Author: admin

ತುಮಕೂರು: ಜಿಲ್ಲಾಡಳಿತದ ವತಿಯಿಂದ ಅಕ್ಟೋಬರ್ 23ರಂದು ಬೆಳಿಗ್ಗೆ 10:30 ಗಂಟೆಗೆ ನಗರದ ಡಾ.ಗುಬ್ಬಿ ವೀರಣ್ಣ ಕಲಾಕ್ಷೇತ್ರದಲ್ಲಿ “ಕಿತ್ತೂರು ರಾಣಿ ಚೆನ್ನಮ್ಮ ಜಯಂತಿ” ಕಾರ್ಯಕ್ರಮವನ್ನು ಸರಳವಾಗಿ ಆಚರಿಸಲಾಗುವುದು. ಜಿಲ್ಲೆಯ ಸಾಹಿತಿಗಳು, ಕಲಾವಿದರು, ಸ್ವಾತಂತ್ರ್ಯ ಹೋರಾಟಗಾರರು, ಕನ್ನಡ ಪರ ಸಂಘಟನೆಗಳ ಮುಖ್ಯಸ್ಥರು, ಮಹಿಳಾ ಸಂಘಟನೆಗಳು, ಜಿಲ್ಲೆಯ ವಿವಿಧ ಸಮುದಾಯದ ಸಂಘ–ಸಂಸ್ಥೆಗಳ ಮುಖಂಡರು ಹಾಗೂ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕೆಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಈಶ್ವರ್ ಕು. ಮಿರ್ಜಿ ಮನವಿ ಮಾಡಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

Read More

ತುಮಕೂರು: ಪ್ರಜಾ ಪ್ರಭುತ್ವದ ಬಹುದೊಡ್ಡ ಪಿಡುಗಾಗಿರುವ ಭ್ರಷ್ಟಾಚಾರವನ್ನು ಬುಡ ಸಮೇತ ಕಿತ್ತೊಗೆಯಲು ಲೋಕಾಯುಕ್ತ ಸಂಸ್ಥೆ ಸದಾ ಬದ್ಧವಾಗಿದೆ ಎಂದು ಉಪ ಲೋಕಾಯುಕ್ತ ಬಿ.ವೀರಪ್ಪ ಹೇಳಿದರು. ನಗರದ ಪರಿವೀಕ್ಷಣಾ ಮಂದಿರದಲ್ಲಿ ಭಾನುವಾರ ಮಾಧ್ಯಮಗೋಷ್ಠಿ ಉದ್ದೇಶಿಸಿ ಮಾತನಾಡಿದ ಅವರು, ಜಿಲ್ಲೆಯ ಸಾರ್ವಜನಿಕರ ಸಮಸ್ಯೆಗಳನ್ನು ಪರಿಹರಿಸುವ ಸಲುವಾಗಿ 3 ದಿನಗಳ ಕಾಲ ಲೋಕಾಯುಕ್ತ ಕುಂದು–ಕೊರತೆ ಸಭೆ, ಬಾಕಿ ದೂರು ಅರ್ಜಿಗಳ ವಿಲೇವಾರಿ, ಕಾನೂನು ಅರಿವು ಸೇರಿದಂತೆ ಜಿಲ್ಲೆಯ ವಿವಿಧ ಭಾಗಗಳಿಗೆ ಭೇಟಿ ನೀಡಿದ್ದು, ರಾಜ್ಯದಲ್ಲೇ ಅತೀ ಹೆಚ್ಚು ದೂರುಗಳು ಜಿಲ್ಲೆಯಲ್ಲಿ ದಾಖಲಾಗಿವೆ ಎಂದು ತಿಳಿಸಿದರು. ತುಮಕೂರು ನಗರದ ಗುಬ್ಬಿ ವೀರಣ್ಣ ಕಲಾ ಕ್ಷೇತ್ರದಲ್ಲಿ ಅಕ್ಟೋಬರ್ 18ರಂದು ನಡೆದ ಸಾರ್ವಜನಿಕರ ಅಹವಾಲು ಸಭೆಯಲ್ಲಿ ಸಲ್ಲಿಕೆಯಾಗಿದ್ದ 299 ಹೊಸ ದೂರುಗಳಿಗೆ ಸಂಬಂಧಿಸಿದಂತೆ ಸೂಕ್ತ ವಿಚಾರಣೆ ನಡೆಸಿ 80 ಪ್ರಕರಣಗಳನ್ನು ಸ್ಥಳದಲ್ಲಿಯೇ ಪರಿಹರಿಸಲಾಗಿದೆ. ಲೋಕಾಯುಕ್ತ ಸಂಸ್ಥೆಯಲ್ಲಿ ಜಿಲ್ಲೆಗೆ ಸಂಬಂಧಪಟ್ಟ ಬಾಕಿ ಇದ್ದ 183 ಹಳೆ ಪ್ರಕರಣಗಳಿಗೆ ಸಂಬಂಧಿಸಿದಂತೆ ಅಕ್ಟೋಬರ್ 19ರಂದು ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ದೂರುದಾರರು ಮತ್ತು ಪ್ರತಿ ದೂರುದಾರರ…

Read More

ವಿಶೇಷ ವರದಿ : ಮಂಜುಸ್ವಾಮಿ ಎಂ.ಎನ್., ಕೊರಟಗೆರೆ ತುಮಕೂರು : ಗುಬ್ಬಿ ತಾಲೂಕಿನಲ್ಲಿ ಕಳೆದ 40 ವರ್ಷಗಳಿಂದಲೂ ಸಹ ಅಲೆಮಾರಿ ಹಂದಿಜೋಗಿ ಸಮುದಾಯದ ಜನರು ಪಟ್ಟಣದ ಪೊಲೀಸ್ ಠಾಣೆಯ ಹಿಂಭಾಗದ ಗುಡಿಸಲಿನಲ್ಲಿಯೇ ವಾಸವಾಗಿದ್ದರು. ಮಳೆಗಾಲ ಬಂದರೆ ತಗ್ಗು ಪ್ರದರ್ಶನದ ಗುಡಿಸಲಿಗೆ ನೀರು ಬರುತ್ತಿತ್ತು. ಮೂಲಭೂತ ಸೌಕರ್ಯಗಳಿಲ್ಲದೆ ಪ್ರತಿನಿತ್ಯ ತೀವ್ರ ನಿಕೃಷ್ಟ ಸ್ಥಿತಿಯಲ್ಲಿ ಬಿಸಿಲು ಮಳೆ ಎನ್ನದೆ ಜೀವನ ಸಾಗಿಸುತ್ತಿದ್ದರು. ಒಂದೆಡೆ ಪುಟ್ಟ ಮಕ್ಕಳಿಗೆ ವಿದ್ಯಾಭ್ಯಾಸವಿಲ್ಲದೆ ಅನಕ್ಷರಸ್ಥರಾಗಿ ಜೀವನ ಸಾಗಿಸುತ್ತಿದ್ದರು ಸಾಂಕ್ರಾಮಿಕ ರೋಗಗಳಿಂದ ಕೆಲವು ಮಂದಿ ಚಿಕಿತ್ಸೆ ಸಿಗದೇ ಪ್ರಾಣ ಬಿಟ್ಟಿದ್ದರು. ಇದನ್ನೆಲ್ಲಾ ಗಮನಿಸಿದ ನೈಜ್ಯ ಹೋರಾಟಗಾರರ ವೇದಿಕೆ ಬೆಂಗಳೂರು ಮತ್ತು ಕಾಳಜಿ ಫೌಂಡೇಶನ್ ತುಮಕೂರು ಈ ಎರಡು ಸಂಘಟನೆಯ ದಿಟ್ಟ ಹೋರಾಟಗಾರರು ಸ್ಥಳ ಪರಿಶೀಲನೆ ಮಾಡಿ ಸಂಬಂಧಪಟ್ಟ ಅಧಿಕಾರಿಗಳಿಗೆ ಮನವಿ ಸಲ್ಲಿಸಿ ಸಕಲ ಸೌಲಭ್ಯಗಳನ್ನು ಒದಗಿಸಲು ಆಗ್ರಹಿಸಿದ್ದರು. ಕಾಳಜಿ ಫೌಂಡೇಶನ್ ತುಮಕೂರು ಮತ್ತು ನೈಜ್ಯ ಹೋರಾಟಗಾರರ ವೇದಿಕೆಯ ಕಾರ್ಯಕರ್ತರು ಗುಬ್ಬಿ ತಹಶೀಲ್ದಾರ್ ಮತ್ತು ತಾಲ್ಲೂಕು ಪಂಚಾಯಿತಿ ಇ ಓ ಮತ್ತು ಪ.ಪಂ.…

Read More

ಮಂಡ್ಯ: ಕೆರೆಯಲ್ಲಿ ಈಜಾಡಲು ಹೋಗಿದ್ದ ಐವರು ಬಾಲಕರ ಪೈಕಿ ಇಬ್ಬರು ನೀರಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ಮದ್ದೂರು ತಾಲೂಕಿನ ದೇಶಹಳ್ಳಿ ಗ್ರಾಮದಲ್ಲಿ ನಡೆದಿದೆ. ಶಂಕರಪುರ ಗ್ರಾಮದ ರಂಜನ್ ಗೌಡ (14) ಹಾಗೂ ಮುತ್ತುರಾಜು (17) ಮೃತಪಟ್ಟವರಾಗಿದ್ದಾರೆ. ರಜೆ ಇದ್ದ ಕಾರಣ ಸ್ನೇಹಿತರ ಜೊತೆಗೆ ಆಟವಾಡಲು ಹೋಗಿದ್ದ ಬಾಲಕರು ಕೆರೆಯಲ್ಲಿ ಮುಳುಗಿ ಪ್ರಾಣಬಿಟ್ಟಿದ್ದಾರೆ. ರಂಜನ್ ಗೌಡ ಮುರಾರ್ಜಿ ಶಾಲೆಯಲ್ಲಿ 9ನೇ ತರಗತಿ ಓದುತ್ತಿದ್ದು, ಮುತ್ತುರಾಜು ಸೋಮನಹಳ್ಳಿಯ ಐಟಿಐ ಕಾಲೇಜಿನಲ್ಲಿ ಪ್ರಥಮ ವರ್ಷದ ವಿದ್ಯಾರ್ಥಿಯಾಗಿದ್ದ. ಇವರಿಬ್ಬರಿಗೆ ಕೂಡ ಈಜು ಬರುತ್ತಿರಲಿಲ್ಲ ಎಂದು ತಿಳಿದು ಬಂದಿದೆ. ಮಕ್ಕಳು ನೀರಿನ ಆಳ ತಿಳಿಯದೇ ನೀರಿಗಿಳಿದಿದ್ದರು. ಈ ವೇಳೆ ಈ ದುರ್ಘಟನೆ ನಡೆದಿದೆ. ತಕ್ಷಣವೇ ಜೊತೆಗಿದ್ದ ಗೆಳೆಯವರು ಇವರನ್ನು ರಕ್ಷಿಸಲು ಮುಂದಾಗಿದ್ದಾರೆ. ಆದರೆ ಸಾಧ್ಯವಾಗಲಿಲ್ಲ ಎಂದು ತಿಳಿದು ಬಂದಿದೆ. ಸುದ್ದಿ ತಿಳಿದು ಗ್ರಾಮಸ್ಥರು ದೇಶಹಳ್ಳಿ ಕೆರೆ ಬಳಿ ಜಮಾಹಿಸಿ ರಾತ್ರಿ ರಂಜನ್ ಗೌಡ ಮೃತ ದೇಹ ಪತ್ತೆ ಮಾಡಿದ್ದಾರೆ.ಆದರೆ ಸೋಮು ಮೃತದೇಹಕ್ಕಾಗಿ ಶೋಧಕಾರ್ಯ ಮುಂದುವರಿದಿದೆ. ಬೆಳಿಗ್ಗೆ 8.30 ಕ್ಕೆ…

Read More

ಪಾವಗಡ: ತಾಲ್ಲೂಕಿನ ವೈ.ಎನ್.ಹೊಸಕೋಟೆ ಹೋಬಳಿಯ ಯಲ್ಲಪ್ಪನಾಯಕನಹಳ್ಳಿಯಲ್ಲಿ ಭಾನುವಾರದಂದು ವಾಲ್ಮೀಕಿ ಜಯಂತಿಯನ್ನು ಆಚರಿಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಯಲ್ಲಪ್ಪನಾಯಕನ ಹೊಸಕೋಟೆ ಸಂಸ್ಥಾನದ ದೊರೆಗಳಾದ ರಾಜಾ ಜಯಚಂದ್ರ ರಾಜು ಮಾತನಾಡಿ ತಳ ಸಮುದಾಯದಲ್ಲಿ ಶೈಕ್ಷಣಿಕ ಪ್ರಗತಿ ಕಡಿಮೆ ಇರುತ್ತದೆ. ಸಮುದಾಯದ ಅಭಿವೃದ್ಧಿಗೆ ಶಿಕ್ಷಣ ಸಾಧನವಾಗಬೇಕು. ಪ್ರತಿಯೊಂದು ಮನೆಯಲ್ಲೂ ಪೋಷಕರು ಶಿಕ್ಷಣಕ್ಕೆ ಒತ್ತು ನೀಡಬೇಕು ಎಂದರು. ಶಿಕ್ಷಕ ಹನುಮಂತರಾಯಪ್ಪ ಮಾತನಾಡಿ ಮಹರ್ಷಿ ವಾಲ್ಮೀಕಿಯವರು ಆಯುಧವನ್ನು ತೊರೆದು ಲೇಖನಿಯನ್ನು ಹಿಡಿದು ಇಂದು ಜಗತ್ತಿಗೆ ಮೌಲ್ಯಗಳನ್ನು ನೀಡಿ ಸರ್ವಪೂಜ್ಯರಾಗಿದ್ದಾರೆ. ತನ್ನ ರಾಮಾಯಣದ ಕೃತಿಯ ಮೂಲಕ ತಂದೆ, ತಾಯಿ, ಅಕ್ಕ, ಅಣ್ಣ ತಮ್ಮ ಗುರುವು ಇತ್ಯಾದಿ ಬಂಧಗಳ ಮೌಲ್ಯಗಳನ್ನು ಪಾತ್ರಗಳ ಮೂಲಕ ಕಟ್ಟಿಕೊಟ್ಟಿದ್ದಾರೆ. ಆದಾಗಿ ಮಕ್ಕಳು ರಾಮಾಯಣದಲ್ಲಿ ಬರುವ ಪಾತ್ರಗಳನ್ನು ಅರ್ಥ ಮಾಡಿಕೊಂಡು ಅಲ್ಲಿನ ಆದರ್ಶಗಳನ್ನು ಪಾಲಿಸಿ ಉತ್ತಮ ನಾಗರೀಕರಾಗಬೇಕು ಎಂದರು. ಜಯಂತಿಯ ಅಂಗವಾಗಿ ಮಹಿಳೆಯರು ಕಳಶ ಮತ್ತು ಕುಂಭಗಳನ್ನು ಹೊತ್ತು ಪುರಮೆರವಣಿಗೆ ನಡೆಸಿದರು. ಇದೇ ಸಂದರ್ಭದಲ್ಲಿ ಪಿ.ಎನ್.ನಾಗರಾಜು, ರಾಜಾ, ರವಿಶಂಕರರಾಜು, ಮಾಜಿ ಗ್ರಾ.ಪಂ ಸದಸ್ಯ ಮಾರಪ್ಪ, ಎ.ಎಸ್.ಐ ನರಸಿಂಹಮೂರ್ತಿ,…

Read More

ತುಮಕೂರು: ವಿವಿಧ ಸಾಮಾಜಿಕ ಭದ್ರತಾ ಯೋಜನೆಗಳ ಪರಿಣಾಮಕಾರಿ ಅನುಷ್ಠಾನಕ್ಕಾಗಿ ಅಕ್ಟೋಬರ್ 22 ರಂದು ಜಿಲ್ಲೆಯ 11 ಗ್ರಾಮ ಪಂಚಾಯತಿಗಳಲ್ಲಿ ಪಿಂಚಣಿ ಅದಾಲತ್ ಅನ್ನು ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತಿಳಿಸಿದ್ದಾರೆ. ಈ ಅದಾಲತ್‌ನಲ್ಲಿ ಪಿಂಚಣಿಗೆ ಸಂಬಂಧಿಸಿದಂತೆ ಫಲಾನುಭವಿಗಳ ಕುಂದು–ಕೊರತೆಗಳನ್ನು ಆಲಿಸಿ ಪರಿಹರಿಸಲು ಕ್ರಮ ಕೈಗೊಳ್ಳಲಾಗುವುದು. ಅಕ್ಟೋಬರ್ 22ರಂದು ಜಿಲ್ಲೆಯ ಶಿರಾ ತಾಲೂಕಿನ ಕಸಬಾ ಹೋಬಳಿ ಭೂವನಹಳ್ಳಿ; ತುರುವೇಕೆರೆ ತಾಲೂಕಿನ ಮಾಯಸಂದ್ರ ಹೋಬಳಿ ವಡವನಘಟ್ಟ; ತಿಪಟೂರು ತಾಲೂಕಿನ ನೊಣವಿನಕೆರೆ ಹೋಬಳಿ ನಾಗರಘಟ್ಟ; ಮಧುಗಿರಿ ತಾಲ್ಲೂಕಿನ ದೊಡ್ಡೇರಿ ಹೋಬಳಿ ಬಡವನಹಳ್ಳಿ; ತುಮಕೂರು ತಾಲೂಕಿನ ಬೆಳ್ಳಾವಿ ಹೋಬಳಿ ದೊಡ್ಡನಾರವಂಗಲ; ಚಿಕ್ಕನಾಯಕನಹಳ್ಳಿ ತಾಲೂಕಿನ ಹುಳಿಯಾರು ಹೋಬಳಿ ದಸೂಡಿ, ಹಂದನಕೆರೆ ಹೋಬಳಿ ದೊಡ್ಡ ಎಣ್ಣೇಗೆರೆ, ಕಸಬಾ ಹೋಬಳಿ ದುಗುಡೀಹಳ್ಳಿ ಹಾಗೂ ಕಂದಿಕೆರೆ ಹೋಬಳಿ ತೀರ್ಥಪುರ; ಕೊರಟಗೆರೆ ತಾಲೂಕಿನ ಕಸಬಾ ಹೋಬಳಿಯ ತುಂಬಾಡಿ; ಪಾವಗಡ ತಾಲೂಕಿನ ಕಸಬಾ ಹೋಬಳಿ ಕೊಡಮಡಗು ಸೇರಿ 11 ಗ್ರಾಮ ಪಂಚಾಯಿತಿಗಳಲ್ಲಿ ಪಿಂಚಣಿ ಅದಾಲತ್ ನಡೆಯಲಿದ್ದು, ಪಿಂಚಣಿದಾರರು ಅದಾಲತ್‌ನಲ್ಲಿ ಭಾಗವಹಿಸಿ ತಮ್ಮ ಸಮಸ್ಯೆಗಳನ್ನು ಸಲ್ಲಿಸಿ…

Read More

ತುಮಕೂರು: ರಸಗೊಬ್ಬರ ಮಾರಾಟ ಅಂಗಡಿಯೊಂದರ ಮೇಲೆ ಕೃಷಿ ಇಲಾಖೆ ಜಾರಿ ದಳದ ಅಧಿಕಾರಿಗಳು ದಾಳಿ ನಡೆಸಿ ರಸಗೊಬ್ಬರಗಳ ಲೇಬಲ್ ಉಲ್ಲಂಘನೆ ಮಾಡಿ ಮಾರಾಟ ಮಾಡುತ್ತಿದ್ದನ್ನು ಪತ್ತೆಹಚ್ಚಿ ವಶಪಡಿಸಿಕೊಂಡಿದ್ದಾರೆ. ತಾಲ್ಲೂಕಿನ ಹೆಬ್ಬೂರಿನಲ್ಲಿರುವ ಶ್ರೀ ಲಕ್ಷ್ಮೀವೆಂಕಟೇಶ್ವರ ಆಗ್ರೋಟೆಕ್ ರಸಗೊಬ್ಬರ ಮಾರಾಟ ಮಳಿಗೆಯಲ್ಲಿ ಎರಡು ರಸಗೊಬ್ಬರಗಳನ್ನು ರಸಗೊಬ್ಬರ ನಿಯಂತ್ರಣ ಆದೇಶ ನಿಯಮಗಳನ್ನು ಉಲ್ಲಂಘಿಸಿ ಮಾರಾಟ ಮಾಡಲಾಗುತ್ತಿದೆ ಎಂಬ ಖಚಿತ ಮಾಹಿತಿ ಮೇರೆಗೆ ಕೃಷಿ ಇಲಾಖೆ ಜಾರಿ ದಳದ ಸಹಾಯಕ ನರ‍್ದೇಶಕರಾದ ಪುಟ್ಟರಂಗಪ್ಪ ಹಾಗೂ ಅಶ್ವತ್ಥ್ನಾರಾಯಣ ನೇತೃತ್ವದಲ್ಲಿ ಅಧಿಕಾರಿಗಳು ದಾಳಿ ನಡೆಸಿ 20 ಸಾವಿರ ಮೌಲ್ಯದ 100 ಕೆ.ಜಿ. ರಸಗೊಬ್ಬರ ಹಾಗೂ ರಸಗೊಬ್ಬರದ ಗ್ರೇಡ್ ನಮೂದಿಸದೆ ಮತ್ತು ತಯಾರಿಕಾ ಪರವಾನಗಿ ಸಂಖ್ಯೆ ತಪ್ಪಾಗಿ ನಮೂದಿಸಿದ್ದ 7.75 ಲೀಟರ್ ರಸಗೊಬ್ಬರದ 31 ಬಾಟಲ್‌ಗಳನ್ನು ವಶಕ್ಕೆ ತೆಗೆದುಕೊಂಡಿದ್ದಾರೆ. ಈ ಹಿಂದಿನ ಕ್ಷೇತ್ರ ಭೇಟಿಯಲ್ಲಿ ಸದರಿ ಮಳಿಗೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದಾಗ ರಸಗೊಬ್ಬರ ನಿಯಂತ್ರಣ ಆದೇಶ 1995ರ ಉಲ್ಲಂಘನೆ (ಲೇಬಲ್) ಸಂಬಂಧ ಮಾರಾಟ ತಡೆ ಆದೇಶ ಜಾರಿ ಮಾಡಿ ಸಮಜಾಯಿಷಿ…

Read More

ಕೊರಟಗೆರೆ: ತುಮುಲ್ ಕೊರಟಗೆರೆ ತಾಲೂಕು ನಿರ್ದೇಶಕ ಸ್ಥಾನಕ್ಕೆ ಎನ್ ಡಿ ಎ ಪಕ್ಷದ ಅಭ್ಯರ್ಥಿಯಾಗಿ ಸುಂಕದಹಳ್ಳಿ ಸಿದ್ದಗಂಗಯ್ಯ ಅಧಿಕೃತ ಅಭ್ಯರ್ಥಿ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಹನುಮಂತೇಗೌಡ ಘೋಷಣೆ ಮಾಡಿದ್ದಾರೆ. ತುಮಕೂರು ಹಾಲು ಒಕ್ಕೂಟದ ತೆರವಾಗಿರುವ ನಿರ್ದೇಶಕರುಗಳ ಸ್ಥಾನಕ್ಕೆ ನವಂಬರ್ ನಲ್ಲಿ ಚುನಾವಣೆ ಘೋಷಣೆಯಾಗಿದ್ದು, ಕೊರಟಗೆರೆ ತಾಲೂಕಿನ ಮೈತ್ರಿ ಪಕ್ಷದ ಎಲ್ಲಾ ಅಧ್ಯಕ್ಷರು ಮುಖಂಡರುಗಳು ಕಾರ್ಯಕರ್ತರು ಸೇರಿ ಅಂತಿಮ ಅಭ್ಯರ್ಥಿಯಾಗಿ ಸುಂಕದಹಳ್ಳಿ ಸಿದ್ದಗಂಗಯ್ಯ ಅವರನ್ನ ಜೆಡಿಎಸ್ ಬಿಜೆಪಿ ಮೈತ್ರಿ ಅಭ್ಯರ್ಥಿಯಾಗಿ ಘೋಷಣೆ ಮಾಡಲಾಗಿದೆ ಎಂದು ಬಿಜೆಪಿ ಮುಖಂಡ ಅನಿಲ್ ಕುಮಾರ್ ತಿಳಿಸಿದರು. ಇದೇ ವೇಳೆ ಮಾಜಿ ಶಾಸಕ ಸುಧಾಕರ್ ಲಾಲ್ ಮಾತನಾಡಿ, ಲೋಕಸಭಾ ಚುನಾವಣೆಯಲ್ಲಿ ಒಂದಾದ ಜೆಡಿಎಸ್ ಬಿಜೆಪಿ ಮೈತ್ರಿ ಪಕ್ಷಗಳಿಂದ ಎನ್ ಡಿ ಎ ಒಕ್ಕೂಟದಿಂದ ಇದೀಗ ತುಮಕೂರು ಹಾಲು ಒಕ್ಕೂಟದ ನಿರ್ದೇಶಕರ ಸ್ಥಾನಕ್ಕೆ ಚುನಾವಣೆ ಘೋಷಣೆಯಾಗಿದ್ದು ನಮ್ಮ ಕೊರಟಗೆರೆ ತಾಲೂಕು ಅಭ್ಯರ್ಥಿಯಾಗಿ ಎರಡು ಪಕ್ಷದ ಒಮ್ಮತದಿಂದ ಸುಂಕದಹಳ್ಳಿ ಸಿದ್ದಗಂಗಯ್ಯ ಅವರನ್ನ ಚುನಾವಣೆಗೆ ನಿಲ್ಲಿಸಲಾಗಿದ್ದು ಅವರನ್ನ ಬಹುಮತಗಳಿಂದ ಗೆಲ್ಲಿಸುವುದು ನಮ್ಮೆಲ್ಲರ ಕರ್ತವ್ಯ…

Read More

ತುಮಕೂರು:  ಉಪಲೋಕಾಯುಕ್ತರೆದುರೇ ವಿಶೇಷ ಚೇತನ ವೃದ್ದೆಯೊಬ್ಬರು ಭಿಕ್ಷೆ ಬೇಡಿದ ಘಟನೆ ತುಮಕೂರು‌ ಜಿಲ್ಲೆ ಗುಬ್ಬಿ ನಗರದಲ್ಲಿ ನಡೆದಿದೆ. ಇತ್ತೀಚೆಗೆ ತುಮಕೂರು ಜಿಲ್ಲೆ ವೈಭವದ ದಸರಾ ಕಾರ್ಯಕ್ರಮದ ಮೂಲಕ ಇಡೀ ರಾಜ್ಯದ ಗಮನ ಸೆಳೆದಿತ್ತು. ಆದರೆ, ಇನ್ನೊಂದೆಡೆ ಜಿಲ್ಲೆಯಲ್ಲಿ  ನರಕಯಾತನೆ ಅನುಭವಿಸುತ್ತಿರುವ ಜನಸಾಮಾನ್ಯರು ಕನಿಷ್ಠ ಮೂಲಭೂತ ಸೌಕರ್ಯವೂ ಸಿಗದೇ ಒದ್ದಾಡುತ್ತಿರುವುದು ಬೆಳಕಿಗೆ ಬಂದಿದೆ. ಹಂದಿ ಜೋಗಿ ವಾಸಸ್ಥಳದ ಪರಿಶೀಲನೆಗೆ ತೆರಳಿದ್ದ ಉಪಲೋಕಾಯುಕ್ತ ಬಿ.ವೀರಪ್ಪ ಅವರಿಗೆ ಇಲ್ಲಿನ ಕುಟುಂಬಗಳ ನರಕ ಸದೃಶ ಬದುಕಿನ ದರ್ಶನವಾಗಿದೆ. ಇಲ್ಲಿನ ಜನರು ಮೂಲಭೂತ ಸೌಕರ್ಯವಿಲ್ಲದೇ ಸಾಂವಿಧಾನಿಕ ಹಕ್ಕುಗಳಿಂದ ವಂಚಿತರಾಗಿದ್ದಾರೆ. ವೃದ್ಧೆ ಭಿಕ್ಷೆ ಕೇಳಿದಾಗ ಮನಕರಗಿ ಉಪಲೋಕಾಯುಕ್ತ ಬಿ‌.ವಿರಪ್ಪಅವರು ಭಿಕ್ಷೆ ನೀಡಿದ್ದಾರೆ. ಜೊತೆಗೆ ವೃದ್ಧೆಯ ಪೂರ್ವಾಪರ ವಿಚಾರಿಸಿದ್ದಾರೆ ಎಂದು ತಿಳಿದು ಬಂದಿದೆ. ಸಾರ್ವಜನಿಕ ಕುಂದು ಕೊರತೆ ಅಹವಾಲು‌ ಸ್ವೀಕಾರ ಸಭೆಯಲ್ಲಿ ಹಂದಿಜೋಗಿ ಕುಟುಂಬಗಳು ಮಾಡಿದ್ದ ಮನವಿಯ ಮೇರೆಗೆ ಹಾಗೂ ಮಾಧ್ಯಮ ವರದಿಗಳ ಹಿನ್ನೆಲೆ ಉಪಲೋಕಾಯುಕ್ತ ಬಿ.ವೀರಪ್ಪ ಸ್ಥಳಕ್ಕೆ ಭೇಟಿ ನೀಡಿದ್ದರು. ಇದೇ ವೇಳೆ ಕೂಡಲೇ ಮೂಲಭೂತ ಸೌಕರ್ಯ ಒದಗಿಸುವಂತೆ ಅಧಿಕಾರಿಗಳಿಗೆ…

Read More

ತುಮಕೂರು:  ಪೊಲೀಸ್ ಹುತಾತ್ಮ ದಿನಾಚರಣೆ ಅಂಗವಾಗಿ ಇಂದು ತುಮಕೂರಿನಲ್ಲಿ ಜಿಲ್ಲಾ ಪೊಲೀಸ್ ಕಚೇರಿ ಆವರಣದಲ್ಲಿ ಇರುವ ಹುತಾತ್ಮ ಪುತ್ಥಳಿಗೆ ಜಿಲ್ಲಾ ಪ್ರಧಾನ ಮತ್ತು ಸತ್ರ ನ್ಯಾಯಾಧೀಶ ಜಯಂತ್ ಕುಮಾರ್ ಪುಷ್ಪ ನಮನ ಸಲ್ಲಿಸಿದರು. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಶೋಕ್,  ಹೆಚ್ಚುವರಿ  ಪೊಲೀಸ್ ವರಿಷ್ಠಾಧಿಕಾರಿ ಮರಿಯಪ್ಪ ಹಾಜರಿದ್ದರು. ಕಾರ್ಯಕ್ರಮದಲ್ಲಿ ಮಾತನಾಡಿದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಶೋಕ್ ಅವರು, ಭಾರತದಲ್ಲಿ ಕಳೆದ ವರ್ಷ ಕರ್ತವ್ಯದಲ್ಲಿದ್ದ 213 ಮಂದಿ ಪೊಲೀಸರು  ಹುತಾತ್ಮರಾಗಿದ್ದರು, ಅವರಲ್ಲಿ ಕರ್ನಾಟಕದಲ್ಲಿ ಇವರು ಹುತಾತ್ಮರಾಗಿದ್ದರು. ಇವರಲ್ಲಿ ತುಮಕೂರು ಜಿಲ್ಲೆಯ ಕೂಡಿಗೇನಹಳ್ಳಿ ಪೊಲೀಸ್ ಠಾಣೆ ಯ ಪೊಲೀಸ್ ಸಿಬ್ಬಂದಿ ಕರ್ತವ್ಯದಲ್ಲಿದ್ದ ವೇಳೆ  ಮಹೇಶ್ ಜಿ.ವಿ.ಹುತಾತ್ಮರಾಗಿದ್ದರು ಎಂದರು. ಇದೇ ಸಂದರ್ಭದಲ್ಲಿ ಹುತಾತ್ಮರಾಗಿರುವ ಪೊಲೀಸ್ ಸಿಬ್ಬಂದಿ ಮಹೇಶ್ ಅವರ ಪೋಷಕರು  ಹುತಾತ್ಮ ಪುತ್ತಳಿಗೆ ಪುಷ್ಪ ನಮನ ಸಲ್ಲಿಸಿದರು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q

Read More