Subscribe to Updates
Get the latest creative news from FooBar about art, design and business.
- ಕರ್ನಾಟಕದ 25ನೇ ಮುಖ್ಯಮಂತ್ರಿಯಾಗಿ ಡಿ.ಕೆ.ಶಿವಕುಮಾರ್ ಪ್ರಮಾಣವಚನ ಸ್ವೀಕಾರ!
- ಸಾದರ ಸಮುದಾಯ ಭವನದಲ್ಲಿ ಸಪ್ತಗಿರಿ ಆಸ್ಪತ್ರೆ ವತಿಯಿಂದ ಬೃಹತ್ ಆರೋಗ್ಯ ತಪಾಸಣೆ ಮತ್ತು ಶಸ್ತ್ರ ಚಿಕಿತ್ಸಾ ಶಿಬಿರ
- ಖಾಸಗಿ ಶಾಲೆಗಳ ಮಾದರಿಯಲ್ಲೇ, ಸರ್ಕಾರಿ ಶಾಲೆಗಳ ರೂಪಾಂತರ: ಡಿ.ಕೆ.ಶಿವಕುಮಾರ್
- ತುಮಕೂರು ವಿವಿ 19ನೇ ಘಟಿಕೋತ್ಸವ: 90 ವಿದ್ಯಾರ್ಥಿಗಳಿಗೆ 117 ಚಿನ್ನದ ಪದಕ
- ಶಾಲೆಗಳ ಪುನರಾರಂಭ: ದಾಖಲಾತಿ ಆಂದೋಲನಕ್ಕೆ ಡಿ.ಸಿ. ಚಾಲನೆ
- ಸಚಿವ ಸ್ಥಾನದ ಆಸೆ ನನಗೂ ಇದೆ ಕೊಟ್ಟರೆ ಪ್ರಾಮಾಣಿಕವಾಗಿ ಕೆಲಸ ನಿರ್ವಹಿಸುವೆ: ಹೆಚ್.ವಿ.ವೆಂಕಟೇಶ್
- ನವಿಲೆ ಭಾಗಕ್ಕೆ ಹೇಮಾವತಿ ನೀರನ್ನು ಹರಿಸಲಾಗುವುದು ರೈತರು ಆತಂಕಪಡುವ ಅಗತ್ಯವಿಲ್ಲ: ಶಾಸಕ ಸಿ.ಬಿ.ಸುರೇಶ್ ಬಾಬು
- ‘ಗರ್ಭಿಣಿನೂ ಇಲ್ಲ, ಮಹಿಳೆಯೂ ಇಲ್ಲ… ಕಾರಿನಲ್ಲಿ ಒಬ್ಬರೇ ಇದ್ದಿದ್ದು!’: ಝೀರೋ ಟ್ರಾಫಿಕ್ ಪ್ರತಿಭಟನೆಯ ಅಸಲೀಯತ್ತು ಬಿಚ್ಚಿಟ್ಟ ಬೆಂಗಳೂರು ಪೊಲೀಸರು
Author: admin
ಬೆಂಗಳೂರು ಗ್ರಾಮಾಂತರ: ಸಮಾಜ ಕಲ್ಯಾಣ ಇಲಾಖೆ ವತಿಯಿಂದ 2024-25ನೇ ಸಾಲಿಗೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ, ದೊಡ್ಡಬಳ್ಳಾಪುರ, ಹೊಸಕೋಟೆ ಮತ್ತು ನೆಲಮಂಗಲ ತಾಲ್ಲೂಕುಗಳ ವ್ಯಾಪ್ತಿಗೆ ಒಳಪಡುವ ಪರಿಶಿಷ್ಟ ಜಾತಿಯ ಅಭ್ಯರ್ಥಿಗಳಿಗೆ ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಆಡಳಿತ ನ್ಯಾಯಾಧೀಕರಣ ಯೋಜನೆಯಡಿ ಎರಡನೇ ಹಂತದಲ್ಲಿ ತರಬೇತಿ ನೀಡುವ ಸಲುವಾಗಿ ಪರಿಶಿಷ್ಟ ಜಾತಿಯ ಕಾನೂನು ಪದವೀಧರರಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಅರ್ಹ ಅಭ್ಯರ್ಥಿಗಳು, ಸಮಾಜ ಕಲ್ಯಾಣ ಇಲಾಖೆಯ ವೆಬ್ ಸೈಟ್ (www.sw.kar.nic.in) ನಲ್ಲಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಲು 2024 ರ ಸೆಪ್ಟೆಂಬರ್– 20 ರಿಂದ ಪ್ರಾರಂಭವಾಗಿದ್ದು, 2024 ರ ಸೆಪ್ಟೆಂಬರ್– 30 ಕೊನೆಯ ದಿನಾಂಕವಾಗಿರುತ್ತದೆ. ಷರತ್ತುಗಳು: ಅಭ್ಯರ್ಥಿಗಳು 40 ವರ್ಷ ವಯೋಮಿತಿಯೊಳಗಿರಬೇಕು. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ, ದೊಡ್ಡಬಳ್ಳಾಪುರ, ಹೊಸಕೋಟೆ ಮತ್ತು ನೆಲಮಂಗಲ ತಾಲ್ಲೂಕುಗಳ ಅಭ್ಯರ್ಥಿಗಳು ಮಾತ್ರ ಅರ್ಜಿ ಸಲ್ಲಿಸತಕ್ಕದ್ದು. ಅರ್ಜಿ ಸಲ್ಲಿಸಲು ನಿಗದಿಪಡಿಸಿರುವ ಕೊನೆಯ ದಿನಾಂಕಕ್ಕೆ ಎರಡು ವರ್ಷದ ಒಳಗೆ ಕಾನೂನು ಪದವಿಯನ್ನು ಪಡೆದಿರಬೇಕು. ವಾರ್ಷಿಕ ಆದಾಯ ರೂ.2,00,000/-ಗಳ ಒಳಗೊಂಡಿರಬೇಕು. ತರಬೇತಿ…
ಬೆಂಗಳೂರು: ಪರಪ್ಪನ ಅಗ್ರಹಾರ ಜೈಲಿನಲ್ಲಿ ನಟ ದರ್ಶನ್ ಗೆ ರಾಜಾತಿಥ್ಯ ನೀಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ರೌಡಿಶೀಟರ್ ವಿಲ್ಸನ್ ಗಾರ್ಡನ್ ನಾಗನನ್ನು ಬೆಳಗಾವಿ ಜೈಲಿಗೆ ಶಿಫ್ಟ್ ಮಾಡಲಾಗಿದೆ. ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದ ನಟ ದರ್ಶನ್ ಅವರು ವಿಲ್ಸನ್ ಗಾರ್ಡನ್ ನಾಗನ ಜೊತೆಗೆ ಜೈಲಿನಲ್ಲಿ ಕುಳಿತಿರುವ ಫೋಟೋ ವೈರಲ್ ಆಗಿತ್ತು. ನಂತರದಲ್ಲಿ ದರ್ಶನ್ ರನ್ನು ಬಳ್ಳಾರಿ ಜೈಲಿಗೆ ಸ್ಥಳಾಂತರ ಮಾಡಲಾಗಿದ್ದು, ಅವರೊಂದಿಗೆ ಬಂಧಿತರಾಗಿದ್ದ ಇತರೆ ಆರೋಪಿಗಳನ್ನು ಶಿವಮೊಗ್ಗ, ಮೈಸೂರು, ಧಾರವಾಡ, ಕಲಬುರಗಿ ಜೈಲುಗಳಿಗೆ ಶಿಫ್ಟ್ ಮಾಡಲಾಗಿದೆ. ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದ ವಿಲ್ಸನ್ ಗಾರ್ಡನ್ ನಾಗನನ್ನು ಬೆಳಗಾವಿಯ ಹಿಂಡಲಗಾ ಜೈಲಿಗೆ ಸ್ಥಳಾಂತರ ಮಾಡಲಾಗಿದೆ. ರೌಡಿಶೀಟರ್ ನಾಗ ಸೇರಿದಂತೆ ನಾಲ್ವರು ಆರೋಪಿಗಳನ್ನು ಶಿಫ್ಟ್ ಮಾಡಲಾಗಿದೆ ಎನ್ನಲಾಗಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q
ಹೆಚ್.ಡಿ.ಕೋಟೆ: ತಾಲೂಕು ವ್ಯವಸಾಯೋತ್ಪಾನ್ನ ಮಾರಾಟ ಸಹಕಾರ ಸಂಘದ ಸರ್ವಸದಸ್ಯರ 2023 ಮತ್ತು 2024 ನೇ ಸಾಲಿನ ವಾರ್ಷಿಕ ಮಹಾಸಭೆ ಸಂಘದ ಅಕ್ಕಿಗಿರಣಿ ಆವರಣದಲ್ಲಿ ನಡೆಯಿತು. ಕಾರ್ಯಕ್ರಮವನ್ನು ವೇದಿಕೆಯ ಗಣ್ಯರು ಜ್ಯೋತಿ ಬೆಳಗುವುದರ ಮೂಲಕ ಉದ್ಘಾಟಿಸಿದರು. ಹಿಂದಿನ ಸಭೆಯ ನಡವಳಿಯನ್ನು ಸಂಘದ ಕಾರ್ಯನಿರ್ವಾಹಕ ಅಧಿಕಾರಿ ಬಿ.ಎನ್.ಲಿಂಗರಾಜು ಸಭೆಗೆ ತಿಳಿಸಿದರು. ಸಭೆಯಲ್ಲಿ ಮಾತನಾಡಿದ ಸದಸ್ಯ ಆದಿಕರ್ನಾಟಕ ಮಹಾಸಭಾ ಅಧ್ಯಕ್ಷ ಹೆಚ್.ಸಿ.ನರಸಿಂಹಮೂರ್ತಿ, ಸಂಘದಲ್ಲಿ ಪ್ರತಿ ಬಾರಿ ನಷ್ಟ ತೋರಿಸುವ ಬದಲು ಸಂಘವನ್ನು ಲಾಭದತ್ತ ಕೊಂಡೊಯ್ಯಬೇಕು ಎಂದು ತಿಳಿಸಿದರು ನಂತರ ಮಾತನಾಡಿದ ವ್ಯವಸಾಯೋತ್ಪಾನ್ನ ಸಂಘದ ಅಧ್ಯಕ್ಷ ಮೊತ್ತ ಬಸವರಾಜಪ್ಪ, ಮುಂದಿನ ದಿನಗಳಲ್ಲಿ ಸಂಘವನ್ನು ಲಾಭದತ್ತ ತೆಗೆದುಕೊಂಡು ಹೋಗುತ್ತೇವೆ ಎಂದು ಭರವಸೆ ನೀಡಿದರು. ಕಾರ್ಯಕ್ರಮದಲ್ಲಿ ಅಧ್ಯಕ್ಷ ಬಸವರಾಜಪ್ಪ, ಉಪಾಧ್ಯಕ್ಷ ನೂರ್ ಮೊಹಮ್ಮದ್, ನಿರ್ದೇಶಕರುಗಳು, ಸಂಘದ ಸಿಬ್ಬಂದಿಗಳು, ಮುಖಂಡರಾದ, ಎಂ.ಮಹಾದೇವಪ್ರಸಾದ್, ಸಂತೋಷ, ಎಂ.ಡಿ.ಮಂಚಯ್ಯ, ಸರ್ವಸದಸ್ಯರು ಹಾಜರಿದ್ದರು. ವರದಿ: ಮಲಾರ ಮಹದೇವಸ್ವಾಮಿ ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್…
ಶ್ರೀನಗರ: ಜಮ್ಮು ಮತ್ತು ಕಾಶ್ಮೀರ ವಿಧಾನಸಭೆ ಚುನಾವಣೆಗೆ ರಾಜಕೀಯ ಪಕ್ಷಗಳು ಭರ್ಜರಿ ತಯಾರಿ ನಡೆಸಿವೆ, ಈ ನಡುವೆ ನ್ಯಾಷನಲ್ ಕಾನ್ಫರೆನ್ಸ್ ಚುನಾವಣಾ ಪೂರ್ವ ಮೈತ್ರಿ ಮಾಡಿಕೊಂಡಿದೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ನ್ಯಾಷನಲ್ ಕಾನ್ಫರೆನ್ಸ್ ಪಕ್ಷದ ಉಪಾಧ್ಯಕ್ಷ ಒಮರ್ ಅಬ್ದುಲ್ಲಾ, ಅತಂತ್ರ ಫಲಿತಾಂಶ ತಪ್ಪಿಸಲು ಕಾಂಗ್ರೆಸ್ ಜೊತೆಗೆ ಮೈತ್ರಿ ಮಾಡಲಾಗಿದೆ ಎಂದು ಹೇಳಿದ್ದಾರೆ. ಸೀಟು ಹಂಚಿಕೆ ಒಪ್ಪಂದದ ಪ್ರಕಾರ ನ್ಯಾಷನಲ್ ಕಾನ್ಫರೆನ್ಸ್ 51, ಕಾಂಗ್ರೆಸ್ 32 ಮತ್ತು ಸಿಪಿಐ(ಎಂ) ಒಂದು ಸ್ಥಾನದಲ್ಲಿ ಸ್ಪರ್ಧಿಸುತ್ತಿದೆ. ಉಳಿದ ಆರು ಸ್ಥಾನಗಳಲ್ಲಿ ಕಾಂಗ್ರೆಸ್ ಮತ್ತು ನ್ಯಾಷನಲ್ ಕಾನ್ಫರೆನ್ಸ್ ನಡುವೆ ಮೈತ್ರಿ ಏರ್ಪಟ್ಟಿದೆ. ದಾಲ್ ಲೇಕ್ ಬಳಿ ಶಿಕಾರಾ ರಾಲಿಯಲ್ಲಿ ಮಾಧ್ಯಮಗಳ ಜೊತೆಗೆ ಮಾತನಾಡಿದ ಒಮರ್ ಅಬ್ದುಲ್ಲಾ, ಬಿಜೆಪಿಯವರು ಏನು ತಂತ್ರ ಹೆಣೆಯುತ್ತಾರೆ ಎಂದು ನಮಗೆ ಗೊತ್ತಿಲ್ಲ, ಆದರೆ ಅತಂತ್ರ ವಿಧಾನಸಭೆ ಚುನಾವಣೆ ಫಲಿತಾಂಶ ಬರದಂತೆ ನಾವು ಜಾಗ್ರತೆ ವಹಿಸುತ್ತಿದ್ದೇವೆ ಎಂದರು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149…
ಕೊಪ್ಪಳ: ಇನ್ನೂ 10 ವರ್ಷಗಳ ಕಾಲ ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷವೇ ಅಧಿಕಾರ ನಡೆಸುತ್ತದೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ. ಕೊಪ್ಪಳ ತಾಲೂಕಿನ ಮುನಿರಾಬಾದನಲ್ಲಿ ಮಾತನಾಡಿದ ಅವರು, ಬಿಜೆಪಿಯವರು ನಮ್ಮ ಕೆಲಸ ಬಗ್ಗೆ ಟೀಕೆ ಮಾಡುತ್ತಿದ್ದಾರೆ. ಆದರೆ ಇನ್ನೂ 10 ವರ್ಷಗಳ ಕಾಲ ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷವೇ ಅಧಿಕಾರ ನಡೆಸುತ್ತದೆ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದರು. ತುಂಗಭದ್ರಾ ಡ್ಯಾಂನ 19 ನೇ ಗೇಟ್ ಮುರಿದು ಬಿದ್ದಾಗ ಇಡೀ ಭಾರತ ದೇಶ ಕರ್ನಾಟಕದವರು ಏನು ಮಾಡುತ್ತಾರೆ ಎಂದು ಎದುರು ನೋಡುತ್ತಿದ್ದರು, ಆದರೆ ಹಗಲು ರಾತ್ರಿ ಕೆಲಸ ಮಾಡಿ ಹೊಸ ಗೇಟ್ ಅಳವಡಿಸುವ ಮೂಲಕ ನೀರು ನಿಲ್ಲಿಸಿದ್ದೇವೆ ಎಂದು ಇದೇ ವೇಳೆ ಅವರು ಹೇಳಿದರು. ತುಂಗಭದ್ರಾ ಡ್ಯಾಂನಲ್ಲಿ ನೀರು ಕಡಿಮೆ ಆದ ಮೇಲೆ ಎಲ್ಲ ಗೇಟ್ಗಳನ್ನು ಬದಲಾವಣೆ ಮಾಡುವ ಮೂಲಕ ರೈತರನ್ನು ಉಳಿಸುವ ಕೆಲಸ ಮಾಡುತ್ತೇವೆ. ತುಂಗಭದ್ರಾ ಡ್ಯಾಂಗೆ ಪರ್ಯಾಯವಾಗಿ ನಿರ್ಮಿಸಲು ನಿಶ್ಚಯಿಸಿರುವ ನವಲಿ ಜಲಾಶಯಕ್ಕೆ 13 ಸಾವಿರ ಎಕರೆ ಭೂಮಿ ಬೇಕಿದ್ದು, ಆದಕ್ಕಾಗಿ ಡಿಪಿಎಆರ್…
ಗರ್ಭಕಂಠದ ಕ್ಯಾನ್ಸರ್ನಿಂದ ಸಾವನ್ನಪ್ಪಿರುವುದಾಗಿ ಸುಳ್ಳು ಸುದ್ದಿ ಹಬ್ಬಿಸಿದ್ದ ಪೂನಂ ಪಾಂಡೆ ಇದೀಗ ಹಾಟ್ ಅವತಾರವೆತ್ತಿ ಸುದ್ದಿಯಾಗಿದ್ದಾರೆ. ತಮ್ಮ ಹಾಟ್ ಅವತಾರದ ಫೋಟೋವನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡು ಪಡ್ಡೆ ಹುಡುಗರ ನೆಮ್ಮದಿ ಕೆಡಿಸಿದ್ದಾರೆ. ಸಿನಿಮಾಕ್ಕಿಂತಲೂ ಬೇರೆ ವಿಚಾರಕ್ಕೆ ಹೆಚ್ಚಾಗಿ ಪೂನಂ ಸುದ್ದಿಯಾಗುತ್ತಾರೆ. ಇದೀಗ ತಮ್ಮ ಡ್ರೆಸ್ ವಿಚಾರಕ್ಕೆ ಸುದ್ದಿಯಾಗಿದ್ದಾರೆ. ಜೀನ್ಸ್ ಪ್ಯಾಂಟ್ ಜೊತೆಗೆ ಎದೆ ಭಾಗ ಕಾಣಿಸಿಕೊಳ್ಳುವಂತೆ ಅವರು ಬ್ಲೌಸ್ ಧರಿಸಿ ವಿವಿಧ ಭಂಗಿಗಳಲ್ಲಿ ಫೋಟೋಗೆ ಪೋಸ್ ನೀಡಿದ್ದಾರೆ. 2021ರಲ್ಲಿ ಶಾರುಖ್ ಖಾನ್ ಒಡೆತನದ ಕೆಕೆಆರ್ ಟೀಂ ಐಪಿಎಲ್ ಕಪ್ ಗೆದ್ದರೆ ಬೆತ್ತಲಾಗುವೆ ಅಂತ ಹೇಳಿ ಪೂನಂ ವಿವಾದ ಸೃಷ್ಟಿಸಿದ್ದರು. ಈ ಹಿಂದೆ ತಾನು ಗರ್ಭಕಂಠ ಕ್ಯಾನ್ಸರ್ ನಿಂದ ಮೃತಪಟ್ಟಿರುವುದಾಗಿ ತಮ್ಮ ಸಾವಿನ ಸುಳ್ಳು ಸುದ್ದಿಯನ್ನ ತಾವೇ ಹಂಚಿಕೊಂಡು, ಭಾರೀ ವಿವಾದಕ್ಕೀಡಾಗಿದ್ದರು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q
ಆಗ್ರಾ: ವಿಶ್ವ ಪ್ರಸಿದ್ಧ ಪ್ರವಾಸಿ ತಾಣ ತಾಜ್ ಮಹಲ್ ನ ಗೋಡೆಗಳು ಹಾಗೂ ನೆಲ ಹಲವೆಡೆ ಬಿರುಕು ಬಿಟ್ಟಿದೆಯಂತೆ. ಆಗ್ರಾದಲ್ಲಿ ಕಳೆದ ಕೆಲವು ದಿನಗಳಿಂದ ಭಾರೀ ಮಳೆ ಆಗುತ್ತಿರುವ ಹಿನ್ನೆಲೆ ಬಿರುಕು ಕಾಣಿಸಿಕೊಂಡಿದೆ ಎನ್ನಲಾಗಿದೆ. ತಾಜ್ ಮಹಲ್ನ ಮುಖ್ಯ ಗುಮ್ಮಟದ ಸುತ್ತ ಇರುವ ಬಾಗಿಲುಗಳ ಮೇಲೆ ಅರೇಬಿಕ್ ಭಾಷೆಯಲ್ಲಿ ಕುರಾನ್ ನ ಸಾಲುಗಳನ್ನ ಬರೆಯಲಾಗಿದೆ. ಈ ಸಾಲುಗಳು ಅಳಿಸಿ ಹೋಗುತ್ತಿವೆ ಎಂದು ಕುರಿತಾಗಿ ಭಾರತೀಯ ಟೂರಿಸ್ಟ್ ಗೈಡ್ ಒಕ್ಕೂಟದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಗಳಾದ ಶಕೀಲ್ ಚೌಹಾಣ್ ತಿಳಿಸಿದ್ದಾರೆ. ಗೋಡೆಗಳಿಗೆ ಅಳವಡಿಕೆ ಮಾಡಲಾಗಿದ್ದ ಅಮೂಲ್ಯ ಶಿಲೆಗಳೂ ಕೂಡಾ ಸವೆಯುತ್ತಿವೆ. ನೆಲ ಹಾಸಿನಲ್ಲಿ ಇದ್ದ ಕಲ್ಲುಗಳೂ ಕಿತ್ತು ಹೋಗುತ್ತಿವೆ. ಗುಮ್ಮಟಗಳು, ಗೋಡೆಗಳು, ವಸ್ತು ಸಂಗ್ರಹಾಲಯದ ನೆಲ ಹಾಸುಗಳು ಬಿರುಕು ಬಿಟ್ಟಿದೆ ಎಂದು ಅವರು ಹೇಳಿದ್ದಾರೆ. ಭಾರತೀಯ ಪುರಾತತ್ವ ಇಲಾಖೆ ಮಾತ್ರ ಈ ಕಟ್ಟಡಕ್ಕೆ ಯಾವುದೇ ಹಾನಿಯಾಗಿಲ್ಲ ಎಂದು ಹೇಳುತ್ತಿದೆ. ಇದು ತಪ್ಪು ಎಂದು ಟೂರಿಸ್ಟ್ ಗೈಡ್ಗಳ ಶ್ರೇಯೋಭಿವೃದ್ದಿ ಒಕ್ಕೂಟದ ಅಧ್ಯಕ್ಷ ದೀಪಕ್ ದಾನ್ ಅವರು…
ಕರಾವಳಿ : ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಬಿಸಿಲು, ಮೋಡ ಹಾಗೂ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. ಈಗಿನಂತೆ ಸೆಪ್ಟೆಂಬರ್ 25ರ ವರೆಗೂ ದಿನಕ್ಕೆ ಒಂದೆರಡು ಮಳೆ ಮುಂದುವರಿಯುವ ಮುನ್ಸೂಚೆನೆ ಇದ್ದು, ಆಮೇಲೆ ಬಿಡುವಿದ್ದರೂ, ಸೆಪ್ಟೆಂಬರ್ 28ರಿಂದ ಮತ್ತೆ ಮಳೆ ಆರಂಭವಾಗುವ ಲಕ್ಷಣಗಳಿವೆ. ಮಲೆನಾಡು : ಕೊಡಗಿನ ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದ್ದು, ಉಳಿದ ಭಾಗಗಳಲ್ಲಿ ಅಲ್ಲಲ್ಲಿ ಒಂದೆರಡು ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಹಾಸನ ಮೋಡ ಹಾಗೂ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚೆನೆ ಇದೆ. ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳ ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದ್ದರೆ, ಉಳಿದ ಭಾಗಗಳಲ್ಲಿ ಮೋಡ ಹಾಗೂ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚೆನೆ ಇದೆ. ಈಗಿನಂತೆ ಮಲೆನಾಡು ಭಾಗಗಳಲ್ಲಿ ಅಷ್ಟೇನು ಮಳೆಯ ಮುನ್ಸೂಚನೆ ಇಲ್ಲದಿದ್ದರೂ, ಸೆಪ್ಟೆಂಬರ್ 29ರಿಂದ ಉತ್ತಮ ಮಳೆಯ ಮುನ್ಸೂಚೆನೆ ಇದೆ. ಒಳನಾಡು : ಉತ್ತರ ಒಳನಾಡಿನ ಹಾವೇರಿ, ಧಾರವಾಡ, ಬೆಳಗಾವಿ,…
ಕೃಷ್ಣರಾಜಪೇಟೆ: ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ವರ್ಗಗಳ ಜನರು ಗೃಹ ನಿರ್ಮಾಣ ಸಹಕಾರ ಸಂಘದಲ್ಲಿಯೇ ತಮ್ಮ ಉಳಿತಾಯ ಖಾತೆಗಳನ್ನು ತೆರೆದು ವ್ಯವಹರಿಸುವ ಜೊತೆಗೆ ಶೇರುದಾರರಾಗಿ ಸಂಘದ ಅಭಿವೃದ್ಧಿಗೆ ಕೈಜೋಡಿಸಬೇಕು ಎಂದು ಸಂಘದ ಅಧ್ಯಕ್ಷ ಡಾ. ಬಸ್ತಿ ರಂಗಪ್ಪ ಮನವಿ ಮಾಡಿದರು. ಅವರು ಕೃಷ್ಣರಾಜಪೇಟೆ ಪಟ್ಟಣದ ದಲಿತ ಶಿಕ್ಷಣ ಅಭಿವೃದ್ದಿ ಸಂಸ್ಥೆಯ ಸಭಾಂಗಣದಲ್ಲಿ ಆಯೋಜಿಸಿದ್ದ ಕೃಷ್ಣರಾಜಪೇಟೆ ತಾಲೂಕು ಪರಿಶಿಷ್ಟ ಜಾತಿ ಪರಿಶಿಷ್ಟ ವರ್ಗ ಗೃಹ ನಿರ್ಮಾಣ ಸಹಕಾರ ಸಂಘ ನಿಯಮಿತದ 2023–24ನೇ ಸಾಲಿನ ಸರ್ವ ಸದಸ್ಯರ ವಾರ್ಷಿಕ ಮಹಾಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಇಂದಿನ ದಿನಮಾನದಲ್ಲಿ ಎಲ್ಲರೂ ಒಂದು ಸ್ವಂತ ಸೂರನ್ನು ಹೊಂದಬೇಕು ಎನ್ನುವುದು ನಮ್ಮ ಜೀವಿತದ ಜೀವಮಾನದ ಕೊನೆಯ ಆಸೆಯಾಗಿದೆ. ಈ ಕನಸನ್ನು ಸಾಕಾರ ಮಾಡುವ ದಿಕ್ಕಿನಲ್ಲಿ ದೃಢವಾದ ಹೆಜ್ಜೆ ಹಾಕಿರುವ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ವರ್ಗ ಗೃಹ ನಿರ್ಮಾಣ ಸಹಕಾರ ಸಂಘವು ಕೃಷ್ಣರಾಜಪೇಟೆ ಪಟ್ಟಣದ ವ್ಯಾಪ್ತಿಯಲ್ಲಿ ಒಂದುವರೆ ಎಕರೆ ಕೃಷಿ ಜಮೀನನ್ನು ಖರೀದಿಸಿ ಭೂ ಪರಿವರ್ತನೆ ಮಾಡಿ, ಲೇಔಟ್…
ಇರಾನ್ ನ ದಕ್ಷಿಣ ಖೊರಾಸನ್ ಪ್ರಾಂತ್ಯದ ಕಲ್ಲಿದ್ದಲು ಗಣಿಯಲ್ಲಿ ಮೀಥೇನ್ ಸೋರಿಕೆಯಿಂದ ಭಾರೀ ಸ್ಫೋಟ ಸಂಭವಿಸಿದ ಪರಿಣಾಮ 51 ಜನರು ಸಾವನ್ನಪ್ಪಿ 20 ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಮದಂಜೂ ಕಂಪನಿಯು ನಡೆಸುತ್ತಿರುವ ಗಣಿಯಲ್ಲಿರುವ ಬಿ ಮತ್ತು ಸಿ ಎರಡು ಬ್ಲಾಕ್ ಗಳಲ್ಲಿ ಮೀಥೇನ್ ಅನಿಲ ಸ್ಫೋಟದಿಂದ ಈ ದುರಂತ ಸಂಭವಿಸಿದೆ. ರಾಜಧಾನಿ ಟೆಹ್ರಾನ್ ನ ಆಗ್ನೇಯಕ್ಕೆ ಸುಮಾರು 540 ಕಿಲೋಮೀಟರ್ ದೂರದಲ್ಲಿರುವ ತಬಾಸ್ ನಲ್ಲಿರುವ ಕಲ್ಲಿದ್ದಲು ಗಣಿಯಲ್ಲಿ ಸ್ಫೋಟ ಸಂಭವಿಸಿದೆ. ದುರಂತ ನಡೆದ ವೇಳೆ ಘಟನಾ ಸ್ಥಳದಲ್ಲಿ ಸುಮಾರು 70 ಕಾರ್ಮಿಕರು ಕೆಲಸ ಮಾಡುತ್ತಿದ್ದರು ಎಂದು ತಿಳಿದು ಬಂದಿದೆ. ಇಂತಹ ದುರಂತ ಇದೇ ಮೊದಲಲ್ಲ 2013ರಲ್ಲಿ ಎರಡು ಬಾರಿ, 2009ರಲ್ಲಿ ಹಾಗೂ 2017ರಲ್ಲಿ ಕೂಡ ಸ್ಫೋಟ ಸಂಭವಿಸಿತ್ತು. ಹಲವರು ಪ್ರಾಣ ಕಳೆದುಕೊಂಡಿದ್ದರು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q