Subscribe to Updates
Get the latest creative news from FooBar about art, design and business.
- ಮಹಿಳೆಯರಿಂದಲೇ ಮಹಿಳೆಯರ ಮೇಲೆ ನಡೆಯುವ ಶೋಷಣೆಗಳು ಮೊದಲು ನಿಲ್ಲಲಿ: ತಹಶೀಲ್ದಾರ್ ಮಮತಾ ಎಂ.
- ಕೊರಟಗೆರೆ: ಮೂಢನಂಬಿಕೆಯಿಂದಾಗಿ ಬಳಕೆಯಾಗದೆ ಪಾಳುಬಿದ್ದ ಬಾಲಿಕಾ ವಿದ್ಯಾರ್ಥಿನಿಲಯ
- ಕಣ್ಣಿನ ಶಸ್ತ್ರಚಿಕಿತ್ಸೆಗೆ ಲಂಚ ಕೇಳಿದ್ದ ತುಮಕೂರು ಜಿಲ್ಲಾ ಆಸ್ಪತ್ರೆ ವೈದ್ಯೆ ಲೋಕಾಯುಕ್ತ ಬಲೆಗೆ
- ನಡೆಯಲಿಲ್ಲ ಪವಾಡ!: ಮಲ್ಲಿಕಾರ್ಜುನ ಮುತ್ಯಾಗೆ ಬಿಗ್ ಶಾಕ್ | ಜಾಮೀನು ಅರ್ಜಿ ವಜಾ
- ಬರಗೂರು ‘ಕೆಪಿಎಸ್ ಮ್ಯಾಗ್ನೆಟ್’ ಯೋಜನೆ ಕೈಬಿಡಿ: AIDSO ಆಗ್ರಹ
- ಮಗುವಿನ ಕತ್ತು ಹಿಸುಕಿ ದಂಪತಿ ಆತ್ಮಹತ್ಯೆ; ಪವಾಡಸದೃಶ ರೀತಿಯಲ್ಲಿ ಬದುಕುಳಿದ 2 ವರ್ಷದ ಕಂದಮ್ಮ!
- ಆಟಿಕೆ ಗನ್ ತೋರಿಸಿ ‘ಪ್ರಾಂಕ್’ ಮಾಡಲು ಯತ್ನಿಸಿದ ಯುವಕನಿಗೆ ಸಂಕಷ್ಟ!
- RSS ನಿಷೇಧ ವಿಚಾರ ಅನಗತ್ಯ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿ ಸ್ಪಷ್ಟನೆ
Author: admin
ತಿಪಟೂರು: ನಗರದ ಹೊರವಲಯದಲ್ಲಿ ಅಕ್ರಮವಾಗಿ ಮಾರಾಟ ಮಾಡಲು ಸಂಗ್ರಹಿಸಿಟ್ಟಿದ್ದ ಲಕ್ಷಾಂತರ ರೂಪಾಯಿ ಮೌಲ್ಯದ 119 ರಾಗಿ ಚೀಲಗಳನ್ನು ತಹಶೀಲ್ದಾರ್ ಮೋಹನ್ ಕುಮಾರ್ ನೇತೃತ್ವದ ತಂಡ ಸೋಮವಾರ ಮಧ್ಯಾಹ್ನ ಕಾರ್ಯಾಚರಣೆ ನಡೆಸಿ ವಶಕ್ಕೆ ಪಡೆದುಕೊಂಡಿದೆ. ನಗರದ ಬಂಡಿಹಳ್ಳಿ ಶೆಟ್ಟಿಕೆರೆ ರಸ್ತೆಯ ಮಠದ ಮರುಳಪ್ಪ ಲೇಔಟ್ ನಲ್ಲಿ ಲಾರಿಯಿಂದ ಟ್ರ್ಯಾಕ್ಟರ್ ಗೆ ರಾಗಿ ಚೀಲಗಳನ್ನು ವರ್ಗಾಯಿಸಲಾಗುತ್ತಿದೆ ಎಂಬ ಖಚಿತ ಮಾಹಿತಿ ಮೇರೆಗೆ ತಹಶೀಲ್ದಾರ್ ಹಾಗೂ ಆಹಾರ ನಿರೀಕ್ಷಕರು ದಾಳಿ ನಡೆಸಿದರು. ಈ ವೇಳೆ ಆಂಧ್ರಪ್ರದೇಶ ಮೂಲದ ಲಾರಿಯಲ್ಲಿದ್ದ ರಾಗಿ ದಾಸ್ತಾನನ್ನು ವಶಪಡಿಸಿಕೊಳ್ಳಲಾಯಿತು. ದಾವಣಗೆರೆಯಿಂದ ಅಕ್ರಮವಾಗಿ ರಾಗಿಯನ್ನು ತಂದು, ಇಲ್ಲಿನ ರೈತರ ಹೆಸರಿನಲ್ಲಿ ಸರ್ಕಾರಿ ರಾಗಿ ಖರೀದಿ ಕೇಂದ್ರಗಳಲ್ಲಿ ಮಾರಾಟ ಮಾಡುವ ಉದ್ದೇಶವನ್ನು ಈ ತಂಡ ಹೊಂದಿತ್ತು ಎನ್ನಲಾಗಿದೆ. ಹಾಲ್ಕುರಿಕೆ ಗ್ರಾಮದ ಸತೀಶ್ ಎಂಬುವವರು ಈ ಅಕ್ರಮ ವ್ಯವಹಾರದ ಹಿಂದೆ ಇದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಈ ಕುರಿತು ಮಾಹಿತಿ ನೀಡಿದ ತಹಶೀಲ್ದಾರ್ ಮೋಹನ್ ಕುಮಾರ್ ಅವರು, “ಬಂಡೀಹಳ್ಳಿ ಗೇಟ್ ಬಳಿ ಅಕ್ರಮ ಚಟುವಟಿಕೆ ನಡೆಯುತ್ತಿರುವ…
ಮಂಡ್ಯ: ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಜೈಲು ಪಾಲಾಗಲು ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರೇ ನೇರ ಕಾರಣ ಎಂದು ಮದ್ದೂರು ಕ್ಷೇತ್ರದ ಕಾಂಗ್ರೆಸ್ ಶಾಸಕ ಕದಲೂರು ಉದಯ್ ಗಂಭೀರ ಆರೋಪ ಮಾಡಿದ್ದಾರೆ. ಮದ್ದೂರಿನಲ್ಲಿ ಮಾತನಾಡಿದ ಕದಲೂರು ಉದಯ್, ಹೆಚ್.ಡಿ. ಕುಮಾರಸ್ವಾಮಿ ವಿರುದ್ಧ ಹರಿಹಾಯ್ದರು. “ಅಣ್ಣನ ಮಗನನ್ನೇ ಸಹಿಸಿಕೊಳ್ಳಲಾಗದ ಕುಮಾರಸ್ವಾಮಿ ಅವರು ನಮ್ಮನ್ನು ಸಹಿಸಿಕೊಳ್ಳುತ್ತಾರೆಯೇ? ತಮ್ಮ ಮಗ (ನಿಖಿಲ್ ಕುಮಾರಸ್ವಾಮಿ) ಚುನಾವಣೆಯಲ್ಲಿ ಸೋತಿದ್ದಕ್ಕೆ ಷಡ್ಯಂತ್ರ ಹೂಡಿ, ಪ್ರಜ್ವಲ್ ರೇವಣ್ಣ ಅವರನ್ನು ಜೈಲಿಗೆ ಕಳುಹಿಸಿದ್ದಾರೆ” ಎಂದು ಅವರು ಆರೋಪಿಸಿದರು. ಅಷ್ಟೇ ಅಲ್ಲದೆ, “ಒಂದು ವೇಳೆ ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರು ಮನಸ್ಸು ಮಾಡಿದ್ದರೆ ಪ್ರಜ್ವಲ್ ಅವರನ್ನು ಬಿಡಿಸಬಹುದಿತ್ತು” ಎಂಬ ಮಾತನ್ನೂ ಅವರು ಸೇರಿಸಿದ್ದಾರೆ. ಕುಮಾರಸ್ವಾಮಿಗೆ ಸವಾಲು: ಇದೇ ಸಂದರ್ಭದಲ್ಲಿ ಕೇಂದ್ರ ಸಚಿವರಿಗೆ ಸವಾಲು ಹಾಕಿದ ಉದಯ್, “ನಿಮಗೆ ತಾಕತ್ತಿದ್ದರೆ ಮಂಡ್ಯಕ್ಕೆ ಹೊಸ ಕೈಗಾರಿಕೆಗಳನ್ನು ತನ್ನಿ. ಅದಕ್ಕಾಗಿ ನಾನೇ 60 ರಿಂದ 70 ಎಕರೆ ಜಮೀನು ನೀಡುತ್ತೇನೆ. ಅಭಿವೃದ್ಧಿ ಮಾಡಲು ಛಲವಿರಬೇಕು, ರೈತರ ಕಷ್ಟ…
ದುಬೈ/ಬೆಂಗಳೂರು: ಇಸ್ರೇಲ್ ಮತ್ತು ಇರಾನ್ ನಡುವೆ ಹೆಚ್ಚುತ್ತಿರುವ ಸಂಘರ್ಷದ ಹಿನ್ನೆಲೆಯಲ್ಲಿ, ಸಂಯುಕ್ತ ಅರಬ್ ಎಮಿರೇಟ್ಸ್ (ಯುಎಇ) ನಲ್ಲಿ ನೆಲೆಸಿರುವ ಕನ್ನಡಿಗರ ಸುರಕ್ಷತೆಗಾಗಿ ಮತ್ತು ಅವರ ಕುಟುಂಬಗಳಿಗೆ ಮಾಹಿತಿ ನೀಡಲು ವಿಶೇಷ ಸಹಾಯವಾಣಿಯನ್ನು ಆರಂಭಿಸಲಾಗಿದೆ. ಸಹಾಯವಾಣಿ ಸ್ಥಾಪನೆ: ದುಬೈ, ಶಾರ್ಜಾ, ಅಬುಧಾಬಿ ಮತ್ತು ಅಜ್ಮಾನ್ನಲ್ಲಿರುವ ಕನ್ನಡಿಗರಿಗೆ ಯಾವುದೇ ತುರ್ತು ಪರಿಸ್ಥಿತಿಯಲ್ಲಿ ನೆರವು ನೀಡಲು ಈ ಸಹಾಯವಾಣಿ ಕಾರ್ಯನಿರ್ವಹಿಸಲಿದೆ. ಸಹಾಯವಾಣಿಯ ಸಂಚಾಲಕ ಹಿದಾಯತ್ ಅಡ್ಡೂರ್ ಅವರು ತಂಡದೊಂದಿಗೆ ಕನ್ನಡಿಗರನ್ನು ಭೇಟಿ ಮಾಡಿ ಧೈರ್ಯ ತುಂಬುತ್ತಿದ್ದಾರೆ. ದುಬೈ ಕರ್ನಾಟಕ ಸಂಘದ ಅಧ್ಯಕ್ಷ ಶಶಿಧರ ನಾಗರಾಜಪ್ಪ ಅವರು ಅನಿವಾಸಿ ಕನ್ನಡಿಗರು ಯಾವುದೇ ನೆರವು ಬೇಕಿದ್ದಲ್ಲಿ ಕೂಡಲೇ ಸಂಘದ ಸದಸ್ಯರನ್ನು ಸಂಪರ್ಕಿಸುವಂತೆ ಕೋರಿದ್ದಾರೆ. ಅಗತ್ಯವಿದ್ದರೆ ವೈದ್ಯಕೀಯ ನೆರವು ನೀಡುವುದಾಗಿಯೂ ಭರವಸೆ ನೀಡಿದ್ದಾರೆ. ಕರ್ನಾಟಕ ಎನ್ಆರ್ಐ ಫೋರಂ (KNRIF) ಅಧ್ಯಕ್ಷ ಪ್ರವೀಣ್ ಶೆಟ್ಟಿ ಅವರು ಮಾತನಾಡಿ, ಯುಎಇಯಲ್ಲಿರುವ ಕನ್ನಡಿಗರು ಆತಂಕಕ್ಕೊಳಗಾಗದೆ ಶಾಂತವಾಗಿರಬೇಕು. ವಾಟ್ಸಾಪ್ ಅಥವಾ ಸಾಮಾಜಿಕ ಜಾಲತಾಣಗಳಲ್ಲಿ ಬರುವ ಪರಿಶೀಲಿಸದ ಮತ್ತು ತಪ್ಪು ಮಾಹಿತಿಗಳನ್ನು ಹಂಚಬಾರದು ಎಂದು ಮನವಿ ಮಾಡಿದ್ದಾರೆ.…
ಬಳ್ಳಾರಿ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕೌಶಲ್ಯಾಭಿವೃದ್ಧಿ ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ, ಸಂಜೀವಿನಿ– ಕರ್ನಾಟಕ ರಾಜ್ಯ ಗ್ರಾಮೀಣ ಜೀವನೋಪಾಯ ಅಭಿಯಾನ, ದೀನ್ ದಯಾಳ್ ಉಪಾದ್ಯಾಯ ಗ್ರಾಮೀಣ ಕೌಶಲ್ಯ ಯೋಜನೆ ಹಾಗೂ ಸರಳಾದೇವಿ ಸತೀಶ್ಚಂದ್ರ ಅಗರ್ವಾಲ್ ಸರ್ಕಾರಿ ಪ್ರಥಮ ದರ್ಜೆ ಕಾಲೇಜು (ಸ್ವಾಯತ್ತ) ಬಳ್ಳಾರಿ ಇವರುಗಳ ಸಂಯುಕ್ತಾಶ್ರಯದಲ್ಲಿ ಡಿಡಿಯು–ಜಿಕೆವೈ ಯೋಜನೆಯಡಿ ಮಾ.4ರಂದು ಬೆಳಿಗ್ಗೆ 9 ರಿಂದ 6 ಗಂಟೆಯವರೆಗೆ ನಗರದ ಸರಳಾದೇವಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಬಳ್ಳಾರಿ ಉದ್ಯೋಗ ಮೇಳ ಆಯೋಜಿಸಲಾಗಿದೆ. ಅಂದು ಬೆಳಿಗ್ಗೆ 10 ಗಂಟೆಗೆ ಉದ್ಘಾಟನಾ ಕಾರ್ಯಕ್ರಮ ಜರುಗಲಿದ್ದು, ವಸತಿ, ವಕ್ಫ್ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಸಚಿವರು ಹಾಗೂ ಬಳ್ಳಾರಿ ಜಿಲ್ಲಾ ಉಸ್ತುವಾರಿ ಸಚಿವ ಬಿ.ಜೆಡ್.ಜಮೀರ್ ಅಹ್ಮದ್ ಖಾನ್ ಅವರು ಕಾರ್ಯಕ್ರಮ ಉದ್ಘಾಟಿಸುವರು. ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಜೈವಿಕ ತಂತ್ರಜ್ಞಾನ ಸಚಿವರು ಹಾಗೂ ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ, ವೈದ್ಯಕೀಯ ಶಿಕ್ಷಣ ಹಾಗೂ ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ…
ಬಳ್ಳಾರಿ: ಜಗದ್ಗುರು ರೇಣುಕಾಚಾರ್ಯರು ವೀರಶೈವ ಧರ್ಮದ ಮಹಾನ್ ಶರಣ ಮತ್ತು ಗುರುಗಳಲ್ಲಿ ಒಬ್ಬರು. ಸಿದ್ಧಾಂತ ಶಿಖಾಮಣಿಯ ಮೂಲಕ ಮಾನವ ಧರ್ಮಕ್ಕೆ ಜಯವಾಗಲಿ ಎಂಬ ಘೋಷಣೆಯ ಮೂಲಕ ವಿಶ್ವಶಾಂತಿಯ ಸಂದೇಶವನ್ನು ಜಗತ್ತಿಗೆ ನೀಡಿದ ಕೀರ್ತಿ ವೀರಶೈವ ಧರ್ಮಕ್ಕೆ ಸಲ್ಲುತ್ತದೆ ಎಂದು ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಕೆ.ಇ.ಚಿದಾನಂದಪ್ಪ ಅವರು ಹೇಳಿದರು. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಮಹಾನಗರ ಪಾಲಿಕೆ ಇವರ ಸಂಯುಕ್ತಾಶ್ರಯದಲ್ಲಿ ನಗರದ ಡಾ.ಜೋಳದರಾಶಿ ದೊಡ್ಡನಗೌಡ ರಂಗಮಂದಿರ ಸಭಾಂಗಣದಲ್ಲಿ ಭಾನುವಾರ ಏರ್ಪಡಿಸಿದ್ದ ಶ್ರೀ ಜಗದ್ಗುರು ರೇಣುಕಾಚಾರ್ಯರ ಜಯಂತಿ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ವೀರಶೈವ ಧರ್ಮವು ಭಗವಂತ ಮತ್ತು ಭಕ್ತನ ನಡುವೆ ನೇರ ಸಂಪರ್ಕವನ್ನು ಒದಗಿಸಿ ಇಷ್ಟಲಿಂಗದ ಮಹತ್ವವನ್ನು ಸಾರಿದ ಮಹಾನ್ ಚೇತನ ರೇಣುಕಾಚಾರ್ಯರು. ವಿಜ್ಞಾನವಿಲ್ಲದ ಧರ್ಮ ಕುರುಡು; ಧರ್ಮವಿಲ್ಲದ ವಿಜ್ಞಾನ ಕುಂಟು. ವೀರಶೈವ ಧರ್ಮದಲ್ಲಿ ವಿಜ್ಞಾನವೂ ಇದೆ, ಆಚರಣೆಯೂ ಇದೆ ಎಂದು ತಿಳಿಸಿದರು. ಪಂಚಗಣಾಧೀಶ್ವರರು ಪರಮಾತ್ಮನ ಆದೇಶದಂತೆ ಅವತರಿಸಿ ವೀರಶೈವ ಧರ್ಮವನ್ನು ಸ್ಥಾಪಿಸಿದರು. ಅಷ್ಟಾಕಿರಣ,…
ಶಿವಮೊಗ್ಗ: ಇರಾನ್ ನ ಪರಮೋಚ್ಚ ನಾಯಕ ಆಯತೊಲ್ಲಾ ಅಲಿ ಖಮೇನಿ ಅವರ ಹತ್ಯೆಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ತೀವ್ರವಾಗಿ ಖಂಡಿಸಿದ್ದಾರೆ. ಇದೇ ವೇಳೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ವಿದೇಶಾಂಗ ನೀತಿಯನ್ನು ಅವರು ‘ದ್ವಂದ್ವ ನೀತಿ’ ಎಂದು ಟೀಕಿಸಿದ್ದಾರೆ. ಶಿವಮೊಗ್ಗದ ಊರಗಡೂರಿನಲ್ಲಿ ಇತ್ತೀಚೆಗೆ ಕೊಲೆಯಾದ ಬಾಲಕನ ಕುಟುಂಬಕ್ಕೆ 15 ಲಕ್ಷ ರೂಪಾಯಿ ಪರಿಹಾರದ ಚೆಕ್ ವಿತರಿಸಿದ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು ಈ ಪ್ರತಿಕ್ರಿಯೆ ನೀಡಿದರು. ಆಯತೊಲ್ಲಾ ಖಮೇನಿ ಅವರ ನಿಧನಕ್ಕೆ ಸಂತಾಪ ಸೂಚಿಸಿದ ಸಿಎಂ, ಅವರ ಆತ್ಮಕ್ಕೆ ಶಾಂತಿ ಕೋರಿದರು. ಈ ಹತ್ಯೆಯು ಅತ್ಯಂತ ಖಂಡನೀಯ ಮತ್ತು ಈ ಯುದ್ಧದ ಅಗತ್ಯವಿರಲಿಲ್ಲ ಎಂದು ಅಭಿಪ್ರಾಯಪಟ್ಟರು. ಟ್ರಂಪ್ ವಿರುದ್ಧ ಟೀಕೆ: ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಒಂದು ಕಡೆ ಶಾಂತಿಯ ಮಂತ್ರ ಜಪಿಸುತ್ತಾ, ಮತ್ತೊಂದೆಡೆ ಯುದ್ಧಕ್ಕೆ ಪ್ರಚೋದನೆ ನೀಡುತ್ತಿದ್ದಾರೆ. ಇದು ಅವರ ದ್ವಂದ್ವ ನಿಲುವನ್ನು ತೋರಿಸುತ್ತದೆ ಎಂದು ಸಿಎಂ ಕಿಡಿಕಾರಿದರು. ಕನ್ನಡಿಗರ ರಕ್ಷಣೆ: ಇರಾಕ್ ಮತ್ತು ಇರಾನ್ ಪ್ರಾಂತ್ಯದಲ್ಲಿ ಯುದ್ಧದ…
ಬೆಂಗಳೂರು: ಇಸ್ರೇಲ್ ಮತ್ತು ಇರಾನ್ ನಡುವೆ ನಡೆಯುತ್ತಿರುವ ಭೀಕರ ಯುದ್ಧದ ಹಿನ್ನೆಲೆಯಲ್ಲಿ ಅಲ್ಲಿ ಸಿಲುಕಿರುವ ಕನ್ನಡಿಗರನ್ನು ಸುರಕ್ಷಿತವಾಗಿ ತಾಯ್ನಾಡಿಗೆ ಕರೆತರಲು ರಾಜ್ಯ ಸರ್ಕಾರ ಎಲ್ಲಾ ರೀತಿಯ ಪ್ರಯತ್ನಗಳನ್ನು ನಡೆಸುತ್ತಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ತಮ್ಮ ನಿವಾಸದ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಯುದ್ಧಪೀಡಿತ ಪ್ರದೇಶದಲ್ಲಿ ಕನ್ನಡಿಗರು ಮಾತ್ರವಲ್ಲದೆ ಕೇರಳ ಸೇರಿದಂತೆ ದೇಶದ ವಿವಿಧ ಭಾಗಗಳ ಜನರು ಸಿಲುಕಿಕೊಂಡಿದ್ದಾರೆ. ಅವರನ್ನು ರಕ್ಷಿಸಲು ಕೇಂದ್ರ ಸರ್ಕಾರದೊಂದಿಗೆ ನಿರಂತರ ಸಂಪರ್ಕದಲ್ಲಿದ್ದೇವೆ ಎಂದು ಹೇಳಿದರು. ಕರ್ನಾಟಕದ ಇಬ್ಬರು ಶಾಸಕರಾದ ಬೋಜೇಗೌಡ ಮತ್ತು ಎ.ಸಿ. ಶ್ರೀನಿವಾಸ್ ಅವರು ಕೂಡ ಅಲ್ಲಿ ಸಿಲುಕಿಕೊಂಡಿದ್ದು, ಅವರ ಸಂಪರ್ಕಕ್ಕೆ ಪ್ರಯತ್ನ ನಡೆಸಲಾಗುತ್ತಿದೆ. ದೆಹಲಿಯ ಕರ್ನಾಟಕ ಭವನದ ಕಮಿಷನರ್ ಅವರಿಗೆ ವಿದೇಶಾಂಗ ಇಲಾಖೆಯೊಂದಿಗೆ ಸತತ ಸಂಪರ್ಕದಲ್ಲಿರಲು ಸೂಚಿಸಲಾಗಿದೆ. ರಕ್ಷಣಾ ಕಾರ್ಯಾಚರಣೆಯು ವಿದೇಶಾಂಗ ಇಲಾಖೆಯ ಮೂಲಕವೇ ನಡೆಯಬೇಕಿರುವುದರಿಂದ ರಾಜ್ಯ ಸರ್ಕಾರ ಅವರಿಗೆ ಅಗತ್ಯ ಸಹಕಾರ ನೀಡುತ್ತಿದೆ ಎಂದರು. ಇನ್ನೂ, ಇರಾನ್ ನಲ್ಲಿ ಮಕ್ಕಳ ಶಾಲೆಯ ಮೇಲೆ ನಡೆದಿರುವ ದಾಳಿಯನ್ನು ಡಿ.ಕೆ. ಶಿವಕುಮಾರ್ ಖಂಡಿಸಿದ್ದಾರೆ.…
ವಿಜಯಪುರ: ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳು ಬಡವರ ಶ್ರೇಯೋಭಿವೃದ್ಧಿಗಾಗಿ ಜಾರಿಗೆ ಬಂದಿವೆ. ಹೀಗಾಗಿ ಆರ್ಥಿಕವಾಗಿ ಸದೃಢರಾಗಿರುವ ಶ್ರೀಮಂತರು ಈ ಸೌಲಭ್ಯಗಳನ್ನು ಸ್ವಯಂಪ್ರೇರಿತವಾಗಿ ಬಿಟ್ಟುಕೊಡಬೇಕು ಎಂದು ಕೈಗಾರಿಕಾ ಸಚಿವ ಎಂ.ಬಿ. ಪಾಟೀಲ್ ಮನವಿ ಮಾಡಿದ್ದಾರೆ. ವಿಜಯಪುರದ ಆಲಮಟ್ಟಿಯಲ್ಲಿ ಭಾನುವಾರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಗ್ಯಾರಂಟಿ ಯೋಜನೆಗಳು ಕೇವಲ ಬಡವರ ಆರ್ಥಿಕ ಸಬಲೀಕರಣಕ್ಕಾಗಿ ಇರುವಂಥವು. ಅರ್ಹ ಬಿಪಿಎಲ್ ಕುಟುಂಬಗಳು ಮಾತ್ರ ಇದರ ಪ್ರಯೋಜನ ಪಡೆಯಬೇಕು ಎಂದು ಸಚಿವರು ತಿಳಿಸಿದರು. ತೆರಿಗೆ ಪಾವತಿದಾರರು ಮತ್ತು ಆರ್ಥಿಕವಾಗಿ ಸದೃಢವಾಗಿರುವವರು ಈ ಯೋಜನೆಗಳಿಂದ ದೂರವಿರುವುದು ಸೂಕ್ತ. ಸೌಲಭ್ಯಗಳನ್ನು ಬಿಟ್ಟುಕೊಡುವ ಮೂಲಕ ಬಡವರ ಏಳಿಗೆಗೆ ಸಹಕರಿಸಬೇಕು ಎಂದು ಅವರು ಹೇಳಿದರು. ಗ್ಯಾರಂಟಿ ಯೋಜನೆಗಳಿಂದಾಗಿ ರಾಜ್ಯದಲ್ಲಿ ಅಭಿವೃದ್ಧಿ ಕೆಲಸಗಳು ನಿಂತಿಲ್ಲ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹಣಕಾಸು ತಜ್ಞರಾಗಿದ್ದು, 16 ಬಜೆಟ್ ಮಂಡಿಸಿದ ಅನುಭವ ಹೊಂದಿದ್ದಾರೆ. ಅವರು ಆರ್ಥಿಕ ಪರಿಸ್ಥಿತಿಯನ್ನು ಸಮರ್ಥವಾಗಿ ನಿಭಾಯಿಸುತ್ತಿದ್ದಾರೆ ಎಂದು ಎಂ.ಬಿ. ಪಾಟೀಲ್ ಸಮರ್ಥಿಸಿಕೊಂಡರು. ಗ್ಯಾರಂಟಿ ಯೋಜನೆಗಳು ಸರ್ಕಾರಕ್ಕೆ ಹೊರೆಯಾಗುತ್ತಿವೆ ಎಂಬ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಹೇಳಿಕೆಯ…
ಬಳ್ಳಾರಿ: ಸಮಾಜದಲ್ಲಿ ಹೆಚ್ಚುತ್ತಿರುವ ಮಾದಕ ವಸ್ತುಗಳ ಬಳಕೆ, ರಸ್ತೆ ಅಪಘಾತಗಳು ಹಾಗೂ ಸೈಬರ್ ಅಪರಾಧ, ಬಾಲ್ಯ ವಿವಾಹ ವಿರುದ್ಧ ಜನರಲ್ಲಿ ಜಾಗೃತಿ ಮೂಡಿಸುವ ಉದ್ದೇಶದಿಂದ ಮ್ಯಾರಾಥಾನ್ ಆಯೋಜಿಸಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಸುಮನ್ ಡಿ.ಪನ್ನೇಕರ್ ಅವರು ಹೇಳಿದರು. ನಗರದ ಡಿಎಆರ್ ಮೈದಾನದಲ್ಲಿ ಮಾದಕ ವಸ್ತುಗಳ ಬಳಕೆ ತಡೆಗಟ್ಟುವಿಕೆ, ರಸ್ತೆ ಸುರಕ್ಷತೆ ಹಾಗೂ ಸೈಬರ್ ಅಪರಾಧ, ಬಾಲ್ಯ ವಿವಾಹ ವಿರುದ್ಧ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲು ಹಮ್ಮಿಕೊಂಡಿದ್ದ ಬಳ್ಳಾರಿ ಪೊಲೀಸ್ ರನ್(ಮ್ಯಾರಥಾನ್ ಮತ್ತು ವಾಕಾಥಾನ್) ಗೆ ಭಾನುವಾರ ಚಾಲನೆ ನೀಡಿ ಅವರು ಮಾತನಾಡಿದರು. ಯುವಕರನ್ನು ಡ್ರಗ್ಸ್ನಿಂದ ದೂರವಿರಿಸಿ, ಕ್ರೀಡೆ ಮತ್ತು ಆರೋಗ್ಯಕರ ಜೀವನಶೈಲಿಯತ್ತ ಒಲಿಸುವುದು. ಜೊತೆಗೆ ರಸ್ತೆ ಸುರಕ್ಷತೆ ನಿಯಮಗಳ ಪಾಲನೆ, ಮಹಿಳೆ–ಮಕ್ಕಳ ರಕ್ಷಣೆ, ಬಾಲ್ಯ ವಿವಾಹ ಹಾಗೂ ಸೈಬರ್ ಅಪರಾಧಗಳ ಬಗ್ಗೆ ಎಚ್ಚರಿಕೆ ಮೂಡಿಸುವುದು ಮ್ಯಾರಥಾನ್ನ ಮುಖ್ಯ ಉದ್ದೇಶವಾಗಿದೆ ಎಂದು ಅವರು ಹೇಳಿದರು. ಈ ಜಾಗೃತಿ ಮ್ಯಾರಥಾನ್ ಅಭಿಯಾನವು ರಾಜ್ಯಾದ್ಯಂತ ನಡೆಯುತ್ತಿದ್ದು, ಬಳ್ಳಾರಿಯಲ್ಲಿ ಸತತವಾಗಿ ಇದು ಮೂರನೇ ಬಾರಿಯ ಆಯೋಜನೆಯಾಗಿದೆ. 5ಕೆ…
ಔರಾದ: ಯೋಗ ಕ್ಷೇತ್ರದಲ್ಲಿ ಬೀದರ ಜಿಲ್ಲೆಯ ಯುವಕನೊಬ್ಬ ವಿಶಿಷ್ಟ ಸಾಧನೆ ಮಾಡಿದ್ದು, ಜಿಲ್ಲೆಯ ಕ್ರೀಡಾ ವಲಯಕ್ಕೆ ಮತ್ತೊಂದು ಗೌರವ ತಂದಿದ್ದಾನೆ. ಯೋಗ ಫೆಡರೇಶನ್ ಆಫ್ ಇಂಡಿಯಾ ಆಯೋಜಿಸಿದ್ದ ರಾಷ್ಟ್ರಮಟ್ಟದ ಯೋಗ ತೀರ್ಪುಗಾರರ ಪರೀಕ್ಷೆಯಲ್ಲಿ ಸಂದೀಪ ಸಾದುರೆ ಅವರು ಉತ್ತಮ ಅಂಕಗಳೊಂದಿಗೆ ಉತ್ತೀರ್ಣರಾಗಿದ್ದು, ರಾಷ್ಟ್ರೀಯ ಮಟ್ಟದ ಯೋಗ ತೀರ್ಪುಗಾರರಾಗಿ ಆಯ್ಕೆಯಾಗಿದ್ದಾರೆ. ಔರಾದ ತಾಲೂಕಿನ ಮಹಾರಾಜವಾಡಿ ಗ್ರಾಮದ ನಿವಾಸಿಯಾಗಿರುವ ಸಂದೀಪ ಸಾದುರೆ ಅವರು ಶಿಕ್ಷಣದ ಜೊತೆಗೆ ಯೋಗಾಸನದಲ್ಲಿ ಆಸಕ್ತಿ ಹೊಂದಿದ ಇವರು ವಿವಿಧ ಹಂತಗಳಲ್ಲಿ ತರಬೇತಿ ಪಡೆದು ತಮ್ಮ ಕೌಶಲ್ಯವನ್ನು ಅಭಿವೃದ್ಧಿಪಡಿಸಿಕೊಂಡಿದ್ದಾರೆ. ಯೋಗದ ತಾಂತ್ರಿಕ ಅಂಶಗಳು, ನಿಯಮಾವಳಿ, ತೀರ್ಪುಗಾರಿಕೆ ವಿಧಾನಗಳು ಸೇರಿದಂತೆ ವಿವಿಧ ವಿಷಯಗಳಲ್ಲಿ ಸಮಗ್ರ ತಿಳುವಳಿಕೆ ಹೊಂದಿರುವುದರಿಂದ ಅವರು ರಾಷ್ಟ್ರಮಟ್ಟದ ಪರೀಕ್ಷೆಯಲ್ಲಿ ಉತ್ತಮ ಸಾಧನೆ ಮಾಡಿರುವುದು ಗಮನಾರ್ಹವಾಗಿದೆ. ಈ ಆಯ್ಕೆಯ ಮೂಲಕ ಸಂದೀಪ ಸಾದುರೆ ಅವರಿಗೆ ಮುಂದಿನ ದಿನಗಳಲ್ಲಿ ರಾಷ್ಟ್ರಮಟ್ಟದಲ್ಲಿ ನಡೆಯುವ ಯೋಗಾಸನ ಸ್ಪರ್ಧೆಗಳಲ್ಲಿ ತೀರ್ಪುಗಾರರಾಗಿ ಕಾರ್ಯನಿರ್ವಹಿಸುವ ಅವಕಾಶ ದೊರಕಿದೆ. ಇದರಿಂದಾಗಿ ಜಿಲ್ಲೆಯ ಯುವಜನತೆಗೆ ಯೋಗ ಕ್ಷೇತ್ರದಲ್ಲಿ ಮತ್ತಷ್ಟು ಪ್ರೇರಣೆ ದೊರಕುವ ಸಾಧ್ಯತೆ…