Author: admin

ಬೆಂಗಳೂರು:  ರೇಣುಕಾಸ್ವಾಮಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್ ಅವರು  ಘಟನೆ ನಡೆದು 92 ದಿನಗಳ ಬಳಿಕ ಜಾಮೀನು ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ನಗರದ 57ನೇ ಸಿಸಿಹೆಚ್ ನ್ಯಾಯಾಲಯಕ್ಕೆ ದರ್ಶನ್ ಪರ ವಕೀಲರು ಜಾಮೀನು ಅರ್ಜಿ ಸಲ್ಲಿಸಿದ್ದಾರೆ. ಸೋಮವಾರ ಈ ಅರ್ಜಿಯ ವಿಚಾರಣೆ ನಡೆಯಲಿದೆ ಎಂದು ಹೇಳಲಾಗಿದೆ. ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಎ2 ಆರೋಪಿಯಾಗಿರುವ ದರ್ಶನ್ ಈ ಪ್ರಕರಣದಿಂದ ಕಳಂಕ ಮುಕ್ತರಾಗಿ ಹೊರ ಬರಲಿ ಅಂತ ಅಭಿಮಾನಿಗಳು ಪ್ರಾರ್ಥಿಸುತ್ತಿದ್ದರು. ಆದರೆ ನಟ ದರ್ಶನ್ ಜಾಮೀನಿಗಾಗಿ ಅರ್ಜಿ ಸಲ್ಲಿಸದೇ ಸುಮ್ಮನಿದ್ದರು. ಇದೀಗ ಅವರು ಅಂತಿಮವಾಗಿ ಜಾಮೀನು ಅರ್ಜಿ ಸಲ್ಲಿಸಿದ್ದಾರೆ. ನಟ ದರ್ಶನ್ ಅವರಿಗೆ ಕೋರ್ಟ್ ಜಾಮೀನು ನೀಡಲಿ ಅಂತ ಅಭಿಮಾನಿಗಳು ಪ್ರಾರ್ಥಿಸುತ್ತಿದ್ದಾರೆ. ರೇಣುಕಾಸ್ವಾಮಿ ಪ್ರಕರಣದಲ್ಲಿ ಈವರೆಗೆ ಎಲ್ಲ ಆರೋಪಿಗಳು ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದರೂ ಕೋರ್ಟ್ ಜಾಮೀನು ನೀಡಲು ನಿರಾಕರಿಸಿತ್ತು. ಪ್ರಕರಣದ ಎ1ಆರೋಪಿಯಾಗಿರುವ ಪವಿತ್ರಾ ಗೌಡ ಕೂಡ ಜಾಮೀನು ಅರ್ಜಿ ಸಲ್ಲಿಸಿದ್ದರು. ಈ ಅರ್ಜಿ ಕೂಡ ವಜಾಗೊಂಡಿತ್ತು. ಪ್ರಕರಣ ನಡೆದು ಇಷ್ಟು…

Read More

ಬೆಂಗಳೂರು: ತಿರುಪತಿ ದೇವಸ್ಥಾನದ ಲಡ್ಡು ಪ್ರಸಾದದ ಪಾವಿತ್ರ್ಯತೆಯನ್ನು ಪುನರ್ ಸ್ಥಾಪಿಸಲಾಗಿದೆ, ಭಕ್ತರು ಆತಂಕಪಡುವುದು ಬೇಡ ಎಂದು ತಿರುಮಲ ತಿರುಪತಿ ದೇವಸ್ಥಾನದ ಸಮಿತಿ ಹೇಳಿದೆ. ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಈ ಬಗ್ಗೆ ಪೋಸ್ಟ್ ಮಾಡಿರುವ ಟಿಟಿಡಿ, ಲಡ್ಡು ಪ್ರಸಾದದ ದೈವತ್ವ ಹಾಗೂ ಪಾವಿತ್ರ್ಯತೆ ಇದೀಗ ಕಳಂಕ ರಹಿತವಾಗಿದೆ. ಭಕ್ತರಿಗೆ ಪಾವಿತ್ರ್ಯತೆ ಇರುವ ಪ್ರಸಾದವನ್ನು ಒದಗಿಸುವಲ್ಲಿ ಟಿಟಿಡಿ ಬದ್ಧವಾಗಿದೆ ಎಂದು ಹೇಳಿದೆ. ತಿರುಪತಿ ಲಡ್ಡು ಪ್ರಸಾದದಲ್ಲಿ ಪ್ರಾಣಿಗಳ ಕೊಬ್ಬಿನ ಅಂಶ ಬಳಸಲಾಗಿದೆ ಅಂತ ಆಂಧ್ರಪ್ರದೇಶದ ಹಾಲಿ ಸಿಎಂ ಚಂದ್ರಬಾಬು ನಾಯ್ಡು ಆರೋಪಿಸಿದ್ದರು. ಇದು ದೊಡ್ಡ ವಿವಾದವನ್ನೇ ಸೃಷ್ಟಿಸಿತ್ತು. ಚಂದ್ರಬಾಬು ನಾಯ್ದು ಅವರ ಆರೋಪಕ್ಕೆ ತಿರುಗೇಟು ನೀಡಿದ್ದ ಮಾಜಿ ಸಿಎಂ ವೈ.ಎಸ್‌.ಜಗನ್‌ಮೋಹನ್‌ ರೆಡ್ಡಿ ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ಅಲ್ಲದೇ ಚಂದ್ರಬಾಬು ನಾಯ್ಡು ಅವರು ರಾಜಕೀಯ ಲಾಭಕ್ಕಾಗಿ ದೇವರನ್ನೂ ಬಳಸಿಕೊಳ್ಳುವ ಮಟ್ಟಕ್ಕೆ ಇಳಿದಿದ್ದಾರೆ. ಆ ಮೂಲಕ ಅವರು ಕೋಟ್ಯಂತರ ಭಕ್ತರ ಭಾವನೆಗಳ ಜತೆ ಆಟವಾಡುತ್ತಿದ್ದಾರೆ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ…

Read More

ಬಿಹಾರ: 18 ವರ್ಷದ ಯುವಕನೊಬ್ಬ ಐಪಿಎಸ್ ಅಧಿಕಾರಿಯಂತೆ ಸಮವಸ್ತ್ರ ಧರಿಸಿ, ಪಿಸ್ತೂಲ್ ಹಿಡಿದುಕೊಂಡು ತಿರುಗಾಡಿದ ಘಟನೆ ಬಿಹಾರದ ಜುಮುಯಿಯಲ್ಲಿ ನಡೆದಿದ್ದು, ಘಟನೆಯ ಮಾಹಿತಿ ತಿಳಿದು ಸ್ಥಳಕ್ಕೆ ಬಂದ ಪೊಲೀಸರು ಯುವಕನನ್ನ ವಶಕ್ಕೆ ಪಡೆದುಕೊಂಡಿದ್ದಾರೆ. ಜಮುಯಿ ಜಿಲ್ಲೆಯಲ್ಲಿ ಸಮೋಸಾ ಮತ್ತು ಪಾನೀಯ ಮಾರಾಟ ಮಾಡುತ್ತಿದ್ದ ಈ ಯುವಕ  ಮಿಥ್ಲೇಶ್ ಮಾಂಝಿ ಸಡನ್ ಆಗಿ ಪೊಲೀಸ್ ಸಮವಸ್ತ್ರ ಧರಿಸಿಕೊಂಡು ಅಚ್ಚರಿ ಸೃಷ್ಟಿಸಿದ್ದ. ಈತನನ್ನು ಗಮನಿಸಿದ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದರು. ಸ್ಥಳಕ್ಕೆ ಬಂದ ಪೊಲೀಸರು ಮಿಥ್ಲೇಶ್ ಮಾಂಝಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಪೊಲೀಸರು ವಿಚಾರಣೆ ನಡೆಸಿದ ವೇಳೆ “ನಾನು ಐಪಿಎಸ್ ಅಧಿಕಾರಿ” ಅಂತ ಯುವಕ ಹೇಳಿಕೊಂಡಿದ್ದಾನಂತೆ. ಪೊಲೀಸರು ತಮ್ಮ ಶೈಲಿಯಲ್ಲಿ ವಿಚಾರಿಸಿದಾಗ ಐಪಿಎಸ್‌ ಅಧಿಕಾರಿಯ ಸಮವಸ್ತ್ರ ಪಡೆಯಲು 2ಲಕ್ಷ ವ್ಯಕ್ತಿಯೊಬ್ಬರಿಗೆ ಹಣ ನೀಡಿರುವುದಾಗಿ ಆತ ಹೇಳಿಕೊಂಡಿದ್ದಾನೆ. ಇದರಲ್ಲಿ ಭಾಗಿಯಾಗಿರುವ ಎಲ್ಲಾ ಗ್ಯಾಂಗ್‌ ಸದಸ್ಯರನ್ನು ಬಂಧಿಸಲಾಗುವುದು ಎಂದು ಹಿರಿಯ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್…

Read More

ಮೈಸೂರು: ಸುಳ್ಳು ಸುದ್ದಿಗಳಿಗೆ ಬ್ರೇಕ್ ಹಾಕದಿದ್ದರೆ ಪ್ರತಿಯೊಬ್ಬರ ನೆಮ್ಮದಿ ಹಾಳಾಗುತ್ತದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಮೈಸೂರು ಮಾನಸ ಗಂಗೋತ್ರಿಯ ರಾಣಿ ಬಹದ್ದೂರ್ ಸಭಾಂಗಣದಲ್ಲಿ ಜಿಲ್ಲಾ ಪತ್ರಕರ್ತರ ಸಂಘ ಆಯೋಜಿಸಿದ್ದ ಪತ್ರಿಕಾ ದಿನಾಚರಣೆಯನ್ನು ಉದ್ಘಾಟಿಸಿ, ಪ್ರಶಸ್ತಿ ವಿತರಿಸಿ ಅವರು ಮಾತನಾಡುತ್ತಿದ್ದರು. ನಾನು ಸದನದಲ್ಲಿ ಮಾತನಾಡುವಾಗ ಹಿಂದಿನ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಆಡಿದ ಮಾತನ್ನು ನಾನು ಉದಾಹರಿಸಿದ್ದೆ. ” ಸಾಲ ಮನ್ನಾ ಮಾಡೋದಕ್ಕೆ ನಮ್ಮ ಬಳಿ ಪ್ರಿಂಟಿಂಗ್ ಮೆಷಿನ್ ಇದೆಯಾ” ಎಂದು ಯಡಿಯೂರಪ್ಪ ಅವರು ಸದನದಲ್ಲೇ ಹೇಳಿದ್ದರು. ಈ ಮಾತನ್ನು ನಾನು ಉದಾಹರಿಸಿದ್ದೆ. ಆದರೆ ಸಾಮಾಜಿಕ ಜಾಲ ತಾಣಗಳಲ್ಲಿ ನಾನೇ ಆ ಮಾತು ಹೇಳಿದ್ದಾಗಿ ನಕಲಿ‌ ಸುದ್ದಿ ಸೃಷ್ಟಿಸಿ, ಅದಕ್ಕೆ ಗ್ಯಾರಂಟಿ ಯೋಜನೆಗಳನ್ನು ಬೆರೆಸಿ ತಪ್ಪು ಸಂದೇಶ ಹರಡಿದರು. ಇದರಿಂದ ನಷ್ಟ ಆಗಿದ್ದು ಸಮಾಜಕ್ಕೇ ಹೊರತು ನನಗಲ್ಲ ಎಂದು ಸಿಎಂ ಬೇಸರ ವ್ಯಕ್ತಪಡಿಸಿದರು. ಸುಳ್ಳು ಸುದ್ದಿಗಳ ಸೃಷ್ಟಿಕರ್ತರಿಗೆ ಕಠಿಣ ಶಿಕ್ಷೆ ಕೊಡಿಸುವ ನಿಟ್ಟಿನಲ್ಲಿ ನಾವು ಕಾನೂನು ಮಾಡಿದ್ದೇವೆ. ಕಾನೂನಿನಿಂದ ಮಾತ್ರವೇ ಫೇಕ್ ನ್ಯೂಸ್…

Read More

ಶ್ರೀ ಕ್ಷೇತ್ರ ಕಟೀಲು ದುರ್ಗಾಪರಮೇಶ್ವರೀ ಜ್ಯೋತಿಷ್ಯ ಪೀಠಂ ದೈವಜ್ಞ ಪಂಡಿತ್ ಕೃಷ್ಣ ಭಟ್ ಪ್ರಧಾನ ತಾಂತ್ರಿಕ್ ಹಾಗೂ ಮಾಂತ್ರಿಕರು  ಸ್ತ್ರೀ ಪುರುಷ ವಶೀಕರಣ ಸ್ಪೆಷಲಿಸ್ಟ್ ನನಗೆ ಒಂದೇ ಕರೆ ಮಾಡಿದರೆ ನಿಮ್ಮ ಇಷ್ಟಪಟ್ಟವರು ನಿಮ್ಮಂತೆ 9535156490  ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆ ಉತ್ತರಿಸಬಹುದು ಏಷ್ಟೇ ಪೂಜೆ ಪ್ರಯತ್ನ ಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..?ನಿಮ್ಮ ಯಾವುದೇಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ 2 ದಿನಗಳಲ್ಲಿ ಪರಿಹಾರ ಶತಸಿದ್ಧ ಧನವಶ, ಜನವಶ, ಶತ್ರುನಾಶ, ಸ್ತ್ರೀ- ಪುರುಷ ವಶೀಕರಣ, ದಿಗ್ಭಂಧನ, ಸ್ತಂಭನ, ವುಚ್ಛಾಟನೆಯಂತಹ ಸಮಸ್ಯೆಗಳಿಗೆ ವಿಶೇಷ ಪರಿಹಾರ ತಿಳಿಸುತ್ತಾರೆ 9535156490 Provided by ನಿಮ್ಮ ಈ ದಿನ ಹೇಗಿರಲಿದೆ? ಶುಭವೇ, ಅಶುಭವೇ? ಶುಭ ಸಂಖ್ಯೆ ಮತ್ತು ಬಣ್ಣದ ಮಾಹಿತಿ ಸೇರಿ ಪಂಚಾಗ, ದ್ವಾದಶ ರಾಶಿಗಳ ದಿನ ಭವಿಷ್ಯ ಇಲ್ಲಿದೆ. ಮೇಷ ಸಮತೋಲಿತ ಆಹಾರ ಮತ್ತು ಸಕ್ರಿಯ…

Read More

ಬೆಂಗಳೂರು: ದೆಹಲಿಯ ಶ್ರದ್ಧಾ ವಾಕರ್ ಮಾದರಿಯಲ್ಲೇ ಬೆಂಗಳೂರಿನ ವೈಯಾಲಿಕಾವಲ್ ನ ಮುನೇಶ್ವರ ಬ್ಲಾಕ್ ನಾಲ್ಕನೆ ಕ್ರಾಸ್​ನಲ್ಲಿ ಬಾಡಿಗೆ ಮನೆಯೊಂದರಲ್ಲಿ ಯುವತಿಯೊಬ್ಬಳ ಬರ್ಬರ ಹತ್ಯೆ ನಡೆದಿದೆ. ಮಹಾಲಕ್ಷ್ಮಿ (29) ಹತ್ಯೆಯಾದ ಮಹಿಳೆ ಎಂದು ಗುರುತಿಸಲಾಗಿದೆ. ಕಳೆದ 3 ತಿಂಗಳಿಂದ ಬಾಡಿಗೆ ಮನೆಯಲ್ಲಿ ವಾಸವಾಗಿದ್ದ ಮಹಾಲಕ್ಷ್ಮಿಯನ್ನು ಬರ್ಬರವಾಗಿ ಹತ್ಯೆ ಮಾಡಿ, ಕತ್ತರಿಸಿ 30ಕ್ಕೂ ಹೆಚ್ಚು ತುಂಡು ಮಾಡಿ ಫ್ರೀಡ್ಜ್ ನಲ್ಲಿಟ್ಟಿರುವ ದೃಶ್ಯ ಕಂಡು ಬಂದಿದೆ. ಮೃತ ಮಹಾಲಕ್ಷ್ಮೀಗೆ ಮದುವೆಯಾಗಿತ್ತು. 4 ವರ್ಷದ ಒಂದು ಮಗು ಕೂಡ ಇದೆ. ಪತಿಯಿಂದ ಬೇರ್ಪಟ್ಟ ಬಳಿಕ  ಕಳೆದ ಮೂರು ತಿಂಗಳ ಹಿಂದಷ್ಟೆ ಈಕೆ ಈ ಬಾಡಿಗೆ ಮನೆಗೆ ಬಂದಿದ್ದಳು ಎಂದು ತಿಳಿದು ಬಂದಿದೆ. ಮಹಾಲಕ್ಷ್ಮಿಯನ್ನ, ಯುವಕನೊಬ್ಬ ಪಿಕಪ್​ ಮತ್ತು ಡ್ರಾಪ್ ಮಾಡುತ್ತಿದ್ದನಂತೆ ಈತನ ಮೇಲೆಯೇ ಇದೀಗ ಅನುಮಾನ ಸೃಷ್ಟಿಯಾಗಿದೆ. ಸದ್ಯ ಘಟನೆ ಸಂಬಂಧ ಪೊಲೀಸರು ತನಿಖೆ ಮುಂದುವರಿಸಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ…

Read More

ಜಪಾನ್: ಆರೋಗ್ಯವಂತನಾಗಿರಬೇಕಾದರೆ ಮನುಷ್ಯ ಚೆನ್ನಾಗಿ ನಿದ್ದೆ ಮಾಡಬೇಕು. ಆತ 6 ಅಥವಾ 8 ಗಂಟೆಗಳ ತನಕ ನಿದ್ರಿಸುವುದು ಮನುಷ್ಯನ ಆರೋಗ್ಯಕ್ಕೆ ಉತ್ತಮವಾದದ್ದು ಎಂದು ಆರೋಗ್ಯ ತಜ್ಞರು ಹೇಳುತ್ತಾರೆ. ಆದರೆ ಜಪಾನ್ ನಲ್ಲಿ ವ್ಯಕ್ತಿಯೊಬ್ಬ ಕೇವಲ ಅರ್ಧ ಗಂಟೆ ನಿದ್ರೆ ಮಾಡುತ್ತಾನಂತೆ! ಡೈಸುಕೆ ಹೋರಿ ಎಂಬ ಜಪಾನ್ ನ ಈ ವ್ಯಕ್ತಿ ಕಳೆದ 12 ವರ್ಷಗಳಿಂದ ಕೇವಲ 30 ನಿಮಿಷಗಳ ಕಾಲ ಮಾತ್ರವೇ ನಿದ್ರೆ ಮಾಡುತ್ತಾನಂತೆ. ಉಳಿದ ಸಮಯದಲ್ಲಿ ಉಪಹಾರ, ಜಿಮ್, ಕೆಲಸಗಳಿಗೆ ಈತ ಮುಡಿಪಾಗಿಡುತ್ತಾನಂತೆ. ಈತ ತನ್ನ ಜೀವನವನ್ನು ಡಬಲ್ ಮಾಡಬೇಕು. ನಿದ್ರಿಸದೇ ಹೆಚ್ಚು ಕಾಲ ಜೀವಿಸಬೇಕು ಎನ್ನುವ ಕಾರಣಕ್ಕಾಗಿ ನಿದ್ದೆಗೆಡುತ್ತಿದ್ದಾನಂತೆ. ನೀವು ತಿನ್ನುವ ಒಂದು ಗಂಟೆ ಮೊದಲು ನೀವು ವ್ಯಾಯಾಮ ಅಥವಾ ಕಾಫಿ ಕುಡಿಯುವವರೆಗೆ, ನೀವು ಅರೆನಿದ್ರಾವಸ್ಥೆಯನ್ನು ದೂರವಿಡಬಹುದು ಅಂತ ಚೀನಾದ ಮಾಧ್ಯಮಗಳ ಜೊತೆಗೆ ಹೋರಿ ಹೇಳಿದ್ದಾನಂತೆ. ಅಂದ ಹಾಗೆ ಈ ಹೋರಿ ವಾಣಿಜ್ಯೋದ್ಯಮಿಯಂತೆ, ಆಕ್ಟಿವ್ ಆಗಿರಲು ಮನುಷ್ಯನಿಗೆ ದೀರ್ಘ ನಿದ್ದೆಗಿಂತ ಗುಣಮಟ್ಟದ ನಿದ್ದೆ ಬೇಕು ಎನ್ನುವುದು ಈತನ ವಾದವಂತೆ.…

Read More

ಶಿರೂರು:  ಗುಡ್ಡಕುಸಿತ ಪ್ರಕರಣದಲ್ಲಿ ಕಣ್ಮರೆಯಾಗಿದ್ದ ಕೇರಳ ಮೂಲದ ಟ್ರಕ್ ಡ್ರೈವರ್  ಅರ್ಜುನ್ ನ ಮೃತದೇಹಕ್ಕಾಗಿ ಮತ್ತೆ ಹುಡುಕಾಟ ಆರಂಭಗೊಂಡಿದೆ. ಜುಲೈ 16 ಕ್ಕೆ ಶಿರೂರಿನಲ್ಲಿ ಗುಡ್ಡ ಕುಸಿತವಾಗಿತ್ತು. ಟ್ರಕ್ ಡ್ರೈವರ್ ಅರ್ಜುನ್  ತಮ್ಮ ಟ್ರಕ್ ಸಮೇತ ನಾಪತ್ತೆಯಾಗಿದ್ದರು. ಲಾರಿಯ ಅವಶೇಷಗಳು ನದಿಯಲ್ಲಿ ಸಿಕ್ಕಿದರೂ, ಇನ್ನೂ ಮೃತದೇಹ ಪತ್ತೆಯಾಗಿಲ್ಲ. ಅರ್ಜುನ್ ನ ಮೃತದೇಹದ ಒಂದು ಭಾಗವಾದರೂ ನಮಗೆ ಹುಡುಕಿ ಕೊಡಿ ಅಂತ ಕುಟುಂಬಸ್ಥರು ಮನವಿ ಮಾಡಿಕೊಂಡಿದ್ದರು. ಇಂದಿನಿಂದ ನಾವಿಕರು ಮತ್ತು ಮುಳುಗು ತಜ್ಞ ಈಶ್ವರ್ ಮಲ್ಪೆ ನೇತೃತ್ವದ ತಂಡ ಹುಡುಕಾಟ ಆರಂಭಿಸಲಿದೆ ಎಂದು ವರದಿಯಾಗಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q

Read More

ತುಮಕೂರು:  ಚೇಳೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಅಪರಾಧಿಗೆ 5 ವರ್ಷಗಳ ಜೈಲು ಶಿಕ್ಷೆ ಮತ್ತು 50 ಸಾವಿರ ರೂಪಾಯಿ ದಂಡವನ್ನು ವಿಧಿಸಿ ಅಧಿಕ ಜಿಲ್ಲಾ ಸತ್ರ ನ್ಯಾಯಾಲಯ ಎಫ್ ಟಿಎಸ್ ಸಿ(POCSO) ನ್ಯಾಯಾಲಯವು ತೀರ್ಪು ನೀಡಿದೆ. 2023 ಸೆಪ್ಟಂಬರ್ 27ರಂದು ಈ ಘಟನೆ ನಡೆದಿತ್ತು. ಅನಾರೋಗ್ಯದ ಹಿನ್ನೆಲೆ ನೊಂದ ಬಾಲಕಿ ತನ್ನ ತಾಯಿ ನಡೆಸುತ್ತಿದ್ದ ಪೆಟ್ಟಿಗೆ ಅಂಗಡಿ ಮುಂಭಾಗದಲ್ಲಿ ಮಲಗಿದ್ದಳು.  ಈ ಸಂದರ್ಭದಲ್ಲಿ ಅಂಗಡಿಗೆ ಬಂದ 41 ವರ್ಷದ ಮಲ್ಲೇಶ ಎಂಬಾತ ಬೀಡಿ ಕೊಡುವಂತೆ ಕೇಳಿದ್ದಾನೆ. ಬೀಡಿ ಕೊಡಲು ಬಾಲಕಿ ಅಂಗಡಿ ಒಳಗೆ ಹೋದ ಸಂದರ್ಭದಲ್ಲಿ ಮಲ್ಲೇಶ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ್ದಾನೆ. ಘಟನೆ ವೇಳೆ ಬಾಲಕಿಯ ತಾಯಿ ತನ್ನ ಅತ್ತಿಗೆ ಮನೆಯಲ್ಲಿದ್ದರು. ಬಾಲಕಿಯ ಕಿರುಚಾಟ ಕೇಳಿ, ತಾಯಿ, ದೊಡ್ಡಮ್ಮ ಓಡಿ ಬಂದು ಬಾಲಕಿಯನ್ನು ರಕ್ಷಿಸಿದ್ದಾರೆ. ಬಳಿಕ 112ಗೆ ಕರೆ ಮಾಡಿ ಮಲ್ಲೇಶನನ್ನು ಪೊಲೀಸ್ ವಶಕ್ಕೆ ನೀಡಿದ್ದರು. ಈ ಪ್ರಕರಣ ಸಂಬಂಧ ತನಿಖಾಧಿಕಾರಿ…

Read More

ತುಮಕೂರು: ನಗರದಲ್ಲಿ ನಡೆಯುತ್ತಿರುವ ಹಿಂದೂ ಮಹಾಗಣಪತಿ ವಿಸರ್ಜನಾ ಮಹೋತ್ಸವವನ್ನು ಕೇಂದ್ರ ಜಲ ಶಕ್ತಿ ಖಾತೆ ರಾಜ್ಯ ಸಚಿವ ವಿ ಸೋಮಣ್ಣ ಇಂದು ಉದ್ಘಾಟಿಸಿದರು. ನಗರದ ಟೌನ್ ಹಾಲ್ ವೃತ್ತದಲ್ಲಿ ಆರಂಭವಾದ ಅಂತಹ ಮಹೋತ್ಸವವನ್ನು ಸಚಿವ ವಿ.ಸೋಮಣ್ಣ ಡಮರುಗ ಬಾರಿಸುವ ಮೂಲಕ ಉದ್ಘಾಟಿಸಿದರು. ತುಮಕೂರಿನಲ್ಲಿ ಹಿಂದೂ ಮಹಾಗಣಪತಿ ವಿಸರ್ಜನಾ ಮೆರವಣಿಗೆಗೆ ಚಾಲನೆ ನೀಡಲಾಗಿದ್ದು  ಬಜರಂಗದಳ ಹಾಗೂ ವಿಶ್ವ ಹಿಂದೂ ಪರಿಷತ್ ವತಿಯಿಂದ ಪ್ರತಿಷ್ಟಾಪಿಸಲ್ಪಟ್ಟಿರುವ ಗಣಪತಿಯಾಗಿದೆ. ತುಮಕೂರಿನ ಬಿಜಿಎಸ್ ವೃತ್ತದ ನಾಗರಕಟ್ಟೆ ಗಣಪತಿ ದೇವಸ್ಥಾನದಲ್ಲಿ ಪ್ರತಿಷ್ಟಾಪನೆ ಮಾಡಿರುವ ಹಿಂದೂ ಮಹಾಗಣಪತಿಯಾಗಿದೆ. ಬಾಂಬೆ ಡೋಲ್, ಡಿಜೆ ಸೇರಿದಂತೆ ವಿವಿಧ ಕಲಾತಂಡಗಳಿಂದ ಮೆರವಣಿಗೆಗೆ ಮೆರಗು ನೀಡಿವೆ. ಮೆರವಣಿಗೆಯಲ್ಲಿ ಶ್ರೀರಾಮ, ಆಂಜನೇಯ, ಭಾರತ ಮಾತೆ, ನಂದಿ ಸೇರಿದಂತೆ ಹಲವು ಕಟೌಟ್ ಗಳನ್ನು ಹಾಕಲಾಗಿದೆ. ಸಾವಿರಾರು ಸಂಖ್ಯೆಯಲ್ಲಿ ಜನರು ಮೆರವಣಿಗೆಯಲ್ಲಿ ಭಾಗಿಯಾಗಿದ್ದಾರೆ. ನಗರದ ಪ್ರಮುಖ ರಸ್ತೆಗಳಲ್ಲಿ ಸಾಗಿ ರಾತ್ರಿ ‌10 ಗಂಟೆವರೆಗೂ ನಡೆಯಲಿರುವ ಮೆರವಣಿಗೆಯುದ್ಧಕ್ಕೂ ತುಮಕೂರು ಎಸ್.ಪಿ.ಅಶೋಕ್ ವೆಂಕಟ್ ನೇತೃತ್ವದಲ್ಲಿ ಭಾರೀ ಪೊಲೀಸ್ ಭದ್ರತೆ ಒದಗಿಸಲಾಗಿದೆ. ಅಹಿತಕರ ಘಟನೆ ನಡೆಯದಂತೆ…

Read More