Subscribe to Updates
Get the latest creative news from FooBar about art, design and business.
- ಕರ್ನಾಟಕದ 25ನೇ ಮುಖ್ಯಮಂತ್ರಿಯಾಗಿ ಡಿ.ಕೆ.ಶಿವಕುಮಾರ್ ಪ್ರಮಾಣವಚನ ಸ್ವೀಕಾರ!
- ಸಾದರ ಸಮುದಾಯ ಭವನದಲ್ಲಿ ಸಪ್ತಗಿರಿ ಆಸ್ಪತ್ರೆ ವತಿಯಿಂದ ಬೃಹತ್ ಆರೋಗ್ಯ ತಪಾಸಣೆ ಮತ್ತು ಶಸ್ತ್ರ ಚಿಕಿತ್ಸಾ ಶಿಬಿರ
- ಖಾಸಗಿ ಶಾಲೆಗಳ ಮಾದರಿಯಲ್ಲೇ, ಸರ್ಕಾರಿ ಶಾಲೆಗಳ ರೂಪಾಂತರ: ಡಿ.ಕೆ.ಶಿವಕುಮಾರ್
- ತುಮಕೂರು ವಿವಿ 19ನೇ ಘಟಿಕೋತ್ಸವ: 90 ವಿದ್ಯಾರ್ಥಿಗಳಿಗೆ 117 ಚಿನ್ನದ ಪದಕ
- ಶಾಲೆಗಳ ಪುನರಾರಂಭ: ದಾಖಲಾತಿ ಆಂದೋಲನಕ್ಕೆ ಡಿ.ಸಿ. ಚಾಲನೆ
- ಸಚಿವ ಸ್ಥಾನದ ಆಸೆ ನನಗೂ ಇದೆ ಕೊಟ್ಟರೆ ಪ್ರಾಮಾಣಿಕವಾಗಿ ಕೆಲಸ ನಿರ್ವಹಿಸುವೆ: ಹೆಚ್.ವಿ.ವೆಂಕಟೇಶ್
- ನವಿಲೆ ಭಾಗಕ್ಕೆ ಹೇಮಾವತಿ ನೀರನ್ನು ಹರಿಸಲಾಗುವುದು ರೈತರು ಆತಂಕಪಡುವ ಅಗತ್ಯವಿಲ್ಲ: ಶಾಸಕ ಸಿ.ಬಿ.ಸುರೇಶ್ ಬಾಬು
- ‘ಗರ್ಭಿಣಿನೂ ಇಲ್ಲ, ಮಹಿಳೆಯೂ ಇಲ್ಲ… ಕಾರಿನಲ್ಲಿ ಒಬ್ಬರೇ ಇದ್ದಿದ್ದು!’: ಝೀರೋ ಟ್ರಾಫಿಕ್ ಪ್ರತಿಭಟನೆಯ ಅಸಲೀಯತ್ತು ಬಿಚ್ಚಿಟ್ಟ ಬೆಂಗಳೂರು ಪೊಲೀಸರು
Author: admin
ಬೆಂಗಳೂರು: ವಯ್ಯಾಲಿಕಾವಲ್ ಬಸಪ್ಪಗಾರ್ಡನ್ ನ ಮಹಾಲಕ್ಷ್ಮಿ ಹತ್ಯೆ ಪ್ರಕರಣದಲ್ಲಿ ಮಹತ್ವದ ಮಾಹಿತಿ ದೊರೆತಿದ್ದು, ಶೀಘ್ರವೇ ಆರೋಪಿಗಳನ್ನ ಬಂಧಿಸಲಾಗುವುದು ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹತ್ಯೆಯಲ್ಲಿ ಒಬ್ಬರಿದ್ದಾರೋ, ಇಬ್ಬರಿದ್ದಾರೋ ಗೊತ್ತಿಲ್ಲ. ಆದರೆ ಆರೋಪಿಗಳನ್ನು ಶೀಘ್ರವಾಗಿ ಬಂಧಿಸಲಿದ್ದೇವೆ ಎಂದು ಅವರು ಹೇಳಿದರು. ಇನ್ನೂ ವೈದ್ಯಕೀಯ ಶಿಕ್ಷಣ ಇಲಾಖೆಯಲ್ಲಿ ಅಕ್ರಮ ನಡೆದಿದೆ ಎಂದು ಬಿಜೆಪಿಯವರು ರಾಜ್ಯಪಾಲರಿಗೆ ದೂರು ನೀಡುವುದನ್ನು ಬೇಡ ಎನ್ನಲಾಗುವುದಿಲ್ಲ. ಆದರೆ ಅವರು ಮಾಡಿರುವ ಆರೋಪದ ಬಗ್ಗೆ ತಮಗೆ ಹೆಚ್ಚಿನ ಮಾಹಿತಿ ಇಲ್ಲ ಎಂದು ಇದೇ ವೇಳೆ ತಿಳಿಸಿದರು. ಯಾದಗಿರಿ ಪಿಎಸ್ ಐ ಪರಶುರಾಮ್ ಅವರ ಕುಟುಂಬಕ್ಕೆ ವಿಮೆ ಆಧರಿಸಿ 25 ಲಕ್ಷ ರೂ.ಗಳ ಪರಿಹಾರ ನೀಡಲು ಕ್ರಮ ಕೈಗೊಳ್ಳಲಾಗುತ್ತಿದೆ. ಅವರ ಪತ್ನಿಗೆ ಪೊಲೀಸ್ ಇಲಾಖೆಯಲ್ಲಿ ಉದ್ಯೋಗ ಕೊಡಿಸುವುದಾಗಿ ಭರವಸೆ ನೀಡಲಾಗಿತ್ತು. ಆದರೆ ತಮಗೆ ಬೇರೆ ಇಲಾಖೆಯಲ್ಲಿ ಕೆಲಸ ಕೊಡಿಸುವಂತೆ ಮನವಿ ಮಾಡಿದ್ದಾರೆ. ಹೀಗಾಗಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ ಅದರ ಕುರಿತು ಪರಿಶೀಲನೆ ನಡೆಸುತ್ತಿದೆ ಎಂದು…
ಗಾಂಧಿನಗರ: 6 ವರ್ಷದ ಲೈಂಗಿಕ ಕಿರುಕುಳ ನೀಡಲು ಯತ್ನಿಸಿದ ಶಿಕ್ಷಕನೊಬ್ಬ ತನ್ನ ಕೃತ್ಯ ವಿಫಲವಾದಾಗ ಆಕ್ರೋಶಗೊಂಡು ಬಾಲಕಿಯನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಗುಜರಾತ್ನ ದಾಹೋದ್ ಜಿಲ್ಲೆಯ ಸಿಂಗ್ವಾಡ್ ಗ್ರಾಮದಲ್ಲಿ ನಡೆದಿದೆ. ಸಿಂಗ್ವಾಡ್ ಗ್ರಾಮದ ಸರ್ಕಾರಿ ಶಾಲೆಯ ಮುಖ್ಯಶಿಕ್ಷಕ ಗೋವಿಂದ್ ನಾಥ್ ಎಂಬಾತ ಈ ದುಷ್ಕೃತ್ಯ ನಡೆಸಿದ್ದಾನೆ. ಅನುಮಾನದ ಮೇರೆಗೆ ಪೊಲೀಸರು ಶಿಕ್ಷಕನನ್ನು ವಶಕ್ಕೆ ಪಡೆದು ವಿಚಾರಿಸಿದ ವೇಳೆ ಆರೋಪಿ ತಾನೇ ಕೃತ್ಯ ಎಸಗಿರುವುದಾಗಿ ಒಪ್ಪಿಕೊಂಡಿದ್ದಾನೆ. ಗೋವಿಂದ್ ನಾಥ್ ಕಾರಿನಲ್ಲಿ ಹೋಗುತ್ತಿದ್ದಾಗ ಬಾಲಕಿ ನಡೆದುಕೊಂಡು ಹೋಗುತ್ತಿದ್ದಳು. ಕಾರು ನಿಲ್ಲಿಸಿ ಡ್ರಾಪ್ ಕೊಡುವುದಾಗಿ ಹೇಳಿದ್ದ ಶಿಕ್ಷಕ ದಾರಿ ಮಧ್ಯೆ ಲೈಂಗಿಕ ಕಿರುಕುಳ ನೀಡಲು ಮುಂದಾದ್ದಾನೆ. ಈ ವೇಳೆ ಬಾಲಕಿ ಪ್ರತಿಭಟಿಸಿದ್ದಾಳೆ. ಕಿರುಚಾಡಲು ಯತ್ನಿಸಿದ್ದಾಳೆ. ಈ ವೇಳೆ ಶಿಕ್ಷಕ ಬಾಲಕಿಯ ಬಾಯಿ ಮೂಗು ಬಲವಾಗಿ ಮುಚ್ಚಿ ಹಿಡಿದುಕೊಂಡಿದ್ದಾನೆ. ಈ ವೇಳೆ ಬಾಲಕಿ ಉಸಿರುಗಟ್ಟಿ ಸಾವನ್ನಪ್ಪಿದ್ದಾಳೆ. ಶಾಲೆ ಮುಗಿಯುವವರೆಗೂ ಬಾಲಕಿಯ ಮೃತದೇಹ ಕಾರಿನಲ್ಲೇ ಇಟ್ಟಿದ್ದ ಶಿಕ್ಷಕ ಬಳಿಕ ಶಾಲಾ ಆವರಣದಲ್ಲಿ ಎಸೆದು ಆಕೆಯ ಚಪ್ಪಲಿ, ಬ್ಯಾಗ್ …
ಹೈದ್ರಾಬಾದ್: ದೇವಸ್ಥಾನಗಳು ಭಕ್ತರಿಂದ ನಡೆಯಬೇಕೇ ಹೊರತು ಸರ್ಕಾರದ ಆಡಳಿತದಿಂದಲ್ಲ. ಎಲ್ಲಿ ಭಕ್ತಿ ಇಲ್ಲವೋ ಅಲ್ಲಿ ಪವಿತ್ರತೆ ಇರುವುದಿಲ್ಲ ಎಂದು ಇಶಾ ಫೌಂಡೇಶನ್ ಸಂಸ್ಥಾಪಕ ಹಾಗೂ ಆಧ್ಯಾತ್ಮಿಕ ಗುರು ಸದ್ಗುರು ಜಗ್ಗಿ ವಾಸುದೇವ್ ಹೇಳಿದ್ದಾರೆ. ತಿರುಪತಿ ಲಡ್ಡುವಿನಲ್ಲಿ ಪ್ರಾಣಿಗಳ ಕೊಬ್ಬಿನಂಶವಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಪ್ರತಿಕ್ರಿಯಿಸಿರುವ ಅವರು, ಭಕ್ತರು ತಿನ್ನುವ ದೇವಸ್ಥಾನದ ಪ್ರಸಾದವು ಅಸಹ್ಯಕರವಾಗಿದೆ. ಅದಕ್ಕಾಗಿಯೇ ದೇವಸ್ಥಾನಗಳು ಭಕ್ತರಿಂದ ನಡೆಯಬೇಕೇ ಹೊರತು ಸರ್ಕಾರದ ಆಡಳಿತದಿಂದಲ್ಲ. ಎಲ್ಲಿ ಭಕ್ತಿ ಇಲ್ಲವೋ ಅಲ್ಲಿ ಪವಿತ್ರತೆ ಇರುವುದಿಲ್ಲ. ಹಿಂದೂ ದೇವಾಲಯಗಳನ್ನು ಹಿಂದೂಗಳು ನಡೆಸ ಬೇಕೆ ಹೊರತು ಸರ್ಕಾರದ ಆಡಳಿತದಿಂದಲ್ಲ ಎಂದು ಅಭಿಪ್ರಾಯಪಟ್ಟಿದ್ದಾರೆ. ತಿರುಮಲ ತಿರುಪತಿ ತಿಮ್ಮಪ್ಪನ ಲಡ್ಡು ತಯಾರಿಸಲು ಬಳಸುವ ತುಪ್ಪದಲ್ಲಿ ಪ್ರಾಣಿಗಳ ಕೊಬ್ಬಿನ ಕುರುಹು ಕಂಡುಬಂದಿದೆ ಎಂಬ ಇತ್ತೀಚಿನ ಲ್ಯಾಬ್ ವರದಿಯು ದೇಶಾದ್ಯಂತ ಸಂಚಲನ ಮೂಡಿಸಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q
ಬೆಳಗಾವಿ: ಎರಡು ಬೈಕ್ ಗಳ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ವೈದ್ಯರೊಬ್ಬರು ಸಾವನ್ನಪ್ಪಿರುವ ಘಟನೆ ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ನಗರಮುನ್ನೋಳಿ ಬಳಿ ನಡೆದಿದೆ. ನಾಗರಮುನ್ನೋಳಿಯ ವೈದ್ಯ ಡಾ.ಸಿದ್ರಾಮ್ ಚೌಗಲಾ (43) ಮೃತಪಟ್ಟವರು ಎಂದು ತಿಳಿದು ಬಂದಿದೆ. ಎರಡು ಬೈಕ್ ಗಳ ನಡುವೆ ಸಂಭವಿಸಿದ ಮುಖಾಮುಖಿ ಡಿಕ್ಕಿಯಲ್ಲಿ ಈ ದುರಂತ ಸಂಭವಿಸಿದೆ. ಘಟನಾ ಸ್ಥಳಕ್ಕೆ ಹುಕ್ಕೇರಿ ಠಾಣೆ ಪೊಲಿಸರು ಭೇಟಿ ನೀಡಿದ್ದಾರೆ. ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಿದ್ದಾರೆ. ಮೃತ ವೈದ್ಯ ಪತ್ನಿ, ಮಗ ಹಾಗೂ ಮಗಳನ್ನು ಅಗಲಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q
ಉಡುಪಿ: ತಿರುಪತಿ ತಿಮ್ಮಪ್ಪನ ಲಡ್ಡು ಪ್ರಸಾದಕ್ಕೆ ತುಪ್ಪದ ಬದಲು ಪ್ರಾಣಿಗಳ ಕೊಬ್ಬು ಬಳಸಿರುವ ಘಟನೆಯ ವಿರುದ್ಧ ಉಡುಪಿಯ ಪೇಜಾವರ ಮಠದ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ವಿಡಿಯೊ ಸಂದೇಶದಲ್ಲಿ ಮಾತನಾಡಿದ ಅವರು, ತಿರುಪತಿ ತಿರುಮಲ ದೇವಸ್ಥಾನದಲ್ಲಿ ಲಡ್ಡು ಪ್ರಸಾದಕ್ಕೆ ಆಕಳ ತುಪ್ಪದ ಬದಲು ಪ್ರಾಣಿಜನ್ಯ ಕೊಬ್ಬಿನ ಅಂಶ ಸೇರಿಸಿರುವ ಕೃತಕ ತುಪ್ಪ ಬಳಸಿರುವುದು ತಿಳಿದು ಖೇದವಾಗಿದೆ ಎಂದು ಹೇಳಿದ್ದಾರೆ. ಇಂತಹ ಕೃತಕ ತುಪ್ಪ ತಯಾರಿಸುವ ಅಡ್ಡೆಗಳನ್ನು ಕಂಡುಹಿಡಿದು, ಇದರಲ್ಲಿ ತೊಡಗಿರುವವರಿಗೆ ಶಿಕ್ಷೆ ನೀಡಬೇಕು ಎಂದು ಅವರು ಸರ್ಕಾರವನ್ನು ಒತ್ತಾಯಿಸಿದ್ದಾರೆ. ಧಾರ್ಮಿಕ ಶ್ರದ್ಧಾಕೇಂದ್ರಗಳನ್ನು ಸರ್ಕಾರದ ಸುಪರ್ದಿಯಿಂದ ಮುಕ್ತವಾಗಿಸಿ ಹಿಂದೂ ಸಂಸ್ಥೆಗಳಿಗೆ ನೀಡಬೇಕು ಎನ್ನುವ ಸುಪ್ರೀಂ ಕೋರ್ಟ್ ತೀರ್ಪು ಸತ್ಯ ಎನ್ನುವುದು ಇಂತಹ ಘಟನೆಗಳಿಂದ ತಿಳಿಯುತ್ತದೆ ಎಂದು ಅವರು ಹೇಳಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q
ಬೆಂಗಳೂರು: ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಪುರಸ್ಕೃತ ಕನ್ನಡದ ಪ್ರಖ್ಯಾತ ಕವಿ ಡಾ.ಮೂಡ್ನಾಕೂಡು ಚಿನ್ನಸ್ವಾಮಿಯವರ 70ನೇ ಜನ್ಮದಿನಾಚರಣೆ ಕನ್ನಡ ಸಾಹಿತ್ಯ ಪರಿಷತ್ತಿನಲ್ಲಿ ವಿಜೃಂಭಣೆಯಿಂದ ನಡೆಯಿತು. ಈ ಸಂದರ್ಭದಲ್ಲಿ “ಧಮ್ಮಯಾನ”, “ಆ ಮಹಾಮುಗುಳ್ನಗೆ”, “ಉರಿವ ಕಿಚ್ಚಿಗೆ ಮೈಯೆಲ್ಲ ಬಾಯಿ” ಎಂಬ ಕೃತಿಗಳನ್ನು ಬಿಡುಗಡೆ ಮಾಡಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಡಾ.ಎಲ್.ಹನುಮಂತಯ್ಯನವರು ವಹಿಸಿ, ಕೃತಿಗಳನ್ನು ಅಗ್ರಹಾರ ಕೃಷ್ಣಮೂರ್ತಿಯವರು ಬಿಡುಗಡೆ ಮಾಡಿದರು. ಪ್ರಮುಖ ಅತಿಥಿಗಳಾಗಿ ಕರ್ನಾಟಕ ಲೇಖಕಿಯರ ಸಂಘದ ಅಧ್ಯಕ್ಷೆ ಡಾ.ಎಚ್.ಎಲ್. ಪುಷ್ಪ, ವಿಮರ್ಶಕರಾದ ರಘುನಾಥ ಚ. ಹ. ಉಪಸ್ಥಿತರಿದ್ದರು. ಅಕ್ಕ ಐಎಎಸ್ ಅಕಾಡೆಮಿಯ ಮುಖ್ಯಸ್ಥ ಡಾ.ಶಿವಕುಮಾರ್ ಈ ಕಾರ್ಯಕ್ರಮವನ್ನು ಆಯೋಜಿಸಿದ್ದು, ಕಿ.ರ.ಪ್ರಕಾಶನದ ಧನಂಜಯ್ ಮತ್ತು ಆಕೃತಿ ಪ್ರಕಾಶನದ ಗುರುಪ್ರಸಾದ್ ಕೂಡ ಭಾಗವಹಿಸಿದ್ದರು. ಡಾ.ಚಿನ್ನಸ್ವಾಮಿಯವರ ದಂಪತಿಗಳನ್ನು ಕಾರ್ಯಕ್ರಮದಲ್ಲಿ ಸನ್ಮಾನಿಸಲಾಗಿದ್ದು, ಇದಕ್ಕೆ ಬಾಲು ಜಂಬೆಯವರ ಜಂಬೆ ವಾದನ, ಸೋಸಲೆಗಂಗಾಧರ ತಂಡದ ಹಾಡುಗಳು ಹಾಗೂ ಅಕ್ಕ ಐಎಎಸ್ ಅಕಾಡೆಮಿಯ ಸಿಬ್ಬಂದಿಗಳಿಂದ ಬಡಿಸಲಾದ ಊಟವು ಮತ್ತಷ್ಟು ಸೊಗಸು ನೀಡಿತು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್…
ಶ್ರೀ ಕ್ಷೇತ್ರ ಕಟೀಲು ದುರ್ಗಾಪರಮೇಶ್ವರೀ ಜ್ಯೋತಿಷ್ಯ ಪೀಠಂ ದೈವಜ್ಞ ಪಂಡಿತ್ ಕೃಷ್ಣ ಭಟ್ ಪ್ರಧಾನ ತಾಂತ್ರಿಕ್ ಹಾಗೂ ಮಾಂತ್ರಿಕರು ಸ್ತ್ರೀ ಪುರುಷ ವಶೀಕರಣ ಸ್ಪೆಷಲಿಸ್ಟ್ ನನಗೆ ಒಂದೇ ಕರೆ ಮಾಡಿದರೆ ನಿಮ್ಮ ಇಷ್ಟಪಟ್ಟವರು ನಿಮ್ಮಂತೆ 9535156490 ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆ ಉತ್ತರಿಸಬಹುದು ಏಷ್ಟೇ ಪೂಜೆ ಪ್ರಯತ್ನ ಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..?ನಿಮ್ಮ ಯಾವುದೇಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ 2 ದಿನಗಳಲ್ಲಿ ಪರಿಹಾರ ಶತಸಿದ್ಧ ಧನವಶ, ಜನವಶ, ಶತ್ರುನಾಶ, ಸ್ತ್ರೀ- ಪುರುಷ ವಶೀಕರಣ, ದಿಗ್ಭಂಧನ, ಸ್ತಂಭನ, ವುಚ್ಛಾಟನೆಯಂತಹ ಸಮಸ್ಯೆಗಳಿಗೆ ವಿಶೇಷ ಪರಿಹಾರ ತಿಳಿಸುತ್ತಾರೆ: 9535156490 Provided by ಪ್ರಸ್ತುತ ಬುಧವು ಸೂರ್ಯನ ಚಿಹ್ನೆಯಾದ ಸಿಂಹ ರಾಶಿಯಲ್ಲಿ ಪ್ರಯಾಣಿಸುತ್ತಿದೆ. ಸೆಪ್ಟೆಂಬರ್ 23 ರಂದು ಬುಧನು ತನ್ನದೇ ಆದ ಕನ್ಯಾರಾಶಿಯನ್ನು ಪ್ರವೇಶಿಸುತ್ತಾನೆ. ಈ ರೀತಿ ಕನ್ಯಾರಾಶಿಗೆ ಬುಧ ಪ್ರವೇಶವಾಗುವುದರಿಂದ ಅದರ ಪರಿಣಾಮ…
2024ರ ಪ್ರಜಾಪ್ರಭುತ್ವ ದಿನಾಚರಣೆಯ ನಿಮಿತ್ತ ಕರ್ನಾಟಕದಲ್ಲಿ 2,500 ಕಿ.ಮೀ ಉದ್ದದ ಮಾನವ ಸರಪಳಿ ರಚಿಸುವ ಮೂಲಕ ವಿಶ್ವದಾಖಲೆ ಬರೆದಿದ್ದು, ಇದು ಪ್ರಜಾಪ್ರಭುತ್ವದ ಮೌಲ್ಯಗಳನ್ನು ಪೋಷಿಸುವ ಒಗ್ಗಟ್ಟಿನ ಸಂಕೇತವಾಗಿದೆ. ಈ ಐತಿಹಾಸಿಕ ಪ್ರಯತ್ನವು ‘ವಿಶ್ವದಾಖಲೆ ಪುಸ್ತಕ’ದಲ್ಲಿ (World Book of Records) ದಾಖಲಾಗಿ, ಪ್ರಜಾಪ್ರಭುತ್ವದ ಪರಿವ್ಯಾಖ್ಯಾನವನ್ನು ಮತ್ತೊಮ್ಮೆ ಪ್ರಬಲಗೊಳಿಸಿದೆ. ಈ ಮಾನವ ಸರಪಳಿಯಲ್ಲಿ ಲಕ್ಷಾಂತರ ಜನರು, ವಿದ್ಯಾರ್ಥಿಗಳು, ನಾಗರಿಕ ಸಂಘಟನೆಗಳು, ಹಾಗೂ ವಿವಿಧ ಇಲಾಖೆಗಳನ್ನು ಒಳಗೊಂಡು, ಪ್ರಜಾಪ್ರಭುತ್ವದ ಪರಿವ್ಯಾಪ್ತಿಯನ್ನು ವ್ಯಕ್ತಪಡಿಸಿದರು. ಈ ಸರಪಳಿ ಕೇವಲ ಭೌತಿಕ ಉದ್ದದ ಸಮಾನಲ್ಲಿ ಮಾತ್ರವಲ್ಲ, ಜನರ ಒಗ್ಗಟ್ಟಿನ, ಸಮಾನತೆ ಮತ್ತು ಸಮಾವೇಶದ ಸಂಕೇತವಾಗಿದೆ. ಈ ಮಾದರಿ ಕಾರ್ಯಕ್ರಮವು ಕೇವಲ ಕರ್ನಾಟಕದಷ್ಟೇ ಅಲ್ಲದೆ, ಇಡೀ ದೇಶಕ್ಕೆ ಪ್ರಜಾಪ್ರಭುತ್ವದ ಶಕ್ತಿಯನ್ನು ಸಾರಿತು. ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಸಚಿವ ಡಾ.ಎಚ್.ಸಿ.ಮಹಾದೇವಪ್ಪ ಅವರು ಈ ಸಾಧನೆಗೆ ಪೂರಕವಾಗಿ ಕರ್ನಾಟಕದ ಜನತೆಗೆ ಹೃತ್ಪೂರ್ವಕ ಧನ್ಯವಾದಗಳನ್ನು ಸಲ್ಲಿಸಿದರು. ಈ ಐತಿಹಾಸಿಕ ಪ್ರಕ್ರಿಯೆ ಕರ್ನಾಟಕದ ಪ್ರಜಾಸತ್ತಾತ್ಮಕ ಸಿದ್ಧಾಂತಗಳನ್ನು ಮತ್ತು ಒಗ್ಗಟ್ಟನ್ನು ಮತ್ತಷ್ಟು ಬಲಪಡಿಸಿದ್ದು, ಇಡೀ ವಿಶ್ವದ ಗಮನವನ್ನು…
ಮೈಸೂರು: ನಾಡಹಬ್ಬ ಮೈಸೂರು ದಸರಾ ಮಹೋತ್ಸವ — 2024ರಲ್ಲಿ ಲಲಿತಕಲೆ ಮತ್ತು ಕರಕುಶಲ ಉಪಸಮಿತಿ ವತಿಯಿಂದ ಚಾಮರಾಜೇಂದ್ರ ಸರ್ಕಾರಿ ದೃಶ್ಯಕಲಾ ಕಾಲೇಜು, ಸಿದ್ಧಾರ್ಥನಗರ, ಮೈಸೂರು ಸಂಸ್ಥೆಯ ಆವರಣದಲ್ಲಿ 04—10–2024 ರಿಂದ 07—10–2024 ರವರೆಗೆ ನಡೆಯುವ ರಾಜ್ಯ ಮಟ್ಟದ ದಸರಾ ಕಲಾ ಪ್ರದರ್ಶನಕ್ಕೆ ಕಲಾಕೃತಿಗಳನ್ನು ಆಹ್ವಾನಿಸಲಾಗಿದೆ. ಚಿತ್ರಕಲೆ, ಶಿಲ್ಪಕಲೆ, ಗ್ರಾಫಿಕ್ಸ್ ಕಲೆ, ಛಾಯಚಿತ್ರ, ಅನ್ವಯ ಕಲೆ ವಿಭಾಗಗಳಲ್ಲಿ ವೃತ್ತಿಪರ ಹಾಗೂ ಹವ್ಯಾಸಿ ವಿಭಾಗಗಳಿರುತ್ತದೆ. ಸಾಂಪ್ರದಾಯಿಕ ಚಿತ್ರಕಲೆ, ಸಾಂಪ್ರದಾಯಿಕ ಶಿಲ್ಪಕಲೆ, ಕರಕುಶಲ ಕಲೆ / ಇನ್ಲೇ ವಿಭಾಗಗಳಲ್ಲಿ ಹವ್ಯಾಸಿ ವಿಭಾಗವಿರುವುದಿಲ್ಲ. ಎಲ್ಲಾ ವಿಭಾಗಗಳಲ್ಲಿ ಅತ್ಯುತ್ತಮ ಮೂರು ಕಲಾಕೃತಿಗಳಿಗೆ ಬಹುಮಾನಗಳನ್ನು ನೀಡಲಾಗುವುದು. ಕಲಾಕೃತಿಗಳನ್ನು 30—09–2024 ರೊಳಗೆ ಬೆಳಗ್ಗೆ 10:30ರಿಂದ ಸಂಜೆ 5:30ರವರೆಗೆ ಚಾಮರಾಜೇಂದ್ರ ಸರ್ಕಾರಿ ದೃಶ್ಯಕಲಾ ಕಾಲೇಜು (ಕಾವಾ) , ಸಿದ್ಧಾರ್ಥನಗರ, ಮೈಸೂರು – 570011, ಸಂಸ್ಥೆಯ ಕಛೇರಿ ಅವಧಿಯಲ್ಲಿ ಸಲ್ಲಿಸುವುದು. ಕಲಾಕೃತಿಗಳನ್ನು ಸಲ್ಲಿಸುವ ಕಲಾವಿದರು ಸಂಪೂರ್ಣ ವಿವರವನ್ನು ಸ್ವಯಂ ದೃಢೀಕರಣದೊಂದಿಗೆ ಉಪಸಮಿತಿಗೆ ತಲುಪಿಸುವುದು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್…
ಕಾರವಾರ: ಡಿಸೆಂಬರ್ 20 ರಿಂದ 22ರ ವರೆಗೆ ಮಂಡ್ಯ ಜಿಲ್ಲೆಯಲ್ಲಿ ನಡೆಯುವ 87 ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಕನ್ನಡ ಜ್ಯೋತಿ ರಥಯಾತ್ರೆಗೆ, ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ತಾಲೂಕಿನ ಭುವನಗಿರಿಯಲ್ಲಿರುವ ರಾಜ್ಯದ ಏಕೈಕ ಕನ್ನಡಾಂಬೆ ಭುವನೇಶ್ವರಿ ದೇವಿಯ ದೇವಸ್ಥಾನದಲ್ಲಿ ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಮಂಕಾಳ ವೈದ್ಯ ಭಾನುವಾರ ವಿದ್ಯುಕ್ತವಾಗಿ ಚಾಲನೆ ನೀಡಿದರು. ಜಿಲ್ಲಾಡಳಿತ, ಕೇಂದ್ರ ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ವತಿಯಿಂದ ಮಂಡ್ಯದಲ್ಲಿ ನಡೆಯುವ 87 ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮೇಳನದ ಅಂಗವಾಗಿ ಕನ್ನಡ ಜ್ಯೋತಿ ರಥಯಾತ್ರೆಗೆ ಚಾಲನೆ ಕಾರ್ಯಕ್ರಮ ನಡೆಯಿತು. ನಂತರ ಮಾತನಾಡಿದ ಸಚಿವರು, ಕದಂಬರ ಆರಾಧ್ಯ ದೇವರಾದ ಭುವನೇಶ್ವರಿ ಪುಣ್ಯ ಕ್ಷೇತ್ರವಾದ ಜಿಲ್ಲೆಯಿಂದ ಪ್ರಾರಂಭವಾಗುವ ಕನ್ನಡ ಜ್ಯೋತಿ ರಥಯಾತ್ರೆ ರಾಜ್ಯದ 31 ಜಿಲ್ಲೆ ಸೇರಿದಂತೆ 6 ಬೇರೆ ಬೇರೆ ರಾಜ್ಯದ ಗಡಿ ಪ್ರದೇಶದಲ್ಲಿ ಸಂಚರಿಸಿ 87 ನೇ…