Subscribe to Updates
Get the latest creative news from FooBar about art, design and business.
- ಸಾದರ ಸಮುದಾಯ ಭವನದಲ್ಲಿ ಸಪ್ತಗಿರಿ ಆಸ್ಪತ್ರೆ ವತಿಯಿಂದ ಬೃಹತ್ ಆರೋಗ್ಯ ತಪಾಸಣೆ ಮತ್ತು ಶಸ್ತ್ರ ಚಿಕಿತ್ಸಾ ಶಿಬಿರ
- ಖಾಸಗಿ ಶಾಲೆಗಳ ಮಾದರಿಯಲ್ಲೇ, ಸರ್ಕಾರಿ ಶಾಲೆಗಳ ರೂಪಾಂತರ: ಡಿ.ಕೆ.ಶಿವಕುಮಾರ್
- ತುಮಕೂರು ವಿವಿ 19ನೇ ಘಟಿಕೋತ್ಸವ: 90 ವಿದ್ಯಾರ್ಥಿಗಳಿಗೆ 117 ಚಿನ್ನದ ಪದಕ
- ಶಾಲೆಗಳ ಪುನರಾರಂಭ: ದಾಖಲಾತಿ ಆಂದೋಲನಕ್ಕೆ ಡಿ.ಸಿ. ಚಾಲನೆ
- ಸಚಿವ ಸ್ಥಾನದ ಆಸೆ ನನಗೂ ಇದೆ ಕೊಟ್ಟರೆ ಪ್ರಾಮಾಣಿಕವಾಗಿ ಕೆಲಸ ನಿರ್ವಹಿಸುವೆ: ಹೆಚ್.ವಿ.ವೆಂಕಟೇಶ್
- ನವಿಲೆ ಭಾಗಕ್ಕೆ ಹೇಮಾವತಿ ನೀರನ್ನು ಹರಿಸಲಾಗುವುದು ರೈತರು ಆತಂಕಪಡುವ ಅಗತ್ಯವಿಲ್ಲ: ಶಾಸಕ ಸಿ.ಬಿ.ಸುರೇಶ್ ಬಾಬು
- ‘ಗರ್ಭಿಣಿನೂ ಇಲ್ಲ, ಮಹಿಳೆಯೂ ಇಲ್ಲ… ಕಾರಿನಲ್ಲಿ ಒಬ್ಬರೇ ಇದ್ದಿದ್ದು!’: ಝೀರೋ ಟ್ರಾಫಿಕ್ ಪ್ರತಿಭಟನೆಯ ಅಸಲೀಯತ್ತು ಬಿಚ್ಚಿಟ್ಟ ಬೆಂಗಳೂರು ಪೊಲೀಸರು
- ಡಿ.ಕೆ.ಶಿವಕುಮಾರ್ ಪ್ರಮಾಣ ವಚನ ಸ್ವೀಕಾರ: ಜೂನ್ 3 ರಂದು ವಿಧಾನಸೌಧ ಸುತ್ತಮುತ್ತಲಿನ ಕಚೇರಿಗಳಿಗೆ ಅರ್ಧ ದಿನ ರಜೆ ಘೋಷಣೆ
Author: admin
ಕಲಬುರಗಿ: ‘ಕಲಬುರಗಿ ಮತ್ತು ಯಾದಗಿರಿ ಜಿಲ್ಲೆಗಳಲ್ಲಿನ ವಕ್ಫ್ ಆಸ್ತಿಗೆ ಸಂಬಂಧಿಸಿದಂತೆ ಖಾತಾ ಅಪ್ ಡೇಟ್ ಕೆಲಸ ಮುಂದಿನ ಒಂದು ತಿಂಗಳೊಳಗೆ ಮುಗಿಸಬೇಕು’ ಎಂದು ಅಲ್ಪಸಂಖ್ಯಾತರ ಕಲ್ಯಾಣ, ವಕ್ಫ್ ಹಾಗೂ ವಸತಿ ಸಚಿವ ಬಿ.ಜೆಡ್.ಜಮೀರ ಅಹ್ಮದ್ ಖಾನ್ ಅವರು ಅಧಿಕಾರಿಗಳಿಗೆ ಗಡುವು ನೀಡಿದರು. ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಗುರುವಾರ ಕಲಬುರಗಿ ಮತ್ತು ಯಾದಗಿರಿ ಜಿಲ್ಲೆಗಳ ವಕ್ಫ್ ಇಲಾಖೆಯ ಪ್ರಗತಿ ಪರಿಶೀಲನಾ ಸಭೆ ನಡೆಸಿ ಅವರು ಮಾತನಾಡಿದರು. ‘ಕಲಬುರಗಿ ಜಿಲ್ಲೆಯಲ್ಲಿ ಕಂದಾಯ ಇಲಾಖೆ ವ್ಯಾಪ್ತಿಯಲ್ಲಿ 2,566, ನಗರ ಸ್ಥಳೀಯ ಸಂಸ್ಥೆಗಳಲ್ಲಿ 572 ಹಾಗೂ ಆರ್.ಡಿ.ಪಿ.ಆರ್. ಕಚೇರಿಯಲ್ಲಿ ನೂರಾರು ಸಂಖ್ಯೆಯಲ್ಲಿ ಅರ್ಜಿಗಳು ಬಾಕಿ ಇವೆ. ಬಹಳ ವರ್ಷಗಳಿಂದ ಈ ಕಾರ್ಯ ನಾನಾ ಕಾರಣಕ್ಕೆ ನನೆಗುದಿಗೆ ಬಿದ್ದಿದ್ದು, ಇದನ್ನು ಆದ್ಯತೆ ಮೇಲೆ ಮುಗಿಸಬೇಕು’ ಎಂದು ಅಧಿಕಾರಿಗಳಿಗೆ ಸಚಿವರು ಸೂಚಿಸಿದರು. ‘ರಾಜ್ಯದಲ್ಲಿ 1.08 ಲಕ್ಷ ಎಕರೆ ವಕ್ಫ್ ಆಸ್ತಿ ಇದ್ದು, ಇದರಲ್ಲಿ 85 ಸಾವಿರ ಎಕರೆ ಪ್ರದೇಶ ಒತ್ತುವರಿಯಾಗಿದೆ. ಕಲಬುರಗಿ ಜಿಲ್ಲೆಯಲ್ಲಿ 21,440 ಎಕರೆ ಆಸ್ತಿ ಪೈಕಿ…
ಮಂಡ್ಯ: ಜಿಲ್ಲೆಯಲ್ಲಿ ಡಿಸೆಂಬರ್ 20, 21, 22 ರಂದು ನಡೆಯಲಿರುವ 87 ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಎಲ್ಲರನ್ನು ಆಹ್ವಾನಿಸಲು ಕನ್ನಡ ಜ್ಯೋತಿ ರಥ ಸಿದ್ಧವಾಗಿದೆ. ಇಂದು ಸಿದ್ಧವಾಗಿರುವ ತಾಯಿ ಭುವನೇಶ್ವರಿ ರಥಕ್ಕೆ ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ ಎನ್ ಚಲುವರಾಯಸ್ವಾಮಿ ಅವರು ತಾಯಿ ನಿಮಿಷಾಂಭ ದೇವಸ್ಥಾನದ ಮುಂಭಾಗ ಪೂಜೆ ಸಲ್ಲಿಸಿದರು. 87 ದಿನ ರಾಜ್ಯಾದ್ಯಂತ ಸಂಚಾರ ರಥಕ್ಕೆ ಅಧಿಕೃತವಾಗಿ ಸೆಪ್ಟೆಂಬರ್ 22 ರಂದು ಉತ್ತರ ಕನ್ನಡದ ಭುವನಗಿರಿಯಲ್ಲಿರುವ ತಾಯಿ ಭುವನೇಶ್ವರಿ ದೇವಾಲಯದಿಂದ ಚಾಲನೆ ನೀಡಲಾಗುವುದು. ರಥವು 87 ದಿನ ರಾಜ್ಯಾದ್ಯಂತ ಸಂಚಾರಿಸಿ ಸಕ್ಕರೆಯ ನಾಡಿನಲ್ಲಿ ನಡೆಯುವ ಸಾಹಿತ್ಯ ಸಮ್ಮೇಳನಕ್ಕೆ ಮರೆಯದೇ ಬನ್ನಿ ಎಂದು ಅಕ್ಕರೆಯ ಆಹ್ವಾನ ನೀಡಲಿದೆ. ಬರುವ ಎಲ್ಲರಿಗೂ ಕನ್ನಡ ನುಡಿಯ ಸವಿ ಬಡಿಸಲು ಸಿದ್ಧವಾಗಿದೆ ಎಂಬುವ ರೀತಿ ಅಲಂಕೃತ ವಾಗಿರುವ ಕನ್ನಡ ರಥ ಕನ್ನಡಿಗರ ಕಣ್ಮನ ಸೆಳೆಯಲಿದೆ. ಮಂಡ್ಯ ಜಿಲ್ಲೆಯ ವಿಶೇಷತೆ ಸಾರುವ ರಥ ಕನ್ನಡ ನುಡಿ ಕಲಿಸುವ ತಾಯಿ ಭುವನೇಶ್ವರಿ, ಜಿಲ್ಲೆಗೆ ಅನ್ನ…
ತುಮಕೂರು: ಮುನಿರತ್ನ ವಿರುದ್ಧ ಅತ್ಯಾಚಾರ ಪ್ರಕರಣ ದಾಖಲಾಗಿದ್ದು, ಇದರ ಸತ್ಯಾಸತ್ಯತೆ ಬಗ್ಗೆ ನಮಗೆ ಮಾಹಿತಿ ಇಲ್ಲ, ಇದ್ರಲ್ಲಿ ಡಿಫೆಂಡ್ ಮಾಡಿಕೊಳ್ಳುವ ಪ್ರಶ್ನೆ ಇಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಹೇಳಿದ್ದಾರೆ. ತುಮಕೂರಿನಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಮುನಿರತ್ನ ಪ್ರಕರಣ ಸರಿಯಾದ ರೀತಿಯಲ್ಲಿ ತನಿಖೆ ಆಗಬೇಕು. ಎಲ್ಲೋ ಒಂದು ಕಡೆ ರಾಜ್ಯ ಸರ್ಕಾರದ ತರಾತುರಿ ನೋಡಿದ್ರೆ. ಇದ್ರಲ್ಲಿ ರಾಜಕೀಯ ಷಡ್ಯಂತ್ರ ಇದೆ ಎಂಬುದನ್ನ ನಾವು ಗಮನಿಸಬೇಕಾಗುತ್ತೆ. ತನಿಖೆಯಾಗಲಿ ಬಳಿಕ ಸತ್ಯಾಂಶ ಹೊರ ಬರಲಿದೆ ಎಂದರು. ರಾಜ್ಯದ ಮುಖ್ಯಮಂತ್ರಿಗಳು ಹತಾಶರಾಗಿದ್ದಾರೆ. ಕಳೆದ ಎರಡು ತಿಂಗಳಿಂದ ನಿರಂತರವಾಗಿ ದುಷ್ಟ ಕಾಂಗ್ರೆಸ್ ಸರ್ಕಾರದ ವಿರುದ್ಧ ಹೋರಾಟವನ್ನ ಮಾಡಿದ್ದೇವೆ. ವಾಲ್ಮೀಕಿ ನಿಗಮ ಹಗರಣ ವಿರುದ್ಧ ಮಾಡಿದ್ದ ಹೋರಾಟ. ಮೂಡ ವಿರುದ್ಧ ಪಾದಯಾತ್ರೆ ಮಾಡಿದ ವಿರುದ್ಧ ನಮ್ಮ ಪಕ್ಷದ ಹೋರಾಟ ಫಲವಾಗಿ ರಾಜ್ಯದ ಮುಖ್ಯಮಂತ್ರಿಗಳು ಒಂಟಿ ಕಾಲಲ್ಲಿ ನಿಲ್ಲುವ ಪರಿಸ್ಥಿತಿ ನಿರ್ಮಾಣ ಆಗಿದೆ ಎಂದರು. ಹಾಗಾಗಿ ಈ ಒಂದು ಘಟನೆಗಳಿಂದ ಮುಖ್ಯಮಂತ್ರಿಗಳು ಹತಾಶರಾಗಿದ್ದಾರೆ. ಸ್ವಪಕ್ಷದಲ್ಲಿರುವ ಮುಖ್ಯಮಂತ್ರಿ ರೇಸ್ ಹೆಚ್ಷಾಗಿದೆ. ಹೀಗಾಗಿ…
ಪಾವಗಡ : ತಾಲ್ಲೂಕಿನ ವೈ.ಎನ್.ಹೊಸಕೋಟೆ ಗ್ರಾಮದ ಸರ್ಕಾರಿ ಆಸ್ಪತ್ರೆಯ ಬಳಿ ನಡೆದ ಹೃದಯ ವಿದ್ರಾವಕ ಘಟನೆಯಿಂದ ಎಚ್ಚೆತ್ತುಕೊಂಡ ವೈದ್ಯಕೀಯ ಇಲಾಖೆ ಅಧಿಕಾರಿಗಳು ಗುರುವಾರದಂದು ಸಮುದಾಯ ಆರೋಗ್ಯ ಕೇಂದ್ರಕ್ಕೆ ಸರ್ಕಾರಿ ಆ್ಯಂಬುಲೆನ್ಸ್ ಸೇವೆಯನ್ನು ಒದಗಿದರು. ಬುಧವಾರದಂದು ಚಿಕಿತ್ಸೆಗಾಗಿ ಬಂದಿದ್ದ ದಳವಾಯಿಹಳ್ಳಿ ಗ್ರಾಮದ ಹೊನ್ನೂರಪ್ಪ ಎಂಬ ವ್ಯಕ್ತಿ ಮೃತರಾಗಿದ್ದರು. ಆತನ ಮೃತದೇಹವನ್ನು ಸಾಗಿಸಲು ಆಸ್ಪತ್ರೆಯಲ್ಲಿ ಆಂಬುಲೆನ್ಸ್ ಸೇವೆ ಇಲ್ಲದ್ದಿದ್ದರಿಂದ ಮಕ್ಕಳು ಗೋಪಾಲಪ್ಪ ಮತ್ತು ಚಂದ್ರಣ್ನ ದ್ವಿಚಕ್ರ ವಾಹನದಲ್ಲಿ ಸ್ವಗ್ರಾಮಕ್ಕೆ ಕರೆದೊಯ್ದಿದ್ದರು. ಈ ಘಟನೆಯನ್ನು “ನಮ್ಮ ತುಮಕೂರು” ವರದಿ ಮಾಡಿದ್ದು, ವರದಿಯ ಬೆನ್ನಲ್ಲೇ ರಾಜ್ಯಾದ್ಯಂತ ಇದು ಭಾರೀ ಸಂಚಲನ ಸೃಷ್ಟಿಸಿತ್ತು. ಇದೀಗ ಘಟನೆಗೆ ಸಂಬಂಧಿಸಿದ ಇಲಾಖೆ ಎಚ್ಚೆತ್ತುಕೊಂಡಿದೆ. ಜಿಲ್ಲಾ ಆರೋಗ್ಯಾಧಿಕಾರಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ಮಾಡಿ ತಾಲ್ಲೂಕು ಕೇಂದ್ರದಲ್ಲಿದ್ದ ಆ್ಯಂಬುಲೆನ್ಸ್ ಗಳ ಪೈಕಿ ಒಂದನ್ನು ವೈ.ಎನ್.ಹೊಸಕೋಟೆ ಸಮುದಾಯ ಆರೋಗ್ಯ ಕೇಂದ್ರಕ್ಕೆ ನಿಯೋಜನೆ ಮಾಡಿದ್ದಾರೆ. ಈ ಹಿಂದೆ ಇದ್ದ ಆಂಬುಲೆನ್ಸ್ ವಾಹನ ಹಳೆಯದಾಗಿತ್ತು. ಡ್ರೈವರ್ ಸಮಸ್ಯೆ ಇದ್ದಿತು. ಈ ಕಾರಣದಿಂದ 2019 ರಿಂದ ಇಲ್ಲಿನ ರೋಗಿಗಳಿಗೆ…
ಬೆಂಗಳೂರು: ಹೆಚ್.ಡಿ.ಕುಮಾರಸ್ವಾಮಿ ಹಾಗೂ ಬಿ.ಎಸ್.ಯಡಿಯೂರಪ್ಪ ಸಿಎಂ ಆಗಿದ್ದ ವೇಳೆ ಅಕ್ರಮ ಡಿನೋಟಿಫಿಕೇಷನ್ ಆಗಿದೆ ಎಂದು ಸಚಿವರಾದ ಕೃಷ್ಣಬೈರೇಗೌಡ, ದಿನೇಶ್ ಗುಂಡೂರಾವ್ ದಾಖಲೆ ಬಿಡುಗಡೆ ಮಾಡಿದ್ದಾರೆ. ಕೆಪಿಸಿಸಿ ಕಚೇರಿಯಲ್ಲಿ ಇಂದು ಜಂಟಿ ಮಾಧ್ಯಮಗೋಷ್ಟಿಯಲ್ಲಿ ಮಾತನಾಡಿದ ಸಚಿವ ಕೃಷ್ಣ ಬೈರೇಗೌಡ, ರಾಜ್ಯಪಾಲರು ಕೆಲವು ಪ್ರಕರಣಗಳಲ್ಲಿ ವಿಳಂಬ ಮಾಡುತ್ತಿದ್ದಾರೆ. ತಪ್ಪು ಮಾಡಿದವರಿಗೆ ಅವರು ರಕ್ಷಣೆಗೆ ನಿಂತಿದ್ದಾರೆ. ಹೆಚ್.ಡಿ. ಕುಮಾರಸ್ವಾಮಿ ಅವರು ಮಾಡಿದ ಅಕ್ರಮ ಒಂದೆರಡಲ್ಲ, ಹಲವಾರು ಇವೆ. ಈಗ ಮತ್ತೊಂದು ದಾಖಲೆ ಇದೆ. ಆಸ್ತಿ ಇರುವುದು ಮಠದಹಳ್ಳಿ ಗಂಗೇನಹಳ್ಳಿ ಬಡಾವಣೆ 7/1ಬಿ, ಸಿ ಹಾಗೂ ಡಿ ಸರ್ವೆ ನಂಬರ್ನಲ್ಲಿ 1.11 ಎಕರೆ ಜಮೀನು ಬಿಡಿಎಗೆ ಭೂಸ್ವಾಧೀನಗೊಂಡಿದ್ದು, ಇದನ್ನು ಡಿನೋಟಿಫೈ ಮಾಡಬೇಕೆಂದು ದಾರಿಯಲ್ಲಿ ಹೋಗುವ ಯಾರೋ ದಾಸಯ್ಯ ಜಮೀನಿಗೆ ಸಂಬಂಧವೇ ಇಲ್ಲದ ರಾಜಶೇಖರಯ್ಯ ಅನ್ನುವವರು ಅರ್ಜಿ ಕೊಡ್ತಾರೆ. 2007 ರಲ್ಲಿ ಅರ್ಜಿ ಬಂದ ಅದೇ ದಿನ ಮುಖ್ಯಮಂತ್ರಿಯಾಗಿದ್ದ ಹೆಚ್.ಡಿ. ಕುಮಾರಸ್ವಾಮಿ ಅವರು ಡಿನೋಟಿಫೈ ಮಾಡಲು ಸೂಚಿಸುತ್ತಾರೆ ಎಂದು ಗಂಭೀರ ಆರೋಪಿಸಿದ್ದಾರೆ. ಜಮೀನಿನ ಅಸಲಿ ಮಾಲೀಕರು 21 ಜನರಿದ್ದಾರೆ.…
ಶಿವಮೊಗ್ಗ: ವಾಕಿಂಗ್ ಮಾಡುತ್ತಿದ್ದ ವೇಳೆ ಎಂಬಿಬಿಎಸ್ ವಿದ್ಯಾರ್ಥಿಯೊಬ್ಬರು ಕುಸಿದು ಬಿದ್ದು ಸಾವನ್ನಪ್ಪಿರುವ ಘಟನೆ ಶಿವಮೊಗ್ಗದಲ್ಲಿ ನಡೆದಿದೆ. ಪೃಥ್ವಿರಾಜ್ (20) ಮೃತಪಟ್ಟವರು ಎಂದು ಗುರುತಿಸಲಾಗಿದೆ. ಇವರು ಶಿವಮೊಗ್ಗದ ಸಿಮ್ಸ್ ಮೆಡಿಕಲ್ ಕಾಲೇಜಿನ ದ್ವಿತೀಯ ವರ್ಷದ ವಿದ್ಯಾರ್ಥಿ ಎಂದು ತಿಳಿದು ಬಂದಿದೆ. ನಗರದ ಪ್ರವಾಸಿ ಮಂದಿರದ ಬಳಿಯಲ್ಲಿ ಬುಧವಾರ ಸಂಜೆ ಇವರು ವಾಕಿಂಗ್ ಮಾಡುತ್ತಿದ್ದರು. ಈ ವೇಳೆ ಏಕಾಏಕಿ ಅಸ್ವಸ್ಥಗೊಂಡು ಕುಸಿದು ಬಿದ್ದಿದ್ದಾರೆ. ಪ್ರವಾಸಿ ಮಂದಿರದ ಬಳಿಯೇ ಮೆಗ್ಗಾನ್ ಆಸ್ಪತ್ರೆಗೆ ಮೋಹನ್ ಎಂಬವರು ಪೃಥ್ವಿರಾಜ್ ಅವರನ್ನು ಸಾಗಿಸಿದ್ದಾರೆ. ಆದರೆ ಮಾರ್ಗ ಮಧ್ಯೆಯೇ ಪೃಥ್ವಿರಾಜ್ ಕೊನೆಯುಸಿರೆಳೆದರು. ಮೃತ ಪೃಥ್ವಿರಾಜ್ ಅವರ ತಂದೆ ಮುತ್ತಣ್ಣ ಅವರು ನಗರದಲ್ಲಿ ಔಷಧ ಸಗಟು ವ್ಯಾಪಾರಿಯಾಗಿದ್ದಾರೆ. ಪೃಥ್ವಿರಾಜ್ ನಿಧನಕ್ಕೆ ರೋಟರಿ ಕ್ಲಬ್ ಹಾಗೂ ಔಷಧ ವ್ಯಾಪಾರಿಗಳ ಸಂಘದ ಸದಸ್ಯರು ಸಂತಾಪ ಸೂಚಿಸಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296
ಬೆಂಗಳೂರು: ಜಾತಿನಿಂದನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಸಕ ಮುನಿರತ್ನಗೆ ಬಿಗ್ ರಿಲೀಫ್ ಸಿಕ್ಕಿದ್ದು, ಬೆಂಗಳೂರಿನ 42ನೇ ACMM ನ್ಯಾಯಾಲಯ ಷರತ್ತು ಬದ್ಧ ಜಾಮೀನು ಮಂಜೂರು ಮಾಡಿದೆ. 2 ಲಕ್ಷ ರೂಪಾಯಿಗಳ ಬಾಂಡ್ ಇಬ್ಬರು ಶೂರಿಟಿ ಒದಗಿಸುವಂತೆ ಷರತ್ತು ವಿಧಿಸಿ ಶಾಸಕ ಮುನಿರತ್ನಗೆ 42ನೇ ACMM ಕೋರ್ಟ್ ಜಾಮೀನು ಮಂಜೂರು ಮಾಡಿದೆ. ಸಾಕ್ಷಾಧಾರ ನಾಶಪಡಿಸಬಾರದು ಹಾಗೂ ಸಾಕ್ಷಿಗಳಿಗೆ ಬೆದರಿಕೆ ಹಾಕದಂತೆ ಷರತ್ತು ವಿಧಿಸಿದೆ. ಸದ್ಯ ವಕೀಲರು ಜಾಮೀನು ಷರತ್ತು ಪೂರೈಸುತ್ತಿದ್ದು, ಇಂದು ಸಂಜೆ ಮುನಿರತ್ನ ಜೈಲಿನಿಂದ ಬಿಡುಗಡೆಯಾಗುವ ಸಾಧ್ಯತೆ ಇದೆ. ಆದರೆ ಈ ನಡುವೆ ಮುನಿರತ್ನ ವಿರುದ್ಧ ಅತ್ಯಾಚಾರ ಪ್ರಕರಣ ಕೂಡ ದಾಖಲಾಗಿದ್ದು, ಈ ಹಿನ್ನೆಲೆಯಲ್ಲಿ ಮುನಿರತ್ನ ಬಿಡುಗಡೆಯಾದರೂ ಮತ್ತೆ ಬಂಧನವಾಗುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296
ಪಾವಗಡ: ಪಟ್ಟಣದ ತಾಲ್ಲೂಕು ಕ್ರೀಡಾಂಗಣದಲ್ಲಿ ನಡೆದ 2024- 25 ನೇ ಸಾಲಿನ ತಾಲ್ಲೂಕು ಮಟ್ಟದ ಪ್ರೌಢ ಶಾಲೆಗಳ ಕ್ರೀಡಾಕೂಟದಲ್ಲಿ ತಾಲ್ಲೂಕಿನ ವೈ.ಎನ್.ಹೊಸಕೋಟೆ ಗ್ರಾಮದ ಸರ್ಕಾರಿ ಪ್ರೌಢಶಾಲೆಯ ಬಾಲಕಿಯರು ವಾಲಿಬಾಲ್ ನಲ್ಲಿ ಪ್ರಥಮ ಸ್ಥಾನವನ್ನು ಪಡೆಯುವ ಮೂಲಕ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಈ ಸಾಧನೆಗೆ ಶಾಲೆಯ ಮುಖ್ಯ ಶಿಕ್ಷಕರಾದ ಹನುಮಂತರಾಯಪ್ಪ, ಸಹ ಶಿಕ್ಷಕರು ಹಾಗೂ ಗ್ರಾಮಸ್ಥರಿಂದ ಅಭಿನಂದನೆ ಸಲ್ಲಿಸಿದ್ದಾರೆ. ವರದಿ: ನಂದೀಶ್ ನಾಯ್ಕ, ಪಾವಗಡ ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296
ಬೆಂಗಳೂರು: ರಾಜ್ಯದಲ್ಲಿ ಇದೀಗ ಬೆಲೆ ಏರಿಕೆ ಪರ್ವ ಮತ್ತೆ ಆರಂಭಗೊಂಡಿದೆ. ಹಾಲಿನ ದರ ಏರಿಕೆ ಬಗ್ಗೆ ಇನ್ನೂ ಚರ್ಚೆ ಬಿಸಿಯಾಗಿರುವಾಗಲೇ ಅಡುಗೆ ಎಣ್ಣೆ ಬೆಲೆ ಏರಿಕೆ ಮಾಡಲಾಗುತ್ತಿದೆ ಎಂದು ಹೇಳಲಾಗುತ್ತಿದೆ. ವರದಿಗಳ ಪ್ರಕಾರ ರೂ.14 ರಿಂದ 16ರವರೆಗೆ ಅಡುಗೆ ಎಣ್ಣೆದರ ಹೆಚ್ಚಳವಾಗುವ ಸಾಧ್ಯತೆ ಇದೆಯಂತೆ, ಈ ಮೂಲಕ ಬಡ ಜನರ ಜೀವನ ದುಬಾರಿಯಾಗುತ್ತಿದೆ ಎನ್ನುವ ಆಕ್ರೋಶ ಕೇಳಿ ಬಂದಿದೆ. ನಂದಿನಿ ಹಾಲಿನ ದರ ಮುಂದೆ 5 ರೂಪಾಯಿಗಳಷ್ಟು ಏರಿಕೆಯಾಗುವ ಸಾಧ್ಯತೆಗಳಿವೆ ಎನ್ನಲಾಗ್ತಿದೆ. ಈ ಬಗ್ಗೆ ಸಿಎಂ ಸಿದ್ದರಾಮಯ್ಯನವರು ಇತ್ತೀಚೆಗೆ ಮಾತನಾಡುತ್ತಾ, ನಂದಿನಿ ಹಾಲಿನ ದರ ಹೆಚ್ಚಳ ಮಾಡುತ್ತಿದ್ದೇವೆ, ಲಾಭಾಂಶ ರೈತರಿಗೆ ಕೊಡ್ತೇವೆ ಎಂದಿದ್ದರು. ಒಂದರ ಹಿಂದೊಂದರಂತೆ ಬೆಲೆ ಏರಿಕೆಯಾಗುತ್ತಿರುವುದು ಸಾರ್ವಜನಿಕರ ಆತಂಕಕ್ಕೆ ಕಾರಣವಾಗ್ತಿದೆ. ಜನರ ಆದಾಯ ಹೆಚ್ಚಾಗುತ್ತಿಲ್ಲ. ಆದರೆ ಬೆಲೆ ಏರಿಕೆ ನಿರಂತರವಾಗಿ ನಡೆಯುತ್ತಲೇ ಇದೆ. ಹೀಗಾದ್ರೆ ಬದುಕೋದು ಹೇಗೆ ಅನ್ನೋದು ಮಧ್ಯಮ ವರ್ಗದ ಜನರ ಆತಂಕವಾಗಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ…
ಚಿಕ್ಕಮಗಳೂರು: ವೈಎಸ್ ಆರ್ ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಪ್ರಾಣಿಗಳ ಕೊಬ್ಬು ಬಳಸಿ ತಿರುಪತಿ ಲಡ್ಡು ತಯಾರಿಸಲಾಗುತ್ತಿತ್ತು ಎಂಬ ಚಂದ್ರಬಾಬು ನಾಯ್ಡು ಆರೋಪಕ್ಕೆ ಸಂಬಂಧಿಸಿದಂತೆ ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿ ಪ್ರತಿಕ್ರಿಯೆ ನೀಡಿದರು. ಚಿಕ್ಕಮಗಳೂರಿನಲ್ಲಿ ಮಾಧ್ಯಮಗಳಿಗೆ ಹೇಳಿಕೆ ನೀಡಿದ ಅವರು, ಜನರ ಧಾರ್ಮಿಕ ಭಾವನೆಗಳ ಜೊತೆ ಯಾರೂ ಆಟವಾಡಬಾರದು. ಚಂದ್ರಬಾಬು ನಾಯ್ಡು ಅವರ ಹೇಳಿಕೆಯನ್ನು ನಾನೂ ಗಮನಿಸಿದ್ದೇನೆ. ಇದು ಚಿಕ್ಕ ವಿಚಾರವಲ್ಲ, ಗಂಭೀರವಾದ ವಿಚಾರ. ಚಂದ್ರಬಾಬು ನಾಯ್ಡು ಅವರ ಆರೋಪವನ್ನು ಗಂಭೀರವಾಗಿ ಪರಿಗಣಿಸೋಣ ಎಂದಿದ್ದಾರೆ. ತಿರುಪತಿ ಲಡ್ಡು ಪ್ರಸಾದದ ಜೊತೆ ಜನರ ಭಾವನಾತ್ಮಕ ಸಂಬಂಧವಿದೆ. ನಾವೆಲ್ಲರೂ ಲಡ್ಡುವನ್ನು ಪ್ರಸಾದದ ರೂಪದಲ್ಲಿ ಸ್ವೀಕರಿಸಿದ್ದೇವೆ. ಭಾವನಾತ್ಮಕ ವಿಚಾರದಲ್ಲಿ ಯಾರೂ ಆಟವಾಡಬಾರದು ಎಂದರು. ಚಂದ್ರಬಾಬು ನಾಯ್ಡು ಅವರ ಹೇಳಿಕೆ ಸತ್ಯವಾಗಿದ್ದರೆ ಇದನ್ನು ಗಂಭೀರವಾಗಿ ಪರಿಗಣಿಸಬೇಕು. ಇದರಿಂದ ಭಕ್ತರಲ್ಲಿಯೂ ಸಾಕಷ್ಟು ಗೊಂದಲಗಳುಂಟಾಗುತ್ತವೆ. ಹಾಗಾಗಿ ಭಕ್ತರ ಸಂಶಯ ದೂರವಾಗಿಸಲು ತನಿಖೆ ನಡೆಸಬೇಕು ಎಂದು ಒತ್ತಾಯಿಸಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149…