Author: admin

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿಯವರ ಭಯದಿಂದಾಗಿ ಕಾಂಗ್ರೆಸ್‌ ಒಂದು ದೇಶ, ಒಂದು ಚುನಾವಣೆಯನ್ನು ವಿರೋಧಿಸ್ತಾ ಇದೆ ಅಂತ ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಟೀಕಿಸಿದ್ದಾರೆ. ಬಿಜೆಪಿ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಒಂದು ದೇಶ, ಒಂದು ಚುನಾವಣೆಯಿಂದ  ತೆರಿಗೆದಾರರ ಹಣ ಉಳಿತಾಯವಾಗುತ್ತದೆ ಎಂದು ಅವರು ಹೇಳಿದ್ದಾರೆ. ಸ್ಥಳೀಯ ಸಂಸ್ಥೆಗಳ ಚುನಾವಣೆ, ವಿಧಾನಸಭೆ, ಲೋಕಸಭೆ ಹೀಗೆ ಒಂದೊಂದು ಚುನಾವಣೆ ಒಮ್ಮೊಮ್ಮೆ ನಡೆದಾಗ ನೀತಿ ಸಂಹಿತೆ ಜಾರಿಯಾಗುತ್ತದೆ. ಇದರಿಂದಾಗಿ ಕಾಮಗಾರಿಗಳು ವಿಳಂಬವಾಗಿ ಸರ್ಕಾರ ಯಾವುದೇ ಯೋಜನೆಯನ್ನು ಸರಿಯಾಗಿ ಜಾರಿ ಮಾಡಲು ಸಾಧ್ಯವಾಗುವುದಿಲ್ಲ. ಹೊಸ ಕ್ರಮದಿಂದ ಈ ಸಮಸ್ಯೆ ನಿವಾರಣೆಯಾಗಲಿದೆ  ಎಂದು ತಿಳಿಸಿದರು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q

Read More

ವಿಜಯಪುರ: ಸಿಎಂ ಸಿದ್ದರಾಮಯ್ಯ ಗಟ್ಟಿಯಾಗಿದ್ದಾರೆ. ಅವರ ಕುರ್ಚಿಯು ಕೂಡ ಗಟ್ಟಿ ಇದೆ. ಆದರೆ ಈಗ ಅಲುಗಾಡುತ್ತಿರುವುದು ಬಿ ವೈ ವಿಜಯೇಂದ್ರ ಕುರ್ಚಿ ಎಂದು ಸಚಿವ ಎಂ.ಬಿ.ಪಾಟೀಲ್ ತಿರುಗೇಟು ನೀಡಿದ್ದಾರೆ. ಸಿಎಂ ಸಿದ್ದರಾಮಯ್ಯನವರ ಕುರ್ಚಿ ಅಲುಗಾಡುತ್ತಿದ್ದು ಆ ಕಾರಣದಿಂದ ಕಲ್ಯಾಣ ಕರ್ನಾಟಕ ಭಾಗದಲ್ಲಿ ಸಂಪುಟ ಸಭೆ ನಡೆಸಿದ್ದಾರೆ ಎಂಬ ವಿಜಯೇಂದ್ರ ಹೇಳಿಕೆಗೆ ವಿಜಯಪುರದಲ್ಲಿ ಪ್ರತಿಕ್ರಿಯೆ ನೀಡಿದ ಎಂ.ಬಿ.ಪಾಟೀಲ್,  ಈಗ ಬಿ.ವೈ.ವಿಜಯೇಂದ್ರ ಕುರ್ಚಿ ಅಲುಗಾಡುತ್ತಿದೆ ಎಂದರು. ಬಸನಗೌಡ ಪಾಟೀಲ್ ಯತ್ನಾಳ, ರಮೇಶ್ ಜಾರಕಿಹೊಳಿ ಸೇರಿದಂತೆ ಅನೇಕರಿಂದ ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಕುರ್ಚಿ ಅಲಗಾಡುತ್ತಿದೆ ಹೀಗಾಗಿ ವಿಜಯೇಂದ್ರ ಮೊದಲು ತಮ್ಮ ಕುರ್ಚಿ ಕಟ್ಟಿ ಮಾಡಿಕೊಳ್ಳಲಿ ಎಂದು ಅವರು ತಿರುಗೇಟು ನೀಡಿದರು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q

Read More

ಬೆಂಗಳೂರು : ಮದ್ಯಪ್ರಿಯರಿಗೆ ಮತ್ತೆ ಬೆಲೆ ಏರಿಕೆಯ ಭಾರ ಹೆಗಲಿಗೇರಿಸಲು ರಾಜ್ಯ ಸರ್ಕಾರ ಮುಂದಾಗಿದ್ದು, ಬಿಯರ್ ಬೆಲೆ ಏರಿಕೆಗೆ ಸರ್ಕಾರ ಮುಂದಾಗಿದೆ ಎಂದು ತಿಳಿದು ಬಂದಿದೆ. ಬಿಯರ್ ದರ 10ರಿಂದ 15 ರೂಪಾಯಿ ಹೆಚ್ಚಳವಾಗುವ ಸಾಧ್ಯತೆಗಳಿವೆ ಎನ್ನಲಾಗಿದೆ. ಕಳೆದ 15 ತಿಂಗಳಲ್ಲಿ ಎರಡು ಬಾರಿ ಮದ್ಯದ ಬೆಲೆ ಏರಿಕೆ ಮಾಡಿದರೂ ರಾಜ್ಯ ಸರ್ಕಾರ ಮತ್ತೆ ಮೂರನೇ ಬಾರಿಗೆ ಬೆಲೆ ಏರಿಕೆಗೆ ಮುಂದಾಗಿರುವುದು ಅಚ್ಚರಿಗೆ ಕಾರಣವಾಗಿದೆ. ಹೊಸ ದರ ಅಕ್ಟೋಬರ್ ಆರಂಭದಿಂದ ಈ ಹೊಸ ದರ ಜಾರಿಗೆ ಬರುವ ಸಾಧ್ಯತೆಯಿದೆ. ಬುಲೆಟ್, ಪವರ್ ಕೂಲ್, ಲೆಜೆಂಡ್, ಆರ್.ಸಿ.ಸ್ಟ್ರಾಂಗ್, ನಾಕೌಟ್ ಮತ್ತಿತರ ಬ್ಯಾಂಡ್‌ ಗಳ ಬೆಲೆಯಲ್ಲಿ ಶೇ.10 ರಿಂದ ಶೇ.15ರಷ್ಟು ಬೆಲೆ ಹೆಚ್ಚಳ ಮಾಡಲು ಚಿಂತನೆ ನಡೆಸಿದೆ ಎನ್ನಲಾಗಿದೆ. ಪ್ರತಿ ಬಾಟಲಿ ಬಿಯರ್ ಮೇಲಿನ ದರವನ್ನ 10ರಿಂದ 15 ರೂಪಾಯಿ ಏರಿಸಲು ಅಬಕಾರಿ ಇಲಾಖೆ ಪ್ರಸ್ತಾವನೆ ಸಲ್ಲಿಸಿದ್ದು, ಈ ಪ್ರಸ್ತಾವನೆಯನ್ನು ರಾಜ್ಯ ಸರ್ಕಾರ ಅಂಗೀಕರಿಸುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ…

Read More

ರಾಮನಗರ: ಗುತ್ತಿಗೆದಾರನಿಗೆ ಜೀವ ಬೆದರಿಕೆ ಹಾಗೂ ಜಾತಿ ನಿಂದನೆ ಆರೋಪ ಎದುರಿಸಿ ನ್ಯಾಯಾಂಗ ಬಂಧನದಲ್ಲಿರುವ ರಾಜರಾಜೇಶ್ವರಿ ನಗರ ಕ್ಷೇತ್ರದ ಬಿಜೆಪಿ ಶಾಸಕ ಮುನಿರತ್ನಗೆ ಮತ್ತೊಂದು ಸಂಕಷ್ಟ ಎದುರಾಗಿದೆ. ರಾಮನಗರ ಠಾಣೆಗೆ ಮಹಿಳೆಯೊಬ್ಬರು ಆಗಮಿಸಿ ಮುನಿರತ್ನ ವಿರುದ್ಧ ದೂರು ನೀಡಲು ಮುಂದಾಗಿದ್ದಾರೆ ಎಂದು ತಿಳಿದು ಬಂದಿದ್ದು, ಬೆಂಗಳೂರು ಮೂಲದ ಮಹಿಳೆ ರಾಮನಗರ ಪೊಲೀಸ್ ಠಾಣೆಗೆ ಆಗಮಿಸಿದ್ದು, ದೂರು ನೀಡಲು ತಯಾರಿ ನಡೆಯುತ್ತಿದೆ ಎಂದು ವರದಿಯಾಗಿದೆ. ಮುನಿರತ್ನ ನಾಯ್ಡು ತನ್ನ ಜೊತೆಗೆ ಅನುಚಿತವಾಗಿ ವರ್ತಿಸಿರುವುದಾಗಿ ಮಹಿಳೆ ದೂರಿದ್ದಾರೆನ್ನಲಾಗಿದೆ. ಡಿವೈಎಸ್ಪಿ ಕಚೇರಿಯಲ್ಲಿ ಮಹಿಳೆಯ ಜೊತೆ ಪೊಲೀಸರು ಸದ್ಯ ಮಾತುಕತೆ ನಡೆಸುತ್ತಿದ್ದಾರೆ. ಕಗ್ಗಲೀಪುರ ಪೊಲೀಸ್ ಠಾಣೆಗೆ ರಾಮನಗರ ಪೊಲೀಸರು ಮಹಿಳೆಯನ್ನು ಕರೆದುಕೊಂಡು ಹೋಗಿದ್ದಾರೆ ಎಂದು ವರದಿಗಳಿಂದ ತಿಳಿದು ಬಂದಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q

Read More

ದೊಡ್ಡಬಳ್ಳಾಪುರ: ಬಿಜೆಪಿ ಶಾಸಕ ಮುನಿರತ್ನಂ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿ ಯುವ ಒಕ್ಕಲಿಗ ಗೆಳೆಯರ ಬಳಗ ಮತ್ತು ಕೆಂಪೇಗೌಡರ ಜಿಲ್ಲಾ ಮಹಿಳಾ ಒಕ್ಕಲಿಗರ ಸಂಘ ಪ್ರತಿಭಟನೆ ನಡೆಸಿತು. ದೊಡ್ಡಬಳ್ಳಾಪುರ ನಗರದ ತಾಲ್ಲೂಕು ಕಚೇರಿ ಮುಂದೆ ಬುಧವಾರ ಪ್ರತಿಭಟನೆ ನಡೆಯಿತು. ಒಕ್ಕಲಿಗ ಸಮುದಾಯದ ಮಹಿಳೆಯರ ಬಗ್ಗೆ ಮುನಿರತ್ನಂ ಕೀಳುಮಟ್ಟದ ಭಾಷೆ ಪ್ರಯೋಗಿಸಿರುವುದನ್ನು ಪ್ರತಿಭಟನಾಕಾರರು ತೀವ್ರವಾಗಿ ಖಂಡಿಸಿದರು. ಬೆಂಗಳೂರಿನ ಬಿಬಿಎಂಪಿ ವ್ಯಾಪ್ತಿಯ ಒಕ್ಕಲಿಗ ಜನಾಂಗದ ಗುತ್ತಿಗೆದಾರರೊಬ್ಬರನ್ನು ಶಾಸಕ ಮುನಿರತ್ನಂ ನಾಯ್ಡು ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಲ್ಲದೆ, ತುಚ್ಛವಾಗಿ ಮಾತನಾಡಿ ಗುತ್ತಿಗೆದಾರರನ್ನು ಹೆದರಿಸಿ, ಜೀವ ಬೆದರಿಕೆ ಒಡ್ಡಿದ್ದಾರೆ ಎಂದು ಪ್ರತಿಭಟನಾನಿರತರು ದೂರಿದರು. ಬೆದರಿಕೆಯ ಬಗ್ಗೆ ಆಡಿಯೊ ಧ್ವನಿ ಮುದ್ರಣ ಸಾಮಾಜಿಕ ಜಾಲತಾಣದಲ್ಲಿ ಮತ್ತು ಟಿ.ವಿ ಮಾಧ್ಯಮಗಳಲ್ಲಿ ಪ್ರಸಾರವಾಗಿವೆ. ಒಬ್ಬ ಜವಾಬ್ದಾರಿಯುತ ಪ್ರತಿನಿಧಿಯಾದ ಶಾಸಕರು ಆಡಿರುವ ಮಾತುಗಳು ಮತ್ತು ನಿಂದಿಸಿರುವ ಶಬ್ದಗಳನ್ನು ಕೇಳಿದರೆ ಶಾಸಕ ಸ್ಥಾನಕ್ಕೆ ಅರ್ಹನಾಗಲು ಸಾಧ್ಯವಿಲ್ಲ. ರಾಜ್ಯಪಾಲರು ಮುನಿರತ್ನಂ ಅವರನ್ನು ಶಾಸಕ ಸ್ಥಾನದಿಂದ ಅನರ್ಹಗೊಳಿಸಬೇಕು ಒತ್ತಾಯಿಸಿದರು. ಕಾಂಗ್ರೆಸ್‌ ಮುಖಂಡ ಡಿ.ಸಿ.ಶಶಿಧರ್, ವಿಶ್ವಾಸ್, ಎಚ್‌.ಮುನಿಪಾಪ್ಪಣ್ಣ,…

Read More

ತುಮಕೂರು: ಜಿಲ್ಲೆಯ ಕೊರಟಗೆರೆಯಲ್ಲಿ ಗಣಪತಿಗಳ ವಿಸರ್ಜನಾ ಕಾರ್ಯಕ್ರಮ ಇತಿಹಾಸ ಸೃಷ್ಟಿಸಿದ್ದು, ಹಿಂದೂ- ಮುಸ್ಲಿಂ ಸಮುದಾಯದ ಭಾವೈಕ್ಯತೆಯ ಸಂಗಮಕ್ಕೆ ಸಾಕ್ಷಿಯಾಗಿದೆ. ಏಕಕಾಲದಲ್ಲಿ 14 ಗಣಪತಿಗಳ ಕಲ್ಯಾಣಿಯಲ್ಲಿ ವಿಸರ್ಜನೆ ಮಾಡಲಾಯಿತು. ಕೊರಟಗೆರೆ ಪೊಲೀಸ್ ಇಲಾಖೆ ಹಾಗೂ ಸಾರ್ವಜನಿಕರಿಂದ ಸ್ನೇಹ ಮಿಲನದ ಕಾರ್ಯಕ್ರಮ ಎಂದರೆ ತಪ್ಪಾಗಲಾರದು. ಕಾರ್ಯಕ್ರಮದಲ್ಲಿ 250ಕ್ಕೂ ಹೆಚ್ಚು ಪೊಲೀಸ್ ನಿಯೋಜನೆ ಮಾಡಲಾಗಿತ್ತು. ಪೊಲೀಸ್ ಇಲಾಖೆಯ ಸಹಯೋಗದೊಂದಿಗೆ ಎಲ್ಲಾ ವಾರ್ಡ್ ಗಳ ಗಣಪತಿಗಳನ್ನ ಗಣಪತಿ ಹಬ್ಬದಿಂದ 11 ದಿನಗಳ ಕಾಲ ಪ್ರತಿಷ್ಠಾಪಿಸಿ ವಿಶೇಷ ಪೂಜಾ ಕಾರ್ಯಕ್ರಮಗಳನ್ನು ನೆರವೇರಿಸಿ 11ನೇ ದಿನಕ್ಕೆ ವಿಸರ್ಜನೆ ಮಾಡಲು ನಿರ್ಧರಿಸಲಾಗಿತ್ತು. ಅದರಂತೆ ಇಂದು ಅದ್ದೂರಿಯಾಗಿ ಪಟ್ಟಣದ ರಾಜ ಬೀದಿಗಳಲ್ಲಿ ವಿವಿಧ ಸಂಸ್ಕೃತಿ ಕಾರ್ಯಕ್ರಮಗಳೊಂದಿಗೆ ಮೆರವಣಿಗೆಯನ್ನು ಮಾಡಿ. ಸಿಡಿ ಮದ್ದುಗಳನ್ನ ಸಿಡಿಸಿ ಸಿಹಿ ಹಂಚಿ ಸಾರ್ವಜನಿಕರು ಸಂಭ್ರಮಿಸಿದರು. ಮುಸಲ್ಮಾನರು ಕೂಡ ಗಣೇಶ ಮೂರ್ತಿಗಳ ಮೆರವಣಿಗೆ ವಿಶೇಷ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಭಕ್ತಾದಿಗಳಿಗೆ ಮಜ್ಜಿಗೆ ವಿತರಣೆ ಮಾಡಿ ಭಾವೈಕ್ಯತೆ ಬೆರೆದರು. ಕೊರಟಗೆರೆಯ ಇತಿಹಾಸದಲ್ಲಿ ಮೊಟ್ಟ ಮೊದಲ ಬಾರಿಗೆ ವೈಭವದ ಮೆರೆಗು ತಂದ ಗಣಪತಿಗಳ ವಿಸರ್ಜನಾ…

Read More

ನವದೆಹಲಿ: ದೆಹಲಿಯ ನೂತನ ಸಿಎಂ ಆಗಿ ಅತಿಶಿ ಮರ್ಲೆನಾ ಸಿಂಗ್ ಸೆ.21 ರಂದು ಪದಗ್ರಹಣ ಮಾಡಲಿದ್ದಾರೆ ಎಂದು ತಿಳಿದು ಬಂದಿದೆ. ದೆಹಲಿಯ ಕಲ್ಕಾಜಿ ಕ್ಷೇತ್ರದ ಶಾಸಕಿ, ಅತಿಶಿ ದೆಹಲಿಯ ನೂತನ ಸಿಎಂ ಆಗಿ ಆಯ್ಕೆಗೊಂಡಿರುವುದಾಗಿ ಸಿಎಂ ಕೇಜ್ರಿವಾಲ್ ಅವರು ದೃಢಪಡಿಸಿದ್ದಾರೆ ಎಂದು ಹೇಳಲಾಗಿದೆ. ಆಪ್ ಶಾಸಕಾಂಗ ಪಕ್ಷದ ಸಭೆಯಲ್ಲಿ ಅತಿಶಿ ಅವರನ್ನು ಸಿಎಂ ಆಗಿ ಆಯ್ಕೆ ಮಾಡಲಾಗಿದ್ದು, ಸೆ.21 ರಂದು ದೆಹಲಿ ನೂತನ ಸಿಎಂ ಆಗಿ ಅತಿಶಿ ಮರ್ಲೆನಾ ಸಿಂಗ್ ಪದಗ್ರಹಣ ಮಾಡಲಿದ್ದಾರೆ ಎಂದು ತಿಳಿದು ಬಂದಿದೆ. ಅತಿಶಿ ಮರ್ಲೆನಾ ಸಿಂಗ್ ರವರು ದೆಹಲಿಯ ಕಲ್ಕಾಜಿಯಿಂದ ಶಾಸಕರಾಗಿದ್ದಾರೆ. ಇವರು ಆಮ್ ಆದ್ಮಿ ಪಕ್ಷದ ರಾಜಕೀಯ ವ್ಯವಹಾರಗಳ ಸಮಿತಿಯ ಸದಸ್ಯರಾಗಿದ್ದಾರೆ ಮತ್ತು ಪ್ರಸ್ತುತ ದೆಹಲಿ ಸರ್ಕಾರದಲ್ಲಿ ಶಿಕ್ಷಣ , PWD, ಸಂಸ್ಕೃತಿ ಮತ್ತು ಪ್ರವಾಸೋದ್ಯಮ ಸಚಿವರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಮಾತ್ರವಲ್ಲದೆ ದೆಹಲಿಯ ಮಾಜಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರಿಗೆ ಪ್ರಾಥಮಿಕವಾಗಿ ಶಿಕ್ಷಣದ ಸಲಹೆಗಾರರಾಗಿ ಜುಲೈ 2015 ರಿಂದ 17 ಏಪ್ರಿಲ್ 2018 ರವರೆಗೆ…

Read More

ತಿಪಟೂರು: ನಗರದ ಆರ್ ಎಂಸಿ ಯಾರ್ಡ್ ನಲ್ಲಿರುವ ತಾಲೂಕು ವ್ಯವಸಾಯೋತ್ಪನ್ನ ಮಾರಾಟ ಸಹಕಾರ ಸಂಘ ನಿಯಮಿತ (ಟಿಎಪಿಸಿಎಂಎಸ್) ನ 2023-24ನೇ ಸಾಲಿನ 73ನೇ ವರ್ಷದ ಸರ್ವ ಸದಸ್ಯರ ವಾರ್ಷಿಕ ಸಭೆಯನ್ನು ಉದ್ಘಾಟಿಸಿ ಮಾತನಾಡಿದ ಶಾಸಕ ಕೆ.ಷಡಕ್ಷರಿ, ಸರ್ಕಾರದ ಆದೇಶದಂತೆ ಸಹಕಾರಿಯೂ ರೈತರಿಗೆ ಕೃಷಿ ಸಾಲಕ್ಕೆ ಶೂನ್ಯ ಬಡ್ಡಿ ದರ ನಿಗದಿ ಮಾಡಿ ರೈತರ ಅಭಿವೃದ್ಧಿಗೆ ಕಾರಣವಾಗಿದ್ದು, ಗ್ರಾಮೀಣ ಪ್ರದೇಶದಲ್ಲಿ ಇಂದು ರೈತರು ತಮ್ಮ ಜಮೀನು ಅಭಿವೃದ್ಧಿಪಡಿಸಿಕೊಂಡು ಹೊಸ ಹೊಸ ಬೆಳೆಗಳನ್ನು ಬೆಳೆಯುವಲ್ಲಿ ಸಹಕಾರಿಯ ಕೊಡುಗೆ ತುಂಬಾ ದೊಡ್ಡದಿದೆ ಎಂದರು. ಸಾಲ ಪಡೆದ ರೈತರು ಸಕಾಲದಲ್ಲಿ ಸಾಲವನ್ನು ಮರುಪಾವತಿಸಿ ಸಹಕಾರಿ ಕ್ಷೇತ್ರದ ಅಭಿವೃದ್ಧಿಗೆ ಕಾರಣರಾಗಬೇಕು. ಸದಸ್ಯರು ಸಹಕಾರ ನೀಡಿದಾಗ ಸಂಘ ಹೆಚ್ಚಿನ ಅಭಿವೃದ್ಧಿ ಕಾಣುತ್ತದೆ. ಸಹಕಾರಿ ಸಂಘಕ್ಕೆ ಕರ್ನಾಟಕದ ಕೊಡುಗೆ ತುಂಬಾ ಗಣನೀಯವಾಗಿದ್ದು ಸಹಕಾರ ತತ್ವ ಬದುಕಿನ ಭಾಗವಾಗಬೇಕೆಂದರು. ಈ ಕಾರ್ಯಕ್ರಮದಲ್ಲಿ ಸಹಕಾರಿ ಸದಸ್ಯ ರ ವಿದ್ಯಾರ್ಥಿಗಳಿಗೆ 10ನೇ ತರಗತಿ ಮತ್ತು ದ್ವಿತೀಯ ಪಿಯುಸಿ ಅತಿ ಹೆಚ್ಚು ಅಂಕ ಪಟ್ಟ ಮಕ್ಕಳಿಗೆ ಪ್ರತಿಭಾ…

Read More

ಪಾವಗಡ: ಮೃತದೇಹನ ಸಾಗಿಸಲು ಆಂಬುಲೆನ್ಸ್ ಇಲ್ಲದ ಕಾರಣ ವೃದ್ಧರೊಬ್ಬರ ಮೃತದೇಹವನ್ನು ತಮ್ಮೂರಿಗೆ ದ್ವಿಚಕ್ರ ವಾಹನದಲ್ಲಿ ತಮ್ಮ ಮಕ್ಕಳು ತೆಗೆದುಕೊಂಡು ಹೋದ ಹೃದಯವಿದ್ರಾವಕ ಘಟನೆ ಪಾವಗಡ ತಾಲೂಕಿನ ವೈ.ಎನ್.ಹೊಸಕೋಟೆ ಸಮುದಾಯ ಆರೋಗ್ಯ ಕೇಂದ್ರದ ಬಳಿ ಬುಧವಾರ ಮಧ್ಯಾಹ್ನ ಸುಮಾರು ಒಂದು ಗಂಟೆಯಲ್ಲಿ ಜರುಗಿದೆ. ವಯೋಸಹಜ ಕಾಯಿಲೆಯಿಂದ ದಳವಾಯಿ ಹಳ್ಳಿ ಗ್ರಾಮದ ಗುಡುಗುಲ್ಲ ಹೊನ್ನೂರಪ್ಪ ಎನ್ನುವ 80 ವರ್ಷದ ವಿರುದ್ಧ ವೈ.ಎನ್.ಹೋಸಕೋಟೆ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಮೃತಪಟ್ಟಿದ್ದರು. ಮೃತಪಟ್ಟಿರುವ ಹೊನ್ನೂರಪ್ಪ ಅವರ ಮೃತದೇಹವನ್ನ ಸಾಗಿಸಲು ಆಂಬುಲೆನ್ಸ್ ಇಲ್ಲದ ಕಾರಣ ದ್ವಿಚಕ್ರ ವಾಹನದಲ್ಲಿಯೇ ಹೊನ್ನೂರಪ್ಪ ಅವರ ಹಿರಿಯ ಪುತ್ರ ಚಂದ್ರಣ್ಣ ಮತ್ತು ಕಿರಿಯ ಪುತ್ರ ಗೋಪಾಲಪ್ಪ ತಮ್ಮೂರಿಗೆ ತೆಗೆದುಕೊಂಡು ತೆಗೆದುಕೊಂಡು ಹೋಗಿದ್ದಾರೆ. ಪಾವಗಡ ತಾಲೂಕು ಎಷ್ಟು ಹಿಂದುಳಿದರು ಇಂತಹ ಹೃದಯವಿದ್ರಾವಕ ಘಟನೆಗಳು ಮತ್ತೆ ಮತ್ತೆ ಮರುಕಳಿಸುತ್ತಿರುವುದು ಒಂದು ರೀತಿ ಆಡಳಿತದ ನಿರ್ಲಕ್ಷಕ್ಕೆ ಇಡಿದ ಕೈಗಡಿಯಾಗಿದೆ. ಸಂಬಂಧಪಟ್ಟ ಇಲಾಖೆಗಳ ಅಧಿಕಾರಿಗಳು ಹಾಗೂ ಸಚಿವರುಗಳು ಇಂತಹ ಸಮಸ್ಯೆಗಳಿಗೆ ಪರಿಹಾರವನ್ನು ಕಂಡುಕೊಳ್ಳುವ ಅಗತ್ಯವಿದೆ ಎನ್ನುವುದು ಪ್ರಜ್ಞಾವಂತರ ಅಭಿಪ್ರಾಯವಾಗಿದೆ. ವರದಿ: ನಂದೀಶ್…

Read More

ತುಮಕೂರು: ಹಸಿರು ತುಮಕೂರು ಯೋಜನೆಯಡಿ ಪಾಲಿಕೆ ವ್ಯಾಪ್ತಿಯಲ್ಲಿರುವ ಉದ್ಯಾನವನ, ರಸ್ತೆ(ವಿಭಜಕ)ಗಳನ್ನು ಸಮಗ್ರವಾಗಿ ಅಭಿವೃದ್ಧಿಪಡಿಸಿ ನಿರ್ವಹಣೆ/ ದತ್ತು ಪಡೆಯಲು ಸಾರ್ವಜನಿಕ ಸಂಘ ಸಂಸ್ಥೆ, ವಿದ್ಯಾ ಸಂಸ್ಥೆ, ಕಾಲೇಜುಗಳಿಂದ ಷರತ್ತುಬದ್ಧ ಪ್ರಸ್ತಾವನೆಯನ್ನು ಆಹ್ವಾನಿಸಲಾಗಿದೆ. ಆಸಕ್ತರು ಮನವಿ ಪತ್ರ/ ಪ್ರಸ್ತಾವನೆಯನ್ನು ಪಾಲಿಕೆಯ ತೋಟಗಾರಿಕೆ ಶಾಖೆಗೆ ಸಲ್ಲಿಸಬೇಕೆಂದು ಪಾಲಿಕೆ ಆರೋಗ್ಯಾಧಿಕಾರಿ ಡಾ.ವಿರೇಶ್ ಕಲ್ಮಟ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

Read More