Subscribe to Updates
Get the latest creative news from FooBar about art, design and business.
- ಕರ್ನಾಟಕದ 25ನೇ ಮುಖ್ಯಮಂತ್ರಿಯಾಗಿ ಡಿ.ಕೆ.ಶಿವಕುಮಾರ್ ಪ್ರಮಾಣವಚನ ಸ್ವೀಕಾರ!
- ಸಾದರ ಸಮುದಾಯ ಭವನದಲ್ಲಿ ಸಪ್ತಗಿರಿ ಆಸ್ಪತ್ರೆ ವತಿಯಿಂದ ಬೃಹತ್ ಆರೋಗ್ಯ ತಪಾಸಣೆ ಮತ್ತು ಶಸ್ತ್ರ ಚಿಕಿತ್ಸಾ ಶಿಬಿರ
- ಖಾಸಗಿ ಶಾಲೆಗಳ ಮಾದರಿಯಲ್ಲೇ, ಸರ್ಕಾರಿ ಶಾಲೆಗಳ ರೂಪಾಂತರ: ಡಿ.ಕೆ.ಶಿವಕುಮಾರ್
- ತುಮಕೂರು ವಿವಿ 19ನೇ ಘಟಿಕೋತ್ಸವ: 90 ವಿದ್ಯಾರ್ಥಿಗಳಿಗೆ 117 ಚಿನ್ನದ ಪದಕ
- ಶಾಲೆಗಳ ಪುನರಾರಂಭ: ದಾಖಲಾತಿ ಆಂದೋಲನಕ್ಕೆ ಡಿ.ಸಿ. ಚಾಲನೆ
- ಸಚಿವ ಸ್ಥಾನದ ಆಸೆ ನನಗೂ ಇದೆ ಕೊಟ್ಟರೆ ಪ್ರಾಮಾಣಿಕವಾಗಿ ಕೆಲಸ ನಿರ್ವಹಿಸುವೆ: ಹೆಚ್.ವಿ.ವೆಂಕಟೇಶ್
- ನವಿಲೆ ಭಾಗಕ್ಕೆ ಹೇಮಾವತಿ ನೀರನ್ನು ಹರಿಸಲಾಗುವುದು ರೈತರು ಆತಂಕಪಡುವ ಅಗತ್ಯವಿಲ್ಲ: ಶಾಸಕ ಸಿ.ಬಿ.ಸುರೇಶ್ ಬಾಬು
- ‘ಗರ್ಭಿಣಿನೂ ಇಲ್ಲ, ಮಹಿಳೆಯೂ ಇಲ್ಲ… ಕಾರಿನಲ್ಲಿ ಒಬ್ಬರೇ ಇದ್ದಿದ್ದು!’: ಝೀರೋ ಟ್ರಾಫಿಕ್ ಪ್ರತಿಭಟನೆಯ ಅಸಲೀಯತ್ತು ಬಿಚ್ಚಿಟ್ಟ ಬೆಂಗಳೂರು ಪೊಲೀಸರು
Author: admin
ತುಮಕೂರು: ಕರ್ನಾಟಕ ರಾಜ್ಯ ಹಿರಿಯ ನಾಗರೀಕರ ಸಂಘ, ಬೆಳಗಾವಿಯಲ್ಲಿ ಕೇಂದ್ರ ಕಛೇರಿ ಹೊಂದಿದ್ದು, 2024-25ನೇ ಸಾಲಿನ ಸರ್ವಸದಸ್ಯರ ಸಭೆಯನ್ನು ತುಮಕೂರು ಜಿಲ್ಲಾ ನಿವೃತ್ತ ನೌಕರರ ಸಂಘ ಹಾಗೂ ಹಿರಿಯ ನಾಗರೀಕರ ಜಿಲ್ಲಾ ಸಂಘದ ಸಹಯೋಗದಲ್ಲಿ ನಡೆಸಲಾಯಿತು. ಸಮಾರಂಭವನ್ನು ರಾಜ್ಯ ಸಂಘದ ಪ್ರಧಾನ ಕಾರ್ಯದರ್ಶಿಯವರಾದ ಮಲ್ಲಪ್ಪ ಮುದಕವಿ ಅವರು ಉದ್ಘಾಟಿಸಿದರು. ಸಂಘದ ಅಧ್ಯಕ್ಷರಾದ ಎ.ವೈ. ಬೆಂಡಿಗೇರಿಯವರು ಅಧ್ಯಕ್ಷತೆ ವಹಿಸಿ ಮಾತನಾಡಿ, ಹಿರಿಯ ನಾಗರೀಕರ ಸಂಘದ ವಾರ್ಷಿಕ ಸರ್ವಸದಸ್ಯರ ಸಭೆಯನ್ನು ರಾಜ್ಯದ ಬೇರೆ ಬೇರೆ ಜಿಲ್ಲೆಗಳಲ್ಲಿ ನಡೆಸುವುದರಿಂದ ಪರಸ್ಪರ ಸಂಬಂಧ-ಸಂಪರ್ಕಗಳು ಬೆಳೆದು ಸಂಘದ ಉನ್ನತಿಗಾಗಿ ಕೆಲಸ ಮಾಡಲು ಪ್ರೇರಣೆ ದೊರಕುತ್ತದೆ ಎಂದರು. ಸದಸ್ಯರನ್ನು ಹೆಚ್ಚಿಸಿಕೊಂಡು ಹಿರಿಯ ನಾಗರೀಕರಿಗೆ ಅಗತ್ಯವಿರುವ ಎಲ್ಲ ಬಗೆಯ ಸಹಾಯ ಸಹಕಾರ ನೀಡುವುದು, ಸರಕಾರದ ಯೋಜನೆಗಳನ್ನು ಹಿರಿಯ ನಾಗರೀಕರಿಗೆ ತಲುಪುವಂತೆ ಮಾಡುವುದು, ಜಿಲ್ಲಾ ಸಂಘಗಳು ಸರ್ವಿಸ್ ಸೆಂಟರ್ ಪ್ರಾರಂಭಿಸಿ ಅದರ ಮೂಲಕ ಒಂದೇ ಸೂರಿನಡಿ ಎಲ್ಲಾ ಸೌಲಭ್ಯ ದೊರೆಯುವಂತೆ ಮಾಡಬಹುದು ಎಂದರು. ಇದೇ ವೇಳೆ ಖಜಾಂಚಿಯವರಾದ ಸುರೇಶ್ ಪಿ. ಭಜಂತ್ರಿ ಅವರು…
ಪಾವಗಡ: ಆಂಧ್ರದ ರೊದ್ದಂನಿಂದ ಪಾವಗಡ ತಾಲ್ಲೂಕಿನ ಟಿ.ಎನ್.ಪೇಟೆ ಕಡೆಗೆ ಬರುತ್ತಿದ್ದ ಬೈಕ್ ಮತ್ತು ಟಿ.ಎನ್.ಪೇಟೆ ಗ್ರಾಮದಿಂದ ಆಂಧ್ರದ ಕಡೆ ಹೋಗುತ್ತಿದ್ದ ಬೈಕ್ ಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಸ್ಥಳದಲ್ಲಿ ಓರ್ವ ಮೃತಪಟ್ಟಿದ್ದರೆ, ಮತ್ತೊಬ್ಬ ಬೈಕ್ ಸವಾರರ ಸ್ಥಿತಿ ಗಂಭೀರ ಸ್ಥಿತಿಯಲ್ಲಿರುವ ಘಟನೆ ಮಂಗಳವಾರ ಸಂಜೆ 6 ಗಂಟೆಯ ಸಮಯದಲ್ಲಿ ಟಿ.ಎನ್.ಪೇಟೆ ಗ್ರಾಮದ ಸಮೀಪ ಜರುಗಿದೆ. ಘಟನೆಯಲ್ಲಿ ರೊದ್ದಂ ಮಂಡಲದ ಕೊರಗ ಗ್ರಾಮಕ್ಕೆ ಸೇರಿದ 25 ವರ್ಷದ ರಾಜು ಎನ್ನುವ ಯುವಕ ಸಾವನ್ನಪ್ಪಿದ್ದು , ಮತ್ತೋರ್ವ ವ್ಯಕ್ತಿಯನ್ನು ರೊದ್ದಂ ಗ್ರಾಮದ ವಾಸಿ ಮಾರುತಿ ಪ್ರಸಾದ್( 29) ಎಂದು ಗುರುತಿಸಲಾಗಿದೆ. ಮಾರುತಿ ಪ್ರಸಾದ್ ನ ತಲೆಗೆ ಗಂಭೀರವಾದ ಗಾಯವಾಗಿದ್ದು, ಪಟ್ಟಣದ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಿ ಪ್ರಥಮ ಚಿಕಿತ್ಸೆ ನೀಡಿ, ಹೆಚ್ಚಿನ ಚಿಕಿತ್ಸೆಗಾಗಿ ತುಮಕೂರಿಗೆ ರವಾನಿಸಲಾಗಿದೆ ಎಂಬ ಮಾಹಿತಿ ತಿಳಿದುಬಂದಿದೆ. ಘಟನಾ ಸ್ಥಳಕ್ಕೆ ಪಾವಗಡ ಪೊಲೀಸ್ ಠಾಣೆಯ ಸಿಪಿಐ ಸುರೇಶ್, ಕ್ರೈಂ ಪಿಎಸ್ ಐ ಗುರುನಾಥ್, ಸೇರಿದಂತೆ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.…
ಶ್ರೀ ಕ್ಷೇತ್ರ ಕಟೀಲು ದುರ್ಗಾಪರಮೇಶ್ವರೀ ಜ್ಯೋತಿಷ್ಯ ಪೀಠಂ ದೈವಜ್ಞ ಪಂಡಿತ್ ಕೃಷ್ಣ ಭಟ್ ಪ್ರಧಾನ ತಾಂತ್ರಿಕ್ ಹಾಗೂ ಮಾಂತ್ರಿಕರು ಸ್ತ್ರೀ ಪುರುಷ ವಶೀಕರಣ ಸ್ಪೆಷಲಿಸ್ಟ್ ನನಗೆ ಒಂದೇ ಕರೆ ಮಾಡಿದರೆ ನಿಮ್ಮ ಇಷ್ಟಪಟ್ಟವರು ನಿಮ್ಮಂತೆ 9535156490 ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆ ಉತ್ತರಿಸಬಹುದು ಏಷ್ಟೇ ಪೂಜೆ ಪ್ರಯತ್ನ ಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..?ನಿಮ್ಮ ಯಾವುದೇಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ 2 ದಿನಗಳಲ್ಲಿ ಪರಿಹಾರ ಶತಸಿದ್ಧ ಧನವಶ, ಜನವಶ, ಶತ್ರುನಾಶ, ಸ್ತ್ರೀ- ಪುರುಷ ವಶೀಕರಣ, ದಿಗ್ಭಂಧನ, ಸ್ತಂಭನ, ವುಚ್ಛಾಟನೆಯಂತಹ ಸಮಸ್ಯೆಗಳಿಗೆ ವಿಶೇಷ ಪರಿಹಾರ ತಿಳಿಸುತ್ತಾರೆ 9535156490 Provided by ಜೀವನದಲ್ಲಿ ಕೆಲವೊಮ್ಮೆ ಸುಳ್ಳು ಹೇಳುವುದು ಸಹಜ. ಆದರೆ ಕೆಲವರು ಈ ಕೆಲಸವನ್ನು ಸ್ವಾರ್ಥಕ್ಕಾಗಿ ಮಾಡುತ್ತಾರೆ. ವಾಸ್ತವವನ್ನು ಮುಚ್ಚಿಟ್ಟು ಏನೋ ಇಲ್ಲ ಎಂಬ ಭ್ರಮೆಯನ್ನು ಮೂಡಿಸುತ್ತಾರೆ. ಅವರ ಇಡೀ ಜೀವನವು ಹಾಗೆ ಹೋಗುತ್ತದೆ.…
ತುಮಕೂರು: ಗುಬ್ಬಿ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆ ವತಿಯಿಂದ ಎಲ್ಲಾ ವೃತ್ತಿಯ ಐ.ಟಿ.ಐ. ಉತ್ತೀರ್ಣ ಹೊಂದಿರುವ ಅಭ್ಯರ್ಥಿಗಳಿಗಾಗಿ ಗುಬ್ಬಿ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಸೆಪ್ಟೆಂಬರ್ 27ರಂದು ಬೆಳಿಗ್ಗೆ 10 ಗಂಟೆಗೆ ಅಪ್ರೆಂಟಿಶಿಪ್ ಮೇಳವನ್ನು ಆಯೋಜಿಸಲಾಗಿದೆ. ಈ ಮೇಳವನ್ನು ಬೆಂಗಳೂರಿನ ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಇಲಾಖೆಯ ಜಂಟಿ ನಿರ್ದೇಶಕ (ತರಬೇತಿ) ವೈಜಗೊಂಡ ಅವರು ಉದ್ಘಾಟಿಸಲಿದ್ದು ಗುಬ್ಬಿ ಸ.ಕೈ.ತ.ಸಂಸ್ಥೆ ಪ್ರಾಚಾರ್ಯರಾದ ಹೇಮಲತಾ ಅಧ್ಯಕ್ಷತೆ ವಹಿಸಲಿದ್ದಾರೆ. ಡಿ.ಎಸ್.ಡಿ.ಓ. ನೋಡಲ್ ಅಧಿಕಾರಿ ಕೆಂಪಯ್ಯ ಟಿ.ಕೆ., ಉದ್ಯೋಗಾಧಿಕಾರಿ ಕಿಶೋರ್ ಕುಮಾರ್ ಟಿ.ವಿ.ಎಸ್. ಎಲೆಕ್ಟ್ರಾನಿಕ್ಸ್ ಲಿಮಿಟೆಡ್ ಹೆಚ್.ಆರ್. ಮ್ಯಾನೇಜರ್ ಪಿ. ನವೀನ್ ಕುಮಾರ್, ಡೆನೋ ಕಿರ್ಲೋಸ್ಕರ್ ಇಂಡಸ್ಟ್ರೀಸ್ ಲಿಮಿಟೆಡ್ ಹೆಚ್.ಆರ್. ಮ್ಯಾನೇಜರ್ ಪ್ರದೀಪ್ ರಾಜ್. ಗುಬ್ಬಿ ಸ.ಕೈ.ತ.ಸಂಸ್ಥೆ ತರಬೇತಿ ಅಧಿಕಾರಿ ರುದ್ರಾಚಾರ್ ಬಿ.ಎನ್., ಜಿಲ್ಲೆಯ ವಿವಿಧ ಕೈಗಾರಿಕೆಗಳ ಪ್ರತಿನಿಧಿಗಳು ಭಾಗವಹಿಸಲಿದ್ದು, ಪ್ರಸ್ತುತ ಐ.ಟಿ.ಐ. ಪಾಸಾಗಿರುವ ಎಲ್ಲಾ ವೃತ್ತಿಯ ಅಭ್ಯರ್ಥಿಗಳು ಈ ಅಪ್ರೆಂಟಿಶಿಪ್ ಮೇಳದಲ್ಲಿ ಭಾಗವಹಿಸಿ ಸದುಪಯೋಗಪಡಿಸಿಕೊಳ್ಳಬೇಕು. ಹೆಚ್ಚಿನ ವಿವರಗಳಿಗಾಗಿ ಮೊಬೈಲ್ ಸಂಖ್ಯೆ: 9620063375 / 9481693710ಯನ್ನು ಸಂಪರ್ಕಿಸಬಹುದಾಗಿದೆ…
ತುಮಕೂರು: ಜಿಲ್ಲೆಯ ಕುಣಿಗಲ್ ತಾಲ್ಲೂಕು ಹೊಡಾಘಟ್ಯ ಗ್ರಾಮದಲ್ಲಿ ಸ್ಥಾಪಿಸಲಿರುವ ಹಾಲು ಉತ್ಪಾದಕರ ಸಹಕಾರ ಸಂಘಕ್ಕೆ ಮುಖ್ಯ ಪ್ರವರ್ತಕ ಹಾಗೂ ಪ್ರವರ್ತಕರನ್ನು ಆಯ್ಕೆ ಮಾಡಲು ಸೆಪ್ಟೆಂಬರ್ 27ರಂದು ಮಧ್ಯಾಹ್ನ 12 ಗಂಟೆಗೆ ಹೊಡಾಘಟ್ಯ ಗ್ರಾಮ ಪಂಚಾಯಿತಿ ಆವರಣದಲ್ಲಿ ಗ್ರಾಮ ಸಭೆಯನ್ನು ಕರೆಯಲಾಗಿದೆ. ರೈತರು ಮತ್ತು ರಾಸು ಸಾಕಾಣಿಕೆದಾರರರುಗಳ ಹಿತದೃಷ್ಠಿಯಿಂದ ಕಲ್ಲಯ್ಯನಪಾಳ್ಯ ಮತ್ತು ಲಿಂಗದೇವರಪಾಳ್ಯ ಗ್ರಾಮಗಳನ್ನೊಳಗೊಂಡಂತೆ ಹೊಡಾಘಟ್ಯ ಗ್ರಾಮವನ್ನು ಕೇಂದ್ರ ಸ್ಥಳವಾಗಿರಿಸಿಕೊಂಡು ಹಾಲು ಉತ್ಪದಾಕರ ಸಹಕಾರಿ ಸಂಘ ಸ್ಥಾಪನೆ ಮಾಡಲು ಪ್ರಾಥಮಿಕ ಸರ್ವೆ ನಡೆಸಲಾಗಿದೆ. ಗ್ರಾಮಸ್ಥರು ಸಭೆಗೆ ಹಾಜರಾಗಿ ಸಂಘ ಸ್ಥಾಪನೆ ಕುರಿತು ಸೂಕ್ತ ಸಲಹೆಗಳನ್ನು ನೀಡಬೇಕೆಂದು ಕುಣಿಗಲ್ ತಾಲ್ಲೂಕು ಸಹಕಾರ ಅಭಿವೃದ್ಧಿ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q
ತುಮಕೂರು: ತಾಲೂಕು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯು ಮೆಟ್ರಿಕ್ ನಂತರದ ಪಿ.ಯು.ಸಿ. ಮತ್ತು ಸಮಾನಾಂತರ, ಸಾಮಾನ್ಯ ಪದವಿ ಮತ್ತು ಸಂಯೋಜಿತ ಉಭಯ ಪದವಿ ಕೋರ್ಸುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಹಿಂದುಳಿದ ವರ್ಗದ ವಿದ್ಯಾರ್ಥಿಗಳು ಹಾಗೂ ಪ್ರವರ್ಗ–1ರ ಅಲೆಮಾರಿ/ಅರೆ ಅಲೆಮಾರಿ ವಿದ್ಯಾರ್ಥಿಗಳಿಗೆ ವಿದ್ಯಾಸಿರಿ (ಊಟ ಮತ್ತು ವಸತಿ ಸಹಾಯ ಯೋಜನೆ), ವಿದ್ಯಾರ್ಥಿವೇತನ ಹಾಗೂ ಶುಲ್ಕ ಮರುಪಾವತಿ ಸೌಲಭ್ಯ ನೀಡಲು ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸುವ ಅವಧಿಯನ್ನು ಅಕ್ಟೋಬರ್ 15ರವರೆಗೆ ವಿಸ್ತರಿಸಲಾಗಿದೆ. ಆಸಕ್ತ ವಿದ್ಯಾರ್ಥಿಗಳು ಜಾಲತಾಣ https://ssp.postmatric.karnataka.gov.in ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ತಾಲ್ಲೂಕು ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ಕಚೇರಿಯನ್ನು ಸಂಪರ್ಕಿಸಬೇಕೆಂದು ತಾಲ್ಲೂಕು ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q
ತುಮಕೂರು: ಜಿಲ್ಲಾ ಸಮಾಜ ಕಲ್ಯಾಣ ಇಲಾಖೆಯು ಹಿರಿಯ ವಕೀಲರ ಬಳಿ ವೃತ್ತಿ ತರಬೇತಿ ಪಡೆಯುವ ಅವಧಿಯಲ್ಲಿ ಶಿಷ್ಯವೇತನ ನೀಡಲು ಕಾನೂನು ಪದವಿ ಉತ್ತೀರ್ಣರಾದ ಅರ್ಹ ಪರಿಶಿಷ್ಟ ಜಾತಿ/ವರ್ಗದವರಿಂದ ಆನ್ ಲೈನ್ ಅರ್ಜಿ ಆಹ್ವಾನಿಸಿದೆ. ಆಸಕ್ತರು ಇಲಾಖಾ ವೆಬ್ ಸೈಟ್ www.sw.kar.nic.in ನಲ್ಲಿ ಸೆಪ್ಟೆಂಬರ್ 30ರೊಳಗೆ ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸುವವರು 40 ವರ್ಷ ವಯೋಮಿತಿಯೊಳಗಿನವರಾಗಿದ್ದು, ರಾಜ್ಯ ಬಾರ್ ಕೌನ್ಸಿಲ್ನಲ್ಲಿ ತಮ್ಮ ಹೆಸರನ್ನು ನೋಂದಾಯಿಸಿರಬೇಕು. ಅಭ್ಯರ್ಥಿಯು 2 ವರ್ಷದೊಳಗಿನ ಅವಧಿಯಲ್ಲಿ ಕಾನೂನು ಪದವಿ ಪಡೆದಿರಬೇಕು ಹಾಗೂ ಅಭ್ಯರ್ಥಿಗಳ ಕುಟುಂಬದ ವಾರ್ಷಿಕ ಆದಾಯ 2.50 ಲಕ್ಷ ರೂ. ಮಿತಿಯೊಳಗಿರಬೇಕು. ತರಬೇತಿಯು 2 ವರ್ಷಗಳ ಅವಧಿಯದ್ದಾಗಿರುತ್ತದೆ. ಒಮ್ಮೆ ತರಬೇತಿಗೆ ಆಯ್ಕೆಯಾಗಿ ತರಬೇತಿ ಪಡೆಯುತ್ತಿರುವ ಅಭ್ಯರ್ಥಿಗಳು ಮಧ್ಯೆ ತರಬೇತಿಯನ್ನು ಬಿಡಲು ಅವಕಾಶವಿರುವುದಿಲ್ಲ. ತರಬೇತಿಗೆ ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಮಾಹೆಯಾನ 10,000 ರೂ.ಗಳ ಶಿಷ್ಯವೇತನ ನೀಡಲಾಗುವುದು. ಶಿಷ್ಯವೇತನವನ್ನು ಹಾಜರಾತಿ ಮತ್ತು ದಿನಚರಿ ಆಧಾರದ ಮೇಲೆ ಪಾವತಿಸಲಾಗುವುದು. ಅಭ್ಯರ್ಥಿಗಳು ರಾಜ್ಯ ಮತ್ತು ಕೇಂದ್ರ ಸರ್ಕಾರದ ಉದ್ಯೋಗಕ್ಕೆ ಆಯ್ಕೆಯಾದಲ್ಲಿ ತರಬೇತಿ ಬಿಡಲು ನಿಯಮಗಳಲ್ಲಿ…
ಹೈದರಾಬಾದ್: ಜೀಸಸ್ ಬಗ್ಗೆ ಮಾತನಾಡಬಹುದು, ಪ್ರವಾದಿ ಬಗ್ಗೆ ಮಾತನಾಡಬಹುದು ಆದರೆ ಸನಾತನ ಧರ್ಮದ ಬಗ್ಗೆ ಮಾತನಾಡಬಾರದೇ ಎಂದು ನಟ ಪ್ರಕಾಶ್ ರಾಜ್ ವಿರುದ್ಧ ಆಂಧ್ರ ಡಿಸಿಎಂ, ನಟ ಪವನ್ ಕಲ್ಯಾಣ್ ವಾಗ್ದಾಳಿ ನಡೆಸಿದ್ದಾರೆ. ತಿರುಪತಿ ಲಡ್ಡುಗೆ ಜಗನ್ ರೆಡ್ಡಿ ಸಿಎಂ ಆಗಿದ್ದಾಗ ಪ್ರಾಣಿಗಳ ಕೊಬ್ಬು ಬಳಕೆ ಮಾಡಲಾಗುತ್ತಿತ್ತು ಎಂಬ ವಿಚಾರ ಭಾರೀ ವಿವಾದಕ್ಕೆ ಕಾರಣವಾಗಿತ್ತು. ಈ ಸಂಬಂಧ ಆಂಧ್ರ ಡಿಸಿಎಂ ಮತ್ತು ನಟ ಪವನ್ ಕಲ್ಯಾಣ್ ದೇಶದಲ್ಲಿ ಸನಾತನ ಧರ್ಮ ಟ್ರಸ್ಟ್ ನಿರ್ಮಾಣ ಮಾಡುವ ಅಗತ್ಯವಿದೆ ಎಂದಿದ್ದರು. ಈ ಹೇಳಿಕೆಯನ್ನು ಪ್ರಕಾಶ್ ರಾಜ್ ಟೀಕಿಸಿದ್ದರು. ಪವನ್ ನೀವು ನಿಮ್ಮ ರಾಜ್ಯದ ಬಗ್ಗೆ ಮಾತ್ರ ಗಮನ ಹರಿಸಿ. ಬೇಡದ ವಿಚಾರವೆಲ್ಲಾ ಯಾಕೆ ಎಂಬರ್ಥದಲ್ಲಿ ಪ್ರಕಾಶ್ ರಾಜ್ ಪವನ್ ಕಲ್ಯಾಣ್ ವಿರುದ್ಧ ಹರಿಹಾಯ್ದಿದ್ದರು. ಈ ಹೇಳಿಕೆ ವಿರುದ್ಧ ಆಕ್ರೋಶ ವ್ಯಕ್ತಪಡಿಸಿರುವ ಪವನ್ ಕಲ್ಯಾಣ್, ಜೀಸಸ್ ಬಗ್ಗೆ ಮಾತನಾಡಬಹುದು, ಪ್ರವಾದಿ ಬಗ್ಗೆ ಮಾತನಾಡಬಹುದು ಆದರೆ ಸನಾತನ ಧರ್ಮದ ಬಗ್ಗೆ ಮಾತನಾಡಬಾರದೇ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ನಮ್ಮತುಮಕೂರಿನ…
ಬೆಂಗಳೂರು: ರೇಣುಕಾಸ್ವಾಮಿ ಹತ್ಯೆ ಕೇಸ್ ಗೆ ಸಂಬಂಧಿಸಿದಂತೆ 17 ಆರೋಪಿಗಳ ಪೈಕಿ ಮೂವರಿಗೆ ಜಾಮೀನು ಮಂಜೂರಾಗಿದೆ. ಹೀಗಾಗಿ ನಟ ದರ್ಶನ್ ಗೆ ಕೂಡ ಬೇಲ್ ಸಿಗಬಹುದು ಎಂದು ದರ್ಶನ್ ಫ್ಯಾನ್ಸ್ ಗೆ ಭರವಸೆ ಮೂಡಿದೆ. ಪ್ರಕರಣದ ಎ15, ಎ16 ಮತ್ತು ಎ17 ಆರೋಪಿಗಳಿಗೆ ಜಾಮೀನು ನೀಡಲಾಗಿದೆ. ಎ15 ಕಾರ್ತಿಕ್, ಎ17 ನಿಖಿಲ್ ನಾಯಕ್ ಮತ್ತು ಎ16 ಕೇಶವಮೂರ್ತಿಗೆ ಜಾಮೀನು ಮಂಜೂರಾಗಿದೆ ಅಂತ ತಿಳಿದು ಬಂದಿದೆ. ಈ ಮೂವರು ಪ್ರಕರಣದಲ್ಲಿ ನೇರವಾಗಿ ಭಾಗಿಯಾಗಿಲ್ಲ. ಅಲ್ಲದೇ ಇವರು ಸ್ವತಃ ಪೊಲೀಸ್ ಠಾಣೆಗೆ ಹೋಗಿ ಸರೆಂಡರ್ ಆಗಲು ಮುಂದಾಗಿದ್ದರು. ಹಣ ನೀಡಿ ಇವರನ್ನು ಸರೆಂಡರ್ ಮಾಡಿಸಲು ಯೋಜನೆ ಹಾಕಲಾಗಿತ್ತಂತೆ. ಇವರ ಮೇಲಿರುವ ಆರೋಪ ಸಾಕ್ಷ್ಯ ನಾಶ. ಹಾಗಾಗಿ ಇದು ಜಾಮೀನು ರಹಿತ ಪ್ರಕರಣ ಅಲ್ವಂತೆ. ಹೀಗಾಗಿ ಮೂವರು ಆರೋಪಿಗಳಿಗೆ ಜಾಮೀನು ನೀಡಲಾಗಿದೆ ಅಂತ ಹೇಳಲಾಗಿದೆ. ಇನ್ನೂ ನಟ ದರ್ಶನ್, ಪವಿತ್ರಾ ಗೌಡ ಕೂಡ ಜಾಮೀನಿಗೆ ಅರ್ಜಿ ಸಲ್ಲಿಸಿದ್ದಾರೆ. ಕೆಲವೇ ದಿನಗಳಲ್ಲಿ ಈ ಅರ್ಜಿಗಳನ್ನು ಕೋರ್ಟ್ ವಿಚಾರಣೆ…
ತುಮಕೂರು: ವಿದ್ಯಾರ್ಥಿಗಳಿಗೆ ಉದ್ಯೋಗ ಆಯ್ಕೆಯ ಕುರಿತು ಸ್ಪಷ್ಟ ಚಿತ್ರಣವಿರಬೇಕು. ಉದ್ಯೋಗ ಸಂಸ್ಥೆಗಳು ಬಯಸುವಂತಹ ಕೌಶಲ್ಯಗಳಲ್ಲಿ ನೈಪುಣ್ಯತೆ ಹೊಂದಿರಬೇಕು ಎಂದು ತುಮಕೂರು ವಿವಿ ಕುಲಸಚಿವೆ ನಾಹಿದಾ ಜಮ್ ಜಮ್ ಹೇಳಿದರು. ತುಮಕೂರು ವಿವಿಯು ಸಮರ್ಥನಂ ಅಂಗವಿಕಲರ ಸಂಸ್ಥೆ (ರಿ.)ಸಹಯೋಗದಲ್ಲಿ ಮಂಗಳವಾರ ಆಯೋಜಿಸಿದ್ದ ಉದ್ಯೋಗ ಮೇಳವನ್ನುಉದ್ಘಾಟಿಸಿ ಅವರು ಮಾತನಾಡಿದರು. ಸಂದರ್ಶನಕ್ಕೆ ತೆರಳುವ ಮುನ್ನ ಸಂಸ್ಥೆಯ ಕುರಿತು ಸಾಮಾನ್ಯ ಜ್ಞಾನವಿರಬೇಕು. ಸಂಸ್ಥೆಗಳಿಗೆ ಅನುಗುಣವಾಗಿ ಬಯೋಡೇಟಾ ಸಿದ್ಧಪಡಿಸಿಕೊಳ್ಳಬೇಕು. ಎಲ್ಲರಿಗೂ ಒಂದೇ ತೆರನಾದ ಬಯೋಡೇಟಾ ಕೊಡಬಾರದು. ಉದ್ಯೋಗಾನುಭವ ಪಡೆಯುವ ಮನಸ್ಸಿನಿಂದ ಸಂದರ್ಶನಗಳಿಗೆ ಹಾಜರಾಗಿ ಉದ್ಯೋಗ ಪಡೆದುಕೊಳ್ಳಿ ಎಂದರು. ಸಮರ್ಥನಂ ಅಂಗವಿಕಲರ ಸಂಸ್ಥೆ (ರಿ.) ಮುಖ್ಯಉದ್ಯೋಗ ನಿಯೋಜಕ ಸತೀಶ್ ಕೆ. ಮಾತನಾಡಿ, ದೇಶದ ಅಭಿವೃದ್ಧಿಗೆ ಗುಣಮಟ್ಟದ ಪದವೀಧರರ ಅಗತ್ಯವಿದೆ. ಮಹಿಳಾ ಶಿಕ್ಷಣಕ್ಕೆ ಒತ್ತುಕೊಟ್ಟು, ಮಹಿಳೆಯರನ್ನು ಮುಖ್ಯವಾಹಿನಿಗೆ ತರುವ ಸಲುವಾಗಿ ಆರಂಭವಾದ ಸಂಸ್ಥೆ ಇದು ಎಂದು ತಿಳಿಸಿದರು. ಉದ್ಯೋಗ ಮೇಳದಲ್ಲಿ 17 ಪ್ರತಿಷ್ಠಿತಕಂಪನಿಗಳು ಭಾಗಿಯಾಗಿದ್ದವು. 500ಕ್ಕೂ ಹೆಚ್ಚು ಪದವೀಧರರು ನೋಂದಾಯಿಸಿಕೊಂಡಿದ್ದರು. ಮೊದಲನೆ ಹಂತದ ಸಂದರ್ಶನಕ್ಕೆ 400 ಮಂದಿ ಹಾಜರಿದ್ದರು. ಇದರಲ್ಲಿ, 250…