Subscribe to Updates
Get the latest creative news from FooBar about art, design and business.
- ಕರ್ನಾಟಕದ 25ನೇ ಮುಖ್ಯಮಂತ್ರಿಯಾಗಿ ಡಿ.ಕೆ.ಶಿವಕುಮಾರ್ ಪ್ರಮಾಣವಚನ ಸ್ವೀಕಾರ!
- ಸಾದರ ಸಮುದಾಯ ಭವನದಲ್ಲಿ ಸಪ್ತಗಿರಿ ಆಸ್ಪತ್ರೆ ವತಿಯಿಂದ ಬೃಹತ್ ಆರೋಗ್ಯ ತಪಾಸಣೆ ಮತ್ತು ಶಸ್ತ್ರ ಚಿಕಿತ್ಸಾ ಶಿಬಿರ
- ಖಾಸಗಿ ಶಾಲೆಗಳ ಮಾದರಿಯಲ್ಲೇ, ಸರ್ಕಾರಿ ಶಾಲೆಗಳ ರೂಪಾಂತರ: ಡಿ.ಕೆ.ಶಿವಕುಮಾರ್
- ತುಮಕೂರು ವಿವಿ 19ನೇ ಘಟಿಕೋತ್ಸವ: 90 ವಿದ್ಯಾರ್ಥಿಗಳಿಗೆ 117 ಚಿನ್ನದ ಪದಕ
- ಶಾಲೆಗಳ ಪುನರಾರಂಭ: ದಾಖಲಾತಿ ಆಂದೋಲನಕ್ಕೆ ಡಿ.ಸಿ. ಚಾಲನೆ
- ಸಚಿವ ಸ್ಥಾನದ ಆಸೆ ನನಗೂ ಇದೆ ಕೊಟ್ಟರೆ ಪ್ರಾಮಾಣಿಕವಾಗಿ ಕೆಲಸ ನಿರ್ವಹಿಸುವೆ: ಹೆಚ್.ವಿ.ವೆಂಕಟೇಶ್
- ನವಿಲೆ ಭಾಗಕ್ಕೆ ಹೇಮಾವತಿ ನೀರನ್ನು ಹರಿಸಲಾಗುವುದು ರೈತರು ಆತಂಕಪಡುವ ಅಗತ್ಯವಿಲ್ಲ: ಶಾಸಕ ಸಿ.ಬಿ.ಸುರೇಶ್ ಬಾಬು
- ‘ಗರ್ಭಿಣಿನೂ ಇಲ್ಲ, ಮಹಿಳೆಯೂ ಇಲ್ಲ… ಕಾರಿನಲ್ಲಿ ಒಬ್ಬರೇ ಇದ್ದಿದ್ದು!’: ಝೀರೋ ಟ್ರಾಫಿಕ್ ಪ್ರತಿಭಟನೆಯ ಅಸಲೀಯತ್ತು ಬಿಚ್ಚಿಟ್ಟ ಬೆಂಗಳೂರು ಪೊಲೀಸರು
Author: admin
ಬೈರೂತ್: ಲೆಬನಾನ್ ನ ಬೈರೂತ್ ಮೇಲೆ ಇಸ್ರೇಲ್ ಬಾಂಬ್ ದಾಳಿ ನಡೆಸಿದ್ದು 6 ಜನರು ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ. ಗುರುವಾರ ಬೆಳಗ್ಗಿನ ಜಾವ ಈ ದಾಳಿ ನಡೆದಿದೆ. ಬೈರೂತ್ನ ಬಚೌರ ಪ್ರದೇಶದಲ್ಲಿರುವ ಸಂಸತ್ತಿನ ಸಮೀಪದಲ್ಲಿರುವ ಕಟ್ಟಡಗಳನ್ನು ಗುರಿಯಾಗಿಸಿಕೊಂಡು ಇಸ್ರೇಲ್ ದಾಳಿ ನಡೆಸಿದೆ ಎಂದು ಲೆಬನಾನ್ ಭದ್ರತಾ ಪಡೆ ತಿಳಿಸಿದೆ. ಗುರುವಾರ ಬೆಳಗ್ಗಿನ ಜಾವ ಭಾರೀ ಶಬ್ದ ಕೇಳಿ ಬಂದಿರುವುದಾಗಿ ಪ್ರತ್ಯಕ್ಷದರ್ಶಿಗಳು ರಾಯಿಟರ್ಸ್ಗೆ ತಿಳಿಸಿದ್ದಾರೆ. ದಾಳಿಯಲ್ಲಿ ಏಳು ಮಂದಿ ಗಾಯಗೊಂಡಿದ್ದಾರೆ ಎಂದು ಲೆಬನಾನ್ ಆರೋಗ್ಯಾಧಿಕಾರಿಗಳು ತಿಳಿಸಿದ್ದಾರೆ. ಇದರ ಜತೆಗೆ ಲೆಬನಾನ್ ನ ದಕ್ಷಿಣದಲ್ಲಿರುವ ಉಪನಗರ ದಹಿಯೆಹ್ ಮೇಲೂ ಮೂರು ಕ್ಷಿಪಣಿಗಳು ದಾಳಿ ನಡೆಸಿವೆ. ಈ ಜಾಗದಲ್ಲಿ ಕಳೆದ ವಾರ ಹಿಜ್ಬುಲ್ಲಾ ನಾಯಕ ಹಸನ್ ನಸ್ರಲ್ಲಾ ಅವರನ್ನು ಹತ್ಯೆ ಮಾಡಲಾಗಿತ್ತು. ಇಸ್ರೇಲ್ ದಾಳಿಗೆ ಪ್ರತಿಯಾಗಿ ಇರಾನ್ 180ಕ್ಕೂ ಹೆಚ್ಚು ಕ್ಷಿಪಣಿಗಳನ್ನು ಬುಧವಾರ ಇಸ್ರೇಲ್ ನತ್ತ ಹಾರಿಸಿತ್ತು. ಪರಿಣಾಮ ಇಸ್ರೇಲ್ ನ 8 ಸೈನಿಕರು ಮೃತಪಟ್ಟಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು…
ಶ್ರೀ ಕ್ಷೇತ್ರ ಕಟೀಲು ದುರ್ಗಾಪರಮೇಶ್ವರೀ ಜ್ಯೋತಿಷ್ಯ ಪೀಠಂ ದೈವಜ್ಞ ಪಂಡಿತ್ ಕೃಷ್ಣ ಭಟ್ ಪ್ರಧಾನ ತಾಂತ್ರಿಕ್ ಹಾಗೂ ಮಾಂತ್ರಿಕರು ಸ್ತ್ರೀ ಪುರುಷ ವಶೀಕರಣ ಸ್ಪೆಷಲಿಸ್ಟ್ ನನಗೆ ಒಂದೇ ಕರೆ ಮಾಡಿದರೆ ನಿಮ್ಮ ಇಷ್ಟಪಟ್ಟವರು ನಿಮ್ಮಂತೆ 9535156490 ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆ ಉತ್ತರಿಸಬಹುದು ಏಷ್ಟೇ ಪೂಜೆ ಪ್ರಯತ್ನ ಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..?ನಿಮ್ಮ ಯಾವುದೇಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ 2 ದಿನಗಳಲ್ಲಿ ಪರಿಹಾರ ಶತಸಿದ್ಧ ಧನವಶ, ಜನವಶ, ಶತ್ರುನಾಶ, ಸ್ತ್ರೀ- ಪುರುಷ ವಶೀಕರಣ, ದಿಗ್ಭಂಧನ, ಸ್ತಂಭನ, ವುಚ್ಛಾಟನೆಯಂತಹ ಸಮಸ್ಯೆಗಳಿಗೆ ವಿಶೇಷ ಪರಿಹಾರ ತಿಳಿಸುತ್ತಾರೆ 9535156490 Provided by ಗುರು ಗ್ರಹವು ಪ್ರತಿಯೊಂದು ರಾಶಿಗಳ ಮೇಲೆ ಹೇಗೆ ಪರಿಣಾಮ ಬೀರುತ್ತದೆ ಹಾಗೂ ಇದು ಪ್ರತಿಯೊಂದು ರಾಶಿಗಳ ಯಶಸ್ಸು, ಬುದ್ಧಿವಂತಿಕೆ ಹಾಗೂ ಬೆಳವಣಿಗೆಯನ್ನು ಏನೆಂದು ಸೂಚಿಸಿದೆ ಎಂಬುದನ್ನು ತಿಳಿಸುತ್ತದೆ. ✨ ಮೇಷ ರಾಶಿಯ…
ಬೆಂಗಳೂರು: ತುಮಕೂರು ಜಿಲ್ಲಾಡಳಿತ ನಿಯೋಗವು ಇಂದು (ಅಕ್ಟೋಬರ್ 2) ಬೆಳಗ್ಗೆ ಬೆಂಗಳೂರಿನ ಸದಾಶಿವನಗರದಲ್ಲಿರುವ ಮಾನ್ಯ ಗೃಹ ಸಚಿವರು ಹಾಗೂ ತುಮಕೂರು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.ಜಿ.ಪರಮೇಶ್ವರ ಅವರ ನಿವಾಸಕ್ಕೆ ಭೇಟಿ ನೀಡಿತು. ಅಕ್ಟೋಬರ್ 3ರಂದು ನಡೆಯುವ ‘ತುಮಕೂರು ದಸರಾ–2024’ ಉದ್ಘಾಟನೆಗೆ ಆಹ್ವಾನಿಸಿ, ಸಚಿವರಾದ ಡಾ. ಜಿ.ಪರಮೇಶ್ವರ, ಕನ್ನಿಕಾ ಪರಮೇಶ್ವರಿ ಅವರಿಗೆ ಆಮಂತ್ರಣ ನೀಡಲಾಯಿತು. ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಶುಭ ಕಲ್ಯಾಣ್, ಜಿಲ್ಲಾಪಂಚಾಯತ್ ಸಿಇಒ ಜಿ.ಪ್ರಭು, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಶೋಕ್ ವೆಂಕಟ್, ಅರಣ್ಯಾಧಿಕಾರಿ ಅನುಪಮಾ, ತಹಶೀಲ್ದಾರ್ ರಾಜೇಶ್ವರಿ ಅವರು ಇದ್ದರು. 25 ಲಕ್ಷ ದೇಣಿಗೆ ನೀಡಿದ ಪರಮೇಶ್ವರ್! ತುಮಕೂರು ನಗರದಲ್ಲಿ ಅದ್ಧೂರಿಯಾಗಿ ಜರುಗಲಿರುವ ‘ತುಮಕೂರು ದಸರಾ ಉತ್ಸವ-2024’ ಕ್ಕೆ ಗೃಹ ಸಚಿವ ಡಾ.ಜಿ.ಪರಮೇಶ್ವರ್ ವೈಯಕ್ತಿಕವಾಗಿ 25 ಲಕ್ಷ ರೂ. ಮೊತ್ತದ ದೇಣಿಗೆಯ ಚೆಕ್ ಅನ್ನು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಅವರಿಗೆ ಹಸ್ತಾಂತರಿಸಿದರು. ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ್ ಸಿಇಒ ಪ್ರಭು, ಮಹಾನಗರ ಪಾಲಿಕೆ ಆಯುಕ್ತೆ ಬಿ.ವಿ.ಅಶ್ವಿಜಾ, ಅಪರ ಜಿಲ್ಲಾಧಿಕಾರಿ ಡಾ.ತಿಪ್ಪೇಸ್ವಾಮಿ, ಜಿಲ್ಲಾ…
ತುಮಕೂರು: ಮಹಾತ್ಮ ಗಾಂಧೀಜಿ ಜಯಂತಿ ಅಂಗವಾಗಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಆಯೋಜಿಸಿದ್ದ ಜಿಲ್ಲಾ ಮಟ್ಟದ ಬಾಪೂಜಿ ಪ್ರಬಂಧ ಸ್ಪರ್ಧೆಯಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಗೃಹ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ.ಜಿ.ಪರಮೇಶ್ವರ ಅವರು ನಗದು ಬಹುಮಾನ ಹಾಗೂ ಪ್ರಮಾಣಪತ್ರ ವಿತರಣೆ ಮಾಡಿದರು. ನಗರದ ಸರ್ಕಾರಿ ಜೂನಿಯರ್ ಕಾಲೇಜು ಮೈದಾನದಲ್ಲಿಂದು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಮತ್ತು ಮಹಾನಗರ ಪಾಲಿಕೆ ವತಿಯಿಂದ ಆಯೋಜಿಸಿದ್ದ ಮಹಾತ್ಮ ಗಾಂಧೀಜಿ, ಲಾಲ್ ಬಹದ್ದೂರ್ ಶಾಸ್ತ್ರಿ ಜಯಂತಿ ಹಾಗೂ ಪೌರ ಕಾರ್ಮಿಕರ ದಿನಾಚರಣೆ ಕಾರ್ಯಕ್ರಮದ ಉದ್ಘಾಟನೆ ನೆರವೇರಿಸಿದ ನಂತರ ಬಹುಮಾನ ವಿತರಣೆ ಮಾಡಿದರು. ಪ್ರೌಢ ಶಾಲಾ ವಿಭಾಗದಲ್ಲಿ ಹನುಮನಹಳ್ಳಿ ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿ ದೀಕ್ಷಿತ ಪ್ರಥಮ, ಅಮೃತೂರು ಕೆ.ಪಿ.ಎಸ್ ವಿದ್ಯಾರ್ಥಿ ಎನ್.ಎನ್. ಹಿಮಾನಿ ದ್ವಿತೀಯ, ಅಂಕಸಂದ್ರ ಸರ್ಕಾರಿ ಪ್ರೌಢಶಾಲೆ ವಿದ್ಯಾರ್ಥಿ ಎ. ಪಿ. ಅಶ್ವಿನಿ ತೃತೀಯ ಸ್ಥಾನ; ಪದವಿ ಪೂರ್ವ ಕಾಲೇಜು ವಿಭಾಗದಿಂದ ಸಿರಾ ಪ್ರೆಸಿಡೆನ್ಸಿ ಪದವಿ ಪೂರ್ವ ಕಾಲೇಜಿನ ಎಸ್.ಎಂ. ಗುಣಶ್ರೀ ಪ್ರಥಮ, ತುರುವೇಕೆರೆ ಸರ್ಕಾರಿ ಪದವಿ…
ತುಮಕೂರು: ತುಮಕೂರು ದಸರಾ ಮಹೋತ್ಸವ–2024ರ ಅಂಗವಾಗಿ ಜಿಲ್ಲಾಡಳಿತದ ವತಿಯಿಂದ ನಗರದ ಸರ್ಕಾರಿ ಜೂನಿಯರ್ ಕಾಲೇಜು ಮೈದಾನ ಹಾಗೂ ಡಾ.ಗುಬ್ಬಿ ವೀರಣ್ಣ ಕಲಾ ಕ್ಷೇತ್ರದಲ್ಲಿ ಅಕ್ಟೋಬರ್ 11 ಮತ್ತು 12ರಂದು “ಜನಪ್ರಿಯ ಆಹಾರ ಮೇಳ–2024”ನ್ನು ಆಯೋಜಿಸಿದ್ದು, ಆಹಾರ ಮೇಳದಲ್ಲಿ ಮಳಿಗೆ ತೆರೆಯಲು ಇಚ್ಛಿಸುವವರಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ತಮ್ಮ ಅರ್ಜಿಯನ್ನು ಜಂಟಿ ನಿರ್ದೇಶಕರು ಮತ್ತು ಸದಸ್ಯ ಕಾರ್ಯದರ್ಶಿ, ಆಹಾರ ಮೇಳ ಉಪಸಮಿತಿ, ತುಮಕೂರು ದಸರಾ ಮಹೋತ್ಸವ, ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ಕಚೇರಿ, ಕೊಠಡಿ ಸಂಖ್ಯೆ 205, 2ನೇ ಮಹಡಿ, ಜಿಲ್ಲಾಧಿಕಾರಿಗಳ ಕಚೇರಿ, ತುಮಕೂರು ಇವರಿಗೆ ಅಕ್ಟೋಬರ್ 5ರೊಳಗಾಗಿ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ಮಂಟೇಸ್ವಾಮಿ (ಮೊ.ಸಂ.9448992049) ಅವರನ್ನು ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296
ಬೆಂಗಳೂರು: ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಮಹಿಳೆಯನ್ನು ಆಟೋ ಚಾಲಕ ಹಿಂಬಾಲಿಸಿ ಅಸಭ್ಯವಾಗಿ ವರ್ತಿಸಿರುವ ಘಟನೆ ಮಾಗಡಿ ರಸ್ತೆ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದು, ಘಟನೆ ಬೆಳಕಿಗೆ ಬಂದ ಬೆನ್ನಲ್ಲೇ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಮಲ್ಲೇಶ್ವರದ ವಿನೋಬಾನಗರ ನಿವಾಸಿ ಅಶೋಕ್ ಕುಮಾರ್(36) ಬಂಧಿತ ಆರೋಪಿಯಾಗಿದ್ದಾನೆ. ಸೆ.18ರಂದು ಮಧ್ಯಾಹ್ನ ಈ ಘಟನೆ ನಡೆದಿದೆ. ಸಂತ್ರಸ್ತ ಮಹಿಳೆ ಬ್ಯೂಟಿಷಿಯನ್ ಆಗಿದ್ದರು. ಮಧ್ಯಾಹ್ನ ಊಟಕ್ಕಾಗಿ ಮನೆಗೆ ಹೋಗುತ್ತಿದ್ದ ವೇಳೆ ರಾಜಾಜಿನಗರ 6ನೇ ಬ್ಲಾಕ್ 72ನೇ ಕ್ರಾಸ್ ನ ಮಧ್ಯೆ ಆಟೋ ಚಾಲಕ ಆಕೆಯನ್ನು ಹಿಂಬಾಲಿಸಿದ್ದಾನೆ. ಬಳಿಕ ತನ್ನ ಪ್ಯಾಂಟ್ ಜಿಪ್ ತೆಗೆದು ಮಹಿಳೆಯ ಎದುರೇ ಅಸಭ್ಯವಾಗಿ ವರ್ತಿಸಿದ್ದಾನೆ. ಈ ವೇಳೆ ಬ್ಯೂಟಿಷಿಯನ್ ಸಹಾಯಕ್ಕಾಗಿ ಕೂಗಿಕೊಂಡಿದ್ದು, ಈ ವೇಳೆ ಆಟೋ ಚಾಲಕ ಸ್ಥಳದಿಂದ ಪರಾರಿಯಾಗಿದ್ದಾನೆ. ಈ ಬಗ್ಗೆ ಮಾಗಡಿರಸ್ತೆ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಶೋಧ ನಡೆಸಿ ಇದೀಗ ಆಟೋ ಚಾಲಕನನ್ನು ಬಂಧಿಸಿ ಮುಂದಿನ ಕ್ರಮ ಕೈಗೊಂಡಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್…
ಪಾವಗಡ: ಪಟ್ಟಣದ ಹಿಂದೂಪುರ ರಸ್ತೆಯ ಬಳಿ ಬೆಟ್ಟದಿಂದ ಮಳೆಯ ನೀರು ಸರಾಗವಾಗಿ ಹರಿಯುವಂತೆ ಇದ್ದ ರಾಜ ಕಾಲುವೆ ಒತ್ತುವರಿ ಮಾಡಿಕೊಂಡು ಕಟ್ಟುಗಳನ್ನು ನಿರ್ಮಾಣ ಮಾಡಲು ಮುಂದಾದರೂ, ಪಾವಗಡ ಪುರಸಭೆಯ ಅಧಿಕಾರಿಗಳು ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಬಿಜೆಪಿ ಪಕ್ಷದ ಒಬಿಸಿ ಮೊರ್ಚಾದ ರಾಜ್ಯಕಾರ್ಯಕಾರಿಣಿ ಸಮಿತಿಯ ಸದಸ್ಯರ ರವಿ ಆರೋಪಿಸಿದ್ದಾರೆ. ಪಾವಗಡ ಪಟ್ಟಣದ ಪ್ರವೇಶಿಸಲು ಇರುವ ಪ್ರಮುಖ ರಸ್ತೆಗಳಲ್ಲಿ ಹಿಂದೂಪುರ ರಸ್ಥೆಯು ಒಂದು ಪ್ರಮುಖ ರಸ್ತೆಗಳಲ್ಲಿ ಮಳೆಯ ನೀರು ಸರಾಗವಾಗಿ ಹರಿಯುವಂತೆ ಅಗತ್ಯ ಕ್ರಮಗಳನ್ನು ಪುರಸಭೆಯ ಅಧಿಕಾರಿಗಳು ತೆಗೆದುಕೊಳ್ಳಬೇಕು, ನಂತರ ಕಟ್ಟಡ ನಿರ್ಮಾಣಕ್ಕೆ ಪರವಾನಗಿ ನೀಡಿದ ಬಳಿಕ ಒಮ್ಮೆಯೂ ಪರಿಶೀಲನೆ ನಡೆಸುವುದಿಲ್ಲ, ಭ್ರಷ್ಟಾಚಾರಕ್ಕೆ ದಾಸರಾಗಿದ್ದಾರೆ ಎಂದು ಗಂಭೀರವಾಗಿ ಅಧಿಕಾರಿಗಳು ವಿರುದ್ಧ ಆರೋಪಿಸಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296
ಪಾವಗಡ: ತಾಲ್ಲೂಕಿನ ಅರಸೀಕೆರೆ ಸರ್ಕಾರಿ ಪ್ರೌಢಶಾಲೆಯಲ್ಲಿ 155 ನೇ ಗಾಂಧಿ ಜಯಂತಿ ಮತ್ತು 120 ನೇ ಲಾಲ್ ಬಹಾದ್ದೂರ್ ಶಾಸ್ತ್ರಿ ರವರ ಜನ್ಮ ದಿನಾಚರಣೆ ಪ್ರಯುಕ್ತ ಸುಂದರ್ ಲಾಲ್ ಬಹುಗುಣ ಎಕೋ ಕ್ಲಬ್ ನ ಆಶ್ರಯದಲ್ಲಿ ಶಾಲಾ ಆವರಣದಲ್ಲಿ “ಪ್ಲಾಸ್ಟಿಕ್ ಮುಕ್ತ ಭಾರತ ನಮ್ಮ ಧ್ಯೇಯ” ಮತ್ತು “ಸ್ವಚ್ಚತೆಯೆ–ಸೇವೆ” ಎಂಬ ಕಾರ್ಯ ಕ್ರಮಗಳನ್ನು ಹಮ್ಮಿಕೊಳ್ಳಲಾಯಿತು. ಮೊದಲಿಗೆ ಶಾಲಾ ಆವರಣವನ್ನು ಸ್ವಚ್ಚಗೊಳಿಸಲಾಯಿತು. ನಂತರ ಮಹತ್ಮಾ ಗಾಂಧಿ ಮತ್ತು ಲಾಲ್ ಬಹದ್ದೂರ್ ಶಾಸ್ತ್ರಿ ರವರ ಭಾವಚಿತ್ರಕ್ಕೆ ಪೂಜಾ ಕಾರ್ಯವನ್ನು ನೆರವೇರಿಸಿ ನಂತರ ವಿದ್ಯಾರ್ಥಿಗಳಿಂದ ಭಾಷಣ ಸ್ಪರ್ಧೆಯನ್ನು ಏರ್ಪಡಿಸಿಲಾಗಿ ವಿಜೇತ ವಿದ್ಯಾರ್ಥಿಗಳಿಗೆ ಬಹುಮಾನಗಳನ್ನು ನೀಡಲಾಯಿತು. ಕಾರ್ಯಕ್ರಮದಲ್ಲಿ ಪ್ರಭಾರಿ ಮುಖ್ಯಶಿಕ್ಷಕರಾದ ರೇಣುಕರಾಜ್ ಜಿ.ಹೆಚ್., ಎಸ್.ಡಿ.ಎಂ.ಸಿ.ಅಧ್ಯಕ್ಷರಾದ ಗುರುರಾಜ್ ಮತ್ತು ಸಹಶಿಕ್ಷಕರಾದ ಹನುಮೇಶ್ ಎನ್., ಮೋಹನ್ ಕುಮಾರ್ ಜಿ.ಕೆ., ಕುಮಾರ್ ಎಸ್., ಅಭಿಷೇಕ್ ಸಹ ಶಿಕ್ಷಿಕಿಯರಾದ ವಿಮಲಾ ಆರ್., ರಶ್ಮೀ ಸಿ.ಎಸ್., ಮಾನಸ ಎನ್. ಮತ್ತು ಶ್ರೀಲಕ್ಷ್ಮೀ ಮತ್ತು ವಿದ್ಯಾರ್ಥಿಗಳು ಭಾಗವಹಿಸಿದ್ದರು. ವರದಿ: ನಂದೀಶ್ ನಾಯ್ಕ, ಪಾವಗಡ ನಮ್ಮತುಮಕೂರಿನ ಕ್ಷಣ…
ತುಮಕೂರು: ವಿವಿಧ ಭಾಷೆ, ಸಂಸ್ಕೃತಿಯ ಜನರನ್ನೊಳಗೊಂಡ ಭಾರತವನ್ನು ಒಗ್ಗೂಡಿಸಿದ ಮಹಾತ್ಮ ಗಾಂಧೀಜಿಯವರ ಆದರ್ಶ, ತತ್ವಗಳನ್ನು ಪಾಲಿಸೋಣ ಎಂದು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ. ಜಿ.ಪರಮೇಶ್ವರ ಅವರು ಹೇಳಿದರು. ತುಮಕೂರು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಾನಗರ ಪಾಲಿಕೆ ವತಿಯಿಂದ ನಗರದ ಜೂನಿಯರ್ ಕಾಲೇಜು ಆವರಣದಲ್ಲಿ ನಡೆದ ‘ಮಹಾತ್ಮ ಗಾಂಧೀಜಿ, ಲಾಲ್ ಬಹದ್ದೂರ್ ಶಾಸ್ತ್ರೀಜಿ ಜಯಂತಿ ಹಾಗೂ ಪೌರಕಾರ್ಮಿಕ ದಿನಾಚರಣೆ’ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಯುವ ಪೀಳಿಗೆಗೆ ಸ್ವಾತಂತ್ರ್ಯ ಹೋರಾಟ ದಿನಗಳು ಹಾಗೂ ಗಾಂಧೀಜಿಯವರ ಆದರ್ಶಗಳನ್ನು ಪರಿಚಯಿಸಬೇಕು. ಜವಾಹರ್ ಲಾಲ್ ನೆಹರೂ ಅವರ ನಂತರ ಜನಾಭಿಪ್ರಾಯವನ್ನು ಗಳಿಸುವಲ್ಲಿ ಯಶಸ್ವಿಯಾದ ಲಾಲ್ ಬಹದ್ದೂರ್ ಶಾಸ್ತ್ರೀ ಅವರ ಕೊಡುಗೆಯನ್ನು ಸ್ಮರಿಸೋಣ. ಶಾಸ್ತ್ರಿ ಅವರು ಹದಿನೇಳನೇ ವಯಸ್ಸಿನಲ್ಲಿ ಸ್ವಾತಂತ್ರ್ಯ ಹೋರಾಟದಲ್ಲಿ ಪಾಲ್ಗೊಂಡು, ಗಾಂಧೀಜಿಯವರ ಅನುಯಾಯಿಯಾಗಿದ್ದರು. ಈ ಇಬ್ಬರು ಮಹಾನ್ ನಾಯಕರ ಜನ್ಮ ದಿನಾಚರಣೆ ಒಂದೇ ದಿನ ಇರುವುದು ಆಶ್ಚರ್ಯಕರ ಎಂದರು. ಗಾಂಧೀಜಿ ಅವರು ದಕ್ಷಿಣಾ ಆಫ್ರಿಕಾಕ್ಕೆ ಭೇಟಿ ನೀಡಿದಾಗ ಆಳ್ವಿಕೆ ನಡೆಸುತ್ತಿದ್ದ ಬ್ರಿಟೀಷರು, ವರ್ಣಬೇದ ತಾರತಮ್ಯದಿಂದ ಗಾಂಧೀಜಿಯವರನ್ನು…
ತುಮಕೂರಿನ: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದ ಪ್ರಾದೇಶಿಕ ಕೇಂದ್ರ ತುಮಕೂರು ಕಚೇರಿಯಲ್ಲಿ ಬುಧವಾರ ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ 155ನೇ ಜಯಂತಿಯನ್ನು ಸರಳವಾಗಿ ಆಚರಿಸಲಾಯಿತು. ಕರಾಮುವಿ ತುಮಕೂರು ಪ್ರಾದೇಶಿಕ ಕೇಂದ್ರದ ಪ್ರಾದೇಶಿಕ ನಿರ್ದೇಶಕರಾದ ಡಾ.ಲೋಕೇಶ ಆರ್. ರವರು ಮಹಾತ್ಮ ಗಾಂಧೀಜಿಯವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ಪುಷ್ಪನಮನ ಸಲ್ಲಿಸಿ ಮಾತನಾಡಿ ಗಾಂಧೀಜಿ ಅವರ ಚಿಂತನೆ, ಆದರ್ಶ, ಜೀವನ ಮೌಲ್ಯಗಳನ್ನು ಸ್ಮರಿಸುವ ಮತ್ತು ಅದರಂತೆ ನಡೆಯುವ ಪಣ ತೊಡುವ ದಿನವಿದು. ಗಾಂಧೀಜಿಯವರು ತಮ್ಮ ಸತ್ಯ, ಅಹಿಂಸೆ ಸಿದ್ಧಾಂತದಿಂದಲೇ ಜಗವನ್ನು ಗೆದ್ದ ಚೇತನ. ಗಾಂಧೀಜಿಯವರ ಶಾಂತಿ ಮತ್ತು ಅಹಿಂಸ ತತ್ವವನ್ನು ಗೌರವಿಸುವ ಸಲುವಾಗಿ ಈ ದಿನವನ್ನು ಜಗತ್ತಿನಾದ್ಯಂತ ಅಂತರಾಷ್ಟ್ರೀಯ ಅಹಿಂಸಾ ದಿನವನ್ನಾಗಿಯೂ ಆಚರಣೆ ಮಾಡಲಾಗುತ್ತಿದೆ ಎಂದರು. ಈ ಸಂದರ್ಭದಲ್ಲಿ ಪ್ರಾದೇಶಿಕ ಕೇಂದ್ರದ ಸಿಬ್ಬಂದಿಗಳಾದ ತಬ್ರೇಜ್ ಖಾನ್ , ನರಸಿಂಹರಾಜು, ಲಕ್ಷ್ಮಿಕಾಂತರವರು ಮತ್ತು ಅರ್ಥಶಾಸ್ತ್ರ ಉಪನ್ಯಾಸಕರಾದ ಡಾ.ಸುರೇಶ್.ಸಿ. ರವರು ಉಪಸ್ಥಿತರಿದ್ದರು. ವರದಿ: ನಂದೀಶ್ ನಾಯ್ಕ, ಪಾವಗಡ ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್…