Subscribe to Updates
Get the latest creative news from FooBar about art, design and business.
- ಮರಿದಾಸನಹಳ್ಳಿ ಗ್ರಾಮಕ್ಕೆ ಕೆಪಿಎಸ್ ಶಾಲೆ ಮಂಜೂರು: ಹೆಚ್.ವಿ.ವೆಂಕಟೇಶ್ ಅವರಿಗೆ ಗ್ರಾಮಸ್ಥರಿಂದ ಅಭಿನಂದನೆ
- “ಹೌದು ನಾನು ಏಜೆಂಟ್, ಆದರೆ ಮಾಫಿಯಾ ಕಮಿಷನ್ ಏಜೆಂಟ್ ಅಲ್ಲ”: ಸಿಎಂ ಡಿಕೆಶಿಗೆ ಆರ್. ಅಶೋಕ್ ತಿರುಗೇಟು
- 26 ವರ್ಷಗಳ ಹಿಂದೆ ಸರ್ಕಸ್ ಕಂಪನಿ ಜೊತೆ ಓಡಿಹೋಗಿದ್ದ ಸತೀಶ್ ‘ಸಲೀಂ’ ಆಗಿ ಮನೆಗೆ ವಾಪಸ್!
- ಅಕ್ರಮ ಸಂಬಂಧಕ್ಕೆ ಮಹಿಳೆ ಬಲಿ; ಪ್ರಿಯಕರನ ಬಂಧನ!
- ರೈತರ ಬಗ್ಗೆ ಅವಹೇಳನಕಾರಿ ಹೇಳಿಕೆ ಆರೋಪ: KRS ಅಧ್ಯಕ್ಷ ರವಿ ಕೃಷ್ಣಾ ರೆಡ್ಡಿ ವಿರುದ್ಧ ಕೇಸು ದಾಖಲು
- ಸಿರಾ: ಟಿ.ಬಿ.ಜಯಚಂದ್ರ ಅವರಿಗೆ ಸಚಿವ ಸ್ಥಾನ ನೀಡಲು ಬ್ಲಾಕ್ ಕಾಂಗ್ರೆಸ್ ಒತ್ತಾಯ
- ತುಮಕೂರು ವಿಶ್ವವಿದ್ಯಾನಿಲಯ: ವಿವಿಧ ಪದವಿಗಳ ಉಳಿಕೆ ಸೀಟುಗಳ ಪ್ರವೇಶಾತಿಗೆ ಅರ್ಜಿ ಆಹ್ವಾನ
- ದೆಹಲಿಯಲ್ಲಿ ತಿಪಟೂರು ಕಾಂಗ್ರೆಸ್ ಶಾಸಕ ಷಡಕ್ಷರಿ ದಿಢೀರ್ ಅಸ್ವಸ್ಥ: ಆಸ್ಪತ್ರೆಗೆ ದಾಖಲು
Author: admin
ಹಾಸನ: ಮಾಜಿ ಪ್ರಧಾನಿ ಹಾಗೂ ಜೆಡಿಎಸ್ ವರಿಷ್ಠ ಹೆಚ್.ಡಿ. ದೇವೇಗೌಡರ ತಂಗಿ ಜವರಮ್ಮ (88) ಅವರು ಗುರುವಾರ (ಮಾರ್ಚ್ 19) ನಿಧನರಾಗಿದ್ದಾರೆ. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಜವರಮ್ಮ ಅವರಿಗೆ ಹಾಸನದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಅವರು ಇಂದು ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ತಮ್ಮ ಪ್ರೀತಿಯ ತಂಗಿಯ ಅಗಲಿಕೆಗೆ ಹೆಚ್.ಡಿ. ದೇವೇಗೌಡರು ತೀವ್ರ ಸಂತಾಪ ವ್ಯಕ್ತಪಡಿಸಿದ್ದು, ಕಂಬನಿ ಮಿಡಿದಿದ್ದಾರೆ. ಕುಟುಂಬದ ಸದಸ್ಯರು ಮತ್ತು ಜೆಡಿಎಸ್ ಕಾರ್ಯಕರ್ತರು ಜವರಮ್ಮ ಅವರ ನಿಧನಕ್ಕೆ ಶೋಕ ವ್ಯಕ್ತಪಡಿಸಿದ್ದಾರೆ. ಮೃತ ಜವರಮ್ಮ ಅವರ ಅಂತ್ಯಕ್ರಿಯೆಯು ಇಂದು ಸಂಜೆ ಹೊಳೆನರಸೀಪುರ ತಾಲ್ಲೂಕಿನ ಬಸವನಾಯಕನಹಳ್ಳಿಯಲ್ಲಿ ನೆರವೇರಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC
ಬೆಂಗಳೂರು: ಕರ್ನಾಟಕ ಸಾರ್ವಜನಿಕ ಸೇವಾ ಆಯೋಗದ (KPSC) ಮೂಲಕ ಗೆಜೆಟೆಡ್ ಪ್ರೊಬೇಷನರಿ ಅಧಿಕಾರಿಗಳ (ಗ್ರೂಪ್ ಎ ಮತ್ತು ಬಿ) ನೇಮಕಾತಿಯನ್ನು ಇನ್ಮುಂದೆ ಪ್ರತಿ ವರ್ಷ ನಡೆಸಲು ಸರ್ಕಾರ ಸಿದ್ಧವಿದೆ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ಅವರು ವಿಧಾನಸಭೆಯಲ್ಲಿ ತಿಳಿಸಿದ್ದಾರೆ. ಸಾಮಾನ್ಯವಾಗಿ ನಾಲ್ಕು ವರ್ಷಕ್ಕೊಮ್ಮೆ ಹೊರಡಿಸಲಾಗುತ್ತಿದ್ದ ನೇಮಕಾತಿ ಅಧಿಸೂಚನೆಯಿಂದಾಗಿ ಅಭ್ಯರ್ಥಿಗಳಿಗೆ ವಯೋಮಿತಿಯ ಸಮಸ್ಯೆ ಎದುರಾಗುತ್ತಿತ್ತು. ಇದನ್ನು ತಪ್ಪಿಸಲು ಯುಪಿಎಸ್ ಸಿ (UPSC) ಮಾದರಿಯಲ್ಲಿ ಪ್ರತಿವರ್ಷ ಪರೀಕ್ಷೆ ನಡೆಸಲು ಸರ್ಕಾರ ನಿರ್ಧರಿಸಿದೆ. ನೇಮಕಾತಿಯಲ್ಲಿ ಪಾರದರ್ಶಕತೆ ತರಲು ಮತ್ತು ನ್ಯಾಯಾಂಗ ವ್ಯಾಜ್ಯಗಳನ್ನು ತಡೆಯಲು ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ಅನುಸರಿಸುವ ಅತ್ಯುತ್ತಮ ಕ್ರಮಗಳನ್ನು ಕೆಪಿಎಸ್ಸಿಯಲ್ಲೂ ಜಾರಿಗೆ ತರಲಾಗುವುದು. ಖಾಲಿ ಹುದ್ದೆಗಳ ಅಂದಾಜು ಮಾಡಿ, ಐದು ವರ್ಷಗಳ ಮುಂಚಿತವಾಗಿಯೇ ಪರೀಕ್ಷಾ ವೇಳಾಪಟ್ಟಿಯನ್ನು ಪ್ರಕಟಿಸುವ ಕುರಿತು ಸರ್ಕಾರ ಗಂಭೀರ ಚಿಂತನೆ ನಡೆಸಿದೆ. ಕೆಪಿಎಸ್ ಸಿಯಲ್ಲಿನ ಭ್ರಷ್ಟಾಚಾರ ತಡೆಗಟ್ಟಲು ಮತ್ತು ಆಡಳಿತಾತ್ಮಕ ಸುಧಾರಣೆಗಳನ್ನು ತರಲು ಎಲ್ಲಾ ಪಕ್ಷಗಳ ಶಾಸಕರನ್ನೊಳಗೊಂಡ ‘ಸದನ ಸಮಿತಿ’ಯನ್ನು ರಚಿಸಲಾಗುವುದು ಎಂದು ಸಚಿವರು ಭರವಸೆ ನೀಡಿದ್ದಾರೆ.…
ಬೆಂಗಳೂರು: ರಾಜ್ಯದ ಸುಮಾರು 50 ಸಾವಿರ ಅತಿಥಿ ಶಿಕ್ಷಕರಿಗೆ ನೀಡಲಾಗುವ ಪೊಲೀಸ್ ಪರಿಶೀಲನೆ ಪ್ರಮಾಣಪತ್ರ (Police Verification Certificate) ನೀಡುವ ಪ್ರಕ್ರಿಯೆಯನ್ನು ಯಾವುದೇ ಲಂಚವಿಲ್ಲದೆ, ಅನಗತ್ಯ ವಿಳಂಬವಿಲ್ಲದೆ ಹಾಗೂ ಠಾಣೆಗೆ ಕರೆಸದೇ ಗೌರವಯುತವಾಗಿ ಕಾನೂನುಬದ್ಧವಾಗಿ ನಡೆಸುವಂತೆ ರಾಜ್ಯದ ಎಲ್ಲಾ ಪೊಲೀಸ್ ಠಾಣೆಗಳಿಗೆ ಸುತ್ತೋಲೆ ಹೊರಡಿಸುವಂತೆ ಮನವಿ ಮಾಡಲಾಗಿದೆ. ಈ ಸಂಬಂಧ KRS ಸಮಿತಿಯ ನಿಯೋಗ ಇಂದು ಕರ್ನಾಟಕ ಸರ್ಕಾರದ ಪೊಲೀಸ್ ಮಹಾನಿರ್ದೇಶಕರು ಹಾಗೂ ಮಹಾನಿರೀಕ್ಷಕರಾದ M.A.Saleem ಅವರನ್ನು ಭೇಟಿ ಮಾಡಿ ಮನವಿ ಪತ್ರ ಸಲ್ಲಿಸಿತು. ಅತಿಥಿ ಶಿಕ್ಷಕರು ಪೊಲೀಸ್ ಪರಿಶೀಲನೆ ಪ್ರಮಾಣಪತ್ರ ಪಡೆಯುವ ಸಂದರ್ಭದಲ್ಲಿ ಕೆಲವು ಕಡೆಗಳಲ್ಲಿ ವಿಳಂಬ, ಅನಗತ್ಯ ದಾಖಲೆಗಳ ಬೇಡಿಕೆ ಹಾಗೂ ಠಾಣೆಗೆ ಹಾಜರಾಗಲು ಸೂಚನೆ ನೀಡುವಂತಹ ಸಮಸ್ಯೆಗಳು ಎದುರಾಗುತ್ತಿವೆ ಎಂದು ನಿಯೋಗ ತಿಳಿಸಿತು. ಈ ಸಮಸ್ಯೆಗಳನ್ನು ತಪ್ಪಿಸಲು ರಾಜ್ಯದ ಎಲ್ಲಾ ಪೊಲೀಸ್ ಠಾಣೆಗಳಿಗೆ ಸ್ಪಷ್ಟ ಮಾರ್ಗಸೂಚಿ ನೀಡುವಂತೆ ಮನವಿ ಮಾಡಲಾಗಿದೆ. ಈ ನಿಯೋಗದಲ್ಲಿ ಗಜೇಂದ್ರ ಕುಮಾರ್ ಗೌಡ, ಶ್ರೀವಾರಿ ನಾಗರಾಜ್, ಸಂಪಯ್ಯ, ಶ್ಯಾಮಲಾ ಹಾಗೂ ಪ್ರಭಾಕರ್ ಭಾಗವಹಿಸಿದ್ದರು.…
ರಾಘವೇಂದ್ರ ಅಡಿಗ ಎಚ್ಚೆನ್. ಗಾಂಧಿನಗರದಲ್ಲಿರುವ ಬೆಂಗಳೂರಿನ ಪ್ರತಿಷ್ಠಿತ ಎಎಂಬಿ ಸಿನಿಮಾಸ್ (AMB Cinemas), ಚಲನಚಿತ್ರ ಪ್ರೇಮಿಗಳಿಗಾಗಿ ವಿಶೇಷ ಯುಗಾದಿ ಕೊಡುಗೆಗಳನ್ನು ಘೋಷಿಸಿದೆ. ಕೆಲವೇ ತಿಂಗಳುಗಳ ಹಿಂದೆ ಐತಿಹಾಸಿಕ ‘ಕಪಾಲಿ’ ಚಿತ್ರಮಂದಿರವನ್ನು ಅತ್ಯಾಧುನಿಕ ಮಲ್ಟಿಪ್ಲೆಕ್ಸ್ ಆಗಿ ಪರಿವರ್ತಿಸಿದ ಎಎಂಬಿ ಸಿನಿಮಾಸ್, ಕರ್ನಾಟಕದ ಮೊಟ್ಟಮೊದಲ ‘ಡಾಲ್ಬಿ ಸಿನಿಮಾ’ (Dolby Cinema) ತಂತ್ರಜ್ಞಾನವನ್ನು ಪರಿಚಯಿಸುವ ಮೂಲಕ ರಾಜ್ಯದ ಚಿತ್ರರಂಗದಲ್ಲಿ ಹೊಸ ಸಂಚಲನ ಮೂಡಿಸಿದೆ. ಈ ವಿಶೇಷ ಆಫರ್ಗಳು ಮುಂಬರುವ ಬಹುನಿರೀಕ್ಷಿತ ಚಿತ್ರಗಳಾದ ಲವ್ ಮಾಕ್ಟೇಲ್ 3, ಧುರಂಧರ್ 2 ಮತ್ತು ಉಸ್ತಾದ್ ಭಗತ್ ಸಿಂಗ್ ಚಿತ್ರಗಳಿಗೆ ಅನ್ವಯವಾಗಲಿವೆ. ಯುಗಾದಿ ವಿಶೇಷ ಕೊಡುಗೆಗಳು ಬೆಳಗಿನ ಪ್ರದರ್ಶನಗಳ ಆಫರ್: ಬೆಳಿಗ್ಗೆ 11 ಗಂಟೆಯೊಳಗಿನ ಪ್ರದರ್ಶನಗಳಿಗೆ ಟಿಕೆಟ್ ಕಾಯ್ದಿರಿಸುವ ಪ್ರೇಕ್ಷಕರಿಗೆ ಉಚಿತ ಪಾಪ್ಕಾರ್ನ್ ಮತ್ತು ಉಡುಗೊರೆಗಳನ್ನು ನೀಡಲಾಗುವುದು. ಈ ಕೊಡುಗೆಯು ಮಾರ್ಚ್ 19 ರಿಂದ ಮಾರ್ಚ್ 26 ರವರೆಗೆ ಮಾತ್ರ ಲಭ್ಯವಿರುತ್ತದೆ. ಬುಕ್ ಮೈ ಶೋ (BookMyShow) ಆಫರ್: ಬುಕ್ ಮೈ ಶೋ ಮೂಲಕ ಟಿಕೆಟ್ ಕಾಯ್ದಿರಿಸುವ ಗ್ರಾಹಕರು ‘AMB100’…
ಬೆಂಗಳೂರು: ಜೋಗಿ ಪ್ರೇಮ್ ನಿರ್ದೇಶನದ ಮತ್ತು ಧ್ರುವ ಸರ್ಜಾ ಅಭಿನಯದ ಬಹುನಿರೀಕ್ಷಿತ ‘ಕೆಡಿ-ದಿ ಡೆವಿಲ್’ ಚಿತ್ರದ “ಸರ್ಸೆ ನಿನ್ನ ಸೆರಗ ಸರ್ಸೆ” (ಹಿಂದಿಯಲ್ಲಿ ‘ಸರ್ಕೆ ಚುನಾರ್ ತೇರಿ’) ಹಾಡು ಭಾರೀ ವಿವಾದಕ್ಕೆ ಗುರಿಯಾಗಿರುವ ಬೆನ್ನಲ್ಲೇ, ಬಾಲಿವುಡ್ನ ಪ್ರಸಿದ್ಧ ಗೀತರಚನೆಕಾರ ರಕೀಬ್ ಆಲಂ ಅವರು ಈ ಬಗ್ಗೆ ಮೌನ ಮುರಿದಿದ್ದಾರೆ. ಈ ಹಾಡಿನ ಸಾಹಿತ್ಯವು ಮಹಿಳೆಯರಿಗೆ ಅವಮಾನಕಾರಿ ಹಾಗೂ ಅಶ್ಲೀಲತೆಯಿಂದ ಕೂಡಿದೆ ಎಂಬ ಕಾರಣಕ್ಕೆ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕ ಆಕ್ರೋಶ ವ್ಯಕ್ತವಾಗಿತ್ತು. ವಿವಾದದ ಹಿನ್ನೆಲೆಯಲ್ಲಿ ಹಾಡಿನ ಹಿಂದಿ ಆವೃತ್ತಿಯನ್ನು ಈಗಾಗಲೇ ಅಧಿಕೃತ ಪ್ಲಾಟ್ ಫಾರ್ಮ್ಗಳಿಂದ ತೆಗೆದುಹಾಕಲಾಗಿದೆ. ಈ ಕುರಿತು ಪ್ರತಿಕ್ರಿಯಿಸಿರುವ ರಕೀಬ್ ಆಲಂ ಅವರು, “ನಾನು ಈ ಹಾಡಿನ ಸಾಹಿತ್ಯವನ್ನು ಸ್ವತಂತ್ರವಾಗಿ ಬರೆದಿಲ್ಲ. ನಿರ್ದೇಶಕ ಪ್ರೇಮ್ ಅವರು ಕನ್ನಡದಲ್ಲಿ ಬರೆದಿದ್ದ ಮೂಲ ಸಾಹಿತ್ಯವನ್ನೇ ಹಿಂದಿಗೆ ಅನುವಾದ ಮಾಡುವಂತೆ ನನಗೆ ಕೇಳಲಾಗಿತ್ತು. ನಾನು ಕೇವಲ ಅನುವಾದಕನಾಗಿ ಕೆಲಸ ಮಾಡಿದ್ದೇನೆ ಹೊರತು, ಆ ಸಾಹಿತ್ಯ ನನ್ನದಲ್ಲ” ಎಂದು ಅವರು ಸ್ಪಷ್ಟಪಡಿಸಿದ್ದಾರೆ. ಇಂತಹ ದ್ವಂದ್ವಾರ್ಥದ ಸಾಹಿತ್ಯವು ಸೆನ್ಸಾರ್ ಮಂಡಳಿಯಲ್ಲಿ…
ನವದೆಹಲಿ: ರಾಜ್ಯಸಭೆಯ ನಿರ್ಗಮಿತ ಸದಸ್ಯರಿಗೆ ಬೀಳ್ಕೊಡುಗೆ ನೀಡುವ ಸಂದರ್ಭದಲ್ಲಿ ಬುಧವಾರದಂದು ಸ್ವಾರಸ್ಯಕರ ಘಟನೆಯೊಂದು ನಡೆದಿದೆ. ಎಐಸಿಸಿ ಅಧ್ಯಕ್ಷ ಹಾಗೂ ರಾಜ್ಯಸಭೆಯ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರು ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರ ರಾಜಕೀಯ ಪಲ್ಲಟಗಳನ್ನು ವ್ಯಂಗ್ಯವಾಗಿ ಟೀಕಿಸುವ ಮೂಲಕ ಎಲ್ಲರ ಗಮನ ಸೆಳೆದರು. “ನಾನು ದೇವೇಗೌಡರನ್ನು ಕಳೆದ 54 ವರ್ಷಗಳಿಂದ ಬಲ್ಲೆ. ಅವರ ಜೊತೆಗೂಡಿ ಸಾಕಷ್ಟು ಕೆಲಸ ಮಾಡಿದ್ದೇನೆ. ಆದರೆ ಆಮೇಲೆ ಏನಾಯಿತು ಎಂಬುದು ನನಗೆ ತಿಳಿದಿಲ್ಲ. ಅವರು ನಮ್ಮನ್ನು ಪ್ರೇಮಿಸಿದರು (Mohabbat), ಆದರೆ ಮದುವೆಯಾಗಿದ್ದು ಮಾತ್ರ ಪ್ರಧಾನಿ ಮೋದಿ ಅವರನ್ನು,” ಎಂದು ಖರ್ಗೆ ಲಘು ಧಾಟಿಯಲ್ಲಿ ಕುಟುಕಿದರು. ಖರ್ಗೆ ಅವರ ಈ ಮಾತಿಗೆ ರಾಜ್ಯಸಭೆಯಲ್ಲಿ ನಗುವಿನ ಅಲೆ ಎದ್ದಿತು. ಈ ವೇಳೆ ಖುದ್ದು ಪ್ರಧಾನಿ ನರೇಂದ್ರ ಮೋದಿ ಅವರು ಕೂಡ ನಗುಮುಖದಿಂದಲೇ ಪ್ರತಿಕ್ರಿಯಿಸಿದರು. ರಾಜಕೀಯ ಮತ್ತು ಸಾರ್ವಜನಿಕ ಜೀವನದಲ್ಲಿ ಇರುವವರಿಗೆ ದೇಶಸೇವೆ ಮಾಡುವ ಉತ್ಸಾಹ ಎಂದಿಗೂ ಕುಂದುವುದಿಲ್ಲ. ಸಾರ್ವಜನಿಕ ಬದುಕಿನಲ್ಲಿರುವವರಿಗೆ ನಿವೃತ್ತಿ ಎಂಬುದೇ ಇರುವುದಿಲ್ಲ ಎಂದು ಖರ್ಗೆ…
ಬೀದರ್: ಜಿಲ್ಲಾ ಮಕ್ಕಳ ಕಲ್ಯಾಣ ಇಲಾಖೆ, ಬೋಸ್ಕೋ ಬೆಂಗಳೂರು ಹಾಗೂ ಡಾನ್ ಬಾಸ್ಕೋ ಬೀದರ್ ಸಂಸ್ಥೆಗಳ ಸಂಯುಕ್ತ ಆಶ್ರಯದಲ್ಲಿ ಜಾರಿಯಲ್ಲಿರುವ ‘ಪೋಷಕತ್ವ ಯೋಜನೆ’ (Foster Care) ಕುರಿತು ಭಾಲ್ಕಿ ತಾಲೂಕಿನ ಮಳಚಪುರ ಗ್ರಾಮದ ಅಂಗನವಾಡಿ ಕೇಂದ್ರದಲ್ಲಿ ತಾಯಂದಿರಿಗೆ ವಿಶೇಷ ಅರಿವು ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಮಗುವಿನ ಪಾಲನೆ, ಪೋಷಣೆ ಮತ್ತು ರಕ್ಷಣೆಯನ್ನು ಖಾತ್ರಿಪಡಿಸುವ ಉದ್ದೇಶದಿಂದ ಈ ಕಾರ್ಯಕ್ರಮವನ್ನು ಆಯೋಜಿಸಲಾಗಿದ್ದು, ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿಯ ನಿರ್ದೇಶನದಂತೆ ತಾಯಂದಿರಿಗೆ ಯೋಜನೆಯ ಮಹತ್ವವನ್ನು ವಿವರಿಸಲಾಯಿತು. ಕಾರ್ಯಕ್ರಮದಲ್ಲಿ ಮಾಹಿತಿ ನೀಡಿದ ಡಾನ್ ಬಾಸ್ಕೋ ಪೋಷಕತ್ವ ಯೋಜನೆಯ ಸಂಯೋಜಕರಾದ ರಮೇಶ್ ಅವರು, ಪೋಷಕತ್ವ ಎಂದರೆ ಕಾನೂನು ಪ್ರಕಾರ ಅನಾಥವಾಗಿರುವ ಅಥವಾ ಲಾಲನೆ–ಪಾಲನೆಯಿಂದ ವಂಚಿತರಾದ ಮಕ್ಕಳಿಗೆ ತಾತ್ಕಾಲಿಕವಾಗಿ ಪರಿವಾರದ ಮೂಲಕ ಸಿಗುವ ಕಾಳಜಿಯಾಗಿದೆ. ಬಾಲ ನ್ಯಾಯ ಕಾಯ್ದೆ 2005ರ ಕಲಂ 44ರ ಪ್ರಕಾರ, ಮಗುವಿನ ಜೈವಿಕ ಕುಟುಂಬವಲ್ಲದ ಬೇರೊಂದು ಕುಟುಂಬಕ್ಕೆ 2 ವರ್ಷಕ್ಕೆ ಮೀರದ ಅವಧಿಯವರೆಗೆ ಮಗುವಿನ ಜವಾಬ್ದಾರಿಯನ್ನು ವಹಿಸಿಕೊಡಲಾಗುತ್ತದೆ. ಮಕ್ಕಳಿಗೆ ಕೌಟುಂಬಿಕ ವಾತಾವರಣದಲ್ಲಿ ಬೆಳೆಯುವ ಹಕ್ಕನ್ನು ಕಲ್ಪಿಸಿಕೊಡುವುದು ಈ…
ಔರಾದ್: ಸಮಾಜ ಕಲ್ಯಾಣ ಇಲಾಖೆ ಹಾಗೂ ಡಾ.ಬಿ.ಆರ್.ಅಂಬೇಡ್ಕರ್ ಶಿಕ್ಷಣ ಮತ್ತು ಅಭಿವೃದ್ಧಿ ಸೇವಾ ಸಂಘ (ರಿ) ಸಂಯುಕ್ತ ಆಶ್ರಯದಲ್ಲಿ ಪ.ಜಾತಿ ಮತ್ತು ಪಂಗಡಗಳ ಮೇಲಿನ ದೌರ್ಜನ್ಯ ತಡೆ ಕಾಯ್ದೆ ಕುರಿತು ಕೋಮು ಸೌಹಾರ್ದ ಜಾಗೃತಿ ಕಾರ್ಯಕ್ರಮವನ್ನು ತಾಲೂಕಿನ ಹೊಕ್ರಾಣ ಗ್ರಾಮದಲ್ಲಿ ನಡೆಸಲಾಯಿತು. ಕಾರ್ಯಕ್ರಮವನ್ನು ಎ.ಎಸ್.ಐ. ಮಲ್ಲಿಕಾರ್ಜುನ ಉದ್ಘಾಟಿಸಿ ಮಾತನಾಡಿ, ದೌರ್ಜನ್ಯ ತಡೆ ಕಾಯ್ದೆಯ ಬಗ್ಗೆ ಗ್ರಾಮೀಣ ಪ್ರದೇಶದ ಜನರಿಗೆ ಸರಿಯಾದ ಅರಿವು ಮೂಡಿಸುವುದು ಅತ್ಯಗತ್ಯವಾಗಿದೆ. ಸಮಾಜದಲ್ಲಿ ಶಾಂತಿ, ಸಮಾನತೆ ಹಾಗೂ ಸೌಹಾರ್ದತೆಯನ್ನು ಕಾಪಾಡಲು ಕಾನೂನು ಜ್ಞಾನ ಪ್ರತಿಯೊಬ್ಬರಿಗೂ ಇರಬೇಕು ಎಂದು ಹೇಳಿದರು. ಅನ್ಯಾಯ ಅಥವಾ ದೌರ್ಜನ್ಯ ಎದುರಾದಲ್ಲಿ ತಕ್ಷಣವೇ ಕಾನೂನು ಸಹಾಯ ಪಡೆಯುವಂತೆ ಅವರು ಸಲಹೆ ನೀಡಿದರು. ಕಾರ್ಯಕ್ರಮದಲ್ಲಿ ನಂದಮ್ಮ, ಅರ್ಜುನ್ ಕುಂಡೆ, ಲಕ್ಷ್ಮಣರಾವ್, ಚಿನ್ನಮ್ಮ ಸೇರಿದಂತೆ ಹಲವರು ಉಪಸ್ಥಿತರಿದ್ದು, ಜಾಗೃತಿ ಕಾರ್ಯಕ್ರಮಕ್ಕೆ ಗ್ರಾಮಸ್ಥರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಯಿತು. ವರದಿ: ಅರವಿಂದ ಮಲ್ಲಿಗೆ, ಬೀದರ್ ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು…
ಸರಗೂರು: ತಾಲ್ಲೂಕಿನ ಮುಳ್ಳೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮುಳ್ಳೂರುಯಲ್ಲಿ ಮಂಗಳವಾರ ರಾತ್ರಿ ಕಾಡಾನೆಗಳ ಹಿಂಡು ದಾಳಿ ನಡೆಸಿ ಬಾಳೆ ತೋಟವನ್ನು ನಾಶಪಡಿಸಿವೆ. ಗ್ರಾಮದ ರೈತ ರಾಜೇಶ್ ಅವರಿಗೆ ಸೇರಿದ ಬಾಳೆ ತೋಟ ನಾಶವಾಗಿದೆ. ಸುಮಾರು 2 ಎಕರೆ ಜಮೀನಿನಲ್ಲಿ 2 ಸಾವಿರ ಬಾಳೆ ಬೆಳೆದಿದ್ದರು. ಕಾಡಾನೆಗಳ ದಾಳಿಗೆ ಸುಮಾರು 1000 ಬಾಳೆ ಗಿಡಗಳು ನಾಶವಾಗಿದ್ದು, ₹ 7 ಲಕ್ಷ ನಷ್ಟವಾಗಿದೆ ಎಂದು ತಿಳಿಸಿದ್ದಾರೆ. ಒಂದು ಬಾಳೆ ಸಸಿಗೆ ₹ 25 ಕೊಟ್ಟು ನರ್ಸರಿಯಿಂದ ತಂದು ಬೇಸಾಯ ಮಾಡಲಾಗಿದೆ. ಒಂದು ಗಿಡ ಬಾಳೆ ಬೆಳೆಯಲು ಸುಮಾರು ₹ 400 ಖರ್ಚಾಗಿದ್ದು, ಉತ್ತಮ ಫಸಲು ಬಂದಿದ್ದರಿಂದ ಒಂದು ಗೊನೆಗೆ ₹ 1000 ಸಿಗುತ್ತಿತ್ತು. ಒಂದು ತಿಂಗಳ ಹಿಂದೆ ಇದೇ ಬಾಳೆ ತೊಟಕ್ಕೆ ಆನೆಗಳು ನುಗ್ಗಿ ಸ್ವಲ್ಪ ಬೆಳೆಯನ್ನು ನಾಶ ಮಾಡಿದ್ದವು. ಮುಂದೆಯೂ ಆನೆಗಳು ದಾಳಿ ಇಡುವ ಸಾಧ್ಯತೆಯಿದೆ ಎಂದು ನೋವು ತೋಡಿಕೊಂಡರು. ಕಾಡಾನೆಗಳಿಂದ ಬಾಳೆ ನಾಶವಾಗಿರುವ ಸಂಬಂಧ ಅರಣ್ಯ ಇಲಾಖೆ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದು,…
ಸರಗೂರು: ಪ್ರಾಣಿ ಬಲಿ ನಿಷೇಧಿಸುವಂತೆ ಜಾಗೃತಿ ಮೂಡಿಸಿದ ಹಿನ್ನೆಲೆಯಲ್ಲಿ ಚಿಕ್ಕದೇವಮ್ಮನ ಜಾತ್ರೆಯಲ್ಲಿ ಪ್ರಾಣಿ ಬಲಿಯನ್ನು ಸಂಪೂರ್ಣವಾಗಿ ತಡೆಗಟ್ಟಲಾಯಿತು ಎಂದು ವಿಶ್ವ ಪ್ರಾಣಿ ಕಲ್ಯಾಣ ಮಂಡಳಿ ಮತ್ತು ಬಸವ ಧರ್ಮ ಜ್ಞಾನಪೀಠ ಅಧ್ಯಕ್ಷ ದಯಾನಂದ ಸ್ವಾಮೀಜಿ ತಿಳಿಸಿದರು. ತಾಲೂಕಿನ ಪಟ್ಟಣ ಪೋಲಿಸ್ ಠಾಣೆಯಲ್ಲಿ ಬುಧವಾರ ದಂದು ಪ್ರಾಣಿ ಬಲಿ ನಿಷೇಧ ಜಾಗೃತಿ ನಿರ್ಮೂಲನಾ ಜಾಥಾಕ್ಕೆ ಚಾಲನೆ ನೀಡಿ ಮಾತನಾಡಿದರು. ಕಳದೆ ವರ್ಷದಿಂದ ವಿಶ್ವಪ್ರಾಣಿ ಕಲ್ಯಾಣ ಮಂಡಳಿ ಕೈಗೊಂಡ ನಿರಂತರ ಪ್ರಯತ್ನದಿಂದಾಗಿ ಬಹುತೇಕ ಪ್ರಾಣಿ ಬಲಿ 95% ಭಾಗದಷ್ಟು ಯಶಸ್ವಿಯಾಗಿದೆ. ಹೀಗಾಗಿ ಪ್ರತಿ ಜಾತ್ರೆಯಲ್ಲಿಯೂ ರಕ್ತ ಮುಕ್ತ ಸುಕ್ಷೇತ್ರವಾಗಿ ಮಾರ್ಪಟ್ಟಿಸುವ ಕೆಲಸ ಮಾಡಬೇಕಿದೆ’ ಎಂದು ಹೇಳಿದರು. ಮೂರು ದಿನಗಳ ಕಾಲ ಜಾತೆಯಲ್ಲಿ ಪ್ರಾಣಿ ಬಲಿ ತಡೆ ಕುರಿತು ವ್ಯಾಪಕ ಜನ ಜಾಗೃತಿ ಮೂಡಿಸಲಾಯಿತು. ಪ್ರಾಣಿ ಬಲಿ ತಡೆದು ಅರಿಶಿನ ಕುಂಕುಮ ಧೂಪ, ದೀಪ, ತೆಂಗಿನಕಾಯಿ, ಕುಂಬಳಕಾಯಿ, ನಿಂಬೆಹಣ್ಣು ಮೊದಲಾದ ಸಾತ್ವಿಕ ಮಂಗಳ ದ್ರವ್ಯಗಳ ಮೂಲಕ ಅಹಿಂಸಾತ್ಮಕವಾಗಿ ದೇವಿಗೆ ಪೂಜೆ ಸಲ್ಲಿಸಬೇಕು ಎಂದು ಮನವಿ ಮಾಡಲಾಗಿದೆ’ಎಂದರು.…