Author: admin

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಘೋಷಿಸಿದ ಡಿಜಿಟಲ್ ಇಂಡಿಯಾ ಅಭಿಯಾನವು ದೇಶಾದ್ಯಾಂತ ಹೊಸ ನಿರೀಕ್ಷೆಗಳನ್ನು ಮೂಡಿಸಿತ್ತು. ಮೊಬೈಲ್, ಇಂಟರ್‌ ನೆಟ್, ಡಿಜಿಟಲ್ ಪಾವತಿ ವ್ಯವಸ್ಥೆ ಎಲ್ಲೆಡೆ ಪ್ರವೇಶಿಸಬಹುದು ಎಂಬ ನಿರೀಕ್ಷೆ ಇಡೀ ದೇಶದಲ್ಲಿ ಇದ್ದರೂ, ಕೆಲವರು ಇದರ ಸಾಮರ್ಥ್ಯವನ್ನು ಪ್ರಶ್ನಿಸುತ್ತಿದ್ದರು. “ಬೀದಿ ಬದಿ ವ್ಯಾಪಾರಿಗಳು, ಆಟೋ ಚಾಲಕರು ಎಲ್ಲಿ ಇಂಥ ತಂತ್ರಜ್ಞಾನವನ್ನು ಬಳಸುತ್ತಾರೆ?” ಎಂಬ ಪ್ರಶ್ನೆ ಸಾಮಾನ್ಯವಾಗಿ ಕೇಳಿಬರುತ್ತಿತ್ತು. ಆದರೆ ಇಂದಿನ ಭಾರತದ ದೃಶ್ಯ ಇನ್ನು ಬೇರೆಯಾಗಿದೆ. ಇತ್ತೀಚಿನ ದಿನಗಳಲ್ಲಿ ಆಟೋ ಚಾಲಕರೊಬ್ಬರು ತಮ್ಮ ಸ್ಮಾರ್ಟ್‌ ವಾಚ್‌ ನಲ್ಲಿ ಕ್ಯೂಆರ್‌ ಕೋಡ್‌ ತೋರಿಸಿ ಪಾವತಿಯನ್ನು ಸ್ವೀಕರಿಸಿರುವ ಫೋಟೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿರುವುದು ಡಿಜಿಟಲ್ ಕ್ರಾಂತಿಯ ಸತ್ಯಾಸತ್ಯತೆ ಮನದಟ್ಟಾಗುವಂತೆ ಮಾಡಿದೆ. ಇದು ಡಿಜಿಟಲ್ ಇಂಡಿಯಾಯ ಎದ್ದು ಕಾಣುವ ಒಂದು ಜ್ವಲಂತ ಉದಾಹರಣೆಯಾಗಿದೆ. ಅದೊಂದು ಕಾಲದಲ್ಲಿ, ಅಸಾಧ್ಯವೆನಿಸಬಹುದಾದ ತಂತ್ರಜ್ಞಾನವನ್ನು ದೇಶದ ಎಲ್ಲೆಡೆ ಬಳಸುತ್ತಿರುವುದು ಈಗ ಸಾಮಾನ್ಯವಾಗಿದ್ದು, ಪ್ರತಿಯೊಬ್ಬರೂ ತಮ್ಮದೇ ಆದ ರೀತಿಯಲ್ಲಿ ಇಂಟರ್‌ನೆಟ್ ಹಾಗೂ ಮೊಬೈಲ್ ತಂತ್ರಜ್ಞಾನವನ್ನು ಸ್ವೀಕರಿಸುತ್ತಿದ್ದಾರೆ. ಮೊದಲು ಬೆಲೆಬಾಳುವ, ಕೇವಲ…

Read More

ಪಾವಗಡ: 2024– 25ನೇ ಸಾಲಿನ ತಾಲ್ಲೂಕು ಮಟ್ಟದ ದಸರಾ ಕ್ರೀಡಾಕೂಟದಲ್ಲಿ ನಂದೀಶ್ ನಾಯ್ಕ ಪಿ. ಪುರುಷರ ವಿಭಾಗದ 400 ಮೀಟರ್ ದೂರ ಓಟದ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆ ಆಗಿದ್ದಾರೆ. ಪಾವಗಡ ತಾಲ್ಲೂಕಿನ ವೈ.ಎನ್.ಹೊಸಕೋಟೆ ಹೋಬಳಿಯ ಮೇಗಲಪಾಳ್ಯ ತಾಂಡ ಗ್ರಾಮದವರಾದ ನಂದೀಶ್ ನಾಯ್ಕ ಪಿ. ಅವರು, “ನಮ್ಮ ತುಮಕೂರು ವಾಹಿನಿ” ಪಾವಗಡ ತಾಲ್ಲೂಕು ವರದಿಗಾರರಾಗಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q

Read More

ಬೆಂಗಳೂರು: ಆರ್‌.ಆರ್‌.ನಗರ ಕ್ಷೇತ್ರದ ಶಾಸಕ ಮುನಿರತ್ನ ಸ್ವಪಕ್ಷ ಹಾಗೂ ವಿರೋಧಪಕ್ಷದ ವಿರುದ್ಧ ವಿಶ್ವದಲ್ಲೇ ಕಂಡಿರದಂತಹ ಸಂಚನ್ನು ಮಾಡಿದ್ದಾರೆ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಪ್ರಕರಣದಲ್ಲಿ ಯಾರ್ಯಾರು ಸಿಕ್ಕಿಕೊಂಡಿದ್ದಾರೆ ಎಂಬುದು ಇನ್ನೂ ಸ್ಪಷ್ಟವಾಗಿ ಗೊತ್ತಿಲ್ಲ. ಎಲ್ಲವನ್ನೂ ಪರಿಶೀಲಿಸಿದ ಬಳಿಕ ಮಾತನಾಡುವುದು ಒಳ್ಳೆಯದು ಎಂದರು. ಮುನಿರತ್ನ ಪ್ರಕರಣದಲ್ಲಿ ಎಸ್‌‍ಐಟಿ ರಚನೆ ಮಾಡಬೇಕೆಂಬುದು ನಮ ಪಕ್ಷದ ಶಾಸಕರು, ಸಚಿವರು, ಕೆಲ ಮುಖಂಡರು ಮನವಿ ಮಾಡಿರುವ ಬಗ್ಗೆ ಹೆಚ್ಚಿನ ಚರ್ಚೆಯಾಗಿಲ್ಲ. ಆದರೆ ವಿರೋಧಪಕ್ಷದ ನಾಯಕ ಆರ್‌.ಅಶೋಕ್‌ ವಿರುದ್ಧ ನಡೆದಿರುವ ಷಡ್ಯಂತ್ರದ ಬಗ್ಗೆ ಕೇಳಿ ದಿಗ್ಭ್ರಮೆಯಾಯಿತು. ದೇಶದಲ್ಲಷ್ಟೇ ಅಲ್ಲ ವಿಶ್ವದಲ್ಲೇ ಈ ರೀತಿಯ ಸಂಚನ್ನು ನಾನು ನೋಡಿಲ್ಲ ಎಂದು ಹೇಳಿದರು. ಸಿ.ಟಿ.ರವಿಯಣ್ಣ, ಅಶೋಕಣ್ಣ, ವಿಜಯೇಂದ್ರಣ್ಣ, ಕುಮಾರಣ್ಣ ಅವರು ಸತ್ಯಾಸತ್ಯತೆಯನ್ನು ಪರಿಶೀಲಿಸಿ ಮಾತನಾಡಬೇಕು. ಮುನಿರತ್ನ ಪ್ರಕರಣದಲ್ಲಿ ಜೆಡಿಎಸ್‌‍, ಬಿಜೆಪಿ ಮುಖಂಡರು ಉತ್ತರ ಕೊಡಬೇಕು, ನಾವುಗಳಲ್ಲ ಎಂದರು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.…

Read More

ಬೆಂಗಳೂರು: ಕೋಮುಗಲಭೆಗಳು ಕಾಂಗ್ರೆಸ್ ಸರ್ಕಾರದ ಆರನೇ ಗ್ಯಾರೆಂಟಿ ಅನ್ನಿಸುತ್ತಿದೆ ಎಂದು ವಿಪಕ್ಷ ನಾಯಕ ಆರ್.ಅಶೋಕ್ ಹೇಳಿದ್ದಾರೆ. ದಾವಣಗೆರೆಯಲ್ಲಿ ಗಣೇಶ ವಿಸರ್ಜನಾ ಮೆರವಣಿಗೆ ವೇಳೆ ನಡೆದ ಕಲ್ಲು ತೂರಾಟದ ಬಗ್ಗೆ ಅವರು ಆಕ್ರೋಶ ಹೊರಹಾಕಿದ್ದಾರೆ. ರಾಜ್ಯದಲ್ಲಿ ದಿನನಿತ್ಯ ಒಂದಲ್ಲ ಒಂದು ಕಡೆ ನಡೆಯುತ್ತಿರುವ ಕೋಮುಗಲಭೆಗಳನ್ನ ನೋಡುತ್ತಿದ್ದರೆ ಕೋಮುಗಲಭೆಗಳು ಕಾಂಗ್ರೆಸ್ ಸರ್ಕಾರದ ಆರನೇ ಗ್ಯಾರೆಂಟಿ ಅನ್ನಿಸುತ್ತಿದೆ ಎಂದು ಅವರು ವಾಗ್ದಾಳಿ ನಡೆಸಿದ್ದಾರೆ. ಗೃಹ ಸಚಿವರೇ, ದಾವಣಗೆರೆಯಲ್ಲಿ ಗಣೇಶ ವಿಸರ್ಜನೆ ವೇಳೆ ಪೊಲೀಸರಿಗೆ ಬಿದ್ದಿರುವ ಕಲ್ಲೇಟು, 30 ವಾಹನಗಳು ಜಖಂ ಆಗಿರುವುದು, ಮನೆಗಳ ಕಿಟಿಕಿ ಗಾಜುಗಳು ಪುಡಿ ಪುಡಿ ಆಗಿರುವುದು ಇವೆಲ್ಲ ನಿಮ್ಮ ಪ್ರಕಾರ ಸಣ್ಣ, ಆಕಸ್ಮಿಕ ಘಟನೆಗಳೇ ಅಲ್ಲವೇ? ಎಂದು ಆರ್.ಅಶೋಕ್ ಪ್ರಶ್ನಿಸಿದ್ದಾರೆ. ಸಿದ್ದರಾಮಯ್ಯನವರೇ, ಪರಮೇಶ್ವರ್ ಅವರ ಬಾಲಿಶತನ, ಬೇಜವಾಬ್ದಾರಿತನದಿಂದ ರಾಜ್ಯದ ಪೊಲೀಸ್ ಇಲಾಖೆಗೆ ಕೆಟ್ಟ ಹೆಸರು ಬರುತ್ತಿದೆ, ರಾಜ್ಯದಲ್ಲಿ ದಿನನಿತ್ಯ ಶಾಂತಿ ಕಡದುತ್ತಿದೆ. ಪರಮೇಶ್ವರ್ ಅವರ ರಾಜೀನಾಮೆ ಪಡೆದು ಯಾರಾದರೂ ಸಮರ್ಥರಿಗೆ ಗೃಹ ಇಲಾಖೆ ವಹಿಸಿ ಪುಣ್ಯ ಕಟ್ಟಿಕೊಳ್ಳಿ ಎಂದು ಅವರು ಟೀಕಿಸಿದ್ದಾರೆ.…

Read More

ಎಲ್ಲ ಸಂಕಷ್ಟಗಳನ್ನು ಗೆದ್ದು ದರ್ಶನ ಹೊರ ಬಂದು ಮತ್ತೆ ತೆರೆಯ ಮೇಲೆ ಮಿಂಚುತ್ತಾರೆ ಎಂದು ಗಿಚ್ಚಿಗಿಲಿ ವಿನ್ನರ್ ಹುಲಿ ಕಾರ್ತಿಕ್ ಹೇಳಿದ್ದಾರೆ. ಖಾಸಗಿ ವಾಹಿನಿ ಜೊತೆಗೆ ಸಂದರ್ಶನದಲ್ಲಿ ಮಾತನಾಡಿದ ಅವರು, ರೇಣುಕಾಸ್ವಾಮಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜೈಲು ಸೇರಿರುವ ನಟ ದರ್ಶನ್ ಕುರಿತ ಪ್ರಶ್ನೆಗಳಿಗೆ ಪ್ರತಿಕ್ರಿಯೆ ನೀಡಿದರು. ಸದ್ಯ ಬಿಂದಿಗೆಯಲ್ಲಿ ತಳದಲ್ಲಿರುವ ನೀರಿನಂತೆ ಇರುವ ದರ್ಶನ್ ಅವರಿಗೆ ಕಾಗೆ ಹಾಕುವ ಒಂದೊಂದೆ ಕಲ್ಲಿನಂತ್ತೆ ಒಬ್ಬೊಬ್ಬರೆ ಪೆಟ್ಟು ಕೊಡುತ್ತಿದ್ದಾರೆ. ಆದರೆ ನೀರು ಮೇಲೆ ಬಂದ ಹಾಗೇ ದರ್ಶನ್ ಅವರು ಕೂಡಾ ಇದರಿಂದ ಹೊರಬಂದು ಮಿಂಚುತ್ತಾರೆ ಎಂದು ಹುಲಿ ಕಾರ್ತಿಕ್ ವರ್ಣಿಸಿದರು. ದರ್ಶನ್ ಅವರಿಗೆ ಏನು ಆಗಬಾರದು. ಅವರ ಸಿನಿಮಾ ನೋಡಲು ಅಭಿಮಾನಿಗಳು ಕಾಯುತ್ತಿದ್ದಾರೆ. ‘ಮೆಜೆಸ್ಟಿಕ್’ನಿಂದ ಹಿಡಿದು ‘ರಾಬರ್ಟ್’ವರೆಗೂ ಹೇಗೆ ಕುಣಿಸಿದರೋ ಹಾಗೇ ಅವರು ಬಂದ್ಮೇಲೆ ದುಪ್ಪಟ್ಟು ಅವರನ್ನು ಮೆರೆಸಬೇಕು ಎಂದರು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್…

Read More

ಹಾಸನ: ಪ್ರಜ್ವಲ್ ಒಳ್ಳೆಯ ಹುಡುಗ ಕೆಲವೊಂದು ಅವನಿಗೂ ಗೊತ್ತಾಗೊಲ್ಲ, 3 ವರ್ಷ ಸುಮ್ಮನಿರಿ, ಎಲ್ಲದಕ್ಕೂ ಬಡ್ಡಿ ಸಮೇತ ತೀರಿಸ್ತೀನಿ ಎಂದು ಎಚ್.ಡಿ.ರೇವಣ್ಣ ಕಾರ್ಯಕರ್ತರ ಮುಂದೆ ಶಪಥ ಮಾಡಿದ್ದಾರೆ. ಆಲೂರಿನಲ್ಲಿ ಜೆಡಿಎಸ್ ಕಾರ್ಯಕರ್ತರನ್ನುದ್ದೇಶಿಸಿ ಮಾತನಾಡಿದ ಎಚ್ ಡಿ ರೇವಣ್ಣ, ಇನ್ನು ಮೂರು ವರ್ಷ ಕಾಯಿರಿ, ನನಗೆ ಕೊಟ್ಟಿದ್ದಕ್ಕೆಲ್ಲಾ ಬಡ್ಡಿ ಸಮೇತ ತೀರಿಸ್ತೀನಿ. ಇಲ್ಲ ಅಂದರೆ ನಾನು ದೇವೇಗೌಡರ ಮಗನೇ ಅಲ್ಲ ಎಂದು ಘೋಷಿಸಿಕೊಂಡಿದ್ದಾರೆ. ದೇವೇಗೌಡರು, ಕುಮಾರಣ್ಣ, ರೇವಣ್ಣ ಎಲ್ಲಾ ನಿಮ್ಮಂತಹ ಪುಣ್ಯವಂತರಿಂದ ಉಳಿದಿದ್ದಾರೆ. ಪಾಪ ಪ್ರಜ್ವಲ್ ಗೂ ಏನೂ ಗೊತ್ತಾಗಲ್ಲ. ನಮ್ಮ ದುಡ್ಡು ತಗೊಂಡು ಬೇರೆಲ್ಲೋ ಹಾಕಿದ್ದರು. ಅವರೆಲ್ಲಾ ನನ್ನ ಕೈಗೆ ಸಿಗದೇ ಎಲ್ಲಿಗೆ ಹೋಗ್ತಾರೆ. ಎಲ್ಲದಕ್ಕೂ ಮೂರು ವರ್ಷ ಕಾಯಿರಿ. ಆಮೇಲೆ ಎಲ್ಲದಕ್ಕೂ ಬಡ್ಡಿ ಸಮೇತ ತೀರಿಸ್ತೀನಿ ಎಂದಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

Read More

ಮೈಸೂರು: ದಸರಾ ಸಂಭ್ರಮಕ್ಕೆ ಕರೆತರಲಾಗಿರುವ ಆನೆಗಳು ಕಾದಾಡುತ್ತಾ ರಸ್ತೆಗೆ ಬಂದಿರುವ ಘಟನೆ ಅರಮನೆಯ ಮುಖ್ಯದ್ವಾರದ ಬಳಿಯಲ್ಲಿ ನಡೆದಿದೆ. ಘಟನೆಯಿಂದಾಗಿ ಕೆಲ ಕಾಲ ಆತಂಕದ ಪರಿಸ್ಥಿತಿ ಸೃಷ್ಟಿಯಾಯಿತು. ಧನಂಜಯ ಆನೆ ಕಂಜನ್ ಮೇಲೆ ದಾಳಿ ನಡೆಸಿದೆ. ಇದರಿಂದ ಬೆದರಿದ ಕಂಜನ್ ಆನೆ ಮಾವುತನಿಲ್ಲದೇ ಅರಮನೆಯ ಮುಖ್ಯದ್ವಾರದಿಂದ ನೇರವಾಗಿ ರಸ್ತೆಗೇ ಬಂದಿದೆ. ಅದರ ಹಿಂದೆಯೇ ಧನಂಜಯ ಆನೆ ಕೂಡಾ ಬಂದಿದೆ. ಕಂಜನ್ ಆನೆ ದೊಡ್ಡಕೆರೆ ಮೈದಾನದ ಗೇಟ್ ತಳ್ಳಿಕೊಂಡು ರಸ್ತೆಯತ್ತ ಓಡಿದೆ. ಧನಂಜಯ ಆನೆ ಮೇಲಿದ್ದ ಮಾವುತ ಕಷ್ಟಪಟ್ಟು ಆತನನ್ನು ನಿಯಂತ್ರಿಸುವಲ್ಲಿ ಯಶಸ್ವಿಯಾಗಿದ್ದಾನೆ. ಧನಂಜಯ ಅಟ್ಟಾಡಿಸುವುದು ನಿಂತಾಗ ಕಂಜನ್ ಆನೆ ಕೂಡಾ ನಿಂತಿದ್ದಾನೆ. ಈ ವಿಡಿಯೋ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

Read More

ಬೆಂಗಳೂರು: ಗಣೇಶ ವಿಸರ್ಜನೆ ಮೆರವಣಿಗೆ ಸಂದರ್ಭದಲ್ಲಿ ಗಲಾಟೆ ವಿಚಾರವಾಗಿ ಮಾಧ್ಯಮಗಳು ಪ್ರಶ್ನಿಸಿದಾಗ ಸಿಎಂ ಸಿದ್ದರಾಮಯ್ಯ ಗರಂ ಆದ ಘಟನೆ ನಡೆಯಿತು. ಗಣೇಶ ವಿಸರ್ಜನೆ ವೇಳೆ ನಡೆದ ಗಲಭೆಗಳ ಬಗ್ಗೆ ಏನು ಹೇಳ್ತೀರಿ ಎಂದು ಪತ್ರಕರ್ತರು ಪ್ರಶ್ನಿಸಿದ ವೇಳೆ ಸಿಎಂ ಗರಂ ಆದರು. ರಾಜ್ಯದಲ್ಲಿ ಎಷ್ಟು ಗಣೇಶ ಮೂರ್ತಿಗಳಿತ್ತಯ್ಯಾ? ಸುಮಾರು 40 ಸಾವಿರ ಮೂರ್ತಿಗಳನ್ನಿಟ್ಟಿದ್ರು. ಅದರಲ್ಲಿ ಗಲಭೆಯಾಗಿದ್ದು ಕೇವಲ ಎರಡು ಕಡೆ ಮಾತ್ರ. ಒಂದು ನಾಗಮಮಂಗಲದಲ್ಲಿ ಇನ್ನೊಂದು ದಾವಣಗೆರೆಯಲ್ಲಿ. ದಾವಣಗೆರೆಯಲ್ಲಿ ಬರೀ ಕಲ್ಲು ತೂರಾಟ ಆಗಿತ್ತಷ್ಟೇ. ಆದರೆ ನೀವು ಎಲ್ಲಾ ಕಡೆ ಗಲಾಟೆ ಆಗಿದೆ ಎನ್ನುವ ಹಾಗೆ ಪ್ರಶ್ನಿಸುತ್ತಿದ್ದೀರಿ. ಎರಡು ಗಲಭೆ ಪ್ರಕರಣ ಅಂತ ಮಾತ್ರ ಹೇಳಿ ಎಂದು ಮಾಧ್ಯಮಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಈ ಎಲ್ಲಾ ಘಟನೆಗಳ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ತಪ್ಪಿತಸ್ಥರಿಗೆ ಶಿಕ್ಷೆ ಕೊಡಿಸುವಂತೆ ಪೊಲೀಸರಿಗೆ ಫ್ರೀ ಹ್ಯಾಂಡ್ ಕೊಟ್ಟಿದ್ದೇವೆ. ಅವರು ಎಲ್ಲಾ ಮಾಡ್ತಾರೆ. ಈ ಗಲಭೆ ವಿಚಾರವನ್ನು ಬಿಜೆಪಿಯವರು ದೊಡ್ಡದು ಮಾಡುತ್ತಿದ್ದಾರೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ. ನಮ್ಮತುಮಕೂರಿನ…

Read More

ಬೆಂಗಳೂರು : ಹಿಂದೆಂದೂ ಘಟಿಸದ ರೀತಿಯಲ್ಲಿ ರಾಜ್ಯದಲ್ಲಿ ಗಣೇಶ ಉತ್ಸವದ ಮೆರವಣಿಗೆಗಳ ಮೇಲೆ ವ್ಯವಸ್ಥಿತವಾಗಿ ದಾಳಿ ನಡೆಯುತ್ತಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಕಿಡಿಕಾರಿದ್ದಾರೆ. ಹಿಂದೂ ವಿರೋಧಿ ಶಕ್ತಿಗಳು ಸಮಾಜದ ಶಾಂತಿ ಸುವ್ಯವಸ್ಥೆಗೆ ಭಂಗ ತಂದು ಅಶಾಂತಿಯ ವಾತಾವರಣ ಸೃಷ್ಟಿಸಲು ವ್ಯವಸ್ಥಿತವಾಗಿ ತೊಡಗಿವೆ. ಸರಣಿ ಘಟನೆಗಳನ್ನು ಗಮನಿಸಿದರೆ ಹಿಂದೂ ಧಾರ್ಮಿಕ ಆಚಾರ–ವಿಚಾರಗಳನ್ನು ದಮನ ಮಾಡಲು ಒಂದು ವ್ಯವಸ್ಥಿತ ಷಡ್ಯಂತ್ರ ಈ ರಾಜ್ಯದಲ್ಲಿ ನಡೆಯುತ್ತಿರುವಂತೆ ಕಾಣುತ್ತಿದೆ ಎಂದರು. ಕಣ್ಣು, ಕಿವಿ ಇವೆರಡನ್ನು ಮುಚ್ಚಿಕೊಂಡಿರುವ ಕಾಂಗ್ರೆಸ್ ಸರ್ಕಾರದ ಕಾನೂನು ಸುವ್ಯವಸ್ಥೆ ತಿಳಿಗೇಡಿಗಳ ವ್ಯೂಹವನ್ನು ಭೇದಿಸಿ ಸಮಾಜದಲ್ಲಿ ಶಾಂತಿ, ಸುವ್ಯವಸ್ಥೆ ನೆಲೆಸುವ ನಿಟ್ಟಿನಲ್ಲಿ ಗಮನ ನೀಡುವ ಬದಲು ಧಾರ್ಮಿಕ ಶ್ರದ್ಧೆಯ ಗಣೇಶೋತ್ಸವದ ಮೆರವಣಿಗೆಗಳನ್ನು ಹತ್ತಿಕ್ಕಲು ಪ್ರಯತ್ನಿಸುತ್ತಿರುವುದು ನಾಚಿಕೆಗೇಡಿನ ಕ್ರಮವಾಗಿದೆ. ಎಷ್ಟರಮಟ್ಟಿಗೆ ಪೊಲೀಸ್ ವ್ಯವಸ್ಥೆ ಪಕ್ಷಪಾತಿ ಹಾಗೂ ನಿಷ್ಕ್ರಿಯವಾಗಿದೆ ಎಂದರೆ, ತುಮಕೂರು ವಿಶ್ವವಿದ್ಯಾನಿಲಯದ ಕುಲಸಚಿವರು ತುಮಕೂರಿನ ಗಣೇಶೋತ್ಸವದ ಮೆರವಣಿಗೆಗಳಲ್ಲಿ ವಿದ್ಯಾರ್ಥಿಗಳು ಭಾಗವಹಿಸದಂತೆ ನಿರ್ಬಂಧಿಸುವ ಹೇಡಿತನವನ್ನು ಪ್ರದರ್ಶಿಸಿದ್ದಾರೆ ಎಂದು ಅವರು ಆರೋಪಿಸಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು…

Read More

ಬೆಂಗಳೂರು: ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಶಾಸಕ ಮುನಿರತ್ನಗೆ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿ ಜನಪ್ರತಿನಿಧಿಗಳ ಕೋರ್ಟ್ ಆದೇಶ ಹೊರಡಿಸಿದೆ. ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಗೆ ಆರೋಪಿ ಮುನಿರತ್ನನನ್ನು  ಹಾಜರುಪಡಿಸಲಾಗಿತ್ತು. ವಿಚಾರಣೆ ನಡೆಸಿದ ಕೋರ್ಟ್ ಮುನಿರತ್ನಗೆ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿ ಆದೇಶ ಹೊರಡಿಸಿದೆ. 2020 ರಿಂದ 2022ರವರೆಗೆ ಶಾಸಕ ಮುನಿರತ್ನ ತನ್ನ ಮೇಲೆ ಅತ್ಯಾಚಾರ ಎಸಗಿದ್ದಾರೆ ಮತ್ತು ಬ್ಲ್ಯಾಕ್​ಮೇಲ್​ ಮಾಡಿದ್ದಾರೆ ಎಂದು ರಾಜರಾಜೇಶ್ವರಿ ನಗರದ 40 ವರ್ಷದ ಮಹಿಳೆ ದೂರು ದಾಖಲಿಸಿದ್ದರು. ಈ ಹಿನ್ನೆಲೆಯಲ್ಲಿ ಇಂದು ರಾಮನಗರ ಜಿಲ್ಲೆಯ ಕಗ್ಗಲಿಪುರ ಠಾಣೆ ಪೋಲೀಸರು ಬಿಜೆಪಿ ಶಾಸಕ ಮುನಿರತ್ನ ಅವರನ್ನು ಮತ್ತೆ ಬಂಧಿಸಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

Read More