Subscribe to Updates
Get the latest creative news from FooBar about art, design and business.
- ತುಮಕೂರು: ಕವಿ ಡಾ. ಸಿದ್ದಲಿಂಗಯ್ಯ ಪುಣ್ಯಸ್ಮರಣೆ ಹಾಗೂ ಪ್ರೊ. ಬಿ. ಕೃಷ್ಣಪ್ಪ ಜನ್ಮದಿನಾಚರಣೆ
- ಮಂತ್ರಾಲಯದಲ್ಲಿ ಜೂನ್ 26ಕ್ಕೆ “ರಾಯರ ದರ್ಶನ” ಆಲ್ಬಮ್ ಬಿಡುಗಡೆ: ಕಾಡು ಸಿದ್ದೇಶ್ವರ ಮಠದ ಶ್ರೀಗಳಿಗೆ ಆಹ್ವಾನ
- ಲೋಕಾಯುಕ್ತರಿಂದ 56 ಜನರ ಅಹವಾಲು ಸ್ವೀಕಾರ: ಜಮೀನು ಖಾಸಗಿ ವ್ಯಾಜ್ಯಗಳೇ ಹೆಚ್ಚು.. ಪಡಿತರ ಕಾರ್ಡಿನ ಮಾಹಿತಿಯೇ ನೀಡಲ್ವಂತೆ!
- ಪಾವಗಡ: ನಿಯಮ ಉಲ್ಲಂಘನೆ, ವೆಂಕಟೇಶ್ವರ ಕಲ್ಲುಗಣಿ ಗುತ್ತಿಗೆ ರದ್ದುಪಡಿಸಿ ಇಲಾಖೆ ಖಡಕ್ ಆದೇಶ! | ಶಾಸಕ ವೆಂಕಟೇಶ್ ವಿರುದ್ಧ ಎಫ್ ಐಆರ್ ದಾಖಲಿಸಲು ಒತ್ತಾಯ
- ಜುಲೈ 15ರಂದು ಎಲ್ಲಾ ರೈತಪರ ಸಂಘಟನೆಗಳು, ಮುಖಂಡರೊಂದಿಗೆ ಹೇಮಾವತಿ ನಾಲಾ ವೀಕ್ಷಣೆ: ಶಾಸಕ ಸಿ.ಬಿ. ಸುರೇಶ್ ಬಾಬು ಕರೆ
- ಪಾವಗಡ: ಸಕಾಲಕ್ಕೆ ಸಿಗದ ಚಿಕಿತ್ಸೆ; ಹಾವು ಕಚ್ಚಿ ಬಿ.ಫಾರ್ಮಸಿ ವಿದ್ಯಾರ್ಥಿ ದುರ್ಮರಣ
- ಐದು ಕೋಟಿ ವೆಚ್ಚದ ಅಭಿವೃದ್ದಿ ಕಾಮಗಾರಿಗಳಿಗೆ ಶಾಸಕ ಡಾ.ಎಚ್.ಡಿ.ರಂಗನಾಥ್ ಗುದ್ದಲಿ ಪೂಜೆ
- ಕ್ಷೇತ್ರದ ವಿದ್ಯಾರ್ಥಿಗಳಿಗೆ ಎಸ್.ಬಿ.ಚಾರಿಟಬಲ್ ಟ್ರಸ್ಟ್ನಿಂದ ಉಚಿತ ಸಿಇಟಿ, ನೀಟ್ ತರಬೇತಿ: ಶಾಸಕ ಸಿ.ಬಿ. ಸುರೇಶ್ ಬಾಬು
Author: admin
ತುಮಕೂರು: ಬೆಸ್ಕಾಂ ವಾಣಿಜ್ಯ, ಕಾರ್ಯ ಮತ್ತು ಪಾಲನಾ ವಿಭಾಗೀಯ ಕಚೇರಿಯಿಂದ ತ್ರೈಮಾಸಿಕ ನಿರ್ವಹಣಾ ಕಾರ್ಯ ಕೈಗೊಂಡಿರುವ ಹಿನ್ನೆಲೆಯಲ್ಲಿ ಸೆಪ್ಟೆಂಬರ್ 28 ಹಾಗೂ 29ರಂದು ಬೆಳಿಗ್ಗೆ 10 ರಿಂದ ಸಂಜೆ 5 ಗಂಟೆವರೆಗೆ ವಿದ್ಯುತ್ ವ್ಯತ್ಯಯ ಉಂಟಾಗಲಿದೆ. ಸೆಪ್ಟೆಂಬರ್ 28ರಂದು ತುಮಕೂರು ಹಾಗೂ ಕೋರಾ ಉಪಸ್ಥಾವರ ಮತ್ತು ಸೆಪ್ಟೆಂಬರ್ 29ರಂದು ಹೆಬ್ಬೂರು ಹಾಗೂ ತಿಮ್ಮಸಂದ್ರ ಉಪಸ್ಥಾವರಗಳಿಂದ ಹೊರಹೊಮ್ಮುವ ಎಲ್ಲಾ 11ಕೆವಿ ಪೂರಕಗಳಿಗೆ ಒಳಪಡುವ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದ್ದು, ಗ್ರಾಹಕರು ಸಹಕರಿಸಬೇಕೆಂದು ಕಾರ್ಯನಿರ್ವಾಹಕ ಇಂಜಿನಿಯರ್ ಪ್ರಶಾಂತ್ ಕೂಡ್ಲಿಗಿ ಮನವಿ ಮಾಡಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q
ತುಮಕೂರು: ಸರ್ಕಾರಿ ಶಾಲೆಗಳಲ್ಲಿ ಎಲ್ಲ ಸೌಲಭ್ಯಗಳೂ ಇದ್ದು, ಅಲ್ಲಿಗೇ ಮಕ್ಕಳನ್ನು ಕಳಿಸುವ ಮೂಲಕ ಅವರಲ್ಲಿ ಭಾರತೀಯ ಮೌಲ್ಯಗಳನ್ನು ಅಳವಡಿಸುವಂತೆ ಮಾಡಬೇಕು ಎಂದು ತುಮಕೂರು ಗ್ರಾಮಾಂತರ ಶಾಸಕ ಬಿ.ಸುರೇಶ್ ಗೌಡರು ಬುಧವಾರ ಕರೆ ನೀಡಿದರು. ತುಮಕೂರು ಗ್ರಾಮಾಂತರ ವಿಧಾನಸಭಾ ಕ್ಷೇತ್ರದ ನಾಗವಲ್ಲಿ ಸರ್ಕಾರಿ ಪ್ರೌಢಶಾಲೆಯಲ್ಲಿ ಮೊಟ್ಟೆ ವಿತರಣಾ ಕಾರ್ಯಕ್ರಮದಲ್ಲಿ ಶಾಸಕ ಬಿ.ಸುರೇಶಗೌಡರು ಭಾಗವಹಿಸಿ ಮಾತನಾಡಿದರು . ಸರ್ಕಾರಿ ಶಾಲೆಯ ಮಕ್ಕಳಿಗೆ ಅಜೀಂ ಪ್ರೇಮ್ ಜಿ ಪ್ರತಿಷ್ಠಾನದ ವತಿಯಿಂದ ವಾರದಲ್ಲಿ ಆರು ದಿನ ಮೊಟ್ಟೆ, ಚಿಕ್ಕಿ ಮತ್ತು ಬಾಳೆ ಹಣ್ಣು ನೀಡುವ ಕಾರ್ಯಕ್ರಮವನ್ನು ನಾಗವಲ್ಲಿ ಮತ್ತು ಬೆಳ್ಳಾವೆ ಸರ್ಕಾರಿ ಶಾಲೆಗಳಲ್ಲಿ ಉದ್ಘಾಟಿಸಿ ಅವರು ಮಾತನಾಡಿದರು. ಶಾಲೆಯ ಮಕ್ಕಳಿಗೆ ಅವರೇ ಆಹಾರ ಬಡಿಸಿ ಮಕ್ಕಳು ಮತ್ತು ಶಿಕ್ಷಕರ ಜತೆಗೆ ಸಂವಾದ ನಡೆಸಿದರು. ಸರ್ಕಾರಿ ಶಾಲೆಗಳ ಮಕ್ಕಳಿಗೆ ಸರ್ಕಾರದ ವತಿಯಿಂದ ಸಮವಸ್ತ್ರ, ಶೂ, ಮಧ್ಯಾಹ್ನದ ಊಟ ಮಾತ್ರವಲ್ಲದೇ ಇದೀಗ ಮೊಟ್ಟೆಯಂಥ ಪೌಷ್ಟಿಕ ಆಹಾರ ವಿತರಿಸುವ ಕಾರ್ಯಕ್ರಮ ಆರಂಭವಾಗಿದೆ. ಸರ್ಕಾರಿ ಶಾಲೆಗಳಲ್ಲಿ ಪ್ರತಿಭಾವಂತ ಶಿಕ್ಷಕರು ಇರುತ್ತಾರೆ. ಈ ಶಾಲೆಗಳಲ್ಲಿ…
ತುಮಕೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ರಾಜೀನಾಮೆ ಕುರಿತು ಹೋರಾಟ ಶುರುವಾಗಿದೆ. ಗ್ರಾಸ್ ರೂಟ್ ಲೆವೆಲ್ ನಲ್ಲಿ ಮುಂದುವರಿಯುತ್ತೆ ಎಂದು ತುಮಕೂರು ನಗರ ಬಿಜೆಪಿ ಶಾಸಕ ಜ್ಯೋತಿ ಗಣೇಶ ತಿಳಿಸಿದ್ದಾರೆ. ತುಮಕೂರಿನಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಈ ಹಿಂದೆ ಮಾಜಿ ಸಿಎಂ ಬಿಎಸ್ ವೈ ಆ ಸಂದರ್ಭದಲ್ಲಿ ರಾಜೀನಾಮೆ ಕೊಟ್ಟಿದ್ದರು. ಹೀಗಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೂಡ ಪ್ರಸ್ತುತ ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಬೇಕು ಎಂದು ಹೇಳಿದ್ದಾರೆ. ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್ ವಿಚಾರದಲ್ಲಿ ಸಿದ್ದರಾಮಯ್ಯ ರಾಜೀನಾಮೆಗೆ ಆಗ್ರಹಿಸಿ ನಿನ್ನೆ ಎಲ್ಲಾ ಜಿಲ್ಲೆಗಳಲ್ಲಿ ಪ್ರತಿಭಟನೆ ಮಾಡಿದ್ದೇವೆ ಎಂದರು. ಜೀವನದಾದ್ಯಂತ ನೀವು ನೈತಿಕತೆಯನ್ನ ಮಾತನಾಡಿಕೊಂಡು ಬಂದಿದ್ದೀರ. ಎನ್ ಕ್ವೈರಿ ಆಗಿ ಕ್ಲೀನ್ ಚಿಟ್ ಆದ್ಮೇಲೆ ನೀವು ಬನ್ನಿ ಎಂದು ಸಿದ್ದರಾಮಯ್ಯ ಅವರಿಗೆ ತಿಳಿಸಿದರು. ಎನ್ ಕ್ವೇರಿ ಎಲ್ಲ ನಿಮ್ಮ ಅಂಡರ್ ನಲ್ಲೇ ನಡೆಯುವುದರಿಂದ, ರಾಜ್ಯಧರ್ಮದಂತೆ ನೀವು ರಾಜೀನಾಮೆ ನೀಡಿ, ತುರ್ತಾಗಿ ರಾಜೀನಾಮೆ ಕೊಟ್ಟು ತನಿಖೆಯನ್ನು ಎದುರಿಸಬೇಕು ಎಂದು ಆಗ್ರಹಿಸಿದರು. ರಾಜಕೀಯದ ಭಂಡತನಕ್ಕೆ ನಾವು…
ಹೆಚ್.ಡಿ.ಕೋಟೆ: ಹೆಚ್.ಡಿ.ಕೋಟೆ ತಾಲ್ಲೂಕಿನಲ್ಲಿ ಗ್ರಾಮಲೆಕ್ಕಾಧಿಕಾರಿಗಳು ವೃತ್ತಗಳಲ್ಲಿ ಕಾರ್ಯನಿರ್ವಹಿಸದೇ ನಿರ್ಲಕ್ಷ್ಯ ವಹಿಸುತ್ತಿರುವ ಬಗ್ಗೆ ಆರೋಪ ಕೇಳಿ ಬಂದಿದೆ. ಹೆಚ್.ಡಿ.ಕೋಟೆ ತಾಲ್ಲೂಕಿನಲ್ಲಿ ತಮ್ಮ ವ್ಯಾಪ್ತಿಗೆ ಒಳಪಡುವ ವೃತ್ತಗಳಲ್ಲಿ ಕಾರ್ಯನಿರ್ವಾಹಿಸದೆ ತಾಲ್ಲೂಕು ಕೇಂದ್ರ ಸ್ಥಾನದಲ್ಲಿ ಕುಳಿತು ಗ್ರಾಮಲೆಕ್ಕಾಧಿಕಾರಿಗಳು ಸಾರ್ವಜನಿಕರನ್ನು ಅಲೆದಾಡಿಸುತ್ತಿದ್ದಾರೆ. ಇದನ್ನು ಕಂದಾಯ ಇಲಾಖೆ ಮೇಲಾಧಿಕಾರಿಗಳು ಕಂಡು ಕಾಣದಂತೆ ಕುಳಿತಿದ್ದಾರೆ ಎನ್ನುವ ಆರೋಪ ಕೇಳಿ ಬಂದಿದೆ. ಅಧಿಕಾರಿಗಳ ಬೇಜವಾಬ್ದಾರಿಯಿಂದಾಗಿ ಸಾರ್ವಜನಿಕರು 30–40 ಕಿಲೋ ಮೀಟರ್ ದೂರದಿಂದ ಹಣ ಖರ್ಚುಮಾಡಿಕೊಂಡು ಬರಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ. ಜಾತಿಪ್ರಮಾಣ ಪತ್ರ, ಆದಾಯ ಪ್ರಮಾಣ ಪತ್ರ ಇತರೆ ದಾಖಲೆಗಳಿಗೆ ಗ್ರಾಮಲೆಕ್ಕ ಅಧಿಕಾರಿಗಳನ್ನು ಹುಡುಕಿಕೊಂಡು ಕೇಂದ್ರ ಸ್ಥಾನಕ್ಕೆ ಜನರು ಬರುವಂತಹ ಸಮಸ್ಯೆ ಸೃಷ್ಟಿಯಾಗಿದೆ ಎಂದು ಸಾರ್ವಜನಿಕರು ದೂರಿದ್ದಾರೆ. ಇನ್ನಾದರೂ ಸರ್ಕಾರದ ಸುತ್ತೋಲೆ ಪ್ರಕಾರ ಅಧಿಕಾರಿಗಳು ಕಾರ್ಯ ನಿರ್ವಹಿಸುವರೇ ಎನ್ನುವುದನ್ನು ಕಾದುನೋಡಬೇಕಿದೆ. ವರದಿ: ಮಲಾರ ಮಹದೇವಸ್ವಾಮಿ ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296
ಪಾವಗಡ: ಪಾವಗಡ ತಾಲೂಕಿನ ನಾಗಲಮಡಿಕೆಯಲ್ಲಿ ನೆಲೆಸಿರುವಂತಹ ಸುಪ್ರಸಿದ್ಧ ಅಂತ್ಯ ಸುಬ್ರಹ್ಮಣ್ಯೇಶ್ವರ ದೇವಸ್ಥಾನಕ್ಕೆ ಬುಧವಾರ ಮಧ್ಯಾಹ್ನ ಒಂದು ಗಂಟೆಯ ಸಂದರ್ಭದಲ್ಲಿ ರಾಜ್ಯ ಸರ್ಕಾರದ ಮುಜರಾಯಿ ಇಲಾಖೆಯ ಆಯುಕ್ತರಾದ ವೆಂಕಟೇಶ್ ಎಂ.ವಿ. ಅವರು ಭೇಟಿ ನೀಡಿ ದೇವಸ್ಥಾನದ ಸ್ಥಿತಿಗತಿಯನ್ನು ಪರಿಶೀಲಿಸಿದರು. ದೇವಸ್ಥಾನವನ್ನ ಪರಿಶೀಲಿಸಿ, ನಂತರ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಹಲವು ವರ್ಷಗಳಿಂದ ದೇವಸ್ಥಾನದ ಪುನಶ್ಚೇತನಕ್ಕಾಗಿ ಸ್ಥಳೀಯ ಶಾಸಕರು, ಹೋರಾಟಗಾರರು ಸೇರಿದಂತೆ ಅನೇಕರಿಂದ ಮನವಿ ಮಾಡಲಾಗಿತ್ತು. ಅದಾಗಿಯೂ ಕೆಲ ತಿಂಗಳುಗಳ ಹಿಂದೆ ರಾಜ್ಯಮಟ್ಟದ ವಾಸ್ತುಶಿಲ್ಪ ಸಮಿತಿಯಲ್ಲಿ ಪೂರ್ವಭಾವಿ ಚರ್ಚೆಯಾಗಿತ್ತು, ದೇವಸ್ಥಾನದ ಪುನಶ್ಚೇತನ ಅವಶ್ಯಕತೆ ಇದೆ ಎಂದು ಸಮಿತಿ ಮನಗಂಡಿದೆ, ಈ ಹಿನ್ನೆಲೆಯಲ್ಲಿ ಇಂದು ನಾನು ಆಗಮ ಶಾಸ್ತ್ರಜ್ಞರು ವಾಸ್ತುಶಿಲ್ಪಿಗಳು ಆಗಮಿಸಿದ್ದೇವೆ, ಸದ್ಯ ಈ ದೇವಸ್ಥಾನಕ್ಕೆ ಸೇರಿರುವ 12 ಎಕರೆ ಜಮೀನಿದೆ ಎಂದು ತಹಶೀಲ್ದಾರ್ ತಿಳಿಸಿದ್ದಾರೆ. ಮುಂದಿನ ದಿನಗಳಲ್ಲಿ ಮತ್ತೊಂದು ಸಭೆ ನಡೆಸಿ ಸಾಧಕ ಬಾಧಕಗಳನ್ನು ಚರ್ಚಿಸಿ ಮುಂದಿನ ನಿರ್ಣಯಕ್ಕೆ ಬರಲಾಗುವುದು ಎಂದರು. ಈ ಸಂದರ್ಭದಲ್ಲಿ ಮಾಜಿ ಸಚಿವ ವೆಂಕಟರಮಣಪ್ಪ, ಹಿರಿಯ ಆಗಮ ಪಂಡಿತ ವಿಜಯ್ ಕುಮಾರ್,…
ಆಂಧ್ರಪ್ರದೇಶ: ಲಡ್ಡು ಬಗ್ಗೆ ಮಾತನಾಡಿದ್ದಕ್ಕೆ ಖ್ಯಾತ ತಮಿಳು ನಟ ಕಾರ್ತಿ ವಿರುದ್ಧ ಆಂಧ್ರಪ್ರದೇಶದ ಡಿಸಿಎಂ, ನಟ ಪವನ್ ಕಲ್ಯಾಣ್ ಆಕ್ರೋಶ ವ್ಯಕ್ತಪಡಿಸಿದ ಘಟನೆ ನಡೆದಿದ್ದು, ಈ ಬೆಳವಣಿಯ ನಂತರ ನಟ ಕಾರ್ತಿ ಕ್ಷಮೆಯಾಚಿಸಿ, ತಮ್ಮ ಪ್ರಬುದ್ಧತೆ ತೋರಿದರು. ಹೈದರಾಬಾದ್ನಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಕಾರ್ಯಕ್ರಮ ನಿರೂಪಕಿ ನಟ ಕಾರ್ತಿ ಅವರಿಗೆ ಲಡ್ಡು ಬಗ್ಗೆ ಬಲವಂತವಾಗಿ ಪ್ರಶ್ನೆ ಕೇಳಿದ್ದಾರೆ. ಈ ವೇಳೆ ನಾವು ಈ ಲಡ್ಡು ಬಗ್ಗೆ ಮಾತನಾಡಬಾರದು, ಇದು ಸೂಕ್ಷ್ಮ ವಿಷಯ, ನಮಗೆ ಬೇಡ ಎಂದು ಕಾರ್ತಿ ಹೇಳಿದ್ದರು. ಇದು ವಿವಾದ ಮಾಡುವಂತಹ ವಿಚಾರವಲ್ಲವಾದರೂ, ಕಾರ್ತಿ ವಿರುದ್ಧ ಡಿಸಿಎಂ ಪವನ್ ಕಲ್ಯಾಣ್ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಚಿತ್ರರಂಗದ ವ್ಯಕ್ತಿಗಳು ಈ ವಿಷಯವನ್ನು ಚರ್ಚಿಸಲು ಬಯಸಿದರೆ, ಬೆಂಬಲಿಸಬೇಕು, ಇಲ್ಲದಿದ್ದರೆ ಯಾವುದೇ ಪ್ರತಿಕ್ರಿಯೆ ನೀಡಬಾರದು ಎಂದು ಹೇಳಿದರು. ಪವನ್ ಕಲ್ಯಾಣ್ ಅವರ ಪ್ರತಿಕ್ರಿಯೆ ವೈರಲ್ ಆದ ಕೂಡಲೇ ಕಾರ್ತಿ ಸಾಮಾಜಿಕ ಮಾಧ್ಯಮದಲ್ಲಿ ಕ್ಷಮೆಯಾಚಿಸಿದ್ದಾರೆ. ಅವರ ಟ್ವೀಟ್ ಹೀಗಿದೆ: ಪವನ್ ಕಲ್ಯಾಣ್ ಸರ್, ನಿಮಗೆ ಆಳವಾದ ಗೌರವಗಳೊಂದಿಗೆ, ಯಾವುದೇ…
ಬೆಂಗಳೂರು: ಮುಡಾ ಹಗರಣ ವಿಚಾರವಾಗಿ ಪಾದಯಾತ್ರೆಯಲ್ಲಿ ನಾನು ಭಾಗಿಯಾಗಿದ್ದು ನಿಜ. ಆದರೆ, ಸಿದ್ದರಾಮಯ್ಯ ರಾಜೀನಾಮೆಗೆ ಆಗ್ರಹಿಸಿಲ್ಲ ಎಂದು ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅಚ್ಚರಿಯ ಹೇಳಿಕೆ ನೀಡಿದ್ದಾರೆ. ಮುಡಾ ಹಗರಣ ಪ್ರಾಸಿಕ್ಯೂಶನ್ ಅನುಮತಿ ನೀಡಿರುವುದನ್ನು ಪ್ರಶ್ನಿಸಿದ್ದ ಸಿದ್ದರಾಮಯ್ಯ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು. ಆ ಅರ್ಜಿಯನ್ನು ಕೋರ್ಟ್ ವಜಾಗೊಳಿಸಿತ್ತು. ಇದರ ಬೆನ್ನಲ್ಲೇ ಮಾಧ್ಯಮಗಳ ಪ್ರಶ್ನೆಗಳಿಗೆ ಕುಮಾರಸ್ವಾಮಿ ಅಚ್ಚರಿಯ ಉತ್ತರ ನೀಡಿದ್ದಾರೆ. ನಾನು ಅಂದು ಕೂಡ ಸಿದ್ದರಾಮಯ್ಯನವರ ರಾಜೀನಾಮೆ ಕೇಳಿರಲಿಲ್ಲ, ಈಗಲೂ ಕೇಳುವುದಿಲ್ಲ. ದೇಶದ ಕಾನೂನು ಎಲ್ಲರಿಗೂ ರಕ್ಷಣೆ ಕೊಡುತ್ತದೆ. ಹಾಗೆಂದು ಕಾನೂನು ಬಾಹಿರ ಚಟುವಟಿಕೆ ಮಾಡಿದ್ದರೆ, ನ್ಯಾಯಾಲಯ ಕಾನೂನು ನಿರ್ಧಾರ ತೆಗೆದುಕೊಳ್ಳುತ್ತದೆ ಎಂದು ಕುಮಾರಸ್ವಾಮಿ ಹೇಳಿದರು. ಬಿಜೆಪಿ ಜೊತೆಗಿನ ಪಾದಯಾತ್ರೆಯ ವೇಳೆಯಲ್ಲೂ ಜೆಡಿಎಸ್ ಪಾದಯಾತ್ರೆಯಲ್ಲಿ ಭಾಗಿಯಾಗಲು ಹಿಂದೇಟು ಹಾಕಿತ್ತು. ಹೆಚ್.ಡಿ.ಕುಮಾರಸ್ವಾಮಿ ಬಿಜೆಪಿಯ ಒತ್ತಡಕ್ಕೆ ಪಾದಯಾತ್ರೆಯಲ್ಲಿ ಭಾಗಿಯಾದಂತಿತ್ತು. ಇದೀಗ ಅವರು ಸಿದ್ದರಾಮಯ್ಯನವರ ರಾಜೀನಾಮೆ ಕೇಳುವುದಿಲ್ಲ ಎನ್ನುವ ಪ್ರತಿಕ್ರಿಯೆ ನೀಡಿರುವುದು ರಾಜಯಕೀಯ ವಲಯದಲ್ಲಿ ಹೊಸ ಚರ್ಚೆಗೆ ಗ್ರಾಸವಾಗಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು…
ಬೆಂಗಳೂರು: ಸಿದ್ದರಾಮಯ್ಯ ಅವರು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡುವ ಪ್ರಶ್ನೆಯೇ ಇಲ್ಲ ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದರು. ಮುಡಾ ಹಗರಣ ಸಂಬಂಧ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿರುವುದನ್ನು ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದ್ದು, ಈ ಸಂಬಂಧ ಮಾಧ್ಯಮಗಳಿಗೆ ಅವರು ಪ್ರತಿಕ್ರಿಯೆ ನೀಡಿದರು. ಸಿದ್ದರಾಮಯ್ಯ ಅವರಿಗೆ ಸಂಪುಟ ಸಹೋದ್ಯೋಗಿಗಳಿಂದ ಸಂಪೂರ್ಣ ಬೆಂಬಲ ವ್ಯಕ್ತವಾಗುತ್ತಿದೆ. ಅವರು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡುವ ಅಗತ್ಯವೇ ಇಲ್ಲ ಎಂದು ಅವರು ಹೇಳಿದರು. ನನ್ನನ್ನು ಹೇಗೆ ಪಿತೂರಿ ಮಾಡಿ ಜೈಲಿಗೆ ಕಳುಹಿಸಲಾಗಿತ್ತು. ಅದೇ ಷಡ್ಯಂತ್ರವನ್ನು ಬಿಜೆಪಿಯವರು ಸಿದ್ದರಾಮಯ್ಯ ವಿರುದ್ಧ ಮಾಡಿದ್ದಾರೆ. ತಪ್ಪು ಮಾಡದ ಸಿದ್ದರಾಮಯ್ಯ ಅವರು ಯಾವುದೇ ಹಗರಣದಲ್ಲಿ ಭಾಗಿಯಾಗಿಲ್ಲ ಎಂದು ಅವರು ಹೇಳಿದರು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q
ಬೆಂಗಳೂರು: ರಾಜ್ಯವನ್ನೇ ಬೆಚ್ಚಿಬೀಳಿಸಿದ ವಯ್ಯಾಲಿಕಾವಲ್ ನ ಮಹಾಲಕ್ಷ್ಮಿ ಮರ್ಡರ್ ಕೇಸ್ ನಲ್ಲಿ ತನಿಖಾಧಿಕಾರಿಗಳಿಗೆ ಮೃತಳ ಮನೆಯಲ್ಲಿ ಮಹತ್ವದ ಸಾಕ್ಷಿಯೊಂದು ಲಭ್ಯವಾಗಿದೆಯಂತೆ! ವಯ್ಯಾಲಿಕಾವಲ್ ನ ಬಾಡಿಗೆ ಮನೆಯಲ್ಲಿ ವಾಸಿದ್ದ ಮಹಾಲಕ್ಷ್ಮೀ ಅದೇ ಮನೆಯ ಫ್ರಿಡ್ಜ್ ನಲ್ಲಿ ಪೀಸ್ ಪೀಸ್ ಆಗಿ ಪತ್ತೆಯಾಗಿದ್ದಳು. ಆದ್ರೆ, ಈ ಹತ್ಯೆಯಲ್ಲಿ 1ಕ್ಕಿಂತ ಹೆಚ್ಚು ಆರೋಪಿಗಳು ಇರುವ ಶಂಕೆ ವ್ಯಕ್ತವಾಗಿತ್ತು, ಇದಕ್ಕೆ ಪೂರಕವಾದ ದಾಖಲೆ ಇದೀಗ ಪೊಲೀಸರಿಗೆ ಲಭ್ಯವಾಗಿದೆಯಂತೆ. ಮೃತಳ ಮನೆಯ ಫ್ರಿಡ್ಜ್ ನಲ್ಲಿ ನಾಲ್ಕೈದು ಫಿಂಗರ್ ಪ್ರಿಂಟ್ ಪತ್ತೆಯಾಗಿದೆ. ಹೀಗಾಗಿ ಕೊಲೆಯಲ್ಲಿ ಹಲವರು ಭಾಗಿಯಾಗಿರುವ ಶಂಕೆ ವ್ಯಕ್ತವಾಗಿದೆ. ಈ ನಿಟ್ಟಿನಲ್ಲಿ ಪೊಲೀಸರು ತನಿಖೆ ಮುಂದುವರಿಸಿದ್ದಾರೆ. ವಿವಾಹೇತರ ಸಂಬಂಧದಲ್ಲಿ ಅಸಮಾಧಾನವಾಗಿದ್ದೇ ಕೊಲೆಗೆ ಕಾರಣವಿರಬಹುದೇ ಎನ್ನುವ ಶಂಕೆ ಮಹಾಲಕ್ಷ್ಮೀ ಹತ್ಯೆ ಪ್ರಕರಣದಲ್ಲಿ ಮೂಡಿದೆ. ಸದ್ಯ ಆರೋಪಿಗಳು ಉತ್ತರ ಪ್ರದೇಶಕ್ಕೆ ತೆರಳಿ ಸ್ಥಳ ಮರೆಸಿಕೊಂಡಿದ್ದು, ಪದೇ ಪದೇ ಸ್ಥಳ ಬದಲಾವಣೆ ಮಾಡಿಕೊಳ್ಳುತ್ತಿದ್ದಾರೆ ಎಂದು ಹೇಳಲಾಗಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ…
ಪಾವಗಡ: ಉತ್ತಮವಾದ ಆರೋಗ್ಯವನ್ನು ಗ್ರಾಮೀಣ ಭಾಗದ ಕಟ್ಟಕಡೆಯ ವ್ಯಕ್ತಿಗೂ ಕಲ್ಪಿಸಿಕೊಡುವ ಉದ್ದೇಶದಿಂದ ಗ್ರಾಮೀಣ ಭಾಗದಲ್ಲಿ ಉಚಿತ ಆರೋಗ್ಯ ತಪಾಸಣೆ ಶಿಬಿರ, ಕಣ್ಣಿನ ಶಸ್ತ್ರ ಚಿಕಿತ್ಸಾ ಶಿಬಿರಗಳನ್ನು ಪಂಚಾಯಿತಿ ಮಟ್ಟದಲ್ಲಿ ಆಯೋಜನೆ ಮಾಡುತ್ತಿದ್ದು ಸಾರ್ವಜನಿಕರು ಈ ಶಿಬಿರಗಳಲ್ಲಿ ಭಾಗವಹಿಸಿ ಸದುಪಯೋಗ ಪಡೆದುಕೊಳ್ಳುವಂತೆ ಪಾವಗಡ ಎಸ್ ಬಿ ಐ ವ್ಯವಸ್ಥಾಪಕ ಚಂದ್ರಶೇಖರ್ ತಿಳಿಸಿದರು. ಸೇವಾ ಟ್ರಸ್ಟ್, ಹೆಲ್ಪ್ ಸೊಸೈಟಿ, ಶಂಕರ ಕಣ್ಣಿನ ಆಸ್ಪತ್ರೆ ಬೆಂಗಳೂರು ಇವರ ಸಹಯೋಗದಲ್ಲಿ ಪಾವಗಡ ಪಟ್ಟಣ ಸಾರ್ವಜನಿಕ ಆಸ್ಪತ್ರೆಯಲ್ಲಿ ಹಮ್ಮಿಕೊಂಡಿದ್ದ ಉಚಿತ ಕಣ್ಣಿನ ತಪಾಸಣೆ ಮತ್ತು ಶಸ್ತ್ರ ಚಿಕಿತ್ಸಾ ಶಿಬಿರವನ್ನು ಉದ್ದೇಶಿಸಿ ಮಾತನಾಡಿದರು. ಇತ್ತೀಚಿನ ದಿನಗಳಲ್ಲಿ ತಿನ್ನುವ ಆಹಾರ, ಕುಡಿಯುವ ನೀರು, ಉಸಿರಾಡುವ ಗಾಳಿ ಕಲುಷಿತವಾಗಿದೆ ಪ್ರಸ್ತುತ ದಿನಗಳಲ್ಲಿ ಬರುವ ರೋಗಗಳು ಪ್ರಾಥಮಿಕ ಅಂತದಲ್ಲಿ ಹೆಚ್ಚಿನ ಪ್ರಭಾವ ಬೀರದಿದ್ದರೂ ಅವುಗಳನ್ನು ಕಡೆಗಣಿಸಿದ್ದಲ್ಲಿ ಮುಂದಿನ ದಿನಗಳಲ್ಲಿ ಮಾರಣಾಂತಿಕವಾಗಿ ಜೀವಕ್ಕೆ ಕತ್ತು ತರಬಹುದು. ಇಂದಿನ ಯುಗದಲ್ಲಿ ಮಕ್ಕಳು ಹೆಚ್ಚಾಗಿ ಟಿ.ವಿ. ಹಾಗೂ ಮೊಬೈಲ್ ಬಳಕೆಯಿಂದ ಕಣ್ಣಿನ ದೃಷ್ಟಿ ಅಪಾಯದ ಅಂಚಿಗೆ ತಲುಪುತ್ತಿದೆ. ಗ್ರಾಮೀಣ…