Author: admin

ತುಮಕೂರು: ಮುಂಬರುವ ಈದ್ ಮಿಲಾದ್ ಹಬ್ಬದ ಹಿನ್ನೆಲೆಯಲ್ಲಿ ನಗರದಲ್ಲಿ ಶಾಂತಿಯುತ ವಾತಾವರಣ ನಿರ್ಮಾಣ ಮಾಡುವ ನಿಟ್ಟಿನಲ್ಲಿ ತೆಗೆದುಕೊಳ್ಳಬೇಕಾದ ಜವಾಬ್ದಾರಿಗಳ ಬಗ್ಗೆ ಸಮುದಾಯದ ಹಿರಿಯರೊಂದಿಗೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಶೋಕ್ ಅವರು  ಚರ್ಚೆ ನಡೆಸಿದರು. ತಿಲಕ್ ಪಾರ್ಕ್ ಪೊಲೀಸ್ ಠಾಣಾ ಆವರಣದಲ್ಲಿ  ಸಮುದಾಯದ ಮೌಲ್ವಿಗಳು ಮತ್ತು ಮುಖಂಡರೂಂದಿಗೆ ಜಿಲ್ಲಾ ಚರ್ಚಿಸಿ ಕೆಲವು ಸಲಹೆ ಸೂಚನೆಗಳನ್ನು ನೀಡಿ ಸಮಾಜದಲ್ಲಿ ಶಾಂತಿ ಕಾಪಾಡುವಂತೆ ಕೋರಿದರು. ಸಭೆಯಲ್ಲಿ ಹೆಚ್ಚುವರಿ ಪೊಲೀಸ್ ಅಧೀಕ್ಷಕರಾದ ವಿ.ಮರಿಯಪ್ಪ, ನಗರ ಡಿಎಸ್ಪಿ ಚಂದ್ರಶೇಖರ್, ಇನ್ಸ್‌ಪೆಕ್ಟರ್ ಗಳಾದ ಪುರುಷೋತ್ತಮ್, ದಿನೇಶ್, ಗುರುನಾಥ್ ಹಾಗೂ ಪಿಎಸ್ ಐ ಗಳು ಹಾಜರಿದ್ದರು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q

Read More

ಸಲ್ಮಾನ್ ಖಾನ್ ಬಳಿ ಹಲವು ಐಶಾರಾಮಿ ವಸ್ತುಗಳಿವೆ. ದೊಡ್ಡ ಸಂಖ್ಯೆಯ ದುಬಾರಿ ಕಾರುಗಳಿವೆ. ಆದರೆ ಈ ಚಿತ್ರದಲ್ಲಿ ಸಲ್ಮಾನ್ ಖಾನ್ ಧರಿಸಿರುವುದು ವಿಶ್ವದ ಅತ್ಯಂತ ದುಬಾರಿ ವಾಚುಗಳಲ್ಲಿ ಒಂದು. ಇತ್ತೀಚೆಗೆ ಜಾಕೋಬ್ ಅರಾಬೋ ಕಂಪನಿಯ ವಾಚ್ ಧರಿಸಿದ್ದರು. ವಾಚ್ನ ಧರಿಸಿ ಅವರು ಪೋಸ್ ಕೊಟ್ಟಿದ್ದಾರೆ. ಇದು ಬಿಲಿಯನೇರ್ III ವಾಚ್ ಅನ್ನೋದು ವಿಶೇಷ. ಇದರಲ್ಲಿ ನೂರಾರು ಡೈಮಂಡ್ಸ್ ಇದೆ. ಜಾಕೋಬ್ ಅವರೇ ಈ ವಿಡಿಯೋ ಹಂಚಿಕೊಂಡಿದ್ದಾರೆ. ಈ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ಸಖತ್ ವೈರಲ್ ಆಗಿ ಗಮನ ಸೆಳೆದಿದೆ. ಜಾಕೋಬ್ ಅವರು ಸಲ್ಲುಗೆ ವಾಚ್ ತೊಡಿಸುತ್ತಿರುವ ಫೋಟೋ ವೈರಲ್ ಆಗಿದೆ. ನಂತರ ಸಲ್ಲು ಅವರು ವಾಚ್ನ ಕ್ಯಾಮೆರಾಗೆ ಶೋ ಮಾಡಿದ್ದಾರೆ. ಯಾರಿಗೂ ಈ ವಾಚ್ನ ಧರಿಸೋಕೆ ನಾನು ಅವಕಾಶ ನೀಡುವುದಿಲ್ಲ ಎಂದಿರುವ ಅವರು ಸಲ್ಲು ಮೇಲಿನ ವಿಶೇಷ ಗೌರವದಿಂದಾಗಿ ಅವರು ವಿಶೇಷವಾಗಿ ಈ ಅವಕಾಶ ನೀಡಿದ್ದಾರೆ. ಈ ವಾಚ್ನಲ್ಲಿ 152 ವೈಟ್ ಡೈಮಂಡ್ಸ್ ಇದೆ. ಪ್ರತಿ ಸೆಗ್ಮೆಂಟ್ನಲ್ಲಿ 76 ಡೈಮಂಡ್ಸ್ ಇದೆ.…

Read More

ತಮಾಷೆಗಾಗಿ ತುರ್ತು ಟ್ರಿಪ್‌ ಸಿಸ್ಟಮ್‌ (ETS) ಬಟನ್‌ ಒತ್ತಿ ಮೆಟ್ರೋಗೆ ಅಡ್ಡಿಪಡಿಸಿ ಯುವಕಗೆ 5,000 ದಂಡ ವಿಧಿಸಿದ ಘಟನೆ ಬೆಂಗಳೂರಿನ ನಮ್ಮ ಮೆಟ್ರೋದಲ್ಲಿ ನಡೆದಿದೆ. ಬೆಂಗಳೂರಿನ ವಿವೇಕನಗರ ನಿವಾಸಿ ಹೇಮಂತ್ ಕುಮಾರ್ (21) ಎಂಬಾತ ಎಂಜಿ ರಸ್ತೆ ನಿಲ್ದಾಣದಲ್ಲಿ ಇಟಿಎಸ್ ಒತ್ತಿದ್ದಾನೆ. ಇದರಿಂದಾಗಿ ಟ್ರಿನಿಟಿ ನಿಲ್ದಾಣದಿಂದ ಬರುತ್ತಿದ್ದ ರೈಲನ್ನು ಎಂಜಿ ರೋಡ್ ಮೆಟ್ರೋದಲ್ಲಿ 10 ನಿಮಿಷಗಳ ಕಾಲ ನಿಲ್ಲಿಸಲಾಯಿತು. ಹೀಗಾಗಿ ನೇರಳೆ ಮಾರ್ಗದ ಎಲ್ಲಾ ಸೇವೆಗಳು ಅಸ್ತವ್ಯಸ್ತಗೊಂಡವು. ರೈಲು ಪುನಾರಂಭವಾದ ನಂತರ ಹೇಮಂತ್‌ ಕಬ್ಬನ್ ಪಾರ್ಕ್ ನಿಲ್ದಾಣದಲ್ಲಿ ಇಳಿದು ಹೊರಟಿದ್ದಾನೆ. ಘಟನೆಯ ಹಿನ್ನೆಲೆಯಲ್ಲಿ ಮೆಟ್ರೋ ಸಿಬ್ಬಂದಿ ಸಿಸಿಟಿವಿ ಮೂಲಕ ಹೇಮಂತ್‌ ನನ್ನು ಗುರುತಿಸಿ ಹಿಂಬಾಲಿಸಿದ್ದಾರೆ. ಹೇಮಂತ್‌ ಕಬ್ಬನ್ ಪಾರ್ಕ್ ಮೆಟ್ರೋ ನಿಲ್ದಾಣದಲ್ಲಿ ಇಳಿದ ನಂತರ ಸಿಬ್ಬಂದಿ ಆತನನ್ನು ತಡೆದು ಘಟನೆಯ ಬಗ್ಗೆ ವಿಚಾರಿಸಿದರು. ಆದರೆ, ಮೋಜಿಗಾಗಿ ಒತ್ತಿ ಹೇಳಿರುವುದಾಗಿ ತಪ್ಪೊಪ್ಪಿಕೊಂಡಿದ್ದು, ಆತನಿಗೆ 5000 ರೂ. ದಂಡ ವಿಧಿಸಲಾಗಿದೆ. ಬೆಂಗಳೂರು ಮೆಟ್ರೊ ರೈಲು ನಿಗಮ ನಿಯಮಿತದ (ಬಿಎಂಆರ್‌ಸಿಎಲ್) ಸಿಬ್ಬಂದಿ ಮಾತನಾಡಿ, ಯಾವುದೇ ಉದ್ದೇಶವಿಲ್ಲದೆ…

Read More

ಜವಾಹರ ನವೋದಯ ವಿದ್ಯಾಲಯದ ಪ್ರವೇಶಕ್ಕಾಗಿ ಅರ್ಜಿಗಳನ್ನು ಆಹ್ವಾನಿಸಲಾಗುತ್ತದೆ. ನವೋದಯ ವಿದ್ಯಾಲಯವು ತನ್ನದೇ ಆದ ಶೈಕ್ಷಣಿಕ ಉದ್ದೇಶಗಳನ್ನು ಹೊಂದಿದ್ದು, ವಿದ್ಯಾಲಯವು ಗ್ರಾಮೀಣ ಪ್ರದೇಶದ ಪ್ರತಿಭಾವಂತ ಮಕ್ಕಳಿಗೆ ಮೀಸಲಾಗಿರುವ ಶಿಕ್ಷಣ ಸಂಸ್ಥೆಯಾಗಿದೆ. ಹಲವು ವರ್ಷಗಳಿಂದ 10 ಮತ್ತು 12ನೇ ತರಗತಿಯ ಪರೀಕ್ಷೆಗಳಲ್ಲಿ ವಿದ್ಯಾಲಯ ನೂರಕ್ಕೆ ನೂರು ಫಲಿತಾಂಶವನ್ನು ಪಡೆಯುತ್ತಿದೆ. ವಿದ್ಯಾಲಯದಲ್ಲಿ ಓದಿದ ನೂರಾರು ವಿದ್ಯಾರ್ಥಿಗಳು ಹಲವು ಕ್ಷೇತ್ರಗಳಲ್ಲಿ ಉನ್ನತ ಸಾಧನೆಯನ್ನು ಮಾಡಿರುತ್ತಾರೆ. ಮಕ್ಕಳನ್ನು ಜವಾಹರ ನವೋದಯ ವಿದ್ಯಾಲಯಕ್ಕೆ ಸೇರಿರುವ ಮುನ್ನ ವಿದ್ಯಾಲಯದ ಕುರಿತು ಮಾಹಿತಿಯನ್ನು ತಿಳಿಯಿರಿ. ಜವಾಹರ ನವೋದಯ ವಿದ್ಯಾಲಯದ ಕಿರು ಪರಿಚಯವನ್ನು ವಿದ್ಯಾರ್ಥಿಗಳು, ಪೋಷಕರ ಅನುಕೂಲಕ್ಕಾಗಿ ನೀಡಲಾಗಿದೆ. ಇದು ವಸತಿ ಶಾಲೆಯಾಗಿದ್ದು, ಪರೀಕ್ಷೆ ಮೂಲಕ ವಿದ್ಯಾರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ. ನವೋದಯ ವಿದ್ಯಾಲಯವು ತನ್ನದೇ ಆದ ಶೈಕ್ಷಣಿಕ ಉದ್ದೇಶಗಳನ್ನು ಹೊಂದಿದೆ. ಪ್ರತಿ ವರ್ಷ 6ನೇ ತರಗತಿಗೆ ಪ್ರವೇಶ ಪಡೆಯುವ 80 ವಿದ್ಯಾರ್ಥಿಗಳಲ್ಲಿ ಕನಿಷ್ಠ ಪ್ರತಿಶತ 75 ಮಕ್ಕಳು ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳಾಗಿರುತ್ತಾರೆ. ಅಲ್ಲದೇ ನಿಯಮಾನುಸಾರ ಪ್ರತಿಶತ ಶೇ 22.5ರಷ್ಟು ಮಕ್ಕಳು ಪರಿಶಿಷ್ಟ ಜಾತಿ ಮತ್ತು…

Read More

ಶ್ರೀ ಕ್ಷೇತ್ರ ವರನಾಡು ಅನ್ನಪೂರ್ಣೇಶ್ವರಿ ದೇವಿಯ ಪ್ರಧಾನ ಆರಾಧಕರು ನವೆಂಬರ್ 1ವಶೀಕರಣ ಸ್ಪೆಷಲಿಸ್ಟ್  ಇನ್ India   ಶ್ರೀ ಶ್ರೀ ವಿಘ್ನೇಶ್ವರ ಭಟ್ ರವರು ಫೋನ್ ಮೂಲಕವೇ ನಿಮ್ಮ ಸಮಸ್ಯೆಗಳನ್ನು ಕೇಳಿ ಪರಿಹಾರ ಮಾಡಿಕೊಡುತ್ತಾರೆ, ಒಮ್ಮೆ ಆದರು ಸಹ ಫೋನ್ ಮಾಡಿರಿ ನಿರುದ್ಯೋಗ ಸಮಸ್ಯೆಗೆ ಹಾಗೂ ಪ್ರೀತಿ ಪ್ರೇಮದ ವೈಫಲ್ಯ ಹಾಗು ಗಂಡ ಹೆಂಡತಿ ಜಗಳ ಅಥವ ನೀವು ಇಷ್ಟ ಪಡುವ ವ್ಯಕ್ತಿ ನಿಮ್ಮ ಮಾತುಗಳು ಕೇಳಲು ಇನ್ನು ಅನೇಕ ಗುಪ್ತ ಸಮಸ್ಯೆಗೆ ಶಾಶ್ವತ ಪರಿಹಾರ ಮಾಡುತ್ತಾರೆ, ಒಮ್ಮೆ ಫೋನ್ ಮಾಡಿ  ನಿಮಗೆ ಶತ್ರುಗಳಿಂದ ತೊಂದ್ರೆ ಆಗಿದ್ರೆ ಅಥವ ವ್ಯವಹಾರದಲ್ಲಿ ಏಳಿಗೆ ಕಾಣುತ್ತಾ ಇಲ್ಲ ಅಂದರೆ ಫೋನ್ ಮಾಡಿ ಪ್ರಶ್ನೆಗೆಳು ಕೇಳಿ ಅದಕ್ಕೂ ಪರಿಹಾರ ನೀಡುತ್ತೇವೆ ಕರೆ ಮಾಡಿ ವಿಶೇಷ ರೀತಿಯ ಆಂಜನೇಯ ಸ್ವಾಮಿ ಬಲಿಷ್ಠ ಯಂತ್ರ ಕೂಡ ದೊರೆಯುವುದು ಪಡೆಯಲು ತಕ್ಷಣ ಕರೆ ಮಾಡಿ 9535839666 ಪಿತೃ ಪಕ್ಷದ ಸಮಯದಲ್ಲಿ ಈ ನಕ್ಷತ್ರದಲ್ಲಿ ಬದಲಾವಣೆಯಾಗಲಿದೆ ಈ 12 ರಾಶಿಗಳ ಜನರ ಮೇಲೆ…

Read More

ತುರುವೇಕೆರೆ: ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಯನ್ನು ಯಶಸ್ವಿಯಾಗಿ ಆಚರಿಸುವಂತೆ ತಾಲೂಕಿನ ಜನತೆಗೆ ತುರುವೇಕೆರೆ ತಾಲೂಕು ತಹಶೀಲ್ದಾರ್  ಎಂ.ಎನ್. ಕುಂ.ಇ. ಅಹ್ಮದ್ ಅವರು ಮನವಿ ಮಾಡಿದ್ದಾರೆ. ಪಟ್ಟಣದ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಜಿಲ್ಲಾಡಳಿತದ ಸೂಚನೆಯಂತೆ, ಜಿಲ್ಲೆಯ ಮುಖ್ಯ ಹೆದ್ದಾರಿಯಲ್ಲಿ ಮಾನವ ಸರಪಳಿ ನಿರ್ಮಿಸುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದರು. ಶಿರಾ ತಾಲೂಕಿನಿಂದ 90 ಕಿ.ಮೀ. ಮಾನವ ಸರಪಳಿ: “ಆಗಸ್ಟ್ 15 ರಂದು ಬೆಳಗ್ಗೆ 9 ಗಂಟೆಗೆ ಶಿರಾ ತಾಲೂಕಿನಿಂದ ಪ್ರಾರಂಭವಾಗುವ ಈ ಮಾನವ ಸರಪಳಿ ಕಾರ್ಯಕ್ರಮವು 90 ಕಿಲೋಮೀಟರ್‌ ಗಳಷ್ಟು ವಿಸ್ತರಿಸಲಿದೆ. ಪ್ರಜಾಪ್ರಭುತ್ವದ ಮೌಲ್ಯಗಳನ್ನು ಗೌರವಿಸುವ ಉದ್ದೇಶದಿಂದ ಸರ್ಕಾರ ಈ ಕಾರ್ಯಕ್ರಮವನ್ನು ಆಯೋಜಿಸಿದೆ”. ನಮ್ಮ ತಾಲೂಕಿನಿಂದ ಸುಮಾರು 2000 ಜನರು ಈ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ ಎಂದು ತಿಳಿಸಿದರು. ಪ್ರತಿ ಗ್ರಾಮ ಪಂಚಾಯಿತಿಯಿಂದ ಜನರನ್ನು ಕರೆತರಲು ಗ್ರಾಮ ಪಂಚಾಯಿತಿಗೆ ಎರಡು  ಬಸ್ ವ್ಯವಸ್ಥೆಯನ್ನು ಮಾಡಲಾಗಿದೆ. ಸಾರ್ವಜನಿಕರು ಈ ಕಾರ್ಯಕ್ರಮದಲ್ಲಿ ಭಾಗವಹಿಸಿ ಅದನ್ನು ಯಶಸ್ವಿಯಾಗಿಸುವಂತೆ ಮನವಿ ಮಾಡುತ್ತೇನೆಂದು ಅವರು ತಿಳಿಸಿದರು. ಇನ್ನು ಈ…

Read More

ಭಾರತ ಕಮ್ಯೂನಿಸ್ಟ್ ಪಕ್ಷ (ಮಾರ್ಕ್ಸ್ ವಾದಿ)ದ ಪ್ರಧಾನ ಕಾರ್ಯದರ್ಶಿ ಸೀತಾರಾಂ ಯೆಚೂರಿ ನಿಧನರಾಗಿದ್ದಾರೆ. ಅವರಿಗೆ 72 ವರ್ಷ ವಯಸ್ಸಾಗಿತ್ತು. ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಯೆಚೂರಿ ಏಮ್ಸ್ ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಚಿಕಿತ್ಸೆ ಫಲಕಾರಿಯಾಗದೆ ಇಂದು ಅಸುನೀಗಿದ್ದಾರೆ. ಎರಡು ಬಾರಿ ರಾಜ್ಯಸಭಾ ಸದಸ್ಯರಾಗಿದ್ದ ಯೆಚೂರಿ ಮೂರು ಬಾರಿ ಪಕ್ಷದ ಪ್ರಧಾನ ಕಾರ್ಯದರ್ಶಿಯಾಗಿ ಕೆಲಸ ನಿರ್ವಹಿಸಿದ್ದರು. ಅತ್ಯಂತ ಕ್ರಿಯಾಶೀಲರಾಗಿದ್ದ ಯೆಚೂರಿ ಬಂಡವಾಳಶಾಹಿ, ಕೋಮುವಾದಿಗಳ ವಿರುದ್ದ ಹೋರಾಟ ನಡೆಸಿದ್ದರು. ಯೆಚೂರು ಅಪಾರ ಸಂಗಾತಿಗಳನ್ನು ಅಗಲಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಸಂತಾಪ: ಸಿಪಿಐ(ಎಂ) ಪ್ರಧಾನ ಕಾರ್ಯದರ್ಶಿ ಸೀತಾರಾಮ್ ಯಚೂರಿ ಅವರ ಸಾವಿನಿಂದ ಆಘಾತಕ್ಕೀಡಾಗಿದ್ದೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ಎಡ ಸಿದ್ದಾಂತದ ಪ್ರಖರ ಚಿಂತಕರಾಗಿದ್ದ ಯಚೂರಿ ಅವರು ಅಪ್ಪಟ ಪ್ರಜಾಪ್ರಭುತ್ವವಾದಿಯೂ ಆಗಿದ್ದರು. ಕೋಮುವಾದಿ ರಾಜಕೀಯದ ವಿರುದ್ಧ ಜಾತ್ಯತೀತ ಶಕ್ತಿಗಳ ಒಗ್ಗೂಡಿಸುವಿಕೆಯಲ್ಲಿ ಮುಖ್ಯ ಪಾತ್ರ ವಹಿಸುತ್ತಾ ಬಂದಿರುವ ಯಚೂರಿಯವರು ಕಾಂಗ್ರೆಸ್ ನೇತೃತ್ವದ ಯುಪಿಎ ಸರ್ಕಾರದ ರೂವಾರಿಗಳಲ್ಲೊಬ್ಬರಾಗಿದ್ದರು. ಆ ಸರ್ಕಾರದ ‘ಸಾಮಾನ್ಯ ಕನಿಷ್ಠ ಕಾರ್ಯಕ್ರಮ’ ರಚನೆಯಲ್ಲಿಯೂ ಅವರದ್ದೇ ಪ್ರಧಾನ…

Read More

ಕಿರಿಕ್ ಪಾರ್ಟಿ (Kirik Party) ನಿರ್ದೇಶನ ಮಾಡಿದ್ದು ರಿಷಬ್ ಶೆಟ್ಟಿಯವರು. ಈ ಚಿತ್ರದಲ್ಲಿ ರಕ್ಷಿತ್ ಶೆಟ್ಟಿ ಹಾಗು ರಶ್ಮಿಕಾ ಮಂದಣ್ಣ ಮುಖ್ಯ ಪಾತ್ರದಲ್ಲಿ ನಟಿಸಿದ್ದರು. ಈ ಚಿತ್ರದ ಶೂಟಿಂಗ್ ಮುಗಿದು, ಡಬ್ಬಿಂಗ್ ಸಮಯದಲ್ಲಿ ಆಕಸ್ಮಿಕವಾಗಿ ನಡೆದ ಘಟನೆಯೊಂದನ್ನು ರಿಷಬ್ ಶೆಟ್ಟಿ ಶೇರ್ ಮಾಡಿಕೊಂಡಿದ್ದಾರೆ. ತುಂಬಾ ಕುತೂಹಲಕಾರಿ ಎನ್ನಿಸುವ ಆ ಸಂಗತಿ ಇಲ್ಲಿದೆ ನೋಡಿ.. ಕಿರಿಕ್ ಪಾರ್ಟಿಲಿ ತ್ರೋಔಟ್ ಒಂದು ಕ್ಯಾರೆಕ್ಟರ್ ಇದೆ ಫಿಲಂನಲ್ಲಿ. ಎಲ್ಲೂ ಆನ್‌ಸ್ಕ್ರೀನ್ ಬರೋದೇ ಇಲ್ಲ ಅವ್ರು.. ಆದರೆ, ನಾರ್ತ್ ಕರ್ನಾಟಕ ಹುಡುಗಂದು ಡೈಲಾಗ್ ಕೇಳಿಸ್ತಾನೆ ಇರುತ್ತೆ ನಿಮ್ಗೆ.. ಡಬ್ಬಿಂಗ್‌ನಲ್ಲಿ ಹಾಕಿರೋ ಐಡಿಯಾ ಅದು.. ರೀಸನ್ ಏನು ಅಂದ್ರೆ, ಪ್ರೊಡ್ಯೂಸರ್-ಡಿಸ್ಟ್ರಿಬ್ಯೂಟರ್ ಜಯಣ್ಣ ಅವ್ರು ಒಂದ್‌ ಸಲ, ‘ಅಪ್ಪಾಜೀ, ನಾರ್ತ್ ಕರ್ನಾಟಕ ಕ್ಯಾರೆಕ್ಟರ್ ಏನಾದ್ರೂ ಹಾಕ್ಬೇಕು ಅಪ್ಪಾಜಿ.. ಅಲ್ಲೆಲ್ಲ ನಮ್ ಜನ ಬಾಳ ಇಷ್ಟಪಡ್ತಾರೆ..’ ಅಂತ ಹೇಳಿದ್ರು. ಅಯ್ಯಯ್ಯೋ, ಆದ್ರೆ ಶೂಟಿಂಗ್‌ ಎಲ್ಲಾನೂ ಆಗೋಗಿದ್ಯಲ್ಲಾ, ಏನ್ ಮಾಡೋದು ಅಂತ ಯೋಚ್ನೆ ಆಗಿತ್ತು.. ಆಗ ನಾನು ಮತ್ತೆ ರಕ್ಷಿತ್ ಬರ್ತಾ ಇದ್ವಿ..…

Read More

ಸರ್ಕಾರಿ ಕಚೇರಿ, ಬ್ಯಾಂಕ್ ಸೇರಿದಂತೆ ಕರ್ನಾಟಕದಲ್ಲಿ ಕಡ್ಡಾಯವಾಗಿ ಕನ್ನಡದಲ್ಲೇ ವ್ಯವಹರಿಸಬೇಕು ಎಂದು ರಾಜ್ಯ ಸರ್ಕಾರ ಸೂಚಿಸಿರುವ ಬೆನ್ನಲ್ಲೇ ಬಹುತೇಕ ಕ್ಷೇತ್ರಗಳು ಕನ್ನಡಮಯವಾಗುತ್ತಿದೆ. ಇದು ರಾಜ್ಯದ ಜನತೆಯಲ್ಲಿ ಸಂತಸ ಮೂಡಿಸಿದೆ. ಇದೀಗ ವೈದ್ಯಕೀಯ ಕ್ಷೇತ್ರಗಳಲ್ಲಿಯೂ ಕನ್ನಡ ರಾರಾಜಿಸುತ್ತಿರುವುದು ವಿಶೇಷ. ಅದರಲ್ಲಿಯೂ ವೈದ್ಯರು ಕೂಡ ಕನ್ನಡದಲ್ಲಿಯೇ ಸಲಹಾ ಚೀಟಿ ಬರೆದುಕೊಡುತ್ತಿರುವುದು ನಿಜಕ್ಕೂ ಶ್ಲಾಘನೀಯ. ಸಾಮಾನ್ಯವಾಗಿ ವೈದ್ಯರು ಬರೆದುಕೊಡುವ ಪ್ರಿಸ್ ಕ್ರಿಪ್ಶನ್ ಓದುವುದು, ಅದರಲ್ಲಿ ಬರೆದಿರುವ ಔಷಧಗಳ ಬಗ್ಗೆ ಅರ್ಥಮಾಡಿಕೊಳ್ಳುವುದೇ ಒಂದು ದೊಡ್ಡ ತಲೆನೋವಾಗಿ ಬಿಡುತ್ತದೆ. ಹೀಗಿರುವಾಗ ಈಗ ವೈದ್ಯರು ಕೂಡ ಕನ್ನಡದಲ್ಲಿಯೇ ಪ್ರಿಸ್ ಕ್ರಿಪ್ಶನ್ ಬರೆದುಕೊಡುವುದರಿಂದ ಕನ್ನಡ ಬರುವ ಪ್ರತಿಯೊಬ್ಬರು ಓದಿ ಅರ್ಥೈಸಿಕೊಂಡು ಔಷಧ ಅಂಗಡಿಗಳಲ್ಲಿಯೂ ನಾವೇ ಹೇಳಿ ಔಷಧಿ ಪಡೆಯಬರುದು. ಹೊಳೆನರಸಿಪುರದ ಜನರಲ್ ಆಸ್ಪತ್ರೆ ವೈದ್ಯರೊಬ್ಬರು ಕನ್ನಡದಲ್ಲಿ ಬರೆದಿರುವ ಔಷಧ ಚೀಟಿ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ವೈದ್ಯರ ಕಾರ್ಯಕ್ಕೆ ಮೆಚ್ಚುಗೆ ವ್ಯಕ್ತವಾಗಿದೆ. ಕೆಲದಿನಗಳ ಹಿಂದಷ್ಟೇ ಡಾ.ಹರಿಪ್ರಸಾದ್ ಎಂಬುವವರು ಕನ್ನಡದಲ್ಲಿ ಬರೆದುಕೊಟ್ಟ ಪ್ರಿಸ್ ಕ್ರಿಪ್ಶನ್ ಭಾರಿ ವೈರಲ್ ಆಗಿತ್ತು. ಇದರ ಬೆನ್ನಲ್ಲೇ ಇದೀಗ…

Read More

ಬೆಂಗಳೂರು: ರಾಜ್ಯದ ಪ್ರತೀ ಕುಟುಂಬಗಳಿಗೆ ಪ್ರತೀ ತಿಂಗಳಿಗೆ ಸರ್ಕಾರದ 4–5 ಸಾವಿರ ರೂಪಾಯಿ ಅನುಕೂಲ ಆಗುತ್ತಿದೆ. ಇದರಿಂದ ಲಕ್ಷಾಂತರ ಕುಟುಂಬಗಳಿಗೆ ಆರ್ಥಿಕ ಶಕ್ತಿ ನೀಡಿದ್ದೇವೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು. ಬಿಎಂಟಿಸಿ ನೂತನ ಬಸ್ ​ಗಳ  ಲೋಕಾರ್ಪಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಬೆಂಗಳೂರು ನಗರದಲ್ಲಿ ಜನಸಂಖ್ಯೆ ಹೆಚ್ಚುತ್ತಿದೆ. ಇಲ್ಲಿನ ಹೆಚ್ಚುತ್ತಿರುವ ಶ್ರಮಿಕ ವರ್ಗಗಳಿಗೆ ಅನುಕೂಲ ಮಾಡುವ ಉದ್ದೇಶದಿಂದ ನೂತನ‌ ಬಸ್​ ಗಳನ್ನು ಬಿಎಂಟಿಸಿಗೆ ಸೇರ್ಪಡೆಗೊಳಿಸುವ ಜತೆಗೆ ಹಿಂದಿನ ಸರ್ಕಾರ ಸ್ಥಗಿತಗೊಳಿಸಿದ್ದ ಇಂದಿರಾ ಕ್ಯಾಂಟೀನ್​ ಗಳನ್ನು ಆರಂಭಿಸಿದ್ದಲ್ಲದೆ, ನೂತನವಾಗಿ ಇನ್ನಷ್ಟು ಕ್ಯಾಂಟೀನ್ ​ಗಳನ್ನು ಶುರುಮಾಡಲಿದ್ದೇವೆ. ಇದೇ ಶ್ರಮಿಕ ವರ್ಗದ ಅನುಕೂಲಕ್ಕಾಗಿ ಶಕ್ತಿ ಯೋಜನೆ ಸೇರಿದಂತೆ ಐದೂ ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡಿ ಯಶಸ್ವಿಯಾಗಿ ಮುಂದುವರೆಸುತ್ತಿದ್ದೇವೆ. ನಮ್ಮ ಸರ್ಕಾರ ಇರುವವರೆಗೂ ಗ್ಯಾರಂಟಿ ಯೋಜನೆಗಳು ಮುಂದುವರೆಯಲಿವೆ ಎಂದು ತಿಳಿಸಿದರು. ಬಡವರ ಮತ್ತು ಮಧ್ಯಮ ವರ್ಗದ ವಿರೋಧಿಯಾಗಿರುವ ಬಿಜೆಪಿ ಈ ಗ್ಯಾರಂಟಿ ಯೋಜನೆಗಳ ವಿರುದ್ಧ ಅಪಪ್ರಚಾರ ಮಾಡುತ್ತಿದೆ. ಈ ಅಪಪ್ರಚಾರಕ್ಕೆ ಕಿವಿಗೊಡಬೇಡಿ. ಈ ಗ್ಯಾರಂಟಿಗಳು ಇನ್ನಷ್ಟು ಪರಿಣಾಮಕಾರಿಯಾಗಿ…

Read More