Subscribe to Updates
Get the latest creative news from FooBar about art, design and business.
- ಸಾದರ ಸಮುದಾಯ ಭವನದಲ್ಲಿ ಸಪ್ತಗಿರಿ ಆಸ್ಪತ್ರೆ ವತಿಯಿಂದ ಬೃಹತ್ ಆರೋಗ್ಯ ತಪಾಸಣೆ ಮತ್ತು ಶಸ್ತ್ರ ಚಿಕಿತ್ಸಾ ಶಿಬಿರ
- ಖಾಸಗಿ ಶಾಲೆಗಳ ಮಾದರಿಯಲ್ಲೇ, ಸರ್ಕಾರಿ ಶಾಲೆಗಳ ರೂಪಾಂತರ: ಡಿ.ಕೆ.ಶಿವಕುಮಾರ್
- ತುಮಕೂರು ವಿವಿ 19ನೇ ಘಟಿಕೋತ್ಸವ: 90 ವಿದ್ಯಾರ್ಥಿಗಳಿಗೆ 117 ಚಿನ್ನದ ಪದಕ
- ಶಾಲೆಗಳ ಪುನರಾರಂಭ: ದಾಖಲಾತಿ ಆಂದೋಲನಕ್ಕೆ ಡಿ.ಸಿ. ಚಾಲನೆ
- ಸಚಿವ ಸ್ಥಾನದ ಆಸೆ ನನಗೂ ಇದೆ ಕೊಟ್ಟರೆ ಪ್ರಾಮಾಣಿಕವಾಗಿ ಕೆಲಸ ನಿರ್ವಹಿಸುವೆ: ಹೆಚ್.ವಿ.ವೆಂಕಟೇಶ್
- ನವಿಲೆ ಭಾಗಕ್ಕೆ ಹೇಮಾವತಿ ನೀರನ್ನು ಹರಿಸಲಾಗುವುದು ರೈತರು ಆತಂಕಪಡುವ ಅಗತ್ಯವಿಲ್ಲ: ಶಾಸಕ ಸಿ.ಬಿ.ಸುರೇಶ್ ಬಾಬು
- ‘ಗರ್ಭಿಣಿನೂ ಇಲ್ಲ, ಮಹಿಳೆಯೂ ಇಲ್ಲ… ಕಾರಿನಲ್ಲಿ ಒಬ್ಬರೇ ಇದ್ದಿದ್ದು!’: ಝೀರೋ ಟ್ರಾಫಿಕ್ ಪ್ರತಿಭಟನೆಯ ಅಸಲೀಯತ್ತು ಬಿಚ್ಚಿಟ್ಟ ಬೆಂಗಳೂರು ಪೊಲೀಸರು
- ಡಿ.ಕೆ.ಶಿವಕುಮಾರ್ ಪ್ರಮಾಣ ವಚನ ಸ್ವೀಕಾರ: ಜೂನ್ 3 ರಂದು ವಿಧಾನಸೌಧ ಸುತ್ತಮುತ್ತಲಿನ ಕಚೇರಿಗಳಿಗೆ ಅರ್ಧ ದಿನ ರಜೆ ಘೋಷಣೆ
Author: admin
ಭಾನುವಾರ ಪಾವಗಡ ಪಟ್ಟಣದಲ್ಲಿ ಅಂತರಾಷ್ಟ್ರೀಯ ದಿನಾಚರಣೆಯ ಹಿನ್ನೆಲೆಯಲ್ಲಿ ತಾಲೂಕು ಆಡಳಿತ ತಾಲೂಕು ಪಂಚಾಯಿತಿ ಶಿಕ್ಷಣ ಇಲಾಖೆ ಸೇರಿದಂತೆ ವಿವಿಧ ಇಲಾಖೆಗಳು ಹಾಗೂ ಸಂಘ ಸಂಸ್ಥೆಗಳ ಸಹಯೋಗದೊಂದಿಗೆ ಒಂದು ಕಿಲೋಮೀಟರ್ ಉದ್ದದ ಮಾನವ ಸರಪಳಿಯನ್ನು ನಿರ್ಮಾಣ ಮಾಡಲಾಗಿದೆ. ಪಾವಗಡ ಪಟ್ಟಣದ ಶನಿ ಮಹಾತ್ಮ ವೃತ್ತದಲ್ಲಿ ಮಾನವ ಸರ್ಪಡೆಯಲ್ಲಿ ಭಾಗವಹಿಸಿದ ಎಲ್ಲರಿಗೂ ಸಂವಿಧಾನದ ಪೀಠಿಕೆಯನ್ನು ಬೋಧಿಸಲಾಯಿತು. ಪ್ರಜಾಪ್ರಭುತ್ವ ದಿನಾಚರಣೆಯ ಹಿನ್ನೆಲೆಯಲ್ಲಿ ಕರ್ನಾಟಕ ಒಂದು ಐತಿಹಾಸಿಕ ದಿನಕ್ಕೆ ಸಾಕ್ಷಿಯಾಗುತ್ತಿದ್ದು, ಅದರಂತೆ ಪಾವಗಡ ತಾಲೂಕಿನಲ್ಲಿ ವಿದ್ಯಾರ್ಥಿಗಳನ್ನು ಒಳಗೊಂಡಂತೆ ನೂರಾರು ಸಂಖ್ಯೆಯಲ್ಲಿ ನಾಗರಿಕರು ಶಿಕ್ಷಕರು ಸರ್ಕಾರಿ ಅಧಿಕಾರಿಗಳು ಮಾನವ ಸೇರ್ಪಡೆ ನಿರ್ಮಾಣದಲ್ಲಿ ಪಾಲ್ಗೊಂಡು ಯಶಸ್ವಿಯಾಗಿ ನಡೆಸಿದ್ದು ಎಲ್ಲರಿಗೂ ಕೃತಜ್ಞತೆಗಳನ್ನು ತಿಳಿಸಿದರು ಈ ಸಂದರ್ಭದಲ್ಲಿ ಹಲವಾರು ಜನ ಹಾಜರಾಗಿದ್ದರು. ವರದಿ: ನಂದೀಶ್ ನಾಯ್ಕ, ಪಾವಗಡ ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q
ಪಾವಗಡ: ಕ್ಷುಲ್ಲಕ ವಿಚಾರವಾಗಿ ನಾಲ್ಕು ಜನರ ನಡುವೆ ಗಲಾಟೆ ಶುರುವಾಗಿ ಚಾಕುವಿನಿಂದ ಕುತ್ತಿಗೆ ಕೊಯ್ಯುವ ಮಟ್ಟಕ್ಕೆ ಬೆಳೆದ ಪ್ರಸಂಗ ಗುರುವಾರ ರಾತ್ರಿ 11ಯ ಸಂದರ್ಭದಲ್ಲಿ ಪಾವಗಡ ಪಟ್ಟಣದ ಆದರ್ಶ ನಗರದ ಮರಿಗಮ್ಮ ದೇವಿ ದೇವಸ್ಥಾನದ ಸಮೀಪದಲ್ಲಿ ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ ಘಟನೆಯಲ್ಲಿ ಯುವಕರಾದ ಭಾರ್ಗವ್ ನರಸಿಂಹ ಹರಿಕುಮಾರ್ ನರಸಿಂಹಮೂರ್ತಿ ನಡುವೆ ಮಾತಿನ ಚಕಮಕಿ ನಡೆದು ಏಕಾಏಕಿ ಭಾರ್ಗವ್ ಮೇಲೆ ಉಳಿದ ಮೂರು ಜನ ಚಾಕುವಿನಿಂದ ಕುತ್ತಿಗೆಯ ಭಾಗಕ್ಕೆ ಎಳೆದಿದ್ದಾರೆ, ಎಚ್ಚೆತ್ತುಕೊಂಡ ಸ್ಥಳೀಯರು ಜಗಳವನ್ನು ಬಿಡಿಸಿ ಭಾರ್ಗವ್ ನನ್ನು ಸಾರ್ವಜನಿಕ ಆಸ್ಪತ್ರೆಗೆ ಕಳಿಸಲಾಗಿದ್ದು, ಪ್ರಥಮ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗಾಗಿ ತುಮಕೂರು ಜಿಲ್ಲಾ ಆಸ್ಪತ್ರೆಗೆ ರವಾನಿಸಲಾಗಿದ್ದು ಹೊಲಿಗೆಗಳನ್ನು ಹಾಕಿಸಿಕೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ ಉಳಿದಂತೆ ಆರೋಪಿಗಳನ್ನು ಕೆಲವೇ ಕ್ಷಣಗಳಲ್ಲಿ ಪಾವಗಡ ಪೊಲೀಸ್ ಠಾಣೆಯ ಸಿಪಿಐ ಸುರೇಶ ನೇತೃತ್ವದ ತಂಡ ಬಂಧಿಸಿದ್ದು ಶುಕ್ರವಾರ ಸಂಜೆ 4ಯ ಸಂದರ್ಭದಲ್ಲಿ ನ್ಯಾಯಾಲಯಕ್ಕೆ ಹಾಜರುಪಡಿಸಿ ಮಧುಗಿರಿ ಜೈಲಿಗೆ ಕಳಿಸಿದ್ದಾರೆ. ವರದಿ: ನಂದೀಶ್ ನಾಯ್ಕ, ಪಾವಗಡ ನಮ್ಮತುಮಕೂರಿನ…
ಮೊದಲನೆಯದಾಗಿ, ಮೇಷ ರಾಶಿ: ಮಕ್ಕಳಿಂದ ನಷ್ಟ, ಅಧಿಕ ಖರ್ಚು, ಗೌರವಕ್ಕೆ ಧಕ್ಕೆ, ದೂರ ಪ್ರಯಾಣದಲ್ಲಿ ಅನುಕೂಲ ಶ್ರೀ ಕ್ಷೇತ್ರ ಕಟೀಲು ದುರ್ಗಾಪರಮೇಶ್ವರೀ ಜ್ಯೋತಿಷ್ಯ ಪೀಠಂ ದೈವಜ್ಞ ಪಂಡಿತ್ ಕೃಷ್ಣ ಭಟ್ ಪ್ರಧಾನ ತಾಂತ್ರಿಕ್ ಹಾಗೂ ಮಾಂತ್ರಿಕರು 9535156490 ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆ ಉತ್ತರಿಸಬಹುದು ಏಷ್ಟೇ ಪೂಜೆ ಪ್ರಯತ್ನ ಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..?ನಿಮ್ಮ ಯಾವುದೇಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ 2 ದಿನಗಳಲ್ಲಿ ಪರಿಹಾರ ಶತಸಿದ್ಧ ಧನವಶ, ಜನವಶ, ಶತ್ರುನಾಶ, ಸ್ತ್ರೀ- ಪುರುಷ ವಶೀಕರಣ, ದಿಗ್ಭಂಧನ, ಸ್ತಂಭನ, ವುಚ್ಛಾಟನೆಯಂತಹ ಸಮಸ್ಯೆಗಳಿಗೆ ವಿಶೇಷ ಪರಿಹಾರ ತಿಳಿಸುತ್ತಾರೆ 9535156490 Provided by ವೃಷಭ: ಸ್ಥಿರಾಸ್ತಿ ಮತ್ತು ವಾಹನದಿಂದ ಲಾಭ, ತಾಯಿಯಿಂದ ಸಹಕಾರ, ಪತ್ರ ವ್ಯವಹಾರಗಳಲ್ಲಿ ಯಶಸ್ಸು, ವಿದ್ಯಾಭ್ಯಾಸದಲ್ಲಿ ಪ್ರಗತಿ ಮಿಥುನ: ಉ ದ್ಯೋಗ ಬದಲಾವಣೆಯಿಂದ ಅನುಕೂಲ, ಅಧಿಕಾರಿಗಳಿಂದ ಉತ್ತಮ ಸ್ಪಂದನೆ, ಧೈರ್ಯದಿಂದ ಕಾರ್ಯ…
ದಸರಾ, ದೀಪಾವಳಿ ಸೇರಿ ಸರಣಿ ಹಬ್ಬಗಳ ಸಂಭ್ರಮದಲ್ಲಿದ್ದ ಜನತೆಗೆ ಅಡುಗೆ ಎಣ್ಣೆ ದರವು (Cooking oil Price) ದಿಢೀರ್ ಶಾಕ್ ನೀಡಿದೆ. ಲೀಟರ್ ಎಣ್ಣೆಗೆ 20ರಿಂದ 25 ರೂ. ಗೆ ಏರಿಕೆಯಾಗಿದ್ದರಿಂದ ಗ್ರಾಹಕರಿಗೆ ಬರೆ ಎಳೆದಂತಾಗಿದೆ. ಕೇವಲ ಒಂದೇ ದಿನದ ಅವಧಿಯಲ್ಲಿ ಪಾಮ್ ಆಯಿಲ್, ಸೋಯಾಬಿನ್ ಎಣ್ಣೆ ಹಾಗೂ ಸೂರ್ಯಕಾಂತಿ ರಿಫೈಂಡ್ ಆಯಿಲ್ ದರ ಹೆಚ್ಚಳವಾಗಿದ್ದರಿಂದ ಸಾರ್ವಜನಿಕರು ಪರದಾಡುವಂತಾಗಿದೆ. ಅಡುಗೆ ಎಣ್ಣೆಯು ಈಗಾಗಲೇ ಜಿಎಸ್ಟಿ ವ್ಯಾಪ್ತಿಗೆ ಸೇರಿದೆ. ಆದರೆ, ಅಡುಗೆ ಎಣ್ಣೆಗೆ ಹೆಚ್ಚುವರಿಯಾಗಿ ಶೇ. 20ರಷ್ಟು ಇಂಪೋರ್ಟ್ ಡ್ಯೂಟಿ ಟ್ಯಾಕ್ಸ್ ಹೆಚ್ಚಳ ಮಾಡಿದ್ದರಿಂದ ಎಣ್ಣೆ ದರ ಗಗನಕ್ಕೇರಿದೆ ಎನ್ನುತ್ತಿದ್ದಾರೆ ಅಡುಗೆ ಎಣ್ಣೆ ವ್ಯಾಪಾರಿಗಳು. ಲೀಟರ್ ಅಡುಗೆ ಎಣ್ಣೆಗೆ 20ರಿಂದ 25 ರೂ. ದರ ಹೆಚ್ಚಿಸಿರುವುದು ಗ್ರಾಹಕರ ಮೇಲೆ ಬರೆ ಎಳೆದಂತಾಗಿದೆ. ಬಡವರು, ಕೂಲಿಕಾರ್ಮಿಕರು, ಮಧ್ಯಮ ವರ್ಗದವರು ಪಾಮ್ ಆಯಿಲ್ ಹೆಚ್ಚಾಗಿ ಬಳಸುತ್ತಾರೆ. ಪಾಮ್ ಆಯಿಲ್ ದರದಲ್ಲಿ ಕೂಡ ಹೆಚ್ಚಳವಾಗಿದ್ದರಿಂದ ತೊಂದರೆ ಅನುಭವಿಸುವಂತಾಗಿದೆ. ಅಡುಗೆ ಎಣ್ಣೆ ದರ ಇಳಿಕೆಯಾಗದಿದ್ದರೆ ಮುಂಬರುವ ದಸರಾ ಹಾಗೂ…
ಕೇಂದ್ರ ಸರ್ಕಾರ ಕೇಂದ್ರಾಡಳಿತ ಪ್ರದೇಶವಾದ ಅಂಡಮಾನ್ ಮತ್ತು ನಿಕೋಬಾರ್ ದ್ವೀಪದ ರಾಜಧಾನಿ ಪೋರ್ಟ್ ಬ್ಲೇರ್ ಹೆಸರನ್ನು ಬದಲಿಸಿದೆ. ಪೋರ್ಟ್ ಬ್ಲೇರ್ ಅನ್ನು ಶ್ರೀ ವಿಜಯ ಪುರಂ ಎಂದು ಮರುನಾಮಕರಣ ಮಾಡಿದೆ. ಆ ಮೂಲಕ ವಸಾಹತುಶಾಹಿ ಮುದ್ರೆಗಳಿಂದ ರಾಷ್ಟ್ರವನ್ನು ಮುಕ್ತಗೊಳಿಸಿದೆ ಎಂದು ಹೇಳಿಕೊಂಡಿದೆ. ಪೋರ್ಟ್ ಬ್ಲೇರ್ ಅನ್ನು “ಶ್ರೀ ವಿಜಯ ಪುರಂ” ಎಂದು ಮರುನಾಮಕರಣ ಮಾಡಲು ಕೇಂದ್ರ ಸರ್ಕಾರ ನಿರ್ಧರಿಸಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಶುಕ್ರವಾರ ಘೋಷಿಸಿದರು. “ದೇಶವನ್ನು ವಸಾಹತುಶಾಹಿ ಮುದ್ರೆಗಳಿಂದ ಮುಕ್ತಗೊಳಿಸಲು” ಈ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ ಎಂದು ಹೇಳಿದ್ದಾರೆ. “ವಸಾಹತುಶಾಹಿ ಮುದ್ರೆಗಳಿಂದ ದೇಶವನ್ನು ಮುಕ್ತಗೊಳಿಸಲು ಪ್ರಧಾನಿ ನರೇಂದ್ರ ಮೋದಿ ಜಿಯವರ ದೃಷ್ಟಿಕೋನದಿಂದ ಪ್ರೇರಿತರಾಗಿ, ಇಂದು ನಾವು ಪೋರ್ಟ್ ಬ್ಲೇರ್ ಅನ್ನು “ಶ್ರೀ ವಿಜಯ ಪುರಂ” ಎಂದು ಮರುನಾಮಕರಣ ಮಾಡಲು ನಿರ್ಧರಿಸಿದ್ದೇವೆ” ಎಂದು ಶಾ ಎಕ್ಸ್ ನಲ್ಲಿ ಪೋಸ್ಟ್ ಮಾಡಿದ್ದಾರೆ. ಹಿಂದಿನ ಹೆಸರಿಗೆ “ವಸಾಹತುಶಾಹಿ ಪರಂಪರೆ” ಇದೆ, ಆದರೆ ಹೊಸ ಹೆಸರು ಶ್ರೀ ವಿಜಯ ಪುರಂ, ಸ್ವಾತಂತ್ರ್ಯಕ್ಕಾಗಿ ನಮ್ಮ…
ಕೇಂದ್ರ ಮತ್ತು ರಾಜ್ಯ ಸರ್ಕಾರಗಳಿಗೆ ಮದ್ಯ ಮಾರಾಟವು ಪ್ರಮುಖ ಆದಾಯದ ಮೂಲವಾಗಿದೆ. ಆದರೆ ಯಾವ ಬ್ರ್ಯಾಂಡ್ ನ ಬಿಯರ್ ಹೆಚ್ಚು ಮಾರಾಟವಾಗುತ್ತದೆ ಎಂಬುದು ನಿಮಗೆ ತಿಳಿದಿದೆಯೇ? ಭಾರತದಲ್ಲಿ ಅತಿ ಹೆಚ್ಚು ಮಾರಾಟವಾಗುವ ಟಾಪ್ 5 ಬಿಯರ್ ಬ್ರ್ಯಾಂಡ್ ಗಳ ಪಟ್ಟಿ ಇಲ್ಲಿದೆ. ನಮ್ಮ ದೇಶದಲ್ಲಿ ಅತಿಹೆಚ್ಚು ಆಲ್ಕೋಹಾಲ್ ಪ್ರಮಾಣವಿಲ್ಲದ ಮದ್ಯ ಬಿಯರ್ ಪ್ರಿಯರ ಸಂಖ್ಯೆಯೂ ಸಾಕಷ್ಟಿದೆ. ಅದರಲ್ಲಿ ಬಡ್ ವೈಸರ್ (Budweiser) ದೇಶದಲ್ಲಿ ಅತಿಹೆಚ್ಚು (ಶೇ.2ರಷ್ಟು) ಮಾರಾಟವಾಗುವ ಬಿಯರ್ನಲ್ಲಿ 5ನೇ ಸ್ಥಾನವನ್ನು ಹೊಂದಿದೆ. ಇದೊಂದು ಉತ್ತಮ ಬ್ರ್ಯಾಂಡ್ ಎಂದು ಹಲವು ನಂಬಿದ್ದಾರೆ. ಯುನೈಟೆಡ್ ಬ್ರೂವರೀಸ್ ಗ್ರೂಪ್ ನ ಮತ್ತೊಂದು ಬಿಯರ್ ಬ್ರ್ಯಾಂಡ್ ಆಗಿರುವ ಕಲ್ಯಾಣಿ ಬ್ಲ್ಯಾಕ್ ಲೇಬಲ್ (Kalyani black Label) ಪಶ್ಚಿಮ ಬಂಗಾಳದಲ್ಲಿ ಅತಿ ಹೆಚ್ಚಿನದಾಗಿ ಮಾರಾಟ ಆಗುತ್ತದೆ. ಇದು ಪಶ್ಚಿಮ ಬಂಗಾಳದ ಜೊತೆಗೆ ಕೆಲವು ಪೂರ್ವ ರಾಜ್ಯಗಳಲ್ಲಿ ಈ ಬ್ರ್ಯಾಂಡ್ ಮಾರಾಟ ಆಗುತ್ತದೆ. ಕಲ್ಯಾಣಿ ಬ್ಲ್ಯಾಕ್ ಲೇಬಲ್ ಬಿಯರ್ ಮಾರಾಟದಲ್ಲಿ (ಶೇ. 2.7 ಪರ್ಸೆಂಟ್) 4ನೇ ಸ್ಥಾನವನ್ನು ಹೊಂದಿದೆ.…
ಭಾರತವು ಅಭಿವೃದ್ಧಿಶೀಲ ರಾಷ್ಟ್ರಗಳಲ್ಲಿ ಒಂದಾಗಿದೆ ಎಂದು ತಿಳಿದಿದೆ. ಕಳೆದ 70 ವರ್ಷಗಳಲ್ಲಿ, ನಮ್ಮ ರಾಷ್ಟ್ರೀಯ ಸಾಲವು 2021 ರ ವೇಳೆಗೆ ಶೇಕಡಾ 5.29 ಲಕ್ಷ ಹೆಚ್ಚಾಗಿದೆ. 1950–51ರಲ್ಲಿ ನಮ್ಮ ದೇಶದ ಸಾಲ 2565 ಕೋಟಿ ರೂಪಾಯಿಗಳಾಗಿದ್ದು, 2021ರ ವೇಳೆಗೆ ಆ ಸಾಲ 135 ಲಕ್ಷ ಕೋಟಿ ರೂಪಾಯಿಗಳಿಗೆ ಏರಲಿದೆ. 2023ರ ಇದೇ ವೇಳೆಗೆ ಈ ಸಾಲ 155 ಲಕ್ಷ ಕೋಟಿ ರೂಪಾಯಿ ಆಗಲಿದೆಯಂತೆ. ಕಳೆದ ಹತ್ತು ವರ್ಷಗಳಲ್ಲಿ ದೇಶದ ಸಾಲ ಭಾರೀ ಪ್ರಮಾಣದಲ್ಲಿ ಏರಿಕೆಯಾಗಿದೆ ಎಂದು ವರದಿಗಳು ಬಹಿರಂಗಪಡಿಸಿವೆ. ಸಾಲದ ವಿಚಾರದಲ್ಲಿ ಬಿಜೆಪಿ ವಿರುದ್ಧ ಕಾಂಗ್ರೆಸ್ ಕೂಡ ಹಲವು ಬಾರಿ ಗಂಭೀರ ಆರೋಪ ಮಾಡಿದ್ದು ಗೊತ್ತೇ ಇದೆ. ನಮ್ಮ ದೇಶದ ಸಾಲ ಈಗ ಕಡಿಮೆಯಾಗುವ ಲಕ್ಷಣ ಕಾಣುತ್ತಿಲ್ಲ. ಆದರೆ, ಹೆಚ್ಚಿದ ಸಾಲವನ್ನು ಜಿಡಿಪಿ ಆಧಾರದ ಮೇಲೆ ಕೇಂದ್ರ ಸರ್ಕಾರ ನೋಡಬೇಕು ಎಂದು ಬಹಿರಂಗಪಡಿಸಿರುವುದು ತಪ್ಪು. ವಿತ್ತೀಯ ಕೊರತೆಯನ್ನು ಅಳತೆಯಾಗಿ ತೆಗೆದುಕೊಳ್ಳುವ ಮೂಲಕ ಆರ್ಥಿಕತೆಯ ಸ್ಥಿತಿಯನ್ನು ಅಳೆಯಬಹುದು ಎಂದು ಅದು ಹೇಳುತ್ತದೆ. 2014…
ಮಂಡ್ಯ: ನಾಗಮಂಗಲ ಗಲಭೆಗೆ ಸಂಬಂಧಿಸಿದಂತೆ ಕಾನೂನಿನಲ್ಲಿ ನಷ್ಟ ಪರಿಹಾರ ನೀಡಲು ಅವಕಾಶವಿಲ್ಲ. ಆದರೂ, ಸಿಎಂ ಸಿದ್ದರಾಮಯ್ಯನವರನ್ನು ಒಪ್ಪಿಸಿದ್ದೇನೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ ಹೇಳಿದ್ದಾರೆ. ನಾಗಮಂಗಲದಲ್ಲಿ ಶನಿವಾರ ಶಾಂತಿಸಭೆ ನಡೆಸಲು ಬಂದ ಸಂದರ್ಭದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನಷ್ಟ ಪ್ರಮಾಣದ ವರದಿ ಬಂದ ನಂತರ ಸರ್ಕಾರದಿಂದ ಪರಿಹಾರ ಕೊಡಿಸುವ ಜತೆಗೆ ವೈಯಕ್ತಿಕವಾಗಿಯೂ ಪರಿಹಾರ ನೀಡುತ್ತೇನೆ ಎಂದು ತಿಳಿಸಿದರು. ಇನ್ನೂ ಕುಮಾರಸ್ವಾಮಿ ಪರಿಹಾರ ನೀಡುವ ವಿಚಾರಕ್ಕೆ ಸಂಬಂಧಿಸಿದಂತೆ ಇದೇ ವೇಳೆ ಪ್ರತಿಕ್ರಿಯಿಸಿದ ಅವರು, ಕುಮಾರಸ್ವಾಮಿ ಅವರು ಪರಿಹಾರ ಕೊಟ್ಟಿದ್ದು ತಪ್ಪಲ್ಲ ಎಂದರು. ಚನ್ನಪಟ್ಟಣದ ಉಪಚುನಾವಣೆಗಾಗಿ ಗಲಭೆ ಸೃಷ್ಟಿ ಎಂಬ ಎಚ್ ಡಿಕೆ ಹೇಳಿಕೆಗೆ ಪ್ರತಿಕ್ರಿಯಿಸಿ, ‘ಎರಡು ಬಾರಿ ಸಿಎಂ ಆಗಿದ್ದ ಕುಮಾರಸ್ವಾಮಿಗೆ ನಾನು ಉತ್ತರ ಕೊಡಬೇಕಾ? ನಾಗಮಂಗಲಕ್ಕೆ ಬಂದವರು ಜನರಿಗೆ ಏನು ಸಂದೇಶ ಕೊಟ್ಟಿದ್ದಾರೆ? ಸಿಎಂ ಇಳಿಸಲು ಕುತಂತ್ರ ಅನ್ನೋದು ಸರಿಯಲ್ಲ. ಎಚ್ಡಿಕೆ ಹೇಳಿಕೆಗೆ ಪ್ರತಿಕ್ರಿಯೆ ನೀಡದಿರುವುದೇ ಉತ್ತಮ’ ಎಂದರು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್…
ಬೆಂಗಳೂರು: ರಾಹುಲ್ ಗಾಂಧಿ ನಾಯಕರಲ್ಲ, ಅಪ್ರಬುದ್ಧ ವ್ಯಕ್ತಿ ಎಂದು ಎಂದು ವಿಧಾನಪರಿಷತ್ ನ ಪ್ರತಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ವಾಗ್ದಾಳಿ ನಡೆಸಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ರಾಹುಲ್, ಪಾಳು ಬಿದ್ದ ಮನೆಗೆ ಉಳಿದವನೇ ನಾಯಕ ಎಂಬಂತೆ ಅವರು ಮುಖಂಡರಾಗಿದ್ದಾರೆ. ನೆಹರೂ ಅವರು ತಾವು ಮೀಸಲಾತಿ ವಿರೋಧಿ ಎಂದಿದ್ದರು. ಇಂದಿರಾಗಾಂಧಿ, ರಾಜೀವ್ ಗಾಂಧಿಯವರೂ ಅದನ್ನೇ ಮುಂದುವರೆಸಿದ್ದರು. ಈಗ ರಾಹುಲ್ ಗಾಂಧಿಯವರು ಈ ಪರಂಪರೆಯನ್ನು ಮುಂದುವರೆಸಿದ್ದಾರೆ ಎಂದು ಟೀಕಿಸಿದರು. ರಾಹುಲ್ ಗಾಂಧಿಯವರು ಲೋಕಸಭೆಯ ವಿಪಕ್ಷ ನಾಯಕರಾಗಿದ್ದು, ಅವರನ್ನು ನಾನು ಗೌರವಿಸಲೇಬೇಕು. ಈ ಗೌರವ ಬೇರೆ; ಭಾರತ ದೇಶದಲ್ಲಿ ತಾವು ಅಧಿಕಾರಕ್ಕೆ ಬಂದಾಗ ಮೀಸಲಾತಿಯನ್ನು ರದ್ದು ಮಾಡುವ ಪ್ರಯತ್ನ ಮಾಡುತ್ತೇವೆ ಎಂದು ಅಮೆರಿಕದಲ್ಲಿ ಹೇಳಿಕೆ ನೀಡಿದ್ದಾರೆ ಎಂದು ಆಕ್ಷೇಪಿಸಿದರು. ಕಾಂಗ್ರೆಸ್ ಪಕ್ಷ ದಲಿತ ವಿರೋಧಿಯಾಗಿತ್ತು; ಮೀಸಲಾತಿಯ ವಿರೋಧಿಯಾಗಿತ್ತು. ಆದರೆ, ವೋಟ್ ಬ್ಯಾಂಕಿಗಾಗಿ ಅವರು ತಾವು ಮೀಸಲಾತಿ, ಸಂವಿಧಾನದ ಪರ ಎಂದಿದ್ದರು ಎಂದು ನುಡಿದರು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್…
ಬೆಂಗಳೂರು: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಮತ್ತು ವಿಪಕ್ಷ ನಾಯಕ ಆರ್.ಅಶೋಕ ಅವರಿಗೆ ತಮ್ಮದೇ ಗೂಂಡಾ ಪ್ರವೃತ್ತಿಯ ಶಾಸಕ ಮುನಿರತ್ನ ಎದುರು ನಿಂತು ಮಾತನಾಡುವ ಧೈರ್ಯ ಇದೆಯಾ? ಎಂದು ಸಿಎಂ ಸಿದ್ದರಾಮಯ್ಯ ವಿಪಕ್ಷ ನಾಯಕರಿಗೆ ಸವಾಲು ಹಾಕಿದ್ದಾರೆ. ಟ್ವೀಟ್ ನಲ್ಲಿ ಬಿಜೆಪಿ ನಾಯಕರನ್ನ ತರಾಟೆಗೆತ್ತಿಕೊಂಡ ಅವರು, ಬಾಯ್ತೆಗೆದರೆ ಸಂಸ್ಕಾರ, ಸಂಸ್ಕೃತಿಯ ಬಗ್ಗೆ ಭಾಷಣ ಬಿಗಿಯುವ ಬಿಜೆಪಿ ನಾಯಕರೇ, ಮೊದಲು ಗಬ್ಬೆದ್ದು ನಾರುತ್ತಿರುವ ನಿಮ್ಮ ಶಾಸಕ ಮುನಿರತ್ನ ಅವರ ಬಾಯಿಯನ್ನು ಶುದ್ಧ ಮಾಡಿ ನಂತರ ಊರಿಗೆ ಬುದ್ದಿ ಹೇಳಿ ಎಂದು ತರಾಟೆಗೆತ್ತಿಕೊಂಡಿದ್ದಾರೆ. ಬಿಜೆಪಿಯವರ ಹಿಂದೂ ನಾವೆಲ್ಲ ಒಂದು ಎಂಬ ಘೋಷವಾಕ್ಯ ಬರೀ ಚುನಾವಣಾ ಕಾಲಕ್ಕಷ್ಟೇ ಸೀಮಿತ. ಚುನಾವಣೆ ಮುಗಿದರೆ ಈ ನಾಡಿನ ದಲಿತರು, ಶೋಷಿತರನ್ನು ಅವರು ಹಿಂದೂವಾಗಿ, ತಮ್ಮಲ್ಲಿ ಒಬ್ಬನಾಗಿ ಕಾಣರು. ಈ ಸಮುದಾಯಗಳ ಬಗ್ಗೆ ಬಿಜೆಪಿ ನಾಯಕರ ಮನಸ್ಸಿನಲ್ಲಿ ತುಂಬಿರುವ ದ್ವೇಷ, ಅಸೂಯೆ, ಅಸಹನೆಗೆ ಮುನಿರತ್ನ ಬಾಯಿಂದ ಉದುರಿದ ಅಣಿಮುತ್ತುಗಳು ಸಾಕ್ಷಿ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ವೈರಲ್ ಆಗಿರುವ ಆಡಿಯೋದಲ್ಲಿ…