದೆ. ಜೀವನದಲ್ಲಿ ಮಾನಸಿಕವಾಗಿ ನೊಂದು ಸಾವಿಗೆ ಶರಣಾಗಿರಬಹುದು ಅಂತ ಶಂಕೆ ವ್ಯಕ್ತವಾಗಿದೆ. ಇನ್ನೂ ಅರ್ಚಕಿಯ ಸಾವಿಗೆ ನಿಖರ ಕಾರಣಗಳು ತಿಳಿದು ಬಂದಿಲ್ಲ. ಘಟನೆ ಸಂಬಂಧ ಯಾಪಲದಿನ್ನಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರ ತನಿಖೆಯಿಂದ ಹೆಚ್ಚಿನ ಮಾಹಿತಿ ತಿಳಿದು ಬರಬೇಕಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

Read More

ಮೈಸೂರು: ಕೇವಲ ರಂಗು ರಂಗಿನ ಮಾತಿನ ಮೂಲಕ ಜನರ ಹೊಟ್ಟೆ ತುಂಬಿಸಲು ಸಾಧ್ಯವಿಲ್ಲ. ಆದ್ದರಿಂದಲೇ ಚುನಾವಣೆ ಸಂದರ್ಭದಲ್ಲಿ ಕೊಟ್ಟ ಭರವಸೆಯಂತೆ ಜನಪರ ಕಾರ್ಯಕ್ರಮಗಳ ಮೂಲಕ ಜನರಲ್ಲಿ ಸಾಮಾಜಿಕ ಮತ್ತು ಆರ್ಥಿಕ ಶಕ್ತಿಯನ್ನು ತುಂಬುವ ಕಾರ್ಯವನ್ನು ಮಾಡುತ್ತಿದ್ದೇವೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು. ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಉದ್ಘಾಟನಾ ಸಮಾರಂಭದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಚುನಾವಣಾ ಸಂದರ್ಭದಲ್ಲಿ ತಾಯಿ ಚಾಮುಂಡೇಶ್ವರಿ ಸನ್ನಿಧಾನದಲ್ಲಿ ನಾನು ಮತ್ತು ಡಿ.ಕೆ.ಶಿವಕುಮಾರ್‌ ಅವರು ಚುನಾವಣೆಯಲ್ಲಿ ಜಯ ಗಳಿಸಿದರೆ ಐದು ಗ್ಯಾರಂಟಿ ಯೋಜನೆಗಳನ್ನು ಜಾರಿಗೊಳಿಸುವ ಭರವಸೆ ನೀಡಿದ್ದೆವು. ಅದರಂತೆ ಚುನಾವಣೆಯಲ್ಲಿ ಜಯ ಗಳಿಸಿದ ಎಂಟೇ ತಿಂಗಳಲ್ಲಿ ಎಲ್ಲಾ 5 ಯೋಜನೆಗಳನ್ನು ಜಾರಿಗೊಳಿಸಿದ್ದೇವೆ ಎಂದರು. ಗ್ಯಾರಂಟಿ ಯೋಜನೆಗಳ ಮೂಲಕ ಸಂವಿಧಾನದ ಆಶಯದಂತೆ ದುರ್ಬಲ ವರ್ಗದವರಿಗೆ ಆರ್ಥಿಕ ಮತ್ತು ಸಾಮಾಜಿಕವಾಗಿ ಶಕ್ತಿ ತುಂಬುವ ಕಾರ್ಯವನ್ನು ಮಾಡುತ್ತಿದ್ದೇವೆ. ಪಂಚ ಗ್ಯಾರಂಟಿಗಳಿಂದ ಪ್ರತಿ ಫಲಾನುಭವಿ ಕುಟುಂಬಕ್ಕೆ ವಾರ್ಷಿಕ 40 ರಿಂದ 50 ಸಾವಿರ ರೂಪಾಯಿ ಆರ್ಥಿಕ ನೆರವು ದೊರೆಯುತ್ತಿದೆ ಎಂದರು. ಗೃಹಲಕ್ಷ್ಮಿ ಯೋಜನೆಯಡಿ 1.21…

Read More

ತುಮಕೂರು: ತುಮಕೂರು ಜಿಲ್ಲೆಗೆ ಸಿಎಂ ಸ್ಥಾನ ಸಿಗಲಿ ಎಂದ ಕುಂಚಿಟಿಗ ಮಹಾಸಂಸ್ಥಾನ ಮಠದ ಶ್ರೀಗಳು ಹೇಳಿಕೆ ನೀಡಿದ್ದಾರೆ. ದಸರಾ ಕಾರ್ಯಕ್ರಮದ ಬಳಿಕ ಮಾತನಾಡಿದ ಎಲೆರಾಂಪುರ ಮಠದ ಹನುಮಂತನಾಥ ಸ್ವಾಮೀಜಿ, ನಾನು ವೇದಿಕೆಯಲ್ಲಿ ಮಾತನಾಡಿದ ಹಾಗೆ ನಮ್ಮ ಜಿಲ್ಲೆಯಿಂದ ಒಬ್ಬರು ಮುಖ್ಯಮಂತ್ರಿಗಳು ಆಗ್ಬೇಕು. ಅವಕಾಶ ಸಿಗಬೇಕು ಅಂತ ಹೇಳಿ ಪ್ರತಿಸಾರಿ ನಾವು ಅಂದುಕೊಳ್ತಿದ್ವಿ. ಕಳೆದ ಬಾರಿ ಪರಮೇಶ್ವರ್ ಅವರು ಕೊರಟಗೆರೆ ಕ್ಷೇತ್ರದಲ್ಲಿ ಸೋಲಾಯ್ತು. ಕಳೆದ ಬಾರಿ ಅವರು ಮುಖ್ಯಮಂತ್ರಿ ಅಂತ ಬಿಂಬಿಸಿದಾಗ ಆ ಹುದ್ದೆ ಅವರಿಂದ ಕೈತಪ್ಪಿ ಹೋಯ್ತು, ಈ ಸಂದರ್ಭದಲ್ಲಾದ್ರೂ ನಮ್ಮ ಜಿಲ್ಲೆಯಿಂದ ಒಬ್ರು ಮುಖ್ಯಮಂತ್ರಿಗಳಾಗಲಿ ಅನ್ನೋದು ನಮ್ಮ ಆಶಯ ಎಂದರು. ಇದು ಯಾವುದೇ ರಾಜಕೀಯ ಪ್ರೇರಿತವಲ್ಲ, ಇದು ಧಾರ್ಮಿಕ ಕಾರ್ಯಕ್ರಮ ಅಂತ ನಾನು ಹೆಚ್ಚಿಗೆ ಮಾತನಾಡೋಕೆ ಹೋಗಿಲ್ಲ, ನಮ್ಮ ಒಂದು ಕನಸು ನಮ್ಮ ಜಿಲ್ಲೆಯಿಂದ ಮುಖ್ಯಮಂತ್ರಿ ಆದ್ರೆ ಎಲ್ಲಾ ತಾಲ್ಲೂಕುಗಳು ಅಭಿವೃದ್ಧಿ ಆಗುತ್ತೆ, ಕುಡಿಯುವ ನೀರು, ರಸ್ತೆ ಅಭಿವೃದ್ಧಿ ಆಗುತ್ತೆ ಶಿರಾ, ಮಧುಗಿರಿ, ಪಾವಗಡ ಹೀಗೆ ತುಂಬಾ ಹಿಂದುಳಿದ ತಾಲೂಕುಗಳನ್ನ…

Read More

ತುಮಕೂರು: ಸಚಿವ ಮಹಾದೇವಪ್ಪನವರ ಮನೆಗೆ ನಾವು ಹೋಗಿದ್ದೆವು ಆದ್ರೆ ಯಾವುದು ಮೀಟಿಂಗ್ ಮಾಡಿಲ್ಲ, ಭೇಟಿಯಾಗಿದ್ದೇವೆ ಅಷ್ಟೇ, ಅಲ್ಲಿ ಸಿಎಂ ಸ್ಥಾನದ ಕುರಿತಾದ ಯಾವುದೇ ಚರ್ಚೆಗಳು ನಡೆದಿಲ್ಲ ಅಂತ ಕ್ಲಾರಿಫೈ ಮಾಡುತ್ತಿದ್ದೇನೆ ಎಂದು ರಾಜ್ಯ ಗೃಹ ಸಚಿವ ಡಾ.ಜಿ.ಪರಮೇಶ್ವರ್ ತಿಳಿಸಿದ್ದಾರೆ. ತುಮಕೂರಿನಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಅದಕ್ಕೆ ಅರ್ಥೈಸುವ ಅಗತ್ಯತೆ ಇಲ್ಲ. ನಾವು ಸಿಎಂ ಗೆ ಮಾರಲ್ ಆಗಿದ್ದೇವೆ, 136 ಶಾಸಕರು ಇದ್ದೇವೆ. ಅಲ್ಲದೆ ನಾವೆಲ್ಲ ಸಚಿವರು ಕೂಡ ಅವರ ಜೊತೆ ಇದ್ದೇವೆ ಎಂದರು. ಒಬ್ಬರಿಬ್ಬರು ಹೋದರೆ ಅದೇನು ವಿಶೇಷತೆ ಏನಲ್ಲ. ಕನಿಷ್ಠ ಒಂದು 10 ಜನನಾದ್ರೂ ಸೇರಿದ್ರೆ ಅದನ್ನ ನೀವು ಅರ್ಥೈಸಬಹುದು. ಅದರಲ್ಲಿ ಎರಡು ಮಾತಿಲ್ಲ. ನಮ್ಮಲ್ಲಿ ಯಾರೂ ಬೇರೆ ಇದ್ದೇವೆ ಎಂದು ಹೇಳಿಲ್ಲವಲ್ಲ ಎಂದರು. ಕಾಫಿ ಕುಡಿಯಲು ಹೋದರೆ ಅದು ಸಭೆ ಆಗಲ್ಲ. ಕಾಫಿ ಕುಡಿದಿದ್ದೇವೆ, ಊಟ ಮಾಡಿಲ್ಲ. ನಾವು ಸಚಿವ ಮಹದೇವಪ್ಪ ಅವರ ಮನೆಗೆ ಹೋಗಿದ್ದೆವು. ಮುಖ್ಯಮಂತ್ರಿಗಳನ್ನು ಬೇರೆ ಬೇರೆ ವಿಚಾರದಲ್ಲಿ ಭೇಟಿಯಾಗಬೇಕಿತ್ತು. ಅದಕ್ಕಾಗಿ ಸಚಿವ ಮಹದೇವಪ್ಪ ಅವರ…

Read More