Subscribe to Updates
Get the latest creative news from FooBar about art, design and business.
- ಕರ್ನಾಟಕದ 25ನೇ ಮುಖ್ಯಮಂತ್ರಿಯಾಗಿ ಡಿ.ಕೆ.ಶಿವಕುಮಾರ್ ಪ್ರಮಾಣವಚನ ಸ್ವೀಕಾರ!
- ಸಾದರ ಸಮುದಾಯ ಭವನದಲ್ಲಿ ಸಪ್ತಗಿರಿ ಆಸ್ಪತ್ರೆ ವತಿಯಿಂದ ಬೃಹತ್ ಆರೋಗ್ಯ ತಪಾಸಣೆ ಮತ್ತು ಶಸ್ತ್ರ ಚಿಕಿತ್ಸಾ ಶಿಬಿರ
- ಖಾಸಗಿ ಶಾಲೆಗಳ ಮಾದರಿಯಲ್ಲೇ, ಸರ್ಕಾರಿ ಶಾಲೆಗಳ ರೂಪಾಂತರ: ಡಿ.ಕೆ.ಶಿವಕುಮಾರ್
- ತುಮಕೂರು ವಿವಿ 19ನೇ ಘಟಿಕೋತ್ಸವ: 90 ವಿದ್ಯಾರ್ಥಿಗಳಿಗೆ 117 ಚಿನ್ನದ ಪದಕ
- ಶಾಲೆಗಳ ಪುನರಾರಂಭ: ದಾಖಲಾತಿ ಆಂದೋಲನಕ್ಕೆ ಡಿ.ಸಿ. ಚಾಲನೆ
- ಸಚಿವ ಸ್ಥಾನದ ಆಸೆ ನನಗೂ ಇದೆ ಕೊಟ್ಟರೆ ಪ್ರಾಮಾಣಿಕವಾಗಿ ಕೆಲಸ ನಿರ್ವಹಿಸುವೆ: ಹೆಚ್.ವಿ.ವೆಂಕಟೇಶ್
- ನವಿಲೆ ಭಾಗಕ್ಕೆ ಹೇಮಾವತಿ ನೀರನ್ನು ಹರಿಸಲಾಗುವುದು ರೈತರು ಆತಂಕಪಡುವ ಅಗತ್ಯವಿಲ್ಲ: ಶಾಸಕ ಸಿ.ಬಿ.ಸುರೇಶ್ ಬಾಬು
- ‘ಗರ್ಭಿಣಿನೂ ಇಲ್ಲ, ಮಹಿಳೆಯೂ ಇಲ್ಲ… ಕಾರಿನಲ್ಲಿ ಒಬ್ಬರೇ ಇದ್ದಿದ್ದು!’: ಝೀರೋ ಟ್ರಾಫಿಕ್ ಪ್ರತಿಭಟನೆಯ ಅಸಲೀಯತ್ತು ಬಿಚ್ಚಿಟ್ಟ ಬೆಂಗಳೂರು ಪೊಲೀಸರು
Author: admin
ತುಮಕೂರು: ಮಹಿಳೆಯರು ಸ್ವಯಂ ಉದ್ಯೋಗ ಕೈಗೊಳ್ಳಲು ಎಸ್.ಬಿ.ಐ. ತುಮಕೂರು ಜಿಲ್ಲೆಯಲ್ಲಿ ಸುಮಾರು 4,500 ಕೋಟಿ ಸಾಲವನ್ನು ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ.ಟ್ರಸ್ಟ್ ಮೂಲಕ ನೀಡಿದ್ದೇವೆ. ಕೇವಲ ಮಹಿಳೆಯರೇ ಇರುವ ಈ ಸಂಘದಲ್ಲಿ ಆರ್ಥಿಕವಾಗಿ ಹಿಂದುಳಿದ ಮಹಿಳೆಯರಿಗೆ ಧರ್ಮಸ್ಥಳ ಸಂಘವು ಆಯ್ಕೆ ಮಾಡಿ 1 ಲಕ್ಷದಿಂದ 5 ಲಕ್ಷದ ವರೆಗೆ ಸಾಲ ನೀಡುತ್ತಿದೆ. ಈ ಸಾಲಕ್ಕೆ ಧರ್ಮಸ್ಥಳದ ಡಾ.ಡಿ.ವೀರೇಂದ್ರ ಹೆಗ್ಗಡೆರವರು ಜಾಮೀನು ನೀಡಿದ್ದಾರೆ ಎಂದು ಎಸ್.ಬಿ.ಐ. ಬ್ಯಾಂಕಿನ ಗ್ರಾಮೀಣ ಸ್ವಯಂ ಉದ್ಯೋಗ ತರಬೇತಿ ಕೇಂದ್ರದ ನಿರ್ದೇಶಕ ಕೆ.ಎನ್.ವಾದಿರಾಜ ರವರು ಹೇಳಿದರು. ನಗರದ ಹನುಮಂತಪುರದ ಶ್ರೀಕೊಲ್ಲಾಪುರದಮ್ಮನ ಸಮುದಾಯ ಭವನದಲ್ಲಿ ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ.ಟ್ರಸ್ಟ್ ವತಿಯಿಂದ ಹಮ್ಮಿಕೊಂಡಿದ್ದ ಗ್ರಾಮಾಂತರ ತಾಲ್ಲೂಕು ಮಟ್ಟದ ಒಕ್ಕೂಟ ಪದಾಧಿಕಾರಿಗಳ ಸಮಾವೇಶವನ್ನು ಉದ್ಘಾಟಿಸಿ ಮಾತನಾಡಿದರು. ಡಾ.ವೀರೇಂದ್ರ ಹೆಗ್ಗಡೆರವರ ಕನಸು ಕರ್ನಾಟಕದಲ್ಲಿ ಮಹಿಳೆಯರಿಗೆ ಆರ್ಥಿಕ ಚೈತನ್ಯವನ್ನು ತುಂಬಿ ಸ್ವಯಂ ಉದ್ಯೋಗವನ್ನು ಹಮ್ಮಿಕೊಂಡು ಅವರು ಆರ್ಥಿಕವಾಗಿ ಸಫಲವಾಗುವುದು. ಈ ನಿಟ್ಟಿನಲ್ಲಿ ಎಸ್.ಬಿ.ಐ. ಬ್ಯಾಂಕ್ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಮೂಲಕ ಮಹಿಳೆಯರಿಗೆ ಸಾವಿರಾರು…
ಕೊರಟಗೆರೆ: ಹಣ ದುರುಪಯೋಗ ಆರೋಪದಲ್ಲಿ ಬೂದಗವಿ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಯನ್ನು ಅಮಾನತುಗೊಳಿಸಿ ಜಿಲ್ಲಾ ಪಂಚಾಯತ್ ಸಿಇಒ ಆದೇಶಿಸಿದ್ದಾರೆ. ಬೂದಗವಿ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ರಘುನಂದನ್ ಅಮಾನತ್ತಾದ ಅಧಿಕಾರಿಯಾಗಿದ್ದಾರೆ. ನರೇಗಾ ಯೋಜನೆಯಡಿ ನಡೆದ ಕಾಮಗಾರಿಯ ಹಣದ ದುರುಪಯೋಗದ ಆರೋಪದ ಮೇಲೆ ಅವರನ್ನು ಅಮಾನತುಗೊಳಿಸಲಾಗಿದೆ. ಚನ್ನರಾಯನದುರ್ಗ ಸರ್ಕಾರಿ ಶಾಲಾ ಆವರಣದಲ್ಲಿ ನರೇಗಾ ಯೋಜನೆಯಡಿಯಲ್ಲಿ ನಡೆದ ಕಾಮಗಾರಿಯ ಹಣ ಫಲಾನುಭಾವಿಗಳಿಗೆ ತಲುಪದೆ, ಗೋಲ್ಮಾಲ್ ಮಾಡಿ, ಕರ್ತವ್ಯ ಲೋಪ ವಹಿಸಿದ್ದರು ಎಂದು ಆರೋಪಿಸಲಾಗಿದೆ. ಈ ಕುರಿತು ಸಮಾಜ ಹೋರಾಟಗಾರ ಹಾಗೂ ಪತ್ರಕರ್ತರಾದ ಜೆಟ್ಟಿ ಅಗ್ರಹಾರ ನಾಗರಾಜು ಅವರು ಆಗಸ್ಟ್ 19ರಂದು ವಾಟ್ಸಾಪ್ ಮೂಲಕ ಈ ವಿಷಯವನ್ನು ಜಿಲ್ಲಾ ಪಂಚಾಯತ್ ಸಿಇಒ ಅವರ ಗಮನಕ್ಕೆ ತಂದಿದ್ದರು. ನಂತರ ಈ ವಿಚಾರವು ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ಹಬ್ಬಿದ ಬೆನ್ನಲ್ಲೇ, ಜಿಲ್ಲಾ ಪಂಚಾಯತ್ ಸಿಇಒ ಅವರು ಈ ವಿಷಯವನ್ನು ಗಂಭೀರವಾಗಿ ಪರಿಗಣಿಸಿ, ಶಿಸ್ತು ಕ್ರಮ ಕೈಗೊಂಡಿದ್ದಾರೆ. ಜಿಲ್ಲಾದ್ಯಂತ ಈ ರೀತಿಯ ಘಟನೆಗಳಿಗೆ ಕಠಿಣ ಕ್ರಮಗಳನ್ನು ಕೈಗೊಳ್ಳಬೇಕೆಂದು ನಾಗರಿಕರು ಒತ್ತಾಯಿಸಿದ್ದಾರೆ.…
ಬೆಂಗಳೂರು: ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯಪಾಲರ ಕ್ರಮ ಪ್ರಶ್ನಿಸಿ ಸಿಎಂ ಸಿದ್ದರಾಮಯ್ಯ ಹೈಕೋರ್ಟ್ ಗೆ ಸಲ್ಲಿಸಿದ್ದ ಮೇಲ್ಮನವಿ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ. ಆ ಮೂಲಕ ರಾಜ್ಯಪಾಲರ ಕ್ರಮ ಸರಿಯಾಗಿದೆ ಎಂದು ಸೂಚಿಸಿದೆ. ಸಿಎಂ ಎತ್ತಿದ ಎಲ್ಲಾ ಕಾನೂನಿನ ಅಂಶಗಳನ್ನು ಕೋರ್ಟ್ ತಳ್ಳಿ ಹಾಕಿದೆ. ಸಿಎಂ ಸಿದ್ದರಾಮಯ್ಯ ಕುಟುಂಬಸ್ಥರು ಪಾಲುದಾರರಾಗಿದ್ದಾರೆ. ಹೀಗಾಗಿ ರಾಜ್ಯಪಾಲರ ಕ್ರಮ ಸರಿಯಾಗಿದೆ ಎಂದು ಕೋರ್ಟ್ ತೀರ್ಪು ನೀಡಿದೆ. ಈ ನಡುವೆ ಸಿಎಂ ಪರ ವಕೀಲರು ಹೈಕೋರ್ಟ್ ವಿಭಾಗೀಯ ಪೀಠಕ್ಕೆ ಮೇಲ್ಮನವಿ ಸಲ್ಲಿಸುವ ಸಾಧ್ಯತೆಯಿದೆ. ಇತ್ತ ದೂರುದಾರರಾದ ಸ್ನೇಹಮಯಿ ಕೃಷ್ಣ ಮತ್ತು ಅಬ್ರಹಾಂ ಕೂಡಾ ಜನಪ್ರತಿನಿಧಿಗಳ ಕೋರ್ಟ್ ಗೆ ದೂರು ನೀಡುವ ಸಾಧ್ಯತೆಯಿದೆ ಎಂದು ತಿಳಿದು ಬಂದಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296
ಶ್ರೀ ರಾಮಕೃಷ್ಣ ಸೇವಾಶ್ರಮ ಪಾವಗಡ ಹಾಗೂ ಇನ್ಫೋಸಿಸ್ ಫೌಂಡೇಷನ್ ಸಹಕಾರದೊಂದಿಗೆ ಕಳೆದ ಮೂರು ತಿಂಗಳುಗಳಿಂದ ಉತ್ತರ ಕರ್ನಾಟಕ ಹಾಗೂ ಕೇರಳದ ವಯನಾಡು ಪ್ರದೇಶಗಳಲ್ಲಿ ಪ್ರವಾಹ ಪರಿಹಾರ ಯೋಜನೆಯನ್ನು ಸ್ವಾಮಿ ಜಪಾನಂದಜೀ ಮಹಾರಾಜ್ ರವರ ನೇತೃತ್ವದಲ್ಲಿ ಯಶಸ್ವಿಯಾಗಿ ಮುಗಿಸಿದ್ದು, ಇದೀಗ ಆಂಧ್ರಪ್ರದೇಶದ ವಿಜಯವಾಡ ಹಾಗೂ ಸುತ್ತಮುತ್ತಲಿನ ಪ್ರದೇಶಕ್ಕೆ ಪರಿಹಾರ ಕಾರ್ಯ ನೆರವೇರಿಸಲು ಸೆ.23ರಿಂದ 26ರವರೆಗೆ ವಿಜಯವಾಡ ಪ್ರದೇಶದಲ್ಲಿ ಪರಿಹಾರ ಕಾರ್ಯ ನೆರವೇರಿಸಲು ಸ್ವಾಮಿ ವಿವೇಕಾನಂದ ತಂಡದೊಂದಿಗೆ ಜ್ಯ ಸ್ವಾಮಿ ಜಪಾನಂದಜೀ ಮಹಾರಾಜ್ ರವರು ತೆರಳುತ್ತಿದ್ದಾರೆ. ಮೊದಲನೇ ಹಂತದಲ್ಲಿ ಸರಿಸುಮಾರು ಎರಡು ಸಾವಿರ ಸಂತ್ರಸ್ತರಿಗೆ ವಿಜಯವಾಡದ ಅತ್ಯಂತ ದುಃಸ್ಥಿತಿಯಲ್ಲಿರುವ ಹಾಗೂ ಪ್ರವಾಹದಿಂದ ತತ್ತರಿಸಿರುವ ಪ್ರದೇಶಗಳಿಗೆ ಪರಿಹಾರ ನೀಡಲು ಆಂಧ್ರಪ್ರದೇಶದ ಆರೋಗ್ಯ ಹಾಗೂ ವೈದ್ಯಕೀಯ ಶಿಕ್ಷಣ ಸಚಿವರಾದ ಸತ್ಯಕುಮಾರ್ ಯಾದವ್ ಹಾಗೂ ಸ್ಥಳೀಯ ಮುಖಂಡರುಗಳು ಮತ್ತು ರಾಷ್ಟ್ರೀಯ ಸ್ವಯಂಸೇವಕ ಸಂಸ್ಥೆಯ ಕಾರ್ಯಕರ್ತರ ಮನವಿಯ ಮೇರೆಗೆ ಈ ಕಾರ್ಯವನ್ನು ಕೈಗೊಳ್ಳಲಾಗುತ್ತಿದೆ. ಸ್ವಾಮಿ ಜಪಾನಂದಜೀ ಮಹಾರಾಜ್ ರವರ ಕಾರ್ಯವೈಖರಿಯನ್ನು ಅರಿತಿರುವ ಆಂಧ್ರಪ್ರದೇಶ ಸರ್ಕಾರದ ಧುರೀಣರುಗಳಾದ ಮುಖ್ಯಮಂತ್ರಿಗಳು, ನಾ.ರಾ.ಲೋಕೇಶ್, ಘನತೆವೆತ್ತ…
ಪಾವಗಡ: ತಾಲ್ಲೂಕಿನ ವೈ.ಎನ್.ಹೊಸಕೋಟೆ ಗ್ರಾಮದ ಸರ್ಕಾರಿ ಪ್ರೌಢಶಾಲೆಯಲ್ಲಿ 2017 ರಿಂದ 2024 ರ ವರೆಗೆ ಮುಖ್ಯಶಿಕ್ಷಕರಾಗಿ ಕರ್ತವ್ಯ ನಿರ್ವಹಿಸಿ ಇಲಾಖೆಯ ಪರೀಕ್ಷೆ ಬರೆದು ಅಕ್ಷರ ದಾಸೋಹದ ತಾಲ್ಲೂಕು ಸಹಾಯಕ ನಿರ್ದೇಶಕರಾಗಿ ಆಯ್ಕೆಯಾಗಿರುವ ಶಂಕರಪ್ಪ ರವರಿಗೆ ಸೋಮವಾರದಂದು ಶಾಲೆಯ ಸ್ಥಳೀಯ ಮುಖ್ಯ ಶಿಕ್ಷಕರ ವತಿಯಿಂದ ಆತ್ಮೀಯವಾಗಿ ಬೀಳ್ಕೊಡುಗೆ ನೀಡಲಾಯಿತು. ಪ್ರಾಥಮಿಕ ಮತ್ತು ಪ್ರೌಢಶಾಲೆಗಳ ಉತ್ತಮ ಹೊಂದಾಣಿಕೆ ಮತ್ತು ಮಾರ್ಗದರ್ಶನ ನೀಡುತ್ತಿದ್ದರು. ಶೈಕ್ಷಣಿಕ ಅಭಿವೃದ್ಧಿಗೆ ಶಿಕ್ಷಕರಿಗೆ ಮಾರ್ಗದರ್ಶನ ನೀಡುತ್ತಿದ್ದರು. ಸರ್ಕಾರಿ ಪ್ರೌಢಶಾಲೆ ಇವರ ಆಡಳಿತಾವಧಿಯಲ್ಲಿ ಉತ್ತಮ ಪ್ರಗತಿ ಕಂಡಿದೆ. ಶಾಲಾ ಕಾಂಪೌಂಡ್, ಕೊಠಡಿಗಳು ನಿರ್ಮಾಣವಾಗಿವೆ. ಗಿಡಮರಗಳು ನೆಟ್ಟು ಹಸಿರುಗೊಳಿಸಲಾಗಿದೆ. ಶೌಚಾಲಯ, ಕ್ರೀಡಾಂಗಣ ಅಭಿವೃದ್ದಿ ಆಗಿದೆ. ಎಸ್.ಎಸ್.ಎಲ್.ಸಿ. ಪರೀಕ್ಷೆಯಲ್ಲಿ ಶೇ.100 ಫಲಿತಾಂಶ ಸಾಧಿಸಿದೆ. ಇಂತಹ ಶಿಕ್ಷಕರ ಸೇವೆ ಪ್ರತಿ ಶಾಲೆಗೂ ಬೇಕು ಎಂದು ಐ.ಎ.ನಾರಾಯಣಪ್ಪ ತಿಳಿಸಿದರು. ಸ್ಥಳೀಯ ಶಾಲೆಗಳ ಮುಖ್ಯಶಿಕ್ಷಕರು ಮತ್ತು ಸರ್ಕಾರಿ ಪ್ರೌಢಶಾಲೆಯ ಎಲ್ಲಾ ಶಿಕ್ಷಕರು ಶಂಕರಪ್ಪ ರವರನ್ನು ಸನ್ಮಾನಿಸಿ ಬೀಳ್ಕೊಟ್ಟರು. ಇದೇ ಸಂದರ್ಭದಲ್ಲಿ ಪ್ರಭಾರಿ ಮುಖ್ಯಶಿಕ್ಷಕ ಹನುಮಂತರಾಯಪ್ಪ, ಸಿ.ಆರ್.ಪಿ ಬಂಗಾರಲಿಂಗಂ, ರಾಜಬಾಬು, ಚನ್ನಮಲ್ಲಿಕಾರ್ಜುನ,…
ಪಾವಗಡ: ತಾಲೂಕಿನ ಮರಿದಾಸನಹಳ್ಳಿಯ ಸಿಆರ್ ಪಿ ನರೇಂದ್ರ ನಾಯ್ಕ ಅವರು, ಧಾರವಾಡದಲ್ಲಿ ರಾಜ್ಯಮಟ್ಟದ ಉತ್ತಮ ಸಿ ಆರ್ ಪಿ ಶಿಕ್ಷಕ ಸೇವಾ ಪ್ರಶಸ್ತಿಯನ್ನು ಪಡೆದು ಪಾವಗಡ ತಾಲೂಕಿಗೆ ಕೀರ್ತಿಯನ್ನ ತಂದಿದ್ದಾರೆ. ಈ ಪ್ರಶಸ್ತಿಗೆ ಭಾಜನರಾಗಿರುವ ನರೇಂದ್ರ ನಾಯ್ಕ ಎನ್.ರವರನ್ನು ಹೆಲ್ಫ್ ಸೊಸೈಟಿ ಮತ್ತು ಸೇವಾ ಟ್ರಸ್ಟ್ ಪಾವಗಡ ತಾಲೂಕು ಘಟಕ ಅವರ ನಿವಾಸಕ್ಕೆ ಭೇಟಿ ನೀಡಿ ಶಾಲು ಹೊದಿಸಿ, ನೆನಪಿನ ಕಾಣಿಕೆ ನೀಡಿ ಅಭಿನಂದಿಸಿದೆ. ಈ ಸಂದರ್ಭದಲ್ಲಿ ಹೆಲ್ಪ್ ಸೊಸೈಟಿ ಅಧ್ಯಕ್ಷ ಮಾನಂ ಶಶಿಕಿರಣ್, ಆಟೋ ಚಾಲಕರ ಸಂಘದ ಅಧ್ಯಕ್ಷ ಬೇಕರಿ ನಾಗರಾಜ್, ಪದಾಧಿಕಾರಿಗಳಾದ ಅರವಿಂದ್, ನರೇಶ್ ಹಾಗೂ ಶಿಕ್ಷಕರ ಕುಟುಂಬಸ್ಥರು ಹಾಜರಿದ್ದರು. ವರದಿ: ನಂದೀಶ್ ನಾಯ್ಕ, ಪಾವಗಡ ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296
ಬೆಂಗಳೂರು: ರಾತ್ರಿ ಪಾಳಯ ಮಾಡುವ ಮಹಿಳಾ ವೈದ್ಯರ ಜೊತೆ ಒಬ್ಬ ಮಹಿಳಾ ಪ್ಯಾರಾ ಮೆಡಿಕಲ್, ಶುಶ್ರೂಷಕಿ ಅಥವಾ ಡಿ ಗ್ರೂಪ್ ನೌಕರರನ್ನು ನಿಯೋಜನೆಗೊಳಿಸುವುದು ಕಡ್ಡಾಯ ಎಂದು ಕರ್ನಾಟಕ ಸರ್ಕಾರದ ಆರೋಗ್ಯ ಇಲಾಖೆ ಹೊಸ ನಿಯಮಗಳ ಸುತ್ತೋಲೆಯನ್ನು ಹೊರಡಿಸಿದೆ. ಇತ್ತೀಚೆಗೆ ಕೋಲ್ಕತ್ತಾದ ಆರ್ ಜಿ ಕರ್ ಮೆಡಿಕಲ್ ಕಾಲೇಜಿನಲ್ಲಿ ಟ್ರೈನಿ ವೈದ್ಯೆಯ ರೇಪ್ ಆಂಡ್ ಮರ್ಡರ್ ಕೇಸ್ ನಿಂದ ಎಚ್ಚೆತ್ತುಕೊಂಡಿರುವ ಸರ್ಕಾರ ಈ ಹೊಸ ನಿಯಮ ಜಾರಿ ಮಾಡಿದೆ ಎಂದು ಹೇಳಲಾಗಿದೆ. ಕೋಲ್ಕತ್ತಾ ವೈದ್ಯೆಯ ಪ್ರಕರಣದ ಬಳಿಕ ರಾಜ್ಯದಲ್ಲೂ ಟ್ರೈನಿ ವೈದ್ಯೆಯರ ಸಂಕಷ್ಟಗಳ ಬಗ್ಗೆ ಹಲವು ದೂರುಗಳು ಬಂದಿದ್ದವು. ಹೀಗಾಗಿ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ವೈದ್ಯೆಯರಿಗೆ ಹೊಸ ನಿಯಮಗಳನ್ನು ಜಾರಿಗೊಳಿಸುವುದಾಗಿ ಹೇಳಿದ್ದರು. ಅದರಂತೆ ಈಗ ಹೊಸ ನಿಯಮ ಜಾರಿಗೆ ತರಲಾಗಿದೆ. ಕೇವಲ ಸರ್ಕಾರೀ ಆಸ್ಪತ್ರೆಗಳು ಮಾತ್ರವಲ್ಲ, ಖಾಸಗಿ ಆಸ್ಪತ್ರೆ, ಮೆಡಿಕಲ್ ಕಾಲೇಜುಗಳಿಗೂ ಈ ನಿಯಮ ಅನ್ವಯವಾಗಲಿದೆ. ಹೀಗಿದೆ ಹೊಸ ನಿಯಮ: * ಸಾರ್ವಜನಿಕರ, ರೋಗಿಗಳ ಸಂಬಂಧಿಗಳಿಗೆ ಕಡ್ಡಾಯ ಗುರುತಿನ ಚೀಟಿ. * …
ಎ.ಐ.ಕೆ.ಕೆ.ಎಂ.ಎಸ್. ಸಂಘಟಿತ ಕಿಸಾನ್ ಮಹಾ ಪಂಚಾಯತ್ ನ್ನು ಉದ್ದೇಶಿಸಿ ಅಖಿಲ ಭಾರತ ಪ್ರಧಾನ ಕಾರ್ಯದರ್ಶಿಗಳಾದ ಕಾಮ್ರೇಡ್ ಶಂಕರ್ ಘೋಷ್ ಮಾತನಾಡಿದರು. ದೇಶದ 20 ಕ್ಕೂ ಹೆಚ್ಚು ರಾಜ್ಯಗಳಿಂದ ಬಂದ ಸಾವಿರಾರು ರೈತರಿಂದ ನವದೆಹಲಿಯ ತಲಕೋತ್ರ ಸ್ಟೇಡಿಯಂ ತುಂಬಿ ತುಳುಕುತ್ತಿತ್ತು. ರೈತರ ಎಲ್ಲಾ ಬೆಳೆಗಳಿಗೂ ಕನಿಷ್ಠ ಬೆಂಬಲ ಬೆಲೆ ಕೊಡಬೇಕು; ರೈತ ವಿರೋಧಿ ವಿದ್ಯುತ್ ಶಕ್ತಿ ಕಾಯ್ದೆಯನ್ನು ವಾಪಾಸ್ ತೆಗೆದುಕೊಳ್ಳಬೇಕು; ರೈತರ ಸಾಲವನ್ನು ಮನ್ನಾ ಮಾಡಬೇಕು; ಕೃಷಿ ಒಳಸುರಿಗಳಾದ ಬೀಜ, ಗೊಬ್ಬರ, ಕೀಟನಾಶಕಗಳನ್ನು ರಿಯಾಯಿತಿ ದರದಲ್ಲಿ ನೀಡಬೇಕು; ಕೃಷಿ ಕಾರ್ಪೊರೇಟೀಕರಣ ನಿಲ್ಲಿಸಬೇಕು ಹೀಗೆ ಮುಂತಾದ ಹಕ್ಕೊತ್ತಾಯಗಳಿಗಾಗಿ ಈ ಕಿಸಾನ್ ಮಹಾ ಪಂಚಾಯತ್ ಸಂಘಟಿಸಲಾಗಿತ್ತು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296
ತುರುವೇಕೆರೆ: ಆಟೋದಲ್ಲಿ ಅಕ್ರಮವಾಗಿ ಗಾಂಜಾವನ್ನು ಸಾಗಿಸುತ್ತಿದ್ದವರನ್ನು ಪಟ್ಟಣದ ಪ್ರವಾಸಿ ಮಂದಿರ ಬಳಿಯಲ್ಲಿ ಅಬಕಾರಿ ಅಧಿಕಾರಿಗಳು ದಾಳಿ ನಡೆಸಿ ಗಾಂಜಾ ಸೇರಿ ಮೂವರನ್ನು ವಶಕ್ಕೆ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ. ಮೂರು ಚಕ್ರದ ಆಟೋದಲ್ಲಿ ಮೂಲಕ ಒರಿಸ್ಸಾ ಮೂಲದವರು ಎನ್ನಲಾಗಿದ್ದ ಮೂವರು ವ್ಯಕ್ತಿಗಳು ಅಕ್ರಮವಾಗಿ ಗಾಂಜಾವನ್ನು ಸಾಗಿಸುತ್ತಿದ್ದ ಸಂದರ್ಭದಲ್ಲಿ ಖಚಿತ ಮಾಹಿತಿ ಆಧರಿಸಿ ಗಸ್ತುನಲ್ಲಿದ್ದ ಅಬಕಾರಿ ಅಧಿಕಾರಿಗಳು ಆಟೋವನ್ನು ತಡೆದು ಪರಿಶೀಲಿಸಿದ್ದು, ಈ ವೇಳೆ ಚೀಲಗಳಲ್ಲಿ ಗಾಂಜಾ ಇರುವುದು ಕಂಡು ಬಂದಿದೆ. ಅಬಕಾರಿ ಅಧಿಕಾರಿಗಳು ಕೂಡಲೇ ಆಟೋ ಹಾಗೂ ಸಾಗಣೆ ಮಾಡುತ್ತಿದ್ದ ಸುಮಾರು 6 ಕೆ.ಜಿ. 200 ಗ್ರಾಮ್ ಗಾಂಜಾ ವಶಕ್ಕೆ ಪಡೆದಿದ್ದಾರೆ. ಅಲ್ಲದೇ ಒರಿಸ್ಸಾ ಮೂಲದ ಮೂವರು ಆರೋಪಿಗಳನ್ನು ವಶಕ್ಕೆ ಪಡೆದು ಪ್ರಕರಣ ದಾಖಲಿಸಿಕೊಂಡು ಹೆಚ್ಚಿನ ತನಿಖೆ ಮುಂದುವರೆಸಿದ್ದಾರೆ. ನಾಗಮಂಗಲ ತಾಲೂಕಿನ ಬೆಳ್ಳೂರಿನಿಂದ ಆಟೋದಲ್ಲಿ ಪಟ್ಟಣದಲ್ಲಿ ವಿತರಿಸಲು ಗಾಂಜಾ ಸಾಗಿಸಲಾಗುತ್ತಿತ್ತು ಎಂಬ ಮಾಹಿತಿ ತಿಳಿದಿದ್ದು, ಪಟ್ಟಣದಲ್ಲಿಯೂ ಗಾಂಜಾ ಸರಬರಾಜು ನಡೆಯುತ್ತಿತ್ತು ಎಂಬ ಅನುಮಾನ ಹುಟ್ಟಿದೆ. ಅಬಕಾರಿ ಇಲಾಖೆಯವರ ಹೆಚ್ಚಿನ ತನಿಖೆಯಿಂದ ಹೆಚ್ಚಿನ ಮಾಹಿತಿ ತಿಳಿಯಬೇಕಿದೆ.…
ತುಮಕೂರು: ನಗರದ ಬಸ್ ನಿಲ್ದಾಣ ಬಳಿ ಕೆಎಸ್ ಆರ್ಟಿಸಿ ಬಸ್ ಒಂದು ಮಹಿಳೆಗೆ ಡಿಕ್ಕಿ ಹೊಡೆದ ಪರಿಣಾಮ ಮಹಿಳೆ ಗಂಭೀರ ಗಾಯಗೊಂಡಿರುವ ಘಟನೆ ಸೋಮವಾರ ನಡೆದಿದೆ. ರಸ್ತೆ ದಾಟುತ್ತಿದ್ದ ಮಹಿಳೆಗೆ ಏಕಾಏಕಿ ಕೆಎಸ್ ಆರ್ಟಿಸಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಕಾಲು ಸಂಪೂರ್ಣ ಜಜ್ಜಿ ಹೋಗಿದೆ. ತಕ್ಷಣ ಸ್ಥಳದಲ್ಲಿದ್ದ ಸಾರ್ವಜನಿಕರು ಗಾಯಗೊಂಡ ಮಹಿಳೆಯನ್ನು ತುಮಕೂರು ಜಿಲ್ಲಾ ಸರ್ಕಾರಿ ಆಸ್ಪತ್ರೆಗೆ ದಾಖಲು ಮಾಡಿದ್ದಾರೆ. ಈ ಸಂಬಂಧ ತುಮಕೂರು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q