Subscribe to Updates
Get the latest creative news from FooBar about art, design and business.
- ಸಾದರ ಸಮುದಾಯ ಭವನದಲ್ಲಿ ಸಪ್ತಗಿರಿ ಆಸ್ಪತ್ರೆ ವತಿಯಿಂದ ಬೃಹತ್ ಆರೋಗ್ಯ ತಪಾಸಣೆ ಮತ್ತು ಶಸ್ತ್ರ ಚಿಕಿತ್ಸಾ ಶಿಬಿರ
- ಖಾಸಗಿ ಶಾಲೆಗಳ ಮಾದರಿಯಲ್ಲೇ, ಸರ್ಕಾರಿ ಶಾಲೆಗಳ ರೂಪಾಂತರ: ಡಿ.ಕೆ.ಶಿವಕುಮಾರ್
- ತುಮಕೂರು ವಿವಿ 19ನೇ ಘಟಿಕೋತ್ಸವ: 90 ವಿದ್ಯಾರ್ಥಿಗಳಿಗೆ 117 ಚಿನ್ನದ ಪದಕ
- ಶಾಲೆಗಳ ಪುನರಾರಂಭ: ದಾಖಲಾತಿ ಆಂದೋಲನಕ್ಕೆ ಡಿ.ಸಿ. ಚಾಲನೆ
- ಸಚಿವ ಸ್ಥಾನದ ಆಸೆ ನನಗೂ ಇದೆ ಕೊಟ್ಟರೆ ಪ್ರಾಮಾಣಿಕವಾಗಿ ಕೆಲಸ ನಿರ್ವಹಿಸುವೆ: ಹೆಚ್.ವಿ.ವೆಂಕಟೇಶ್
- ನವಿಲೆ ಭಾಗಕ್ಕೆ ಹೇಮಾವತಿ ನೀರನ್ನು ಹರಿಸಲಾಗುವುದು ರೈತರು ಆತಂಕಪಡುವ ಅಗತ್ಯವಿಲ್ಲ: ಶಾಸಕ ಸಿ.ಬಿ.ಸುರೇಶ್ ಬಾಬು
- ‘ಗರ್ಭಿಣಿನೂ ಇಲ್ಲ, ಮಹಿಳೆಯೂ ಇಲ್ಲ… ಕಾರಿನಲ್ಲಿ ಒಬ್ಬರೇ ಇದ್ದಿದ್ದು!’: ಝೀರೋ ಟ್ರಾಫಿಕ್ ಪ್ರತಿಭಟನೆಯ ಅಸಲೀಯತ್ತು ಬಿಚ್ಚಿಟ್ಟ ಬೆಂಗಳೂರು ಪೊಲೀಸರು
- ಡಿ.ಕೆ.ಶಿವಕುಮಾರ್ ಪ್ರಮಾಣ ವಚನ ಸ್ವೀಕಾರ: ಜೂನ್ 3 ರಂದು ವಿಧಾನಸೌಧ ಸುತ್ತಮುತ್ತಲಿನ ಕಚೇರಿಗಳಿಗೆ ಅರ್ಧ ದಿನ ರಜೆ ಘೋಷಣೆ
Author: admin
ಆಯುಷ್ಮಾನ್ ಭಾರತ್ ಯೋಜನೆಯು ಜನರಿಗೆ ಉಚಿತ ವೈದ್ಯಕೀಯ ಚಿಕಿತ್ಸೆಯನ್ನು ಒದಗಿಸುವ ಯೋಜನೆಯಾಗಿದೆ. ಸರ್ಕಾರ ನಡೆಸುವ ಈ ಆರೋಗ್ಯ ಯೋಜನೆಯಲ್ಲಿ ಅರ್ಜಿ ಸಲ್ಲಿಸಿದ ನಂತರ ಆಯುಷ್ಮಾನ್ ಕಾರ್ಡ್ ಬರಲಿದ್ದು, ಇದರ ಮೂಲಕ 5 ಲಕ್ಷ ರೂ. ವರೆಗೆ ಉಚಿತ ಚಿಕಿತ್ಸೆ ಪಡೆಯಬಹುದಾಗಿದೆ. ಸರ್ಕಾರವು ಪ್ರತಿ ವರ್ಷ ಈ ಮೊತ್ತವನ್ನ ಪಾವತಿಸುತ್ತದೆ. ಸಂಪೂರ್ಣ ವೆಚ್ಚವನ್ನು ಸರಕಾರವೇ ಭರಿಸಲಿದೆ. ಬುಧವಾರ ನಡೆದ ಈ ಸರ್ಕಾರಿ ಯೋಜನೆಯಲ್ಲಿ ಮಹತ್ವದ ಬದಲಾವಣೆಯಾಗಿ 70 ವರ್ಷ ಮೇಲ್ಪಟ್ಟ ಎಲ್ಲ ಹಿರಿಯ ನಾಗರಿಕರನ್ನು ‘ಆಯುಷ್ಮಾನ್ ಯೋಜನೆ’ಗೆ ಸೇರಿಸಲು ಸಂಪುಟ ಸಭೆಯಲ್ಲಿ ನಿರ್ಧರಿಸಲಾಗಿದೆ. ಒಂದು ಕುಟುಂಬದಲ್ಲಿ ಎಷ್ಟು ಜನರು ಆಯುಷ್ಮಾನ್ ಕಾರ್ಡ್ಗಳನ್ನ ಪಡೆಯಬಹುದು? ಸರ್ಕಾರವು ಯೋಜನೆಯನ್ನ ಪ್ರಾರಂಭಿಸಿದಾಗ, ಅದು ಅರ್ಹತಾ ವಿವರಗಳನ್ನ ಸಹ ಬಿಡುಗಡೆ ಮಾಡುತ್ತದೆ. ಈಗ ಒಂದೇ ಕುಟುಂಬದ ಎಷ್ಟು ಸದಸ್ಯರು ಆಯುಷ್ಮಾನ್ ಕಾರ್ಡ್ ಪಡೆಯಬಹುದು ಎಂದು ತಿಳಿಯೋಣ. ಅಗತ್ಯವಿರುವವರುಗೆ ಪ್ರಯೋಜನ ಒದಗಿಸಲು ಸರ್ಕಾರದ ಯೋಜನೆಯಲ್ಲಿ ಅಂತಹ ಯಾವುದೇ ಮಿತಿಯನ್ನ ನಿಗದಿಪಡಿಸಲಾಗಿಲ್ಲ. ಅಂದರೆ, ಒಂದು ಕುಟುಂಬದ ಎಲ್ಲ ಸದಸ್ಯರು ಆಯುಷ್ಮಾನ್ ಕಾರ್ಡ್…
ಪುರಾತನ ದೇವಾಲಯಗಳ ನಿರ್ಮಾಣ ವಿಧಾನಗಳು ಬಹಳ ಅದ್ಭುತವಾಗಿವೆ. ರಾಜಸ್ಥಾನದ ಭಂಡಾಸರ್ ದೇವಾಲಯದ ನಿರ್ಮಾಣವಂತೂ ಭಕ್ತರನ್ನು ಅಚ್ಚರಿಗೊಳಿಸುವುದರಲ್ಲಿ ಅನುಮಾನವೇ ಇಲ್ಲ. ಈ ದೇವಾಲಯದ ನಿರ್ಮಾಣದ ಸಂದರ್ಭದಲ್ಲಿ ನೀರಿನ ಬದಲು ತುಪ್ಪವನ್ನು ಬಳಸಲಾಗಿದೆ. ರಾಜಸ್ಥಾನದಲ್ಲಿರುವ ಭಂಡಾಸರ್ ದೇವಾಲಯವನ್ನು 15ನೇ ಶತಮಾನದಲ್ಲಿ ಬಂದಾ ಶಾ ಓಸ್ವಾಲ್ ಎಂಬ ಶ್ರೀಮಂತ ವ್ಯಾಪಾರಿ ನಿರ್ಮಿಸಿದ. ಈ ದೇವಾಲಯವು ಜೈನ ಧರ್ಮದ ಐದನೇ ತೀರ್ಥಂಕರ ಸುಮತಿನಾಥನಿಗೆ ಸಮರ್ಪಿತವಾಗಿದೆ. ಈ ದೇವಾಲಯವು ತುಪ್ಪದಿಂದ ಮಾಡಲ್ಪಟ್ಟಿದೆ, ಮಾತ್ರವಲ್ಲ ಅದರ ಒಳಾಂಗಣ ಮತ್ತು ವಾಸ್ತುಶಿಲ್ಪ ಕೂಡ ಕಣ್ಸೆಳೆಯುವಂತಿದೆ. ಅನೇಕ ಜೈನ ದೇವಾಲಯಗಳಂತೆ ಸುಂದರ ಕೆತ್ತನೆಗಳು ಮತ್ತು ವರ್ಣಚಿತ್ರಗಳನ್ನು ಹೊಂದಿದೆ. ಈ ದೇವಾಲಯವನ್ನು ಮೂರು ಮಹಡಿಗಳಲ್ಲಿ ನಿರ್ಮಿಸಲಾಗಿದೆ, ಇದರಲ್ಲಿ ಜೈನ ಸಂಸ್ಕೃತಿಯ ವಿಭಿನ್ನ ಅಂಶಗಳನ್ನು ನೋಡಬಹುದು. ಈ ದೇವಾಲಯವನ್ನು ನೀರಿನ ಬದಲು ತುಪ್ಪದಿಂದ ನಿರ್ಮಿಸಿದ್ದೇಕೆ ಅನ್ನೋದು ಇಂಟ್ರೆಸ್ಟಿಂಗ್ ಸಂಗತಿ. ಬಂದಾ ಷಾ ಇಲ್ಲಿ ದೇವಾಲಯ ನಿರ್ಮಾಣಕ್ಕೆ ಮುಂದಾದಾಗ ಗ್ರಾಮಸ್ಥರು ಅದನ್ನು ವಿರೋಧಿಸಿದ್ದರು. ಏಕೆಂದರೆ ಆ ಭಾಗದಲ್ಲಿ ನೀರಿಗಾಗಿ ತೀವ್ರ ಹಾಹಾಕಾರವಿತ್ತು, ಬದುಕುವುದೇ ಕಷ್ಟವೆಂಬ ಪರಿಸ್ಥಿತಿಯಿತ್ತು. ಅಂಥದ್ರಲ್ಲಿ…
ಕಲರ್ಸ್ ಕನ್ನಡದಲ್ಲಿ ಯಶಸ್ವಿಯಾಗಿರುವ ಕಾರ್ಯಕ್ರಮ ಗಿಚ್ಚಿಗಿಲಿಗಿಲಿ ಸೀಸನ್ 3ರ ವಿನ್ನರ್ ಆಗಿ ಹುಲಿ ಕಾರ್ತಿಕ್ 10 ಲಕ್ಷ ರೂಗಳ ಚಿನ್ನ ಬೆಲ್ಟ್ ಗೆದ್ದಿದ್ದಾರೆ. ತುಕಾಲಿ ಮಾನಸ ರನ್ನರ್ ಅಪ್ ಆಗಿ ಹೊರಹೊಮ್ಮಿದ್ದಾರೆ. ಇವರು 3 ಲಕ್ಷ ರೂ ಬಹುಮಾನ ಗೆದ್ದಿದ್ದಾರೆ. ನನಗೆ ವಾಯ್ಸ್ ಬರುತ್ತಿಲ್ಲ . ನನ್ನ ತಾಯಿಗೆ ಥ್ಯಾಂಕ್ಸ್ ಹೇಳುತ್ತೇನೆ. ಆಕೆ ನನಗೆ ಕೊಟ್ಟ ಫ್ರೀಡಂ ಇದಕ್ಕೆಲ್ಲ ಕಾರಣ ಎಂದಿದ್ದಾರೆ ಕಾರ್ತಿಕ್. ಬಿಗ್ಬಾಸ್ ಕನ್ನಡ ಸೀಸನ್ 10ರ ನಂತರ ಗಿಚ್ಚಿಗಿಲಿ ಗಿಲಿ ಆರಂಭವಾಗಿ ಬರೋಬ್ಬರಿ 8 ತಿಂಗಳ ಕಾಲ ಕಲರ್ಸ್ ಕನ್ನಡದಲ್ಲಿ ಈ ಶೋ ಸುದೀರ್ಘವಾಗಿ ಮೂಡಿಬಂದಿತ್ತು. ಮತ್ತು ಜನ ಮನ್ನಣೆ ಗಳಿಸಿತ್ತು. ಮಲೆನಾಡಿನ ಹೆಮ್ಮೆಯ ಕಲಾವಿದ ಹುಲಿ ಕಾರ್ತಿಕ್ ಪ್ರಶಸ್ತಿ ಗೆಲ್ಲಲು 8 ವರ್ಷ ಕಾದಿದ್ದಾರೆ. ಕಲರ್ಸ್ ಸೂಪರ್ ನಲ್ಲಿ ಮೂಡಿ ಬರುತ್ತಿದ್ದ ಮಜಾ ಭಾರತದಲ್ಲಿ ಮೊದಲ ಬಾರಿಗೆ ಕಾಣಿಸಿಕೊಂಡ ಕಾರ್ತಿಕ್ ಹಾಗೇ ಮುಂದುವರೆದು 8 ವರ್ಷದ ಬಳಿಕ ಕಲರ್ಸ್ ನ ಕಾಮಿಡಿ ನಟನಾಗಿ ಪ್ರಶಸ್ತಿ ಗೆದ್ದುಕೊಂಡಿದ್ದಾರೆ. ಯಾವುದೇ…
ಕಿಂಗ್ ಫಿಶರ್ ಬಿಯರ್ ವಿಶ್ವದ 60ಕ್ಕೂ ಹೆಚ್ಚು ದೇಶಗಳಲ್ಲಿ ಮಾರಾಟವಾಗುತ್ತದೆ. ದೇಶದ ಬಿಯರ್ ಕ್ಯಾಪಿಟಲ್ ಎಂದು ಕರೆಸಿಕೊಳ್ಳುವ ಬೆಂಗಳೂರಿನಲ್ಲಿ ವಿಶ್ವದ ಹಲವು ಅತ್ಯುತ್ತಮ ಬಿಯರ್ಗಳು ಲಭ್ಯವಿವೆ. ಈಗಾಗಲೇ ಕರ್ನಾಟಕದ ಬಿಯರ್ ಮಾರುಕಟ್ಟೆ ಕ್ರೌಡೆಡ್ ಆಗಿದೆ. ಕಡಿಮೆ ಬೆಲೆಯಿಂದ ಆರಂಭಿಸಿ ದುಬಾರಿ ಬೆಲೆಯ ಸೆಗ್ಮೆಂಟ್ ವರೆಗೆ ಹಲವು ವಿಭಾಗಗಳಲ್ಲಿ ಬಿಯರ್ಗಳು ಲಭ್ಯವಿದೆ. ಇದರ ನಡುವೆ ಇದೀಗ ಮತ್ತೊಂದು ಹೊಸ ಬಿಯರ್ ಕಂಪೆನಿ ಕರ್ನಾಟಕಕ್ಕೆ ಕಾಲಿಟ್ಟಿದೆ. ಎಸ್ಓಎಂ ಬ್ರೀವರಿಸ್ ಅವರು ‘ವೂಡ್ ಪೆಕರ್’ ಹೆಸರಿನ ಬಿಯರ್ ಅನ್ನು ಕರ್ನಾಟಕ ಮಾರುಕಟ್ಟೆಗೆ ಪರಿಚಯಿಸಿದೆ. ಸರ್ಕಾರದೊಂದಿಗೆ ಪರವಾನಗಿ ಪಡೆದುಕೊಂಡಿದ್ದು ಕರ್ನಾಟಕದಲ್ಲಿ ಎರಡು ಬಿಯರ್ ಮಾದರಿಗಳನ್ನು ಬಿಡುಗಡೆ ಮಾಡುತ್ತಿದೆ. ಕರ್ನಾಟಕದಲ್ಲಿ ಈಗಾಗಲೇ ಜನಜನಿತವಾಗಿರುವ ಎರಡು ಮಾದರಿಗಳಾದ ಪ್ರೀಮಿಯಮ್ ಹಾಗೂ ಸ್ಟ್ರಾಂಗ್ ಮಾದರಿಗಳಲ್ಲಿ ಬಿಯರ್ ಬಿಡುಗಡೆ ಮಾಡಲಾಗಿದೆ. ವೂಡ್ಪೆಕರ್ ಗ್ಲೈಡ್ ಪ್ರೀಮಿಯಂ ಬಿಯರ್ ಆಗಿದ್ದು, ವೂಡ್ಪೆಕರ್ ಕ್ರೆಸ್ಟ್ ಸ್ಟ್ರಾಂಗ್ ಬಿಯರ್ ಆಗಿದೆ. ಬಿಯರಿನ 650 ಎಂಎಲ್ ಬಾಟಲಿಗೆ 240 ರೂಪಾಯಿ, ಕ್ಯಾನ್ಗೆ 180 ರೂಪಾಯಿಗೆ ಮಾರಾಟ ಮಾಡಲಾಗುತ್ತಿದೆ. 650 ಎಂಎಲ್,…
ಶ್ರೀ ಕ್ಷೇತ್ರ ವರನಾಡು ಅನ್ನಪೂರ್ಣೇಶ್ವರಿ ದೇವಿಯ ಪ್ರಧಾನ ಆರಾಧಕರು ನವೆಂಬರ್ 1ವಶೀಕರಣ ಸ್ಪೆಷಲಿಸ್ಟ್ ಇನ್ India ಶ್ರೀ ಶ್ರೀ ವಿಘ್ನೇಶ್ವರ ಭಟ್ ರವರು ಫೋನ್ ಮೂಲಕವೇ ನಿಮ್ಮ ಸಮಸ್ಯೆಗಳನ್ನು ಕೇಳಿ ಪರಿಹಾರ ಮಾಡಿಕೊಡುತ್ತಾರೆ, ಒಮ್ಮೆ ಆದರು ಸಹ ಫೋನ್ ಮಾಡಿರಿ ನಿರುದ್ಯೋಗ ಸಮಸ್ಯೆಗೆ ಹಾಗೂ ಪ್ರೀತಿ ಪ್ರೇಮದ ವೈಫಲ್ಯ ಹಾಗೂ ಗಂಡ ಹೆಂಡತಿ ಜಗಳ ಅಥವ ನೀವು ಇಷ್ಟ ಪಡುವ ವ್ಯಕ್ತಿ ನಿಮ್ಮ ಮಾತುಗಳು ಕೇಳಲು ಇನ್ನು ಅನೇಕ ಗುಪ್ತ ಸಮಸ್ಯೆಗೆ ಶಾಶ್ವತ ಪರಿಹಾರ ಮಾಡುತ್ತಾರೆ, ಒಮ್ಮೆ ಫೋನ್ ಮಾಡಿ ನಿಮಗೆ ಶತ್ರುಗಳಿಂದ ತೊಂದ್ರೆ ಆಗಿದ್ರೆ ಅಥವಾ ವ್ಯವಹಾರದಲ್ಲಿ ಏಳಿಗೆ ಕಾಣುತ್ತಾ ಇಲ್ಲ ಅಂದರೆ ಫೋನ್ ಮಾಡಿ ಪ್ರಶ್ನೆಗೆಳು ಕೇಳಿ ಅದಕ್ಕೂ ಪರಿಹಾರ ನೀಡುತ್ತೇವೆ ಕರೆ ಮಾಡಿ ವಿಶೇಷ ರೀತಿಯ ಆಂಜನೇಯ ಸ್ವಾಮಿ ಬಲಿಷ್ಠ ಯಂತ್ರ ಕೂಡ ದೊರೆಯುವುದು ಪಡೆಯಲು ತಕ್ಷಣ ಕರೆ ಮಾಡಿ 9535839666. Provided by ಸೆಪ್ಟೆಂಬರ್ 16ರ ಸೋಮವಾರ ವಿವಿಧ ರಾಶಿಯವರಿಗೆ ಮಿಶ್ರಫಲಗಳಿವೆ. ಬದುಕಿನ ವಿವಿಧ ಕ್ಷೇತ್ರಗಳಲ್ಲಿ…
ಬಿಗ್ ಬಾಸ್ ಕನ್ನಡ–11 (BIGG BOSS KANNADA-11) ಆರಂಭಕ್ಕೆ ದಿನಗಣನೆ ಶುರುವಾಗಿದೆ. ದಿನಕಳೆದಂತೆ ಒಂದೊಂದೇ ಅಪ್ಡೇಟ್ ಹೊರಬೀಳುತ್ತಿದೆ. ಇದುವರೆಗೆ ಸುದೀಪ್ ಕಾರ್ಯಕ್ರಮ ನಡೆಸಿಕೊಡುತ್ತಾರಾ ಇಲ್ವೋ ಎನ್ನುವುದರ ಬಗ್ಗೆ ಯಾವ ಮಾಹಿತಿಯೂ ಹೊರಬಿದ್ದಿರಲಿಲ್ಲ. ಆರಂಭದಲ್ಲಿ ಬಿಗ್ ಬಾಸ್ ಕನ್ನಡ -11ರ ಲೋಗೋ ರಿವೀಲ್ ವೇಳೆ ಕಿಚ್ಚ ಸುದೀಪ್ ಅವರ ಹೆಸರನ್ನು ಹ್ಯಾಷ್ ಟ್ಯಾಗ್ನಲ್ಲಿ ಬಳಸಲಾಗಿತ್ತು. ಆ ಬಳಿಕ ಅದನ್ನು ತೆಗೆಯಲಾಗಿತ್ತು. ಇದರಿಂದಾಗಿ ಕಿಚ್ಚ ಅವರು ಬಿಗ್ ಬಾಸ್ ನಡೆಸಿಕೊಡುವುದು ಅನುಮಾನವೆನ್ನುವ ಮಾತು ಮತ್ತೊಮ್ಮೆ ಕೇಳಿಬಂದಿತ್ತು. ಇತ್ತೀಚೆಗಷ್ಟೇ ಕಲರ್ಸ್ ಕನ್ನಡ ಕುತೂಹಲ ಹುಟ್ಟಿಸುವ ಪ್ರೋಮೊವೊಂದನ್ನು ರಿಲೀಸ್ ಮಾಡಿತ್ತು. ವಿಡಿಯೋ ಕೊನೆಯಲ್ಲಿ ಆಯಂಕರ್ ಕೂಡ ಹೊಸಬರಾ..? ಎನ್ನುವ ಪ್ರಶ್ನೆಯನ್ನು ಹಾಗೆಯೇ ಬಿಡಲಾಗಿತ್ತು. ರಾಜನಂತೆ ಸುದೀಪ್ ಸೈನದ ಮಧ್ಯ ಬಂದು 10 ವರ್ಷದಿಂದ ಒಂದು ಲೆಕ್ಕ, ಈಗಿನಿಂದ ಬೇರೇನೇ ಲೆಕ್ಕ ಇದು ಹೊಸ ಅಧ್ಯಾಯವೆಂದು ಸುದೀಪ್ ಹೇಳಿದ್ದಾರೆ. ಸೆ. 29 ರಿಂದ ಶೋ ಆರಂಭಗೊಳ್ಳಲಿದೆ ಎಂದು ವಿಡಿಯೋದಲ್ಲಿ ತೋರಿಸಲಾಗಿದೆ. ಆ ಮೂಲಕ ಸುದೀಪ್ ಅವರೇ ಶೋ ನಡೆಸಿಕೊಡುವುದು…
ತುಮಕೂರು: ಗಣೇಶನ ವಿಸರ್ಜನೆಗೆ ಹೋಗಿದ್ದ ಮೂವರು ನೀರಿನಲ್ಲಿ ಮುಳುಗಿ ಮೃತಪಟ್ಟಿರುವ ಘಟನೆ ಜಿಲ್ಲೆಯ ತುಮಕೂರು ಜಿಲ್ಲೆ ತುರುವೇಕೆರೆ ತಾಲ್ಲೂಕಿನ ಮಾರಸಂದ್ರ ಗ್ರಾಮದಲ್ಲಿ ನಡೆದಿದೆ. ಮಾರಸಂದ್ರ ಸಮೀಪ ರಂಗನಹಟ್ಟಿ ಕೆರೆಯಲ್ಲಿ ಘಟನೆ ನಡೆದಿದ್ದು ಒಂದೇ ಕುಟುಂಬದ ಮೂವರು ಸಾವನ್ನಪ್ಪಿದ್ದಾರೆ. ಇದ್ರಲ್ಲಿ ಅಪ್ಪ ಮಕ್ಕಳು ಜಲಸಮಾಧಿಯಾಗಿದ್ದಾರೆ. ಮೃತಪಟ್ಟವರನ್ನು ರೇವಣ್ಣ (50) ಪುತ್ರ ಶರತ್ (20), ದಯಾನಂದ (28) ಎಂದು ಗುರುತಿಸಲಾಗಿದೆ. ಮೃತ ದಯಾನಂದ್ ಗೆ ಇತ್ತೀಚೆಗೆ ಮದುವೆ ಆಗಿತ್ತು. ಸ್ಥಳಕ್ಕೆ ಅಗ್ನಿಶಾಮಕ ದಳದ ಸಿಬ್ಬಂದಿ ಹಾಗೂ ದಂಡಿನ ಶಿವರ ಪೊಲೀಸರು ಭೇಟಿ ನೀಡಿದ್ದು ಮೃತದೇಹಗಳಿಗಾಗಿ ಶೋಧಕಾರ್ಯ ಮುಂದುವರೆಸಿದ್ದಾರೆ. ಈ ಸಂಬಂಧ ದಂಡಿನಶಿವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q
ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡುತ್ತೇನೆ ಎಂದು ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಮಹತ್ವದ ಘೋಷಣೆ ಮಾಡಿದ್ದಾರೆ. ಇನ್ನೆರಡು ದಿನಗಳಲ್ಲಿ ನಾನು ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡುತ್ತೇನೆ. ಜನರ ಬಳಿ ಹೋಗಿ ಮತ್ತೆ ಜನಾಶೀರ್ವಾದ ಪಡೆದು ಅಧಿಕಾರಕ್ಕೆ ಬರುತ್ತೇನೆ. ಕೇಜ್ರಿವಾಲ್ ಪ್ರಾಮಾಣಿಕವಾಗಿದ್ದರೆ ಮತ್ತೆ ಆಪ್ ಗೆ ಮತ ಹಾಕಿ ಎಂದು ಕರೆ ನೀಡಿದ್ದಾರೆ. ದೆಹಲಿ ಅಬಕಾರಿ ನೀತಿ ಹಗರಣ ಆರೋಪ ಪ್ರಕರಣದಲ್ಲಿ ಇಡಿ, ಸಿಬಿಐ ಬಂಧನದ ಬಳಿಕ ಜಾಮೀನಿನ ಮೇಲೆ ಹೊರಬಂದಿರುವ ಅರವಿಂದ್ ಕೇಜ್ರಿವಾಲ್, ದೆಹಲಿಯ ಆಪ್ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿದ್ದು, ಈ ವೇಳೆ ತಾನು ಸಿಎಂ ಸ್ಥಾನಕ್ಕೆ ರಾಜೀನಾಮೆ ಕೊಡುತ್ತೇನೆ ಎಂದು ತಿಳಿಸಿದ್ದಾರೆ. ನವೆಂಬರ್ ನಲ್ಲಿ ದೆಹಲಿ ವಿಧಾನಸಭೆ ಚುನಾವಣೆಗೆ ಒತ್ತಾಯಿಸಲಾಗುತ್ತಿದೆ. ಆರೋಪಗಳನ್ನು ಹೊತ್ತು ಸಿಎಂ ಸ್ಥಾನದಲ್ಲಿ ಮುಂದುವರೆಯಲ್ಲ. ನಾನು ಪ್ರಾಮಾಣಿಕವಾಗಿದ್ದರೆ ಮಾತ್ರ ನನಗೆ ಆಶೀರ್ವಾದ ಮಾಡಿ ಮತ್ತೆ ಆಯ್ಕೆ ಮಾಡಿ ಎಂದು ಹೇಳಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು…
ಮಹಿಳೆಯರು ತಮ್ಮ ಕೈ ಮತ್ತು ಪಾದದ ಉಗುರುಗಳಿಗೆ ನೈಲ್ ಪಾಲಿಶ್ ಹಚ್ಚಲು ಇಷ್ಟಪಡುತ್ತಾರೆ. ವಿಶೇಷ ಸಂದರ್ಭ ಇದ್ದಾಗ ನೈಲ್ ಪಾಲಿಶ್ ಬಳಸುತ್ತಾರೆ. ಕೆಲವು ಹುಡುಗಿಯರಿಗೆ ಪ್ರತಿದಿನ ಉಗುರು ಬಣ್ಣವನ್ನು ಬದಲಾಯಿಸುವ ಕ್ರೇಜ್ ಇರುತ್ತದೆ. ನೈಲ್ ಪೇಂಟ್ ಹಚ್ಚುವುದರಿಂದ ಕ್ಯಾನ್ಸರ್ ಕೂಡ ಬರಬಹುದು ಎನ್ನುತ್ತಾರೆ ತಜ್ಞರು. ನೈಲ್ ಪಾಲಿಶ್ ಬಳಸುವುದನ್ನು ನಿಲ್ಲಿಸಲು ಯಾವುದೇ ತಜ್ಞರು ಹೇಳುತ್ತಿಲ್ಲವಾದರೂ, ಕೆಲವು ವರದಿಗಳಿವೆ ಮತ್ತು ನೈಲ್ ಪಾಲಿಶ್ ಕ್ಯಾನ್ಸರ್ ಕಾರಕ ಎಂದು ತಜ್ಞರು ತಿಳಿದುಕೊಂಡಿದ್ದಾರೆ. ಉಗುರು ಬಣ್ಣವನ್ನು ತಯಾರಿಸಲು ಟೊಲ್ಯೂನ್, ಫಾರ್ಮಾಲ್ಡಿಹೈಡ್, ಡಿಪ್ರೊಪಿಲ್ ಮುಂತಾದ ವಸ್ತುಗಳನ್ನು ಸೇರಿಸಲಾಗುತ್ತದೆ. ನೈಲ್ ಪಾಲಿಶ್ ತಯಾರಿಕೆಯಲ್ಲಿ ಅನೇಕ ರಾಸಾಯನಿಕಗಳನ್ನು ಬಳಸಲಾಗುತ್ತದೆ ಇವು ಕ್ಯಾನ್ಸರ್ ಗೆ ಕಾರಣವಾಗುತ್ತವೆ. ತಜ್ಞರ ಪ್ರಕಾರ, ಈ ಉಗುರು ಬಣ್ಣಗಳನ್ನು ಬಳಸುವುದು ಅಪಾಯಕಾರಿ. ನೈಲ್ ಪಾಲಿಶ್ ಅನ್ನು ಬಳಸುವಾಗ, ತಜ್ಞರು ಅದನ್ನು ಎಚ್ಚರಿಕೆಯಿಂದ ಬಳಸಲು ಸಲಹೆ ನೀಡುತ್ತಾರೆ. ಉಗುರು ಬಣ್ಣವು ವಿಷಕಾರಿ ಅಂಶಗಳನ್ನು ಒಳಗೊಂಡಿದೆ ಎಂದು ಅನೇಕ ವೈದ್ಯರು ಗುರುತಿಸುತ್ತಾರೆ. ಉಗುರು ಬಣ್ಣವು ಪ್ರಕಾಶಮಾನವಾಗಿರುತ್ತದೆ, ಅವುಗಳಲ್ಲಿ ಹುದುಗಿರುವ ಹೊಳೆಯುವ…
ನ್ಯಾಷನಲ್ ಪೇಮೆಂಟ್ಸ್ ಕಾರ್ಪೊರೇಷನ್ ಆಫ್ ಇಂಡಿಯಾ (National Payments Corporation of India -NPCI) ಯುನಿಫೈಡ್ ಪೇಮೆಂಟ್ಸ್ ಇಂಟರ್ಫೇಸ್ (Unified Payments Interface -UPI) ಬಳಸಿ ತೆರಿಗೆ ಪಾವತಿಗೆ ವಹಿವಾಟು ಮಿತಿಯನ್ನು ಹೆಚ್ಚಿಸಿದೆ. ಇದು ಲಕ್ಷಾಂತರ ಭಾರತೀಯ ತೆರಿಗೆದಾರರಿಗೆ ಪ್ರಯೋಜನವನ್ನು ನೀಡುತ್ತದೆ ಏಕೆಂದರೆ ಅವರು 5 ಲಕ್ಷ ರೂ.ಗಳವರೆಗೆ ತೆರಿಗೆ ಪಾವತಿಸಲು ಯುಪಿಐ ಬಳಸಬಹುದು. ಆಗಸ್ಟ್ 24 ರ ಎನ್ಪಿಸಿಐನ ಸುತ್ತೋಲೆಯ ಪ್ರಕಾರ, ಯುಪಿಐ ಆದ್ಯತೆಯ ಪಾವತಿ ವಿಧಾನವಾಗಿ ಹೊರಹೊಮ್ಮುತ್ತಿರುವುದರಿಂದ, ನಿರ್ದಿಷ್ಟ ವರ್ಗಗಳಿಗೆ ಯುಪಿಐನಲ್ಲಿ ಪ್ರತಿ ವಹಿವಾಟಿನ ಮಿತಿಯನ್ನು ಹೆಚ್ಚಿಸುವ ಅವಶ್ಯಕತೆಯಿದೆ… ಮೇಲಿನವುಗಳನ್ನು ಗಮನದಲ್ಲಿಟ್ಟುಕೊಂಡು, ತೆರಿಗೆ ಪಾವತಿಗಳಿಗೆ ಹೊಂದಿಕೆಯಾಗುವ ವಿಭಾಗಗಳ ಅಡಿಯಲ್ಲಿ ಘಟಕಗಳಿಗೆ ಯುಪಿಐನಲ್ಲಿ ಪ್ರತಿ ವಹಿವಾಟು ಮೌಲ್ಯ ಮಿತಿಯನ್ನು ಈಗ 5 ಲಕ್ಷ ರೂ.ಗೆ ಹೆಚ್ಚಿಸಲಾಗಿದೆ. ಆಗಸ್ಟ್ 8, 2024 ರಂದು, ಆರ್ಬಿಐ ಯುಪಿಐ ಮೂಲಕ ತೆರಿಗೆ ಪಾವತಿಯ ಮಿತಿಯನ್ನು ಪ್ರತಿ ವಹಿವಾಟಿಗೆ 1 ಲಕ್ಷ ರೂ.ಗಳಿಂದ 5 ಲಕ್ಷ ರೂ.ಗೆ ಹೆಚ್ಚಿಸುವುದಾಗಿ ಘೋಷಿಸಿತು. ಸೋಮವಾರದಿಂದ (ಸೆಪ್ಟೆಂಬರ್ 16) ನವೀಕರಿಸಿದ…