Subscribe to Updates
Get the latest creative news from FooBar about art, design and business.
- ಸಚಿವ ಸಂಪುಟ ವಿಸ್ತರಣೆ: ಎಚ್.ಕೆ. ಪಾಟೀಲ್ ಗೆ ಸಚಿವ ಸ್ಥಾನ ಕೈತಪ್ಪಿದ್ದಕ್ಕೆ ಗದಗ–ಬೆಟಗೇರಿ ನಗರಸಭೆಯ 22 ಸದಸ್ಯರ ಸಾಮೂಹಿಕ ರಾಜೀನಾಮೆ
- ತುಮಕೂರು ಕಾಂಗ್ರೆಸ್ ನಲ್ಲಿ ಆಕ್ರೋಶ ಸ್ಫೋಟ: ವಿಪಕ್ಷ ಸಾಲಿನಲ್ಲಿ ಆಸನ ಕೋರಿದ ಟಿ.ಬಿ. ಜಯಚಂದ್ರ, ಹೆಚ್ ಡಿಕೆಯನ್ನು ಹೊಗಳಿದ ಶಾಸಕ ಶ್ರೀನಿವಾಸ್
- ಸಚಿವ ಸ್ಥಾನ ಸಿಗಲಿಲ್ಲವೆಂದು ಪಕ್ಷದ ವಿರುದ್ಧ ಮಾತಾಡುವುದು ಸರಿಯಲ್ಲ: ಪ್ರಿಯಾಂಕ್ ಖರ್ಗೆ
- ಕಾವೇರಿ ಅಚ್ಚುಕಟ್ಟು ಪ್ರದೇಶದಲ್ಲಿ ಮಳೆ ಚುರುಕು: 105 ಅಡಿಗೆ ತಲುಪಿದ ಕೆಆರ್ ಎಸ್ ಜಲಾಶಯದ ನೀರಿನ ಮಟ್ಟ
- ಬಿಜೆಪಿಯವರು ಬರ ಅಧ್ಯಯನ ಮಾಡಿ ಕೇಂದ್ರಕ್ಕೆ ವರದಿ ನೀಡಲಿ: ಸಚಿವ ಸಂತೋಷ್ ಲಾಡ್
- ನನ್ನ ಮತದಾನ ನನ್ನ ಹಕ್ಕು: ಎಸ್ಐಆರ್ ಜಾಗೃತಿ
- 10 ಸಾವಿರ ಕೋಟಿ ಅನುದಾನ ಬಿಡುಗಡೆಗೆ ಆಗ್ರಹ: ಕರ್ನಾಟಕದ 28 ಜಿಲ್ಲೆಗಳು ಮಳೆಯಿಲ್ಲದೇ ಬರಪೀಡಿತ | ತುಮಕೂರಿನಲ್ಲಿ ಬಿಜೆಪಿ ಬರ ಅಧ್ಯಯನ
- ಬಿಡುಗಡೆಗೂ ಮುನ್ನ ಭಾರಿ ನಿರೀಕ್ಷೆ ಮೂಡಿಸಿದ “ಓ ಮೈ ಡಾಗ್” ಆಗಸ್ಟ್ 7ರಂದು ಅದ್ದೂರಿ ರಿಲೀಸ್
Author: admin
ಬೆಂಗಳೂರು: ಬಿಜೆಪಿಗೆ ದ್ರೋಹ ಬಗೆದು ಹೋಗಿದ್ದಾರೆ. ಉಪಚುನಾವಣೆಯಲ್ಲಿ ಅವರಿಗೆ ಚನ್ನಪಟ್ಟಣದ ಜನತೆ ತಕ್ಕಪಾಠ ಕಲಿಸಲಿದ್ದಾರೆ ಎಂದು ಕಾಂಗ್ರೆಸ್ ಸೇರ್ಪಡೆಯಾ ಗಿರುವ ಮಾಜಿ ಸಚಿವ ಸಿ.ಪಿ.ಯೋಗೇಶ್ವರ್ ವಿರುದ್ಧ ವಿಧಾನಸಭೆಯ ಪ್ರತಿಪಕ್ಷದ ನಾಯಕ ಆರ್. ಅಶೋಕ್ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾವು ಯೋಗೇಶ್ವರ್ಗೆ ಟಿಕೆಟ್ ಕೊಡಿಸಲು ಕೊನೆ ಕ್ಷಣದವರೆಗೂ ಸರ್ವ ಪ್ರಯತ್ನ ಮಾಡಿದೆವು. ಯಾವುದೇ ಕಾರಣಕ್ಕೂ ಅವರು ಕಾಂಗ್ರೆಸ್ ಸೇರುವುದಿಲ್ಲ ಎಂದು ಅವರು ಹೇಳಿದ್ದರು. ಈಗ ಏಕಾಏಕಿ ಕಾಂಗ್ರೆಸ್ ಸೇರಿದ್ದಾರೆ. ಈ ಬಾರಿ ಕ್ಷೇತ್ರದ ಜನತೆ ಸರಿಯಾದ ಪಾಠ ಕಲಿಸಲಿದ್ದಾರೆ ಎಂದು ಗುಡುಗಿದರು. ಅಷ್ಟಕ್ಕೂ ಯೋಗೇಶ್ವರ್ ಬಿಜೆಪಿಯಿಂದ ಬಂದವರಲ್ಲ. ಅವರು ಪಕ್ಷದ ತತ್ವ ಸಿದ್ದಾಂತವನ್ನು ಒಪ್ಪಿಕೊಂಡು ಬಂದಿರಲಿಲ್ಲ. ಪಕ್ಷದಲ್ಲಿ ಇದ್ದು ಇಲ್ಲದಂತಿದ್ದರು. ಮೈತ್ರಿ ಪಕ್ಷಕ್ಕೆ ದ್ರೋಹ ಬಗೆದಿರುವ ಅವರನ್ನು ಕ್ಷಮಿಸುವ ಪ್ರಶ್ನೆಯೇ ಇಲ್ಲ ಎಂದು ವಾಗ್ದಾಳಿ ನಡೆಸಿದರು. ಸಿ.ಪಿ.ಯೋಗೇಶ್ವರ್ ಅವರು ಐದು ಕಡೆಯಿಂದ ಬಿ ಫಾರಂ ತಂದಿದ್ದರು ಎಂಬ ಸುದ್ದಿ ಇದೆ. ನಮ್ಮ ಮಾತು ಕೇಳದೇ ಕಾಂಗ್ರೆಸ್ ಸೇರಿದ್ದಾರೆ. ಕಾಂಗ್ರೆಸ್ ನಲ್ಲಿ…
ನವದೆಹಲಿ: ಬೆಂಗಳೂರಿನ ಬಾಬುಸಾಬ್ಪಾಳ್ಯದಲ್ಲಿ ನಿರ್ಮಾಣ ಹಂತದ ಕಟ್ಟಡ ಕುಸಿತ ಪ್ರಕಣಕ್ಕೆ ಸಂಬಂಧಿಸಿದಂತೆ ಪ್ರಧಾನ ಮಂತ್ರಿ ಪರಿಹಾರ ನಿಧಿಯಿಂದ ಮೃತರ ಕುಟುಂಬಕ್ಕೆ ಪರಿಹಾರ ಘೋಷಣೆ ಮಾಡಲಾಗಿದೆ. ಈ ವಿಚಾರವಾಗಿ ಸಾಮಾಜಿಕ ಮಾಧ್ಯಮ Xನಲ್ಲಿ ಪ್ರಧಾನಿ ಕಾರ್ಯಾಲಯ ಸಂದೇಶ ಪ್ರಕಟಿಸಿದೆ. ಬೆಂಗಳೂರಿನಲ್ಲಿ ಕಟ್ಟಡವೊಂದು ಕುಸಿದು ಸಂಭವಿಸಿದ ಜೀವಹಾನಿಯಿಂದ ದುಃಖವಾಗಿದೆ. ತಮ ಪ್ರೀತಿಪಾತ್ರರನ್ನು ಕಳೆದುಕೊಂಡಿರುವ ದುಃಖದಲ್ಲಿ ನಾನೂ ಭಾಗಿಯಾಗಿದ್ದೇನೆ. ಘಟನೆಯಲ್ಲಿ ಗಾಯಗೊಂಡಿರುವವರು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ಪ್ರಾರ್ಥಿಸುತ್ತೇನೆ. ಪಿಎಂಎನ್ಆರ್ಎಫ್ನಿಂದ ಮೃತರಿಗೆ ತಲಾ 2 ಲಕ್ಷ ರೂ. ಹಾಗೂ ಗಾಯಾಳುಗಳಿಗೆ 50,000 ರೂ.ಗಳ ಪರಿಹಾರವನ್ನು ನೀಡಲಾಗುತ್ತದೆ ಎಂದು ಅವರು ಹೇಳಿದ್ದಾರೆ. ಬಾಬುಸಾಪಾಳ್ಯದಲ್ಲಿ ಕುಸಿದು ಬಿದ್ದ ನಿರ್ಮಾಣದ ಹಂತದ ಕಟ್ಟಡದಲ್ಲಿ ರಕ್ಷಣಾ ಕಾರ್ಯಾಚರಣೆ ಇನ್ನೂ ಮುಂದುವರೆದಿದೆ. ಅವಶೇಷಗಳ ಅಡಿ ಸಿಲುಕಿ ಸಾವನ್ನಪ್ಪಿದವರ ಸಂಖ್ಯೆ 8ಕ್ಕೆ ಏರಿಕೆಯಾಗಿದೆ. ಬಿಹಾರ ಮೂಲದ ಅರ್ಮಾನ್, ಮೊಹಮದ್ ಸಾಹಿಲ್, ಸೋಲೋ ಪಾಸ್ವಾನ್, ಶ್ರೀರಾನ್ ಕಿರುಪಾಲ್. ತಮಿಳುನಾಡು ಮೂಲದ ಮಣಿಕಂಠನ್, ಸತ್ಯರಾಜು ಮತ್ತು ಆಂಧ್ರಪ್ರದೇಶ ಮೂಲದ ತುಳುಸಿರೆಡ್ಡಿ ಮತ್ತು ಉತ್ತರ ಪ್ರದೇಶ ಮೂಲದ ಪುಲ್ಚನ್ ಯಾದವ್…
ಅಪ್ರಾಪ್ತ ಶಾಲಾ ಬಾಲಕಿಯೊಬ್ಬಳು ತಂದೆಯನ್ನು ಹಿಂದೆ ಕೂರಿಸಿಕೊಂಡು ಸ್ಕೂಟರ್ ಚಲಾಯಿಸಿದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ನೆಟ್ಟಿಗರು ಘಟನೆ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಔರಂಗಬಾದ್ ಇನಸೈಡರ್ ಎಂಬ ಇನ್ಸ್ಟಾಗ್ರಾಮ್ ಪೇಜ್ ನಲ್ಲಿ ಈ ವಿಡಿಯೋ ಪೋಸ್ಟ್ ಆಗಿದೆ. ಇಂತಹವುಗಳು ನಿಜವಾಗಿಯೂ ಸ್ವೀಕಾರರ್ಹವೇ ? ಛತ್ರಪತಿ ಶಂಭಾಜಿನಗರದ ಶಾಕಿಂಗ್ ದೃಶ್ಯಾವಳಿ ಇದು ಎಂದು ಬರೆದು ವೀಡಿಯೋ ಪೋಸ್ಟ್ ಮಾಡಲಾಗಿದೆ. ವೀಡಿಯೋದಲ್ಲಿ ಅಪ್ಪ ಮಗಳನ್ನು ಮುಂದೆ ಕೂರಿಸಿಕೊಂಡು ತಲೆಗೆ ಹೆಲ್ಮೆಟ್ ಕೂಡ ಹಾಕದೇ ಸ್ಕೂಟರ್ ಓಡಿಸುತ್ತಿರುವುದನ್ನು ಕಾಣಬಹುದಾಗಿದೆ. ಈ ವೀಡಿಯೋ ನೋಡಿದ ಅನೇಕರು, ತಂದೆಯ ನಿರ್ಲಕ್ಷ್ಯದ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮಗುವಿನ ಮೇಲೆ ಆಕ್ರೋಶ ಬೇಡ ಪೋಷಕರು ಜವಾಬ್ದಾರಿಯುತವಾಗಿರಬೇಕು ಎಂದು ಒಬ್ಬರು ಕಾಮೆಂಟ್ ಮಾಡಿದ್ದಾರೆ. ಹಲವು ಅಪಘಾತಗಳಿಗೆ ಇದು ಕಾರಣ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296
ತುಮಕೂರು : ವಿವಿಧ ಸಾಮಾಜಿಕ ಭದ್ರತಾ ಯೋಜನೆಗಳ ಪರಿಣಾಮಕಾರಿ ಅನುಷ್ಠಾನಕ್ಕಾಗಿ ಅಕ್ಟೋಬರ್ 25ರಂದು ಜಿಲ್ಲೆಯ 8 ಗ್ರಾಮ ಪಂಚಾಯತಿಗಳಲ್ಲಿ ಪಿಂಚಣಿ ಅದಾಲತ್ ಅನ್ನು ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತಿಳಿಸಿದ್ದಾರೆ. ಈ ಅದಾಲತ್ ನಲ್ಲಿ ಪಿಂಚಣಿಗೆ ಸಂಬಂಧಿಸಿದಂತೆ ಫಲಾನುಭವಿಗಳ ಕುಂದು–ಕೊರತೆಗಳನ್ನು ಆಲಿಸಿ ಪರಿಹರಿಸಲು ಕ್ರಮ ಕೈಗೊಳ್ಳಲಾಗುವುದು. ಅಕ್ಟೋಬರ್ 25ರಂದು ಜಿಲ್ಲೆಯ ಶಿರಾ ತಾಲೂಕಿನ ಬೇವಿನಹಳ್ಳಿ; ತುರುವೇಕೆರೆ ತಾಲೂಕಿನ ಅರೇಮಲ್ಲೇನಹಳ್ಳಿ; ತಿಪಟೂರು ತಾಲೂಕಿನ ಗುಡಿಗೊಂಡನಹಳ್ಳಿ; ಮಧುಗಿರಿ ತಾಲೂಕಿನ ಬೇಡತ್ತೂರು; ತುಮಕೂರು ತಾಲೂಕಿನ ಚನ್ನೇನಹಳ್ಳಿ; ಕುಣಿಗಲ್ ತಾಲೂಕಿನ ಹಳೇವೂರು; ಕೊರಟಗೆರೆ ತಾಲೂಕಿನ ಬೂದಗವಿ; ಪಾವಗಡ ತಾಲೂಕಿನ ಸಾಸಲಕುಂಟೆ ಗ್ರಾಮ ಪಂಚಾಯಿತಿಗಳಲ್ಲಿ ಪಿಂಚಣಿ ಅದಾಲತ್ ನಡೆಯಲಿದ್ದು, ಪಿಂಚಣಿದಾರರು ಅದಾಲತ್ನಲ್ಲಿ ಭಾಗವಹಿಸಿ ತಮ್ಮ ಸಮಸ್ಯೆಗಳನ್ನು ಸಲ್ಲಿಸಿ ಪರಿಹರಿಸಿಕೊಳ್ಳಬಹುದು ಎಂದು ಅವರು ಮನವಿ ಮಾಡಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296
ತುಮಕೂರು: ಜಿಲ್ಲೆಯಾದ್ಯಂತ ರಾತ್ರಿ ಇಡೀ ಸುರಿದ ಭಾರಿ ಮಳೆಯಿಂದ ಅಪಾರ ಪ್ರಮಾಣದ ನೀರು ಹರಿದು ಹೋಗುತ್ತಿದ್ದು ಜನ ಜೀವನ ಅಸ್ತವ್ಯಸ್ತಗೊಂಡಿದೆ. ಬಹುತೇಕ ಕಡೆ ರಸ್ತೆ ಸಂಚಾರ ಬಂದ್ ಮಾಡಲಾಗಿದೆ. ತುಮಕೂರು ಜಿಲ್ಲೆ ಕೊರಟಗೆರೆ ತಾಲೂಕಿನ ಮಲ್ಲಪ್ಪನಹಳ್ಳಿ ಬಳಿ ಅಪಾರ ಪ್ರಮಾಣದ ನೀರು ರಸ್ತೆ ಮೇಲೆ ಹರಿಯುತ್ತಿರುವ ಪರಿಣಾಮ ರಸ್ತೆ ಸಂಚಾರವನ್ನು ಬಂದ್ ಮಾಡಲಾಗಿದೆ. ಎಚ್ಚರಿಕೆಯ ನಾಮಫಲಕಗಳನ್ನು ಅಳವಡಿಸಲಾಗಿದ್ದು ಜನ ಹಾಗೂ ವಾಹನ ಸಂಚಾರಕ್ಕೆ ನಿರ್ಬಂಧ ವಿಧಿಸಲಾಗಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296
ವೈದಿಕ ಜ್ಯೋತಿಷ್ಯ ಶಾಸ್ತ್ರದ ಪ್ರಕಾರ ಕೆಲವೊಂದು ರಾಶಿಯವರಿಗೆ ರಾಶಿ ಚಕ್ರದಲ್ಲಿ ಹಣವನ್ನು ಗಳಿಸುವುದಕ್ಕೆ ಕಷ್ಟ ಪಡಬೇಕಾದ ಅಗತ್ಯವಿಲ್ಲ ಹುಟ್ಟಿನಿಂದಲೇ ಅವರು ಹಣ ಗಳಿಸುವಂತಹ ಅದೃಷ್ಟವನ್ನು ತಮ್ಮ ಜೊತೆಗೆ ತಂದಿರುತ್ತಾರೆ ಅನ್ನೋದನ್ನ ಹೇಳಲಾಗುತ್ತೆ. ಹಾಗಿದ್ರೆ ಬನ್ನಿ ಇವತ್ತಿನ ಈ ಲೇಖನದ ಮೂಲಕ ಯಾರೆಲ್ಲಾ ಹಣ ಗಳಿಸುವುದಕ್ಕೆ ಅಂತಾನೇ ಹುಟ್ಟಿದ್ದಾರೆ ಅನ್ನೋದನ್ನ ತಿಳಿದುಕೊಳ್ಳೋಣ. ಶ್ರೀ ಕ್ಷೇತ್ರ ಕಟೀಲು ದುರ್ಗಾಪರಮೇಶ್ವರೀ ಜ್ಯೋತಿಷ್ಯ ಪೀಠಂ ದೈವಜ್ಞ ಪಂಡಿತ್ ಕೃಷ್ಣ ಭಟ್ ಪ್ರಧಾನ ತಾಂತ್ರಿಕ್ ಹಾಗೂ ಮಾಂತ್ರಿಕರು ಸ್ತ್ರೀ ಪುರುಷ ವಶೀಕರಣ ಸ್ಪೆಷಲಿಸ್ಟ್ ನನಗೆ ಒಂದೇ ಕರೆ ಮಾಡಿದರೆ ನಿಮ್ಮ ಇಷ್ಟಪಟ್ಟವರು ನಿಮ್ಮಂತೆ 9535156490. ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆ ಉತ್ತರಿಸಬಹುದು ಏಷ್ಟೇ ಪೂಜೆ ಪ್ರಯತ್ನ ಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..?ನಿಮ್ಮ ಯಾವುದೇಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ 2 ದಿನಗಳಲ್ಲಿ ಪರಿಹಾರ ಶತಸಿದ್ಧ ಧನವಶ, ಜನವಶ, ಶತ್ರುನಾಶ,…
ತುಮಕೂರು: ಧೈರ್ಯ, ಶೌರ್ಯ, ಪ್ರೀತಿ, ಮಮತೆಗಳಂತಹ ಅಸಂಖ್ಯ ಗುಣಗಳನ್ನೊಂದಿದ್ದ ಕಿತ್ತೂರು ರಾಣಿ ಚೆನ್ನಮ್ಮ ಅವರನ್ನು ಅಗಣಿತ ಗುಣಗಳ ಆದರ್ಶದ ಗಣಿ ಎಂದು ಬಣ್ಣಿಸಲಾಗುತ್ತದೆ ಎಂದು ಅಪರ ಜಿಲ್ಲಾಧಿಕಾರಿ ಡಾ.ಎನ್.ತಿಪ್ಪೇಸ್ವಾಮಿ ತಿಳಿಸಿದರು. ನಗರದ ಗುಬ್ಬಿ ವೀರಣ್ಣ ಕಲಾಕ್ಷೇತ್ರದಲ್ಲಿಂದು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಾನಗರಪಾಲಿಕೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಅಖಿಲ ಭಾರತ ವೀರಶೈವ ಮಹಾಸಭಾ, ನಗರ ವೀರಶೈವ ಸಮಾಜ ಸೇವಾ ಸಮಿತಿ, ಬಸವ ಸೇವಾ ಸಮಿತಿ, ಮೈತ್ರಿ ಮಹಿಳಾ ಸಮಾಜ, ಕದಳಿ ವೇದಿಕೆ ವತಿಯಿಂದ ಆಚರಿಸಲಾದ ಕಿತ್ತೂರು ರಾಣಿ ಚೆನ್ನಮ್ಮ ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ದೇಶದ ಸ್ವಾತಂತ್ರಕ್ಕಾಗಿ ಬ್ರಿಟಿಷರ ವಿರುದ್ಧ ಹೋರಾಡಿದ ದಿಟ್ಟ ಹೋರಾಟಗಾರ್ತಿ ಕಿತ್ತೂರು ರಾಣಿ ಚೆನ್ನಮ್ಮ. ಅವರ ಬದುಕು, ಸಾಧನೆಗಳನ್ನು ನೆನಪಿಸಿಕೊಳ್ಳಲು ಸರ್ಕಾರದ ವತಿಯಿಂದ ಜಯಂತಿ ಕಾರ್ಯಕ್ರಮವನ್ನು ಆಚರಿಸಲಾಗುತ್ತಿದ್ದು, ಇಂಥಹ ಸಾಧಕರ ಜಯಂತಿಗಳನ್ನು ಯಾವುದೇ ಒಂದು ಜಾತಿ, ಧರ್ಮಕ್ಕೆ ಸೀಮಿತಗೊಳಿಸದೆ ಎಲ್ಲರೂ ಒಗ್ಗೂಡಿ ಅವರಿಗೆ ಗೌರವ ಸಲ್ಲಿಸಬೇಕು ಎಂದು ತಿಳಿಸಿದರು. ಸ್ವಾಭಿಮಾನದ ಪ್ರತೀಕವಾಗಿದ್ದ…
ಪಾವಗಡ: ತಾಲ್ಲೂಕಿನ ಕೋಟಗುಡ್ಡ ಸಹನಾ ಆಂಗ್ಲ ಮಾಧ್ಯಮ ಪ್ರಾಥಮಿಕ ಶಾಲೆಯ 2024 — 25 ನೇ ಸಾಲಿನ ಜಿಲ್ಲಾ ಮಟ್ಟದ ಕ್ರೀಡಾಕೂಟದಲ್ಲಿ ಬಾಲಕರ ಮತ್ತು ಬಾಲಕಿಯರ ಟೇಬಲ್ ಟೆನ್ನಿಸ್ ಪಂದ್ಯಾವಳಿಯಲ್ಲಿ ಪ್ರಥಮ ಸ್ಥಾನವನ್ನು ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆ ಆಗಿದ್ದಾರೆ. ಇದೇ ಅಕ್ಟೋಬರ್ 25, 26 ರಂದು ಬೀದರ್ ನಲ್ಲಿ ನಡೆಯುವ ರಾಜ್ಯ ಮಟ್ಟದ ಕ್ರೀಡಾ ಸ್ಪರ್ಧೆಯಲ್ಲಿ ಭಾಗವಹಿಸುತ್ತಿದ್ದಾರೆ. ಈ ಕ್ರೀಡಾ ಸಾಧಕರಿಗೆ ಶಾಲೆಯ ಆಡಳಿತ ಮಂಡಳಿ ವತಿಯಿಂದ ಸನ್ಮಾನಿಸಿ ಗೌರವಿಸಲಾಯಿತು. ಇದೇ ಸಂದರ್ಭದಲ್ಲಿ ಶಾಲೆಯ ಮುಖ್ಯ ಶಿಕ್ಷಕರಾದ ಎಸ್.ನರಸಿಂಹಪ್ಪ, ದೈಹಿಕ ಶಿಕ್ಷಕರಾದ ಎಸ್.ಮಲ್ಲಿಕಾರ್ಜುನ್, ಸಹ ಶಿಕ್ಷಕರು ಹಾಗೂ ಶಾಲಾ ಸಿಬ್ಬಂದಿ ವತಿಯಿಂದ ಅಭಿನಂದನೆ ಸಲ್ಲಿಸಲಾಯಿತು. ವರದಿ: ನಂದೀಶ್ ನಾಯ್ಕ, ಪಾವಗಡ ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q
ಮಂಗಳೂರು: ಇಲ್ಲಿನ ಎಸ್. ಡಿ.ಎಂ. ಕಾನೂನು ಕಾಲೇಜಿನ ಎರಡನೇ ವರ್ಷದ ಎಲ್. ಎಲ್.ಬಿ. ವಿದ್ಯಾರ್ಥಿನಿ ಪ್ರಮಯಿ ಜೈನ್, 2024 –25 ನೇ ಸಾಲಿನ ಅಂತರ್ ವಿಶ್ವವಿದ್ಯಾಲಯ ಚಾಂಪಿಯನ್ ಶಿಪ್ ನಲ್ಲಿ ಕರ್ನಾಟಕ ರಾಜ್ಯ ಕಾನೂನು ವಿಶ್ವವಿದ್ಯಾಲಯಗಳ ಬ್ಯಾಡ್ಮಿಂಟನ್ ತಂಡವನ್ನು ಪ್ರತಿನಿಧಿಸಲು ಆಯ್ಕೆಯಾಗಿದ್ದಾರೆ. ವರದಿ: ಜೆ.ರಂಗನಾಥ ತುಮಕೂರು ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q
ಗ್ರಾಮೀಣ ಪ್ರದೇಶಗಳ ಕಡೆ ಆತ್ಮಹತ್ಯೆಗಳು ಅಪಘಾತಗಳು ಹಾಗೂ ಇತರೆ ಸಂಬಂಧಪಟ್ಟಂತೆ ಸರ್ಕಾರದಿಂದ ಮರಣೋತ್ತರ ಪರೀಕ್ಷೆ ಆಗಬೇಕೆಂಬ ಸಂದರ್ಭದಲ್ಲಿ ತಾಲೂಕು ಸಾರ್ವಜನಿಕ ಆಸ್ಪತ್ರೆಯಲ್ಲಿ ನಡೆಸುತ್ತಿರುವುದು ಕಂಡು ಬರುತ್ತದೆ. ಇಂಥ ಸಂದರ್ಭದಲ್ಲಿ ನಿಧನ ಹೊಂದಿದ ಕುಟುಂಬದವರು, ಸಂಬಂಧಿಕರು, ಗೆಳೆಯರು ತುಂಬಾ ತೊಂದರೆಯನ್ನು ಅನುಭವಿಸುವುದು ಕಂಡುಬರುತ್ತದೆ. ಮರಣೋತ್ತರ ಪರೀಕ್ಷೆ ನಡೆಸಬೇಕಾದರೆ ತುಂಬಾ ವಿಳಂಬ ಮಾಡುತ್ತಾರೆ ಎಂಬುದು ಸಹ ಕೇಳಿ ಬರುತ್ತದೆ. ಈ ಕಾರಣದಿಂದ ಇಡೀ ಕುಟುಂಬ ಸಾರ್ವಜನಿಕ ಆಸ್ಪತ್ರೆ ಹತ್ತಿರ ಇರುವುದನ್ನು ನೋಡಬಹುದು, ಹಾಗೂ ಮರಣೋತ್ತರ ಪರೀಕ್ಷೆ ಸಂದರ್ಭದಲ್ಲಿ ಸಂಬಂಧಪಟ್ಟ ಇಲಾಖೆಗಳು ಕಾಳಜಿ ವಹಿಸುವುದಿಲ್ಲ ಎಂಬ ಮಾತು ಕೇಳಿ ಬರುತ್ತದೆ. ಇಂಥ ಸಂದರ್ಭದಲ್ಲಿ ವಕೀಲರು ಸಹ ಅಪಘಾತ ವಿಮೆಯನ್ನು ಕೊಡಿಸಲು ಸ್ಪರ್ಧೆ ಇರುತ್ತದೆ ಎಂಬುದು ಕೇಳಿ ಬರುತ್ತದೆ. ಇಂಥ ಸಂದರ್ಭದಲ್ಲಿ ಮರಣೋತ್ತರ ಪರೀಕ್ಷೆ ಮಾಡಲು ಕೆಲವು ವಕೀಲರು ಸಂಬಂಧಪಟ್ಟ ಅಧಿಕಾರಿಗಳನ್ನು ಭೇಟಿ ಮಾಡಿದ ಮೇಲೆ ಅಥವಾ ನಿಧನ ಹೊಂದಿದ ವ್ಯಕ್ತಿಯ ಪ್ರಭಾವಿ ಸಂಬಂಧಿಕರು ಅಥವಾ ಪರಿಚಯಸ್ಥರು ಸಂಬಂಧಪಟ್ಟ ಅಧಿಕಾರಿಗಳನ್ನು ಭೇಟಿ ಮಾಡಿದರೆ ಮಾತ್ರ ಅಲ್ಲಿ ಕೈ…