Author: admin

ತುಮಕೂರು:  ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿ ಆಕೆ ಗರ್ಭಿಣಿಯಾಗಲು ಕಾರಣನಾದ ಅಪರಾಧಿಗೆ ಅಧಿಕ ಜಿಲ್ಲಾ ಸತ್ರ ನ್ಯಾಯಾಲಯ ಎಫ್ ಟಿಎಸ್ ಸಿ(POCSO) 20 ವರ್ಷಗಳ ಜೈಲು ಶಿಕ್ಷೆ ಮತ್ತು 1 ಲಕ್ಷ ರೂಪಾಯಿಗಳ ದಂಡ ವಿಧಿಸಿ ತೀರ್ಪು ನೀಡಿದೆ. ಪಾವಗಡ ಪೊಲೀಸ್ ಠಾನೆ ಸರಹದ್ದಿನಲ್ಲಿ ಈ ಘಟನೆ ನಡೆದಿದ್ದು, ಮಹೇಶ್ ಬಾಬು(25) ಶಿಕ್ಷೆಗೊಳಪಟ್ಟ ಅಪರಾಧಿಯಾಗಿದ್ದಾನೆ. ಈತ 16 ವರ್ಷದ ಬಾಲಕಿಯನ್ನು  ಪ್ರೀತಿಸು ಎಂದು ಪೀಡಿಸಿ, ಆಕೆ ನಿರಾಕರಿಸಿದಾಗ ಆಕೆಯನ್ನು ಕೊಂಡು ಹೋಗಿ ಹಲವಾರು ಬಾರಿ ಲೈಂಗಿಕ ದೌರ್ಜನ್ಯ ಎಸಗಿದ್ದ. ಇದರ ಪರಿಣಾಮ ಬಾಲಕಿ ಗರ್ಭಿಣಿಯಾಗಿದ್ದಳು. ಈ ಪ್ರಕರಣ ಸಂಬಂಧ ಪೊಲೀಸ್ ಇನ್ಸ್ ಪೆಕ್ಟರ್ ಡಿ.ನಾಗರಾಜು ತನಿಖೆ ನಡೆಸಿ ಘನ ನ್ಯಾಯಾಲಯಕ್ಕೆ ದೋಷಾರೋಪಣಾ ಪಟ್ಟಿ ಸಲ್ಲಿಸಿದ್ದರು. ಅಭಿಯೋಜನೆಯ ಪರ ವಿಚಾರಣೆ ಮಾಡಲಾದ ಸಾಕ್ಷಿಗಳಿಂದ ಆರೋಪಿಯ ವಿರುದ್ಧ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ನ್ಯಾಯಾಧೀಶರು ಅಪರಾಧಿಗೆ 20 ವರ್ಷಗಳ ಸಜೆ, 1 ಲಕ್ಷ ರೂಪಾಯಿ ದಂಡ ವಿಧಿಸಿ ತೀರ್ಪು ನೀಡಿದ್ದಾರೆ. ನೊಂದ ಬಾಲಕಿಗೆ  ಜಿಲ್ಲಾ…

Read More

ತುಮಕೂರು: ಅಪ್ರಾಪ್ತ ವಯಸ್ಸಿನ ಬಾಲಕಿ ಶಾಲೆಗೆ ಹೋಗುತ್ತಿದ್ದ ವೇಳೆ ಆಕೆಯ ಕೈ ಹಿಡಿದೆಳೆದು, ತನ್ನನ್ನು ಮದುವೆ ಮಾಡಿಕೊ ಎಂದು ಪೀಡಿಸುತ್ತಿದ್ದ 19 ವರ್ಷ ವಯಸ್ಸಿನ ಯುವಕನಿಗೆ  7 ತಿಂಗಳುಗಳ ಜೈಲು ಶಿಕ್ಷೆ ಹಾಗೂ 10, ಸಾವಿರ ರೂಪಾಯಿ ದಂಡ ವಿಧಿಸಿ ಅಧಿಕ ಜಿಲ್ಲಾ ಸತ್ರ ನ್ಯಾಯಾಲಯ ಎಫ್ ಟಿಎಸ್ ಸಿ(POCSO) ತೀರ್ಪು ನೀಡಿದೆ. ಬಾಲಕಿ ಶಾಲೆಗೆ ಹೋಗುತ್ತಿದ್ದ ವೇಳೆ 19 ವರ್ಷ ವಯಸ್ಸಿನ ಯುವಕ ತನ್ನನ್ನು ಮದುವೆ ಮಾಡಿಕೊಳ್ಳುವಂತೆ ಪೀಡಿಸಿದ್ದು, ಕೈ ಹಿಡಿದೆಳೆದಿದ್ದ. ಈ ಸಂಬಂಧ ದಾಖಲಾದ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಲಯಕ್ಕೆ ಕುಣಿಗಲ್ ಪೊಲೀಸ್ ಠಾಣೆಯ ತನಿಖಾಧಿಕಾರಿ ಜಮಾಲ್ ಅಹಮದ್ ಅವರು ದೋಷಾರೋಪಣಾ ಪಟ್ಟಿ ಸಲ್ಲಿಸಿದರು. ಅಭಿಯೋಜನೆ  ವಿಚಾರಣೆ ಮಾಡಲಾದ ಸಾಕ್ಷ್ಯಗಳಿಂದ ಆರೋಪಿಯ ವಿರುದ್ಧ ಆರೋಪವು ಸಾಬೀತಾದ ಹಿನ್ನೆಲೆ ನ್ಯಾಯಾಲಯವು ಆರೋಪಿಗೆ 7 ತಿಂಗಳ ಸಜೆ ಮತ್ತು 40 ಸಾವಿರ ರೂಪಾಯಿಗಳ ದಂಡ ವಿಧಿಸಿ ತೀರ್ಪು ನೀಡಿದರು. ಸರ್ಕಾರದ ಪರವಾಗಿ ವಿಶೇಷ ಸರ್ಕಾರಿ ಅಭಿಯೋಜಕರಾದ ಆಶಾ ಕೆ.ಎಸ್. ವಾದ ಮಂಡಿಸಿದರು. ನಮ್ಮತುಮಕೂರಿನ…

Read More

ಮೈಸೂರು: ಈ ಬಾರಿಯ ಮೈಸೂರು ದಸರಾವನ್ನ ಯಾರು ಉದ್ಘಾಟನೆ ಮಾಡಲಿದ್ದಾರೆ ಅನ್ನೋದು ಕುತೂಹಲ ಕೆರಳಿಸಿತ್ತು. ಹಲವು ಸಾಹಿತಿ, ಗಣ್ಯರ ಹೆಸರುಗಳು ಕೇಳಿ ಬಂದಿದ್ದವು ಇದೀಗ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ದಸರಾ ಉದ್ಘಾಟಕರ ಹೆಸರನ್ನು ಬಹಿರಂಗಪಡಿಸಿದ್ದಾರೆ. ಈ ಬಾರಿಯ ಮೈಸೂರು ದಸರಾವನ್ನು ಸಾಹಿತಿ ಹಂಪ ನಾಗರಾಜಯ್ಯ ಅವರು ಉದ್ಘಾಟಿಸಲಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶುಕ್ರವಾರ ಘೋಷಿಸಿದ್ದಾರೆ. 2024ರ ದಸರಾ ಮಹೋತ್ಸವ ಅಕ್ಟೋಬರ್ 3ರಂದು ಆರಂಭಗೊಂಡು ಅದೇ ತಿಂಗಳ 12ರಂದು ಸಮಾರೋಪಗೊಳ್ಳಲಿದೆ ಎಂದು ಸರ್ಕಾರ ಈಗಾಗಲೇ ಘೋಷಣೆ ಮಾಡಿದೆ. ಅಕ್ಟೋಬರ್ 3ರಂದು ಚಾಮುಂಡಿ ಬೆಟ್ಟದಲ್ಲಿರುವ ಚಾಮುಂಡೇಶ್ವರಿ ದೇವಸ್ಥಾನದಲ್ಲಿ ಬೆಳಗ್ಗೆ 9.15 ರಿಂದ 9.45ರ ಮುಹೂರ್ತದಲ್ಲಿ ದಸರಾ ಉದ್ಘಾಟನೆ ನೆರವೇರಲಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q

Read More

ಜೈಪುರ:  ಹೊಟ್ಟೆ ನೋವಿನಿಂದ ಬಳಲುತ್ತಿದ್ದ ಮಹಿಳಾ ಅಧಿಕಾರಿಯೊಬ್ಬರು ಶಸ್ತ್ರ ಚಿಕಿತ್ಸೆಯ ಬಳಿಕ ಸಾವನ್ನಪ್ಪಿರುವ ಘಟನೆ ನಡೆದಿದ್ದು, ವೈದ್ಯರ ನಿರ್ಲಕ್ಷ್ಯದ ಬಗ್ಗೆ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ. ರಾಜಸ್ಥಾನದ ರಾಜ್ಯ ಆಡಳಿತ ಸೇವೆಯ ಮಹಿಳಾ ಅಧಿಕಾರಿ ಪ್ರಿಯಾಂಕಾ ಬಿಷ್ಣೋಯ್ (35) ಮೃತಪಟ್ಟವರಾಗಿದ್ದಾರೆ. ಇವರು ಹೊಟ್ಟೆ ನೋವಿನ ಹಿನ್ನೆಲೆ ಜೋಧಪುರದ ಏಮ್ಸ್ ಆಸ್ಪತ್ರೆಗೆ ದಾಖಲಾಗಿದ್ದರು ಶಸ್ತ್ರಚಿಕಿತ್ಸೆ ಬಳಿಕ ಅವರ ಆರೋಗ್ಯದಲ್ಲಿ ಇನ್ನಷ್ಟು ಏರುಪೇರಾಗಿತ್ತು. ಬುಧವಾರ ಅವರನ್ನು ಅಹಮದಾಬಾದ್ ನ ಖಾಸಗಿ ಆಸ್ಪತ್ರೆಗೆ ಸ್ಥಳಾಂತರಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೇ ಪ್ರಿಯಾಂಕಾ ಕೊನೆಯುಸಿರೆಳೆದಿದ್ದಾರೆ. ಇದರಿಂದ ರೊಚ್ಚಿಗೆದ್ದ ಪ್ರಿಯಾಂಕಾ ಕುಟುಂಬದವರು ಏಮ್ಸ್ ಆಸ್ಪತ್ರೆ ಎದುರು ಪ್ರತಿಭಟನೆ ನಡೆಸಿದ್ದಾರೆ. ಘಟನಾ ಸ್ಥಳಕ್ಕಾಗಮಿಸಿದ ಪೊಲೀಸರು, ಪ್ರಕರಣ ದಾಖಲಿಸಿಕೊಂಡಿದ್ದು, ತನಿಖೆ ನಡೆಸಿ ತಪ್ಪಿತಸ್ಥ ವೈದ್ಯರ ವಿರುದ್ಧ ಕ್ರಮ ಕೈಗೊಳ್ಳುವ ಭರವಸೆ ನೀಡಿದ್ದಾರೆ. ಸದ್ಯ ಪ್ರತಿಭಟನೆಯನ್ನು ಕೈಬಿಡಲಾಗಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q

Read More

ಕಲಬುರಗಿ: ಚಿಕ್ಕಮಗಳೂರು ನಗರದ ಪ್ರಮುಖ ರಸ್ತೆಗಳಲ್ಲಿ ಪ್ಯಾಲೆಸ್ತೀನ್ ಧ್ವಜ ಹಿಡಿದು ಕೆಲ ಮುಸ್ಲಿಂ ಯುವಕರು ಓಡಾಟ ನಡೆಸಿದ್ದ ವಿಚಾರವಾಗಿ ಸಚಿವ ಜಮೀರ್ ಅಹ್ಮದ್​ ಖಾನ್ ಸಮರ್ಥಿಸಿಕೊಂಡಿದ್ದಾರೆ. ಪ್ಯಾಲೆಸ್ತೀನ್​ಗೆ ಕೇಂದ್ರ ಸರ್ಕಾರವೇ ಬೆಂಬಲ ಸೂಚಿಸಿದೆ. ಹೀಗಿರುವಾಗ ಧ್ವಜ ಹಿಡಿದುಕೊಂಡು ಹೋದರೆ ತಪ್ಪೇನು? ಕೇಂದ್ರ ಸರ್ಕಾರ ಪ್ಯಾಲೆಸ್ತೀನ್​ಗೆ ಬೆಂಬಲ ಘೋಷಣೆ ಮಾಡಿರುವ ಕಾರಣವೇ ಧ್ವಜ ಹಿಡಿದಿದ್ದಾರೆ, ಇಲ್ಲಾಂದರೆ ಹಿಡಿಯುತ್ತಿರಲಿಲ್ಲ ಎಂದಿದ್ದಾರೆ. ಬೇರೆ ದೇಶದ ಬಗ್ಗೆ ಘೋಷಣೆ ಕೂಗಿದರೆ ಅದು ತಪ್ಪು. ಹಾಗೆ ಮಾಡಿದವರು ದೇಶದ್ರೋಹಿಗಳು. ಅಂಥವರನ್ನು ಗಲ್ಲಿಗೇರಿಸಬೇಕು. ಹಾಗೆಂದು ಧ್ವಜ ಹಿಡಿದರೆ ತಪ್ಪಿಲ್ಲ ಎಂದು ಜಮೀರ್ ಹೇಳಿದರು. ಬಿಜೆಪಿಯವರು ಹಿಂದೂ ಮುಸ್ಲಿಂ ಜಗಳ ತಂದಿಟ್ಟು ಮತ ಕೇಳುತ್ತಾರೆ. ಆದರೆ, ನಾವು ಹಾಗಲ್ಲ. ಮಾಡಿದ ಅಭಿವೃದ್ಧಿ ಕೆಲಸ ಮುಂದಿಟ್ಟುಕೊಂಡು ಮತ ಯಾಚಿಸುತ್ತೇವೆ ಎಂದು ಅವರು ಹೇಳಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q

Read More

ತೀರ್ಥಹಳ್ಳಿ:  ಮರ ಏರಿ ಕುಳಿತಿದ್ದ ಹೆಬ್ಬಾವನ್ನು  ಸ್ಥಳೀಯರು ಹಿಡಿದು ಕಾಡಿಗೆ ಬಿಟ್ಟಿರುವ ಘಟನೆ ಗುರುವಾರ ಸಂಜೆ ತೀರ್ಥಹಳ್ಳಿಯ ಮೇಳಿಗೆ ಎಂಬಲ್ಲಿ ನಡೆದಿದೆ. ತಾಲೂಕಿನ ಮೇಳಿಗೆಯ ಕೆರೆದಂಡೆ ಬಳಿ ಇರುವ ಅಡಿಗೆ ಕಂಟ್ರಾಕ್ಟರ್ ಮಹೇಶ್ ಎಂಬುವರ ಮನೆ ಪಕ್ಕದ ಮರದಲ್ಲಿ 12 ರಿಂದ 13 ಅಡಿ ಉದ್ದದ ಅಂದಾಜು 30 ಕೆಜಿ ತೂಕದ ಹೆಬ್ಬಾವೊಂದು ಮರವನ್ನು ಏರಿ ಕುಳಿತಿತ್ತು. ಈ ವಿಷಯ ತಿಳಿದು ಕಂತುಗದ್ದೆ ಪ್ರವೀಣ್ ಎಂಬುವರು ಸ್ಥಳಕ್ಕೆ ಆಗಮಿಸಿದ್ದು, ಹೆಬ್ಬಾವನ್ನು ಯಶಸ್ವಿಯಾಗಿ ಹಿಡಿದು ಅರಣ್ಯ ಪ್ರದೇಶಕ್ಕೆ ಬಿಟ್ಟು ಬಂದಿದ್ದಾರೆ. ಈ ಹೆಬ್ಬಾವು ಹೇಗೆ ಮರದ ಮೇಲೆ ಏರಿತು, ಎಲ್ಲಿಂದ ಬಂತು ಎನ್ನುವ ಮಾಹಿತಿ ತಿಳಿದು ಬಂದಿಲ್ಲ, ಹೆಬ್ಬಾವು ಬೇಟೆಗಾಗಿ ಹೊಂಚು ಹಾಕುತ್ತಿತ್ತೇ ಎಂದು ಅನುಮಾನದಿಂದ ಸ್ಥಳೀಯರು ಗಾಬರಿಯಾಗಿದ್ದರು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q

Read More

ಬಳ್ಳಾರಿ: ಬಳ್ಳಾರಿ ಜೈಲಿಗೆ ನಟ ದರ್ಶನ್ ತಾಯಿ ಮೀನಾ ತೂಗುದೀಪ, ಅಕ್ಕ ದಿವ್ಯಾ ಹಾಗೂ ಭಾವ ಸೇರಿ ಕುಟುಂಬ ಸದಸ್ಯರು ಗುರುವಾರ ಭೇಟಿ ನೀಡಿದರು. ಕುಟುಂಬಸ್ಥರ ಭೇಟಿಯಿಂದಾಗಿ ದರ್ಶನ್ ಅವರು ಮಾನಸಿಕವಾಗಿ ಇನ್ನಷ್ಟು ಗಟ್ಟಿಯಾಗುವಂತಾಗಿದೆ.  ಇದೇ ವೇಳೆ ಮಗನ ಸ್ಥಿತಿ ಕಂಡು ತಾಯಿ ಕಣ್ಣೀರು ಹಾಕಿದ್ದಾರಂತೆ. ಅಲ್ಲದೇ ದರ್ಶನ್ ಗೆ ಆತ್ಮಸ್ಥೈರ್ಯ ತುಂಬಿದ್ದಾರೆ. ಕೆಟ್ಟ ಘಳಿಗೆಯಲ್ಲಿ ಏನೋ ನಡೆದಿರಬಹುದು ಆದ್ರೆ, ನಾವೆಲ್ಲ ನಿನ್ನ ಜೊತೆ ಇದ್ದೀವಿ ಎಂದು ಮೀನಾ ತೂಗುದೀಪ್  ಧೈರ್ಯ ತುಂಬಿದ್ದಾರಂತೆ. ಜೊತೆಗೆ ರಾಜರಾಜೇಶ್ವರಿ ದೇವಿಯ ಕೃಪೆಯಿಂದ ಬೇಲ್ ಸಿಗುತ್ತೆ ಅಂತ ಧೈರ್ಯ ತುಂಬಿದ್ರಂತೆ. ತಾಯಿಯ ಮಾತಿನಿಂದ ಆರೋಪಿ ದರ್ಶನ್ ಧೈರ್ಯ ತೆಗೆದುಕೊಂಡಿದ್ದಾರೆ. ತಾಯಿ ಭೇಟಿಯ ಬಳಿಕ ಆರೋಪಿ ದರ್ಶನ ಲವಲವಿಕೆಯಿಂದ ಇದ್ದಾರೆ ಎನ್ನಲಾಗಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q

Read More

ಹೈದ್ರಾಬಾದ್​: ತಿರುಪತಿ ದೇಗುಲದ ಪ್ರಸಾದವಾದ ಲಡ್ಡುವಿನಲ್ಲಿ ಪ್ರಾಣಿಗಳ ಕೊಬ್ಬನ್ನು ಬಳಕೆ ಮಾಡಿರುವುದು ಸ್ಪಷ್ಟವಾದ ಬೆನ್ನಲ್ಲೇ ವೈಎಸ್​ಆರ್​ ಕಾಂಗ್ರೆಸ್​ ಸರ್ಕಾರವು ತಿರುಮಲದಲ್ಲಿ ಪ್ರಸಾದವನ್ನು ನಾಶಪಡಿಸಿದೆ ಅಂತ ಸಿಎಂ ಚಂದ್ರಬಾಬು ನಾಯ್ಡು ಆರೋಪಿಸಿದ್ದಾರೆ. ತಿರುಮಲ ಲಡ್ಡು ಮತ್ತು ಪ್ರಾಣಿಗಳ ಕೊಬ್ಬಿನೊಂದಿಗೆ ಕಲಬೆರಕೆ ಮಾಡಿರುವ ಅಪರಾಧಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಸಿಎಂ ನಾಯ್ಡು ಇದೇ ವೇಳೆ ಭರವಸೆ ನೀಡಿದ್ದಾರೆ. ತುಪ್ಪದಲ್ಲಿ ಮೀನಿನ ಎಣ್ಣೆ, ಬೀಫ್ ಟ್ಯಾಲೋ ಮತ್ತು ಹಂದಿ ಕೊಬ್ಬಿನ ಕುರುಹುಗಳಿವೆ ಎಂದು ವರದಿಯು ಹೇಳಿದೆ.  ಹಂದಿಯ ಕೊಬ್ಬಿನ ಅಂಗಾಂಶವನ್ನು ನಿರೂಪಿಸುವ ಮೂಲಕ ಪಡೆದ ಅರೆ-ಘನ ಬಿಳಿ ಕೊಬ್ಬಿನ ಉತ್ಪನ್ನವಾಗಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q

Read More

ದಾವಣಗೆರೆ: ದಾವಣಗೆರೆ ನಗರದಲ್ಲಿ ಗಣೇಶ ವಿಸರ್ಜನೆ ವೇಳೆ ಮೆರವಣಿಗೆಯ ಮೇಲೆ ಕಲ್ಲುತೂರಾಟ ನಡೆಸಿದ್ದ 18 ಆರೋಪಿಗಳನ್ನು ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದಾರೆ. ಆರೋಪಿಗಳನ್ನ ವಿಚಾರಣೆ ನಡೆಸಿದ ನ್ಯಾಯಾಧೀಶರು ಎಲ್ಲಾ 18 ಆರೋಪಗಳಿಗೆ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿ ಆದೇಶ ಹೊರಡಿಸಿದ್ದಾರೆ. ದಾವಣಗೆರೆಯ ಬಸವ ನಗರ ಠಾಣೆಯಲ್ಲಿ ಈ ಕುರಿತು ಎರಡು ಪ್ರಕರಣ ದಾಖಲಾಗಿತ್ತು. ಇದೀಗ ಬಂಧಿತ 18 ಆರೋಪಿಗಳನ್ನು ಜಡ್ಜ್ ಮುಂದೆ ಪೊಲೀಸರು ಹಾಜರುಪಡಿಸಿದ್ದಾರೆ. ಎಂಸಿಸಿಎ ಬ್ಲಾಕ್ ನಲ್ಲಿರುವ ಜಡ್ಜ್ ಪ್ರಶಾಂತ ನಿವಾಸದಲ್ಲಿ ಇದೀಗ ಆರೋಪಿಗಳನ್ನು ಪೊಲೀಸರು ಹಾಜರುಪಡಿಸಿದ್ದಾರೆ. ಸದ್ಯ 18 ಆರೋಪಗಳಿಗೆ 14 ದಿನ ನ್ಯಾಯಾಂಗ ಬಂಧನ ವಿಧಿಸಿ ಜಡ್ಜ್ ಪ್ರಶಾಂತ್ ಆದೇಶ ಹೊರಡಿಸಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q

Read More

ಜಾತಕದಲ್ಲಿ ಪಂಚಮಹಾಪುರಷ ರಾಜಯೋಗವಿದ್ದರೆ ಜೀವನದಲ್ಲಿ ಎಲ್ಲ ರೀತಿಯ ಸುಖ-ಸಂತೋಷಗಳನ್ನು ಸಾಧಿಸಲು ಸಾಧ್ಯವಾಗುತ್ತದೆ ಎಂದು ಜ್ಯೋತಿಷ್ಯ ಶಾಸ್ತ್ರ ಹೇಳುತ್ತದೆ. ಶ್ರೀ ಕ್ಷೇತ್ರ ಕಟೀಲು ದುರ್ಗಾಪರಮೇಶ್ವರೀ ಜ್ಯೋತಿಷ್ಯ ಪೀಠಂ ದೈವಜ್ಞ ಪಂಡಿತ್ ಕೃಷ್ಣ ಭಟ್ ಪ್ರಧಾನ ತಾಂತ್ರಿಕ್ ಹಾಗೂ ಮಾಂತ್ರಿಕರು ಸ್ತ್ರೀ ಪುರುಷ ವಶೀಕರಣ ಸ್ಪೆಷಲಿಸ್ಟ್ ನನಗೆ ಒಂದೇ ಕರೆ ಮಾಡಿದರೆ ನಿಮ್ಮ ಇಷ್ಟಪಟ್ಟವರು ನಿಮ್ಮಂತೆ 9535156490 ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆ ಉತ್ತರಿಸಬಹುದು ಏಷ್ಟೇ ಪೂಜೆ ಪ್ರಯತ್ನ ಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..?ನಿಮ್ಮ ಯಾವುದೇಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ 2 ದಿನಗಳಲ್ಲಿ ಪರಿಹಾರ ಶತಸಿದ್ಧ ಧನವಶ, ಜನವಶ, ಶತ್ರುನಾಶ, ಸ್ತ್ರೀ- ಪುರುಷ ವಶೀಕರಣ, ದಿಗ್ಭಂಧನ, ಸ್ತಂಭನ, ವುಚ್ಛಾಟನೆಯಂತಹ ಸಮಸ್ಯೆಗಳಿಗೆ ವಿಶೇಷ ಪರಿಹಾರ ತಿಳಿಸುತ್ತಾರೆ 9535156490 Provided by  ಆ ರಾಶಿಗಳು ಯಾವುವು ಎಂದು ತಿಳಿಯೋಣ 👇🏻 ಸೆಪ್ಟೆಂಬರ್ 23 ರಂದು…

Read More