Author: admin

ತುಮಕೂರು: ಜಿಲ್ಲೆಯಲ್ಲಿ ವಿವಿಧ ಕಾರಣಗಳಿಂದ ಖಾಲಿ ಇದ್ದ ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿಯರ ಹುದ್ದೆಗಳ ಭರ್ತಿ ಸಂಬಂಧ ತಾತ್ಕಾಲಿಕವಾಗಿ ಆಯ್ಕೆಯಾಗಿರುವ ಅಭ್ಯರ್ಥಿಗಳ ಕುರಿತು ಆಕ್ಷೇಪಣೆ ಸಲ್ಲಿಸಲು ಮಾರ್ಚ್ 23ರವರೆಗೆ ಕಾಲಾವಕಾಶ ನೀಡಲಾಗಿದೆ. ತುರುವೇಕೆರೆ ಶಿಶು ಅಭಿವೃದ್ಧಿ ಯೋಜನಾ ವ್ಯಾಪ್ತಿಯಲ್ಲಿ ಖಾಲಿಯಿದ್ದ 5 ಅಂಗನವಾಡಿ ಕಾರ್ಯಕರ್ತೆ ಹಾಗೂ 75 ಸಹಾಯಕಿಯರ ಹುದ್ದೆ, ಶಿರಾ ಶಿಶು ಅಭಿವೃದ್ಧಿ ಯೋಜನಾ ವ್ಯಾಪ್ತಿಯಲ್ಲಿ ಖಾಲಿಯಿದ್ದ 26 ಅಂಗನವಾಡಿ ಕಾರ್ಯಕರ್ತೆ ಹಾಗೂ 103 ಸಹಾಯಕಿಯರ ಹುದ್ದೆ, ಕುಣಿಗಲ್ ಶಿಶು ಅಭಿವೃದ್ಧಿ ಯೋಜನಾ ವ್ಯಾಪ್ತಿಯಲ್ಲಿ ಖಾಲಿಯಿದ್ದ 8 ಅಂಗನವಾಡಿ ಕಾರ್ಯಕರ್ತೆ ಹಾಗೂ 68 ಸಹಾಯಕಿಯರ ಹುದ್ದೆಗಳ ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟಿಸಲಾಗಿದೆ. ಸಾರ್ವಜನಿಕರ ಮಾಹಿತಿಗಾಗಿ ಆಯ್ಕೆ ಪಟ್ಟಿಯನ್ನು ಸಂಬಂಧಪಟ್ಟ ಅಂಗನವಾಡಿ ಕೇಂದ್ರ, ಗ್ರಾಮ ಪಂಚಾಯಿತಿ, ಶಾಲೆ, ಪ್ರಾಥಮಿಕ ಆರೋಗ್ಯ ಕೇಂದ್ರ ಮತ್ತು ಶಿಶು ಅಭಿವೃದ್ಧಿ ಯೋಜನಾ ಕಚೇರಿಯ ನಾಮಫಲಕದಲ್ಲಿ ಪ್ರಕಟಿಸಲಾಗಿದ್ದು, ಆಕ್ಷೇಪಣೆಯನ್ನು ಆಯಾ ತಾಲ್ಲೂಕು ಶಿಶು ಅಭಿವೃದ್ಧಿ ಯೋಜನಾ ಕಚೇರಿಗೆ ಮಾರ್ಚ್ 23ರ ಸಂಜೆ 5.30 ಗಂಟೆಯೊಳಗೆ ಸಲ್ಲಿಸಬೇಕು. ಹೆಚ್ಚಿನ…

Read More

ತುಮಕೂರು: ಪ್ರವಾಸೋದ್ಯಮ ಇಲಾಖೆ ವತಿಯಿಂದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಸಣ್ಣ ಉದ್ಯಮಿದಾರರನ್ನು ಉತ್ತೇಜಿಸುವ ಸಲುವಾಗಿ 1 ತಿಂಗಳ ವಸತಿ ಸಹಿತ ಕೌಶಲ್ಯಾಭಿವೃದ್ಧಿ ತರಬೇತಿ ನೀಡಲು ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ. ತರಬೇತಿ ಪಡೆದ ಅಭ್ಯರ್ಥಿಗಳಿಗೆ ಮೊಬೈಲ್ ಕ್ಯಾಂಟೀನ್ ನಡೆಸಲು ಸಹಾಯಧನ ನೀಡಲಾಗುವುದು. ಅರ್ಜಿದಾರರು ಪ.ಜಾತಿ ಮತ್ತು ಪ.ಪಂಗಡಕ್ಕೆ ಸೇರಿದವರಾಗಿದ್ದು, 20 ರಿಂದ 55 ವರ್ಷದೊಳಗಿನವರಾಗಿರಬೇಕು. ಅರ್ಜಿದಾರರು 10ನೇ ತರಗತಿಯಲ್ಲಿ ಉತ್ತೀರ್ಣರಾಗಿದ್ದು, ಲಘು ವಾಹನ ಚಾಲನಾ ಪರವಾನಗಿ ಹೊಂದಿರಬೇಕು. ನಗರ ಪ್ರದೇಶದವರ ವಾರ್ಷಿಕ ಆದಾಯ 2 ಲಕ್ಷ ರೂ. ಹಾಗೂ ಗ್ರಾಮಾಂತರ ಪ್ರದೇಶದವರ ವಾರ್ಷಿಕ ಆದಾಯ 1.50 ಲಕ್ಷ ರೂ.ಗಳನ್ನು ಮೀರಬಾರದು. ಯಾವುದೇ ಸರ್ಕಾರಿ ಇಲಾಖೆ ಅಥವಾ ನಿಗಮ ಮಂಡಳಿಗಳಲ್ಲಿ ಖಾಯಂ ನೌಕರಿಯಿರಬಾರದು. ನಿಗದಿತ ಅರ್ಜಿ ನಮೂನೆಯನ್ನು ಜಿಲ್ಲಾ ಮಟ್ಟದ ಪ್ರವಾಸೋದ್ಯಮ ಕಚೇರಿಯಲ್ಲಿ ಪಡೆದು, ಭರ್ತಿ ಮಾಡಿದ ಅರ್ಜಿಯೊಂದಿಗೆ ತಹಶೀಲ್ದಾರರಿಂದ ಪಡೆದುಕೊಂಡಿರುವ ಚಾಲ್ತಿಯಲ್ಲಿರುವ ಜಾತಿ/ಆದಾಯ ಪ್ರಮಾಣಪತ್ರ, ಚಾಲ್ತಿಯಲ್ಲಿರುವ ಲಘು ವಾಹನ ಚಾಲನಾ ಪರವಾನಗಿ, ಎಸ್.ಎಸ್.ಎಲ್.ಸಿ. ಅಂಕಪಟ್ಟಿ, ಆಧಾರ್ ಕಾರ್ಡ್, ವಾಸಸ್ಥಳ ದೃಢೀಕರಣ…

Read More

ತುಮಕೂರು: ದೇಶದ ಸಂಸತ್ತು ಮತ್ತು ವಿಧಾನಮಂಡಲಗಳಲ್ಲಿ ಮಹಿಳೆಯರಿಗೆ ಹೆಚ್ಚಿನ ಪ್ರಾತಿನಿಧ್ಯ ಸಿಗಬೇಕಾದರೆ ಶೇ. 50ರಷ್ಟು ಮಹಿಳಾ ಮೀಸಲಾತಿ ಮಸೂದೆ ಶೀಘ್ರವಾಗಿ ಅನುಮೋದನೆಗೊಳ್ಳಬೇಕು ಎಂದು ಗೃಹ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ.ಜಿ.ಪರಮೇಶ್ವರ್ ಅಭಿಪ್ರಾಯಪಟ್ಟಿದ್ದಾರೆ. ನಗರದ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಹಯೋಗದಲ್ಲಿ ಆಯೋಜಿಸಲಾಗಿದ್ದ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. ರಾಜೀವ್ ಗಾಂಧಿಯವರು ಪ್ರಧಾನಿಯಾಗಿದ್ದ ಕಾಲದಲ್ಲೇ ಸ್ಥಳೀಯ ಸಂಸ್ಥೆಗಳಲ್ಲಿ ಮಹಿಳೆಯರಿಗೆ ಶೇ. 50 ಮೀಸಲಾತಿ ನೀಡುವ ನಿಟ್ಟಿನಲ್ಲಿ ಸಂವಿಧಾನಕ್ಕೆ ತಿದ್ದುಪಡಿ ತರಲಾಗಿತ್ತು. ಡಾ. ಮನ್ಮೋಹನ್ ಸಿಂಗ್ ಅವರ ಕಾಲದಲ್ಲಿ ಮಂಡನೆಯಾಗಿದ್ದ ಮಹಿಳಾ ಮೀಸಲಾತಿ ಮಸೂದೆ ರಾಜ್ಯಸಭೆಯಲ್ಲಿ ಅನುಮೋದನೆಗೊಂಡಿರಲಿಲ್ಲ. ಈಗಲಾದರೂ ಕೇಂದ್ರ ಸರ್ಕಾರ ಇದನ್ನು ಜಾರಿಗೆ ತಂದು ಮಹಿಳೆಯರಿಗೆ ಶಕ್ತಿ ತುಂಬಬೇಕು  ಎಂದರು. ಭಾರತದಲ್ಲಿ ಮಹಿಳೆಯರಿಗೆ ಹೆಚ್ಚಿನ ಅವಕಾಶ ನೀಡಲಾಗುತ್ತಿದ್ದು, ಅವರು ಇಂದು ಎಲ್ಲ ಕ್ಷೇತ್ರಗಳಲ್ಲೂ ಪುರುಷರಿಗೆ ಸಮನಾಗಿ ಸಾಧನೆ ಮಾಡುತ್ತಿದ್ದಾರೆ. ರಾಜ್ಯ ಸರ್ಕಾರವೂ ತನ್ನ ಪ್ರಣಾಳಿಕೆಯಲ್ಲಿ ಘೋಷಿಸಿದಂತೆ ಮಹಿಳಾ ಅಭಿವೃದ್ಧಿಗೆ ಅನೇಕ…

Read More

ಲಂಡನ್: ಲಂಡನ್‌ ನ ರಸ್ತೆಯಲ್ಲಿ ಪಾನ್ ತಿಂದು ಉಗುಳಿದ ಇಬ್ಬರು ಭಾರತೀಯ ಮೂಲದ ವ್ಯಕ್ತಿಗಳಿಗೆ ಅಲ್ಲಿನ ನ್ಯಾಯಾಲಯ ಬರೋಬ್ಬರಿ 3.46 ಲಕ್ಷ ರೂಪಾಯಿ ದಂಡ ವಿಧಿಸಿದೆ. ಅಕ್ಷಿತ್ ಕುಮಾರ್ ಭದ್ರೆ ಪಟೇಲ್ (31) ಮತ್ತು ಹಿತೇಶ್ ಪಟೇಲ್ (32) ಎಂಬುವವರೇ ದಂಡಕ್ಕೊಳಗಾದ ವ್ಯಕ್ತಿಗಳು. ಇವರು ಲಂಡನ್‌ ನ ಬ್ರೆಂಟ್ ಬರೋ (Brent Borough) ಪ್ರದೇಶದ ಸಾರ್ವಜನಿಕ ಸ್ಥಳದಲ್ಲಿ ಪಾನ್ ತಿಂದು ಉಗುಳುತ್ತಿರುವುದು ಕಂಡುಬಂದಿತ್ತು. ಅಕ್ಷಿತ್ ಕುಮಾರ್ ಅವರು 2025ರ ಜೂನ್‌ನಲ್ಲಿ ಕಿಂಗ್ಸ್‌ಬರಿ ಮೆಟ್ರೋ ನಿಲ್ದಾಣದ ಬಳಿ ಮತ್ತು ಹಿತೇಶ್ ಪಟೇಲ್ ಅವರು ನಾರ್ತ್ ವೆಂಬ್ಲಿ ನಿಲ್ದಾಣದ ಬಳಿ ಈ ಕೃತ್ಯ ಎಸಗಿದ್ದರು. ಆರಂಭದಲ್ಲಿ ಸ್ಥಳೀಯ ಅಧಿಕಾರಿಗಳು ಇಬ್ಬರಿಗೂ ತಲಾ £100 (ಸುಮಾರು 10,500 ರೂ.) ದಂಡ ವಿಧಿಸಿದ್ದರು. ಆದರೆ, ಇವರು ನಿಗದಿತ ಸಮಯದಲ್ಲಿ ದಂಡ ಪಾವತಿಸಲಿಲ್ಲ ಮತ್ತು ನ್ಯಾಯಾಲಯದ ವಿಚಾರಣೆಗೂ ಹಾಜರಾಗಲಿಲ್ಲ. ಇದರಿಂದ ಕೆರಳಿದ ನ್ಯಾಯಾಲಯವು ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ, ದಂಡದ ಮೊತ್ತವನ್ನು ಭಾರಿ ಪ್ರಮಾಣದಲ್ಲಿ ಹೆಚ್ಚಿಸಿತು. ಅಂತಿಮವಾಗಿ ಇಬ್ಬರಿಗೂ ಸೇರಿ…

Read More

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನ ಪಾದಚಾರಿ ಮಾರ್ಗಗಳನ್ನು ಸಾರ್ವಜನಿಕರ ಸಂಚಾರಕ್ಕೆ ಮುಕ್ತಗೊಳಿಸಲು ರಾಜ್ಯ ಸರ್ಕಾರ ಮಹತ್ವದ ನಿರ್ಧಾರ ಕೈಗೊಂಡಿದೆ. ನಗರದ ಮುಖ್ಯ ರಸ್ತೆ ಹಾಗೂ ಉಪ ಮುಖ್ಯ ರಸ್ತೆಗಳಲ್ಲಿ ಇನ್ಮುಂದೆ ಬೀದಿ ಬದಿ ವ್ಯಾಪಾರಕ್ಕೆ ಅವಕಾಶ ನೀಡುವುದಿಲ್ಲ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ. ವಿಧಾನಸೌಧದಲ್ಲಿ ನಡೆದ ಜಿಬಿಎ (Greater Bengaluru Authority) ಕಾರ್ಯಕಾರಿ ಸಮಿತಿ ಮತ್ತು ಶಾಸಕರ ಸಭೆಯ ಬಳಿಕ ಅವರು ಮಾಧ್ಯಮಗಳೊಂದಿಗೆ ಮಾತನಾಡಿದರು. ಪಾದಚಾರಿಗಳ ಹಿತದೃಷ್ಟಿಯಿಂದ ಹೊಸ ನೀತಿಯನ್ನು ಜಾರಿಗೆ ತರಲಾಗುತ್ತಿದ್ದು, ಫುಟ್‌ ಪಾತ್‌ಗಳನ್ನು ಅತಿಕ್ರಮಿಸಿಕೊಂಡಿರುವ ವ್ಯಾಪಾರಿಗಳನ್ನು ತೆರವುಗೊಳಿಸಿ ಅವರಿಗೆ ಪ್ರತ್ಯೇಕ ಜಾಗ ನಿಗದಿಪಡಿಸಲಾಗುವುದು. ನಗರದಲ್ಲಿ ಸುಮಾರು 60 ಸಾವಿರ ಬೀದಿ ವ್ಯಾಪಾರಿಗಳು ನೋಂದಾಯಿಸಿಕೊಂಡಿದ್ದಾರೆ. ಕೇವಲ ಅಧಿಕೃತ ಗುರುತಿನ ಚೀಟಿ ಹೊಂದಿರುವವರಿಗೆ ಮಾತ್ರ ನಿಗದಿಪಡಿಸಿದ ಜಾಗಗಳಲ್ಲಿ ವ್ಯಾಪಾರ ಮಾಡಲು ಅವಕಾಶವಿರುತ್ತದೆ. ಹಗಲು ವ್ಯಾಪಾರ ಮುಗಿಸಿ ರಾತ್ರಿ ವೇಳೆ ರಸ್ತೆ ಬದಿಯಲ್ಲೇ ಗಾಡಿಗಳನ್ನು ಬಿಟ್ಟು ಹೋದರೆ, ಅಂತಹ ಗಾಡಿಗಳನ್ನು ಬಿಬಿಎಂಪಿ ಅಧಿಕಾರಿಗಳು ವಶಪಡಿಸಿಕೊಳ್ಳಲಿದ್ದಾರೆ. ನಗರದ ಸೌಂದರ್ಯ ಹಾಳುಮಾಡುವ ಅನಧಿಕೃತ ಫ್ಲೆಕ್ಸ್ ಹಾಗೂ…

Read More

ಪಾವಗಡ : ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರಾಗಿದ್ದ ಮಲ್ಲಿಕಾರ್ಜುನ್ ಅವರು ತಮ್ಮದೇ ಕಚೇರಿಯಲ್ಲಿ ಶುಕ್ರವಾರ ಸಂಜೆ ಆತ್ಮಹತ್ಯೆ ಮಾಡಿಕೊಂಡಿರುವ ದುರ್ಘಟನೆ ಬೆಳಕಿಗೆ ಬಂದಿದೆ. ಪಟ್ಟಣದ ಆಪ್ ಬಂಡೆ ಪ್ರದೇಶದಲ್ಲಿರುವ ಕಚೇರಿಯಲ್ಲಿ ನೇಣು ಬಿಗಿದುಕೊಂಡು ಅವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದುಬಂದಿದೆ, ಸಾವಿಗೆ ಮುನ್ನ ಮಲ್ಲಿಕಾರ್ಜುನ್ ಅವರು ವಿಡಿಯೋ ಸಂದೇಶವನ್ನು ದಾಖಲಿಸಿ, ತಮ್ಮ ಸಹೋದ್ಯೋಗಿಗಳಿಗೆ ಕಳುಹಿಸಿರುವುದು ಪ್ರಕರಣಕ್ಕೆ ಮತ್ತಷ್ಟು ತಿರುವು ನೀಡಿದೆ. ಆ ವಿಡಿಯೋದಲ್ಲಿ ತುಮಕೂರು ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕ ಕೃಷ್ಣಪ್ಪ ಅವರ ಕಿರುಕುಳವೇ ತಮ್ಮ ಸಾವಿಗೆ ಕಾರಣ ಎಂದು ಆರೋಪಿಸಿರುವುದಾಗಿ ಮೂಲಗಳು ತಿಳಿಸಿವೆ. ಕಳೆದ ಮೂರು ವರ್ಷಗಳಿಂದ ಪಾವಗಡದಲ್ಲಿ ಸೇವೆ ಸಲ್ಲಿಸುತ್ತಿದ್ದ ಮಲ್ಲಿಕಾರ್ಜುನ್ ಅವರ ಸೇವಾ ಅವಧಿ ಇನ್ನೂ ಒಂದೇ ವಾರದಲ್ಲಿ ಮುಕ್ತಾಯಗೊಳ್ಳಬೇಕಿತ್ತು. ನಿವೃತ್ತಿಗೆ ಮುನ್ನವೇ ಇಂತಹ ದುರಂತ ಸಂಭವಿಸಿರುವುದು ಎಲ್ಲರಲ್ಲೂ ಆಘಾತ ಮೂಡಿಸಿದೆ. ಇವರು ಮೂಲತಃ ಪಾವಗಡ ತಾಲ್ಲೂಕಿನ ಗುಂಡರ್ಲಹಳ್ಳಿ ಗ್ರಾಮದ ನಿವಾಸಿಯಾಗಿದ್ದ ಮಲ್ಲಿಕಾರ್ಜುನ್ ಅವರ ನಿಧನದಿಂದ ಕುಟುಂಬದಲ್ಲಿ ಆಕ್ರಂದನ ಮುಗಿಲುಮುಟ್ಟಿದೆ. ಮಗನ ಮುಂದೆ ತಾಯಿ…

Read More

ತುಮಕೂರು: ಜಿಲ್ಲೆಯ ಶಿರಾ ತಾಲ್ಲೂಕಿನ ಬರಗೂರು ಸಮೀಪ ಕೆಎಸ್‌ ಆರ್‌ ಟಿಸಿ ಬಸ್‌ ಹಾಗೂ ಬೈಕ್ ನಡುವೆ ಸಂಭವಿಸಿದ ಮುಖಾಮುಖಿ ಡಿಕ್ಕಿಯಲ್ಲಿ ಬೈಕ್‌ ನಲ್ಲಿದ್ದ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಶುಕ್ರವಾರ ಬೆಳಿಗ್ಗೆ ಬರಗೂರು ರಸ್ತೆಯಲ್ಲಿ ಈ ಘಟನೆ ನಡೆದಿದೆ. ವೇಗವಾಗಿ ಬಂದ ಬೈಕ್ ನಿಯಂತ್ರಣ ತಪ್ಪಿ ಎದುರಿನಿಂದ ಬರುತ್ತಿದ್ದ ಕೆಎಸ್‌ ಆರ್‌ ಟಿಸಿ ಬಸ್‌ಗೆ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ. ಡಿಕ್ಕಿಯ ರಭಸಕ್ಕೆ ಬೈಕ್ ಸಂಪೂರ್ಣ ಜಖಂಗೊಂಡಿದ್ದು, ಸವಾರರು ತೀವ್ರ ರಕ್ತಸ್ರಾವದಿಂದಾಗಿ ಸ್ಥಳದಲ್ಲೇ ಪ್ರಾಣ ಕಳೆದುಕೊಂಡಿದ್ದಾರೆ. ಘಟನಾ ಸ್ಥಳಕ್ಕೆ ಬರಗೂರು ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ಸ್ಥಳೀಯ ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ. ಈ ಸಂಬಂಧ ಬರಗೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

Read More

ತುಮಕೂರು: ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ, ಐಸಿಐಸಿಐ ಬ್ಯಾಂಕ್, ಸಾಟಿನ್ ಕ್ರೆಡಿಟ್ ಕೇರ್ ನೆಟ್‌ವರ್ಕಿಂಗ್ ಲಿ. ಹಾಗೂ ಗ್ರೇ ಮ್ಯಾಟರ್ ರಿಸೋರ್ಸಸ್ ಪ್ರೈ. ಲಿ. ಸಂಸ್ಥೆಯ ಸಹಭಾಗಿತ್ವದಲ್ಲಿ ನಿರುದ್ಯೋಗಿಗಳಿಗೆ ಉದ್ಯೋಗ ನೀಡುವ ಸಂಬಂಧ ಮಾ. 23ರಂದು ನೇರ ಸಂದರ್ಶನ ನಡೆಯಲಿದೆ. ಎಸ್ಎಸ್ಎಲ್‌ಸಿ, ಪಿಯುಸಿ, ಯಾವುದೇ ಪದವಿ, ಐಟಿಐ ಹಾಗೂ ಡಿಪ್ಲೊಮಾ ಪಾಸಾದ ಅಭ್ಯರ್ಥಿಗಳು ಮಾ. 23ರಂದು ಬೆಳಗ್ಗೆ 10 ಗಂಟೆಗೆ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ, ಡಿಡಿಪಿಐ ಬಸ್ ನಿಲ್ದಾಣ, ವಾಸನ್ ಕಣ್ಣಿನ ಆಸ್ಪತ್ರೆ ಹತ್ತಿರ, ಮೂಲೆಮನೆ ಹೋಟೆಲ್ ಪಕ್ಕ, ಸೋಮೇಶ್ವರಪುರಂ, 14ನೇ ಕ್ರಾಸ್, ತುಮಕೂರು-572102, ಇಲ್ಲಿ ತಮ್ಮ ಬಯೋಡೇಟಾದೊಂದಿಗೆ ಸಂದರ್ಶನಕ್ಕೆ ಹಾಜರಾಗಲು ಉದ್ಯೋಗಾಧಿಕಾರಿ ತಿಳಿಸಿದ್ದಾರೆ. ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ 0816–2278488 ಯನ್ನು ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

Read More

ತುಮಕೂರು: ಗೃಹ ಬಳಕೆ ಅಡುಗೆ ಅನಿಲ ಕುರಿತು ಸಾಮಾಜಿಕ ಜಾಲ ತಾಣಗಳಲ್ಲಿ ವದಂತಿಗಳು ಹರಿದಾಡುತ್ತಿವೆ, ಸಾರ್ವಜನಿಕರು ವದಂತಿಗಳಿಗೆ ಕಿವಿಕೊಡಬಾರದು. ದೇಶಾದ್ಯಂತ LPG ಉತ್ಪಾದನೆ ಮತ್ತು ಬಾಟ್ಲಿಂಗ್ ಎರಡೂ ಹೆಚ್ಚಿರುವುದರಿಂದ ದೇಶೀಯ ಬೇಡಿಕೆಯ ಕೊರತೆಯಿಲ್ಲ. ಗೃಹಬಳಕೆ ಅಡುಗೆ ಅನಿಲ (ಸಿಲಿಂಡರ್‌ ಗಳು) ಸಾಷ್ಟು ಪ್ರಮಾಣದಲ್ಲಿ ದಾಸ್ತಾನು ಲಭ್ಯವಿರುವುದರಿಂದ ಗ್ರಾಹಕರು ಗಾಬರಿಗೊಳ್ಳಬಾರದೆಂದು ಹಾಗೂ ಹೆಚ್ಚುವರಿಯಾಗಿ ದಾಸ್ತಾನು ಮಾಡಿಕೊಳ್ಳಬಾರದೆಂದು ತುಮಕೂರು ತಾಲ್ಲೂಕು ತಹಶೀಲ್ದಾರ್ ಮನವಿ ಮಾಡಿದ್ದಾರೆ. ಹೆಚ್ಚಿನ ಗ್ರಾಹಕರು, ಮುಂಚಿತವಾಗಿ ಬುಕ್ಕಿಂಗ್ ಮಾಡುತ್ತಿರುವುದರಿಂದ IVRS/Missed Call ಮಾಡುವ ವ್ಯವಸ್ಥೆಯಲ್ಲಿ ಹೆಚ್ಚಿನ ಸಂಚಾರ ದಟ್ಟಣೆ ಉಂಟಾಗಿ ಸದರಿ ಸಿಸ್ಟಂಗಳು ಕಾರ್ಯನಿರ್ವಹಿಸುತ್ತಿಲ್ಲವಾದ್ದರಿಂದ ಪರ್ಯಾಯವಾಗಿ IOCL, HPCL ಹಾಗೂ BPCL LPG ತೈಲ ಕಂಪನಿಗಳು ಗ್ರಾಹಕರಿಗೆ IVRS, Missed Call, Whatsapp, Mobile Application, OMC Portal ಹಾಗೂ ಪಾವತಿ ಅಪ್ಲಿಕೇಶನ್ (Paytm/Phone pey) ನಂತರ 6 ಬುಕ್ಕಿಂಗ್ ವಿಧಾನಗಳನ್ನು ಕಲ್ಪಿಸಿದೆ. ಗ್ರಾಹಕರು ತಮ್ಮ ಅನುಕೂಲಕ್ಕೆ ಅನುಗುಣವಾಗಿ ಈ ವ್ಯವಸ್ಥೆಯನ್ನು ಬಳಸಲು ಸೂಚಿಸಲಾಗಿದೆ. ಪ್ರತಿ ಗ್ರಾಹಕರಿಗೆ ನಗರ ಪ್ರದೇಶದಲ್ಲಿ 25…

Read More

ಬೆಂಗಳೂರು: ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಉಂಟಾಗಿರುವ ವಾಣಿಜ್ಯ ಎಲ್‌ಪಿಜಿ (LPG) ಸಿಲಿಂಡರ್‌ಗಳ ತೀವ್ರ ಕೊರತೆಯನ್ನು ನೀಗಿಸಲು ಕೇಂದ್ರ ಸರ್ಕಾರ ಕೂಡಲೇ ಹಸ್ತಕ್ಷೇಪ ಮಾಡಬೇಕು ಎಂದು ಆಗ್ರಹಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೇಂದ್ರ ಪೆಟ್ರೋಲಿಯಂ ಸಚಿವ ಹರ್ದೀಪ್ ಸಿಂಗ್ ಪುರಿ ಅವರಿಗೆ ಶುಕ್ರವಾರ ಪತ್ರ ಬರೆದಿದ್ದಾರೆ. ರಾಜ್ಯದಲ್ಲಿ ದಿನಕ್ಕೆ ಸುಮಾರು 50,000 ವಾಣಿಜ್ಯ ಸಿಲಿಂಡರ್‌ಗಳ ಬೇಡಿಕೆಯಿದೆ. ಆದರೆ ಪ್ರಸ್ತುತ ದಿನಕ್ಕೆ ಕೇವಲ 1,000 ಸಿಲಿಂಡರ್‌ಗಳು ಮಾತ್ರ ಪೂರೈಕೆಯಾಗುತ್ತಿವೆ ಎಂದು ಸಿಎಂ ಪತ್ರದಲ್ಲಿ ವಿವರಿಸಿದ್ದಾರೆ. ಸಿಲಿಂಡರ್ ಕೊರತೆಯಿಂದಾಗಿ ಬೆಂಗಳೂರಿನ ಅನೇಕ ಹೋಟೆಲ್‌ಗಳು ಮತ್ತು ಸಣ್ಣ ಉದ್ದಿಮೆಗಳು ಮುಚ್ಚುವ ಭೀತಿ ಎದುರಿಸುತ್ತಿವೆ. ಇದು ಸಾವಿರಾರು ಜನರ ಜೀವನೋಪಾಯದ ಮೇಲೆ ಗಂಭೀರ ಪರಿಣಾಮ ಬೀರಿದೆ. ಆಟೋ ರಿಕ್ಷಾಗಳಿಗೆ ಬೇಕಾದ ಎಲ್‌ಪಿಜಿ ಪೂರೈಕೆಯಲ್ಲೂ ವ್ಯತ್ಯಯ ಉಂಟಾಗಿದ್ದು, ಚಾಲಕರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಆಟೋ ಎಲ್‌ಪಿಜಿ ವಿತರಣೆಯನ್ನು ಮೇಲ್ವಿಚಾರಣೆ ಮಾಡಲು ಪಾರದರ್ಶಕ ವ್ಯವಸ್ಥೆ ಇಲ್ಲದಿರುವುದು ಸಮಸ್ಯೆಯನ್ನು ಮತ್ತಷ್ಟು ಸಂಕೀರ್ಣಗೊಳಿಸಿದೆ. “ಭಾರತಕ್ಕೆ ಶೀಘ್ರದಲ್ಲೇ ಎರಡು ಎಲ್‌ಪಿಜಿ ಟ್ಯಾಂಕರ್‌ಗಳು ಬರಲಿವೆ ಎಂಬ ಮಾಹಿತಿ…

Read More