Author: admin

ತುಮಕೂರು: ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಕಾನೂನು ನೆರವು ಅಭಿರಕ್ಷಕರ ಕಚೇರಿಯಲ್ಲಿ ಖಾಲಿಯಿರುವ 2 ಕಚೇರಿ ಸಹಾಯಕ/ಗುಮಾಸ್ತ ಹಾಗೂ 2 ಜವಾನ(ಮುನ್ಸಿ/ಅಟೆಂಡೆಂಟ್) ಹುದ್ದೆಗಳನ್ನು ನೇರ ನೇಮಕಾತಿ ಮೂಲಕ ಭರ್ತಿ ಮಾಡಲು ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ. ಕಚೇರಿ ಸಹಾಯಕ/ಗುಮಾಸ್ತ ಹುದ್ದೆಗೆ ಅರ್ಜಿ ಸಲ್ಲಿಸುವವರು ಯಾವುದೇ ಪದವಿಯೊಂದಿಗೆ ಮೂಲದ ಸಂಸ್ಕರಣ ಕೌಶಲ್ಯಗಳು ಮತ್ತು ಕಾರ್ಯನಿರ್ವಹಿಸುವ ಸಾಮರ್ಥ್ಯ, ಕಂಪ್ಯೂಟರ್ ಮತ್ತು ಡೇಟಾ ಫೀಡ್ ಮಾಡುವ ಕೌಶಲ್ಯ, ಅರ್ಜಿಗಳ ಸರಿಯಾದ ಪುಟ ಜೋಡಣೆಯೊಂದಿಗೆ ಉತ್ತಮ ಟೈಪಿಂಗ್ ವೇಗ, ಉಕ್ತಲೇಖನ ತೆಗೆದುಕೊಳ್ಳುವ ಮತ್ತು ನ್ಯಾಯಾಲಯಗಳಲ್ಲಿ ಪ್ರಸ್ತುತಿಗಾಗಿ ಕಡತಗಳನ್ನು ಸಿದ್ಧಪಡಿಸುವ ಸಾಮರ್ಥ್ಯ, ಕಡತ ನಿರ್ವಹಣೆ ಪ್ರಕ್ರಿಯೆ ಜ್ಞಾನವನ್ನು ಹೊಂದಿರಬೇಕು. ಈ ಹುದ್ದೆಗೆ ಮಾಸಿಕ 19,695 ರೂ.ಗಳ ವೇತನ ನಿಗಧಿಪಡಿಸಲಾಗಿದೆ. ಜವಾನ(ಮುನ್ಸಿ/ಅಟೆಂಡೆಂಟ್) ಹುದ್ದೆಗೆ ಅರ್ಜಿ ಸಲ್ಲಿಸುವವರು ಎಸ್‌ ಎಸ್‌ ಎಲ್‌ ಸಿ ಉತ್ತೀರ್ಣರಾಗಿರಬೇಕು. ಆಯ್ಕೆಯಾದವರಿಗೆ ಮಾಹೆಯಾನ 15,884 ರೂ.ಗಳ ವೇತನ ಪಾವತಿ ಮಾಡಲಾಗುವುದು. ಅರ್ಹ ಅಭ್ಯರ್ಥಿಗಳು ಭರ್ತಿ ಮಾಡಿದ ಅರ್ಜಿಯನ್ನು ಅಕ್ಟೋಬರ್ 3ರೊಳಗಾಗಿ ಸದಸ್ಯ ಕಾರ್ಯದರ್ಶಿಗಳು, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ…

Read More

ತುಮಕೂರು: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಜಿಲ್ಲಾ ಪ್ರವಾಸೋದ್ಯಮ ಇಲಾಖೆ ಸಹಯೋಗದಲ್ಲಿ ಸೆಪ್ಟೆಂಬರ್ 27ರಂದು TOURISM & PEACE (ಪ್ರವಾಸೋದ್ಯಮ ಮತ್ತು ಶಾಂತಿ)” ಎಂಬ ಸಂದೇಶದೊಂದಿಗೆ ಜಿಲ್ಲೆಯ ಕೊರಟಗೆರೆ ತಾಲ್ಲೂಕು ಚನ್ನರಾಯನದುರ್ಗ ಬೆಟ್ಟದಲ್ಲಿ ವಿಶ್ವ ಪ್ರವಾಸೋದ್ಯಮ ದಿನಾಚರಣೆಯನ್ನು ಹಮ್ಮಿಕೊಳ್ಳಲಾಗಿದೆ ಎಂದು ಪ್ರವಾಸೋದ್ಯಮ ಇಲಾಖೆ ಸಹಾಯಕ ನಿರ್ದೇಶಕರಾದ ಡಾ.ಬಿ.ಎಸ್.ಬಸಂತಿ ತಿಳಿಸಿದ್ದಾರೆ. ದಿನಾಚರಣೆ ಪ್ರಯುಕ್ತ ಅಂದು ಬೆಳಿಗ್ಗೆ 7:30 ಗಂಟೆಗೆ ಚನ್ನರಾಯನದುರ್ಗ ಬೆಟ್ಟದ ಪರ್ವತಾರೋಹಣ ಹಾಗೂ ಸ್ವಚ್ಛತಾ ಕಾರ್ಯಕ್ರಮವನ್ನು ಏರ್ಪಡಿಸಲಾಗಿದೆ. ನಂತರ ಚನ್ನರಾಯನದುರ್ಗ ಬೆಟ್ಟದ ಕೆಳಗಿನ ಪ್ರವಾಸಿ ಸ್ಥಳದಲ್ಲಿ ಬೆಳಿಗ್ಗೆ 10 ಗಂಟೆಗೆ ವೇದಿಕೆ ಕಾರ್ಯಕ್ರಮ ನಡೆಯಲಿದ್ದು, ಕಾರ್ಯಕ್ರಮವನ್ನು ಗೃಹ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ.ಜಿ.ಪರಮೇಶ್ವರ ಅವರು ಉದ್ಘಾಟಿಸಲಿದ್ದಾರೆ. ವಿವಿಧ ಜನಪ್ರತಿನಿಧಿಗಳು, ಜಿಲ್ಲಾಧಿಕಾರಿ ಶುಭ ಕಲ್ಯಾಣ್, ಸೇರಿದಂತೆ ಮತ್ತಿತರರು ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ಅವರು ತಿಳಿಸಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q

Read More

ತುಮಕೂರು: ಊರ್ಡಿಗೆರೆ ಗೊಲ್ಲಹಳ್ಳಿಯಲ್ಲಿರುವ ಪಿಎಂ ಜವಾಹರ್ ನವೋದಯ ವಿದ್ಯಾಲಯದ 6ನೇ ತರಗತಿ ಪ್ರವೇಶ ಪರೀಕ್ಷೆಗೆ ಆನ್ ಲೈನ್ ಅರ್ಜಿ ಸಲ್ಲಿಕೆ ಅವಧಿಯನ್ನು ಅಕ್ಟೋಬರ್ 7 ವರೆಗೆ ವಿಸ್ತರಿಸಲಾಗಿದೆ. ಆಸಕ್ತ ವಿದ್ಯಾರ್ಥಿಗಳು NVSHQ ಜಾಲತಾಣದ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಯಲ್ಲಿ ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ/ಸಾಮಾನ್ಯ/ಹಿಂದುಳಿದ ವರ್ಗ/ಗ್ರಾಮೀಣ/ನಗರ/ವಿಕಲ ಚೇತನ/ಲಿಂಗ/ಭಾಷಾ ಮಾಧ್ಯಮ ಸೇರದಂತೆ ಮತ್ತಿತರ ವಿಷಯಗಳಲ್ಲಿ ತಿದ್ದುಪಡಿ ಮಾಡಲು ಕಡೆಯ ದಿನಾಂಕದ ನಂತರ 2 ದಿನಗಳ ಕಾಲಾವಕಾಶವಿದೆ. ಇದಕ್ಕಾಗಿ “ತಿದ್ದುಪಡಿ ಕಿಟಕಿ” (CORRECTION WINDOW) ತೆರೆದಿರುತ್ತದೆ. ವಿದ್ಯಾರ್ಥಿಗಳು ಇದರ ಸದುಪಯೋಗವನ್ನು ಪಡೆದುಕೊಳ್ಳಬಹುದಾಗಿದೆ ಎಂದು ಜವಾಹರ್ ನವೋದಯ ವಿದ್ಯಾಲಯದ ಪ್ರಾಂಶುಪಾಲರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

Read More

ತಿಪಟೂರು: ಸಹಕಾರಿ ಸಂಘಗಳು ಸದಸ್ಯರು ಹಾಗೂ ಶೇರುದಾರರ ನಂಬಿಕೆಯ ಆಧಾರದಲ್ಲಿ ನಡೆಯುತ್ತಿದ್ದು, ಸಂಘದಲ್ಲಿ ಸಾಲ ಪಡೆದ ರೈತರು ಸಕಾಲದಲ್ಲಿ ಸಾಲ ಮರುಪಾವತಿ ಮಾಡಿ ಸಂಘದ ಅಭಿವೃದ್ದಿಗೆ ಕೈ ಜೋಡಿಸ ಬೇಕು ಎಂದು ಕುಪ್ಪಾಳು ಪ್ರಾಥಮಿಕ ಕೃಷಿ ಪತ್ತಿನ  ಸಹಕಾರ ಸಂಘದ ಅಧ್ಯಕ್ಷ ಬಿ.ಬಿ.ಸಿದ್ದಲಿಂಗಮೂರ್ತಿ ತಿಳಿಸಿದರು. ತಾಲ್ಲೂಕಿನ ಕುಪ್ಪಾಳು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಆವರಣದಲ್ಲಿ ಆಯೋಜಿಸಿದ ಸರ್ವಸದಸ್ಯರ ವಾರ್ಷಿಕ ಮಹಾಸಭೆ ಉದ್ಘಾಟಿಸಿದ ಅವರು, ಸಹಕಾರ ಸಂಘಗಳು  ಸದಸ್ಯರು ಹಾಗೂ ಶೇರುದಾರರ ಸಹಕಾರದಿಂದ ಅಭಿವೃದ್ದಿ ಹೊಂದಬೇಕಿದು, ಎಲ್ಲಾ ಒಬ್ಬರಿಗಾಗಿ ಒಬ್ಬರೂ ಎಲ್ಲರಿಗಾಗಿ ಎನ್ನುವ ತತ್ವದಡಿ ಸದಸ್ಯರು ನಂಬಿಕೆ ಇಟ್ಟು ಕೆಲಸ ಮಾಡಬೇಕು. ಕುಪ್ಪಾಳು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ಹಲವಾರು ಏರಿಳಿತಗಳ ಮಧ್ಯ ಉತ್ತಮ ದಾರಿಯಲ್ಲಿ ನಡೆಯುತ್ತಿದೆ. ರೈತರಿಗೆ ಅನುಕೂಲಕಲ್ಪಿಸ ಬೇಕು ಎನ್ನುವ ದೃಷ್ಠಿಯಿಂದ ಶಾಸಕರು ಹಾಗೂ  ಸಹಕಾರಿ ಸಚಿವರು ಡಿಸಿಸಿ ಬ್ಯಾಂಕ್ ಅಧ್ಯಕ್ಷರಾದ ಕೆ.ಎನ್ ರಾಜಣ್ಣನವರ ನೆರವಿನಿಂದ 1.50ಲಕ್ಷ ಸಾಲ ಸೌಲಭ್ಯ ನೀಡಿದ್ದು, ಸಾಲಪಡೆದ ಸದಸ್ಯರು ಸಕಾಲಕ್ಕೆ ಮರುಪಾವತಿ…

Read More

ತುಮಕೂರು:  ದ್ವಿಚಕ್ರವಾಹನಕ್ಕೆ ಅಡ್ಡ ಬಂದ ಯುವತಿಗೆ ನಿಂದನೆ ಮಾಡಿದ ವ್ಯಕ್ತಿಯೊಬ್ಬರ ಯುವತಿ ಪರ ಮಾತನಾಡಿದ ವ್ಯಕ್ತಿಯ ಮೇಲೆ ಮಚ್ಚಿನಿಂದ ಮಾರಣಾಂತಿಕ ಹಲ್ಲೆ ನಡೆಸಿರುವ ಘಟನೆ   ತುಮಕೂರು ನಗರದ ಮರಳೂರು‌ ದಿಣ್ಣೆಯಲ್ಲಿ ನಡೆದಿದೆ. ಇರ್ಫಾನ್ ಮಚ್ಚಿನಿಂದ ಹಲ್ಲೆ ನಡೆಸಿದ ಆರೋಪಿಯಾಗಿದ್ದಾನೆ. ವಿಲೀಂಗ್ ಮಾಡುತ್ತಿದ್ದ ಇರ್ಫಾನ್ ನ  ಬೈಕ್ ಗೆ ಯುವತಿ ಅಡ್ಡ ಬಂದಿದ್ದಳು. ಈ ವೇಳೆ ಯುವತಿಯನ್ನು ಕೆಳಗೆ ತಳ್ಳಿದ ಇರ್ಫಾನ್, ಚುಡಾಯಿಸಿ ಜಗಳ ಆರಂಭಿಸಿದ್ದನಂತೆ. ಈ ವೇಳೆ ಇರ್ಫಾನ್ ಹೆಸರಿನ ಇನ್ನೊಬ್ಬ ಯುವಕ ಮತ್ತು ಸಾಧಿಕ್ ಎಂಬವರು ಆರೋಪಿ ಇರ್ಫಾನ್ ಗೆ ಬೈದು, ಬುದ್ಧಿ ಹೇಳಿ ಯುವತಿಯನ್ನು ರಕ್ಷಿಸಿದ್ದರು. ಇದರಿಂದ ಕೋಪಗೊಂಡ ಆರೋಪಿ ಇರ್ಫಾನ್  ತನ್ನ ಸ್ನೇಹಿತರೊಂದಿಗೆ ಬಂದು ಇರ್ಫಾನ್ ಹಾಗೂ ಸಾಧಿಕ್ ಮೇಲೆ ಮನಸೋ ಇಚ್ಛೆ ಹಲ್ಲೆ ನಡೆಸಿದ್ದು, ಕೈಗೆ ತಲೆಗೆ ಲಾಂಗ್ ನಿಂದ ಹಲ್ಲೆ ನಡೆಸಿದ್ದಾನೆ. ಹಲ್ಲೆಯ ಪರಿಣಾಮ ಯುವತಿಯ ರಕ್ಷಣೆಗೆ ಬಂದಿದ್ದ ಇರ್ಫಾನ್ (30)ನ ಸ್ಥಿತಿ ಗಂಭೀರವಾಗಿದೆ. ಆತನನ್ನು ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿದೆ. ಹಲ್ಲೆಯ ಬಳಿಕ…

Read More

ಶ್ರೀ ಕ್ಷೇತ್ರ ಕಟೀಲು ದುರ್ಗಾಪರಮೇಶ್ವರೀ ಜ್ಯೋತಿಷ್ಯ ಪೀಠಂ ದೈವಜ್ಞ ಪಂಡಿತ್ ಕೃಷ್ಣ ಭಟ್ ಪ್ರಧಾನ ತಾಂತ್ರಿಕ್ ಹಾಗೂ ಮಾಂತ್ರಿಕರು   ಸ್ತ್ರೀ ಪುರುಷ ವಶೀಕರಣ ಸ್ಪೆಷಲಿಸ್ಟ್ ನನಗೆ ಒಂದೇ ಕರೆ ಮಾಡಿದರೆ ನಿಮ್ಮ ಇಷ್ಟಪಟ್ಟವರು ನಿಮ್ಮಂತೆ 9535156490 ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆ ಉತ್ತರಿಸಬಹುದು ಏಷ್ಟೇ ಪೂಜೆ ಪ್ರಯತ್ನ ಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..? ನಿಮ್ಮ ಯಾವುದೇಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ 2 ದಿನಗಳಲ್ಲಿ ಪರಿಹಾರ ಶತಸಿದ್ಧ ಧನವಶ, ಜನವಶ, ಶತ್ರುನಾಶ, ಸ್ತ್ರೀ- ಪುರುಷ ವಶೀಕರಣ, ದಿಗ್ಭಂಧನ, ಸ್ತಂಭನ, ವುಚ್ಛಾಟನೆಯಂತಹ ಸಮಸ್ಯೆಗಳಿಗೆ ವಿಶೇಷ ಪರಿಹಾರ ತಿಳಿಸುತ್ತಾರೆ 9535156490 Provided by ✨ ವೃಷಭ ರಾಶಿ✨  ಆದಾಯದ ಹೊಸ ಮೂಲಗಳು ತೆರೆದುಕೊಳ್ಳುತ್ತವೆ.ಉದ್ಯೋಗದಲ್ಲಿ ಬಡ್ತಿ ದೊರೆಯುವುದು. ಸಂಪತ್ತಿನ ಯೋಗವಿದೆ.ಕೌಟುಂಬಿಕ ಜೀವನ ಸುಖಮಯವಾಗಿರುತ್ತದೆ. ಪ್ರೇಮ ಸಂಬಂಧಗಳಲ್ಲಿ ಮಧುರತೆ ಇರುತ್ತದೆ.ಆರೋಗ್ಯ ಚೆನ್ನಾಗಿರುತ್ತದೆ. ✨ ಸಿಂಹ ರಾಶಿ…

Read More

ತುಮಕೂರು: ಮಹಿಳಾ ಸಬಲೀಕರಣ ಘಟಕದಲ್ಲಿನ ಪ್ರಧಾನಮಂತ್ರಿ ಮಾತೃವಂದನಾ ಯೋಜನೆ ಅನುಷ್ಠಾನಕ್ಕಾಗಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕರ ಕಚೇರಿಯಲ್ಲಿ ಖಾಲಿಯಿರುವ ಜಿಲ್ಲಾ ಮಟ್ಟದ 1 ಪ್ರಧಾನಮಂತ್ರಿ ಮಾತೃವಂದನಾ ಯೋಜನೆಯ ಜಿಲ್ಲಾ ಸಂಯೋಜಕ ಹಾಗೂ 1 ಡಾಟಾ ಎಂಟ್ರಿ ಆಪರೇಟರ್/ಯೋಜನಾ ಸಹಾಯಕರ ಹುದ್ದೆಯನ್ನು ಭರ್ತಿ ಮಾಡಲು ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ. ಪ್ರಧಾನಮಂತ್ರಿ ಮಾತೃವಂದನಾ ಯೋಜನೆಯ ಜಿಲ್ಲಾ ಸಂಯೋಜಕ ಹುದ್ದೆಗೆ ಸಮಾಜವಿಜ್ಞಾನ/ಜೀವವಿಜ್ಞಾನ/ಪೌಷ್ಠಿಕ/ವೈದ್ಯಕೀಯ/ಆರೋಗ್ಯ ನಿರ್ವಹಣೆ/ ಸಮಾಜಕಾರ್ಯ/ ಗ್ರಾಮೀಣ ನಿರ್ವಹಣೆ ವಿಷಯ ಹಾಗೂ ಡಾಟಾ ಎಂಟ್ರಿ ಆಪರೇಟರ್/ಯೋಜನಾ ಸಹಾಯಕ ಹುದ್ದೆಗೆ ಸಮಾಜವಿಜ್ಞಾನ/ಜೀವವಿಜ್ಞಾನ/ಗ್ರ‍್ರಾಮೀಣ ನಿರ್ವಹಣೆ/ಸಂಖ್ಯಾಶಾಸ್ತ್ರ ಯಾವುದಾದರೂ ಒಂದು ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದಿರಬೇಕು ಹಾಗೂ ಸರ್ಕಾರಿ ಅಥವಾ ಸ್ವಯಂ ಸೇವಾ ಸಂಸ್ಥೆಗಳಲ್ಲಿ ಕನಿಷ್ಟ 1 ವರ್ಷ ಅನುಭವ ಹೊಂದಿರಬೇಕು. ಮಾತೃವಂದನಾ ಯೋಜನೆಯ ಜಿಲ್ಲಾ ಸಂಯೋಜಕ ಹುದ್ದೆಗೆ ಮಾಹೆಯಾನ 35,000 ರೂ. ಹಾಗೂ ಡಾಟಾ ಎಂಟ್ರಿ ಆಪರೇಟರ್/ಯೋಜನಾ ಸಹಾಯಕ ಹುದ್ದೆಗೆ 22,000 ರೂ.ಗಳ ಗೌರವಧನವನ್ನು ಪಾವತಿಸಲಾಗುವುದು. ಆಸಕ್ತ ಅಭ್ಯರ್ಥಿಗಳು ಭರ್ತಿ ಮಾಡಿದ ಅರ್ಜಿಯನ್ನು ಸೆಪ್ಟೆಂಬರ್ 16ರೊಳಗಾಗಿ ಸಲ್ಲಿಸಬಹುದಾಗಿದೆ. ಅರ್ಜಿಯೊಂದಿಗೆ…

Read More

ತುಮಕೂರು : ಜಿಲ್ಲೆಯ ಚಿಕ್ಕನಾಯಕನಹಳ್ಳಿ ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ತುಮಕೂರು ಲೋಕಾಯುಕ್ತ ಪೊಲೀಸ್ ಅಧೀಕ್ಷಕ ಅವರ ಅಧ್ಯಕ್ಷತೆಯಲ್ಲಿ ಸೆಪ್ಟೆಂಬರ್ 26ರಂದು ಹಮ್ಮಿಕೊಂಡಿದ್ದ ಸಾರ್ವಜನಿಕರ ಕುಂದು ಕೊರತೆ ಸಭೆಯನ್ನು ಮುಂದೂಡಲಾಗಿದೆ ಎಂದು ಪ್ರಕಟಣೆ ತಿಳಿಸಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q

Read More

ಬೆಂಗಳೂರು: ವೈಯಾಲಿಕಾವಲ್ ನಲ್ಲಿ ಮಹಾಲಕ್ಷ್ಮೀ ಎಂಬ ಮಹಿಳೆಯ ಬರ್ಬರ ಹತ್ಯೆ ಕೇಸ್ ಗೆ ಬಿಗ್ ಟ್ವಿಸ್ಟ್ ದೊರೆತಿದ್ದು, ಪ್ರಕರಣದ ಶಂಕಿತ ಆರೋಪಿ ಒಡಿಶಾದಲ್ಲಿ ಮರಕ್ಕೆ ನೇಣುಬಿಗಿದುಕೊಂಡು ಸಾವಿಗೆ ಶರಣಾಗಿದ್ದಾನೆ. ಮುಕ್ತಿರಂಜನ್ ರಾಯ್ ಆತ್ಮಹತ್ಯೆ ಮಾಡಿಕೊಂಡ ಶಂಕಿತ ಕೊಲೆ ಆರೋಪಿಯಾಗಿದ್ದಾನೆ. ಮಹಾಲಕ್ಷ್ಮೀ ಹತ್ಯೆಯ ನಂತರ ಈತ ಪೊಲೀಸರಿಂದ ತಲೆಮರೆಸಿಕೊಂಡು ಓಡಾಡುತ್ತಿದ್ದ ಎಂದು ತಿಳಿದು ಬಂದಿದೆ. ಮಹಾಲಕ್ಷ್ಮೀ ಕೆಲಸ ಮಾಡುತ್ತಿದ್ದ ಶಾಪ್‌ನ ಟೀಂ ಲೀಡರ್ ಆಗಿ ಮುಕ್ತಿರಂಜನ್ ಕೆಲಸ ಮಾಡುತ್ತಿದ್ದನಂತೆ. ಪೊಲೀಸರ ಅಂದಾಜಿನ ಪ್ರಕಾರ ಸೆಪ್ಟಂಬರ್ 2 ಅಥವಾ 3ರಂದು ಕೊಲೆಯಾಗಿರುವ ಸಾಧ್ಯತೆ ಇದೆ ಎನ್ನಲಾಗಿದೆ. ಮಹಾಲಕ್ಷ್ಮೀ ಹತ್ಯೆ ಪ್ರಕರಣದ ನಂತರ ಶಾಪ್‌ ನ ಟೀಂ ಲೀಡರ್ ಮುಕ್ತಿರಂಜನ್ ಕೂಡ ಕೆಲಸಕ್ಕೆ ಬಂದಿರಲಿಲ್ಲ. ಇದು ಹಲವಾರು ಅನುಮಾನಗಳಿಗೆ ಕಾರಣವಾಗಿತ್ತು. ಒಡಿಶಾದಲ್ಲಿ ಹಂತಕ ಇರುವ ಶಂಕೆ ಮೇರೆಗೆ ಪೊಲೀಸರು ಅಲ್ಲಿಗೆ ತೆರಳಿದ್ದರು. ಆದ್ರೆ ಇದೀಗ ಆತ ಆತ್ಮಹತ್ಯೆ ಮಾಡಿಕೊಂಡಿರುವುದು ಬೆಳಕಿಗೆ ಬಂದಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ…

Read More

ತುಮಕೂರು: ಬೆಸ್ಕಾಂ ವಾಣಿಜ್ಯ, ಕಾರ್ಯ ಮತ್ತು ಪಾಲನಾ ವಿಭಾಗೀಯ ಕಚೇರಿಯಿಂದ ತ್ರೈಮಾಸಿಕ ನಿರ್ವಹಣಾ ಕಾರ್ಯ ಕೈಗೊಂಡಿರುವ ಹಿನ್ನೆಲೆಯಲ್ಲಿ ಸೆಪ್ಟೆಂಬರ್ 28 ಹಾಗೂ 29ರಂದು ಬೆಳಿಗ್ಗೆ 10 ರಿಂದ ಸಂಜೆ 5 ಗಂಟೆವರೆಗೆ ವಿದ್ಯುತ್ ವ್ಯತ್ಯಯ ಉಂಟಾಗಲಿದೆ. ಸೆಪ್ಟೆಂಬರ್ 28ರಂದು ತುಮಕೂರು ಹಾಗೂ ಕೋರಾ ಉಪಸ್ಥಾವರ ಮತ್ತು ಸೆಪ್ಟೆಂಬರ್ 29ರಂದು ಹೆಬ್ಬೂರು ಹಾಗೂ ತಿಮ್ಮಸಂದ್ರ ಉಪಸ್ಥಾವರಗಳಿಂದ ಹೊರಹೊಮ್ಮುವ ಎಲ್ಲಾ 11ಕೆವಿ ಪೂರಕಗಳಿಗೆ ಒಳಪಡುವ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದ್ದು, ಗ್ರಾಹಕರು ಸಹಕರಿಸಬೇಕೆಂದು ಕಾರ್ಯನಿರ್ವಾಹಕ ಇಂಜಿನಿಯರ್ ಪ್ರಶಾಂತ್ ಕೂಡ್ಲಿಗಿ ಮನವಿ ಮಾಡಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q

Read More