Author: admin

ಪಾವಗಡ: ಅಜಿಂ ಪ್ರೇಮ್ ಜೀ ಅವರ ಪೌಂಡೇಶನ್ ವತಿಯಿಂದ ಕರ್ನಾಟಕದ ಸರ್ಕಾರಿ ಶಾಲೆಗಳ ವಿದ್ಯಾರ್ಥಿಗಳಿಗೆ ವಾರದ 4 ದಿನಗಳು ಮೊಟ್ಟೆ ನೀಡುವ ಕಾರ್ಯಕ್ರಮಕ್ಕೆ ತಾಲ್ಲೂಕು ಮಟ್ಟದಲ್ಲಿ ಶಾಸಕರಾದ ಹೆಚ್.ವಿ.ವೆಂಕಟೇಶ್ ರವರು ಮರಿದಾಸನಹಳ್ಳಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಶಾಸಕರು ಮಾತನಾಡಿ, ಮರಿದಾಸನಹಳ್ಳಿ ಸರ್ಕಾರಿ ಶಾಲೆಯನ್ನು ಕರ್ನಾಟಕ ಪಬ್ಲಿಕ್ ಶಾಲೆಯನ್ನಾಗಿ ಮಾಡಲು ಈಗಾಗಲೇ ಪ್ರಸ್ಥಾವನೆಯನ್ನು ಸಲ್ಲಿಸಿ ಶಿಪಾರಸ್ಸು ಮಾಡಲಾಗಿದೆ. ಶೀಘ್ರದಲ್ಲೆ ಈ ಶಾಲೆ ಕೆ.ಪಿ.ಎಸ್. ಶಾಲೆಯಾಗಲಿದೆ ಎಂದರು. ಕ್ರೀಡಾಕೂಟಗಳಲ್ಲಿ ಭಾಗವಹಿಸಿ ಗೆಲುವು ಸಾದಿಸಿದ ವಿದ್ಯಾರ್ಥಿಗಳಿಗೆ ಪ್ರಮಾಣ ಪತ್ರ ವಿತರಿಸಿದರು. ಈ ಸಂದರ್ಭದಲ್ಲಿ ಬಿ.ಆರ್.ಸಿ  ಜಿ.ವೆಂಕಟೇಶ್, ಅಕ್ಷರ ದಾಸೋಹ ನಿರ್ದೇಶಕರಾದ ಶಂಕರಪ್ಪ, ಗ್ರಾಮ ಪಂಚಾಯಿತಿ ಅಧ್ಯಕ್ಷೆ ಲಲಿತಮ್ಮ, ಸಿಆರ್ ಪಿ ನರೇಂದ್ರ ನಾಯ್ಕ, ಪ್ರಾಥಮಿಕ ಶಾಲಾ ಮುಖ್ಯ ಶಿಕ್ಷಕಿ ಉಮಾದೇವಿ , ಪ್ರೌಢ ಶಾಲಾ ಮುಖ್ಯಶಿಕ್ಷಕ ರಾಜಗೋಪಾಲ್, ಪ್ರಾಂಶುಪಾಲರಾದ ಜಿ.ಎನ್.ಅಂಜಿನೇಯಲು, ಶಿಕ್ಷಕರು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು. ವರದಿ: ನಂದೀಶ್ ನಾಯ್ಕ, ಪಾವಗಡ ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು…

Read More

ಬೆಂಗಳೂರು ನಗರ: ಜಿಲ್ಲಾ ಗೃಹರಕ್ಷಕ ದಳ, ಬೆಂಗಳೂರು ದಕ್ಷಿಣ ಜಿಲ್ಲೆ, ಇಲ್ಲಿ ಖಾಲಿ ಇರುವ ಗೃಹರಕ್ಷಕ ಸ್ವಯಂ ಸೇವಾ ಸದಸ್ಯರ ಸ್ಥಾನಗಳನ್ನು ಭರ್ತಿ ಮಾಡಲು ಬೆಂಗಳೂರು ನಗರದ ಸ್ಥಳೀಯ ಆಸಕ್ತ ನಾಗರಿಕರಿಂದ  ಅರ್ಜಿಗಳನ್ನು  ಆಹ್ವಾನಿಸಲಾಗಿದ್ದು, ಅರ್ಜಿ ಸಲ್ಲಿಸುವ ಅವಧಿಯನ್ನು  ಅಕ್ಟೋಬರ್  10, 2024ರ ವರೆಗೆ ವಿಸ್ತರಿಸಲಾಗಿದೆ. ಗೃಹ ರಕ್ಷಕ ಸದಸ್ಯತ್ವ ಅರ್ಜಿ ನಮೂನೆಗಳನ್ನು ಸಮಾದೇಷ್ಟರವರ ಕಛೇರಿ, ಗೃಹರಕ್ಷಕ ದಳ, ಬೆಂಗಳೂರು  ದಕ್ಷಿಣ ಜಿಲ್ಲೆ, ಶೇಷಾದ್ರಿ ರಸ್ತೆ, ಫ್ರೀಡಂ ಪಾರ್ಕ್ ಹತ್ತಿರ, ಬೆಂಗಳೂರು ಇಲ್ಲಿ (ಕೆಲಸದ ದಿನಗಳಲ್ಲಿ) ಉಚಿತವಾಗಿ ವಿತರಿಸಲಾಗುವುದು. ಅರ್ಜಿಯನ್ನು  ಪಡೆಯಲು ಅಭ್ಯರ್ಥಿಯು ಎಸ್.ಎಸ್.ಎಲ್.ಸಿ. ಅಂಕಪಟ್ಟಿ, ಸ್ಥಳೀಯ ವಾಸ ಸ್ಥಳದ ದಾಖಲೆಯ ಆಧಾರ್ ಕಾರ್ಡ್/ ಚುನಾವಣಾ ಗುರುತಿನ ಚೀಟಿ / ಇತ್ತೀಚಿನ ಗ್ಯಾಸ್ ರಸೀದಿ –- ಮೂಲ ಪ್ರತಿಗಳನ್ನು  ಹಾಜರುಪಡಿಸಿ ಅರ್ಜಿ  ಪಡೆಯಬಹುದು. ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ: 080–22261012  ಗೆ ಸಂಪರ್ಕಿಸಬಹುದು ಎಂದು  ಬೆಂಗಳೂರು ದಕ್ಷಿಣ ಜಿಲ್ಲೆಯ ಗೃಹರಕ್ಷಕ  ದಳದ ಸಮಾದೇಷ್ಟರವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ . ನಮ್ಮತುಮಕೂರಿನ ಕ್ಷಣ ಕ್ಷಣದ…

Read More

ಬೆಂಗಳೂರು ನಗರ: ಕೈಮಗ್ಗ ಮತ್ತು ಜವಳಿ ಇಲಾಖೆ ವತಿಯಿಂದ 2024-25ನೇ ಸಾಲಿನ ನೇಕಾರ ಸಮ್ಮಾನ್ ಯೋಜನೆಯಡಿ ರಾಜ್ಯದಲ್ಲಿರುವ  ಪ್ರತಿ ಕೈಮಗ್ಗ ಮತ್ತು ವಿದ್ಯುತ್  ಮಗ್ಗ ನೇಕಾರರಿಗೆ  ವಾರ್ಷಿಕ ರೂ.5000/-ಗಳ ಆರ್ಥಿಕ ನೇರವನ್ನು ನೀಡುವ ಸಲುವಾಗಿ ಸೇವಾ ಸಿಂಧು ಪೋರ್ಟಲ್ ನಲ್ಲಿ  ಕೈಮಗ್ಗ, ವಿದ್ಯುತ್ ಮಗ್ಗ ಮತ್ತು ಮಗ್ಗ ಪೂರ್ವ ಘಟಕಗಳ ನೇಕಾರರ ಮಾಹಿತಿಯನ್ನು ಆಪ್ ಲೋಡ್ ಮಾಡಲು ಅನುಕೂಲವಾಗುವಂತೆ ಬೆಂಗಳೂರು ನಗರ ಜಿಲ್ಲೆಯ ಅರ್ಹ ಅಭ್ಯರ್ಥಿಗಳಿಂದ  ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಕೈಮಗ್ಗ, ವಿದ್ಯುತ್ ಮಗ್ಗ ಹಾಗೂ ಮಗ್ಗ ಪೂರ್ವ ಘಟಕಗಳ ಮಾಲೀಕರು, ನೇಕಾರರು ಹಾಗೂ ಕಾರ್ಮಿಕರು ಉಪ ನಿರ್ದೇಶಕರ ಕಛೇರಿ, ಕೈಮಗ್ಗ ಮತ್ತು ಜವಳಿ ಇಲಾಖೆ, ಎಸ್.ಜೆ.ಪಿ ಕಾಲೇಜು ಆವರಣ, ಐ.ಟಿ. ಬ್ಲಾಕ್ ಹತ್ತಿರ, ಕೆ.ಆರ್. ಸರ್ಕಲ್, ಬೆಂಗಳೂರು ಇಲ್ಲಿ ಅರ್ಜಿ ಪಡೆದು ಸೂಕ್ತ ದಾಖಲಾತಿಗಳೊಂದಿಗೆ  ಅಕ್ಟೋಬರ್ 30 ರೊಳಗೆ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗಾಗಿ: ದೂರವಾಣಿ ಸಂಖ್ಯೆ : 080-22341176 ಗೆ ಸಂಪರ್ಕಿಸಬಹುದು ಎಂದು ಬೆಂಗಳೂರು ನಗರ ಜಿಲ್ಲಾ  ಪಂಚಾಯತ್, ಕೈಮಗ್ಗ…

Read More

ತುಮಕೂರು: ಪ್ರಧಾನ ಮಂತ್ರಿ ಜನಜಾತಿಯ ಉನ್ನತ ಗ್ರಾಮ ಅಭಿಯಾನ ಯೋಜನೆಯಡಿ ಅಭಿವೃದ್ಧಿಪಡಿಸಲು ಪರಿಶಿಷ್ಟ ಪಂಗಡದ ಜನಾಂಗದವರು ಹೆಚ್ಚಾಗಿರುವ ಜಿಲ್ಲೆಯ ತುಮಕೂರು, ಕೊರಟಗೆರೆ, ಸಿರಾ, ಪಾವಗಡ, ಮಧುಗಿರಿ, ಗುಬ್ಬಿ, ಚಿಕ್ಕನಾಯಕನಹಳ್ಳಿ ತಾಲ್ಲೂಕು ವ್ಯಾಪ್ತಿಯ 29 ಗ್ರಾಮಗಳನ್ನು ಆಯ್ಕೆ ಮಾಡಿದ್ದು, ಮೂಲಭೂತ ಸೌರ್ಯಗಳ ಅಭಿವೃದ್ದಿಗೆ ಕ್ರಿಯಾ ಯೋಜನೆ ರೂಪಿಸಲಾಗಿದೆ ಎಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತಿಳಿಸಿದ್ದಾರೆ. ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಮೀಸಲಿರಿಸಿದ 79.156 ಕೋಟಿ ರೂ.ಗಳ ಅನುದಾನದಲ್ಲಿ ಬುಡಕಟ್ಟು ಸಮುದಾಯಗಳು ಹೆಚ್ಚಿನ ಸಂಖ್ಯೆಯಲ್ಲಿ ವಾಸಿಸುವ ದೇಶದ 63,000 ಗ್ರಾಮಗಳನ್ನು ಅಭಿವೃದ್ದಿ ಪಡಿಸಲು ಈ ಕ್ರಿಯಾಯೋಜನೆಯನ್ನು ರೂಪಿಸಲಾಗಿದೆ. ಕೇಂದ್ರ ಬುಡಕಟ್ಟು ಮಂತ್ರಾಲಯ ಈ ಯೋಜನೆಯನ್ನು ಅನುಷ್ಟಾನಗೊಳಿಸುವ ಜವಾಬ್ದಾರಿ ಹೊತ್ತಿದೆ. ದೇಶದ ಸುಮಾರು 5 ಕೋಟಿ ಜನರಿಗೆ ಯೋಜನೆಯಿಂದ ಅನುಕೂಲವಾಗಲಿದೆ. 2024–25 ರಿಂದ 2028–29ನೇ ಸಾಲಿನವರೆಗೆ 5 ವರ್ಷಗಳಲ್ಲಿ ಯೋಜನೆಯನ್ನು ಪೂರ್ಣಗೊಳಿಸಲಾಗುವುದು. 2024–25 ರಿಂದ 2025–26ನೇ ಸಾಲಿಗೆ ಮೊದಲ ಹಂತದಲ್ಲಿ 4.000 ಕೋಟಿ ರೂ.ಗಳ ಅನುದಾನವನ್ನು ಪ್ರಧಾನ ಮಂತ್ರಿ ಜನಜಾತಿಯ ಉನ್ನತ ಗ್ರಾಮ ಅಭಿಯಾನದಡಿ ನಿಗಧಿ…

Read More

ತುಮಕೂರು: ಪದವಿಪೂರ್ವ ಕಾಲೇಜುಗಳ ಪ್ರಾಚಾರ್ಯರ ಸಂಘದ ವತಿಯಿಂದ ಅರ್ಧ ವಾರ್ಷಿಕ ಪರೀಕ್ಷೆಯ ಪ್ರಶ್ನೆಪತ್ರಿಕೆ ಸಿದ್ಧಪಡಿಸುವ ಹಾಗೂ ವಿಷಯವಾರು ಪಠ್ಯ ಯೋಜನೆ ಕಾರ್ಯಾಗಾರ ನಗರದ ಎಂಪ್ರೆಸ್ ಪದವಿ ಪೂರ್ವ ಕಾಲೇಜಿನಲ್ಲಿ ಏರ್ಪಡಿಸಲಾಗಿತ್ತು. ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ) ತುಮಕೂರು ಉಪನಿರ್ದೇಶಕರಾದ ಡಾ.ಬಾಲಗುರುಮೂರ್ತಿ ಕಾರ್ಯಕ್ರಮ ಉದ್ಘಾಟನೆ ಮಾಡಿ ಮಾತನಾಡುತ್ತಾ, ವಿವಿಧ ವಿಷಯಗಳ ವೇದಿಕೆಗಳ ಮೂಲಕ ಸಿದ್ಧಪಡಿಸಿರುವ 2024–25 ನೇ ಸಾಲಿನ ಪ್ರಯೋಗ ರಹಿತ ವಿಷಯಗಳ ಯೋಜಿತ ಕಾರ್ಯಗಳ ಶೀರ್ಷಿಕೆಗಳ ಕೈಪಿಡಿ ಬಿಡುಗಡೆ ಮಾಡಿ ಜಿಲ್ಲೆಯ ಫಲಿತಾಂಶ ಹೆಚ್ಚಿಸಲೂ ನಿಮ್ಮ ಸಹಕಾರ ಅಗತ್ಯವಿದ್ದು, ಯಾವುದೇ ಲೋಪವಾಗದೆ ಇಲಾಖೆಯ ನಿಯಮದಂತೆ ಪ್ರಶ್ನೆಪತ್ರಿಕೆ ಸಿದ್ಧಪಡಿಸಿ. ಹಾಗೆ ಈ ಶೈಕ್ಷಣಿಕ ವರ್ಷದಲ್ಲಿ ದ್ವೈಮಾಸಿಕ ಸಂಚಿಕೆಯನ್ನೂ ಹೊರತರಲಾಗುವುದು ಉಪನ್ಯಾಸಕರಿಗೂ ಅವಕಾಶ ಇರುವುದರಿಂದ ನೀವು ಹೆಚ್ಚು ವೈಜ್ಞಾನಿಕ ಚಿಂತನೆ ಬರಹಗಳಿಗೆ ಹಾಗೂ ಉತ್ತಮ ಶೀರ್ಷಿಕೆ ಸಂಚಿಕೆಗೆ ನೀಡಲು ತಿಳಿಸಿದರು. ಎಲ್ಲಾ ಕಾಲೇಜಿನ ಮಕ್ಕಳು ನಮ್ಮ ಮಕ್ಕಳೇ ಎಂದು ತಿಳಿದು ಶೈಕ್ಷಣಿಕ ಅಭಿವೃದ್ಧಿಗೆ ಸಹಕರಿಸಬೇಕು, ತುಮಕೂರು ಜಿಲ್ಲೆ ಕಳೆದ ವರ್ಷ ದ್ವಿತೀಯ ಪಿಯುಸಿ…

Read More

ಪ್ರಸ್ತುತ 2024-25 ನೇ ಶೈಕ್ಷಣಿಕ ಸಾಲಿನ ಜುಲೈ ಆವೃತ್ತಿಯ ಪ್ರವೇಶಾತಿಯು ದಿನಾಂಕ: 22.07.2024 ರಿಂದ ಪ್ರಾರಂಭವಾಗಿದ್ದು, ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯವು 2024-25ನೇ ಶೈಕ್ಷಣಿಕ ಸಾಲಿನ ಜುಲೈ ಆವೃತ್ತಿಯಲ್ಲಿ ಯುಜಿಸಿ ಅನುಮೋದಿತ ಸ್ನಾತಕ/ ಸ್ನಾತಕೋತ್ತರ ಕೋರ್ಸ್ಗಳಾದ ಬಿ.ಎ., ಬಿ.ಕಾಂ., ಬಿ.ಬಿ.ಎ., ಬಿ.ಸಿ.ಎ., ಬಿ.ಎಸ್.ಡಬ್ಲ್ಯು. ಬಿ.ಎಲ್.ಐ.ಎಸ್ಸಿ., ಬಿ.ಎಡ್. (ಸಿ.ಇ.ಟಿ. ಮುಖಾಂತರ) ಹಾಗೂ ಬಿ.ಎಸ್ಸಿ, ಎಂ.ಎ, ಎಂ.ಸಿ.ಜೆ, ಎಂ.ಕಾಂ., ಎಂ.ಎಲ್.ಐ.ಎಸ್ಸಿ., ಎಂ.ಸಿ.ಎ., ಎಂ.ಎಸ್.ಡಬ್ಲ್ಯೂ, ಎಂ.ಎಸ್ಸಿ, ಎಂ.ಬಿ.ಎ., ಪಿ.ಜಿ. ಡಿಪ್ಲೋಮಾ ಪ್ರೋಗ್ರಾಮ್ಸ್, ಡಿಪ್ಲೋಮಾ ಪ್ರೋಗ್ರಾಮ್ಸ್, ಸರ್ಟಿಫಿಕೇಟ್ ಪ್ರೋಗ್ರಾಮ್ಸ್ ಗಳಿಗೆ ಪ್ರದೇಶಾತಿ ಪ್ರಕ್ರಿಯೆಗಳು ಪ್ರಾರಂಭಗೊಂಡಿರುತ್ತವೆ. ಕರಾಮುವಿ ಬೆಂಗಳೂರಿನಲ್ಲಿ 06 ಪ್ರಾದೇಶಿಕ ಕೇಂದ್ರಗಳಲ್ಲಿ ಪ್ರವೇಶಾತಿಯನ್ನು ಮಾಡಿಕೊಳ್ಳಲಾಗುತ್ತಿದೆ. ವಿದ್ಯಾರ್ಥಿಗಳಿಗೆ ಮತ್ತು ಪೋಷಕರಿಗೆ ತಿಳಿಸುವುದೇನೆಂದರೆ ಕರಾಮುವಿಯ ಅಧಿಕೃತ ವೆಬ್ಸೈಟ್ “www.ksoumysuru.ac.in” ನಲ್ಲಿ KSOU Admission Portal ಮೂಲಕ ಅರ್ಜಿ ಭರ್ತಿ ಮಾಡಿ ನಂತರ ಪ್ರಾದೇಶಿಕ ಕೇಂದ್ರಕ್ಕೆ ಖುದ್ದಾಗಿ ಭೇಟಿ ನೀಡಿ ದಾಖಲಾತಿಗಳ ಪರಿಶೀಲನೆ ನಂತರ ಆನ್ಲೈನ್ ಮುಖಾಂತರ ಪ್ರವೇಶಾತಿ ಶುಲ್ಕ ಪಾವತಿಸಿ ಸಿದ್ದಪಾಠಗಳನ್ನು ಪಡೆಯಬಹುದು.  ಎಂ.ಬಿ.ಎ., ಎಂ.ಸಿ.ಎ. & M.Sc.…

Read More

ತಿಪಟೂರು:  ತಾಲೂಕಿನ ಕರಡಿ ಹಾಲು ಉತ್ಪಾದಕರ ಸಹಕಾರ ಸಂಘದ ಮೂರನೇ ವರ್ಷದ ಸರ್ವ ಸದಸ್ಯರ ಮಹಾಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಸಂಘದ ಅಧ್ಯಕ್ಷರಾದ ಕೆ.ಆರ್.ದೇವರಾಜು,   ನಮ್ಮ ಸಂಘವನ್ನು ಪ್ರಾರಂಭಿಸಲು ಹಲವಾರು ವರ್ಷಗಳಿಂದ ಪ್ರಯತ್ನಿಸುತ್ತಿದ್ದು, ಕೆಲವು ಸ್ಥಳೀಯ ರಾಜಕಾರಣಿಗಳ ಕುಮ್ಮಕ್ಕಿನಿಂದ ಸಾಧ್ಯವಾಗಿರಲಿಲ್ಲ . ಆದರೆ ಸಹಕಾರ ಸಚಿವರಾದ ಕೆ.ಎನ್.ರಾಜಣ್ಣನವರು ಮಾಜಿ ಸಚಿವರಾದ ಜೆ.ಸಿ.ಮಾಧುಸ್ವಾಮಿ, ಬಿ.ಸಿ.ನಾಗೇಶ್ ರವರ ಸಹಕಾರದೊಂದಿಗೆ ಸಂಘವನ್ನು ಪ್ರಾರಂಭಿಸಿದ್ದು, ಇಂದು ಸಣ್ಣದಾಗಿ ಪ್ರಾರಂಭಿಸಿರುವ ಸಂಘವನ್ನು ಮುಂದೆ ಹೆಮ್ಮರವಾಗಿ ಬೆಳೆಸಬೇಕೆಂದು ಸದಸ್ಯರಿಗೆ ಕರೆ ನೀಡಿದರು. ಕೆಲವು ದುಷ್ಟರು ಎಷ್ಟೇ ಪ್ರಯತ್ನಿಸಿದರು ಅಂತಿಮವಾಗಿ ಸತ್ಯಕ್ಕೆ ಗೆಲುವು ಎಂಬಂತೆ ನಮ್ಮ ಸಂಘವನ್ನು ಪ್ರಾರಂಭಿಸಲು ಪ್ರತ್ಯಕ್ಷವಾಗಿ ಹಾಗೂ ಪರೋಕ್ಷವಾಗಿ ಸಹಕರಿಸಿದ ಇಲಾಖೆಯ ಅಧಿಕಾರಿಗಳಿಗೆ ಹಾಗೂ ಮುಖಂಡರಿಗೆ ಅಭಿನಂದನೆ ಸಲ್ಲಿಸಿದರು. ರೈತರು ಖಾಸಗಿ ಡೈರಿಗಳಿಗೆ ಬಲಿಯಾಗದೆ ನಂದಿನಿ ಡೈರಿಗಳಿಗೆ ಉತ್ತಮ ಗುಣಮಟ್ಟದ ಹಾಲು ಸರಬರಾಜು ಮಾಡಿ ಹೆಚ್ಚಿನ ದರ ಪಡೆಯಬೇಕೆಂದು ತಿಳಿಸಿದರು. ಸಭೆಯಲ್ಲಿ ಅತಿಥಿಗಳಾಗಿ ಕರಡಿ ಪ್ರಾಥಮಿಕ ಕೃಷಿ ಸಹಕಾರ ಸಂಘದ ಸಿ ಇ ಓ ಮನು ಹಾಲು…

Read More

ತುಮಕೂರು: ನಗರದ ಸಿದ್ದಗಂಗಾ ತಾಂತ್ರಿಕ ವಿದ್ಯಾಲಯದ ಪ್ರೊ.ಡಾ.ನಾಗರಾಜು ಅವರು ಅಮೆರಿಕಾದ ಸ್ಟನ್ ಫರ್ಡ್ ವಿಶ್ವವಿದ್ಯಾಲಯ ಇತ್ತೀಚೆಗೆ ಬಿಡುಗಡೆ ಮಾಡಿರುವ ವಿಶ್ವದ ಶ್ರೇಷ್ಠ ಅಗ್ರಮಾನ್ಯ ವಿಜ್ಞಾನಿಗಳ ಪಟ್ಟಿಯಲ್ಲಿ ಗುರುತಿಸಿಕೊಂಡಿದ್ದಾರೆ. ಅಂತಾರಾಷ್ಟ್ರೀಯವಾಗಿ ಪ್ರಕಟವಾದ ಸಂಶೋಧನಾ ಪ್ರಕಟಣೆಗಳು ಉಲ್ಲೇಖಗಳು, ಸಹಲೇಖನ, ಸಂಶೋಧನಾ ಪ್ರಕಟಣೆಗಳು ಮತ್ತು ಹೆಚ್ ಇಂಡೆಕ್ಸ್‌ಗಳನ್ನು ಪರಿಶೀಲಿಸಿದ ನಂತರ ವಿಶ್ವದ ಶೇ. 2ರಷ್ಟು ಅಗ್ರ ವಿಜ್ಞಾನಿಗಳ ಪಟ್ಟಿಯನ್ನು ಸ್ಟನ್ ಫರ್ಡ್ ವಿಶ್ವವಿದ್ಯಾಲಯವು ಇತ್ತೀಚಿಗೆ ಬಿಡುಗಡೆ ಮಾಡಿದೆ. ಈ ಪಟ್ಟಿಯಲ್ಲಿ ತುಮಕೂರು ಜಿಲ್ಲೆಯಿಂದ ಏಳು ಜನ ಪ್ರಾಧ್ಯಾಪಕರು ಸ್ಥಾನ ಗಿಟ್ಟಿಸಿಕೊಂಡಿದ್ದಾರೆ. ಈ ಪೈಕಿ ಮೊದಲನೆಯವರು ಡಾ.ಜಿ.ನಾಗರಾಜು, ಇವರ ವಿಶ್ವ ರ‍್ಯಾಂಕಿಂಗ್ 62446 ನೇ ಸ್ಥಾನದಲ್ಲಿ ಗುರುತಿಸಿಕೊಂಡು ತುಮಕೂರು ಜಿಲ್ಲೆಯ ಹಿರಿಮೆಗೆ ಪಾತ್ರರಾಗಿದ್ದಾರೆ. ಈ ಪಟ್ಟಿಯಲ್ಲಿ ತುಮಕೂರು ವಿಶ್ವವಿದ್ಯಾಲಯದ ಡಾ.ಎಚ್.ನಾಗಭೂಷಣ 1,11012ನೇ ಸ್ಥಾನ, ಡಾ.ಸುರೇಶ್ ಡಿ. ರವರು 1,53076 ನೇ ಸ್ಥಾನ, ಗಿರೀಶ್ ಕೆ.ಎಸ್. 227464 ನೇ ಸ್ಥಾನದಲ್ಲಿ ಗುರುತಿಸಿಕೊಂಡಿದ್ದಾರೆ. ಡಾ.ನಾಗರಾಜು ಕೊರಟಗೆರೆ ತಾಲ್ಲೂಕಿನ ಗಿಡಗನ ಹಳ್ಳಿಯವರು. ಇವರು ಎನರ್ಜಿ ಮೆಟೀರಿಯಲ್ಸ್ ಫಾರ್ ಬ್ಯಾಟರಿ ಅಂಡ್ ಫುಯಲ್…

Read More

ತುಮಕೂರು:  ಬೆಸ್ಕಾಂ ಶಿರಾ ಗ್ರಾಮೀಣ ಉಪವಿಭಾಗ ವ್ಯಾಪ್ತಿಯ ಬುಕ್ಕಾಪಟ್ಟಣ ಉಪಸ್ಥಾವರದಲ್ಲಿ ತುರ್ತು ನಿರ್ವಹಣಾ ಕಾಮಗಾರಿ ಕೈಗೊಂಡಿರುವುದರಿಂದ ಸೆಪ್ಟೆಂಬರ್ 28ರಂದು ಬೆಳಿಗ್ಗೆ 10 ರಿಂದ ಸಂಜೆ 5 ಗಂಟೆಯವರೆಗೆ  ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ. ಬುಕ್ಕಾಪಟ್ಟಣ, ರಾಮಲಿಂಗಾಪುರ, ನೇರಳಗುಡ್ಡ, ಹುಯಿಲ್ದೊರೆ, ಕುರುಬರಹಳ್ಳಿ ಪಂಚಾಯ್ತಿಯ ಎಲ್ಲಾ ಗ್ರಾಮಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದ್ದು, ಗ್ರಾಹಕರು ಸಹಕರಿಸಬೇಕೆಂದು ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಗೋವಿಂದರಾಯ ಜಿ.ಹೆಚ್. ಮನವಿ ಮಾಡಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q

Read More

ತುಮಕೂರು: ಜಿಲ್ಲೆಯ ಯಾವುದೇ ಆಸ್ಪತ್ರೆಯಲ್ಲಿ ಭ್ರೂಣ ಹತ್ಯೆ, ಲಿಂಗಪತ್ತೆ ಪ್ರಕರಣಗಳು ಕಂಡು ಬಂದಲ್ಲಿ ಅಂತಹ ವೈದ್ಯರ ಮೇಲೆ ಕ್ರಿಮಿನಲ್ ಮೊಕದ್ದಮೆ ದಾಖಲು ಮಾಡಲಾಗುತ್ತದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಚಂದ್ರಶೇಖರ್ ತಿಳಿಸಿದರು. ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಪಿಸಿ&ಪಿಎನ್ ಡಿಟಿ ಜಿಲ್ಲಾ ಸಲಹಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಭ್ರೂಣ ಹತ್ಯೆ, ಲಿಂಗಪತ್ತೆ ಪ್ರಕರಣಗಳನ್ನು ನಿಯಂತ್ರಿಸುವ ಉದ್ದೇಶದಿಂದ ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಮತ್ತು ನಿಷ್ಕ್ರಿಯಗೊಂಡ ಎಲ್ಲಾ ಸ್ಕ್ಯಾನಿಂಗ್ ಮಿಷನ್ ಗಳ ವರದಿಯನ್ನು ಸಲ್ಲಿಸುವಂತೆ ಎಲ್ಲಾ ಆಸ್ಪತ್ರೆ ಮತ್ತು ಕ್ಲಿನಿಕ್ ಗಳಿಗೂ ಸೂಚನೆ ನೀಡಲಾಗುತ್ತದೆ ಎಂದು ತಿಳಿಸಿದರು. ಹೊಸದಾಗಿ ಸ್ಕ್ಯಾನಿಂಗ್ ಯಂತ್ರ ಖರೀದಿಸುತ್ತಿರುವ ಸೆಂಟರ್ ಗಳಿಗೆ ಹಾಗೂ ಡೆಮೋ ನೀಡಲು ಅನುಮತಿ ಕೋರಿರುವ ಸ್ಕ್ಯಾನಿಂಗ್ ಯಂತ್ರಗಳಿಗೆ ಪಿಸಿ&ಪಿಎನ್ ಡಿಟಿ ಕಾಯ್ದೆಯನ್ವಯ ನಿಬಂಧನೆಗಳಿಗನುಗುಣವಾಗಿ ಅನುಮತಿ ನೀಡಲಾಗುತ್ತದೆ. ಜಿಲ್ಲೆಯಲ್ಲಿ ಯಾವುದೇ ಅನಧಿಕೃತ ಸ್ಕ್ಯಾನಿಂಗ್ ಯಂತ್ರಗಳು ಕಾರ್ಯಾರಂಭಗೊಳ್ಳದಂತೆ ಕ್ರಮವಹಿಸಲಾಗುತ್ತಿದೆ ಎಂದರು. ಸಭೆಯಲ್ಲಿ ಜಿಲ್ಲಾ ಕುಟುಂಬ ಕಲ್ಯಾಣಾಧಿಕಾರಿ(ಪ್ರಭಾರ) ಡಾ.ಮೋಹನ್,…

Read More