Subscribe to Updates
Get the latest creative news from FooBar about art, design and business.
- ಕರ್ನಾಟಕದ 25ನೇ ಮುಖ್ಯಮಂತ್ರಿಯಾಗಿ ಡಿ.ಕೆ.ಶಿವಕುಮಾರ್ ಪ್ರಮಾಣವಚನ ಸ್ವೀಕಾರ!
- ಸಾದರ ಸಮುದಾಯ ಭವನದಲ್ಲಿ ಸಪ್ತಗಿರಿ ಆಸ್ಪತ್ರೆ ವತಿಯಿಂದ ಬೃಹತ್ ಆರೋಗ್ಯ ತಪಾಸಣೆ ಮತ್ತು ಶಸ್ತ್ರ ಚಿಕಿತ್ಸಾ ಶಿಬಿರ
- ಖಾಸಗಿ ಶಾಲೆಗಳ ಮಾದರಿಯಲ್ಲೇ, ಸರ್ಕಾರಿ ಶಾಲೆಗಳ ರೂಪಾಂತರ: ಡಿ.ಕೆ.ಶಿವಕುಮಾರ್
- ತುಮಕೂರು ವಿವಿ 19ನೇ ಘಟಿಕೋತ್ಸವ: 90 ವಿದ್ಯಾರ್ಥಿಗಳಿಗೆ 117 ಚಿನ್ನದ ಪದಕ
- ಶಾಲೆಗಳ ಪುನರಾರಂಭ: ದಾಖಲಾತಿ ಆಂದೋಲನಕ್ಕೆ ಡಿ.ಸಿ. ಚಾಲನೆ
- ಸಚಿವ ಸ್ಥಾನದ ಆಸೆ ನನಗೂ ಇದೆ ಕೊಟ್ಟರೆ ಪ್ರಾಮಾಣಿಕವಾಗಿ ಕೆಲಸ ನಿರ್ವಹಿಸುವೆ: ಹೆಚ್.ವಿ.ವೆಂಕಟೇಶ್
- ನವಿಲೆ ಭಾಗಕ್ಕೆ ಹೇಮಾವತಿ ನೀರನ್ನು ಹರಿಸಲಾಗುವುದು ರೈತರು ಆತಂಕಪಡುವ ಅಗತ್ಯವಿಲ್ಲ: ಶಾಸಕ ಸಿ.ಬಿ.ಸುರೇಶ್ ಬಾಬು
- ‘ಗರ್ಭಿಣಿನೂ ಇಲ್ಲ, ಮಹಿಳೆಯೂ ಇಲ್ಲ… ಕಾರಿನಲ್ಲಿ ಒಬ್ಬರೇ ಇದ್ದಿದ್ದು!’: ಝೀರೋ ಟ್ರಾಫಿಕ್ ಪ್ರತಿಭಟನೆಯ ಅಸಲೀಯತ್ತು ಬಿಚ್ಚಿಟ್ಟ ಬೆಂಗಳೂರು ಪೊಲೀಸರು
Author: admin
ತುಮಕೂರು: ಸೀಮೆಎಣ್ಣೆ ಸುರಿದು ಹೆಂಡತಿಗೆ ಬೆಂಕಿ ಹಚ್ಚಿ ನಾಪತ್ತೆಯಾಗಿದ್ದ ಆರೋಪಿ ಪತಿಯನ್ನು 35 ವರ್ಷಗಳ ನಂತರ ನೊಣವಿನಕೆರೆ ಪೊಲೀಸರು ಬಂಧಿಸಿದ್ದಾರೆ. ತಿಪಟೂರು ತಾಲೂಕು ಕುಡುವನಘಟ್ಟ ಗ್ರಾಮದಲ್ಲಿ 35 ವರ್ಷಗಳ ಹಿಂದೆ ನಡೆದಿದ್ದ ಘಟನೆಯಾಗಿದೆ. 35 ವರ್ಷಗಳ ಹಿಂದೆ ಕ್ಷುಲ್ಲಕ ಕಾರಣಕ್ಕೆ ಹೆಂಡತಿ ಗೌರಮ್ಮ ಮೇಲೆ ಸೀಮೆಎಣ್ಣೆ ಸುರಿದು ಪತಿ ನಿಂಗಪ್ಪ ಬೆಂಕಿ ಹಚ್ಚಿ ಕೊಲೆ ಮಾಡಿ ಪರಾರಿಯಾಗಿದ್ದನು. ಬಳಿಕ 35 ವರ್ಷಗಳಿಂದ ತಲೆ ಮರೆಸಿಕೊಂಡಿದ್ದ ಆರೋಪಿ ನಿಂಗಪ್ಪ ಇತ್ತೀಚೆಗೆ ಗ್ರಾಮಕ್ಕೆ ಹಿಂತಿರುಗಿರೋದು ಮಾಹಿತಿ ಪೊಲೀಸರಿಗೆ ಲಭಿಸಿತ್ತು. ತಕ್ಷಣ ಸ್ಥಳಕ್ಕೆ ಬಂದ ಪೊಲೀಸರು ಆತನನ್ನು ವಶಕ್ಕೆ ಪಡೆದು ವಿಚಾರಣೆ ಆರಂಭಿಸಿದ್ದಾರೆ. ಈ ಸಂಬಂಧ ನೊಣವಿನಕೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296
ಬೆಂಗಳೂರು: ದಕ್ಷ, ಜನಪರ ಅಧಿಕಾರಿಯಾಗಿ ಹೆಸರುವಾಸಿಯಾಗಿರುವ ಬೇಲೂರು ತಹಶೀಲ್ದಾರ್ ಮಮತಾ ಅವರಿಗೆ ವೃಕ್ಷಮಾತೆ ಪದ್ಮಶ್ರೀ ಸಾಲುಮರದ ಸಾಲುಮರದ ತಿಮ್ಮಕ್ಕ ರವರ 113 ನೇ ಜನ್ಮ ದಿನೋತ್ಸವ ಕಾರ್ಯಕ್ರಮದಲ್ಲಿ ಗುರುವಾರ “ಸಾಲುಮರದ ತಿಮ್ಮಕ್ಕ ನ್ಯಾಷನಲ್ ಗ್ರೀನರಿ ಅವಾರ್ಡ್” ಪ್ರದಾನ ಮಾಡಲಾಯಿತು. ವೃಕ್ಷಮಾತೆ ಪದ್ಮಶ್ರೀ ಸಾಲು ಮರದ ತಿಮ್ಮಕ್ಕ ಇವರ ಸಮಕ್ಷಮದಲ್ಲಿ ಗೃಹ ಮಂತ್ರಿಗಳಾದ ಡಾ.ಜಿ ಪರಮೇಶ್ವರ್ ಅರಣ್ಯಸಚಿವರಾದ ಈಶ್ವರ ಕಂಡ್ರೆ ಇವರು ಪ್ರಶಸ್ತಿ ಪ್ರದಾನ ಮಾಡಿದರು. ತಹಶೀಲ್ದಾರ್ ಮಮತಾ ಅವರ ಪರಿಸರದ ಹಿತಾಸಕ್ತಿ, ಹಸಿರು ಬೆಳವಣಿಗೆ ಮತ್ತು ಜನಸೇವೆಯಲ್ಲಿನ ಕಾಳಜಿ ಹಾಗೂ ಪ್ರಾಮುಖ್ಯತೆಯನ್ನು ಗುರುತಿಸಿ ಈ ಪ್ರಶಸ್ತಿಗೆ ಆಯ್ಕೆ ಮಾಡಲಾಗಿತ್ತು. ಪ್ರಶಸ್ತಿ ಸ್ವೀಕರಿಸಿದ ತಹಶೀಲ್ದಾರ್ ಮಮತಾ ಅವರಿಗೆ ಕಾಳಜಿ ಪೌಂಡೇಶನ್(ರಿ.) ತುಮಕೂರು ಮತ್ತು G & S Law Chambers, ತುಮಕೂರು ಸಂಸ್ಥೆಗಳು ಅಭಿನಂದನೆಗಳನ್ನು ಸಲ್ಲಿಸಿದರು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q
ಸಹಕಾರ ಸಂಘಗಳಲ್ಲಿ ಹೆಚ್ಚಾಗಿ ಪ್ರಚಲಿತ ಇರುವುದು ವ್ಯವಸಾಯ ಸೇವಾ ಸಹಕಾರ ಸಂಘ ಹಾಗೂ ಹಾಲು ಉತ್ಪಾದಕರ ಸಹಕಾರ ಸಂಘಗಳು ಇವು ಜನ ಸಾಮಾನ್ಯರಿಗೂ ಹಾಗೂ ರೈತರಿಗೂ ತುಂಬಾ ಅವಶ್ಯಕ. ಸಹಕಾರ ಸಂಘಗಳು ಈ ಸಂಘಗಳನ್ನು ಎಷ್ಟು ಅಭಿವೃದ್ಧಿ ಕಾಣುತ್ತಾವೋ ಅಷ್ಟು ಅನುಕೂಲ ರೈತರಿಗೂ ಜನ ಸಾಮಾನ್ಯರಿಗೂ ಆಗುತ್ತದೆ. ಆದರೆ ಷೇರುದಾರರು ಇವುಗಳ ಲಾಭ–ನಷ್ಟದ ಬಗ್ಗೆ ಗಮನ ನೀಡದೇ ಇರುವುದು ಪ್ರಶ್ನೆ ಮಾಡದ ಕಾರಣ ಈ ಸಹಕಾರ ಸಂಘಗಳು ನಿರೀಕ್ಷೆ ಮಟ್ಟಕ್ಕೆ ಬೆಳೆಯದೆ ಇರಲು ಕಾರಣ ಆಗಿದೆ. ಇಲ್ಲಿ ಕಾರ್ಯದರ್ಶಿಗಳ ಜನಪ್ರತಿನಿಧಿಗಳ ಸಹಕಾರ ಸಂಘಗಳನ್ನು ಬೆಳಸುವಲ್ಲಿ ವಿಫಲರಾಗಿದ್ದಾರೆ. ಇಲ್ಲಿ ಲಾಭವನ್ನು ಅಪೇಕ್ಷೆ ಪಡುತ್ತಾರೆ ಹೊರತು ಸಹಕಾರ ಸಂಘಗಳನ್ನು ಒಂದು ಲಾಭದಾಯಕ ಸಂಸ್ಥೆಗಳನ್ನು ಮಾಡುವಲ್ಲಿ ವಿಫಲರಾಗಿದ್ದಾರೆ ಎಂಬ ಮಾತುಗಳು ಪ್ರಜ್ಞಾವಂತ ನಾಗರೀಕರಿಂದ ಕೇಳಿ ಬರುತ್ತದೆ. ಸಹಕಾರ ಸಂಘಗಳ ವಾರ್ಷಿಕ ಸಭೆಗಳು ನಾಮಕಾವಸ್ಥೆ ಸಭೆಗಳು ಆಗುವುದು ಹೆಚ್ಚು ಎಂಬ ಮಾತುಗಳು ಕೇಳಿ ಬರುತ್ತದೆ. ಈ ಸಭೆಗಳಲ್ಲಿ ಸಂಘಗಳ ಲೆಕ್ಕ ಪರಿಶೋಧನೆ ಬಗ್ಗೆ ಮುಂದೆ ಇಟ್ಟುಕೊಂಡು ಚರ್ಚೆ…
ಬುಡಕಟ್ಟು ಬಹುಸಂಖ್ಯಾತ ಗ್ರಾಮಗಳು ಮತ್ತು ಮಹತ್ವಾಕಾಂಕ್ಷಿ ಜಿಲ್ಲೆಗಳಲ್ಲಿ ಬುಡಕಟ್ಟು ಕುಟುಂಬಗಳಿಗೆ ಸಂಪೂರ್ಣತೆಯನ್ನು ಸಾಧಿಸುವ ಮೂಲಕ, ಬುಡಕಟ್ಟು ಸಮುದಾಯಗಳ ಸಾಮಾಜಿಕ–ಆರ್ಥಿಕ ಸ್ಥಿತಿಯನ್ನು ಸುಧಾರಿಸಲು ಪ್ರಧಾನ ಮಂತ್ರಿ ಜನಜಾತಿಯ ಉನ್ನತ್ ಗ್ರಾಮ ಅಭಿಯಾನ ಕಾರ್ಯಕ್ರಮ ದೇಶದಾದ್ಯಂತ ನಡೆಯಲಿದೆ. ಈ ಅಭಿಯಾನವು ಬುಡಕಟ್ಟು ಪ್ರದೇಶಗಳಲ್ಲಿ ಭಾರತ ಸರ್ಕಾರದ ವಿವಿಧ ಯೋಜನೆಗಳ ಮೂಲಕ ಸಾಮಾಜಿಕ ಮೂಲಸೌಕರ್ಯ, ಆರೋಗ್ಯ, ಶಿಕ್ಷಣ, ಜೀವನೋಪಾಯದಲ್ಲಿನ ನಿರ್ಣಾಯಕ ಅಂತರವನ್ನು ನಿವಾರಿಸುವ ಗುರಿಯನ್ನು ಹೊಂದಿದ್ದು, ಬುಡಕಟ್ಟು ಪ್ರದೇಶಗಳಲ್ಲಿ ಕಲಿಕೆ ಮತ್ತು ಯಶಸ್ಸಿನ ಆಧಾರದ ಮೇಲೆ ಬುಡಕಟ್ಟು ಪ್ರದೇಶಗಳು ಮತ್ತು ಸಮುದಾಯಗಳ ಸಮಗ್ರ ಮತ್ತು ಸುಸ್ಥಿರ ಅಭಿವೃದ್ಧಿಯನ್ನು ಖಚಿತಪಡಿಸಲಿದೆ. ಈ ಯೋಜನೆಗೆ ಉತ್ತರ ಕನ್ನಡ ಜಿಲ್ಲೆಯಲ್ಲಿ ಪರಿಶಿಷ್ಟ ಪಂಗಡದ ಜನಾಂಗದವರು ಹೆಚ್ಚಾಗಿರುವ ವಿವಿಧ ತಾಲೂಕುಗಳ ಒಟ್ಟು 31 ಗ್ರಾಮಗಳನ್ನು , ಕೇಂದ್ರ ಬುಡಕಟ್ಟು ಮಂತ್ರಾಲಯದಿಂದ ಪ್ರಧಾನ ಮಂತ್ರಿ ಜನಜಾತೀಯ ಉನ್ನತ ಗ್ರಾಮ ಅಭಿಯಾನದಡಿ ಅಭಿವೃದ್ಧಿ ಪಡಿಸಲು ಆಯ್ಕೆ ಮಾಡಿದ್ದು, ಸದರಿ ಗ್ರಾಮಗಳಲ್ಲಿ ವಾಸಿಸುವ ಪರಿಶಿಷ್ಟ ಪಂಗಡದ ಜನಾಂಗದವರಿಗೆ ಮೂಲಭೂತ ಸೌಕರ್ಯ, ಆರ್ಥಿಕ ಸಬಲೀಕರಣ, ಉತ್ತಮ ಶಿಕ್ಷಣಕ್ಕೆ…
ಶ್ರೀ ಕ್ಷೇತ್ರ ಕಟೀಲು ದುರ್ಗಾಪರಮೇಶ್ವರೀ ಜ್ಯೋತಿಷ್ಯ ಪೀಠಂ ದೈವಜ್ಞ ಪಂಡಿತ್ ಕೃಷ್ಣ ಭಟ್ ಪ್ರಧಾನ ತಾಂತ್ರಿಕ್ ಹಾಗೂ ಮಾಂತ್ರಿಕರು ಸ್ತ್ರೀ ಪುರುಷ ವಶೀಕರಣ ಸ್ಪೆಷಲಿಸ್ಟ್ ನನಗೆ ಒಂದೇ ಕರೆ ಮಾಡಿದರೆ ನಿಮ್ಮ ಇಷ್ಟಪಟ್ಟವರು ನಿಮ್ಮಂತೆ 9535156490 ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆ ಉತ್ತರಿಸಬಹುದು ಏಷ್ಟೇ ಪೂಜೆ ಪ್ರಯತ್ನ ಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..?ನಿಮ್ಮ ಯಾವುದೇಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ 2 ದಿನಗಳಲ್ಲಿ ಪರಿಹಾರ ಶತಸಿದ್ಧ ಧನವಶ, ಜನವಶ, ಶತ್ರುನಾಶ, ಸ್ತ್ರೀ- ಪುರುಷ ವಶೀಕರಣ, ದಿಗ್ಭಂಧನ, ಸ್ತಂಭನ, ವುಚ್ಛಾಟನೆಯಂತಹ ಸಮಸ್ಯೆಗಳಿಗೆ ವಿಶೇಷ ಪರಿಹಾರ ತಿಳಿಸುತ್ತಾರೆ 9535156490 Provided by ಸಂಖ್ಯಾಶಾಸ್ತ್ರದ ಪ್ರಕಾರ.. ಜನರು ತಮ್ಮ ಜನ್ಮ ದಿನಾಂಕದ ಆಧಾರದ ಮೇಲೆ ತಮ್ಮ ಗುಣಲಕ್ಷಣಗಳು ಮತ್ತು ವಿಶೇಷತೆಗಳನ್ನು ವಿಶ್ಲೇಷಿಸುತ್ತಾರೆ. ಸಂಖ್ಯೆಗಳ ಆಧಾರದ ಮೇಲೆ ಒಬ್ಬ ವ್ಯಕ್ತಿಯು ಯಾವ ರೀತಿಯ ವ್ಯಕ್ತಿ ಎಂದು ಹೇಳಬಹುದು…
ಪಾವಗಡ: ಪುರಸಭೆಯ ಆವರಣದಲ್ಲಿ 34 ಪುರಸಭೆಯ ಅಂಗಡಿಗಳನ್ನು ಹರಾಜು ಪ್ರಕ್ರಿಯೆಯಲ್ಲಿ 12 ವರ್ಷಗಳ ಮಟ್ಟಿಗೆ ಬಾಡಿಗೆ ನೀಡಲಾಗಿದ್ದು, ಗುರುವಾರ ಬೆಳಗ್ಗೆ 11 ಗಂಟೆಯ ಸಮಯದಲ್ಲಿ ಹರಾಜು ಪ್ರಕ್ರಿಯೆಯನ್ನು ನಡೆಸಲಾಗಿದೆ. ಮೊದಲನೇ ಹಂತದ 34 ಅಂಗಡಿಗಳನ್ನು ಸಂಜೆ 6:00 ವರೆಗೂ ಹರಾಜು ಹಾಕಲಾಗಿದ್ದು ಬರೋಬ್ಬರಿ ನಾಲ್ಕು ಲಕ್ಷಕ್ಕೂ ಅಧಿಕ ಮೊತ್ತಕ್ಕೆ 34 ಪುರಸಭೆಯ ಮಳಿಗೆಗಳು ಹರಾಜ್ ಆಗಿವೆ ಈ ಸಂದರ್ಭದಲ್ಲಿ ಅಧ್ಯಕ್ಷ ಪಿ ಎಚ್ ರಾಜೇಶ್, ಉಪಾಧ್ಯಕ್ಷೆ ಗೀತಾ ಹನುಮಂತರಾಯಪ್ಪ, ಮುಖ್ಯ ಅಧಿಕಾರಿ ಜಾಫರ್ ಷರೀಫ್, ಸದಸ್ಯರಾದ ಸುರೇಶ್ ಬಾಬು, ಕಲ್ಪವೃಕ್ಷ ರವಿ, ರಾಮಾಂಜಿನಪ್ಪ, ಸಿ ಎನ್ ರವಿಕುಮಾರ್, ವಿಜಯ ಕುಮಾರ್, ಗಂಗಮ್ಮ, ವೇಲರಾಜು, ಆರೋಗ್ಯ ಅಧಿಕಾರಿ ಶಂಸುದ್ದೀನ್, ವ್ಯವಸ್ಥಾಪಕ ಸಂತೋಷ್ ಸಿಬ್ಬಂದಿಗಳಾದ ಶಾಂತಕುಮಾರ್, ಜ್ಞಾನೇಶ್ ಬಾಬು, ನಂದೀಶ್ ಸೇರಿದಂತೆ ಅನೇಕರು ಹಾಜರಿದ್ದರು. ವರದಿ: ನಂದೀಶ್ ನಾಯ್ಕ, ಪಾವಗಡ ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ:…
ತುಮಕೂರು: ಜಿಲ್ಲಾಡಳಿತದ ವತಿಯಿಂದ ಮೊದಲ ಬಾರಿಗೆ ನಡೆಸಲಾಗುತ್ತಿರುವ ತುಮಕೂರು ದಸರಾ ಕಾರ್ಯಕ್ರಮವನ್ನು ವೈಭವಯುತವಾಗಿ ಆಚರಿಸಲು ಅಗತ್ಯ ರೂಪುರೇಷೆಗಳನ್ನು ತಯಾರಿಸಿಕೊಳ್ಳುವಂತೆ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಜಿ.ಪ್ರಭು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು. ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿಂದು ತುಮಕೂರು ದಸರಾ ಆಚರಣೆ ಪೂರ್ವ ಭಾವಿ ಸಭೆಯ ಅಧ್ಯಕ್ಷತೆವಹಿಸಿ ಮಾತನಾಡಿದ ಅವರು, ನಗರದ ಗುಬ್ಬಿ ವೀರಣ್ಣ ಕಲಾ ಕ್ಷೇತ್ರದಲ್ಲಿ ತುಮಕೂರು ದಸರಾ ಆಚರಣೆ ಅಂಗವಾಗಿ ವಿವಿಧ ಕಾಲೇಜು ವಿದ್ಯಾರ್ಥಿಗಳಿಂದ ಯುವ ದಸರಾ ಹಾಗೂ ಜಿಲ್ಲೆಯ ಸ್ಥಳೀಯ ಕಲಾವಿದರಿಂದ ಪ್ರತಿನಿತ್ಯ ಸಾಂಸ್ಕೃತಿಕ ಸಂಜೆ ಕಾರ್ಯಕ್ರಮಗಳನ್ನು ಆಯೋಜಿಸುವುದರ ಜೊತೆಗೆ ಜಿಲ್ಲೆಯ ಪ್ರಸಿದ್ದ ಕಲಾವಿದರನ್ನು ಸನ್ಮಾನಿಸಲಾಗುತ್ತದೆ. ನಗರದ ಟೌನ್ ಹಾಲ್ ಸರ್ಕಲ್ನಿಂದ ಶಿವಕುಮಾರ ಸ್ವಾಮೀಜಿ ಸರ್ಕಲ್ವರೆಗೆ ವಿದ್ಯುತ್ ದೀಪಗಳಿಂದ ವಿಶೇಷವಾಗಿ ಅಲಂಕರಿಸುವುದರ ಜೊತೆಗೆ ನಗರದ ಪ್ರಮುಖ ಬೀದಿ, ವೃತ್ತಗಳು ಮತ್ತು ನಗರದಲ್ಲಿ 100 ವರ್ಷ ಪೂರೈಸಿದ ಸರ್ಕಾರಿ ಕಟ್ಟಡಗಳನ್ನು ವಿದ್ಯುತ್ ದೀಪಗಳಿಂದ ಅಲಂಕರಿಸಬೇಕು ಎಂದು ಸೂಚನೆ ನೀಡಿದರು. ಸಭೆಯಲ್ಲಿ ಸಮಾಜ ಕಲ್ಯಾಣ ಇಲಾಖೆ ಜಂಟಿ ನಿರ್ದೇಶಕ ಕೃಷ್ಣಪ್ಪ, ಮಹಿಳಾ ಮತ್ತು…
ತುಮಕೂರು: ಜಿಲ್ಲಾಡಳಿತದ ವತಿಯಿಂದ ಜಿಲ್ಲೆಯಲ್ಲಿ ಆಚರಿಸುತ್ತಿರುವ ದಸರಾ ಉತ್ಸವಕ್ಕೆ ಸಂಬಂಧಿಸಿದ ಅಗತ್ಯ ಪೂರ್ವ ಸಿದ್ಧತೆಗಳನ್ನು ತ್ವರಿತವಾಗಿ ಪೂರ್ಣಗೊಳಿಸುವಂತೆ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು. ದಸರಾ ಉತ್ಸವ ಕುರಿತು ಜಿಲ್ಲಾಧಿಕಾರಿಗಳ ಕಚೇರಿ ನ್ಯಾಯಾಲಯ ಸಭಾಂಗಣದಲ್ಲಿ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಯಶಸ್ವಿ ದಸರಾ ಉತ್ಸವ ಆಚರಣೆಗಾಗಿ 12ಕ್ಕಿಂತ ಹೆಚ್ಚು ಉಪಸಮಿತಿಗಳನ್ನು ರಚಿಸಲಾಗಿದ್ದು, ಸಮಿತಿಗಳು ತಮಗೆ ವಹಿಸಿರುವ ಎಲ್ಲಾ ಕಾರ್ಯ ಚಟುವಟಿಕೆಗಳನ್ನು ತ್ವರಿತವಾಗಿ ಪೂರ್ಣಗೊಳಿಸಬೇಕೆಂದ ಅವರು ಪ್ರಸ್ತುತದವರೆಗೆ ಆಗಿರುವ ಪ್ರಗತಿ ವಿವರವನ್ನು ಪರಿಶೀಲಿಸಿದರು. ನಾಡಿನ ಸಂಸ್ಕೃತಿಯನ್ನು ಬಿಂಬಿಸುವಂತೆ ವಿದ್ಯುತ್ ಅಲಂಕಾರವು ವೈವಿಧ್ಯಮಯವಾಗಿ ವಿನ್ಯಾಸಗೊಳಿಸಿ ನಗರವನ್ನು ಅಲಂಕೃತಗೊಳಿಸಬೇಕು. ಈ ನಿಟ್ಟಿನಲ್ಲಿ ಮಹಾನಗರಪಾಲಿಕೆ ಹಾಗೂ ಬೆಸ್ಕಾಂ ಅಧಿಕಾರಿಗಳು ಕೂಡಲೇ ಕಾರ್ಯಪ್ರವೃತ್ತರಾಗಬೇಕೆಂದು ಸೂಚಿಸಿದರು. ನಗರದ ಸರ್ಕಾರಿ ಪದವಿ ಪೂರ್ವ ಕಾಲೇಜು ಮೈದಾನದಲ್ಲಿ ಸುಸಜ್ಜಿತ ಹಾಗೂ ಸುರಕ್ಷಿತವಾದ ಹೆಲಿಪ್ಯಾಡ್ ನಿರ್ಮಾಣಕ್ಕೆ ಸಂಬಂಧಿಸಿದಂತೆ ಅಗತ್ಯ ಮುನ್ನೆಚ್ಚರಿಕೆ ವಹಿಸುವಂತೆ ಪಾಲಿಕೆ ಅಧಿಕಾರಿಗಳಿಗೆ ಸೂಚಿಸಿದರು. ಪ್ರತಿ ದಿನ ಸಂಜೆ ನಡೆಯುವಂತಹ ವೈವಿಧ್ಯಮಯ ಸಾಂಸ್ಕೃತಿಕ ಕಾರ್ಯಕ್ರಮಗಳು ಸಾರ್ವಜನಿಕರಿಗೆ ಆಕರ್ಷಕವಾಗುವ…
ತುಮಕೂರು: ಕುಣಿಗಲ್ ನಗರದ ಸಿವಿಲ್ ಬಸ್ ನಿಲ್ದಾಣದಲ್ಲಿ ಪ್ರತಿಷ್ಠಾಪನೆ ಮಾಡಿರುವ ಶ್ರೀ ಹಿಂದೂ ಮಹಾಗಣಪತಿ ವಿಸರ್ಜನಾ ಮೆರವಣಿಗೆ ಸೆಪ್ಟೆಂಬರ್ 27ರಂದು ನಡೆಯಲಿದೆ. ಹೀಗಾಗಿ ಗಣಪತಿ ಮೂರ್ತಿಯ ವಿಸರ್ಜನಾ ಮೆರವಣಿಗೆ ಹಾದು ಹೋಗುವ ಪ್ರಮುಖ ಸ್ಥಳಗಳಲ್ಲಿ ಅಹಿತಕರ ಘಟನೆಗಳು ಜರುಗದಂತೆ ಶಾಂತಿ ಸುವ್ಯವಸ್ಥೆ ಕಾಪಾಡುವ ಉದ್ದೇಶದಿಂದ ಕುಣಿಗಲ್ ನಗರದ 5 ಕಿ.ಮೀ. ವ್ಯಾಪ್ತಿಯಲ್ಲಿ ಸೆಪ್ಟೆಂಬರ್ 27ರ ಬೆಳಿಗ್ಗೆ 6 ರಿಂದ ಮಧ್ಯರಾತ್ರಿ 12 ಗಂಟೆಯವರೆಗೆ ಒಣ ದಿನವೆಂದು ಘೋಷಿಸಿ ಮದ್ಯ ಮಾರಾಟವನ್ನು ನಿಷೇಧಿಸಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಶುಭ ಕಲ್ಯಾಣ್ ಆದೇಶ ಹೊರಡಿಸಿದ್ದಾರೆ. ಈ ಆದೇಶದನ್ವಯ ಡಿಸ್ಟಿಲರಿ ಹೊರತುಪಡಿಸಿ ಎಲ್ಲಾ ತರಹದ ಮದ್ಯ ಮಾರಾಟ, ಸಾಗಾಣಿಕೆಯನ್ನು ನಿಷೇಧಿಸಲಾಗಿದೆ ಎಂದು ಅವರು ಸೂಚಿಸಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q
ತುಮಕೂರು: ಜಿಲ್ಲಾ ಮಟ್ಟದ ದಸರಾ ಕ್ರೀಡಾ ಕೂಟಕ್ಕಿಂದು ಗುಂಡು ಎಸೆಯುವ ಮೂಲಕ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಜಿ.ಪ್ರಭು ಚಾಲನೆ ನೀಡಿದರು. ನಗರದ ಮಹಾತ್ಮಗಾಂಧಿ ಜಿಲ್ಲಾ ಕ್ರೀಡಾಂಗಣದಲ್ಲಿಂದು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ಶಾಲಾ ಶಿಕ್ಷಣ ಇಲಾಖೆಯ ವತಿಯಿಂದ ಆಯೋಜಿಸಲಾಗಿದ್ದ ಜಿಲ್ಲಾ ಮಟ್ಟದ ದಸರಾ ಕ್ರೀಡಾಕೂಟಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಸರ್ಕಾರದಿಂದ ಕ್ರೀಡೆಯನ್ನು ಪ್ರೋತ್ಸಾಹಿಸುವ ಉದ್ದೇಶದಿಂದ ಕ್ರೀಡಾಪಟುಗಳಿಗೆ ಮೀಸಲಾತಿ ಸೌಲಭ್ಯವನ್ನು ಕಲ್ಪಿಸಿದ್ದು, ಕ್ರೀಡಾಪಟುಗಳು ಇದರ ಸದುಪಯೋಗಪಡಿಸಿಕೊಳ್ಳಬೇಕೆಂದು ತಿಳಿಸಿದರು. ಮನುಷ್ಯ ಸ್ವಾಭಾವಿಕವಾಗಿ ಸೃಜನಶೀಲತೆ ಬೆಳೆಸಿಕೊಳ್ಳಲು ಕ್ರೀಡೆ ಬಹಳ ಮುಖ್ಯ. ಕ್ರೀಡಾಪಟುಗಳು ತಮ್ಮ ಸತತ ಪ್ರಾಮಾಣಿಕ ಪ್ರಯತ್ನದಿಂದ ಗುರಿ ಸಾಧಿಸುವ ಮೂಲಕ ಪೋಷಕರಿಗೆ ಗೌರವ ತರಬೇಕೆಂದು ಹೇಳಿದರು. ಗೃಹ ಸಚಿವರ ವಿಶೇಷ ಕರ್ತವ್ಯಾಧಿಕಾರಿ ಡಾ.ಕೆ. ನಾಗಣ್ಣ ಮಾತನಾಡಿ, ವಿದ್ಯಾರ್ಥಿಗಳು ವಿದ್ಯಾಭ್ಯಾಸ ಜೊತೆಗೆ ಕ್ರೀಡೆಯಲ್ಲಿ ಭಾಗವಹಿಸಬೇಕು. ಸರ್ಕಾರದಿಂದ ಜಿಲ್ಲೆಯಲ್ಲಿ ಉತ್ತಮ ಕ್ರೀಡಾಂಗಣ ನಿರ್ಮಾಣ ಮಾಡಲಾಗಿದ್ದು, ಕ್ರೀಡಾಪಟುಗಳು ಇದರ ಸದುಪಯೋಗ ಪಡೆದುಕೊಳ್ಳಬೇಕೆಂದು ತಿಳಿಸಿದರು. ಕಾರ್ಯಕ್ರಮದಲ್ಲಿ ಯುವ ಸಬಲೀಕರಣ ಮತ್ತು…