Subscribe to Updates
Get the latest creative news from FooBar about art, design and business.
- ಕರ್ನಾಟಕದ 25ನೇ ಮುಖ್ಯಮಂತ್ರಿಯಾಗಿ ಡಿ.ಕೆ.ಶಿವಕುಮಾರ್ ಪ್ರಮಾಣವಚನ ಸ್ವೀಕಾರ!
- ಸಾದರ ಸಮುದಾಯ ಭವನದಲ್ಲಿ ಸಪ್ತಗಿರಿ ಆಸ್ಪತ್ರೆ ವತಿಯಿಂದ ಬೃಹತ್ ಆರೋಗ್ಯ ತಪಾಸಣೆ ಮತ್ತು ಶಸ್ತ್ರ ಚಿಕಿತ್ಸಾ ಶಿಬಿರ
- ಖಾಸಗಿ ಶಾಲೆಗಳ ಮಾದರಿಯಲ್ಲೇ, ಸರ್ಕಾರಿ ಶಾಲೆಗಳ ರೂಪಾಂತರ: ಡಿ.ಕೆ.ಶಿವಕುಮಾರ್
- ತುಮಕೂರು ವಿವಿ 19ನೇ ಘಟಿಕೋತ್ಸವ: 90 ವಿದ್ಯಾರ್ಥಿಗಳಿಗೆ 117 ಚಿನ್ನದ ಪದಕ
- ಶಾಲೆಗಳ ಪುನರಾರಂಭ: ದಾಖಲಾತಿ ಆಂದೋಲನಕ್ಕೆ ಡಿ.ಸಿ. ಚಾಲನೆ
- ಸಚಿವ ಸ್ಥಾನದ ಆಸೆ ನನಗೂ ಇದೆ ಕೊಟ್ಟರೆ ಪ್ರಾಮಾಣಿಕವಾಗಿ ಕೆಲಸ ನಿರ್ವಹಿಸುವೆ: ಹೆಚ್.ವಿ.ವೆಂಕಟೇಶ್
- ನವಿಲೆ ಭಾಗಕ್ಕೆ ಹೇಮಾವತಿ ನೀರನ್ನು ಹರಿಸಲಾಗುವುದು ರೈತರು ಆತಂಕಪಡುವ ಅಗತ್ಯವಿಲ್ಲ: ಶಾಸಕ ಸಿ.ಬಿ.ಸುರೇಶ್ ಬಾಬು
- ‘ಗರ್ಭಿಣಿನೂ ಇಲ್ಲ, ಮಹಿಳೆಯೂ ಇಲ್ಲ… ಕಾರಿನಲ್ಲಿ ಒಬ್ಬರೇ ಇದ್ದಿದ್ದು!’: ಝೀರೋ ಟ್ರಾಫಿಕ್ ಪ್ರತಿಭಟನೆಯ ಅಸಲೀಯತ್ತು ಬಿಚ್ಚಿಟ್ಟ ಬೆಂಗಳೂರು ಪೊಲೀಸರು
Author: admin
ತುಮಕೂರು: 116 ದೇಶಗಳಲ್ಲಿ ತಿರಸ್ಕಾರ ಮಾಡಿರುವ ಕುಲಾಂತರಿ ಬೀಜ ತಳಿಯನ್ನು ನಮ್ಮದೇಶದಲ್ಲಿ ತರಲು ಹೊರಟಿರುವುದು ವಿಪರ್ಯಾಸ. ಇದರಿಂದ ಪರಿಸರ, ಜೀವವೈಧ್ಯತೆ ಅಷ್ಟೇ ಅಲ್ಲದೆ, ಮಾನವನ ವಿಕಾಸದಲ್ಲೂಅನಾಹುತವೇ ಸಂಭವಿಸಲಿದೆ. ಆದ್ದರಿಂದ ರೈತರು ಮಾತ್ರವಲ್ಲದೆ, ಪಟ್ಟಣದಲ್ಲಿರುವ ಜನರೂ ಕುಲಾಂತರಿ ನೀತಿಯನ್ನು ಕಾಲಿನಲ್ಲಿಒದ್ದುತಿರಸ್ಕಾರ ಮಾಡಬೇಕು ಎಂದುರೈತ ಸಂಘ ಹಾಗೂ ಹಸಿರು ಸೇನೆಯ ಕೆ.ಟಿ. ಗಂಗಾಧರ್ ಕರೆ ನೀಡಿದರು. ಗಾಂಧೀ ಸಹಜ ಬೇಸಾಯ ಆಶ್ರಮದ ವತಿಯಿಂದ ‘ಕೇಂದ್ರ ಸರ್ಕಾರ ಸುಪ್ರೀಂಕೋರ್ಟಿನ ನಿರ್ದೇಶನದಂತೆ ಬೇಯರ್ ಮತ್ತು ಮಾನ್ಸೆಂಟೋ ಕಂಪನಿಗಳ ಸಹಯೋಗದಲ್ಲಿ ತರಲು ಹೊರಟಿರುವ ಕುಲಾಂತರಿ ಬೀಜ ರಾಷ್ಟ್ರೀಯ ನೀತಿಯನ್ನು ವಿರೋಧಿಸಿ ಹಮ್ಮಿಕೊಂಡಿರುವ ಗ್ರಾಮಾಂತರದ ಹ್ಯಾಂಡ್ ಪೋಸ್ಟ್ ನ ದೊಡ್ಡ ಹೊಸೂರಿನ ಎರಡನೇ ದಿನದ ಸತ್ಯಾಗ್ರಹ’ದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. ತ್ರೇತಾಯುಗದಲ್ಲಿ ರಾಮ ಸೀತೆಯೂ ಕೃಷಿ ಮಾಡಿದ್ದರು. ಭರತ ಖಂಡದಲ್ಲಿ ಕೃಷಿಗೆ ಪೂರಕವಾದ ವಾತಾವರಣವಿದೆ. ಇಲ್ಲಿನ ಕೃಷಿಗೆ ಶೇ.75 ರಷ್ಟು ಪ್ರಾಕೃತಿಕ ಬೆಂಬಲವಿದ್ದು, ಶೇ.25 ರಷ್ಟು ಮಾತ್ರವೇ ಮಾನವನ ಶ್ರಮವಿರುತ್ತದೆ. ಆದ್ದರಿಂದಲೇ ನಮ್ಮದು ಬಹುಪಾಲು ಕೃಷಿ ಪ್ರಧಾನವಾದ ಸಂಪದ್ಭರಿತ ರಾಷ್ಟ್ರ…
ಮುಂಬೈ : ಗನ್ ಮಿಸ್ ಫೈರ್ ಆಗಿ ಬಾಲಿವುಡ್ ನಟರೊಬ್ಬರು ಗಾಯಗೊಂಡ ಘಟನೆ ಇಂದು ಮುಂಜಾನೆ ನಡೆದಿದ್ದು, ಗನ್ ಸ್ವಚ್ಛಗೊಳಿಸುತ್ತಿದ್ದ ವೇಳೆ ಈ ಘಟನೆ ನಡೆದಿದೆ ಎಂದು ತಿಳಿದು ಬಂದಿದೆ. ಬಾಲಿವುಡ್ ನಟ ಗೋವಿಂದ್ ಅವರ ಕಾಲಿಗೆ ಗುಂಡೇಟು ತಗುಲಿದ್ದು, ಗನ್ ಮಿಸ್ ಫೈರ್ ಆದ ಪರಿಣಾಮ ಈ ಘಟನೆ ನಡೆದಿದೆ ಎನ್ನಲಾಗಿದೆ. ಆದರೆ ಈ ಬಗ್ಗೆ ನಟ ಗೋವಿಂದ್ ಹಾಗೂ ಕುಟುಂಬಸ್ಥರು ಯಾವುದೇ ಹೇಳಿಕೆ ನೀಡಿಲ್ಲ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಗೋವಿಂದ್ ಅವರ ಬಳಿ ಇರುವ ಗನ್ ಪರವಾನಗಿ ಹೊಂದಿದ ಗನ್ ಎಂದು ತಿಳಿದು ಬಂದಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296
ನವದೆಹಲಿ: ಕೆಲವೇ ತಿಂಗಳಲ್ಲಿ ಪೆಟ್ರೋಲ್, ಡೀಸೆಲ್ ಬೆಲೆ 20 ರೂಪಾಯಿ ಇಳಿಕೆಯಾಗುವ ಸಾಧ್ಯತೆ ಇದೆ ಎನ್ನಲಾಗಿದ್ದು, ಕೇಂದ್ರ ಸರ್ಕಾರ ವಾಹನ ಸವಾರರಿಗೆ ಸಿಹಿ ಸುದ್ದಿ ನೀಡಿದೆ. ದೇಶದ ಬಹುತೇಕ ಪೆಟ್ರೋಲ್ ಪಂಪ್ ಗಳಲ್ಲಿ ಶೀಘ್ರದಲ್ಲೇ ಎಥೆನಾಲ್ ಮಿಶ್ರಿತ ಪೆಟ್ರೋಲ್ ಲಭ್ಯವಾಗಲಿದೆ ಎಂದು ಸಾರಿಗೆ ಸಚಿವ ನಿತಿನ್ ಗಡ್ಕರಿ ಹೇಳಿದ್ದಾರೆ. ಇದರ ಬೆಲೆ ಸಾಮಾನ್ಯ ಪೆಟ್ರೋಲ್ ಗಿಂತ 20 ರೂಪಾಯಿ ಕಡಿಮೆ ಇರುತ್ತದೆ. ಅಂದರೆ ನಿಮ್ಮ ವಾಹನವು ಲೀಟರ್ ಗೆ 65 ರೂ. ಎಥೆನಾಲ್ ಅನ್ನು ಮುಖ್ಯವಾಗಿ ಕಬ್ಬಿನ ಬೆಳೆಯಿಂದ ಉತ್ಪಾದಿಸಲಾಗುತ್ತದೆ. 60ರಷ್ಟು ಎಥೆನಾಲ್ ಹಾಗೂ ಶೇ.40ರಷ್ಟು ವಿದ್ಯುತ್ ಬಳಸಿದರೆ ಲೀಟರ್ ಗೆ 20 ರೂ.ಗೆ ಪೆಟ್ರೋಲ್ ಸಿಗುತ್ತದೆ ಎಂದರು. ಖಾಸಗಿ ವಾಹಿನಿಯೊಂದಕ್ಕೆ ನೀಡಿರುವ ಹೇಳಿಕೆಯಲ್ಲಿ ಸಾರಿಗೆ ಸಚಿವ ನಿತಿನ್ ಗಡ್ಕರಿ ಅವರು ಟೊಯೊಟಾ ಕಂಪನಿಯು ಎಥೆನಾಲ್ ನಿಂದ ಚಲಿಸುವ ಕಾರನ್ನು ಮಾರುಕಟ್ಟೆಗೆ ಬಿಡುಗಡೆ ಮಾಡಿದೆ ಎಂದು ಹೇಳಿದ್ದಾರೆ. ಇದು ಕಬ್ಬಿನ ಎಥನಾಲ್ ನಿಂದ ಸಾಗುತ್ತದೆ. ನಾವು ಪ್ರತಿ ಲೀಟರ್ಗೆ ಅದರ ಚಾಲನೆಯ…
ಬೆಂಗಳೂರು: ಮುಡಾ ನಿವೇಶನ ಪಡೆದಿರುವುದು ಕಾನೂನುಬಾಹಿರವಲ್ಲ. ಕಾನೂನುಬಾಹಿರವಾಗಿದ್ದರೆ ಅಂದು ಬಿಜೆಪಿ ಸರ್ಕಾರವೇ ಇತ್ತು ಎಂದು ಬಿಜೆಪಿ ಶಾಸಕ ಎಸ್.ಟಿ.ಸೋಮಶೇಖರ್ ಹೇಳಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮತನಾಡಿದ ಅವರು, ರಾಜಕೀಯ ದುರುದ್ದೇಶದಿಂದ ಬಿಜೆಪಿಯವರು ಈ ರೀತಿ ಮಾಡುತ್ತಿದ್ದಾರೆ. ಸಿಎಂ ಸಿದ್ದರಾಮಯ್ಯ ಕಳಂಕವಿಲ್ಲದೇ ಇಷ್ಟು ವರ್ಷ ರಾಜಕಾರಣದಲ್ಲಿರುವವರು. ಹಾಗಾಗಿ ಅವರ ವಿರುದ್ಧ ಬಿಜೆಪಿ ನಾಯಕರೆಲ್ಲ ಸೇರಿ ವ್ಯವಸ್ಥಿತವಾಗಿ ಸಂಚು ರೂಪಿಸಿ ಈ ರೀತಿ ಮಾಡುತ್ತಿದ್ದಾರೆ ಎಂದು ಸ್ವಪಕ್ಷದ ನಾಯಕರ ವಿರುದ್ಧವೇ ಹೇಳಿಕೆ ನೀಡಿದರು. ಮುಡಾದಿಂದ 50:50 ನಿವೇಶನ ಹಂಚಿಕೆ ಕೇವಲ ಸಿಎಂ ಸಿದ್ದರಾಮಯ್ಯ ಅವರ ಪತ್ನಿಗೆ ಮಾತ್ರವಾಗಿಲ್ಲ. ಬಿಜೆಪಿ ನಾಯಕರ ಪತ್ನಿಯರೂ ಇದೇ ರೀತಿ ಮುಡಾ ನಿವೇಶನಗಳನ್ನು ಪಡೆದಿದ್ದಾರೆ. ಹಾಗಾದರೆ ಅವರು ಪಡೆದಿರುವುದೂ ಕಾನೂನುಬಾಹಿರವಾಗಬೇಕಲ್ಲ. ನೂರಾರು ಜನ ಮುಡಾದಿಂದ 50:50ರ ಸೈಟ್ ಪಡೆದುಕೊಂಡಿದ್ದಾರೆ. ಅಂದು ಬಿಜೆಪಿ ಸರ್ಕಾರ ಇದ್ದಾಗಲೇ ಸಿದ್ದರಾಮಯ್ಯ ಪತ್ನಿ ನಿವೇಶನಕ್ಕೆ ಮನವಿ ಮಾಡಿದ್ದರು. ಬಿಜೆಪಿ ಸರ್ಕಾರವೇ ಅವರಿಗೆ ನಿವೇಶನಕ್ಕೆ ಒಪ್ಪಿಗೆ ನೀಡಿ ನಿವೇಶನ ಕೊಟ್ಟಿದೆ. ಕಾನೂನುಬಾಹಿರ, ಹೀಗೆ ಸೈಟ್ ಕೊಡಲು ಆಗಲ್ಲ ಎನ್ನುವುದಾದರೆ…
ನವದೆಹಲಿ: ಕಾಶ್ಮೀರದಲ್ಲಿ ನಡೆಯುತ್ತಿರುವ ವಿಧಾನಸಭಾ ಚುನಾವಣೆಯಲ್ಲಿ ಜಮ್ಮು ಮತ್ತು ಕಾಶ್ಮೀರ ಜನರು ಹೆಚ್ಚಿನ ಸಂಖ್ಯೆಯಲ್ಲಿ ಮತ ಚಲಾಯಿಸಬೇಕು, ನಿಮ್ಮಿಂದ ರಾಜತ್ವ ಕಿತ್ತುಕೊಂಡವರಿಗೆ ಪಾಠ ಕಲಿಸಬೇಕು ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕರೆ ನೀಡಿದ್ದಾರೆ. ಎಕ್ಸ್ ಪೋಸ್ಟ್ ನಲ್ಲಿ ಈ ಬಗ್ಗೆ ಪೋಸ್ಟ್ ಮಾಡಿರುವ ಅವರು, ಜಮ್ಮು ಮತ್ತು ಕಾಶ್ಮೀರ ಚುನಾವಣೆಯ ಮೂರನೇ ಹಂತದ ಮತದಾನ ಪ್ರಾರಂಭವಾಗುತ್ತಿದ್ದಂತೆ, ಈ 40 ಅಸೆಂಬ್ಲಿ ಸ್ಥಾನಗಳಲ್ಲಿ ಜನರು ತಮ ಪ್ರಜಾಸತ್ತಾತಕ ಹಕ್ಕುಗಳನ್ನು ಹೆಚ್ಚಿನ ಸಂಖ್ಯೆಯಲ್ಲಿ ಚಲಾಯಿಸಲು ನಾನು ಒತ್ತಾಯಿಸುತ್ತೇನೆ ಎಂದು ಬರೆದುಕೊಂಡಿದ್ದಾರೆ. ಜಮ್ಮು ಮತ್ತು ಕಾಶ್ಮೀರದ ಜನರಿಂದ ರಾಜ್ಯತ್ವವನ್ನು ಕಿತ್ತುಕೊಂಡವರಿಗೆ ಪಾಠ ಕಲಿಸಲು ಇದು ಅಂತಿಮ ಅವಕಾಶವಾಗಿದೆ ಎಂದು ಅವರು ಹೇಳಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296
ಬೆಂಗಳೂರು: ರೇಣುಕಾಸ್ವಾಮಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಕರಣದ ಎ2 ಆರೋಪಿ ನಟ ದರ್ಶನ್ ಜಾಮೀನು ಅರ್ಜಿ ಸಲ್ಲಿಸಿದ್ದಾರೆ. ಆದ್ರೆ ಈ ಅರ್ಜಿಯ ವಿಚಾರಣೆ ಮತ್ತೆ ಅ.4ಕ್ಕೆ ಮುಂದೂಡಲಾಗಿದೆ. ಸೋಮವಾರ ಬೆಂಗಳೂರಿನ 57ನೇ ಸಿಟಿ ಸಿವಿಲ್ ನ್ಯಾಯಾಲಯ ಅರ್ಜಿ ವಿಚಾರಣೆ ಕೈಗೆತ್ತಿಕೊಂಡಿತು. ಈ ವೇಳೆ ದರ್ಶನ್ ಪರ ವಕೀಲರು ವಾದ ಮಂಡಿಸಲು ಸಮಯ ಅವಕಾಶ ಬೇಕೆಂದು ನ್ಯಾಯಾಧೀಶರಿಗೆ ಮನವಿ ಮಾಡಿದರು. ಇದನ್ನು ಮನ್ನಿಸಿದ ನ್ಯಾಯಾಲಯ ಮುಂದಿನ ಅರ್ಜಿ ವಿಚಾರಣೆಯನ್ನು ಅ.4ಕ್ಕೆ ಮುಂದೂಡಿತು. ಹೀಗಾಗಿ ದರ್ಶನ್ ಅವರು ಅ.4ರವರೆಗೆ ಜೈಲಿನಲ್ಲಿಯೇ ಇರಬೇಕಿದೆ. ಕೊಲೆ ಪ್ರಕರಣದಲ್ಲಿ ಪೊಲೀಸರು ವಿಚಾರಣೆಯನ್ನು ಪೂರ್ಣಗೊಳಿಸಿ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದ್ದಾರೆ. ತನಿಖೆ ಮುಗಿದ ಹಿನ್ನಲೆಯಲ್ಲಿ ತಮಗೆ ಜಾಮೀನು ನೀಡಬೇಕೆಂದು ನ್ಯಾಯಾಲಯಕ್ಕೆ ಮೇಲನವಿ ಅರ್ಜಿ ಸಲ್ಲಿಸಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296
ಬೆಂಗಳೂರು: ಎಣ್ಣೆ ಪಾರ್ಟಿ ವೇಳೆ ನಡೆದ ಜಗಳದಲ್ಲಿ ವ್ಯಕ್ತಿಯೊಬ್ಬನನ್ನು ಚಾಕುವಿನಿಂದ ಇರಿದು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಜ್ಞಾನಭಾರತಿ ಪೊಲೀಸ್ ಠಾಣೆ ವ್ಯಾಪ್ತಿಯ ಉಲ್ಲಾಳದ ಸೊನ್ನೇನಹಳ್ಳಿ ಬಳಿ ನಡೆದಿದೆ. ಹೈನುಗಾರಿಕೆ ಮಾಡುತ್ತಿದ್ದ ಮೂರ್ತಿ(52) ಕೊಲೆಯಾದ ವ್ಯಕ್ತಿ. ಫೈನಾನ್ಸ್ ವ್ಯವಹಾರ ಮಾಡುತ್ತಿದ್ದ ಕೀರ್ತಿ(26) ಹತ್ಯೆ ಆರೋಪಿಯಾಗಿದ್ದು, ಈತನನ್ನು ಪೊಲೀಸರು ಬಂಧಿಸಿದ್ದಾರೆ. ಸೊನ್ನೇನಹಳ್ಳಿಯ ಕನಕಭವನ ಸಮೀಪ ಮೃತ ಮೂರ್ತಿ ಅವರ ಸೋದರ ಶ್ರೀನಿವಾಸ್ ಅವರ ಮನೆಯಿದೆ. ಪಿತೃಪಕ್ಷ ನಿಮಿತ್ತ ಸಹೋದರನ ಮನೆಗೆ ಮೂರ್ತಿ ಹೋಗಿದ್ದರು..ಸಹೋದರನ ಮನೆ ಪಕ್ಕದಲ್ಲಿಯೇ ಪಾಳು ಬಿದ್ದ ಮನೆ ಹಾಗೂ ಖಾಲಿ ಜಾಗವಿದ್ದು ಅಲ್ಲಿ ಟೈಮ್ ಪಾಸ್ ಗಾಗಿ ಆಗಾಗ್ಗೆ ಸೇರಿಕೊಂಡು ಎಣ್ಣೆ ಪಾರ್ಟಿ ಸೇರಿದಂತೆ ಮೋಜು–ಮಸ್ತಿ ಮಾಡಲಾಗುತ್ತಿತ್ತು. ಇದರಲ್ಲಿ ಸ್ಥಳೀಯ ಕೆಲವರು ಕೂಡ ಸೇರಿಕೊಳ್ಳುತ್ತಿದ್ದರು. ನಿನ್ನೆ ಮೂರ್ತಿ ಅವರು ಸಹೋದರನ ಮನೆಗೆ ಹೋಗಿದ್ದಾಗ ರಾತ್ರಿ 12 ಗಂಟೆ ಸಂದರ್ಭದಲ್ಲಿ ಸುಮಾರು 10ಕ್ಕೂ ಹೆಚ್ಚು ಮಂದಿ ಸ್ಥಳೀಯರೊಂದಿಗೆ ಈ ಸ್ಥಳದಲ್ಲಿ ಎಣ್ಣೆ ಪಾರ್ಟಿ ಮಾಡಿದ್ದು, ಈ ವೇಳೆ ನನ್ನ ಲೋಟದಲ್ಲಿದ್ದ ಎಣ್ಣೆ…
ನವದೆಹಲಿ: ಶಾಸಕ ಗಾಲಿ ಜನಾರ್ಧನ ರೆಡ್ಡಿ ತವರು ಜಿಲ್ಲೆ ಬಳ್ಳಾರಿ ಪ್ರವೇಶಕ್ಕೆ ವಿಧಿಸಲಾಗಿದ್ದ ನಿರ್ಬಂಧವನ್ನು ಸುಪ್ರೀಂಕೋರ್ಟ್ ತೆರವು ಮಾಡಿದೆ. ಬಳ್ಳಾರಿಗೆ ತೆರಳಲು ಜನಾರ್ಧನ ರೆಡ್ಡಿ ನ್ಯಾಯಾಲಯದಿಂದ ಪೂರ್ವಾನುಮತಿ ಪಡೆಯಬೇಕಿತ್ತು. ಇದನ್ನು ಪ್ರಶ್ನಿಸಿ ಜನಾರ್ಧನ ರೆಡ್ಡಿ ಪರ ವಕೀಲರು ಸುಪ್ರೀಂ ಕೋರ್ಟ್ ಗೆ ಮೇಲ್ಮನವಿ ಅರ್ಜಿ ಸಲ್ಲಿಸಿದ್ದರು. ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್ ನ್ಯಾಯಮೂರ್ತಿಗಳಾದ ಎಂ.ಎಂ.ಸುಂದರೇಶ್ ನೇತೃತ್ವದ ದ್ವಿಸದಸ್ಯ ಪೀಠ, ಬಳ್ಳಾರಿ , ಕಡಪ ಮತ್ತು ಅನಂತಪುರ ಜಿಲ್ಲೆಗಳಿಗೆ ತೆರಳಲು ಹಾಕಿದ್ದ ನಿರ್ಬಂಧವನ್ನು ತೆರವು ಮಾಡಿತು. ಈ ಹಿಂದೆ ರೆಡ್ಡಿ ತಮ್ಮ ಪುತ್ರಿಯ ವಿವಾಹ ಹಾಗೂ ಹೆರಿಗೆ ಸಂದರ್ಭದಲ್ಲಿ ಮಾತ್ರ ಬಳ್ಳಾರಿ ಪ್ರವೇಶಕ್ಕೆ ನ್ಯಾಯಾಲಯ ಅನುಮತಿ ನೀಡಿತ್ತು. ಅವರು ಜಿಲ್ಲೆಗೆ ಬಂದರೆ ಅಕ್ರಮ ಗಣಿಕಗಾರಿಕೆ ಪ್ರಕರಣದ ತನಿಖೆ ನಡೆಸುತ್ತಿರುವ ಅಧಿಕಾರಿಗಳ ಮೇಲೆ ಪ್ರಭಾವ ಬೀರಬಹುದೆಂಬ ಹಿನ್ನಲೆಯಲ್ಲಿ ಬಳ್ಳಾರಿ ಜಿಲ್ಲೆಗೆ ಕಾಲಿಡದಂತೆ ನಿರ್ಬಂಧ ಹಾಕಲಾಗಿತ್ತು. ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್…
ಪ್ರಧಾನಿ ನರೇಂದ್ರಮೋದಿ ಅವರು ಭಾರತವನ್ನು ವಿಶ್ವ ಮುಂಚೂಣಿಯಲ್ಲಿ ನಂಬರ್ 1 ಸ್ಥಾನಕ್ಕೆ ಕೊಂಡೊಯ್ಯಬೇಕು, ಅದನ್ನು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಅಭಿನಂದಿಸುವುದನ್ನು ನಾವು ನೋಡಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದ್ದಾರೆ. ತಮ್ಮ ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಈ ಬಗ್ಗೆ ಬರೆದುಕೊಂಡಿರುವ ಅವರು, ಹಿರಿಯರಾದ ಮಲ್ಲಿಕಾರ್ಜುನ ಖರ್ಗೆ ಅವರು ನೂರ್ಕಾಲ ಬಾಳಬೇಕು, ಸುದೀರ್ಘ ರಾಜಕೀಯ ಜೀವನ ಸಾಗಿಸಬೇಕು ಎನ್ನುವುದು ನಮ ಪ್ರಾಮಾಣಿಕ ಅಪೇಕ್ಷೆ. ಖರ್ಗೆ ಅವರ ಕಣ್ಣ ಮುಂದೆಯೇ ಹೆಮ್ಮೆಯ ಪ್ರಧಾನಿ ನರೇಂದ್ರ ಜೀ ಅವರು ಭಾರತವನ್ನು ವಿಶ್ವ ಮುಂಚೂಣಿಯಲ್ಲಿ ನಂಬರ್ 1 ಸ್ಥಾನಕ್ಕೆ ಕೊಂಡೊಯ್ಯಬೇಕು, ಅದನ್ನು ಖರ್ಗೆ ಅವರು ಅಭಿನಂದಿಸುವುದನ್ನು ನೋಡಬೇಕೆಂಬುದು ನಮ ಹೆಬ್ಬಯಕೆ ಎಂದು ಅವರು ಖರ್ಗೆ ಟಾಂಗ್ ನೀಡಿದ್ದಾರೆ. ಕೆಳಗಿಳಿಸುವವರ ವ್ಯೂಹ ಬೇಧಿಸಿ ಮೂರನೆ ಬಾರಿಯೂ ಮೇಲೆದ್ದು ನಿಂತ ಪ್ರಧಾನಿ ಮೋದಿಯವರ ಈವರೆಗಿನ ನಡೆ, ಸಾಧಿಸಿರುವ ಸಾಧನೆಗಳು ಶತಕೋಟಿ ಭಾರತೀಯರ ಕನಸನ್ನು ನನಸಾಗಿಸುತ್ತಿದೆ ಈ ನಿಟ್ಟಿನಲ್ಲಿ ಭಾರತ ಜಗತ್ತಿನ ಮುಂದೆ ನಂ.1 ಸ್ಥಾನದಲ್ಲಿ ತಲೆ…
ಬೆಂಗಳೂರು: ಮೈಸೂರಿನ ಮುಡಾ ಭೂಸ್ವಾಧೀನ ನಡೆಸದೆ ವಶಕ್ಕೆ ಪಡೆದಿದ್ದ ಜಮೀನಿಗೆ ಪರಿಹಾರ ರೂಪದಲ್ಲಿ ನೀಡಿದ್ದ ನಿವೇಶನಗಳನ್ನು ನನ್ನ ಪತ್ನಿ ಪಾರ್ವತಿ ಹಿಂದಿರುಗಿಸಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ. ತಮ್ಮ ಪತ್ನಿ ಮೂಡಾಕ್ಕೆ ಜಾಮೀನು ವಾಪಸ್ ಪಡೆಯಲು ಮನವಿ ಸಲ್ಲಿಸಿ ಬರೆದಿರುವ ಪತ್ರವನ್ನು ಹಂಚಿಕೊಂಡಿರುವ ಸಿದ್ದರಾಮಯ್ಯ, ನನ್ನ ವಿರುದ್ದ ರಾಜಕೀಯ ದ್ವೇಷ ಸಾಧನೆಗಾಗಿ ವಿರೋಧ ಪಕ್ಷಗಳು ಸುಳ್ಳು ದೂರನ್ನು ಸೃಷ್ಟಿಸಿ ನನ್ನ ಕುಟುಂಬವನ್ನು ವಿವಾದಕ್ಕೆ ಎಳೆದು ತಂದಿರುವುದು ರಾಜ್ಯದ ಜನತೆಗೂ ತಿಳಿದಿದೆ ಎಂದು ಅವರು ಹೇಳಿದ್ದಾರೆ. ಈ ಅನ್ಯಾಯಕ್ಕೆ ತಲೆಬಾಗದೆ ಹೋರಾಟ ಮಾಡಬೇಕೆಂಬುದು ನನ್ನ ನಿಲುವಾಗಿತ್ತು. ಆದರೆ ನನ್ನ ವಿರುದ್ಧ ನಡೆಯುತ್ತಿರುವ ರಾಜಕೀಯ ಷಡ್ಯಂತ್ರದಿಂದ ನೊಂದಿರುವ ನನ್ನ ಪತ್ನಿ ಈ ನಿವೇಶನಗಳನ್ನು ಹಿಂದಿರುಗಿಸುವ ನಿರ್ಧಾರ ಕೈಗೊಂಡು, ನನಗೂ ಆಶ್ಚರ್ಯ ಉಂಟು ಮಾಡಿದ್ದಾರೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ. ನನ್ನ ನಾಲ್ಕು ದಶಕಗಳ ಸುದೀರ್ಘ ರಾಜಕಾರಣದಲ್ಲಿ ಎಂದೂ ಕೂಡಾ ಮಧ್ಯೆಪ್ರವೇಶಿಸದೆ ಕುಟುಂಬಕ್ಕಷ್ಟೆ ಸೀಮಿತವಾಗಿದ್ದ ನನ್ನ ಪತ್ನಿ ನನ್ನ ವಿರುದ್ಧದ ದ್ವೇಷದ ರಾಜಕಾರಣಕ್ಕೆ ಬಲಿಯಾಗಿ ಮಾನಸಿಕವಾಗಿ ಹಿಂಸೆ…