Author: admin

ತುಮಕೂರು: ಮಹಾನಗರ ಪಾಲಿಕೆ ವ್ಯಾಪ್ತಿಯ ಕುರಿ/ಕೋಳಿ/ಮೀನು ಮಾಂಸ ಮಾರಾಟ ಉದ್ದಿಮೆದಾರರು ಮಾಂಸ ಮಾರಾಟ ಮಾಡಲು ಕಡ್ಡಾಯವಾಗಿ ಉದ್ದಿಮೆ ಪರವಾನಗಿ ಪಡೆಯಬೇಕೆಂದು ಪಾಲಿಕೆ ಆರೋಗ್ಯಾಧಿಕಾರಿ ಡಾ.ವಿರೇಶ್ ಕಲ್ಮಟ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಪಾಲಿಕೆ ವ್ಯಾಪ್ತಿಯಲ್ಲಿ ಹಲವಾರು ವರ್ಷಗಳಿಂದ ಉದ್ದಿಮೆ ಪರವಾನಗಿ ಪಡೆಯದೇ ಹಾಗೂ ನವೀಕರಣ ಮಾಡಿಸದೇ ಉದ್ದಿಮೆ ನಡೆಸುತ್ತಿರುವುದು ಕಂಡು ಬಂದಿದ್ದು, ಬಾಕಿ ಇರುವ ಉದ್ದಿಮೆ ಪರವಾನಗಿಯ ಶುಲ್ಕ(ಬೇಡಿಕೆ ಶುಲ್ಕ)ವನ್ನು ಪ್ರಸ್ತುತ ವರ್ಷದಲ್ಲಿ ಪಾವತಿಸಿ ಕಡ್ಡಾಯವಾಗಿ ಉದ್ದಿಮೆ ಪರವಾನಗಿ ಪಡೆದು ಉದ್ದಿಮೆಗಳನ್ನು ನಡೆಸತಕ್ಕದ್ದು. ಮಾಂಸ ಮಾರಾಟ ಮಾಡುವಾಗ ಮಾಂಸವನ್ನು ಉದ್ದಿಮೆಯ ಮುಂಭಾಗ ಸಾರ್ವಜನಿಕರಿಗೆ ಪ್ರದರ್ಶಿಸುವ ಹಾಗೆ ನೇತು ಹಾಕದೇ, ಪರದೆ/ Partition ಅನ್ನು ಅಳವಡಿಸಿಕೊಂಡು ಅಥವಾ ಅಂಗಡಿಯ ಒಳಭಾಗದಲ್ಲಿ ಶೇಖರಿಸಿ ವ್ಯಾಪಾರ ನಡೆಸತಕ್ಕದ್ದು. ತಾವು ನಡೆಸುತ್ತಿರುವ ಉದ್ದಿಮೆಗೆ ಪಡೆದಿರುವ ಪರವಾನಗಿಯಲ್ಲಿ ನಮೂದಿಸಿದ ಉತ್ಪನ್ನಗಳನ್ನು ಮಾತ್ರ ಮಾರಾಟ ಮಾಡತಕ್ಕದ್ದು. ತಮ್ಮ ಉದ್ದಿಮೆಗಳಲ್ಲಿ ನಿಷೇಧಿತ ಪ್ಲಾಸ್ಟಿಕ್ ಸಂಗ್ರಹಣೆ/ಉಪಯೋಗ ಮಾಡಕೂಡದು ಹಾಗೂ ಪಾರ್ಸಲ್, ಹೋಮ್ ಡೆಲವರಿ ಸೇವೆಗಳನ್ನು ನೀಡುವಾಗ ಪ್ಲಾಸ್ಟಿಕ್ ಬಳಕೆಯನ್ನು ಮಾಡುವಂತಿಲ್ಲ. ಉದ್ದಿಮೆದಾರರು ಸದರಿ ನಿಯಮಗಳನ್ನು ಪಾಲಿಸದಿದ್ದಲ್ಲಿ…

Read More

ತುಮಕೂರು: ಕರ್ನಾಟಕ ವಿದ್ಯುತ್ ಪ್ರಸರಣ ನಿಗಮವು ಒಂಟಿ ಪ್ರಸರಣ ಮಾರ್ಗದಿಂದ ಸುಮಾರು 8.60 ಕಿಮೀ ಉದ್ದದ ಮಾರ್ಗ ನಿರ್ಮಾಣ ಕಾಮಗಾರಿಯನ್ನು ಸೆಪ್ಟೆಂಬರ್ 18ರಂದು ಅಥವಾ ತದನಂತರ ವಿದ್ಯುದ್ದೀಕರಣ ಗೊಳಿಸಲಿದೆ. ಈ ಪ್ರಸರಣ ಮಾರ್ಗವು ಜಿಲ್ಲೆಯ ತಿಪಟೂರು ತಾಲ್ಲೂಕು ಕಿಬ್ಬನಹಳ್ಳಿ ಹೋಬಳಿಯ ಕರಡಾಳು, ಕೊಟಗೇಹಳ್ಳಿ, ನೊಣವಿನಕೆರೆ ಹೋಬಳಿಯ ಹಾರೋಘಟ್ಟ, ಕುರುಬರ ಮಲ್ಲೇನಹಳ್ಳಿ; ತುರುವೇಕೆರೆ ತಾಲ್ಲೂಕು, ಕಸಬ ಹೋಬಳಿಯ ಸೀಗೆಹಳ್ಳಿ, ಕೋಲಘಟ್ಟ, ಕೋಲಘಟ್ಟಕಾವಲ್ ಗ್ರಾಮಗಳ ಸರಹದ್ದಿನಲ್ಲಿ ಹಾದು ಹೋಗಲಿದ್ದು, ಸಾರ್ವಜನಿಕರು ಸದರಿ ಗ್ರಾಮಗಳಲ್ಲಿ ಗೋಪುರಗಳನ್ನು ಹತ್ತುವುದಾಗಲೀ, ಲೋಹದ ತಂತಿ, ಹಸಿರು ಬಳ್ಳಿ, ಕೊಂಬೆ ಇತ್ಯಾದಿಗಳನ್ನು ವಿದ್ಯುತ್ ಪ್ರವಹಿಸುವ ತಂತಿಗಳಿಗೆ ಎಸೆಯುವುದಾಗಲೀ ಅಥವಾ ದನಕರುಗಳನ್ನು ಗೋಪುರಗಳಿಗೆ ಕಟ್ಟುವುದಾಗಲಿ ಮಾಡಬಾರದಾಗಿ ಕೆಪಿಟಿಸಿಎಲ್ ಕಾರ್ಯನಿರ್ವಾಹಕ ಇಂಜಿನಿಯರ್ ಸೂಚನೆ ನೀಡಿದ್ದಾರೆ. ಸದರಿ ದಿನಾಂಕದಂದು ಅಥವಾ ತದನಂತರವೂ ಕೂಡ ಯಾರಾದರೂ ಇಂತಹ ಕೃತ್ಯಗಳನ್ನು ಎಸಗಿದಲ್ಲಿ ಉಂಟಾಗುವ ಅಪಘಾತಗಳಿಗೆ ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತ ಯಾವುದೇ ರೀತಿಯಲ್ಲೂ ಜವಾಬ್ದಾರಿಯಾಗುವುದಿಲ್ಲವೆಂದು ಅವರು ಎಚ್ಚರಿಕೆ ನೀಡಿದ್ದಾರೆ. ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು…

Read More

ತುಮಕೂರು: ಕೌಶಲ್ಯಾಭಿವೃದ್ಧಿ ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ, ಧಾರವಾಡದ ಕರ್ನಾಟಕ ಉದ್ಯಮ ಶೀಲತಾ ಅಭಿವೃದ್ಧಿ ಕೇಂದ್ರ(ಸಿಡಾಕ್) ಹಾಗೂ ಜಿಲ್ಲಾ ಕೈಗಾರಿಕಾ ಕೇಂದ್ರದ ವತಿಯಿಂದ ತುಮಕೂರು ಜಿಲ್ಲೆಯಲ್ಲಿ ಸೆಪ್ಟೆಂಬರ್ 23 ರಿಂದ 10 ದಿನಗಳ ಉದ್ಯಮಶೀಲತಾ ಅಭಿವೃದ್ಧಿ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ಕಾರ್ಯಕ್ರಮದಲ್ಲಿ ಸ್ವಂತ ಉದ್ಯಮ ಸ್ಥಾಪಿಸಲಿಚ್ಛಿಸುವ ಮಹಿಳೆ ಹಾಗೂ ಪುರುಷರಿಗೆ ಪ್ರೇರಣೆ, ಸ್ವಂತ ಉದ್ಯಮ ಸ್ಥಾಪನೆಗಾಗಿ ಸರ್ಕಾರ ಹಾಗೂ ಹಣಕಾಸು ಸಂಸ್ಥೆಗಳಿಂದ ದೊರೆಯುವ ನೆರವು/ಪ್ರೋತ್ಸಾಹ, ಯೋಜನೆ ಆಯ್ಕೆ, ಮಾರುಕಟ್ಟೆ, ಯೋಜನಾ ವರದಿ ತಯಾರಿಕೆ, ತೆರಿಗೆ ಮತ್ತು ಇತರೆ ಕೈಗಾರಿಕಾ ವಿಷಯಗಳ ಕುರಿತು ಮಾಹಿತಿ ನೀಡಲಾಗುವುದು. ಎಸ್.ಎಸ್.ಎಲ್.ಸಿ. ಪಾಸಾದ, ಶೇ.25ರಷ್ಟು ಬಂಡವಾಳ ಹೂಡಲು ಶಕ್ತರಿರುವ 21 ರಿಂದ 45 ವರ್ಷದೊಳಗಿನ ಆಸಕ್ತರು ಈ ಕಾರ್ಯಕ್ರಮದಲ್ಲಿ ಭಾಗವಹಿಸಬಹುದಾಗಿದೆ. ಕಾರ್ಯಕ್ರಮದಲ್ಲಿ ಭಾಗವಹಿಸಲಿಚ್ಛಿಸುವವರು ಸೆಪ್ಟೆಂಬರ್ 20ರೊಳಗಾಗಿ ಜಂಟಿ ನಿರ್ದೇಶಕರು, ಸಿಡಾಕ್, ಜಿಲ್ಲಾ ಕೈಗಾರಿಕಾ ಕೇಂದ್ರ, ತುಮಕೂರು ಇವರಿಗೆ ಅರ್ಜಿ ಸಲ್ಲಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ದೂ.ವಾ.ಸಂ.8073313988ನ್ನು ಸಂಪರ್ಕಿಸಬೇಕೆಂದು ಸಿಡಾಕ್ ಜಂಟಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು…

Read More

ಬೆಂಗಳೂರು: ರಾಜ್ಯದಲ್ಲಿ ಕಳೆದ ಒಂದೂವರೆ ವರ್ಷದಲ್ಲಿ ಡ್ರಗ್ಸ್ ದಂಧೆಯನ್ನು ತೀವ್ರ ಹತೋಟಿಕೆ ತಂದಿದ್ದೇವೆ. ಹಿಂದಿನ ವರ್ಷಗಳಿಗೆ ಹೋಲಿಸಿದರೆ ಪ್ರಕರಣಗಳ ಸಂಖ್ಯೆ ಕಡಿಮೆಯಾಗಿವೆ ಎಂದು ಗೃಹ ಸಚಿವ ಡಾ. ಜಿ.ಪರಮೇಶ್ವರ ಅವರು ಹೇಳಿದರು. ಸದಾಶಿವನಗರದ ತಮ್ಮ ನಿವಾಸದ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಡ್ರಗ್ಸ್ ದಂಧೆಯನ್ನು ಹತ್ತಿಕ್ಕಲು ಸಾಕಷ್ಟು ಪ್ರಯತ್ನ ಮಾಡಿದ್ದೇವೆ. ಈಗ ಮೆಡಿಕಲ್ ಶಾಪ್‌ಗಳಲ್ಲಿ ಸಿಗುತ್ತಿರುವ ಪೇನ್ ಕಿಲ್ಲರ್ ಮಾತ್ರೆಗಳಿಂದ ನಮಗೆ ಆತಂಕವಿದೆ ಎಂದರು. ಪೇನ್ ಕಿಲ್ಲರ್ ಮಾತ್ರೆಗಳನ್ನು ಬೇರೆಬೇರೆ ಕಂಪನಿಗಳು ತಯಾರಿಸುತ್ತಿವೆ. ಅದು ಈಗ ಸುಲಭವಾಗಿ ಕೈಗೆ ಸಿಗುತ್ತಿವೆ. ಯಾವ ರೀತಿ ನಿಯಂತ್ರಿಸಬೇಕು ಎಂಬುದರ ಕುರಿತು ಚರ್ಚಿಸಲು ಮುಖ್ಯಮಂತ್ರಿಯವರು ಸಭೆ ಕರೆದಿದ್ದಾರೆ ಎಂದು ತಿಳಿಸಿದರು. ಪೇನ್ ಕಿಲ್ಲರ್ ಮಾತ್ರೆಗಳನ್ನು ಮೆಡಿಸಿನ್ ಅಂತ ಮಾರಾಟ ಮಾಡಲಾಗುತ್ತಿದೆ. ವೈದ್ಯರು ಪ್ರಿಸ್‌ಕ್ರೈಬ್ ಮಾಡಿರುವುನ್ನು ಸುಲಭವಾಗಿ ಪಡೆಯಲಾಗುತ್ತಿದೆ. ಇದಕ್ಕೆ ಕಾನೂನು ಬೇರೆ ಇದೆ. ಈ ಕುರಿತು ಡ್ರಗ್ ಕಂಟ್ರೋಲರ್ಸ್‌ಗಳಿಗೆ ಯಾವ ರೀತಿ ಹೇಳಬೇಕಾಗುತ್ತದೆ ಎಂಬುದರ ಕುರಿತು ಚರ್ಚಿಸಲಾಗುವುದು ಎಂದರು. ರಾಜ್ಯದಲ್ಲಿ ಗಾಂಜಾ ಸೇರಿದಂತೆ ಇನ್ನಿತರ ಮಾದಕ…

Read More

ಅಂದು ದರ್ಶನ್‌ ಜೊತೆಗೆ ಫೋಟೋದಲ್ಲಿ ಕಾಣಿಸಿಕೊಂಡಿದ್ದ ಬೆಂಗಳೂರಿನ ನಟೋರಿಯಸ್‌ ರೌಡಿ ವಿಲ್ಸನ್‌ ಗಾರ್ಡನ್‌ ನಾಗನಿಗೂ ಈಗ ಕಂಟಕ ಎದುರಾಗಿದ್ದು, ಸದ್ಯ ಪರಪ್ಪನ ಅಗ್ರಹಾರ ಕಾರಾಗೃಹದಲ್ಲಿರುವ ರೌಡಿಶೀಟರ್‌ ವಿಲ್ಸನ್‌ ಗಾರ್ಡನ್‌ ನಾಗ ಅಲಿಯಾಸ್‌ ನಾಗರಾಜ್‌ನನ್ನು ಇಲ್ಲಿಂದ ಬೇರೆ ಜೈಲಿಗೆ ಶಿಫ್ಟ್‌ ಮಾಡಲು ಅಧಿಕಾರಿಗಳು ಮುಂದಾಗಿದ್ದಾರೆ. ಉತ್ತರ ಕರ್ನಾಟಕದ ಯಾವುದಾದರೂ ಜೈಲಿಗೆ ನಾಗ ಶಿಫ್ಟ್‌ ಆಗುವ ಸಾಧ್ಯತೆ ಇದೆಯಂತೆ. ಸಿದ್ದಾಪುರದ ಮಹೇಶ್‌ ಎಂಬಾತನ ಕೊಲೆ ಕೇಸ್‌ ನಲ್ಲಿ ವಿಲ್ಸನ್‌ ನಾಗನನ್ನು ಬಂಧಿಸಿ, ಜೈಲಿಗೆ ಕಳುಹಿಸಲಾಗಿತ್ತು. ಇದಾದ ಬಳಿಕ ರೇಣುಕಾಸ್ವಾಮಿ ಕೊಲೆ ಕೇಸ್‌ ಹೊರಬಂದು, ಇದರಲ್ಲಿ ನಟ ದರ್ಶನ್‌ ಕೂಡ ಪರಪ್ಪನ ಅಗ್ರಹಾರ ಜೈಲು ಸೇರಿದ್ದರು. ಈ ವೇಳೆ ನಾಗನ ಜೊತೆ ದರ್ಶನ್‌ ಆತ್ಮೀಯವಾಗಿದ್ದರು ಎಂದು ಹೇಳಲಾಗಿತ್ತು. ಅಲ್ಲದೆ ದರ್ಶನ್‌ ಗೆ ಜೈಲಿನಲ್ಲೂ ರಾಜಾತಿಥ್ಯ ನೀಡಲಾಗುತ್ತಿತ್ತು. ಇದರ ಹೊಣೆಯನ್ನು ವಿಲ್ಸನ್‌ ಗಾರ್ಡನ್‌ ನಾಗನೇ ವಹಿಸಿಕೊಂಡಿದ್ದ ಎಂಬ ಗುಸುಗುಸು ಇತ್ತು. ಈ ವದಂತಿ ಬೆನ್ನಲ್ಲೇ ನಟ ದರ್ಶನ್‌ ಅವರು ಜೈಲಿನಲ್ಲಿದ್ದ ಫೋಟೋವೊಂದು ಲೀಕ್‌ ಆಗಿ ಎಲ್ಲೆಡೆ ಹರಿದಾಡಿತ್ತು.…

Read More

ಬೆಂಗಳೂರು: ಮೀಟೂ ಹಾಗೂ ಸಿನಿಮಾ ಕ್ಷೇತ್ರದಲ್ಲಿ ಮಹಿಳೆಯರ ಸುರಕ್ಷತೆ ವಿಚಾರವಾಗಿ ಮಾತನಾಡಿರುವ ನಟ ಉಪೇಂದ್ರ, ಕೇವಲ ಸಿನಿಮಾ ರಂಗ ಮಾತ್ರವಲ್ಲ, ಎಲ್ಲ ಕ್ಷೇತ್ರಗಳಲ್ಲೂ ಶೋಷಣೆ ನಡೆಯುವುದು ಸಹಜ, ಎಲ್ಲರೂ ಅದನ್ನು ಅನುಭವಿಸಿರುತ್ತಾರೆ ಎಂದು ಹೇಳಿದ್ದಾರೆ. ನನಗೆ ಇಷ್ಟು ವರ್ಷಗಳಲ್ಲಿ ಈ ರೀತಿ ನಡೆದಿದ್ದು ಗೊತ್ತಿಲ್ಲ, ಬಹುಶಃ ನಾನು ಹುಡುಗಿಯಾಗಿದ್ದರೆ ಗೊತ್ತಾಗುತ್ತಿತ್ತೇನೋ ಎಂದಿದ್ದಾರೆ. ಗಂಡಸರ ಮೇಲೂ ಶೋಷಣೆ ಆಗಿವೆ, ಎಲ್ಲರಿಗೂ ಸಣ್ಣ ಪುಟ್ಟ ಆಗಿರುತ್ತದೆ ಎಂದು ಉಪೇಂದ್ರ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ನಾವು ಎಲ್ಲೋ ಒಂದು ಕಡೆ ಸ್ಕ್ರಿಪ್ಟ್ ತೆಗೆದುಕೊಂಡು ಹೋಗಿರುತ್ತೇವೆ. ಅದು ಇನ್ನೆಲ್ಲೋ ಸಿನಿಮಾ ಆಗಿಬಿಡುತ್ತೆ. ಕೆಲ ಸಿನಿಮಾಗಳನ್ನು ಮಾರಿಕೊಂಡಿರುತ್ತಾರೆ. ಅದರ ಹಣವೂ ನಮಗೆ ಸಿಗಲ್ಲ. ಆಗ ಕಾಪಿ ರೈಟ್‌, ಹೋರಾಟ ಮಾಡಲು ಆಗಲ್ಲ. ಕೇವಲ ಸಿನಿಮಾ ಅಷ್ಟೇ ಅಲ್ಲ ಎಲ್ಲ ಉದ್ಯಮದಲ್ಲೂ ಶೋಷಣೆ ಇದೆ. ಪ್ರಸ್ತುತ ಇದಕ್ಕಾಗಿ ಒಂದು ವೇದಿಕೆ ಸಿದ್ಧವಾಗುತ್ತಿರುವುದು ಉತ್ತಮ ಸಂಗತಿ. ಇದರಿಂದ ಮುಕ್ತವಾಗಿ ಧ್ವನಿಯೆತ್ತಲು ಸಾಧ್ಯವಾಗುತ್ತದೆ ಎಂದಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ…

Read More

ತುಮಕೂರು: ರುಡ್‌ ಸೆಟ್ ಸಂಸ್ಥೆಯು ಎಂಬ್ರಾಯ್ಡರಿ, ಆರಿ ವರ್ಕ್ ಹಾಗೂ ಫ್ಯಾಬ್ರಿಕ್ ಪೇಟಿಂಗ್ ಕುರಿತ 30 ದಿನಗಳ ಉಚಿತ ತರಬೇತಿ ನೀಡಲು ಜಿಲ್ಲಾ ವ್ಯಾಪ್ತಿಯ ಗ್ರಾಮೀಣ ನಿರುದ್ಯೋಗಿ ಯುವತಿಯರಿಂದ ಅರ್ಜಿ ಆಹ್ವಾನಿಸಿದೆ. ಅರ್ಜಿದಾರರು 18 ರಿಂದ 45 ವರ್ಷದೊಳಗಿನ ಹಾಗೂ ಕನ್ನಡ ಭಾಷೆ ಓದಲು ಮತ್ತು ಬರೆಯಲು ಬಲ್ಲವರಾಗಿರಬೇಕು. ಬಿಪಿಎಲ್ ಹಾಗೂ ಆಧಾರ್ ಕಾರ್ಡನ್ನು ಕಡ್ಡಾಯವಾಗಿ ಹೊಂದಿರಬೇಕು. ಅರ್ಜಿ ಸಲ್ಲಿಸಲು ಅಕ್ಟೋಬರ್ 8 ಕೊನೆಯ ದಿನವಾಗಿದ್ದು, ತರಬೇತಿ ಅವಧಿಯಲ್ಲಿ ಉಚಿತ ಊಟ ಮತ್ತು ವಸತಿ ವ್ಯವಸ್ಥೆ ಕಲ್ಪಿಸಲಾಗುವುದು. ತರಬೇತಿ ಪೂರ್ಣಗೊಂಡ ನಂತರ ಕೇಂದ್ರ ಸರ್ಕಾರದ ಗ್ರಾಮೀಣಾಭಿವೃದ್ಧಿ ಸಚಿವಾಲಯದಿಂದ ಪ್ರಮಾಣಪತ್ರ ನೀಡಲಾಗುವುದು. ಹೆಚ್ಚಿನ ಮಾಹಿತಿಗಾಗಿ ರುಡ್‌ಸೆಟ್ ಸಂಸ್ಥೆ, ಅರಿಶಿನಕುಂಟೆ, ನೆಲಮಂಗಲ ತಾಲ್ಲೂಕು, ಬೆಂಗಳೂರು ಗ್ರಾಮಾಂತರ ಜಿಲ್ಲೆ ಅಥವಾ ಮೊಬೈಲ್ ಸಂಖ್ಯೆ: 9740982585, 9380162042ನ್ನು ಸಂಪರ್ಕಿಸಬಹುದಾಗಿದೆ ಎಂದು ರುಡ್‌ಸೆಟ್ ಸಂಸ್ಥೆ ಬೆಂಗಳೂರು ಶಾಖೆ ನಿರ್ದೇಶಕ ರವಿಕುಮಾರ ಅವರು ತಿಳಿಸಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149…

Read More

ತುಮಕೂರು: ವಿಶ್ವಕರ್ಮ ಸಮುದಾಯದ ಅಭಿವೃದ್ಧಿಗಾಗಿ ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಮಹತ್ವಾಕಾಂಕ್ಷಿ ಪ್ರಧಾನ ಮಂತ್ರಿ ವಿಶ್ವಕರ್ಮ ಯೋಜನೆಯ ಸೌಲಭ್ಯಗಳನ್ನು ಒದಗಿಸುವಲ್ಲಿ ವಿಶ್ವಕರ್ಮ ಸಮುದಾಯಕ್ಕೆ ಸೇರಿದ ಆರ್ಥಿಕವಾಗಿ ಹಿಂದುಳಿದ ಫಲಾನುಭವಿಗಳಿಗೆ ಆದ್ಯತೆ ನೀಡಬೇಕೆಂದು ರೈಲ್ವೆ ಮತ್ತು ಜಲಶಕ್ತಿ ರಾಜ್ಯ ಖಾತೆ ಸಚಿವ ಹಾಗೂ ಸಂಸದ ವಿ. ಸೋಮಣ್ಣ ತಿಳಿಸಿದರು. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಾನಗರ ಪಾಲಿಕೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ಜಿಲ್ಲಾ ವಿಶ್ವಕರ್ಮ ಸೇವಾ ಸಮಿತಿ ಸಹಯೋಗದಲ್ಲಿಂದು ನಗರದ ಡಾ: ಗುಬ್ಬಿ ವೀರಣ್ಣ ಕಲಾಕ್ಷೇತ್ರದಲ್ಲಿ ಹಮ್ಮಿಕೊಂಡಿದ್ದ ಶ್ರೀ ವಿಶ್ವಕರ್ಮ ಜಯಂತಿ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಸಾಂಪ್ರದಾಯಿಕ ವೃತ್ತಿಯಲ್ಲಿ ತೊಡಗಿಕೊಂಡು ಸಮಾಜದಲ್ಲಿ ದನಿಯಿಲ್ಲದ ವಿಶ್ವಕರ್ಮ ಸಮುದಾಯದವರನ್ನು ಪಿಎಂ ವಿಶ್ವಕರ್ಮ ಯೋಜನೆಗೆ ಪರಿಗಣಿಸಬೇಕು. ಯೋಜನೆ ಅನುಷ್ಠಾನದಲ್ಲಿ ಲೋಪ ಕಂಡು ಬಂದರೆ ಕಠಿಣ ಕ್ರಮ ಎದುರಿಸಬೇಕಾಗುತ್ತದೆ ಎಂದು ಸ್ಥಳದಲ್ಲಿದ್ದ ಜಿಲ್ಲಾ ಕೈಗಾರಿಕಾ ಕೇಂದ್ರದ ಜಂಟಿ ನಿರ್ದೇಶಕ ಲಿಂಗರಾಜು ಅವರಿಗೆ ಸೂಚಿಸಿದರು. ವಿಶ್ವಕರ್ಮ ಸಮುದಾಯವು ಹಿಂದೂ ಧರ್ಮಕ್ಕೆ ನೀಡಿರುವ…

Read More

ಪಾವಗಡ: ಹಿಂದೂ ಮಹಾ ಗಣಪತಿ ಯುವಕ ಸಂಘದ ವತಿಯಿಂದ ಹಮ್ಮಿಕೊಂಡಿದ್ದ ಹಿಂದೂ ಮಹಾ ಗಣಪತಿ ವಿಸರ್ಜನೆ ಮೆರವಣಿಗೆ ವೇಳೆ ಮುಸ್ಲಿಂ ಸಮಾಜದ ಅನೇಕ ಮಂದಿ ಯುವಕರಿಂದ ಸುಮಾರು ಎಂಟುನೂರಕ್ಕಿಂತ ಹೆಚ್ಚು ಮಂದಿಗೆ ಕೇಸರಿಬಾತ್‌, ಪಲವ್‌ ಹಾಗೂ ಕುಡಿವ ನೀರಿನ ಪಾಕೇಟ್‌ ವಿತರಿಸಿ ಶುಭಕೋರಿದ ಪ್ರಸಂಗ ಮಂಗಳವಾರ ತಾಲೂಕಿನ ವೈ.ಎನ್‌.ಹೊಸಕೋಟೆ ಗ್ರಾಮದಲ್ಲಿ ನಡೆಯಿತು. ತಾಲೂಕಿನ ವೈ.ಎನ್‌.ಹೊಸಕೋಟೆ ಹೋಬಳಿ ಕೇಂದ್ರಸ್ಥಾನವಾಗಿದ್ದು ಇಲ್ಲಿ ಹಿಂದೂಗಳಷ್ಟೇ ಹೆಚ್ಚು ಪ್ರಮಾಣದ ಮುಸ್ಲಿಂ ಬಾಂಧವರು ವಾಸವಾಗಿದ್ದಾರೆ. ವ್ಯಾಪಾರ ಇತರೆ ವಾಣಿಜ್ಯ ವ್ಯವಹಾರಗಳಲ್ಲಿ ತೊಡಗಿ ಜೀವನ ನಡೆಸುತ್ತಿದ್ದು ಮೊದಲಿನಿಂದಲೂ ಇಲ್ಲಿ ಹಿಂದೂ, ಮುಸ್ಲಿಂ ಭಾಂಧವರು ಸೌಹಾರ್ದತೆಯ ಬದುಕು ಕಟ್ಟಿಕೊಂಡಿದ್ದಾರೆ. ಈ ಭಾಗದ ಹಳ್ಳಿಗಳಲ್ಲಿ ಮೊಹರಂ ವೇಳೆ ಹಿಂದೂ ಮುಸ್ಲಿಂ ಸೇರಿ ಶಾಂತಿ ಸೌಹಾರ್ದತೆಯೊಂದಿಗೆ ಸಡಗರ ಸಂಭ್ರಮದಿಂದ ಮೊಹರಂ ಹಬ್ಬ ಆಚರಿಸುತ್ತಿರುವುದು ಸಾಮಾನ್ಯವಾಗಿದ್ದು, ಇದೇ ಹಾದಿಯಾಗಿ ಮಂಗಳವಾರ ಹಿಂದೂ ಮಹಾ ಗಣಪತಿ ವಿಸರ್ಜನೆಯ ವೇಳೆ ವೈ.ಎನ್‌.ಹೊಸಕೋಟೆಯ ಹಳೇ ಸರ್ಕಾರಿ ಆಸ್ಪತ್ರೆಯ ಮಸೀದಿ ಬಳಿ ಮೆರವಣಿಗೆ ತೆರಳುತ್ತಿದ್ದಂತೆ ಅಪಾರ ಸಂಖ್ಯೆಯ ಮುಸ್ಲಿಂ ಯುವಕರು ಒಂದೆಡೆ…

Read More

ಬೆಂಗಳೂರು: ಗೌರಿ ಲಂಕೇಶ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೆ ನಾಲ್ವರು ಆರೋಪಿಗಳಿಗೆ ಹೈಕೋರ್ಟ್ ಜಾಮೀನು ಮಂಜೂರು ಮಾಡಿದೆ. 6ನೇ ಆರೋಪಿ ಬೆಳಗಾವಿಯ ಭರತ್ ಜಯವಂತ್ ಕುರಾನೆ, 9ನೇ ಆರೋಪಿ ಮಹಾರಾಷ್ಟ್ರದ ಸತಾರದ ಸುಧನ್ವ ಗೊಂಧಾಲೇಕರ್, 13ನೇ ಆರೋಪಿ ಶಿವಮೊಗ್ಗದ ಶಿಕಾರಿಪುರದ ಸುಜಿತ್ ಕುಮಾರ್,16ನೇ ಆರೋಪಿ ಮಹಾರಾಷ್ಟ್ರದ ಔರಂಗಾಬಾದ್ ಶ್ರೀ ಕಾಂತ್ ಪಂಗಾರ್ಕರ್ ಗೆ ಜಾಮೀನು ಮಂಜೂರಾಗಿದೆ. ಈ ಹಿಂದೆ ನಾಲ್ವರು ಆರೋಪಿಗಳಿಗೆ ಜಾಮೀನು ಮಂಜೂರು ಮಾಡಲಾಗಿತ್ತು. ಇದರೊಂದಿಗೆ 18 ಆರೋಪಿಗಳ ಪೈಕಿ 8 ಮಂದಿಗೆ ನ್ಯಾಯಾಲಯವು ಜಾಮೀನು ನೀಡಿದಂತಾಗಿದೆ. ಎಲ್ಲ ಆರೋಪಿಗಳು ತಲಾ 1 ಲಕ್ಷ ರೂ. ಮೌಲ್ಯದ ವೈಯಕ್ತಿಕ ಬಾಂಡ್, ಇಬ್ಬರ ಭದ್ರತಾ ಖಾತರಿ ಒದಗಿಸಬೇಕು. ವಿಚಾರಣಾಧೀನ ನ್ಯಾಯಾಲಯ ವಿನಾಯಿತಿ ನೀಡದ ಹೊರತು ವಿಚಾರಣೆಯ ಎಲ್ಲ ದಿನ ಆರೋಪಿಗಳು ವಿಚಾರಣೆಗೆ ಹಾಜರಾಗಬೇಕು. ಅರ್ಜಿದಾರರು ಪ್ರಾಸಿಕ್ಯೂಷನ್ ಸಾಕ್ಷಿಗಳಿಗೆ ಬೆದರಿಕೆ ಹಾಕಬಾರದು. ಪ್ರಕರಣ ಇತ್ಯರ್ಥವಾಗುವವರೆಗೆ ನ್ಯಾಯಾಲಯ ಅನುಮತಿಸದ ಹೊರತು ಅರ್ಜಿದಾರರು ವಿಚಾರಣಾಧೀನ ನ್ಯಾಯಾಲಯದ ವ್ಯಾಪ್ತಿ ತೊರೆಯುವಂತಿಲ್ಲ. ಈ ಪೈಕಿ ಯಾವುದೇ ಷರತ್ತು ಉಲ್ಲಂಘಿಸಿದರೂ…

Read More