Author: admin

ತುಮಕೂರು: ನಗರದ ಎಂ.ಜಿ ರಸ್ತೆಯಲ್ಲಿರುವ ಡಾ.ಬಿ.ಆರ್.ಅಂಬೇಡ್ಕರ್ ವಿಜ್ಞಾನ ಕಾಲೇಜು ಬಾಲಕರ ವಿದ್ಯಾರ್ಥಿನಿಲಯಕ್ಕೆ ಅಪರಿಚಿತ ವ್ಯಕ್ತಿಗಳು ನುಗ್ಗಿ ದಾಂಧಲೆ ನಡೆಸಿರುವ ಕುರಿತು ದೂರು ಬಂದ ಹಿನ್ನೆಲೆಯಲ್ಲಿ ಸಮಾಜ ಕಲ್ಯಾಣ ಇಲಾಖೆ ಜಂಟಿ ನಿರ್ದೇಶಕ ಕೃಷ್ಣಪ್ಪ ಅವರು ವಿದ್ಯಾರ್ಥಿ ನಿಲಯಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ವಿದ್ಯಾರ್ಥಿನಿಲಯದಲ್ಲಿದ್ದ ವಾರ್ಡನ್, ರಾತ್ರಿ ಕಾವಲುಗಾರರು ಹಾಗೂ ವಿದ್ಯಾರ್ಥಿಗಳನ್ನು ವಿಚಾರಿಸಿ ವಿದ್ಯಾರ್ಥಿಗಳಿಂದ ಹೇಳಿಕೆ ಪಡೆದರು. ವಿದ್ಯಾರ್ಥಿಗಳಿಂದ ಹೇಳಿಕೆ: ನಿಲಯಪಾಲಕರು ರೂ.ನಂ:17ರಲ್ಲಿ ವಾಸ್ತವ್ಯವಿದ್ದ ವಿದ್ಯಾರ್ಥಿಗಳಾದ ನಾಗರಾಜು ಜಿ.ಹೆಚ್, ಗೋಪಾಲ್ ರೆಡ್ಡಿ ಹಾಗೂ ರವಿಚಂದ್ರ ಆದ ನಮ್ಮನ್ನು ನಿಲಯಪಾಲಕರ ಕಚೇರಿಗೆ ಕರೆಸಿ ನಿಮ್ಮ ಕೊಠಡಿಯಲ್ಲಿ ಯಾರದಾರು ಅಪರಿಚತರು ಇದ್ದಾರೆಯೇ ಎಂದು ಕೇಳಿದರು. ಆಗ ನಾವು ಯಾರು ಇರುವುದಿಲ್ಲ ಎಂದು ತಿಳಿಸಿದೆವು. ನಂತರ ಪೊಲೀಸ್ ರವರು ಒಬ್ಬ ವ್ಯಕ್ತಿಯ ಭಾವಚಿತ್ರವನ್ನು ತೋರಿಸಿ ಇವರು ಏನಾದರೂ ತಮ್ಮ ಕೊಠಡಿಗೆ ಬಂದಲ್ಲಿ ನಮಗೆ ಮಾಹಿತಿ ನೀಡಲು ತಿಳಿಸಿ ನಮ್ಮನ್ನು ನಮ್ಮ ಕೊಠಡಿಗೆ ವಾಪಸ್ಸು ಕಳುಹಿಸಿಕೊಟ್ಟಿರುತ್ತಾರೆ. ನಮಗೆ ಪೊಲೀಸ್ ರವರಿಂದಾಗಲಿ ಅಥವಾ ಬೇರೆಯವರಿಂದಾಲಿ ಬಯ್ಯುವುದು, ಒತ್ತಾಯ ಮಾಡುವುದು,…

Read More

ನವದೆಹಲಿ: ಭ್ರಷ್ಟಾಚಾರದಿಂದ ತಮ್ಮನ್ನು ರಕ್ಷಿಸಿಕೊಳ್ಳಲು ಸಿಎಂ ಸಿದ್ದರಾಮಯ್ಯ ತಮಗೆ ಬೇಕಾದವರನ್ನು ಲೋಕಾಯುಕ್ತ ಎಡಿಜಿಪಿಯನ್ನಾಗಿ ನೇಮಿಸಿಕೊಂಡಿದ್ದಾರೆ ಎಂದು ಕೇಂದ್ರ ಆಹಾರ ಸಚಿವ ಪ್ರಹ್ಲಾದ್ ಜೋಶಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ನವದೆಹಲಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಸಿಎಂ ಸಿದ್ದರಾಮಯ್ಯ ಮತ್ತು ಕಾಂಗ್ರೆಸ್ ನಾಯಕರು ಭಯಭೀತರಾಗಿದ್ದಾರೆ. ಭಯದಿಂದಲೇ ಕಾಂಗ್ರೆಸ್ ಪಕ್ಷ ಕ್ಷುಲ್ಲಕ ರಾಜಕಾರಣ ಮಾಡುತ್ತಿದೆ. ಬಿಜೆಪಿಯಲ್ಲಿ ಭ್ರಷ್ಟಾಚಾರ ಆರೋಪ ಇಲ್ಲದವರಿಗೆ ಸನ್ಮಾನಿಸುತ್ತೇವೆ ಅಂತ ಸಿದ್ದರಾಮಯ್ಯ ಹೇಳಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯನವರೇ ನೀವೇ ದೊಡ್ಡ ಭ್ರಷ್ಟಾಚಾರಿಗಳು ನೀವು ಏನು ಮಾತನಾಡುತ್ತೀರಿ ಎಂದು ಪ್ರಶ್ನಿಸಿ ಆಕ್ರೋಶ ವ್ಯಕ್ತಪಡಿಸಿದರು. ಸಿದ್ದರಾಮಯ್ಯನವರೇ 70 ಲಕ್ಷ ರೂಪಾಯಿ ಮೌಲ್ಯದ ವಾಚ್ ಏನಾಯ್ತು? ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿನ ಹಗರಣ ಏನಾಯ್ತು? ನೀವೇ ಮಾಡಿದ ರೀಡೂ ವಿಷಯದಲ್ಲಿ ಕೆಂಪಣ್ಣ ವರದಿ ಏನಾಯಿತು? ಈಗ ಸಿಬಿಐ ಅಧಿಕಾರಿಗಳು ತನಿಖೆ ಮಾಡಲು ಬಾರದಂತೆ ಮಾಡಿದ್ದಾರೆ. ಲೋಕಾಯುಕ್ತ ತನಿಖೆ ಮಾಡಬೇಕು ಅಂದರೆ ಸಿಎಂ ರಾಜೀನಾಮೆ ನೀಡಲಿ ಎಂದು ಆಗ್ರಹಿಸಿದರು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್…

Read More

ಬೆಂಗಳೂರು: 2002ರಲ್ಲಿ ಗುಜರಾತ್ ನಲ್ಲಿ ನಡೆದ ಗೋಧ್ರಾ ಗಲಭೆ ಸಂದರ್ಭದಲ್ಲಿ ನರೇಂದ್ರ ಮೋದಿ ಅವರು ರಾಜೀನಾಮೆ ಕೊಟ್ಟಿದ್ದರೆ, ಅವರು ಆಗಲೂ ಅಧಿಕಾರದ ಗದ್ದುಗೆಯಿಂದ ಕೆಳಗೆ ಇಳಿದರಲಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದ್ದಾರೆ. ಮುಡಾ ಪ್ರಕರಣ ಸಂಬಂಧ ಸಿದ್ದರಾಮಯ್ಯನವರ ರಾಜೀನಾಮೆಗೆ ವಿಪಕ್ಷಗಳು ಒತ್ತಾಯಿಸಿರುವ ಹಿನ್ನೆಲೆ ಸಿದ್ದರಾಮಯ್ಯ ವಿಪಕ್ಷಗಳಿಗೆ ತಿರುಗೇಟು ನೀಡಿದರು. ನಾನು ರಾಜೀನಾಮೆ ನೀಡುವ ಪ್ರಮೇಯವೇ ಇಲ್ಲ. ನಾನು ಏನು ತಪ್ಪು ಮಾಡಿದ್ದೇನೆ ಎಂದು ರಾಜೀನಾಮೆ ಕೊಡಬೇಕು. ಗೋಧ್ರಾ ಗಲಭೆಯಲ್ಲಿ ನೂರಾರು ಜನ ಸಾವನ್ನಪ್ಪಿದ್ದರು. ನರೇಂದ್ರ ಮೋದಿ ಅವರ ವಿರುದ್ಧ ಎಫ್ ಐಆರ್ ಸಹ ದಾಖಲಾಗಿತ್ತು. ಆದರೆ, ಆ ಸಂದರ್ಭದಲ್ಲಿ ಮೋದಿ ರಾಜೀನಾಮೆ ಕೊಟ್ಟಿರಲಿಲ್ಲ ಎಂದು ಹೇಳಿದ್ದಾರೆ. ಕೇಂದ್ರ ಬೃಹತ್ ಕೈಗಾರಿಕೆ ಹಾಗೂ ಉಕ್ಕು ಖಾತೆ ಸಚಿವ ಎಚ್.ಡಿ ಕುಮಾರಸ್ವಾಮಿ ಅವರು ಜಾಮೀನಿನ ಮೇಲೆ ಹೊರಗಿದ್ದಾರೆ. ಆದರೆ, ಕೇಂದ್ರ ಸಚಿವರಾಗಿ ಮೋದಿ ನೇತೃತ್ವದ ಸರ್ಕಾರದಲ್ಲಿ ಗುರುತಿಸಿಕೊಂಡಿದ್ದಾರೆ. ಕುಮಾರಸ್ವಾಮಿ ರಾಜೀನಾಮೆ ಕೊಟ್ಟಿದ್ದಾರಾ, ಅವರಿಂದ ಮುಜುಗರ ಆಗುತ್ತಿಲ್ಲವೇ. ಕುಮಾರಸ್ವಾಮಿ ಅವರು ಮೊದಲು ರಾಜೀನಾಮೆ ನೀಡಲಿ,…

Read More

ಮೈಸೂರು: ಮೈಸೂರು ದಸರಾ ಚಲನಚಿತ್ರೋತ್ಸವದ ಸಮಿತಿ 2024ರ ವತಿಯಿಂದ ದಸರಾ ಚಲನಚಿತ್ರೋತ್ಸವದ ಉದ್ಘಾಟನೆಯು ಅಕ್ಟೋಬರ್ 3 ರಂದು ನೆರವೇರಲಿದ್ದು, ಅಕ್ಟೋಬರ್ 4ರಿಂದ 10ರವರೆಗೆ ಚಲನಚಿತ್ರಗಳ ಪ್ರದರ್ಶನವನ್ನು ಆಯೋಜಿಸಲಾಗಿದೆ. ಗ್ರಾಮಾಂತರ ಪ್ರದೇಶದಲ್ಲಿ ನಿನಿ ಪ್ರಿಯರಿಗೆ ಹಾಗೂ ಸಿನಿಮಾಸಕ್ತರಿಗೆ ಸುಲಭವಾಗಿ ಲಭ್ಯವಾಗುವಂತೆ ಆನ್ ಲೈನ್ ಮೂಲಕ ಆಧಾರ್ ಕಾರ್ಡ್ ಬಳಸಿ https://sevasindhuservices.karnataka.gov.in/directApply.do?serviceId=2310 ನೋಂದಣಿ ಮಾಡಿ ಪಾಸ್ ಬುಕಿಂಗ್ ಹಾಗೂ ಮಾಹಿತಿ ಪಡೆಯಬಹುದಾಗಿರುತ್ತದೆ. ಕರ್ನಾಟಕದಾದ್ಯಂತ ಎಲ್ಲಾ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಯಲ್ಲಿರುವ ಗ್ರಾಮ ಒನ್ ಮತ್ತು ನಗರ/ ಪಟ್ಟಣ ವ್ಯಾಪ್ತಿಯಲ್ಲಿ ಕರ್ನಾಟಕ ಒನ್ ಹಾಗೂ ಮೈಸೂರು ಓನ್ ಕೇಂದ್ರದ ಸೇವಾ ಪೋರ್ಟಲ್ ನಲ್ಲಿ ಯಾವುದೇ ನೊಂದಣಿ ಮಾಡದೇ ಅಗತ್ಯ ಮಾಹಿತಿ ನೀಡಿ ಸಿನಿಮಾ ಪಾಸ್ ಗಳನ್ನು ಪಡೆಯಬಹುದಾಗಿರುತ್ತದೆ. ಚಲನಚಿತ್ರೋತ್ಸವ ಪಾಸ್ ದರ ವಿದ್ಯಾರ್ಥಿಗಳಿಗೆ ಹಾಗೂ ಹಿರಿಯ ನಾಗರೀಕರಿಗೆ 300 ರೂಗಳಾಗಿರುತ್ತದ್ದು ಇತರರಿಗೆ 500 ರೂಗಳು ಆಗಿರುತ್ತದೆ. ನಗರದ ದಟ್ಟ ಜನಸಂದಣಿ ಸ್ಥಳಗಳಾದ ನಗರದ ಕೆಎಸ್ ಆರ್ ಟಿಸಿ ಬಸ್ ಸ್ಟಾಂಡ್, ನಗರ ಬಸ್ ನಿಲ್ದಾಣ, ರೈಲ್ವೇ…

Read More

ಮೈಸೂರು: ಹೆಚ್.ಡಿ.ಕೋಟೆ ತಾಲೂಕು ತಹಶೀಲ್ದಾರ್ ಕಚೇರಿ ಆವರಣದಲ್ಲಿ ಗ್ರಾಮ ಆಡಳಿತ ಅಧಿಕಾರಿಗಳು ನಾನಾ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಗುರುವಾರದಿಂದ ಅನಿರ್ದಿಷ್ಟಾವಧಿ ಮುಷ್ಕರ ಕೈಗೊಂಡಿದ್ದು, ಗ್ರಾಮ ಪಂಚಾಯಿತಿ ಸೇವೆಗಳಲ್ಲಿ ವ್ಯತ್ಯಯವಾಗಲಿದೆ. ಬೆಳೆ ಸಮೀಕ್ಷೆ, ಕೃಷಿ ಗಣತಿ, ನೀರಾವರಿ ಗಣತಿ, ದಿಶಾಂಕ್, ವೋಟರ್ ಹೆಲ್ತ್‌ಲೈನ್, ಪೌತಿ ಆಂದೋಲನ ಆ್ಯಪ್, ಸಿ–ವಿಜಿಲ್ ಆ್ಯಪ್, ಇ–ಆಫೀಸ್, ಹಕ್ಕುಪತ್ರ, ಆಧಾರ್ ಸೀಡ್, ಸಂಯೋಜನೆ, ಲ್ಯಾಂಡ್ ಬಿಟ್ , ನಮೂನೆ 1–5ರ ವೆಬ್ ಅಪ್ಲಿಕೇಶನ್, ಸಂರಕ್ಷಣೆ, ನವೋದಯ, ಗರುಡ ಆಪ್, ಭೂಮಿ, ಬೆಳೆ ಸಮೀಕ್ಷೆಯ ಅನುಮೋದನೆ ವೆಬ್ ಆಪ್, ಪಿ. ಎಂ. ಕಿಸಾನ ವೆಬ್ ಆಪ್, ಸೇರಿದಂತೆ ಇನ್ನಿತರೆ ಸೇವೆಗಳನ್ನು ಸ್ಥಗಿತಗೊಳಿಸಿ ರಾಜ್ಯದ ಎಲ್ಲ ತಾಲೂಕು ಕಚೇರಿಗಳ ಮುಂದೆ ಇಂದಿನಿಂದ ಮುಷ್ಕರ ನಡೆಯಲಿದೆ. ”ಕಂದಾಯ ಇಲಾಖೆಯನ್ನು ಸಂಪೂರ್ಣ ಡಿಜಿಟಲೀಕರಣಗೊಳಿಸುತ್ತಿದ್ದು, ಕಾರ್ಯದೊತ್ತಡ ಹೆಚ್ಚಾಗಿದೆ. ತಾಂತ್ರಿಕ ಅರ್ಹತೆ ಇಲ್ಲದ ಗ್ರಾಮ ಆಡಳಿತ ಅಧಿಕಾರಿಗಳ ಮೂಲಕ ತಾಂತ್ರಿಕ ಕೆಲಸ ಕಾರ್ಯಗಳನ್ನು ನಿರ್ವಹಿಸಲಾಗುತ್ತಿದೆ. ವೇತನ ಹೆಚ್ಚಳ ಸೇರಿದಂತೆ ಇನ್ನಿತರೆ ಬೇಡಿಕೆಗಳ ಈಡೇರಿಕೆಗೆ ಹಲವು ಸಲ ಮನವಿ…

Read More

ತುಮಕೂರು: ನಗರದ ಸರ್ಕಾರಿ ಪದವಿಪೂರ್ವ ಕಾಲೇಜು ಮೈದಾನದಲ್ಲಿ ದಸರಾ ಉತ್ಸವದ ಅಂಗವಾಗಿ ಗತಕಾಲದ ಅಪರೂಪದ ದೇಶ–ವಿದೇಶಗಳ ವಿಂಟೇಜ್ ಕಾರುಗಳ ಅದ್ದೂರಿ ಪ್ರದರ್ಶನ ಅಕ್ಟೋಬರ್ 11 ರಿಂದ ನಡೆಯಲಿದ್ದು, ಜಿಲ್ಲೆಯ ಜನರಿಗೆ ಇದು ಆಕರ್ಷಣೀಯವಾಗಲಿದೆ ಎಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತಿಳಿಸಿದರು. ನಗರದ ಸರ್ಕಾರಿ ಪದವಿಪೂರ್ವ ಕಾಲೇಜು ಮೈದಾನದಲ್ಲಿಂದು ಸ್ಥಳ ಪರಿಶೀಲಿಸಿ ಮಾತನಾಡಿದ ಅವರು, ಮೊಟ್ಟ ಮೊದಲ ಬಾರಿಗೆ ತುಮಕೂರು ಜಿಲ್ಲೆಯಲ್ಲಿ ವಿಂಟೇಜ್ ಕಾರುಗಳ ಪ್ರದರ್ಶನ ನಡೆಯಲಿದ್ದು, ಅಕ್ಟೋಬರ್ 12ರಂದು ವಿಂಟೇಜ್ ಕಾರುಗಳು ನಗರದ ಪ್ರಮುಖ ರಸ್ತೆಗಳಲ್ಲಿ ಸಂಚರಿಸಲಿವೆ. ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ದಸರಾ ಉತ್ಸವ ಆಚರಣೆಯಲ್ಲಿ ಭಾಗವಹಿಸಲಿದ್ದು, ಇದಕ್ಕಾಗಿ ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದರು. ಜಿಲ್ಲೆಯ ಖ್ಯಾತ ಕವಿಗಳು, ಅವರ ಸಾಹಿತ್ಯವನ್ನು ಇಂದಿನ ಪೀಳಿಗೆಗೆ ತಿಳಿಸುವಂತಹ ವಿಚಾರಧಾರೆಯನ್ನು ಕವಿಗೋಷ್ಠಿಯು ಒಳಗೊಂಡಿರಬೇಕು. ಇದಕ್ಕಾಗಿ ಅಗತ್ಯ ಸಿದ್ಧತೆ ಮಾಡಿಕೊಳ್ಳುವಂತೆ ಡಿಡಿಪಿಓ ಅವರಿಗೆ ಸೂಚಿಸಿದರು. ಕರ್ನಾಟಕ ವಿಂಟೇಜ್ ಅಂಡ್ ಕ್ಲಾಸಿಕ್ ಕಾರ್ ಕ್ಲಬ್ನ ಉಪಾಧ್ಯಕ್ಷರಾದ ಸುರೇಶ್ ಮಾತನಾಡಿ, ಸರ್ಕಾರವು ವಿಂಟೇಜ್ ಕಾರುಗಳಿಗೆ ವಿಶೇಷ ರಿಯಾಯತಿ…

Read More

ತುಮಕೂರು: ಮನುಷ್ಯನು ಸದೃಢಗೊಂಡು ಆರೋಗ್ಯವಂತನಾಗಿ ಜೀವಿಸಲು ಕ್ರೀಡೆಗಳು ಸಹಕಾರಿಯಾಗಿದ್ದು, ಜಿಲ್ಲೆಯ ಯುವಕ/ಯುವತಿಯರಿಗೆ ಕ್ರೀಡೆಯಲ್ಲಿ ಭಾಗವಹಿಸಲು ಅವಕಾಶ ಮಾಡಿಕೊಟ್ಟು ಕ್ರೀಡಾ ಮನೋಭಾವವನ್ನು ಹೆಚ್ಚಿಸುವ ನಿಟ್ಟಿನಲ್ಲಿ ದಸರಾ ಕ್ರೀಡಾಕೂಟವನ್ನು ಆಯೋಜಿಸಲಾಗಿದೆ ಎಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಹೇಳಿದರು. ದಸರಾ ಕ್ರೀಡಾಕೂಟದ ಅಂಗವಾಗಿ ಜಿಲ್ಲಾ ಮಟ್ಟದ ಬಾಲ್ ಬ್ಯಾಡ್ಮಿಂಟನ್ ಚಾಂಪಿಯನ್ ಶಿಪ್ಗೆ ನಗರದ ಸರ್ಕಾರಿ ಪದವಿಪೂರ್ವ ಕಾಲೇಜು ಮೈದಾನದಲ್ಲಿಂದು ಚಾಲನೆ ನೀಡಿ ಮಾತನಾಡಿದ ಅವರು, ಆರೋಗ್ಯವೇ ಭಾಗ್ಯ ಎಂಬುದು ಕನ್ನಡದ ಜನಪ್ರಿಯ ಗಾದೆಯಾಗಿದೆ. ಮನುಷ್ಯನ ದೇಹ ಮತ್ತು ಮನಸ್ಸುಗಳು ಆರೋಗ್ಯವಾಗಿರಲು ಕ್ರೀಡೆಗಳು ಪ್ರಯೋಜನಕಾರಿಯಾಗಿವೆ ಎಂದರು. ಬಾಲ್ ಬ್ಯಾಡ್ಮಿಂಟನ್ ಕ್ರೀಡೆಗೆ ಚಾಲನೆ ನೀಡಿದ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ವಿ. ಅಶೋಕ್ ಅವರು ಸ್ವತಃ ಬಾಲ್ ಬ್ಯಾಡ್ಮಿಂಟನ್ ಕ್ರೀಡೆಯಲ್ಲಿ ಪಾಲ್ಗೊಂಡರು. ಯುವ ಜನ ಕ್ರೀಡಾ ಮತ್ತು ಸಬಲೀಕರಣ ಇಲಾಖೆ ಸಹಾಯಕ ನಿರ್ದೇಶಕ ರೋಹಿತ್ ಗಂಗಾಧರ್, ಜಿಲ್ಲಾ ಬ್ಯಾಡ್ಮಿಂಟನ್ ಕಾರ್ಯದರ್ಶಿ ಚಿದಾನಂದ್, ಟಿಡಿಬಿಬಿಎ ಕಾರ್ಯದರ್ಶಿ ದಿವಾಕರ್, ಖ್ಯಾತ ಕಬ್ಬಡಿ ಕೋಚ್ ಇಸ್ಮಾಯಿಲ್ ಮತ್ತಿತರರು ಉಪಸ್ಥಿತರಿದ್ದರು. ನಮ್ಮತುಮಕೂರಿನ ಕ್ಷಣ…

Read More

ಬೆಂಗಳೂರು: ಮೈಸೂರು ಜಿಲ್ಲಾಡಳಿತ ವತಿಯಿಂದ ಹೆಸರಾಂತ ಸಂಶೋಧಕರು, ಸಾಹಿತಿಗಳಾದ ಪ್ರೊ. ಹಂ.ಪ. ನಾಗರಾಜಯ್ಯ (ಹಂಪನಾ) ಅವರನ್ನು ಮೈಸೂರು ದಸರಾ ಮಹೋತ್ಸವ ಉದ್ಘಾಟನೆಗೆ ಗುರುವಾರ ಆಹ್ವಾನಿಸಲಾಯಿತು. ಹಂಪನಾ ಅವರ ಬೆಂಗಳೂರಿನ ಕ್ರಸೆಂಟ್ ರಸ್ತೆಯ ಅಮೇರಿಕನ್ ಕಾಲೋನಿಯಲ್ಲಿರುವ ಅವರ ನಿವಾಸಕ್ಕೆ ಆಗಮಿಸಿ ಆಹ್ವಾನ ಕೋರಲಾಯಿತು. ಮೈಸೂರು ಪೇಟ ತೋಡಿಸಿ,ಫಲಫುಷ್ಪದೊಂದಿಗೆ ಆಮಂತ್ರಣ ನೀಡಲಾಯಿತು. ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಲಕ್ಷ್ಮೀಕಾಂತರೆಡ್ಡಿ, ಮೈಸೂರು ನಗರ ಪೊಲೀಸ್ ಆಯುಕ್ತರಾದ ಸೀಮಾ ಲಾಟ್ಕರ್, ಜಿಪಂ ಸಿಇಒ ಕೆ.ಎಂ.ಗಾಯತ್ರಿ, ಎಸ್ಪಿ ವಿಷ್ಣುವರ್ಧನ್, ಅಪರ ಜಿಲ್ಲಾಧಿಕಾರಿ ಡಾ.ಪಿ.ಶಿವರಾಜ್, ಚಾಮುಂಡಿ ಬೆಟ್ಟದ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿ ಎಂ.ಜೆ.ರೂಪಾ ಮತ್ತು ಸ್ವಾಗತ ಸಮಿತಿಯ ಎಲ್ಲ ಅಧಿಕಾರಿಗಳು ಇದ್ದರು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

Read More

ಮೈಸೂರು: ಮೈಸೂರು ದಸರಾ ಮಹೋತ್ಸವಕ್ಕೆ ಆಗಮಿಸುವಂತೆ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರಿಗೆ ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.ಹೆಚ್.ಸಿ.ಮಹದೇವಪ್ಪ ಅವರು ಇಂದು ಆಹ್ವಾನ ನೀಡಿದರು. ಕೆ.ಆರ್.ನಗರ ವಿಧಾನ ಸಭಾ ಶಾಸಕ ಡಿ.ರವಿಶಂಕರ್, ಹೆಚ್.ಡಿ ಕೋಟೆ ಶಾಸಕರಾದ ಅನಿಲ್ ಕುಮಾರ್, ವಿಧಾನ ಪರಿಷತ್ ಶಾಸಕ ಡಾ.ಯತೀಂದ್ರ ಎಸ್, ಸಿ.ಎನ್.ಮಂಜೇಗೌಡ, ಡಾ.ತಿಮ್ಮಯ್ಯ, ಜಿಲ್ಲಾಧಿಕಾರಿ ಜಿ.ಲಕ್ಷ್ಮೀ ಕಾಂತ ರೆಡ್ಡಿ ಹಾಗೂ ಸ್ವಾಗತ ಸಮಿತಿಯ ಅಧಿಕಾರಿಗಳು ಮತ್ತಿತರರೊಂದಿಗೆ ಮುಖ್ಯಮಂತ್ರಿಯವರ ಗೃಹ ಕಚೇರಿ ಕೃಷ್ಣಾಕ್ಕೆ ತೆರಳಿದ ಅವರು, ದಸರಾ ಕಾರ್ಯಕ್ರಮಗಳಲ್ಲಿ ಭಾಗಿಯಾಗುವಂತೆ ಆಮಂತ್ರಿಸಿದರು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

Read More

ತುಮಕೂರು: ಕೌಟುಂಬಿಕ ಕಲಹಕ್ಕೆ ಬೇಸತ್ತು ಇಬ್ಬರು ಮಕ್ಕಳ ಜೊತೆ ತಾಯಿ ಆತ್ಮಹತ್ಯೆ ಮಾಡಿಕೊಂಡಿರೋ ಘಟನೆ ಮಧುಗಿರಿ ತಾಲೂಕಿನ ಸಿದ್ದಪುರ ಕೆರೆಯಲ್ಲಿ ನಡೆದಿದೆ. ಹಸೀನಾ ತಾಜ್ (35), ಅಫೀಜ್ (8), ಅಲ್ಕೀಜ್ (4) ಸಾವಿಗೆ ಶರಣಾದವರು ಎಂದು ಗುರುತಿಸಲಾಗಿದ್ದು, ಸಿದ್ದಪುರ ಕೆರೆಗೆ ಹಾರಿ ಇವರು ಸಾವಿಗೆ ಶರಣಾಗಿದ್ದಾರೆ. ಮಧುಗಿರಿ ಪಟ್ಟಣದಲ್ಲಿ ಗಂಡ ಹಾಗೂ ಇಬ್ಬರು ಮಕ್ಕಳ ಜೊತೆ ವಾಸವಾಗಿದ್ದ ಹಸೀನಾ ತಾಜ್ ಇಂದು ಮಧುಗಿರಿ ಬಳಿಯಿರುವ ಸಿದ್ದಪುರ ಕೆರೆಗೆ ತನ್ನ ಇಬ್ಬರು ಮಕ್ಕಳ ಜೊತೆ ಕೆರೆ ಬಿದ್ದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಗಂಡನ ಕಿರುಕುಳಕ್ಕೆ ಬೇಸತ್ತು ಆತ್ಮಹತ್ಯೆ ಮಾಡಿಕೊಂಡಿದ್ದಾರೆಂದು ಹೇಳಲಾಗ್ತಿದೆ. ಸ್ಥಳಕ್ಕೆ ಮಧುಗಿರಿ ಪೊಲೀಸರು ಭೇಟಿ, ಪರಿಶೀಲನೆ ನಡೆಸಿದ್ದಾರೆ. ಘಟನೆ ಸಂಬಂಧ ಮಧುಗಿರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಆಗಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

Read More