Author: admin

ಬೆಂಗಳೂರು:  ಹಿಂದಿನ ಬಿಜೆಪಿ ಸರ್ಕಾರದ ವಿರುದ್ಧ 40% ಗಂಭೀರ ಆರೋಪ ಮಾಡಿ ಸರ್ಕಾರವನ್ನೇ ನಡುಗಿಸಿದ್ದ ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣ (84) ಗುರುವಾರ ನಿಧನರಾಗಿದ್ದಾರೆ. ಕಳೆದ ಕೆಲವು ದಿನಗಳಿಂದಲೂ ಅವರು ಅನಾರೋಗ್ಯದಿಂದ ಬಳಲುತ್ತಿದ್ದರು. ಮೊನ್ನೆ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಅವರು ಮನೆಗೆ ಬಂದಿದ್ದರು. ಇಂದು ಬೆಳಗ್ಗೆ 10 ಗಂಟೆ ಸುಮಾರಿಗೆ ಅವರು ತಮ್ಮ ಮನೆಯಲ್ಲೇ ಹೃದಯಾಘಾತದಿಂದ ನಿಧನರಾಗಿದ್ದಾರೆ ಎಂದು ತಿಳಿದು ಬಂದಿದೆ. ಸಿಎಂ ಸಿದ್ದರಾಮಯ್ಯ ಸಂತಾಪ! ರಾಜ್ಯ ಗುತ್ತಿಗೆದಾರರ ಸಂಘದ ಅಧ್ಯಕ್ಷರಾದ ಕೆಂಪಣ್ಣನವರ ನಿಧನವಾರ್ತೆ ನೋವುಂಟುಮಾಡಿದೆ. ಹಿಂದಿನ ಸರ್ಕಾರದ ಅವಧಿಯಲ್ಲಿ ದೇಶಾದ್ಯಂತ ಸುದ್ದಿ ಮಾಡಿದ್ದ 40% ಕಮಿಷನ್ ಹಗರಣವನ್ನು ಹೊರತಂದು, ಗುತ್ತಿಗೆ ಕಾಮಗಾರಿಗಳಲ್ಲಿ ನಡೆಯುತ್ತಿದ್ದ ಭ್ರಷ್ಟಾಚಾರದ ವಿರುದ್ಧ ಅವರು ಸೆಟೆದು ನಿಂತಿದ್ದರು. ಯಾವುದೇ ಒತ್ತಡ, ಆಮಿಷಗಳಿಗೆ ಒಳಗಾಗದ ನಿರ್ಭೀತ ಧ್ವನಿಯೊಂದನ್ನು ನಾಡು ಇಂದು ಕಳೆದುಕೊಂಡಿದೆ. ಮೃತರ ಆತ್ಮಕ್ಕೆ ಚಿರಶಾಂತಿ ದೊರಕಲಿ, ಅವರ ಕುಟುಂಬ ವರ್ಗಕ್ಕೆ ಈ ನೋವು ಭರಿಸುವ ಶಕ್ತಿ ಸಿಗಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಸಿಎಂ ಸಿದ್ದರಾಮಯ್ಯ ತಮ್ಮ…

Read More

ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ(BMTC) ಸೆಪ್ಟೆಂಬರ್‌ 15ರಿಂದ ಅನ್ವಯವಾಗುವಂತೆ ಡಿಜಿಟಲ್‌ ಬಸ್‌ ಪಾಸ್‌ ವ್ಯವಸ್ಥೆ ಜಾರಿಗೊಳಿಸಿದೆ. ಈ ಡಿಜಿಟಲ್ ಬಸ್ ಪಾಸ್ ನ್ನು ಪ್ರಯಾಣಿಕರು ತಮ್ಮ ಮೊಬೈಲ್‌ ಫೋನ್‌ ನಲ್ಲಿಯೇ ಪಡೆದುಕೊಳ್ಳಬಹುದಾಗಿದೆ. ಡಿಜಿಟಲ್‌ ಪಾಸ್‌ ಡೌನ್‌ಲೋಡ್‌ ಮಾಡಿಕೊಳ್ಳುವುದು ಹೇಗೆ ಎಂದು ತಿಳಿದುಕೊಳ್ಳೋಣ…! ಮೊದಲು ಗೂಗಲ್‌ ಪ್ಲೇ ಸ್ಟೋರ್‌ ಗೆ ಹೋಗಿ Tummoc ಎಂದು ಹುಡುಕಾಟ ನಡೆಸಿ. ಆಗ ಅಲ್ಲಿ Tummoc App ದೊರಕುತ್ತದೆ. ಅದನ್ನು ಇನ್ ಸ್ಟಾಲ್ ಮಾಡಿಕೊಳ್ಳಿ. ಬಳಿಕ ಆಪ್‌ ತೆರೆಯಿರಿ. ಇಂಗ್ಲಿಷ್‌, ಕನ್ನಡ, ಹಿಂದಿ ಭಾಷೆ ಆಯ್ಕೆಗಳು ಕಾಣಿಸುತ್ತವೆ. ಇದು ದೆಹಲಿ ಮತ್ತು ಬೆಂಗಳೂರು ಬಿಎಂಟಿಸಿ ಬಸ್‌ ಪಾಸ್‌ಗೆ ನೆರವಾಗುವ ಆಪ್‌. ಕನ್ನಡ ಅಥವಾ ಇಂಗ್ಲಿಷ್‌ ಆಯ್ಕೆ ಮಾಡಿ. ಲೊಕೆಷನ್‌ ಆಯ್ಕೆ ನೀಡಿ. ಬಸ್‌, ಮೆಟ್ರೋ, ಡೈರೆಕ್ಟ್‌ ರೂಟ್‌, ಏರ್‌ಪೋರ್ಟ್‌ ರೈಲು ಇತ್ಯಾದಿ ಆಯ್ಕೆಗಳು ಕಾಣಿಸುತ್ತವೆ. ಅದಕ್ಕಿಂತಲೂ ಮೇಲೆ ಪಾಸ್‌ಗಳು ಮತ್ತು ಟಿಕೆಟ್‌ ಗಳು ಆಯ್ಕೆ ಇದೆ. ಅದರಲ್ಲಿ ಬಿಎಂಟಿಸಿ ಪಾಸ್‌ ಕ್ಲಿಕ್‌ ಮಾಡಿ. ಅಲ್ಲಿ ದಿನದ ಪಾಸ್‌,…

Read More

ಲೆಬನಾನ್‌ ದೇಶದಲ್ಲಿ ಸಾರ್ವಜನಿಕ ಸ್ಥಳಗಳು, ಮಾಲ್‌ ಗಳಲ್ಲಿ  ಪೇಜರ್‌, ಸೋಲಾರ್‌ ಪೆನಲ್‌ಗಳ ಸ್ಪೋಟದಿಂದ ಭಾರೀ ಸಾವು ನೋವುಗಳು ಸಂಭವಿಸಿವೆ. ವಿಶೇಷವಾಗಿ ಪೇಜರ್‌ ಗಳ ಬಳಕೆ ಇರುವ ಲೆಬನಾನ್‌ನಲ್ಲಿ ಸ್ಪೋಟಕ್ಕೆ ಬಳಸಿಕೊಳ್ಳಲಾಯಿತೇ ಎನ್ನುವ ಅನುಮಾನವಿದ್ದು, ತನಿಖೆಗೆ ಆದೇಶಿಸಲಾಗಿದೆ. ವಿಶೇಷವಾಗಿ ಪೇಜರ್‌ ಗಳ ಬಳಕೆ ಇರುವ ಲೆಬನಾನ್‌ ನಲ್ಲಿ ಸ್ಪೋಟಕ್ಕೆ ಬಳಸಿಕೊಳ್ಳಲಾಯಿತೇ ಎನ್ನುವ ಅನುಮಾನವಿದ್ದು, ತನಿಖೆಗೆ ಆದೇಶಿಸಲಾಗಿದೆ. ಲೆಬನಾನ್‌ ನ  ಬೈರೂತ್ ಸೇರಿದಂತೆ ಹಲವು ಕಡೆಗಳಲ್ಲಿ ಪೇಜರ್, ವಾಕಿ ಟಾಕಿ, ಸೋಲಾರ್ ಉಪಕರಣಗಳ ಸ್ಫೋಟ ಸಂಭವಿಸಿದೆ. ಇದರಿಂದಾಗಿ 32 ಮಂದಿ ಮೃತಪಟ್ಟಿದ್ದು, 3,250ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. ವಾಹನಗಳು ಬೆಂಕಿಗೆ ಆಹುತಿಯಾಗಿವೆ ಏಕ ಕಾಲಕ್ಕೆ ಹಲವು ಕಡೆಗಳಲ್ಲಿ ಸೋಲಾರ್‌ ಪೆನಲ್‌, ವಾಕಿ ಟಾಕಿಗಳು ಸ್ಪೋಟಗೊಂಡಿದ್ದು, ಹಲವು ಅನುಮಾನಗಳನ್ನು ಹುಟ್ಟು ಹಾಕಿದೆ. ಪೇಜರ್‌ಗಳನ್ನು ಗುರಿಯಾಗಿಟ್ಟುಕೊಂಡು ಉಗ್ರ ಸಂಘಟನೆಗಳು ದಾಳಿ ಮಾಡಿರಬೇಕು ಎನ್ನುವುದು ಪ್ರಾಥಮಿಕ ತನಿಖೆಯಿಂದ ದೊರೆತ ಮಾಹಿತಿ. ಪೇಜರ್‌ ಗಳನ್ನು ಗುರಿಯಾಗಿಟ್ಟುಕೊಂಡು ಉಗ್ರ ಸಂಘಟನೆಗಳು ದಾಳಿ ಮಾಡಿರಬೇಕು ಎಂದು ಪ್ರಾಥಮಿಕ ಮಾಹಿತಿ ಲಭ್ಯವಾಗಿದೆ.  ಗಾಯಗೊಂಡಿರುವ ಜನರು…

Read More

ವಿಜಯವಾಡ: ಜಗನ್‌ ಮೋಹನ್ ರೆಡ್ಡಿ ಮುಖ್ಯಮಂತ್ರಿಯಾಗಿ ವೈಎಸ್‌ಆರ್‌ಸಿ ಆಳ್ವಿಕೆ ಇದ್ದಾಗ, ತಿರುಮಲದ ಶ್ರೀ ವೆಂಕಟೇಶ್ವರ ಸ್ವಾಮಿ ದೇವಸ್ಥಾನದ ತಿರುಪತಿ ಲಡ್ಡು ತಯಾರಿಗೆ ಪರಿಶುದ್ಧ ತುಪ್ಪ ಬಳಸುವ ಬದಲು ಪ್ರಾಣಿ ಕೊಬ್ಬು ಬಳಸ್ತಾ ಇದ್ರು ಎಂದು ಆಂಧ್ರ ಪ್ರದೇಶ ಮುಖ್ಯಮಂತ್ರಿ ಎನ್‌.ಚಂದ್ರಬಾಬು ನಾಯ್ಡು ಗಂಭೀರ ಆರೋಪ ಮಾಡಿದ್ದಾರೆ. ಮುಖ್ಯಮಂತ್ರಿ ಎನ್‌ ಚಂದ್ರಬಾಬು ನಾಯ್ಡು ಅವರು ನೀಡಿರುವ ಹೇಳಿಕೆ ಭಾರಿ ಸಂಚಲನ ಸೃಷ್ಟಿಸಿದೆ. ವೈಎಸ್‌ ಆರ್‌ ಸಿ ಸರ್ಕಾರ  ತಿರುಮಲದಲ್ಲಿ ಅನ್ನ ಪ್ರಸಾದವಾಗಿ ಭಕ್ತರಿಗೆ ಕಳಪೆ ಆಹಾರವನ್ನು ನೀಡಿದ್ದಲ್ಲದೆ, ವೆಂಕಟೇಶ್ವರನಿಗೆ ಅರ್ಪಿಸುವ ಪ್ರಸಾದವನ್ನು ತಯಾರಿಸಲು ಕಳಪೆ ಗುಣಮಟ್ಟದ ಪದಾರ್ಥಗಳನ್ನು ಬಳಸಿದರು. ಶುದ್ಧ ತುಪ್ಪ ಬಳಸುವ ಬದಲು ಪ್ರಾಣಿಗಳ ಕೊಬ್ಬನ್ನು ಬಳಸಿದ್ದಾರೆ ಎಂದು ಆರೋಪಿಸಿದ್ದಾರೆ. ಇಂದು ನಾವು ಪರಿಶುದ್ಧ ತುಪ್ಪವನ್ನು ಬಳಸುತ್ತಿದ್ದೇವೆ. ದೇವಾಲಯದ ವ್ಯವಸ್ಥೆಯನ್ನು ಶುದ್ಧೀಕರಿಸಿದ್ದೇವೆ. ಪ್ರಸಾದ ಮತ್ತು ಆಹಾರದ ಗುಣಮಟ್ಟ ಸುಧಾರಿಸಿದೆ. ಅದೇ ರೀತಿ ಮತ್ತಷ್ಟು ಸುಧಾರಣೆಗಳನ್ನು ಮಾಡಲು ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದೆ ಎಂದು ನಾಯ್ಡು ವಿವರಿಸಿದರು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು…

Read More

ಹೈದರಾಬಾದ್:  ಲೈಂಗಿಕ ಕಿರುಕುಳ ಆರೋಪ ಎದುರಿಸುತ್ತಿರುವ ಖ್ಯಾತ ನೃತ್ಯ ನಿರ್ದೇಶಕ ಜಾನಿ ಮಾಸ್ಟರ್ ನನ್ನು ಗೋವಾದಲ್ಲಿ ಬಂಧಿಸಲಾಗಿದೆ. 21 ವರ್ಷದ ಮಹಿಳಾ ನೃತ್ಯ ಸಂಯೋಜಕಿಯೊಬ್ಬರಿಗೆ ಜಾನಿ ಮಾಸ್ಟರ್ ಲೈಂಗಿಕ ಕಿರುಕುಳ ನೀಡಿರುವ ಆರೋಪ ಎದುರಿಸುತ್ತಿದ್ದು, ಯುವತಿಯ ದೂರಿನ ನಂತರ ಜಾನಿ ಮಾಸ್ಟರ್ ತಲೆಮರೆಸಿಕೊಂಡಿದ್ದರು. ಜಾನಿ ಮಾಸ್ಟರ್ ಹೈದರಾಬಾದ್ ನಲ್ಲಿರುವ ಸ್ನೇಹಿತನ ಮನೆಯಲ್ಲಿರುವ ಮಾಹಿತಿ ಪೊಲೀಸರಿಗೆ ಸಿಕ್ಕಿತ್ತು. ಹೀಗಾಗಿ 4 ತಂಡಗಳನ್ನ ಮಾಡಿ ಪೊಲೀಸರು ಹುಡುಕಾಟ ನಡೆಸಿದ್ದರು. ಅಂತಿಮವಾಗಿ ಗೋವಾದಲ್ಲಿ ಜಾನಿ ಮಾಸ್ಟರ್ ಪೊಲೀಸರ ಬಲೆಗೆ ಬಿದ್ದಿದ್ದಾರೆ. ಇದೇ ರೀತಿಯ ಆರೋಪಕ್ಕೆ ಸಂಬಂಧಿಸಿದಂತೆ  ಈ ಹಿಂದೆಯೂ ಜಾನಿ ಮಾಸ್ಟರ್ 6 ತಿಂಗಳ ಕಾಲ ಜೈಲು ಸೇರಿದ್ದರು. ಇದೀಗ ಮತ್ತೆ ಅದೇ ಛಾಳಿ ಮುಂದುವರಿಸಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q

Read More

ಪಾವಗಡ:  ಜಿಲ್ಲಾ ಪಂಚಾಯತ್, ತುಮಕೂರು, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಮಧುಗಿರಿ ಮತ್ತು ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಇಲಾಖೆ, ಮಧುಗಿರಿ ರವರ ಸಂಯುಕ್ತ ಆಶ್ರಯದಲ್ಲಿ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಜಿಲ್ಲಾ ಮಟ್ಟದ  ವಿಜ್ಞಾನ ವಸ್ತು ಪ್ರದರ್ಶನ ಹಮ್ಮಿಕೊಳ್ಳಲಾಗಿತ್ತು. ಇದರಲ್ಲಿ ಸರ್ಕಾರಿ ಪ್ರೌಢಶಾಲೆ ಅರಸೀಕೆರೆಯ ವಿಧ್ಯಾರ್ಥಿಗಳಾದ ಭರತ್ M ಮತ್ತು ಯೋಗೇಶ್ ನಾಯಕ ಗುಂಪು ವಿಭಾಗದಲ್ಲಿ ಪ್ರಥಮ ಸ್ಥಾನ ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ. ಹಾಗೆಯೇ ಶಿಕ್ಷಕರ ವಿಭಾಗದಲ್ಲಿ ಸರ್ಕಾರಿ ಪ್ರೌಢಶಾಲೆ, ಅರಸೀಕೆರೆಯ ವಿಜ್ಞಾನ ಶಿಕ್ಷಕರು ಮತ್ತು ಪ್ರಭಾರಿ ಮುಖ್ಯಶಿಕ್ಷಕರಾದ ರೇಣುಕರಾಜ್ ಜಿ.ಹೆಚ್.ರವರು  ವಿಜ್ಞಾನ ಮಾದರಿ ವಸ್ತು ಪ್ರದರ್ಶನದಲ್ಲಿ ಪ್ರಥಮ ಸ್ಥಾನ ಗಳಿಸಿ ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ. ವಿಜೇತರನ್ನು ಸರ್ಕಾರಿ ಪ್ರೌಢಶಾಲೆಯ ಮುಖ್ಯಶಿಕ್ಷಕರು, ಸಿಬ್ಬಂದಿ ವರ್ಗ ಮತ್ತು ಎಸ್.ಡಿ.ಎಂ.ಸಿ. ಅಧ್ಯಕ್ಷರು, ಸರ್ವಸದಸ್ಯರು ಅಭಿನಂದಿಸಿದ್ದಾರೆ. ವರದಿ: ನಂದೀಶ್ ನಾಯ್ಕ, ಪಾವಗಡ ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್…

Read More

ತುಮಕೂರು:  ಜಿಲ್ಲೆಯ 10 ತಾಲ್ಲೂಕುಗಳಲ್ಲಿ ಪುರುಷ ಹಾಗೂ ಮಹಿಳೆಯರ ವಿಭಾಗದಲ್ಲಿ ಸೆಪ್ಟೆಂಬರ್ 21 ರಿಂದ 24ರವರೆಗೆ ದಸರಾ ಕ್ರೀಡಾಕೂಟದ ಸ್ಪರ್ಧೆಗಳನ್ನು ಏರ್ಪಡಿಸಲಾಗಿದೆ. ದಸರಾ ಕ್ರೀಡಾಕೂಟದ ಸ್ಪರ್ಧೆಗಳು ಸೆಪ್ಟೆಂಬರ್ 21ರಂದು ಜಿಲ್ಲೆಯ ಪಾವಗಡ ಹಾಗೂ ಕೊರಟಗೆರೆ ತಾಲ್ಲೂಕು ಕ್ರೀಡಾಂಗಣ; ಸೆಪ್ಟೆಂಬರ್ 23ರಂದು ಕುಣಿಗಲ್ ತಾಲ್ಲೂಕು ಕ್ರೀಡಾಂಗಣ, ಶಿರಾ ತಾಲ್ಲೂಕಿನ ಶ್ರೀ ವಿವೇಕಾನಂದ ತಾಲ್ಲೂಕು ಕ್ರೀಡಾಂಗಣ, ಚಿ.ನಾ.ಹಳ್ಳಿ ತಾಲ್ಲೂಕು ಕ್ರೀಡಾಂಗಣ ಹಾಗೂ ತುರುವೇಕೆರೆ ತಾಲ್ಲೂಕು ಕ್ರೀಡಾಂಗಣ; ಸೆ.24ರಂದು ತಿಪಟೂರು ಕಲ್ಪತರು ತಾಲ್ಲೂಕು ಕ್ರೀಡಾಂಗಣ, ತುಮಕೂರು ಮಹಾತ್ಮಗಾಂಧಿ ಜಿಲ್ಲಾ ಕ್ರೀಡಾಂಗಣ, ಗುಬ್ಬಿ ಸರ್ಕಾರಿ ಪದವಿ ಪೂರ್ವ ಕಾಲೇಜು ಮೈದಾನ ಹಾಗೂ ಮಧುಗಿರಿ ರಾಜೀವ್ ಗಾಂಧಿ ತಾಲ್ಲೂಕು ಕ್ರೀಡಾಂಗಣದಲ್ಲಿ ನಡೆಯಲಿದ್ದು, ಆಸಕ್ತ ಕ್ರೀಡಾಕೂಟ ನಡೆಯುವ ಒಂದು ದಿನ ಮುಂಚಿತವಾಗಿ ನೋಂದಾಯಿಸಿಕೊಳ್ಳತಕ್ಕದ್ದು. ಹೆಚ್ಚಿನ ಮಾಹಿತಿ ಹಾಗೂ ನೋಂದಣಿಗಾಗಿ ಪಾವಗಡ ಮೊ.ಸಂ.9741626791; ಕೊರಟಗೆರೆ-8217043366; ಕುಣಿಗಲ್-7259938630; ಶಿರಾ-9731526412; ಚಿ.ನಾ.ಹಳ್ಳಿ-9880440175; ತುರುವೇಕೆರೆ-6363406839; ತಿಪಟೂರು-8660356249; ತುಮಕೂರು-6360720198; ಗುಬ್ಬಿ-7619626939/9901009501; ಮಧುಗಿರಿ-9535340677ನ್ನು ಸಂಪರ್ಕಿಸಬಹುದಾಗಿದೆ. ತಾಲ್ಲೂಕು ಮಟ್ಟದಲ್ಲಿ ಆಯೋಜಿಸುವ ಸ್ಪರ್ಧೆಗಳ ವಿವರ: ಅಥ್ಲೆಟಿಕ್ಸ್ ಸ್ಪರ್ಧೆ: ಪುರುಷ ವಿಭಾಗದಲ್ಲಿ 100,…

Read More

ತುಮಕೂರು:  ಗೃಹ ಸಚಿವ ಜಿ. ಪರಮೇಶ್ವರ್ ಅವರು ಪ್ರತಿನಿಧಿಸುವ ಕೊರಟಗೆರೆ ವಿಧಾನಸಭಾ ಕ್ಷೇತ್ರದಲ್ಲಿ ಗಣಪತಿ ವಿಸರ್ಜನೆ ಸಂದರ್ಭದಲ್ಲಿ ಹಿಂದೂ ಹಾಗೂ ಮುಸ್ಲಿಂ ಸಮುದಾಯದ ಮುಖಂಡರು ಸೌಹಾರ್ದಯುತವಾಗಿ ಪಾಲ್ಗೊಂಡರು. ಕೊರಟಗೆರೆ ಪಟ್ಟಣದಲ್ಲಿ ನಡೆದ  ಮೆರವಣಿಗೆಯ ದಾರಿಯುದ್ದಕ್ಕೂ  ಮುಖಂಡರು ಗಣಪತಿ ವಿಸರ್ಜನೆಗೆ ತೆರಳುತ್ತಿದ್ದ ಭಕ್ತರಿಗೆ ಸಿಹಿ ತಿಂಡಿ ವಿತರಿಸಿದರು. ಮುಸ್ಲಿಂ ಸಮುದಾಯದವರು ಮೆರವಣಿಗೆಯಲ್ಲಿಯೂ ಕೂಡ ಪಾಲ್ಗೊಂಡು ಶಾಂತಿ ಸೌಹಾರ್ದತೆಯನ್ನು ಮೆರೆದರು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q

Read More

ತುಮಕೂರು: ಶಿರಾ ಗೇಟ್–ಗುಬ್ಬಿ ಗೇಟ್‌ವರೆಗೂ ಸಂಪರ್ಕಿಸುವ ವರ್ತುಲ ರಸ್ತೆ ಕಾಮಗಾರಿಯ ಭೂಸ್ವಾಧೀನ ಪ್ರಕ್ರಿಯೆಗೆ ಸಂಬಂಧಿಸಿದಂತೆ ಸರ್ಕಾರದಿಂದ ಅಂತಿಮ ಅಧಿಸೂಚನೆ ಹೊರಡಿಸಲಾಗಿದ್ದು, ಶೀಘ್ರವಾಗಿ ರಸ್ತೆ ಕಾಮಗಾರಿಯನ್ನು ಪೂರ್ಣಗೊಳಿಸುವಂತೆ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಲೋಕೋಪಯೋಗಿ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು. ವರ್ತುಲ ರಸ್ತೆ ಕಾಮಗಾರಿ ಪರಿಶೀಲನೆಗಾಗಿ ಭೇಟಿ ನೀಡಿದ ಸಂದರ್ಭದಲ್ಲಿ ಮಾತನಾಡಿದ ಅವರು, ತಾಲ್ಲೂಕಿನ ಕಸಬಾ ಉತ್ತರ ಹೋಬಳಿ ವ್ಯಾಪ್ತಿ ಅಮಾನಿಕೆರೆ ಗ್ರಾಮದ ಸರ್ವೇ ನಂಬರ್ 37/1, 37/2, 37/3ರಲ್ಲಿ ಒಟ್ಟು 0.33 ಗುಂಟೆ ಜಮೀನನ್ನು ಈ ವರ್ತುಲ ರಸ್ತೆ ಅಭಿವೃದ್ಧಿಗಾಗಿ ಭೂಸ್ವಾಧೀನಪಡಿಸಿಕೊಳ್ಳಲು ಸರ್ಕಾರದಿಂದ ಅಂತಿಮ ಅಧಿಸೂಚನೆ ಹೊರಡಿಸಲಾಗಿದೆ. ಭೂಸ್ವಾಧೀನ ಪ್ರಕ್ರಿಯೆಯಲ್ಲಿ ಪಾರದರ್ಶಕತೆ ಕಾಪಾಡಿಕೊಂಡು ಸ್ವಾಧೀನಪಡಿಸಿಕೊಂಡ ಭೂ ಮಾಲೀಕರಿಗೆ ನಿಗದಿತ ಅವಧಿಯೊಳಗೆ ಪರಿಹಾರ ನೀಡಬೇಕೆಂದು ಅಧಿಕಾರಿಗಳಿಗೆ ಸೂಚನೆ ನೀಡಿದರು. ಈ ಸಂದರ್ಭದಲ್ಲಿ ಉಪ ವಿಭಾಗಾಧಿಕಾರಿ ಗೌರವ ಕುಮಾರ್ ಶೆಟ್ಟಿ, ತಹಶೀಲ್ದಾರ್ ರಾಜೇಶ್ವರಿ, ಲೋಕೋಪಯೋಗಿ ಇಲಾಖೆ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಸೇರಿದಂತೆ ಮತ್ತಿತರ ಅಧಿಕಾರಿಗಳು ಉಪಸ್ಥಿತರಿದ್ದರು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್…

Read More

ರಾಯಚೂರು: ಕಳೆದ ಲೋಕಸಭಾ ಚುನಾವಣೆಯಲ್ಲಿ ಅನಂತ್ ಕುಮಾರ್ ಹೆಗಡೆಗೆ ಟಿಕೆಟ್ ನೀಡದಂತೆ ತಡೆದದ್ದು ನಾನೇ ಅಂತ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಹೇಳಿದ್ದಾರೆ. ನಗರದ ಅಂಬೇಡ್ಕರ್ ವೃತ್ತದಲ್ಲಿ ಇಂದು ಬಿಜೆಪಿಯಿಂದ ರಾಹುಲ್ ಗಾಂಧಿ ಅವರು ಎಸ್ಸಿ, ಎಸ್ಟಿ ಮೀಸಲಾತಿ ವಿರೋಧಿ ಹೇಳಿಕೆ ನೀಡಿರುವುದನ್ನು ಖಂಡಿಸಿ ಹಮ್ಮಿಕೊಂಡಿದ್ದ ಪ್ರತಿಭಟನೆಯಲ್ಲಿ ಭಾಗವಹಿಸಿ ಅವರು ಮಾತನಾಡುತ್ತಿದ್ದರು. ಕೇಂದ್ರದ ಮಂತ್ರಿಯಾಗಿದ್ದಾಗ ಅನಂತ್ ಕುಮಾರ್ ಸಂವಿಧಾನದ ಬದಲಾವಣೆ ಬಗ್ಗೆ ಮಾತನಾಡಿದ್ರು. ಪ್ರಧಾನ ಮಂತ್ರಿ ನರೇಂದ್ರ ಮೋದಿ ಪಾರ್ಲಿಮೆಂಟ್ ಕರೆಸಿ, ದೇಶದ ಕ್ಷಮೆ ಕೇಳುವಂತೆ ಹೇಳಿದ್ರು. ಮತ್ತೆ ಸಂವಿಧಾನ ಬದಲಾವಣೆ ಬಗ್ಗೆ ಮಾತನಾಡಿದ್ರು. ಅದಕ್ಕೆ ನಾನೇ ನಮ್ಮ ಮುಖಂಡರಿಗೆ ಖಡಕ್ ಆಗಿ, ಯಾವುದೇ ಕಾರಣಕ್ಕೂ ಟಿಕೆಟ್ ಕೊಡಬಾರದು ಅಂತ ಹೇಳಿದ್ದೆ. ನಮ್ಮ ಪಕ್ಷ ಅವರಿಗೆ ಟಿಕೆಟ್ ಕೊಡದೆ ತಿರಸ್ಕಾರ ಮಾಡಿಬಿಟ್ಟಿತು. ಇದು ನಮ್ಮ ಬದ್ಧತೆ. ಭಾರತೀಯ ಜನತಾ ಪಕ್ಷದ ತಾಕತ್ತು ಏನ್ ಅಂತ ತೋರಿಸಿ ಆಯ್ತು. ಈಗ ನಿಮ್ಮ ತಾಕತ್ತು ತೋರಿಸಿ ಎಂದು ಸವಾಲು  ಹಾಕಿದರು. ಇದೇ ವೇಳೆ  ಬಿಜೆಪಿ…

Read More