Subscribe to Updates
Get the latest creative news from FooBar about art, design and business.
- ‘ಗರ್ಭಿಣಿನೂ ಇಲ್ಲ, ಮಹಿಳೆಯೂ ಇಲ್ಲ… ಕಾರಿನಲ್ಲಿ ಒಬ್ಬರೇ ಇದ್ದಿದ್ದು!’: ಝೀರೋ ಟ್ರಾಫಿಕ್ ಪ್ರತಿಭಟನೆಯ ಅಸಲೀಯತ್ತು ಬಿಚ್ಚಿಟ್ಟ ಬೆಂಗಳೂರು ಪೊಲೀಸರು
- ಡಿ.ಕೆ.ಶಿವಕುಮಾರ್ ಪ್ರಮಾಣ ವಚನ ಸ್ವೀಕಾರ: ಜೂನ್ 3 ರಂದು ವಿಧಾನಸೌಧ ಸುತ್ತಮುತ್ತಲಿನ ಕಚೇರಿಗಳಿಗೆ ಅರ್ಧ ದಿನ ರಜೆ ಘೋಷಣೆ
- ಈಶ್ವರ ಖಂಡ್ರೆ ಅವರಿಗೆ ಉಪಮುಖ್ಯಮಂತ್ರಿ ಅಥವಾ ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಯುವ ಕಾಂಗ್ರೆಸ್ ಮುಖಂಡ ಒತ್ತಾಯ
- ಮಿಡಿಗೇಶಿ: ನಿಯಂತ್ರಣ ತಪ್ಪಿ ಹಳ್ಳಕ್ಕೆ ಬಿದ್ದ ಕಾರು; ಯುವಕ ಪ್ರಾಣಾಪಾಯದಿಂದ ಪಾರು!
- ಶಿಥಿಲಾವಸ್ಥೆಯ ಶಾಲಾ ಕಟ್ಟಡಗಳ ಮಾಹಿತಿಗೆ ಸೂಚನೆ
- ಸಾರಿಗೆ ಬಲಪಡಿಸಲು ಪುರುಷರು ಕಡ್ಡಾಯವಾಗಿ ಟಿಕೆಟ್ ಪಡೆದು ಪ್ರಯಾಣಿಸಿ: ಕೆ.ಎನ್.ರಾಜಣ್ಣ ಕರೆ
- ತಿಪಟೂರು ರೋಟರಿ ಕ್ಲಬ್ ನ ಪಬ್ಲಿಕ್ ಇಮೇಜ್ ಗೆ ರಾಜ್ಯಮಟ್ಟದ ಅತ್ಯುತ್ತಮ ಸೇವಾ ಪ್ರಶಸ್ತಿ
- ಬೆಂಗಳೂರು: ವಿಐಪಿ ಸಂಚಾರಕ್ಕೆ ಗರ್ಭಿಣಿ ಇದ್ದ ಕಾರು ತಡೆದಿದ್ದಕ್ಕೆ ರಸ್ತೆಯಲ್ಲೇ ಪತಿ ಪ್ರತಿಭಟನೆ; ತನಿಖೆಗೆ ಆದೇಶ!
Author: admin
ತುಮಕೂರು: ಜನ ಸ್ಪಂದನ, ಕುಂದು–ಕೊರತೆ ಸಭೆಗಳಲ್ಲಿ ಸಾರ್ವಜನಿಕರು ಸಲ್ಲಿಸುವ ಅರ್ಜಿಗಳನ್ನು ತಡ ಮಾಡದೆ ಶೀಘ್ರವಾಗಿ ವಿಲೇವಾರಿ ಮಾಡಬೇಕೆಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಅಧಿಕಾರಿಗಳಿಗೆ ಸೂಚನೆ ನೀಡಿದರು. ಶಿರಾ ತಾಲ್ಲೂಕು ತಹಶೀಲ್ದಾರ್ ಕಚೇರಿ ಸಭಾಂಗಣದಲ್ಲಿಂದು ನಡೆದ ಕುಂದು–ಕೊರತೆ ಸಭೆಯಲ್ಲಿ ಸಾರ್ವಜನಿಕರಿಂದ ಅಹವಾಲುಗಳನ್ನು ಸ್ವೀಕರಿಸಿದ ಅವರು, ಅಧಿಕಾರಿಗಳು ಸರ್ಕಾರಿ ಕೆಲಸಗಳನ್ನು ತಮ್ಮ ಮನೆಯ ಕೆಲಸಗಳಂತೆ ಜವಾಬ್ದಾರಿಯಿಂದ ನಿರ್ವಹಿಸಬೇಕು. ಸಾರ್ವಜನಿಕರೊಂದಿಗೆ ಅಧಿಕಾರಿಗಳು ಸಮನ್ವಯದಿಂದ ಕೆಲಸ ಮಾಡಿದಾಗ ಮಾತ್ರ ಸರ್ಕಾರಿ ಕಾರ್ಯಕ್ರಮಗಳು ಯಶಸ್ವಿಯಾಗಿ ಅನುಷ್ಠಾನಗೊಳ್ಳಲು ಸಾಧ್ಯ ಎಂದರು. ಉದ್ದರಾಮನಹಳ್ಳಿಯ ಮಂಜುನಾಥ್ ಅವರು ರಸ್ತೆ ಒತ್ತುವರಿ ತೆರವುಗೊಳಿಸುವಂತೆ, ಬುಕ್ಕಾಪಟ್ಟಣ ಗ್ರಾಮದ ನಾಗರಾಜು ಅವರು ಪಹಣಿ ಪತ್ರ ನೀಡುವಂತೆ ಹಾಗೂ ದೊಡ್ಡ ಅಗ್ರಹಾರದ ಕೆಂಚಣ್ಣ ಪಡಿತರ ಧಾನ್ಯಗಳನ್ನು ಸರಿಯಾದ ರೀತಿಯಲ್ಲಿ ವಿತರಿಸಲು ಕೋರಿ ಅರ್ಜಿ ಸಲ್ಲಿಸಿದರು. ಸಭೆಯಲ್ಲಿ ಪವತಿ ಖಾತೆ, ರಾಜ ಕಾಲುವೆ ತೆರವು, ಸಾಗುವಳಿ ಚೀಟಿ ಸೇರಿದಂತೆ ಸುಮಾರು 69 ಅರ್ಜಿಗಳನ್ನು ಸ್ವೀಕರಿಸಲಾಯಿತು. ಗಿರಿನಾಥನಹಳ್ಳಿಯ ನಾಗರಾಜು ಎಂಬುವವರು ಗ್ರಾಮನಕ್ಷೆ ಕೋರಿ ಸಲ್ಲಿಸಿದ ಅರ್ಜಿಗೆ ಕೂಡಲೇ ಪ್ರತಿಕ್ರಿಯಿಸಿದ ಜಿಲ್ಲಾಧಿಕಾರಿಗಳು ಗ್ರಾಮ…
ಕೊರಟಗೆರೆ: ತುಂಬಾಡಿ ಗ್ರಾಮ ಪಂಚಾಯಿತಿಯ ಎರಡನೇ ಅವಧಿಯ ನೂತನ ಅಧ್ಯಕ್ಷರಾಗಿ ನಟರಾಜು ಟಿ. ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಕೊರಟಗೆರೆ ತಾಲೂಕಿನ ತುಂಬಾಡಿ ಗ್ರಾಮ ಪಂಚಾಯಿತಿಯ ಈ ಹಿಂದೆ ಇದ್ದ ಅಧ್ಯಕ್ಷ ಹರೀಶ್ ರಾಜೀನಾಮೆಯಿಂದ ಅಧ್ಯಕ್ಷರ ಸ್ಥಾನ ಖಾಲಿ ಇತ್ತು. ಹೀಗಾಗಿ ಎರಡನೆಯ ಅವಧಿಯ ನೂತನ ಅಧ್ಯಕ್ಷರ ಚುನಾವಣೆ ಇಂದು ನಡೆಯಿತು. ಗ್ರಾಮ ಪಂಚಾಯತಿಯ 16 ಜನ ಸದಸ್ಯರು ಸೇರಿ ಒಮ್ಮತದಿಂದ ಅವಿರೋಧವಾಗಿ ನಟರಾಜು ಟಿ.ರವರನ್ನು ಅಧ್ಯಕ್ಷರಾಗಿ ಆಯ್ಕೆ ಮಾಡಿದ್ದಾರೆ ಎಂದು ತಾಲೂಕು ದಂಡಾಧಿಕಾರಿ ಮಂಜುನಾಥ್ ತಿಳಿಸಿದರು. ನೂತನ ಅಧ್ಯಕ್ಷ ನಟರಾಜ್ ಮಾತನಾಡಿ, ನಮ್ಮ ಪಂಚಾಯತಿಯ ಸದಸ್ಯರೆಲ್ಲರೂ ಒಟ್ಟಿಗೆ ಕೂಡಿ ನನ್ನನ್ನು ಅಧ್ಯಕ್ಷರನ್ನಾಗಿ ಆಯ್ಕೆ ಮಾಡಿದ್ದಾರೆ ಅವೆಲ್ಲರಿಗೂ ನಾನು ಚಿರಋಣಿ ಅವರೆಲ್ಲರ ಜೊತೆಗೂಡಿ ಗ್ರಾಮ ಪಂಚಾಯಿತಿಯ ಎಲ್ಲಾ ಗ್ರಾಮಗಳ ಅಭಿವೃದ್ಧಿಗಾಗಿ ಶ್ರಮಿಸುತ್ತೇನೆ ಎಂದು ತಿಳಿಸಿದರು. ಇದೇ ಸಂದರ್ಭದಲ್ಲಿ ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿ ಮಾಜಿ ಅಧ್ಯಕ್ಷ ಹರೀಶ್ ಸೇರಿದಂತೆ ಗ್ರಾಮ ಪಂಚಾಯತಿಯ ಎಲ್ಲ ಸದಸ್ಯರು, ಸಬ್ ಇನ್ಸ್ಪೆಕ್ಟರ್ ಚೇತನ್ ಕುಮಾರ್ ಹಾಗೂ ತಂಡ ಮತ್ತು…
ಕೊರಟಗೆರೆ: ಪಟ್ಟಣದ ಬೈಪಾಸ್ ರಸ್ತೆಯ ಬೋಡ ಬಂಡೇನಹಳ್ಳಿ ಬೈಪಾಸ್ ಬಳಿ ತಡರಾತ್ರಿ ಮಲ್ಲೇಶ್ವರ ಗ್ರಾಮದಿಂದ ಕೊರಟಗೆರೆ ಬರುತ್ತಿದ್ದಾಗ ಮಲ್ಲೇಶ್ವರ ಗ್ರಾಮದ ಮೂರು ಯುವಕರು ಕುಡಿದ ಮತ್ತಿನಲ್ಲಿ ದ್ವಿಚಕ್ರವಾಹನ ಚಲಾಯಿಸುತ್ತಾ ಬಂದಿದ್ದು, ಈ ವೇಳೆ ನಿಯಂತ್ರಣ ತಪ್ಪಿ ಡಿವೈಡರ್ ಗೆ ಡಿಕ್ಕಿ ಹೊಡೆದು ದ್ವಿಚಕ್ರ ವಾಹನದಲ್ಲಿದ್ದ ಒಬ್ಬ ಸಾವನ್ನಪ್ಪಿದ್ದು ಇನ್ನಿಬ್ಬರ ಪರಿಸ್ಥಿತಿ ಚಿಂತಾಜನಕವಾಗಿದೆ. ಗಾಯಗೊಂಡ ವ್ಯಕ್ತಿಗಳನ್ನ ಸ್ಥಳದಲ್ಲೇ ಇದ್ದ ಹಂಚಿಹಳ್ಳಿ ಗ್ರಾಮ ಪಂಚಾಯತಿ ಅಧ್ಯಕ್ಷ ಭೀಮರಾಜು ಹಾಗೂ ಸ್ನೇಹಿತರು ಆಂಬುಲೆನ್ಸ್ ಗೆ ಕರೆ ಮಾಡಿ, ಕೊರಟಗೆರೆಯ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಿ ಪ್ರಥಮ ಚಿಕಿತ್ಸೆಯನ್ನ ಕೊಡಿಸಿ ಹೆಚ್ಚಿನ ಚಿಕಿತ್ಸೆಗಾಗಿ ತುಮಕೂರಿನ ಜಿಲ್ಲಾ ಆಸ್ಪತ್ರೆಗೆ ರವಾನಿಸಿದ್ದಾರೆ. ಘಟನಾ ಸ್ಥಳಕ್ಕೆ ಕೊರಟಗೆರೆ ಪೊಲೀಸ್ ಠಾಣೆಯ ಸಬ್ ಇನ್ಸ್ಪೆಕ್ಟರ್ ಚೇತನ್ ಹಾಗೂ ತಂಡ ಭೇಟಿ ನೀಡಿ ಪರಿಶೀಲನೆ ನಡೆಸಿ ಘಟನೆಗೆ ಸಂಬಂಧಿಸಿದಂತೆ ಪ್ರಕರಣ ದಾಖಲಿಸಿಕೊಂಡಿದ್ದಾರೆ ಎನ್ನಲಾಗಿದೆ. ವರದಿ: ಮಂಜುಸ್ವಾಮಿ ಎಂ.ಎನ್. ಕೊರಟಗೆರೆ ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು…
ನವದೆಹಲಿ: ಅಬಕಾರಿ ನೀತಿ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಜೈಲಿನಲ್ಲಿರುವ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರಿಗೆ ಸುಪ್ರೀಂ ಕೋರ್ಟ್ ಜಾಮೀನು ಮಂಜೂರು ಮಾಡಿದೆ. ದೆಹಲಿ ಸಿಎಂ ಅರವಿಂದ ಕೇಜ್ರಿವಾಲ್ ಅವರಿಗೆ ಸುಪ್ರೀಂ ಕೋರ್ಟ್ ಜಾಮೀನು ಮಂಜೂರು ಮಾಡಿದೆ. ಇದರ ಬೆನ್ನಲ್ಲೇ, ಅವರನ್ನು ಜೈಲಿನಿಂದ ಬಿಡುಗಡೆಗೊಳಿಸಿ ದೆಹಲಿ ನ್ಯಾಯಾಲಯ ಆದೇಶಿಸಿದೆ. ಕೇಜ್ರಿವಾಲ್ ಪರ ವಕೀಲರು ಕೋರ್ಟ್ಗೆ ಇಬ್ಬರ ಜಾಮೀನು ಹಾಗೂ ರೂ.10 ಲಕ್ಷ ಭದ್ರತಾ ಬಾಂಡ್ ನೀಡಿದ ಬಳಿಕ ವಿಶೇಷ ನ್ಯಾಯಾಲಯದ ನ್ಯಾಯಮೂರ್ತಿ ರಾಕೇಶ್ ಸ್ಯಾಲ್ ಅವರು ಬಿಡುಗಡೆ ಆದೇಶ ಮಾಡಿದರು. ನ್ಯಾಯಮೂರ್ತಿಗಳಾದ ಸೂರ್ಯ ಕಾಂತ ಹಾಗೂ ಉಜ್ಜಲ್ ಭುಯನ್ ಅವರಿದ್ದ ಪೀಠ ಕೇಜ್ರಿವಾಲ್ ಅವರಿಗೆ ಜಾಮೀನು ಮಂಜೂರು ಮಾಡಿ ಆದೇಶಿಸಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q
ಬೆಂಗಳೂರು: ಬೆಂಗಳೂರು ನಗರಾದ್ಯಂತ ಮುಸ್ಲಿಮರು ಈದ್ ಮಿಲಾದ್ ಹಬ್ಬವನ್ನು ಆಚರಿಸುವ ಪ್ರಯುಕ್ತ, ಮಸೀದಿಗಳಲ್ಲಿ ಪ್ರಾರ್ಥನೆ ಮುಗಿಸಿ ನಂತರ, ಮೆರವಣಿಗೆಯಲ್ಲಿ ಸ್ಥಬ್ಧ ಚಿತ್ರಗಳು, ಧ್ವನಿವರ್ಧಕಗಳನ್ನು ಉಪಯೋಗಿಸಿಕೊಂಡು, ನಡಿಗೆಯಲ್ಲಿ ವೈ.ಎಂ.ಸಿ.ಎ. ಮೈದಾನ, ಮಿಲ್ಲರ್ ರಸ್ತೆ ಖುದ್ದು ಸಾಬ್ ಇದ್ದಾ ಮೈದಾನ, ಶಿವಾಜಿನಗರ ಛೋಟಾ ಮೈದಾನ, ಭಾರತೀನಗರದ ಸುಲ್ತಾನ್ಜೀ ಗುಂಟಾ ಮೈದಾನಗಳಲ್ಲಿ ಹಾಗೂ ಇತರೆಡೆಗಳಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದು, ಈ ಸಂಬಂಧ ಹಬ್ಬದ ದಿನದಂದು ಈ ಕೆಳಕಂಡ ಸೂಚನೆಗಳನ್ನು ಅನುಸರಿಸಲು ಸೂಚಿಸಲಾಗಿದೆ. ಮೆರವಣಿಗೆ ಸಾಗುವ ಹಾದಿಯಲ್ಲಿ ಸಾರ್ವಜನಿಕರಿಗೆ ಆಡಚಣೆ ಉಂಟಾಗದಂತೆ ಸ್ವಯಂಸೇವಕರು ಹಾಗೂ ಅಯೋಜಕರು ರಸ್ತೆಯ ಎರಡು ಬದಿಯಲ್ಲಿ ನಿಂತು ಮೆರವಣಿಗೆಗಾರರಿಗೆ ಸೂಕ್ತ ನಿರ್ದೇಶನವನ್ನು ನೀಡಿ ಮೆರವಣಿಗೆಯನ್ನು ಶಾಂತ ರೀತಿಯಲ್ಲಿ ಸಾಗುವಂತೆ ಸಹಕರಿಸುವುದು ಹಾಗೂ ಸಾರ್ವಜನಿಕ ಸಂಚಾರ ಸುಗಮವಾಗಿ ಸಾಗಲು ಅನುವು ಮಾಡುವುದು. ಮೆರವಣಿಗೆಯಲ್ಲಿ ಪಾಲ್ಗೊಳ್ಳುವವರು ಯಾವುದೆ ಹರಿತವಾದ ವಸ್ತುಗಳನ್ನು ಹೊಂದಿರಬಾರದು. ಈದ್ ಹಬ್ಬದ ದಿನದಂದು ಮೆರವಣಿಗೆಯ ಸಮಯದಲ್ಲಿ ಯಾವುದೆ ಕಾರಣಕ್ಕೂ ಡಿಜೆ ಗಳನ್ನು ಬಳಸಬಾರದು. 4. ಈದ್ ಹಬ್ಬದ ಪ್ರಯುಕ್ತ ಸ್ತಬ್ದ…
ಬೆಂಗಳೂರು: ರಾಜ್ಯ ಸರ್ಕಾರ ಇಬ್ಬರು ಹಿರಿಯ ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ. ಗುಪ್ತಚರ ವಿಭಾಗದ ಎಡಿಜಿಪಿಯಾಗಿದ್ದ ಕೆ.ವಿ.ಶರತ್ಚಂದ್ರ ಅವರನ್ನು ಪೊಲೀಸ್ ನೇಮಕಾತಿ ವಿಭಾಗದ ಎಡಿಜಿಪಿಯಾಗಿ ವರ್ಗಾವಣೆ ಮಾಡಲಾಗಿದೆ ಮತ್ತು ಹೆಚ್ಚುವರಿಯಾಗಿ ಸಂಚಾರ ಹಾಗೂ ರಸ್ತೆ ಸುರಕ್ಷತಾ ಮುಖ್ಯಸ್ಥರಾಗಿಯೂ ಜವಾಬ್ದಾರಿ ನೀಡಲಾಗಿದೆ. ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಆಯುಕ್ತರಾಗಿದ್ದ ಹೇಮಂತ್ ಎಂ.ನಿಂಬಾಳ್ಕರ್ ಅವರನ್ನು ರಾಜ್ಯ ಪೊಲೀಸ್ ಗುಪ್ತಚರ ವಿಭಾಗದ ಎಡಿಜಿಪಿಯಾಗಿ ವರ್ಗಾವಣೆ ಮಾಡಲಾಗಿದೆ. ಇದರ ಜತೆಗೆ ವಾರ್ತಾ ಇಲಾಖೆಯ ಆಯುಕ್ತರ ಜವಾಬ್ದಾರಿಯನ್ನೂ ಕೂಡ ಹೆಚ್ಚುವರಿಯಾಗಿ ನೀಡಲಾಗಿದೆ. ಎಡಿಜಿಪಿ ಅಲೋಕ್ ಕುಮಾರ್ ಅವರನ್ನು ರಸ್ತೆ ಸುರಕ್ಷತೆ ಮತ್ತು ಸಂಚಾರ ವಿಭಾಗದಿಂದ ಬಿಡುಗಡೆ ಮಾಡಲಾಗಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q
ಪಾವಗಡ: 2024–25ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ ಜಿ.ಪಿ.ಎಸ್. ಆಧಾರಿತ ಮೊಬೈಲ್ ಆಪ್ಲಿಕೇಶನ್ ಬಳಸಿ ಸರ್ವೆ ನಂಬರ್/ಉಪ ಸರ್ವೆ ನಂಬರ್ ವಾರು ಬೆಳೆ ಪ್ರದೇಶದ ನಿಖರ ಮಾಹಿತಿಯನ್ನು ದಾಖಲಿಸುವ ಕಾರ್ಯ ಆಯಾ ಗ್ರಾಮಕ್ಕೆ ನಿಯೋಜಿತರಾದ ಖಾಸಗಿ ನಿವಾಸಿಗಳಿಂದ ಆಗಸ್ಟ್ 16ರಿಂದ ತಾಲ್ಲೂಕಿನಾದ್ಯಂತ ಪ್ರಾರಂಭವಾಗಿರುತ್ತದೆ. ಮುಂದುವರೆದು, ರೈತರ ಬೆಳೆ ಸಮೀಕ್ಷೆ ಆಪ್ ನಲ್ಲಿ ರೈತರು ತಾವೇ ಸ್ವತಃ ತಮ್ಮ ಜಮೀನಿನಲ್ಲಿನ ಬೆಳೆಗಳ ಸಮೀಕ್ಷೆ ಕಾರ್ಯವನ್ನು ಮಾಡಬಹುದಾಗಿರುತ್ತದೆ. ಬೆಳೆ ಸಮೀಕ್ಷೆ ಕಾರ್ಯದಿಂದ ಸೆರೆ ಹಿಡಿಯಲಾದ ದತ್ತಾಂಶವನ್ನು ಪ್ರಕೃತಿ ವೀಕೋಪದ ಸಂದರ್ಭದಲ್ಲಿ ಬೆಳೆ ಹಾನಿ ಸಂಬವಿಸಿದಾಗ ಎನ್.ಡಿ.ಆರ್.ಎಫ್/ಎಸ್.ಡಿಆರ್.ಎಫ್ ಅಡಿಯಲ್ಲಿ ಸಹಾಯಧನ ನೀಡುವ ಸಂಬಂಧ ಅರ್ಹ ಫಲಾನುಭವಗಳ ಪಟ್ಟಿಯನ್ನು ತಯಾರಿಸಲು, ಬೆಳೆ ವಿಮಾ ಯೋಜನೆಯಡಿ ತಾಕು ಹಂತದ ಬೆಳೆ ಪರಿಶೀಲನೆಗೆ, ಕೃಷಿ, ತೋಟಗಾರಿಕೆ ಮತ್ತು ರೇಷ್ಮೆ ಇಲಾಖೆಗಳ ಫಲಾನುಭವಿ ಆಧಾರಿತ ಯೋಜನೆಗಳ ಅನುಷ್ಠಾನಕ್ಕಾಗಿ, ಆರ್.ಟಿ.ಸಿಯಲ್ಲಿ ಬೆಳೆ ವಿವರ ದಾಖಲಾತಿಗಾಗಿ ಹಾಗೂ ಹಣಕಾಸು ಸಂಸ್ಥೆಗಳಲ್ಲಿ ಬೆಳೆ ಸಾಲ ಮಂಜೂರು ಮಾಡಲು ಬಳಸಲಾಗುತ್ತದೆ. ದಿನಾಂಕ:08.09.2024ರ ದಿನದ ಅಂತ್ಯಕ್ಕೆ ಶೇ.55ರಷ್ಟು ತಾಕುಗಳ ಬೆಳೆ…
ಪಾವಗಡ: ತಾಲ್ಲೂಕಿನ ವೈ.ಎನ್.ಹೊಸಕೋಟೆ ಪೊಲೀಸ್ ಠಾಣೆಯಲ್ಲಿ ಯುವಕರ ಮತ್ತು ಸಾರ್ವಜನಿಕರ ಶಾಂತಿ ಸಭೆಯನ್ನು ಪೊಲೀಸ್ ಇಲಾಖೆಯಿಂದ ಗುರುವಾರ ಕರೆಯಲಾಗಿತ್ತು. ಗಣಪತಿ ಮೂರ್ತಿ ವಿಸರ್ಜನೆ ಸಂದರ್ಭಗಳಲ್ಲಿ ನಡೆಯಬಹುದಾದ ಅಹಿತಕರ ಘಟನೆಗಳನ್ನು ತಡೆಯುವ ಉದ್ದೇಶ ಸಭೆಯದಾಗಿತ್ತು. ಗ್ರಾಮಾಂತರ ಸರ್ಕಲ್ ಇನ್ಸ್ಪೆಕ್ಟರ್ ಗಿರೀಶ್ ಅವರು ಮಾತನಾಡಿ ಯುವಜನತೆ ಹುಚ್ಚು ಹುಮ್ಮಸ್ಸಿನಲ್ಲಿ ಗಣಪತಿ ಮೂರ್ತಿ ಮೆರವಣಿಗೆ ಸಂದರ್ಭದಲ್ಲಿ ನೂಕಟ, ತಳ್ಳಾಟ ಹಾಗೂ ಇನ್ನಿತರೆ ಕಠಿಣವುಗಳಲ್ಲಿ ತೊಡೆದುಕೊಳ್ಳಬಾರದು. ಸೂಕ್ಷ್ಮ ಪ್ರದೇಶಗಳಲ್ಲಿ ಕೂಗಾಡೋದು ಘೋಷಣೆಗಳನ್ನು ಕೂಗುವುದು ಉದ್ದೇಶಪೂರ್ವಕವಾಗಿ ಅಲ್ಲೇ ನಿಲ್ಲುವುದು ಇತ್ಯಾದಿ ಕೆಲಸಗಳನ್ನು ಮಾಡಿ ಗ್ರಾಮದ ಶಾಂತಿ ಕದಡಬಾರದು. ಅಂತಹ ಘಟನೆಗಳು ನಡೆದಲ್ಲಿ ಪೊಲೀಸ್ ತನ್ನ ಕೆಲಸ ಕಾರ್ಯ ಮಾಡಬೇಕಾಗಿರುತ್ತದೆ ಎಂದು ಎಚ್ಚರಿಕೆ ತಿಳಿಸಿದರು. ಇದೇ ಸಂದರ್ಭದಲ್ಲಿ PSI ಮಾಳಪ್ಪ ನಾಯ್ಕೋಡಿ, ಪೊಲೀಸ್ ಸಿಬ್ಬಂದಿ, ಗಣಪತಿಯ ಆಯೋಜಕರು ಹಾಜರಾಗಿದ್ದರು. ವರದಿ: ನಂದೀಶ್ ನಾಯ್ಕ, ಪಾವಗಡ ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q
ಪಾವಗಡ: ಹಿಂದುಗಳ ಉಳಿವಿಗಾಗಿ ಸಹಿ ಸಂಗ್ರಹದ ಅಭಿಯಾನಕ್ಕೆ ಸಮಸ್ತ ಹಿಂದೂಗಳು ಕೈಜೋಡಿಸಬೇಕು ಎಂದು ಶ್ರೀರಾಮ ಸೇನೆಯ ಜಿಲ್ಲಾಧ್ಯಕ್ಷರಾದ ಅನಿಲ್ ಯಾದವ್ ಅವರು ತಿಳಿಸಿದರು. ಪಟ್ಟಣದ ಪ್ರವಾಸಿ ಮಂದಿರದಲ್ಲಿ ಸಿಹಿ ಅಭಿಯಾನಕ್ಕೆ ಚಾಲನೆ ನೀಡಿ ನಂತರ ಮಾತನಾಡಿದ ಅವರು ನರೇಂದ್ರ ಮೋದಿಯವರ ನೇತೃತ್ವದ ಕೇಂದ್ರ ಸರ್ಕಾರ ವಕ್ಫ್ ಬೋರ್ಡ್ ಕಾಯ್ದೆಗಳನ್ನು ತಿದ್ದುಪಡಿ ಮಾಡಬೇಕೆಂದು ಸಂಸತ್ತಿನಲ್ಲಿ ಮಂಡನೆ ಮಾಡಿ ಚರ್ಚಿಸಲಾಯಿತು. ಈ ಸಂದರ್ಭದಲ್ಲಿ ಹಿಂದೂ ವಿರೋಧವಾದ ಕಾಂಗ್ರೆಸ್ ಮತ್ತು ಕಾಂಗ್ರೆಸ್ಸಿನ ಬೆಂಬಲಿತ ಪಕ್ಷಗಳು ವಿರೋಧ ವ್ಯಕ್ತಪಡಿಸಿವೆ, ಈ ವಿಚಾರವಾಗಿ ಪರ ಮತ್ತು ವಿರೋಧಗಳು ನಡೆಯುತ್ತಿದ್ದೆ ಹಾಗಾಗಿ ಕೇಂದ್ರ ಸರ್ಕಾರದಿಂದ ಜಂಟಿ ಸಂಸದೀಯ ಸಮಿತಿ ರಚನೆ ಮಾಡಿದ್ದೆ, ಈ ತಿದ್ದುಪಡಿ ಕಾಯ್ದೆಯ ವಿರುದ್ಧವಾಗಿ ಮುಸ್ಲಿಮರು ಪ್ರತಿ ಮನೆಮನೆ ಹಾಗೂ ಮಸೀದಿಗಳಿಗೆ ತೆರಳಿ ದೊಡ್ಡ ಪ್ರಮಾಣದಲ್ಲಿ ವಿರೋಧ ವ್ಯಕ್ತಪಡಿಸುತ್ತಿದ್ದಾರೆ. ಹಿಂದುಗಳು ಕೂಡ ಈ ಕಾಯ್ದೆಯ ಪರವಾಗಿ ವಾಕ್ ಬೋರ್ಡ್ ಸಂಬಂಧಪಟ್ಟಂತೆ 40 ತಿದ್ದುಪಡಿಗಳು ಆಗಬೇಕೆಂದು ಬೆಂಬಲ ವ್ಯಕ್ತಪಡಿಸಬೇಕಾಗಿದೆ ಎಂದರು. ಈಗಾಗಲೇ ಶ್ರೀರಾಮ ಸೇನೆಯ ಜಿಲ್ಲಾ ಘಟಕದ ವತಿಯಿಂದ…
ತುಮಕೂರು: ತಾಂತ್ರಿಕ ಆನೆಯನ್ನು ಕುಣಿಗಲ್ ತಾಲೂಕಿನ ಯಡಿಯೂರಿನಲ್ಲಿರುವ ಶ್ರೀ ಸಿದ್ದಲಿಂಗೇಶ್ವರ ಸ್ವಾಮಿ ದೇವಸ್ಥಾನಕ್ಕೆ ತಾಂತ್ರಿಕ ಆನೆಯನ್ನು ವಿವಿಧ ಸಂಘಟನೆಗಳು ಕೊಡುಗೆಯಾಗಿ ನೀಡಿದವು. ಕೂಪಾ (CUPA) ಮತ್ತು ಪ್ರಾಣಿಗಳ ಸೂಕ್ತ ಉಲ್ಲೇಖದ ಪರಿವಾರ (PETA) ಇಂಡಿಯಾ ಸಂಘಟನೆಗಳು ಇಂದು “ನಿರಂಜನಾ” ಎಂಬ ಹೆಸರಿನ 3 ಮೀಟರ್ ಉದ್ದದ ಮತ್ತು 800 ಕಿಲೋಗ್ರಾಂ ತೂಕದ್ದಾಗಿದೆ. ದೇವಾಲಯವು ನಿಜವಾದ ಆನೆಗಳನ್ನು ಬಳಸುವುದಿಲ್ಲ ಎಂದು ಗುರುತಿಸಲು ಇದು ನೈತಿಕ ಪ್ರಾಣಿ ಪರಿಪಾಲನೆಯ ಒಂದು ಪ್ರಮುಖ ಹಂತವನ್ನು ಪ್ರತಿನಿಧಿಸುತ್ತದೆ ಮತ್ತು ಕರ್ನಾಟಕದ ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧಾರ್ಮಿಕ ಕೊಡುಗೆ ಇಲಾಖೆ ಒಪ್ಪಿಗೆಯೊಂದಿಗೆ ದೇವಸ್ಥಾನದಲ್ಲಿ ಪ್ರತಿಷ್ಠಾಪಿಸಲಾಗಿರುವ ಮೊದಲ ತಾಂತ್ರಿಕ ಆನೆಯಾಗಿದೆ. ನಟಿ ಸಂಯುಕ್ತ ಹೊರನಾಡು , CUPA ಮತ್ತು PETA ಇಂಡಿಯಾದಿಂದ ಜಂಟಿಯಾ ನೀಡಲಾಯಿತು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q