Subscribe to Updates
Get the latest creative news from FooBar about art, design and business.
- ಕರ್ನಾಟಕದ 25ನೇ ಮುಖ್ಯಮಂತ್ರಿಯಾಗಿ ಡಿ.ಕೆ.ಶಿವಕುಮಾರ್ ಪ್ರಮಾಣವಚನ ಸ್ವೀಕಾರ!
- ಸಾದರ ಸಮುದಾಯ ಭವನದಲ್ಲಿ ಸಪ್ತಗಿರಿ ಆಸ್ಪತ್ರೆ ವತಿಯಿಂದ ಬೃಹತ್ ಆರೋಗ್ಯ ತಪಾಸಣೆ ಮತ್ತು ಶಸ್ತ್ರ ಚಿಕಿತ್ಸಾ ಶಿಬಿರ
- ಖಾಸಗಿ ಶಾಲೆಗಳ ಮಾದರಿಯಲ್ಲೇ, ಸರ್ಕಾರಿ ಶಾಲೆಗಳ ರೂಪಾಂತರ: ಡಿ.ಕೆ.ಶಿವಕುಮಾರ್
- ತುಮಕೂರು ವಿವಿ 19ನೇ ಘಟಿಕೋತ್ಸವ: 90 ವಿದ್ಯಾರ್ಥಿಗಳಿಗೆ 117 ಚಿನ್ನದ ಪದಕ
- ಶಾಲೆಗಳ ಪುನರಾರಂಭ: ದಾಖಲಾತಿ ಆಂದೋಲನಕ್ಕೆ ಡಿ.ಸಿ. ಚಾಲನೆ
- ಸಚಿವ ಸ್ಥಾನದ ಆಸೆ ನನಗೂ ಇದೆ ಕೊಟ್ಟರೆ ಪ್ರಾಮಾಣಿಕವಾಗಿ ಕೆಲಸ ನಿರ್ವಹಿಸುವೆ: ಹೆಚ್.ವಿ.ವೆಂಕಟೇಶ್
- ನವಿಲೆ ಭಾಗಕ್ಕೆ ಹೇಮಾವತಿ ನೀರನ್ನು ಹರಿಸಲಾಗುವುದು ರೈತರು ಆತಂಕಪಡುವ ಅಗತ್ಯವಿಲ್ಲ: ಶಾಸಕ ಸಿ.ಬಿ.ಸುರೇಶ್ ಬಾಬು
- ‘ಗರ್ಭಿಣಿನೂ ಇಲ್ಲ, ಮಹಿಳೆಯೂ ಇಲ್ಲ… ಕಾರಿನಲ್ಲಿ ಒಬ್ಬರೇ ಇದ್ದಿದ್ದು!’: ಝೀರೋ ಟ್ರಾಫಿಕ್ ಪ್ರತಿಭಟನೆಯ ಅಸಲೀಯತ್ತು ಬಿಚ್ಚಿಟ್ಟ ಬೆಂಗಳೂರು ಪೊಲೀಸರು
Author: admin
ತುಮಕೂರು: ಮಹಿಳೆಯರು ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ನಡೆಸುವ ಸ್ವಸಹಾಯ ಸಂಘದ ಮೂಲಕ ಎಸ್.ಬಿ.ಐ.ಬ್ಯಾಂಕಿನಿಂದ ಸಾಲ ಪಡೆದು ಮತ್ತೆ ಸಂಘದ ಮೂಲಕ ಎಸ್.ಬಿ.ಐ.ಗೆ ಮರುಪಾವತಿ ಮಾಡಿ ತಮ್ಮ ಆರ್ಥಿಕ ಸಂಕಷ್ಟಗಳನ್ನು ತೀರಿಸಿಕೊಂಡು ಸ್ವಾವಲಂಬಿಗಳಾಗಿ, ಆರ್ಥಿಕ ಶಕ್ತಿಯನ್ನು ಹೊಂದಿ ಜೀವನದಲ್ಲಿ ಮುಂದೆ ಬರಬೇಕು, ಪ್ರತಿ ಮಹಿಳೆಯರು ಸ್ವಉದ್ಯೋಗವನ್ನು ಮಾಡಿ ದುಡಿದು ಸ್ವತಂತ್ರವಾಗಿ ಬದುಕಬೇಕು ಮತ್ತು ತಮ್ಮ ಕುಟುಂಬಕ್ಕೆ ಆರ್ಥಿಕ ಚೈತನ್ಯವನ್ನು ತುಂಬಬೇಕು ಎಂದು ತುಮಕೂರು ಎಸ್.ಬಿ.ಐ.ಸಹಾಯಕ ವ್ಯವಸ್ಥಾಪಕರಾದ ಹೇಮಂತ್ ರವರು ಕರೆ ನೀಡಿದರು. ನಗರದ ದಾನಃಪ್ಯಾಲೇಸ್ ನಲ್ಲಿ ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ.ಟ್ರಸ್ಟ್ ವತಿಯಿಂದ ನಡೆದ ತಾಲ್ಲೂಕು ಮಟ್ಟದ ಒಕ್ಕೂಟ ಪದಾಧಿಕಾರಿಗಳ ಸಮಾವೇಶವನ್ನು ಉದ್ಘಾಟಿಸಿ ಮಾತನಾಡಿದರು. ಧರ್ಮಸ್ಥಳ ಸಂಘ ಯಾವುದೇ ಸಾಲವನ್ನು ವೈಯಕ್ತಿಕವಾಗಿ ನೀಡುವುದಿಲ್ಲ, ಸಂಘವು ಎಸ್.ಬಿ.ಐ.ನಿಂದ ಸಾಲ ಕೊಡಿಸುತ್ತದೆ. ನೀವು ತೆಗೆದುಕೊಂಡ ಸಾಲಕ್ಕೆ ವೀರೇಂದ್ರಹೆಗ್ಗಡೆರವರು ಜಾಮೀನು ನೀಡಿದ್ದಾರೆ. ಸಾಲ ಪಡೆಯುವುದು ಮುಖ್ಯವಲ್ಲ ಸರಿಯಾದ ಕಂತುಗಳ ಮೂಲಕ, ಸರಿಯಾದ ವೇಳೆಗೆ ಕಂತುಗಳ ಮೂಲಕ ಬ್ಯಾಂಕಿಗೆ ಮರುಪಾವತಿ ಮಾಡುವ ಜವಾಬ್ದಾರಿ ನಿಮ್ಮ ಮೇಲಿದೆ…
ಶ್ರೀ ಕ್ಷೇತ್ರ ಕಟೀಲು ದುರ್ಗಾಪರಮೇಶ್ವರೀ ಜ್ಯೋತಿಷ್ಯ ಪೀಠಂ ದೈವಜ್ಞ ಪಂಡಿತ್ ಕೃಷ್ಣ ಭಟ್ ಪ್ರಧಾನ ತಾಂತ್ರಿಕ್ ಹಾಗೂ ಮಾಂತ್ರಿಕರು ಸ್ತ್ರೀ ಪುರುಷ ವಶೀಕರಣ ಸ್ಪೆಷಲಿಸ್ಟ್ ನನಗೆ ಒಂದೇ ಕರೆ ಮಾಡಿದರೆ ನಿಮ್ಮ ಇಷ್ಟಪಟ್ಟವರು ನಿಮ್ಮಂತೆ 9535156490 ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆ ಉತ್ತರಿಸಬಹುದು ಏಷ್ಟೇ ಪೂಜೆ ಪ್ರಯತ್ನ ಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..?ನಿಮ್ಮ ಯಾವುದೇಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ 2 ದಿನಗಳಲ್ಲಿ ಪರಿಹಾರ ಶತಸಿದ್ಧ ಧನವಶ, ಜನವಶ, ಶತ್ರುನಾಶ, ಸ್ತ್ರೀ- ಪುರುಷ ವಶೀಕರಣ, ದಿಗ್ಭಂಧನ, ಸ್ತಂಭನ, ವುಚ್ಛಾಟನೆಯಂತಹ ಸಮಸ್ಯೆಗಳಿಗೆ ವಿಶೇಷ ಪರಿಹಾರ ತಿಳಿಸುತ್ತಾರೆ 9535156490 ಕೆಲವರು ಊರಿಗೆ ಉಪಕಾರಿ ಎಂದೇ ಹೆಸರು ಗಳಿಸುತ್ತಾರೆ. ಯಾರಿಗಾದರೂ ಸಹಾಯ ಬೇಕು ಎಂದು ಗೊತ್ತಾದರೆ ಸಾಕು ಅವರು ನೆರವಿಗೆ ನಿಲ್ಲುತ್ತಾರೆ. ಸಹಾಯ ಹಸ್ತ ಚಾಚುತ್ತಾರೆ. ಸಹಾಯ ಕೇಳಿದವರು ನೆಮ್ಮದಿಯ ಉಸಿರು ಬಿಡುವವರೆಗೂ ಜೊತೆ ನಿಲ್ಲುತ್ತಾರೆ.…
ತುಮಕೂರು: ತುಮಕೂರು–ಬೆಂಗಳೂರು ಮಾರ್ಗವಾಗಿ ಸಂಚರಿಸುವ ನೂತನ ಮೆಮು ರೈಲಿಗೆ ರೈಲ್ವೆ ಮತ್ತು ಜಲಶಕ್ತಿ ರಾಜ್ಯ ಖಾತೆ ಸಚಿವ ವಿ.ಸೋಮಣ್ಣ ಶುಕ್ರವಾರ ಹಸಿರು ನಿಶಾನೆ ತೋರುವ ಮೂಲಕ ಚಾಲನೆ ನೀಡಿದರು. ನಗರದ ರೈಲ್ವೆ ನಿಲ್ದಾಣದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಪಾಲ್ಗೊಂಡ ಅವರು, ಜಿಲ್ಲೆಯು ಅತೀವೇಗವಾಗಿ ಬೆಳೆಯುತ್ತಿದ್ದು, ಬೆಂಗಳೂರು ತುಮಕೂರು ಮಾರ್ಗವಾಗಿ ಸಂಚರಿಸುವ ಪ್ರಯಾಣಿಕರ ಸಂಖ್ಯೆ ವರ್ಷದಿಂದ ವರ್ಷಕ್ಕೆ ಹೆಚ್ಚಾಗುತ್ತಿದೆ. ಜಿಲ್ಲೆಯ ಜನರ ಅನುಕೂಲಕ್ಕಾಗಿ ಭಾನುವಾರ ಹೊರತುಪಡಿಸಿ ಪ್ರತಿದಿನ ಬೆಳಿಗ್ಗೆ 8.45ಗಂಟೆಗೆ ತುಮಕೂರಿನಿಂದ ಹೊರಟು 10.25 ಗಂಟೆಗೆ ಯಶವಂತಪುರ ತಲುಪಲಿದೆ ಮತ್ತು ಸಂಜೆ 5.40 ಗಂಟೆಗೆ ಯಶವಂತಪುರದಿಂದ ಹೊರಟು 7:15 ಗಂಟೆಗೆ ತುಮಕೂರು ತಲುಪಲಿದೆ ಎಂದು ತಿಳಿಸಿದರು. ತುಮಕೂರು– ಬೆಂಗಳೂರು ಮಾರ್ಗವಾಗಿ ಸಂಚರಿಸುವ ರೈಲುಗಳ ಸಂಖ್ಯೆಯು ಹೆಚ್ಚಾಗಿದ್ದು, 2 ಲೈನ್ ರೈಲ್ವೇ ಹಳಿಯನ್ನು 4 ಲೈನ್ ರೈಲ್ವೇ ಹಳಿಗಳಾಗಿ ಮಾಡಲು ಅನುಮೋದನೆ ನೀಡಲಾಗಿದೆ. ಸುಮಾರು 220 ಕೋಟಿ ರೂ. ವೆಚ್ಚದಲ್ಲಿ ಸ್ವಯಂ ಚಾಲಿತ ಸಿಗ್ನಲ್ ಸ್ಥಾಪಿಸಲಾಗಿದೆ ಮತ್ತು 2026 ಡಿಸೆಂಬರ್ ಅಥವಾ 2027 ಮಾರ್ಚ್ ಅಂತ್ಯದೊಳಗೆ…
ತುಮಕೂರು: ಕರ್ನಾಟಕ ವಿದ್ಯುತ್ ಪ್ರಸರಣ ನಿಗಮವು ಜಿಲ್ಲೆಯ ಶಿರಾ ತಾಲ್ಲೂಕು ಕಳ್ಳಂಬೆಳ್ಳ ಹೋಬಳಿ ತಾಳಗುಂದ ಗ್ರಾಮದಲ್ಲಿ ನೂತನವಾಗಿ ನಿರ್ಮಾಣ ಮಾಡುವ 18 ಎಂ.ವಿ.ಎ., 66/11ಕೆ.ವಿ ಉಪಸ್ಥಾವರಕ್ಕೆ ಹಾಲಿ ಇರುವ 66/11ಕೆವಿ ಉಪಸ್ಥಾವರ ಗುಳಿಗೇನಹಳ್ಳಿಯಿಂದ ದ್ವಿಮುಖ ಗೋಪುರಗಳ ಮೇಲೆ 10.898 ಕಿ.ಮೀ. ಉದ್ದದ 66 ಕೆವಿ ರೇಡಿಯಲ್ ವಿದ್ಯುತ್ ಮಾರ್ಗ ನಿರ್ಮಾಣ ಕಾಮಗಾರಿಯನ್ನು ಸೆಪ್ಟೆಂಬರ್ 30ರಂದು ಅಥವಾ ತದನಂತರ ವಿದ್ಯುದ್ದೀಕರಣಗೊಳಿಸಲಿದೆ. ಈ ಪ್ರಸರಣ ಮಾರ್ಗವು ಜಿಲ್ಲೆಯ ಶಿರಾ ತಾಲ್ಲೂಕು ಕಸಬ ಹೋಬಳಿಯ ನ್ಯಾಯಗೆರೆ, ರತ್ನಸಂದ್ರ, ದೇವಗೊಂಡನಹಳ್ಳಿ, ಕಳ್ಳಂಬೆಳ್ಳ ಹೋಬಳಿಯ ಬೈರಾಪುರ, ಮಾಟನಹಳ್ಳಿ, ದೇವರಹಳ್ಳಿ, ದೊಡ್ಡಚಿಕ್ಕನಹಳ್ಳಿ, ಹೊನ್ನೇನಹಳ್ಳಿ ಗ್ರಾಮಗಳ ಸರಹದ್ದಿನಲ್ಲಿ ಹಾದು ಹೋಗಲಿದ್ದು, ಸಾರ್ವಜನಿಕರು ಸದರಿ ಗ್ರಾಮಗಳಲ್ಲಿ ಗೋಪುರಗಳನ್ನು ಹತ್ತುವುದಾಗಲೀ, ಲೋಹದ ತಂತಿ, ಹಸಿರು ಬಳ್ಳಿ, ಕೊಂಬೆ ಇತ್ಯಾದಿಗಳನ್ನು ವಿದ್ಯುತ್ ಪ್ರವಹಿಸುವ ತಂತಿಗಳಿಗೆ ಎಸೆಯುವುದಾಗಲೀ ಅಥವಾ ದನಕರುಗಳನ್ನು ಗೋಪುರಗಳಿಗೆ ಕಟ್ಟುವುದಾಗಲಿ ಮಾಡಬಾರದಾಗಿ ಕೆಪಿಟಿಸಿಎಲ್ ಕಾರ್ಯನಿರ್ವಾಹಕ ಇಂಜಿನಿಯರ್ ಸೂಚನೆ ನೀಡಿದ್ದಾರೆ. ಸದರಿ ದಿನಾಂಕದಂದು ಅಥವಾ ತದನಂತರವೂ ಕೂಡ ಯಾರಾದರೂ ಇಂತಹ ಕೃತ್ಯಗಳನ್ನು ಎಸಗಿದಲ್ಲಿ ಉಂಟಾಗುವ ಅಪಘಾತಗಳಿಗೆ…
ತುಮಕೂರು: ವಿಶ್ವ ಪರಿಸರ ಆರೋಗ್ಯ ದಿನಾಚರಣೆ ಅಂಗವಾಗಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಮಹಾನಗರಪಾಲಿಕೆಯ ಸಂಯುಕ್ತಾಶ್ರಯದಲ್ಲಿ ಆರೋಗ್ಯ ಕುರಿತು ಸಾರ್ವಜನಿಕರಿಗೆ ಜಾಗೃತಿ ಮೂಡಿಸುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಆರೋಗ್ಯ ಇಲಾಖೆ ಸಿಬ್ಬಂದಿ ಹಾಗೂ ನರ್ಸಿಂಗ್ ವಿದ್ಯಾರ್ಥಿಗಳಿಂದ ಸೆಪ್ಟೆಂಬರ್ 30ರಂದು ಬೆಳಿಗ್ಗೆ 8 ಗಂಟೆಗೆ ನಗರದ ಮಹಾನಗರಪಾಲಿಕೆ ಆವರಣ(ಟೌನ್ಹಾಲ್)ದಲ್ಲಿ ಮಾನವ ಸರಪಳಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಚಂದ್ರಶೇಖರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q
ತುಮಕೂರು: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ವಿಕಲಚೇತನರ ಹಾಗೂ ಹಿರಿಯನಾಗರಿಕರ ಸಬಲೀಕರಣ ಇಲಾಖೆ ಹಾಗೂ ಹಿರಿಯನಾಗರಿಕರಿಗಾಗಿ ಶ್ರಮಿಸುತ್ತಿರುವ ಸ್ವಯಂ ಸೇವಾ ಸಂಸ್ಥೆ ಇವರ ಸಂಯುಕ್ತಾಶ್ರಯದಲ್ಲಿ 2024ನೇ ಸಾಲಿನ “ ವಿಶ್ವ ಹಿರಿಯನಾಗರಿಕರ ದಿನಾಚರಣೆ ” ಯನ್ನು ಅಕ್ಟೋಬರ್ 1ರಂದು ಬೆಳಿಗ್ಗೆ 10 ಗಂಟೆಗೆ ಜಿಲ್ಲಾ ಬಾಲಭವನ ಸಭಾಂಗಣದಲ್ಲಿ ಆಯೋಜಿಸಲಾಗಿದೆ. ರೈಲ್ವೆ ಮತ್ತು ಜಲಶಕ್ತಿ ರಾಜ್ಯ ಖಾತೆ ಸಚಿವರು ಹಾಗೂ ಸಂಸದ ವಿ. ಸೋಮಣ್ಣ ಅವರ ಘನ ಉಪಸ್ಥಿತಿಯಲ್ಲಿ ಗೃಹ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ.ಜಿ.ಪರಮೇಶ್ವರ ಅವರು ಕಾರ್ಯಕ್ರಮವನ್ನು ಉದ್ಘಾಟಿಸುವರು. ಸಹಕಾರ ಸಚಿವ ಕೆ.ಎನ್.ರಾಜಣ್ಣ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ವಿಕಲಚೇತನರ ಹಾಗೂ ಹಿರಿಯ ನಾಗರೀಕರ ಸಬಲೀಕರಣ ಇಲಾಖೆ ಸಚಿವರಾದ ಲಕ್ಷಿö್ಮ ಹೆಬ್ಬಾಳ್ಕರ್, ನವದೆಹಲಿಯ ಕರ್ನಾಟಕ ರಾಜ್ಯ ವಿಶೇಷ ಪ್ರತಿನಿಧಿ ಟಿ.ಬಿ.ಜಯಚಂದ್ರ, ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಅಧ್ಯಕ್ಷ ಹಾಗೂ ಗುಬ್ಬಿ ಶಾಸಕ ಎಸ್.ಆರ್.ಶ್ರೀನಿವಾಸ್…
ತುಮಕೂರು: ಸರ್ಕಾರಿ ಬಾಲಕರ ಬಾಲಮಂದಿರ ಸಂಸ್ಥೆಗೆ ತುಮಕೂರು ನಗರ/ಗ್ರಾಮಾಂತರ ವ್ಯಾಪ್ತಿಯಲ್ಲಿ ಬಾಡಿಗೆ ಕಟ್ಟಡ ಬೇಕಾಗಿದ್ದು, ಆಸಕ್ತ ಮಾಲೀಕರು ಅರ್ಜಿ ಸಲ್ಲಿಸಬಹುದಾಗಿದೆ. ಸರ್ಕಾರದ ಷರತ್ತು, ಮಾನದಂಡಗಳಿಗೆ ಅನುಗುಣವಾಗಿ ಸುಮಾರು 50 ಮಕ್ಕಳ ವಾಸಕ್ಕೆ ಯೋಗ್ಯವಾದ ಸರ್ಕಾರಿ/ಖಾಸಗಿ ಕಟ್ಟಡ ಹೊಂದಿರುವ ಮಾಲೀಕರು ಅರ್ಜಿ ಸಲ್ಲಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಮೊ.ಸಂ. 9880798416/ 9740093634ನ್ನು ಸಂಪರ್ಕಿಸಬಹುದಾಗಿದೆ ಎಂದು ಸರ್ಕಾರಿ ಬಾಲಕರ ಬಾಲಮಂದಿರದ ಅಧೀಕ್ಷಕರು ತಿಳಿಸಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q
ಹಾವೇರಿ ಜಿಲ್ಲೆ ರಾಣೆಬೆನ್ನೂರು ತಾಲೂಕು ಯರೇಕುಪ್ಪಿ ಗ್ರಾಮದಲ್ಲಿ ಪಂಡಿತ ಪುಟ್ಟರಾಜ ಕವಿ ಗವಾಯಿಗಳವರ 14ನೇ ವರ್ಷದ ಪುಣ್ಯಾರಾಧನೆ ಕಾರ್ಯಕ್ರಮವನ್ನು ನಡೆಸಲಾಯಿತು. ಕಾರ್ಯಕ್ರಮದಲ್ಲಿ ಮಹೇಶಯ್ಯ ಮಠದ ಇವರು ಪೂಜಾ ಕಾರ್ಯಕ್ರಮ ನೆರವೇರಿಸಿದರು. ಪೂಜ್ಯ ಶ್ರೀ ಡಾ.ಶಿವಯೋಗಿ ದೇವರು ಕಾರಂಜಿ ಮಠ ಬೆಳಗಾವಿ ಮತ್ತು ಮಾತೃಶ್ರೀ ಬಸಮ್ಮ ತಾಯಿಯವರು ಶ್ರೀ ಸಿದ್ಧಾರೂಢ ಮಠ ಮಣಕೂರು ಇವರಿಂದ ಆಶೀರ್ವಚನ ಮಾಡಿದರು. ಕಾರ್ಯಕ್ರಮದಲ್ಲಿ ಭಜನೆ ಸೇವೆಯನ್ನು ಶ್ರೀ ಬಸವೇಶ್ವರ ಕಲಾತಂಡ ಜೋಯಿಸರಹಳ್ಳಿ ಮತ್ತು ಅನೇಕ ಸಂಗೀತ ಕಲಾವಿದರು ನಡೆಸಿದರು. ಕಾರ್ಯಕ್ರಮದಲ್ಲಿ ಸುತ್ತಮುತ್ತಲಿನ ಗ್ರಾಮಸ್ಥರು ಸಹ ಭಾಗಿಯಾಗಿದ್ದರು. ವರದಿ: ಮಂಜು ಶ್ರವಣೂರು ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q
ತುಮಕೂರು: ಸಿದ್ದರಾಮಯ್ಯನಂತಹ ನುರಿತ ರಾಜಕಾರಣಿ ಕೂಡ ಹಠಕ್ಕೆ ಬೀಳ್ತಾರೆ ಅಂದ್ರೆ ಸ್ವಲ್ಪ ಕಷ್ಟವಾಗುತ್ತದೆ. ಅವರು ಅರ್ಥಮಾಡಿಕೊಂಡರೆ ಒಳ್ಳೆಯದು ಎಂದು ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವ ವಿ. ಸೋಮಣ್ಣ ತಿಳಿಸಿದ್ದಾರೆ. ತುಮಕೂರಿನಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಅವರು ಸಿದ್ದರಾಮಯ್ಯನವರು ಅವರ ಕಾಲು ಮೇಲೆ ಅವರೇ ಕಲ್ಲು ಹಾಕಿಕೊಳ್ತಿದ್ದಾರೆ. ರಾಜ್ಯ ಸರ್ಕಾರದ ಅಧಿಕಾರವನ್ನ ಅವರೇ ಬೇಡಾ ಅಂದಾಗ ನ್ಯಾಯಾಂಗವಿದೆ. ಅದರ ಮೇಲುಗಡೆ ಇನ್ನೊಂದು ಇದೆ ಎಂದರು. ದಿಢೀರ್ ತೆಗೆದುಕೊಳ್ಳುವ ತೀರ್ಮಾನ ಏನಾಗುತ್ತದೆ ಹೇಳಿ, ಇದು ಆಗಬಾರದಿತ್ತು, ಅದ್ಯಾಕೆ ಹೀಗೆ ಮಾಡ್ತಾ ಇದ್ದಾರೋ ಗೊತ್ತಿಲ್ಲ. ಒಂದು ತಪ್ಪು ಮಾಡಲು ಹೋಗಿ ನೂರಾರು ತಪ್ಪು ಮಾಡೋದಿಕ್ಕೆ ಇಂತಹ ಚಿಂತನೆ ಒಳ್ಳೆಯದಲ್ಲ ಎಂದರು. ರಾಜ್ಯಗಳಿಗೆ ಬರುವ ಅನುದಾನ ವಿಚಾರದಲ್ಲಿ ಜಲಶಕ್ತಿ ಖಾತೆ ನನಗೆ ನೇರವಾಗಿ ಇಲ್ಲ. ಶೇ.51 ರಾಜ್ಯದ ಪಾಲಿರುತ್ತದೆ, ಕೇಂದ್ರದಿಂದ ಬರುವ ಕೆಲಸಗಳು ನಮ್ಮವೆ ಎಂದರು. ಅನಿರೀಕ್ಷಿತವಾಗಿ ಬಂದ ನನ್ನನ್ನು ಲಕ್ಷಾಂತರ ಮತಗಳಿಂದ ಗೆಲ್ಲಿಸಿದರು. ತುಮಕೂರಿಗೆ ಮಾಡಬೇಕಾದ ಕೆಲಸ ತುಂಬಾ ಇದೆ. ಇನ್ನೂ ಎರಡು ಮೂರು ತಿಂಗಳಲ್ಲಿ…
ಹೊಳೆನರಸೀಪುರ: ಪೌರಕಾರ್ಮಿಕರ ಶ್ರಮಕ್ಕೆ ಪಟ್ಟಣದ ಸಮಸ್ತ ನಾಗರಿಕರು ಸದಾ ಋಣಿಯಾಗಿರಬೇಕು ಎಂದು ಲೋಕಸಭಾ ಸದಸ್ಯರಾದ ಶ್ರೇಯಸ್ ಎಂ. ಪಟೇಲ್ ತಿಳಿಸಿದರು. ಹೊಳೆನರಸೀಪುರ ಪಟ್ಟಣದಲ್ಲಿ ಪೌರಕಾರ್ಮಿಕರ ದಿನಾಚರಣೆ ಪ್ರಯುಕ್ತ ಪುರಸಭೆ ವತಿಯಿಂದ ಆಯೋಜಿಸಿದ್ದ ಮೆರವಣಿಗೆಯಲ್ಲಿ ಸಂಭ್ರಮದಲ್ಲಿ ಪಾಲ್ಗೊಂಡು ಪೌರಕಾರ್ಮಿಕರ ಶ್ರಮವನ್ನು ಮುಕ್ತ ಕಂಠದಿಂದ ಪ್ರಶಂಶಿಸಿದರು. ಮೆರವಣಿಗೆಯಲ್ಲಿ ತೆರೆದ ವಾಹನದಲ್ಲಿ ಇರಿಸಿದ್ದ ರಾಷ್ಟ್ರಪಿತ ಮಹಾತ್ಮ ಗಾಂಧೀಜಿ, ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಪುಷ್ಪ ಅರ್ಪಿಸಿದರು. ಮೆರವಣಿಗೆ ವೇಳೆ ಪೌರಕಾರ್ಮಿಕರೊಂದಿಗೆ ಶ್ರೇಯಸ್ ಎಂ. ಪಟೇಲ್ ಅವರು ನೃತ್ಯದಲ್ಲಿ ಪಾಲ್ಗೊಂಡು ಗಮನ ಸೆಳೆದರು. ಪುರಸಭಾಧ್ಯಕ್ಷ ಕೆ. ಶ್ರೀಧರ್, ಪುರಸಭೆ ಮುಖ್ಯ ಅಧಿಕಾರಿ ನಾಗೇಂದ್ರ ಕುಮಾರ್, ಸೇರಿದಂತೆ ಪುರಸಭೆಯ ನೌಕರರು ಸಿಬ್ಬಂದಿ ವರ್ಗದವರು ಹಾಗೂ ಪೌರಕಾರ್ಮಿಕರು ನೂರಾರು ಸಂಖ್ಯೆಯಲ್ಲಿ ಪಾಲ್ಗೊಂಡಿದ್ದರು. ವರದಿ: ಮಂಜು ಶ್ರವಣೂರು ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q