Subscribe to Updates
Get the latest creative news from FooBar about art, design and business.
- ಸಾದರ ಸಮುದಾಯ ಭವನದಲ್ಲಿ ಸಪ್ತಗಿರಿ ಆಸ್ಪತ್ರೆ ವತಿಯಿಂದ ಬೃಹತ್ ಆರೋಗ್ಯ ತಪಾಸಣೆ ಮತ್ತು ಶಸ್ತ್ರ ಚಿಕಿತ್ಸಾ ಶಿಬಿರ
- ಖಾಸಗಿ ಶಾಲೆಗಳ ಮಾದರಿಯಲ್ಲೇ, ಸರ್ಕಾರಿ ಶಾಲೆಗಳ ರೂಪಾಂತರ: ಡಿ.ಕೆ.ಶಿವಕುಮಾರ್
- ತುಮಕೂರು ವಿವಿ 19ನೇ ಘಟಿಕೋತ್ಸವ: 90 ವಿದ್ಯಾರ್ಥಿಗಳಿಗೆ 117 ಚಿನ್ನದ ಪದಕ
- ಶಾಲೆಗಳ ಪುನರಾರಂಭ: ದಾಖಲಾತಿ ಆಂದೋಲನಕ್ಕೆ ಡಿ.ಸಿ. ಚಾಲನೆ
- ಸಚಿವ ಸ್ಥಾನದ ಆಸೆ ನನಗೂ ಇದೆ ಕೊಟ್ಟರೆ ಪ್ರಾಮಾಣಿಕವಾಗಿ ಕೆಲಸ ನಿರ್ವಹಿಸುವೆ: ಹೆಚ್.ವಿ.ವೆಂಕಟೇಶ್
- ನವಿಲೆ ಭಾಗಕ್ಕೆ ಹೇಮಾವತಿ ನೀರನ್ನು ಹರಿಸಲಾಗುವುದು ರೈತರು ಆತಂಕಪಡುವ ಅಗತ್ಯವಿಲ್ಲ: ಶಾಸಕ ಸಿ.ಬಿ.ಸುರೇಶ್ ಬಾಬು
- ‘ಗರ್ಭಿಣಿನೂ ಇಲ್ಲ, ಮಹಿಳೆಯೂ ಇಲ್ಲ… ಕಾರಿನಲ್ಲಿ ಒಬ್ಬರೇ ಇದ್ದಿದ್ದು!’: ಝೀರೋ ಟ್ರಾಫಿಕ್ ಪ್ರತಿಭಟನೆಯ ಅಸಲೀಯತ್ತು ಬಿಚ್ಚಿಟ್ಟ ಬೆಂಗಳೂರು ಪೊಲೀಸರು
- ಡಿ.ಕೆ.ಶಿವಕುಮಾರ್ ಪ್ರಮಾಣ ವಚನ ಸ್ವೀಕಾರ: ಜೂನ್ 3 ರಂದು ವಿಧಾನಸೌಧ ಸುತ್ತಮುತ್ತಲಿನ ಕಚೇರಿಗಳಿಗೆ ಅರ್ಧ ದಿನ ರಜೆ ಘೋಷಣೆ
Author: admin
ಬಹುದಿನಗಳ ಕಾಲ ಚಂದನವನದಲ್ಲಿ ಮಿಂಚಿದ ಚೆಲುವೆ ರಾಧಿಕಾ ಪಂಡಿತ್, ರಾಕಿಂಗ್ ಸ್ಟಾರ್ ಯಶ್ ಅವರನ್ನು ಮದುವೆಯಾದ ಬಳಿಕ ಹೆಚ್ಚೇನು ಸಿನಿಮಾ ಮಾಡಿಲ್ಲ. ಮಕ್ಕಳು ಸಂಸಾರ ಎಂದು ಕುಟುಂಬಕ್ಕೆ ಸಮಯ ಕೊಟ್ಟಿದ್ದಾರೆ. ಮನೆ, ಸಂಸಾರ ಎಂದು ಮಕ್ಕಳ ಜೊತೆ ಫುಲ್ ಟೈಮ್ ಬ್ಯುಸಿಯಾಗಿರುವ ರಾಧಿಕಾ ಪಂಡಿತ್, ಸೋಶಿಯಲ್ ಮೀಡಿಯಾದಲ್ಲಿ ಫುಲ್ ಆ್ಯಕ್ಟೀವ್ ಆಗಿದ್ದಾರೆ. ಮೊಗ್ಗಿನ ಮನಸ್ಸು ಚಿತ್ರದ ಮೂಲಕ ನಾಯಕಿಯಾಗಿ ಕನ್ನಡ ಸಿನಿಮಾ ಇಂಡಸ್ಟ್ರಿಗೆ ನಟಿ ರಾಧಿಕಾ ಪಂಡಿತ್ ಎಂಟ್ರಿ ಕೊಟ್ಟಿದ್ದು, ಅನೇಕ ಸಿನಿಮಾಗಳಲ್ಲಿ ನಟಿ ಸೈ ಎನಿಸಿಕೊಂಡಿದ್ದು ಅಪಾರ ಅಭಿಮಾನಿಗಳನ್ನು ಹೊಂದಿದ್ದಾರೆ. ರಾಧಿಕಾ ಅವರಿಗೆ ಈಗಲೂ ಸಾಕಷ್ಟು ಸಿನಿಮಾ ಆಫರ್ ಗಳು ಬರ್ತಿವೆಯಂತೆ. ಆದರೆ ರಾಧಿಕಾ ಅವರೇ ಆ ಆಫರ್ ಗಳನ್ನು ತಿರಸ್ಕರಿಸುತ್ತಿದ್ದಾರಂತೆ. ಹಾಗೆ ಅವರು ತಿರಸ್ಕರಿಸಿದ ಪಾತ್ರದ ಮತ್ತು ಸಿನಿಮಾ ಸುದ್ದಿ ಆಗುತ್ತಿದೆ. ಕನ್ನಡದ ಸಿನಿಮಾ ‘ಕೃಷ್ಣನ್ ಲವ್ ಸ್ಟೋರಿ’ ತಂಡ ರಾಧಿಕಾ ಪಂಡಿತ್ ಅವರನ್ನು ಅರಸಿ ಬಂದಿತ್ತು. ಈ ಚಿತ್ರದಲ್ಲಿ ನಾಯಕಿಯದ್ದು ತುಸು ನೆಗೆಟಿವ್ ಶೇಡ್ ಇದ್ದ ಕಾರಣ ಒಪ್ಪಿಕೊಳ್ಳಲು…
ಸುದೀಪ್ ಅವರು ಬಾಲ್ಯದಿಂದಲೂ, ತಾನೊಬ್ಬ ಸಿನಿಮಾ ಹೀರೋ ಆಗಬೇಕು ಎಂದು ಕನಸು ಕಟ್ಟಿಕೊಂಡು ಅದಕ್ಕಾಗಿ ಮುಂಬೈ ಗೆ ಹೋಗಿ ತರಬೇತಿ ಪಡೆದುಕೊಂಡು ಇಂಡಸ್ಟ್ರಿಗೆ ಎಂಟ್ರಿ ಕೊಟ್ಟವರು. ಆರಂಭದ ದಿನಗಳಲ್ಲಿ ಇವರನ್ನು ಆರಡಿ ಹೈಟು, ಐರನ್ ಲೆಗ್, ಎಮ್ಮೆ ತರಹ ಧ್ವನಿ ಇದೆ ಎಂದೆಲ್ಲಾ ಅವಮಾನ ಮಾಡಿ ಹೀಯಾಳಿಸಿದರು. ಆದರೆ ಇಂದು ಅದೇ ಬೇಸ್ ವಾಯ್ಸ್ ಗಾಗಿ, ಆರಡಿ ಹೀರೋಗಾಗಿ ಕನ್ನಡ ಸಿನಿಮಾ ರಂಗ ಮಾತ್ರವಲ್ಲದೆ ಭಾರತದ ಎಲ್ಲಾ ಚಿತ್ರರಂಗದವರು ಕೂಡ ಕರೆದು ಮಣೆ ಹಾಕುತ್ತಿದ್ದಾರೆ. ಸುದೀಪ್ ಅವರ ಅದೃಷ್ಟ ಬದಲಾಯಿಸಿದ ಚಿತ್ರ ಎಂದರೆ ಅದು ಹುಚ್ಚ ಸಿನಿಮಾ. ಹುಚ್ಚ ಸಿನಿಮಾವನ್ನು ತೆರೆ ಮೇಲೆ ತರುವ ಮುನ್ನ ವಿಷ್ಣುವರ್ಧನ್ ಅವರಿಗೆ ತೋರಿಸಬೇಕು ಎನ್ನುವುದು ಸುದೀಪ್ ಆಸೆ ಆಗಿತ್ತು. ಯಾಕೆಂದರೆ ವಿಷ್ಣುವರ್ಧನ್ ಅವರು ಸುದೀಪ್ ಅವರ ಫೇವರಿಟ್ ಹೀರೋ ಮಾತ್ರ ಅಲ್ಲದೆ ಅವರ ಅನೇಕ ವಿಷಯಗಳನ್ನು ತಮ್ಮ ಜೀವನದಲ್ಲಿ ಅವರು ಆಗಿನಿಂದಲೇ ಅಳವಡಿಸಿಕೊಂಡಿದ್ದರು. ವಿಷ್ಣುವರ್ಧನ್ ಅವರ ಅಭಿಪ್ರಾಯ ಸುದೀಪ್ ಅವರಿಗೆ ಬಹಳ ಮುಖ್ಯವಾಗಿದ್ದ ಕಾರಣ…
ವರದಿ: ಮಂಜುಸ್ವಾಮಿ ಎಂ.ಎನ್. ಕೊರಟಗೆರೆ: ರಾಜ್ಯದಲ್ಲಿ ಅತಿವೃಷ್ಟಿ, ಅನಾವೃಷ್ಟಿ ಹೆಚ್ಚಾಗಿ ಎಲ್ಲೆಡೆ ಬೆಳೆ ಹಾನಿ, ಆಸ್ತಿಪಾಸ್ತಿ ಹಾನಿಯಾಗಿದ್ದು ಮಳೆ ಬಂದಾಗ ಸಾಮಾನ್ಯವಾಗಿ ರಸ್ತೆಗಳು ಸೇತುವೆಗಳು ಹಾಳಾಗುವುದು ಕಾಣುತ್ತಿದ್ದೇವೆ ಆದರೆ ಕಳೆದ ಎರಡು ದಿನಗಳ ಹಿಂದೆ ಸುರಿದ ಭಾರೀ ಮಳೆಗೆ ತಾಲೂಕಿನ ಹಲವು ಕೆರೆಕಟ್ಟೆಗಳು ತುಂಬಿ ಗರುಡಾಚಲ,ಸುವರ್ಣಮುಖಿ, ಜಯಮಂಗಲಿ ನದಿಗಳು ಮೈದುಂಬಿ ಹರಿದಿವೆ ಕೆಲವೆಡೆ ನದಿಗಳು ಹರಿದ ರಭಸಕ್ಕೆ ಸೇತುವೆಗಳು ಕೊಚ್ಚಿ ಹೋಗಿ ಗ್ರಾಮಗಳಿಗೆ ಸಂಪರ್ಕ ಕಲ್ಪಿಸುವ ರಸ್ತೆಗಳು ಕಾಣದಾಗಿ ಈ ಭಾಗದ ಜನರ ಓಡಾಟ ಹೇಳತೀರದಾಗಿದೆ.. ಅದೇ ರೀತಿಯಾಗಿ ತಾಲೂಕಿನ ಹೊಳವನಹಳ್ಳಿ ಹೋಬಳಿ ವ್ಯಾಪ್ತಿಯ ಬೈಚಾಪುರ ಗ್ರಾಮ ಪಂಚಾಯಿತಿಗೆ ಸೇರಿದ ತೊಗರಿಘಟ್ಟ,ಪಣ್ಣೇನಹಳ್ಳಿ ಹನುಮೇನಹಳ್ಳಿ ಸೇರಿದಂತೆ ವಿವಿಧ ಗ್ರಾಮಗಳನ್ನು ಸಂಪರ್ಕಿಸುವ ಎರಡು ಸೇತುವೆಗಳು ಕೊಚ್ಚಿ ಹೋಗಿ ಸುಮಾರು ಎರಡು ತಿಂಗಳುಗಳಿಂದ ಈ ಗ್ರಾಮಗಳ ಜನರು ಓಡಾಡಲು ಕಷ್ಟಕರವಾಗಿದೆ ಗೃಹ ಸಚಿವರ ತವರಲ್ಲಿಯೇ ಇಂತಹ ಸೇತುವೆಗಳಿಂದ ಜನರಿಗೆ ಕಂಟಕ ಎದುರಾಗಿದೆ.. ಈ ಭಾಗದ ಜನರು ಸ್ಥಳೀಯ ಜನ ಪ್ರತಿನಿಧಿಗಳು ತಹಶೀಲ್ದಾರ್ ತಾಲೂಕು ಪಂಚಾಯಿತಿ ಸೇರಿದಂತೆ…
ತುಮಕೂರು: ನಗರದ ಶ್ರೀ ಸಿದ್ಧಾರ್ಥ ಇನ್ ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಮತ್ತು ಚೆನ್ನೈನ ಸ್ಕಿಲ್ಸ್ಡಿಎ ಫೌಂಡೇಶನ್ ಸಹಯೋಗದೊಂದಿಗೆ ಸೈಬರ್ ಭದ್ರತೆ ಮತ್ತು ಡೇಟಾ ಗೌಪ್ಯತೆ ಕುರಿತು ಉಚಿತ ಆಫ್ಲೈನ್ ಪ್ರಮಾಣೀಕರಣ ಕೋರ್ಸ್ ನ್ನು ಇದೇ ತಿಂಗಳ 18ರಿಂದ ಆರಂಭಿಸಲಾಗುತ್ತಿದ್ದು, ಆಸಕ್ತರು ಅರ್ಜಿಗಳನ್ನು ಸಲ್ಲಿಸಬಹುದು. ಈ ತರಬೇತಿಯು ಇತ್ತೀಚಿನ ಪದವೀಧರರಿಗೆ ತಂತ್ರಜ್ಞಾನದಲ್ಲಿ ಹೆಚ್ಚು ಬೇಡಿಕೆಯಿರುವ ಕ್ಷೇತ್ರಗಳಲ್ಲಿ ಅಭಿವೃದ್ಧಿ ಹೊಂದಲು ಅಗತ್ಯವಾದ ಕೌಶಲ್ಯಗಳನ್ನು ಒದಗಿಸುವ ಗುರಿಯನ್ನು ಹೊಂದಿದೆ. ಅಲ್ಲದೆ ಸೈಬರ್ ಭದ್ರತೆ ಮತ್ತು ದತ್ತಾಂಶಗಳ ಗೌಪ್ಯತೆಯ ವೇಗವಾಗಿ ಬೆಳೆಯುತ್ತಿರುವ ಕ್ಷೇತ್ರಗಳಲ್ಲಿ ತಮ್ಮ ವೃತ್ತಿ ಭವಿಷ್ಯವನ್ನು ಹೆಚ್ಚಿಸಲು ಪದವೀಧರರಿಗೆ ಇದು ಉತ್ತಮ ಅವಕಾಶವಾಗಿದೆ. ಸೆಕ್ಯುರಿಟಿ ಇಂಜಿನಿಯರ್, ಪೆನೆಟ್ರೇಶನ್ ಟೆಸ್ಟರ್, ಡೇಟಾ ಗೌಪ್ಯತೆ ಅಧಿಕಾರಿ, ಗೌಪ್ಯತೆ ಸಲಹೆಗಾರ ಸೇರಿದಂತೆ ಮಹತ್ವದ ಕ್ಷೇತ್ರದಲ್ಲಿ ಉದ್ಯೋಗ ಮತ್ತು ನ್ಯಾಸ್ಕಾಮ್ ಮೌಲ್ಯಮಾಪನದಲ್ಲಿ ಉತ್ತೀರ್ಣರಾದವರಿಗೆ ಉದ್ಯೋಗ ದೊರಕಿಸಿಕೊಡಲಾಗುವುದು. ತರಬೇತಿ ವಿವರ: 180 ಗಂಟೆಗಳು ಅವಧಿಯ ತರಬೇತಿಯು 18ನೇ ಸೆಪ್ಟೆಂಬರ್, 2024 ರಿಂದ ಆರಂಭವಾಗಲಿದ್ದು, ದಿನಕ್ಕೆ 6 ಗಂಟೆಗಳಂತೆ ತರಬೇತಿಯನ್ನು ಉಚಿತವಾಗಿ ನೀಡಲಾಗುವುದು. ತರಬೇತಿಯ…
ತುಮಕೂರು: ಶಿರಾ ತಾಲ್ಲೂಕು ತಹಶೀಲ್ದಾರ್ ಕಚೇರಿ ಸಭಾಂಗಣದಲ್ಲಿ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಅವರ ಅಧ್ಯಕ್ಷತೆಯಲ್ಲಿ ಶುಕ್ರವಾರ ಜರುಗಿದ ಕುಂದು–ಕೊರತೆ ಸಭೆಯಲ್ಲಿ ವ್ಯಕ್ತಿಯೊಬ್ಬರಿಗೆ ಪಡಿತರ ವಿತರಣೆಯಲ್ಲಿ ಆದ ಅನಾನುಕೂಲತೆಯನ್ನು ಪರಿಹರಿಸಿದೆ. ಶಿರಾ ತಾಲ್ಲೂಕು ಮಾಳನಹಳ್ಳಿಯ ಚಂದ್ರಪ್ಪ ಎಂಬುವವರು ತಮಗೆ ಸಾರ್ವಜನಿಕ ಪಡಿತರ ವಿತರಣೆಯಡಿ ನ್ಯಾಯಬೆಲೆ ಅಂಗಡಿಯಿಂದ ಸಮರ್ಪಕವಾಗಿ ಆಹಾರ ಧಾನ್ಯವನ್ನು ವಿತರಣೆ ಮಾಡಿರುವುದಿಲ್ಲವೆಂದು ಅಹವಾಲು ಸಲ್ಲಿಸಿದ್ದರು. ಈ ಅಹವಾಲಿಗೆ ಸ್ಪಂದಿಸಿದ ಜಿಲ್ಲಾಡಳಿತ ಕೂಡಲೇ ಚಂದ್ರಪ್ಪ ಅವರಿಗೆ ಪಡಿತರ ವಿತರಿಸಲು ಕ್ರಮಕೈಗೊಳ್ಳಲಾಗಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296
ತುಮಕೂರು: ಗೃಹ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ.ಜಿ.ಪರಮೇಶ್ವರ ಅವರು ಇಂದು ನಗರದ ಶ್ರೀ ಸಿದ್ಧಗಂಗಾ ಮಠದ ಆವರಣದಲ್ಲಿರುವ ಯಾತ್ರಿ ನಿವಾಸದ ಪಕ್ಕ ಅತಿಥಿ ಗೃಹ ನಿರ್ಮಾಣಕ್ಕೆ ಶಂಕುಸ್ಥಾಪನೆ ನೆರವೇರಿಸಿದರು. ನಂತರ ಮಾತನಾಡಿದ ಅವರು, ಶ್ರೀ ಸಿದ್ಧಗಂಗಾ ಮಠಕ್ಕೆ ಭೇಟಿ ನೀಡುವ ಸಾವಿರಾರು ಭಕ್ತಾದಿಗಳು ಹಾಗೂ ಗಣ್ಯ ವ್ಯಕ್ತಿಗಳು ತಂಗಲು ಅನುಕೂಲವಾಗುವಂತೆ ಸುಮಾರು 4.5 ಕೋಟಿ ರೂ. ವೆಚ್ಚದಲ್ಲಿ ಆಧುನಿಕ ಅತಿಥಿ ಗೃಹ ನಿರ್ಮಾಣ ಮಾಡಲಾಗುವುದು ಎಂದು ತಿಳಿಸಿದರು. ಶ್ರೀ ಸಿದ್ಧಗಂಗಾ ಮಠದ ಅಧ್ಯಕ್ಷ ಶ್ರೀ ಶ್ರೀ ಸಿದ್ದಲಿಂಗ ಮಹಾಸ್ವಾಮೀಜಿ ಅವರು ದಿವ್ಯ ಸಾನಿಧ್ಯ ವಹಿಸಿದ್ದರು. ಈ ಸಂದರ್ಭದಲ್ಲಿ ನಗರ ಶಾಸಕ ಜ್ಯೋತಿ ಗಣೇಶ್, ಗ್ರಾಮಾಂತರ ಶಾಸಕ ಸುರೇಶ್ಗೌಡ, ಜಿಲ್ಲಾಧಿಕಾರಿ ಶುಭ ಕಲ್ಯಾಣ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ವಿ. ಅಶೋಕ್, ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಜಿ. ಪ್ರಭು, ಗೃಹ ಸಚಿವರ ವಿಶೇಷ ಕರ್ತವ್ಯಾಧಿಕಾರಿ ಡಾ. ಕೆ. ನಾಗಣ್ಣ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು…
ಬೆಂಗಳೂರು: ಬಿಜೆಪಿ ಶಾಸಕ ಮುನಿರತ್ನ ವಿರುದ್ಧ ಇನ್ನೂ ಎರಡು ಆಡಿಯೋಗಳಿವೆ ಎಂದು ಗುತ್ತಿಗೆದಾರ ಚಲುವರಾಜು ಸ್ಫೋಟಕ ಹೇಳಿಕೆ ನೀಡಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುನಿರತ್ನ ಅವರ ಎರಡು ಆಡಿಯೋ ನಾಳೆ ಬಿಡುಗಡೆ ಮಾಡುತ್ತೇನೆ. ಹನುಮಂತರಾಯಪ್ಪ ಜೊತೆ ಮಾತನಾಡಿರುವ ಆಡಿಯೋ ಹಾಗೂ 30% ಕಮಿಷನ್ ವಿಚಾರದ ಆಡಿಯೋಗಳನ್ನು ನಾಳೆ ಬಿಡುಗಡೆ ಮಾಡುತ್ತೇನೆ ಎಂದು ಅವರು ಹೇಳಿದ್ದಾರೆ. ಕಳೆದ ಮೂರು ವರ್ಷಗಳಿಂದ ಮುನಿರತ್ನ ನನಗೆ ಕೊಡಬಾರದ ಹಿಂಸೆ ಕೊಟ್ಟಿದ್ದಾರೆ. ನನ್ನ ಪತ್ನಿಯ ಫೋಟೋ ಕಳುಹಿಸುವಂತೆ ಹಿಂಸಿಸಿದ್ದಾರೆ, ನಿಂದಿಸಿದ್ದಾರೆ ಎಂದು ಅವರು ಹೇಳಿದ್ದಾರೆ. ಮುನಿರತ್ನ ಕಡೆಯವರು ರೇಣುಕಾಸ್ವಾಮಿಗೆ ಆದ ಗತಿಯೇ ನಿನಗೂ ಆಗುತ್ತದೆ ಎಂದು ಬೆದರಿಸಿದ್ದಾರೆ. ರೇಣುಕಾಸ್ವಾಮಿಯನ್ನು ಹತ್ಯೆ ಮಾಡಿದ್ದು ಯಾರು ಗೊತ್ತಾ? ನಮ್ಮ ಎಂಎಲ್ ಎ ಮುನಿರತ್ನ ಭಾಮೈದ ಎಂದು ಹೆದರಿಸಿ ಧಮ್ಕಿ ಹಾಕಿದ್ದಾರೆ. ನನಗೆ ಹಾಗೂ ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದ್ದು ರಕ್ಷಣೆ ನೀಡುವಂತೆ ಅವರು ಕಣ್ಣೀರು ಹಾಕಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್…
ಚಿಕ್ಕಬಳ್ಳಾಪುರ: ಪತ್ನಿ ಕಪ್ಪಾಗಿದ್ದಾಳೆ ಎಂದು ನಿಂದಿಸಿ ವರದಕ್ಷಿಣೆ ಕಿರುಕುಳ ನೀಡಿದ್ದರಿಂದ ಮನನೊಂದ ಪತ್ನಿ ಸಾವಿಗೆ ಶರಣಾಗಿರುವ ಘಟನೆ ಚಿಕ್ಕಬಳ್ಳಾಪುರದ ಗಾಂಧಿನಗರದಲ್ಲಿ ನಡೆದಿದೆ. ಗಾಂಧಿನಗರದ ನಿವಾಸಿ ಟೈಲರ್ ವೃತ್ತಿಯ ಕೆ.ಬಿ.ದೇವರಾಜು ಅವರ ಏಕೈಕ ಪುತ್ರಿ ಬಿಂದುಶ್ರೀ (22) ಸಾವಿಗೆ ಶರಣಾದ ಯುವತಿಯಾಗಿದ್ದಾಳೆ. ಈಕೆಯನ್ನ ಆವಲಹಳ್ಳಿ ಸಮೀಪದ ಹಿರಂಡಹಳ್ಳಿ ಗ್ರಾಮದ ಮುನಿರಾಜು ಎಂಬವರ ಮಗ ಎಚ್.ಎಂ.ರಾಘವೇಂದ್ರ ಎಂಬಾತನಿಗೆ ಫೆಬ್ರವರಿ 2024ರಲ್ಲಿ ವಿವಾಹ ಮಾಡಿಕೊಡಲಾಗಿತ್ತು. ವಿವಾಹದ ನಂತರ ವರದಕ್ಷಿಣೆ ನೀಡುವಂತೆ ಪ್ರಾಣ ತಿನ್ನಲು ಪತಿಯ ಮನೆಯವರು ಆರಂಭಿಸಿದ್ದರು. ತವರು ಮನೆಯಿಂದ 20 ಲಕ್ಷ ರೂಪಾಯಿ ಹಣ ತರುವಂತೆ ದೈಹಿಕ ಮಾನಸಿಕ ಹಿಂಸೆ ನೀಡಲಾಗಿತ್ತು ಎನ್ನಲಾಗಿದೆ. ನಿರಂತರ ಕಿರುಕುಳ ತಾಳಲಾರದೇ ಬಿಂದುಶ್ರೀ ತನ್ನ ಜೀವನವನ್ನೇ ಕೊನೆಗಾಣಿಸಿದ್ದಾಳೆ. ಇತ್ತ ಪುತ್ರಿಯ ಸಾವಿನ ಸುದ್ದಿ ಸಹಿಸಲಾರದೇ ಬಿಂದು ಶ್ರೀಯ ತಂದೆ ಕೆ.ವಿ.ದೇವರಾಜ್ ಕೂಡ ಸಾವಿಗೆ ಶರಣಾಗಲು ಯತ್ನಿಸಿದ್ದಾರೆ. ಅವರನ್ನು ರಕ್ಷಿಸಿ ಆಸ್ಪತ್ರೆಗೆ ದಾಖಲಿಸಲಾಗಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು…
ಬಹು ನಿರೀಕ್ಷಿತ ಹುಬ್ಬಳ್ಳಿ-ಪುಣೆ ವಂದೇ ಭಾರತ್ ರೈಲಿಗೆ (Hubblli-Pune Vande Bharat) ಪ್ರಧಾನಿ ನರೇಂದ್ರ ಮೋದಿಯವರು ಸೋಮವಾರ (ಸೆ.16) ವರ್ಚುವಲ್ ಮೂಲಕ ಚಾಲನೆ ನೀಡಲಿದ್ದಾರೆ. ಹುಬ್ಬಳ್ಳಿ-ಪುಣೆ-ಹುಬ್ಬಳ್ಳಿ ಮಧ್ಯೆ ಸಂಚರಿಸುವ ವಂದೇ ಭಾರತ್ ರೈಲು ಎರಡು ವಾಣಿಜ್ಯ ಮಹಾನಗರಗಳನ್ನು ಸಂಪರ್ಕಿಸುವ ಕೊಂಡಿಯಾಗಿದೆ. ಇದು ಕರ್ನಾಟಕದ 10ನೇ ವಂದೇ ಭಾರತ್ ರೈಲಾಗಿದೆ. ಹುಬ್ಬಳ್ಳಿ-ಪುಣೆ ವಂದೇ ಭಾರತ್ ರೈಲು ಸಮಯ, ಯಾವ್ಯಾವ ದಿನದಂದು ಸಂಚರಿಸಲಿದೆ ಎಂಬ ಮಾಹಿತಿ ಇಲ್ಲಿದೆ. ಹುಬ್ಬಳ್ಳಿ-ಪುಣೆ ವಂದೇ ಭಾರತ್ ರೈಲು ಕೇವಲ 8.5 ಗಂಟೆಗಳಲ್ಲಿ 557 ಕಿಮೀ ಕ್ರಮಿಸುತ್ತದೆ. ಇತರ ರೈಲುಗಳಿಗೆ ಹೋಲಿಸಿದರೆ ಸುಮಾರು 3 ಗಂಟೆಗಳ ಪ್ರಯಾಣದ ಸಮಯವನ್ನು ಕಡಿಮೆ ಮಾಡುತ್ತದೆ. ಈ ರೈಲು ವಾರದಲ್ಲಿ ಮೂರು ದಿನ ಮಾತ್ರ ಸಂಚರಿಸುತ್ತದೆ. ಹುಬ್ಬಳ್ಳಿ ಜನರ ಬಹು ನಿರೀಕ್ಷಿತ ಪುಣೆ-ಹುಬ್ಬಳ್ಳಿ ವಂದೇ ಭಾರತ್ ರೈಲಿಗೆ ಪ್ರಧಾನಿ ನರೇಂದ್ರ ಮೋದಿಯವರು ಚಾಲನೆ ನೀಡಲಿದ್ದಾರೆ. ಹುಬ್ಬಳ್ಳಿ-ಪುಣೆ-ಹುಬ್ಬಳ್ಳಿ ಮಧ್ಯೆ ಸಂಚರಿಸುವ ವಂದೇ ಭಾರತ್ ರೈಲು ಎರಡು ವಾಣಿಜ್ಯ ಮಹಾನಗರಗಳನ್ನು ಸಂಪರ್ಕಿಸುವ ಕೊಂಡಿಯಾಗಿದೆ. ಹುಬ್ಬಳ್ಳಿಯಿಂದ ಬುಧವಾರ, ಶುಕ್ರವಾರ…
ಯುನಿಯನ್ ಬ್ಯಾಂಕ್ ಆಫ್ ಇಂಡಿಯಾ 500 ಅಪ್ರೆಂಟಿಸ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು ಆಹ್ವಾನಿಸಿದೆ.ಈ ಹುದ್ದೆಗಳಿಗೆ ಆನ್ಲೈನ್ ಅರ್ಜಿ ಪ್ರಕ್ರಿಯೆ ಆಗಸ್ಟ್ 28 ರಿಂದ ಪ್ರಾರಂಭವಾಗಿದ್ದು, ಕೊನೆಯ ದಿನಾಂಕ ಸೆಪ್ಟೆಂಬರ್ 17, 2024 ಆಗಿದೆ. ಆಸಕ್ತ ಅಭ್ಯರ್ಥಿಗಳು Unionbankofindia.co.in ಅಧಿಕೃತ ವೆಬ್ಸೈಟ್ಗೆ ಭೇಟಿ ನೀಡಿ ಅರ್ಜಿ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು. ಈ ನೇಮಕಾತಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಯಾವುದೇ ವಿಷಯದಲ್ಲಿ ಪದವಿ ಪಡೆದಿರಬೇಕು. ಇದಲ್ಲದೆ, ನೀವು ಅರ್ಜಿ ಸಲ್ಲಿಸುತ್ತಿರುವ ರಾಜ್ಯದ ಸ್ಥಳೀಯ ಭಾಷೆಯ ಬಗ್ಗೆ ಉತ್ತಮ ಜ್ಞಾನವನ್ನು ಹೊಂದಿರುವುದು ಅವಶ್ಯಕ. ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ 20 ರಿಂದ 28 ವರ್ಷದ ವಯೋಮಿತಿ ನಿಗದಿ ಮಾಡಲಾಗಿದೆ. ಎಸ್ಸಿ/ಎಸ್ಟಿ ಅಭ್ಯರ್ಥಿಗಳಿಗೆ 5 ವರ್ಷ, ಒಬಿಸಿ ಅಭ್ಯರ್ಥಿಗಳಿಗೆ 3 ವರ್ಷ ವಯೋಮಿತಿ ಸಡಿಲಿಕೆ ಇರುತ್ತದೆ. ಅಂಗವಿಕಲ ಅಭ್ಯರ್ಥಿಗಳಿಗೆ 10 ವರ್ಷಗಳ ವಯೋಮಿತಿ ಸಡಿಲಿಕೆ ನೀಡಲಾಗಿದೆ. ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 15,000 ರೂ.ಗಳ ಸ್ಟೈಫಂಡ್ ನೀಡಲಾಗುವುದು. ಇದನ್ನು ಹೊರತುಪಡಿಸಿ, ಬೇರೆ ಯಾವುದೇ ಭತ್ಯೆಯನ್ನು ನೀಡಲಾಗುವುದಿಲ್ಲ. ಆಯ್ಕೆ ಪ್ರಕ್ರಿಯೆಯು ಆನ್ಲೈನ್…