Author: admin

ಚಿತ್ರದುರ್ಗ: ಕೆಎಸ್ ಆರ್ ಟಿಸಿ ಬಸ್ ವೊಂದು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಪರಿಣಾಮ 50ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡಿರುವ ಘಟನೆ ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲ್ಲೂಕಿನ ಓಬಳಾಪುರ ತಾಂಡದಲ್ಲಿ ಸೋಮವಾರ ಬೆಳಗ್ಗೆ ನಡೆದಿದೆ. ಬಸ್ಸಿನಲ್ಲಿ ಸುಮಾರು ಐವತ್ತಕ್ಕೂ ಹೆಚ್ಚು ಮಂದಿ ಪ್ರಯಾಣಿಕರಿದ್ದರು ಎಂದು ಹೇಳಲಾಗಿದ್ದು ಓಬಳಾಪುರ ತಾಂಡ ವಾಲಿ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಕೂಡಲೇ ಸ್ಥಳೀಯರು ಬಸ್ಸಿನಲ್ಲಿದ್ದ ವಿದ್ಯಾರ್ಥಿಗಳನ್ನು ಹಾಗೂ ಇತರ ಪ್ರಯಾಣಿಕರನ್ನು ರಕ್ಷಣೆ ಮಾಡಿದ್ದಾರೆ, ಘಟನೆಯಿಂದ ಹಲವರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಗಾಯಾಳುಗಳನ್ನು ಹಿರಿಯೂರು ತಾಲ್ಲೂಕು ಆಸ್ಪತ್ರೆಗೆ ದಾಖಲು ಮಾಡಲಾಗಿದ್ದು ಘಟನಾ ಸ್ಥಳಕ್ಕೆ ಹಿರಿಯೂರು ಗ್ರಾಮಾಂತರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

Read More

ಅಕ್ಟೋಬರ್ ಮೊದಲ ವಾರದಲ್ಲಿ ಬುಧಾದಿತ್ಯ ಪ್ರಭಾವಶಾಲಿಯಾಗಿರಲಿದೆ. ಈ ಶುಭ ಯೋಗದಿಂದಾಗಿ ಯಾವ ರಾಶಿಗಳ ಜನರಿಗೆ ಈ ವಾರ ಅದೃಷ್ಟಶಾಲಿಯಾಗಿರಲಿದೆ..? ವಾರದ 5 ಅದೃಷ್ಟದ ರಾಶಿ ಚಿಹ್ನೆಗಳು ಯಾವುವು ಎಂದು ತಿಳಿಯೋಣ…! ಶ್ರೀ ಕ್ಷೇತ್ರ ಕಟೀಲು ದುರ್ಗಾಪರಮೇಶ್ವರೀ ಜ್ಯೋತಿಷ್ಯ ಪೀಠಂ ದೈವಜ್ಞ ಪಂಡಿತ್ ಕೃಷ್ಣ ಭಟ್ ಪ್ರಧಾನ ತಾಂತ್ರಿಕ್ ಹಾಗೂ ಮಾಂತ್ರಿಕರು  ಸ್ತ್ರೀ ಪುರುಷ ವಶೀಕರಣ ಸ್ಪೆಷಲಿಸ್ಟ್ ನನಗೆ ಒಂದೇ ಕರೆ ಮಾಡಿದರೆ ನಿಮ್ಮ ಇಷ್ಟಪಟ್ಟವರು ನಿಮ್ಮಂತೆ 9535156490 ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆ ಉತ್ತರಿಸಬಹುದು ಏಷ್ಟೇ ಪೂಜೆ ಪ್ರಯತ್ನ ಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..?ನಿಮ್ಮ ಯಾವುದೇಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ 2 ದಿನಗಳಲ್ಲಿ ಪರಿಹಾರ ಶತಸಿದ್ಧ ಧನವಶ, ಜನವಶ, ಶತ್ರುನಾಶ, ಸ್ತ್ರೀ- ಪುರುಷ ವಶೀಕರಣ, ದಿಗ್ಭಂಧನ, ಸ್ತಂಭನ, ವುಚ್ಛಾಟನೆಯಂತಹ ಸಮಸ್ಯೆಗಳಿಗೆ ವಿಶೇಷ ಪರಿಹಾರ ತಿಳಿಸುತ್ತಾರೆ 9535156490 ಅಕ್ಟೋಬರ್ ತಿಂಗಳ ಮೊದಲ…

Read More

ದುಬೈ: ಬಾಲಿವುಡ್ ಬಾದ್ ಶಾ ಶಾರೂಕ್ ಖಾನ್ ಅವರಿಗೆ ಪ್ರತಿಷ್ಠಿತ ಐಫಾ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಉತ್ತಮ ನಟ ಪ್ರಶಸ್ತಿ ನೀಡಲಾಗಿದೆ. ಉತ್ತಮ ನಟಿ ಪ್ರಶಸ್ತಿಯನ್ನು ರಾಣಿಮುಖರ್ಜಿ ಸ್ವೀಕರಿಸಿದರು. ದೇಶ ಪ್ರೇಮ ಬಿಂಬಿಸುವ ಜವಾನ್ ಚಿತ್ರದಲ್ಲಿ ತಂದೆ ಹಾಗೂ ಮಗನ ಪಾತ್ರದಲ್ಲಿ ಗಮನ ಸೆಳೆದಿದ್ದ ಶಾರೂಕ್ ಖಾನ್, ಅತ್ಯುತ್ತಮ ಪ್ರಶಸ್ತಿಗೆ ಪಾತ್ರರಾಗಿದ್ದಾರೆ. ಅನಿಮಲ್ ಚಿತ್ರದಲ್ಲಿನ ನಕಾರಾತಕ ನಟನೆಗಾಗಿ ನಟ ಬಾಬಿಡಿಯೋಲ್ ಗೆ ಉತ್ತಮ ಖಳನಟ ಪ್ರಶಸ್ತಿ, ಇದೇ ಚಿತ್ರಕ್ಕಾಗಿ ಅನಿಲ್ ಕಪೂರ್ ಗೆ ಉತ್ತಮ ಪೋಷಕ ನಟ ಪ್ರಶಸ್ತಿ ಒಲಿದುಬಂದಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

Read More

ಚಂಡೀಗಢ: ಹಿಮಾಚಲ ಪ್ರದೇಶ ಮತ್ತು ಕರ್ನಾಟಕದಲ್ಲಿ ರಾಹುಲ್ ಗಾಂಧಿ ಅವರ ಚುನಾವಣ ಗ್ಯಾರಂಟಿಗಳು ಫಸಲು ಪಡೆದಿವೆ, ಆದರೆ ಅವರಿಗೆ ಈಗ ತಮ್ಮ ಗ್ಯಾರಂಟಿಗಳನ್ನು ಈಡೇರಿಸಲು ಸಾಧ್ಯವಾಗುತ್ತಿಲ್ಲ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಹರ್ಯಾಣ ವಿಧಾನ ಸಭಾ ಚುನಾವಣಾ ಪ್ರಚಾರದಲ್ಲಿ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ ಅವರು, ಬಿಜೆಪಿ ಈಡೇರಿಸಲು ಸಾಧ್ಯವಾಗದ ಯಾವುದೇ ಭರವಸೆ ನೀಡುವುದಿಲ್ಲ. ರಾಹುಲ್ ಬಾಬಾ ಮತ್ತು ಕಂಪನಿ ಅಭಿವೃದ್ಧಿಯನ್ನು ಕೈಗೊಳ್ಳಲು ಸಾಧ್ಯವಿಲ್ಲ. ಹರ್ಯಾಣದ ಅಭಿವೃದ್ಧಿಯನ್ನು ಖಚಿತಪಡಿಸುವುದು ಡಬಲ್ ಇಂಜಿನ್ ಸರಕಾರ. ನಾವು ದೇಶದ ಗಡಿಯನ್ನು ಭದ್ರಪಡಿಸುತ್ತೇವೆ, ನಾವು ಮೀಸಲಾತಿಯನ್ನು ರಕ್ಷಿಸುತ್ತೇವೆ ಮತ್ತು 370 ನೇ ವಿಧಿಯನ್ನು ಹಿಂತಿರುಗಿಸಲು ಎಂದಿಗೂ ಅನುಮತಿಸುವುದಿಲ್ಲ ಎಂದು ಹೇಳಿದರು. ವಕ್ಫ್ ಮಂಡಳಿಯಲ್ಲಿನ ಪ್ರಸ್ತುತ ಶಾಸನದಲ್ಲಿ ಸಮಸ್ಯೆ ಇದೆ. ಸಂಸತ್ತಿನ ಚಳಿಗಾಲದ ಅಧಿವೇಶನದಲ್ಲಿ ನಾವು ಅದನ್ನು ತಿದ್ದುಪಡಿ ಮಾಡುತ್ತೇವೆ ಎಂದು ಅವರು ಹೇಳಿದರು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ…

Read More

ಹಿಜ್ಬುಲ್ಲಾ ಮುಖ್ಯಸ್ಥ ಶೇಕ್ ಹಸನ್ ನಸ್ರಲ್ಲಾ ಇಸ್ರೇಲ್ ಮಿಲಿಟರಿಯ ದಾಳಿಗೆ ಸಾವನ್ನಪ್ಪಿದ್ದಾನೆ. ಇದು ಮತ್ತೊಂದು ವಿಶ್ವ ಯುದ್ಧಕ್ಕೆ ಕಾರಣವಾಗುತ್ತಾ? ಅನ್ನೋ ಚರ್ಚೆಗೆ ಕಾರಣವಾಗಿದೆ. ಈ ನಡುವೆ ಲೆಬನಾನ್ ಜನರು ಹಿಜ್ಬುಲ್ಲಾ ಮುಖ್ಯಸ್ಥ ಶೇಕ್ ಹಸನ್ ನಸ್ರಲ್ಲಾ ಸಾವಿನ ಸುದ್ದಿಯನ್ನ ನೋವಿನಿಂದ ಸ್ವೀಕರಿಸಿದ್ದಾರೆ. ಶೇಕ್ ಹಸನ್ ನಸ್ರಲ್ಲಾ ಸಾವಿನ ಬಗ್ಗೆ ಸುದ್ದಿ ಓದುತ್ತಿದ್ದ ನ್ಯೂಸ್ ಆ್ಯಂಕರ್ ದುಃಖದಿಂದ ಗದ್ಗದಿತರಾದ ವಿಡಿಯೋ ವೈರಲ್ ಆಗಿದೆ. ಶೇಕ್ ಹಸನ್ ನಸ್ರಲ್ಲಾ ಸಾವಿನ ಸುದ್ದಿ ಓದುವಾಗ ನ್ಯೂಸ್ ಆ್ಯಂಕರ್ ಕಣ್ಣೀರು ಹಾಕಿದ್ದಾರೆ. ಈ ವಿಡಿಯೋ ಇದೀವ ವ್ಯಾಪಕ ವೈರಲ್ ಆಗಿದೆ. ಹಿಜ್ಬುಲ್ಲಾ ಮತ್ತು ಇಸ್ರೇಲ್ ನಡುವೆ ಶತ್ರುತ್ವ ಇಂದು ನಿನ್ನೆಯದ್ದಲ್ಲ. ಇಬ್ಬರ ನಡುವೆ ಹತ್ತಾರು ವರ್ಷಗಳಿಂದ ಇದೇ ರೀತಿ ಕಿತ್ತಾಟ ಇದ್ದು, ಒಬ್ಬರ ಮೇಲೊಬ್ಬರು ದಾಳಿ ಮಾಡಿದ್ದಾರೆ. ಹೀಗಿದ್ದಾಗ ದಿಢೀರ್ ಇಸ್ರೇಲ್ ಸೇನೆ ಲೆಬನಾನ್ ದಕ್ಷಿಣ ಭಾಗದ ಮೇಲೆ ಮುಗಿಬಿದ್ದಿದ್ದು, ಈ ಭೀಕರ ದಾಳಿಗೆ ಮಧ್ಯಪ್ರಾಚ್ಯ ನಲುಗಿ ಹೋಗಿದೆ. ಪರಿಸ್ಥಿತಿ ಹೀಗಿದ್ದಾಗಲೇ ಹಿಜ್ಬುಲ್ಲಾ ಮುಖ್ಯಸ್ಥ ಶೇಕ್ ಹಸನ್…

Read More

ಬೆಂಗಳೂರು: ಕುಮಾರಸ್ವಾಮಿ ಅವರು ಏನು ಮಾತನಾಡುತ್ತಾರೆ ಎಂಬುದು ಅವರಿಗೇ ಗೊತ್ತಿರುವುದಿಲ್ಲ ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಲೇವಡಿ ಮಾಡಿದ್ದಾರೆ. ಲೋಕಾಯುಕ್ತ ಎಡಿಜಿಪಿ ಚಂದ್ರಶೇಖರ್ ವಿಚಾರ ಗೊತ್ತಿದೆ. ಕೆಪಿಸಿಸಿ ಕಚೇರಿಯಿಂದಲೇ ಪತ್ರ ಬಹಿರಂಗವಾಗಿದೆ ಎಂಬ ಹೆಚ್.ಡಿ.ಕೆ. ಹೇಳಿಕೆಗೆ ಕುಮಾರಸ್ವಾಮಿ ತಿರುಗೇಟು ನೀಡಿದರು. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಡಿಸಿಎಂ, ಕೆಪಿಸಿಸಿ ಕಚೇರಿಗೂ ಲೋಕಾಯುಕ್ತ ಎಡಿಜಿಪಿ ಚಂದ್ರಶೇಖರ್ ಅವರಿಗೂ ಏನು ಸಂಬಂಧ? ಎಂದು ಪ್ರಶ್ನಿಸಿದರು. ನಾನು ನಿನ್ನೆ ಊರಿನಲ್ಲೇ ಇರಲಿಲ್ಲ. ಸಾತನೂರು, ಕನಕಪುರದಲ್ಲಿ ಕ್ಷೇತ್ರದ ಕೆಲಸ ಸಂಬಂಧ ಪ್ರವಾಸ ಕೈಗೊಂಡಿದ್ದೆ. ಕುಮಾರಸ್ವಾಮಿ ಅವರು ಕೆಪಿಸಿಸಿ ನೆನೆಸಿಕೊಂಡರೆ ನಾನು ಏನು ತಾನೇ ಮಾತನಾಡಲು ಸಾಧ್ಯ? ಎಂದರು. ಕುಮಾರಸ್ವಾಮಿ ತಮ್ಮ ಬಳಿ 7 ಸಚಿವರ ಅಕ್ರಮಗಳ ಬಗ್ಗೆ ದಾಖಲೆಗಳಿವೆ ಎಂದು ಹೇಳುತ್ತಿದ್ದಾರೆ. ಅವರ ಬಳಿ ದಾಖಲೆಗಳು ಇದ್ದರೆ ಬಿಡುಗಡೆ ಮಾಡಲಿ. ಚಂದ್ರಶೇಖರ್ ಅವರನ್ನು ನಾನು ನೋಡಿಯೂ ಇಲ್ಲ, ಮಾತನಾಡಿಯೂ ಇಲ್ಲ, ನನಗೆ ಅವರು ಸಿಕ್ಕಿಯೂ ಇಲ್ಲ ಗೊತ್ತೂ ಇಲ್ಲ ಎಂದು ಡಿಕೆಶಿ ಹೇಳಿದರು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು…

Read More

ನವದೆಹಲಿ: ಚುನಾವಣಾ ಬಾಂಡ್ ಪ್ರಕರಣಕ್ಕೆ ಸಂಬಂಧಿಸಿದಂತೆ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ವಿರುದ್ಧ ಬೆಂಗಳೂರಿನಲ್ಲಿ ಎಫ್ ಐಆರ್ ದಾಖಲಾಗಿದೆ. ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಕಾಂಗ್ರೆಸ್ ಒತ್ತಾಯಿಸಿದೆ. ಕಾಂಗ್ರೆಸ್ ವಕ್ತಾರ, ಹಿರಿಯ ವಕೀಲ ಅಭಿಷೇಕ್ ಮನು ಸಿಂಘ್ವಿ ಹಾಗೂ ಪಕ್ಷದ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಬಿಜೆಪಿಯು ಪ್ರಜಾಪ್ರಭುತ್ವವನ್ನು ಕಡೆಗಣಿಸಿದೆ. ಇಬಿಎಸ್ (ಎಲೆಕ್ಟೋರಲ್ ಬಾಂಡ್ ಸ್ಕೀಮ್) ಎಂದರೆ, ಎಕ್ಸ್ ಟಾರ್ಷನ್ ಬಿಜೆಪಿ ಸ್ಕೀಮ್ (ಬಿಜೆಪಿಯ ಸುಲಿಗೆ ಯೋಜನೆ) ಎಂದು ಅಭಿಷೇಕ್ ಮನು ಸಿಂಘ್ವಿ ಲೇವಡಿ ಮಾಡಿದರು. ಚುನಾವಣಾ ಬಾಂಡ್ಗಳ ಮೂಲಕ ನಾಲ್ಕು ರೀತಿಯಲ್ಲಿ ಸುಲಿಗೆ ಮಾಡುವ ಪಿತೂರಿ ಮಾಡಲಾಗಿತ್ತು. ಅವುಗಳೆಂದರೆ: ಅನುಕೂಲ ಮಾಡಿಕೊಡುವ ಮುಂಚೆ ಮಾಡುವ ಸುಲಿಗೆ, ಅನುಕೂಲ ಮಾಡಿಕೊಟ್ಟ ಮೇಲೆ ಸುಲಿಗೆ ಮಾಡುವುದು, ಇ.ಡಿ, ಐ.ಟಿ ದಾಳಿಗೂ ಮುನ್ನ ಮಾಡುವ ಸುಲಿಗೆ, ನಕಲಿ ಕಂಪನಿಗಳ ಮೂಲಕ ಮಾಡುವ ಸುಲಿಗೆ. ಹೀಗೆ ವಿವಿಧ ರೀತಿಯಲ್ಲಿ ಉದ್ಯಮಿಗಳಿಂದ ಸುಲಿಗೆ ಮಾಡಲಾಗಿದೆ ಎಂದು ಜೈರಾಮ್ ರಮೇಶ್ ಹೇಳಿದರು. ಈ ಯೋಜನೆ…

Read More

ಹುಬ್ಬಳ್ಳಿ: ಹುಬ್ಬಳ್ಳಿಯ ಗೋಕುಲ ರಸ್ತೆಯಲ್ಲಿರುವ ವಿಮಾನ ನಿಲ್ದಾಣದಲ್ಲಿ ಪ್ರಯಾಣಿಕ ಜನದಟ್ಟಣೆಯ ಭವಿಷ್ಯ ದೃಷ್ಟಿಯಿಂದ ಇಟ್ಟುಕೊಂಡು ಕೇಂದ್ರ ಸರ್ಕಾರ ಹೊಸ ಟರ್ಮಿನಲ್ ಸ್ಥಾಪನೆಗೆ ಅನುಮೋದನೆ ನೀಡಿತ್ತು. ಕಟ್ಟಡ ನಿರ್ಮಾಣದ ಕಾಮಗಾರಿ ಕೆಲಸ ಬರದಿಂದ ಸಾಗಿದೆ. ಇದು ಈ ಏರ್ ಪೋರ್ಟ್‌ಗೆ ಅಂತಾರಾಷ್ಟ್ರೀಯ ಮೆರಗು ನೀಡಲಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹೇಳಿದ್ದಾರೆ. ವಿಮಾನ ನಿಲ್ದಾಣದ ಟರ್ಮಿನಲ್ ಹೊಸ ಕಟ್ಟಡ ಕಾಮಗಾರಿಯ ಪ್ರಗತಿ ವೀಕ್ಷಿಸಿ ಮಾತನಾಡಿದ ಅವರು, ವಿಮಾನ ನಿಲ್ದಾಣದ ಅಧಿಕಾರಿಗಳ ಜೊತೆಗೆ ಪರಿಶೀಲನಾ ಸಭೆ ನಡೆಸಿ ಬಳಿಕ ಯೋಜನೆ ವಿವರ ಕೊಟ್ಟರು. ಹುಬ್ಬಳ್ಳಿಯಲ್ಲಿ ಸದ್ಯ ವಾರ್ಷಿಕ 50,000 ಜನರ ನಿರ್ವಹಣೆಗೆ ಆಗುವಷ್ಟು ವಿಶಾಲವಾಗಿ ಟರ್ಮಿನಲ್ ಇದೆ. ಭವಿಷ್ಯ ದೃಷ್ಟಿಯಿಂದ ಈ ನಿಲ್ದಾಣದಲ್ಲಿ ಹೊಸ ಟರ್ಮಿನಲ್ ಹುಬ್ಬಳ್ಳಿ ನಿರ್ಮಿಸಲಾಗುತ್ತಿದೆ. ನಿಲ್ದಾಣಕ್ಕೆ ಅಗತ್ಯವಾದ ಸೌಕರ್ಯಗಳನ್ನು ಒದಗಿಸುವ ಜೊತೆಗೆ ಮೇಲ್ದರ್ಜೆ ಸೌಲಭ್ಯ ನೀಡಲಿದ್ದೇವೆ. ಇದರಿಂದ ಇಡೀ ಉತ್ತರ ಕರ್ನಾಟಕ ಭಾಗದ ಅಭಿವೃದ್ಧಿ ಪಥ ವೇಗ ಪಡೆಯಲಿದೆ ಎಂದು ಅವರು ವಿವರಿಸಿದರು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು…

Read More

ಜಮ್ಮು & ಕಾಶ್ಮೀರ: ಭಾಷಣ ಮಾಡುತ್ತಿರುವಾಗಲೇ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕುಸಿದು ಬಿದ್ದಿರುವ ಘಟನೆ ಜಮ್ಮು & ಕಾಶ್ಮೀರದ ಕಥುವಾದಲ್ಲಿ ನಡೆದಿದೆ. ವೇದಿಕೆ ಭಾಷಣ ಮಾಡುತ್ತಿದ್ದ ಅವರ ಧ್ವನಿಯು ತೀವ್ರವಾಗಿ ಕಟ್ಟಿಕೊಂಡಿದ್ದು, ಈ ವೇಳೆ ಅವರು ಮಾತನಾಡಲು ಆಗದಷ್ಟು ಆಯಾಸ ಅನುಭವಿಸಿದರು. ಬಳಿಕ ಕೂಡಲೇ ವೇದಿಕೆ ಮೇಲಿದ್ದ ಕಾಂಗ್ರೆಸ್ ನಾಯಕರು ಹಾಗೂ ಖರ್ಗೆ ಅವರ ಭದ್ರತಾ ಸಿಬ್ಬಂದಿ ಅವರ ನೆರವಿಗೆ ಬಂದಿದ್ದು, ಕುಡಿಯಲು ನೀರು ಕೊಟ್ಟರು. ಬಳಿಕ ಖರ್ಗೆ ಅವರು ಕುಳಿತುಕೊಂಡು ಸುಧಾರಿಸಿಕೊಂಡರು. ಬಳಿಕ ಮತ್ತೆ ಭಾಷಣ ಮಾಡಲು ಮುಂದಾದಾಗಲೂ ತೀವ್ರ ಆಯಾಸವಾಗಿದೆ. ಸದ್ಯ ಇದೀಗ ಖರ್ಗೆಯವರ ಆರೋಗ್ಯ ಸ್ಥಿರವಾಗಿದೆ ಎನ್ನುವ ಮಾಹಿತಿ ಲಭ್ಯವಾಗಿದೆ. ಬಿಜೆಪಿಯನ್ನು ಗುರಿಯಾಗಿಟ್ಟುಕೊಂಡು ಮಾತನಾಡಿದ ಮಲ್ಲಿಕಾರ್ಜುನ್ ಖರ್ಗೆ ಅವರು, ಬಿಜೆಪಿಗರು ಎಂದಿಗೂ ಚುನಾವಣೆ ನಡೆಸಲು ಬಯಸುವುದಿಲ್ಲ. ಆದರೆ ಅವರು ಬಯಸಿದರೆ, ಅದನ್ನು ಒಂದು ಅಥವಾ ಎರಡು ವರ್ಷಗಳಲ್ಲಿ ಮಾಡಬಹುದಿತ್ತು. ಆದರೆ ಸುಪ್ರೀಂ ಕೋರ್ಟ್ ಆದೇಶದ ನಂತರ ಅವರು ಚುನಾವಣೆಗೆ ತಯಾರಿ ಆರಂಭಿಸಿದರು. ಅವರು ಚುನಾವಣೆಯನ್ನು ಬಯಸಿರಲಿಲ್ಲ…

Read More

ಚಂಡೀಗಢ: ಕಾಂಗ್ರೆಸ್ ಎಂದರೆ ಭ್ರಷ್ಟಾಚಾರ, ದುರಾಡಳಿತ, ಅಪರಾಧೀಕರಣ ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡಾ ಭಾನುವಾರ ವಾಗ್ದಾಳಿ ನಡೆಸಿದ್ದಾರೆ. ಹರಿಯಾಣ ವಿಧಾನಸಭೆ ಚುನಾವಣೆ ಹಿನ್ನೆಲೆ ಚುನಾವಣಾ ರ‍್ಯಾಲಿಯಲ್ಲಿ ಮಾತನಾಡಿದ ಅವರು, ಎರಡೂ ವರ್ಷಗಳಿಂದ ಅಧಿಕಾರಿದಲ್ಲಿದ್ದರೂ ಚುನಾವಣೆ ಸಂದರ್ಭದಲ್ಲಿ ನೀಡಲಾಗಿದ್ದ ಭರವಸೆಗಳನ್ನು ಈಡೇರಿಸಲು ಈವರೆಗೂ ಸಾಧ್ಯವಾಗಲಿಲ್ಲ. ಕಾಂಗ್ರೆಸ್ ನಾಯಕರು ಕೇವಲ ಹಗರಣಗಲ್ಲಿ ತೊಡಗಿದ್ದಾರೆ. ರೈತರ ಭೂಮಿಗಳನ್ನೂ ಕಬಳಿಸಿದ್ದಾರೆ ಎಂದು ಕಿಡಿಕಾರಿದ್ದಾರೆ. ಕಾಂಗ್ರೆಸ್ ಯಾವ ಹಗರಣದಲ್ಲಿ ಭಾಗಿಯಾಗಿಲ್ಲ?, ಕಲ್ಲಿದ್ದಲು ಹಗರಣ, ಜಲಾಂತರ್ಗಾಮಿ ಹಗರಣ, ಅಕ್ಕಿ ಹಗರಣ, ಟ್ಯಾಂಕ್ ಹಗರಣ, ಹೆಲಿಕಾಪ್ಟರ್ ಹಗರಣ, 2-ಜಿ ಹಗರಣ ಸೇರಿದಂತೆ ಪ್ರತಿಯೊಂದು ಹಗರಣದಲ್ಲೂ ಭಾಗಿಯಾಗುವ ಮೂಲಕ ಭ್ರಷ್ಟಾಚಾರದಲ್ಲೇ ತೊಡಗಿದೆ ಎಂದು ವ್ಯಂಗ್ಯವಾಡಿದರು. ಹತ್ತು ವರ್ಷಗಳ ಹಿಂದೆ ಭಾರತವನ್ನು ಭ್ರಷ್ಟ ರಾಷ್ಟ್ರ ಎಂದು ಕರೆಯಲಾಗಿತ್ತು, ಆದರೆ ಪ್ರಧಾನಿ ನರೇಂದ್ರ ಮೋದಿಯವರ ನಾಯಕತ್ವದಲ್ಲಿ ಭಾರತ ವಿಶ್ವದ ಆರ್ಥಿಕತೆಯಲ್ಲಿ 11ನೇ ಸ್ಥಾನದಿಂದ ಐದನೇ ಸ್ಥಾನಕ್ಕೆ ಏರಿಕೆ ಕಂಡಿತ್ತು. ಮುಂಬರುವ ಕಾಲಘಟ್ಟದಲ್ಲಿ ಭಾರತವು ವಿಶ್ವದ ಮೂರನೇ ಆರ್ಥಿಕ ಶಕ್ತಿಯಾಗಲಿದೆ ಎಂದು ಅವರು ಹೇಳಿದರು.…

Read More